Tag: Matheesha Pathirana

  • IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    – 20 ಲಕ್ಷಕ್ಕೆ ಬಿಕರಿಯಾಗಿದ್ದ ಪಥಿರಣ ಈಗ 13 ಕೋಟಿ ಒಡೆಯ

    ಮುಂಬೈ: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಉಸಿರು ಆಗಿರುವ ಲೆಜೆಂಡ್‌ ಕ್ರಿಕೆಟಿಗ ಎಂ.ಎಸ್‌ ಧೋನಿ (MS Dhoni) 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಯಲ್ಲಿ ಮುಂದುವರಿಯುವುದು ಪಕ್ಕಾ ಆಗಿದೆ. ನಿರೀಕ್ಷೆಯಂತೆ ಎಂ.ಎಸ್‌ ಧೋನಿ ಅವರನ್ನ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗಿ ಸಿಎಸ್‌ಕೆ ಫ್ರಾಂಚೈಸಿ ಉಳಿಸಿಕೊಂಡಿದ್ದು, ಧೋನಿ ಅಭಿಮಾನಿಗಳು ಫುಲ್‌ಖುಷ್‌ ಆಗಿದ್ದಾರೆ.

    ನಾಯಕ ರುತುರಾಜ್‌, ಜಡ್ಡುಗೆ ಬಂಪರ್‌:
    2024ರ ಐಪಿಎಲ್‌ ಆವೃತ್ತಿಯಲ್ಲಿ ಅಲ್ಪ ಮೊತ್ತಕ್ಕೆ ತಂಡದಲ್ಲಿ ಉಳಿದುಕೊಂಡಿದ್ದ ಸಿಎಸ್‌ಕೆ ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ (Ruturaj Gaikwad), ಮತೀಶ ಪಥಿರಣ, ಶಿವಂ ದುಬೆ, ರವೀಂದ್ರ ಜಡೇಜಾ (Ravindra Jadeja) ಅವರ ಸಂಭಾವನೆಯಲ್ಲಿ ಭಾರಿ ಏರಿಕೆ ಕಂಡಿದೆ.

    ನಿರೀಕ್ಷೆಗೂ ಮೀರಿದಂತೆ ನಾಯಕ ರುತುರಾಜ್‌ ಗಾಯಕ್ವಾಡ್‌ ಹಾಗೂ ರವೀಂದ್ರ ಜಡೇಜಾ ಅವರನ್ನು ತಲಾ 18 ಕೋಟಿ ರೂ.ಗಳಿಗೆ ಚೆನ್ನೈ ತಂಡ ಉಳಿಸಿಕೊಂಡಿದೆ. ಇನ್ನುಳಿದಂತೆ ಮತೀಶ ಪಥಿರಣ 13 ಕೋಟಿ ರೂ., ಶಿವಂ ದುಬೆ 12 ಕೋಟಿ ರೂ.ಗೆ ರಿಟೇನ್‌ ಆದ್ರೆ, ಎಂ.ಎಸ್‌ ಧೋನಿ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗಿ ಕೇವಲ 4 ಕೋಟಿ ರೂ.ಗಳಿಗೆ ರೀಟೇನ್‌ ಆಗಿದ್ದಾರೆ.

    ಕಳೆದ ಆವೃತ್ತಿಯಲ್ಲಿ ಸಿಎಸ್‌ಕೆ ನಾಯಕ ರುತುರಾಜ್‌ 6 ಕೋಟಿ ರೂ., ಮತೀಶ ಪಥಿರಣ 20 ಲಕ್ಷ ರೂ., ರವೀಂದ್ರ ಜಡೇಜಾ 16 ಕೋಟಿ ರೂ., ಶಿವಂ ದುಬೆ 4 ಕೋಟಿ ರೂ. ಹಾಗೂ ಎಂ.ಎಸ್‌ ಧೋನಿ 12 ಕೋಟಿ ರೂ. ಸಂಭಾವನೆ ಪಡೆದಿದ್ದರು.

    ಯಾರ ಸಂಭಾವನೆ ಎಷ್ಟು?
    * ರುತುರಾಜ್‌ ಗಾಯಕ್ವಾಡ್‌ – 18 ಕೋಟಿ ರೂ.
    * ರವೀಂದ್ರ ಜಡೇಜಾ – 18 ಕೋಟಿ ರೂ.
    * ಮತೀಶ ಪಥಿರಣ – 13 ಕೋಟಿ ರೂ.
    * ಶಿವಂ ದುಬೆ – 12 ಕೋಟಿ ರೂ.
    * ಎಂ.ಎಸ್‌ ಧೋನಿ – 4 ಕೋಟಿ ರೂ. (ಅನ್‌ಕ್ಯಾಪ್ಡ್‌ ಪ್ಲೇಯರ್‌)

    ಮಹಿ ಏಕೆ ಅನ್‌ಕ್ಯಾಪ್ಡ್‌ ಪ್ಲೇಯರ್‌?
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ 5 ವರ್ಷ ಪೂರೈಸಿದ ಆಟಗಾರರನ್ನು ಅನ್‌ಕ್ಯಾಪ್ಡ್‌ ಪ್ಲೇಯರ್‌ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಅವರು ನಿಯಮದಂತೆ 4 ಕೋಟಿ ರೂ. ಮಾತ್ರವೇ ಸಂಭಾವನೆ ಪಡೆಯಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

    ಮುಂದಿನ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ.

  • ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ (Sri Lanka) ವಿರುದ್ಧ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (Team India) 1-0 ಮುನ್ನಡೆ ಕಾಯ್ದುಕೊಂಡಿದೆ.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಅಬ್ಬರಿಸುತ್ತಿದ್ದ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವುದು ಭಾರತ ತಂಡಕ್ಕೆ ಸವಾಲಾಗಿತು. ಲಂಕಾ 14 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 140 ರನ್‌ ಬಾರಿಸಿತ್ತು. 15ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಅಕ್ಷರ್‌ ಪಟೇಲ್‌ 9 ರನ್‌ ಬಿಟ್ಟುಕೊಟ್ಟರೂ ಪ್ರಮುಖ 2 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಲಂಕಾ ತಂಡದ ಪಥನ ಶುರುವಾಯಿತು.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿಂದು ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಬಾರಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಲ್ಲಿ ಅಬ್ಬರಿಸಿದರೂ 170 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಶ್ರೀಲಂಕಾ ತಂಡ ಉತ್ತಮ ಜೊತೆಯಾಟ ನೀಡುವಲ್ಲಿ ಯಶಸ್ವಿಯಾಗಿತ್ತು. ಮೊದಲ ವಿಕೆಟ್‌ಗೆ ಕುಸಲ್‌ ಮೆಂಡಿಸ್‌ ಹಾಗೂ ಪಥುಮ್‌ ನಿಸ್ಸಾಂಕ ಜೋಡಿ 52 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಕುಸಾಲ್ ಮೆಂಡಿಸ್ 27 ಎಸೆತಗಳಲ್ಲಿ 45 ರನ್‌ ಸಿಡಿಸಿದ್ದರು. ಈ ವೇಳೆ ಅರ್ಷ್‌ದೀಪ್‌ ಸಿಂಗ್‌ ಮೆಂಡಿಸ್‌ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ ದಾರಿ ತೋರಿದರು.

    ಇನ್ನೂ 2ನೇ ವಿಕೆಟ್‌ಗೆ ಜೊತೆಯಾಗಿದ್ದ ಕುಸಲ್‌ ಪೆರೇರಾ ಹಾಗೂ ನಿಸ್ಸಾಂಕ ಜೋಡಿ ಸಹ 33 ಎಸೆತಗಳಲ್ಲಿ 56 ರನ್‌ ಬಾರಿಸಿತ್ತು. ಒಂದಂಥದಲ್ಲಿ ಭಾರತ ಸೋತೇಬಿಡುತ್ತೆ ಎಂದು ಭಾವಿಸಲಾಗಿತ್ತು. ಆದ್ರೆ ಸಂಘಟಿತ ಪ್ರದರ್ಶನ ನೀಡಿದ ಭಾರತದ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಆರ್ಭಟವನ್ನು ಅಡಗಿಸಿದರು. ನಿಸ್ಸಾಂಕ, ಪೆರೇರಾ ಜೋಡಿ ವಿಕೆಟ್‌ ಪತನದೊಂದಿಗೆ ಲಂಕಾ ಅವನತಿ ಶುರುವಾಯಿತು. ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿ ಪೆವಿಲಿಯನ್‌ ಪೆರೇಡ್‌ ನಡೆಸಲು ಲಂಕನ್ನರು ಶುರು ಮಾಡಿದರು. ಅಂತಿಮವಾಗಿ ಲಂಕಾ 170 ರನ್‌ಗಳಿಗೆ ಆಲೌಟ್‌ ಆಯಿತು.

    ಶ್ರೀಲಂಕಾ ಪರ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಪಥುಮ್‌ ನಿಸ್ಸಾಂಕ 79 ರನ್‌ (48 ಎಸೆತ, 4 ಸಿಕ್ಸರ್‌, 7 ಬೌಂಡರಿ), ಮೆಂಡಿಸ್‌ 45 ರನ್‌ (27 ಎಸೆತ, 1 ಸಿಕ್ಸರ್‌, 7 ಬೌಂಡರಿ), ಕುಸಾಲ್‌ ಪೆರೇರಾ 20 ರನ್‌ ಹಾಗೂ ಕುಮುಂಡು ಮೆಂಡಿಸ್‌ 12 ರನ್‌ ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ 1.5 ಓವರ್‌ಗಳಲ್ಲಿ ಕೇವಲ 5 ರನ್‌ ಬಿಟ್ಟುಕೊಟ್ಟ ರಿಯಾನ್‌ ಪರಾಗ್‌ 3 ವಿಕೆಟ್‌ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಬ್ಯಾಟರ್‌ಗಳು ಅಬ್ಬರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಜೋಡಿ ಮೊದಲ ವಿಕೆಟ್​ಗೆ 36 ಎಸೆತಗಳಲ್ಲಿ ಸ್ಫೋಟಕ 76 ರನ್‌ ಬಾರಿಸಿತ್ತು. ಶುಭಮನ್‌ ಗಿಲ್‌ 16 ಎಸೆತಗಳಲ್ಲಿ 34 ರನ್‌ ಚಚ್ಚಿ ಔಟಾಗುತ್ತಿದ್ದಂತೆ, ಯಶಸ್ವಿ ಜೈಸ್ವಾಲ್‌ 20 ಎಸೆತಗಳಲ್ಲಿ 40 ರನ್‌ ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಬಳಿಕ ಲಂಕನ್ನರನ್ನು ಚೆಂಡಾಡಿದ ಸೂರ್ಯಕುಮಾರ್‌ ಯಾದವ್‌ ಹಾಗೂ ರಿಷಭ್‌ ಪಂತ್‌ ಜೋಡಿ 3ನೇ ವಿಕೆಟ್‌ಗೆ 43 ಎಸೆತಗಳಲ್ಲಿ 76 ರನ್‌ ಪೇರಿಸಿತ್ತು. ಪರಿಣಾಮ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್‌ ಯಾದವ್‌ 58 ರನ್‌ (26 ಎಸೆತ, 2 ಸಿಕ್ಸರ್‌, 8 ಬೌಂಡರಿ), ರಿಷಭ್‌ ಪಂತ್‌ 49 ರನ್‌ (33 ಎಸೆತ, 1 ಸಿಕ್ಸರ್‌, 6 ಬೌಂಡರಿ), ಯಶಸ್ವಿ ಜೈಸ್ವಾಲ್‌ 40 ರನ್‌ ಹಾಗೂ ಶುಭಮನ್‌ ಗಿಲ್‌ 34 ರನ್‌ ಬಾರಿಸಿದರು.

  • AsiaCup 2023: ಬಾಂಗ್ಲಾಕ್ಕೆ ಲಗಾಮು ಹಾಕಿದ ಲಂಕಾ – 5 ವಿಕೆಟ್‌ಗಳ ಜಯದೊಂದಿಗೆ ಶುಭಾರಂಭ

    AsiaCup 2023: ಬಾಂಗ್ಲಾಕ್ಕೆ ಲಗಾಮು ಹಾಕಿದ ಲಂಕಾ – 5 ವಿಕೆಟ್‌ಗಳ ಜಯದೊಂದಿಗೆ ಶುಭಾರಂಭ

    ಕೊಲಂಬೊ: ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ್ದ ಶ್ರೀಲಂಕಾ (Sri Lanka) ತಂಡ ಮಂದಗತಿಯ ಬ್ಯಾಟಿಂಗ್‌ ಹೊರತಾಗಿಯೂ ಬಾಂಗ್ಲಾದೇಶದ (Bangladesh) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಏಕದಿನ ಏಷ್ಯಾಕಪ್‌ (AsiaCup) ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 42.4 ಓವರ್‌ಗಳಲ್ಲಿ 164 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ 39 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: 5,966 ಕೋಟಿ ರೂ.ಗೆ BBCI ಮಾಧ್ಯಮ ಹಕ್ಕು ಪಡೆದ Viacom18

    ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ ತಂಡಕ್ಕೂ ಆರಂಭಿಕ ಆಘಾತ ಎದುರಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ (14 ರನ್‌) ಹಾಗೂ ದಿಮುತ್ ಕರುಣಾರತ್ನೆ (1 ರನ್‌) ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಈ ಬೆನ್ನಲ್ಲೇ ಕುಸಲ್‌ ಮೆಂಡೀಸ್‌ ಸಹ 5 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿ ಪೆವಿಲಿಯನ್‌ ಸೇರಿಕೊಂಡರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಜೊತೆಗೂಡಿದ ಸದೀರ ಸಮರವಿಕ್ರಮ, ಚರಿತ್ ಅಸಲಂಕ ಶತಕದ ಜೊತೆಯಾಟದಿಂದ ಗೆಲುವಿನ ಹಾದಿಯತ್ತ ಸಾಗಿತು.

    4ನೇ ವಿಕೆಟ್‌ಗೆ ಈ ಜೋಡಿ 119 ರನ್‌ಗಳ ಜೊತೆಯಾಟ ನೀಡಿತು. ಸಮರವಿಕ್ರಮ 77 ಎಸೆತಗಳಲ್ಲಿ 56 ರನ್‌ ಗಳಿಸಿದ್ರೆ, ಅಸಲಂಕ 92 ಎಸೆತಗಳಲ್ಲಿ ಅಜೇಯ 62 ರನ್‌ (5 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಮಿಂಚಿದರು. ಕೊನೆಯಲ್ಲಿ ನಾಯಕ ದಸುನ್‌ ಶನಾಕ (Dasun Shanaka) 21 ಎಸೆತಗಳಲ್ಲಿ 14 ರನ್‌ ಗಳಿಸಿ ಜಯದ ದಡ ಮುಟ್ಟಿಸಿದರು.

    ಬಾಂಗ್ಲಾ ಪರ ನಾಯಕ ಶಕೀಬ್ ಅಲ್ ಹಸನ್ 2 ವಿಕೆಟ್‌ ಕಿತ್ತರೆ, ತಸ್ಕಿನ್‌ ಅಹ್ಮದ್‌, ಶೋರಿಫುಲ್ ಇಸ್ಲಾಂ ಹಾಗೂ ಮೆಹದಿ ಹಸನ್‌ (Shakib Al Hasan) ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ ಲಂಕಾ ಬೌಲರ್‌ಗಳ ದಾಳಿಗೆ ತತ್ತರಿಸಿತು. 3ನೇ ಕ್ರಮಾಂಕದಲ್ಲಿ ಬಂದ ನಜ್ಮುಲ್ ಹೊಸೈನ್ ಶಾಂತೋ 122 ಎಸೆತಗಳಲ್ಲಿ 89 ರನ್‌ (7 ಬೌಂಡರಿ), ತೌಹಿದ್ ಹೃದಯೊಯ್ 20 ರನ್‌ ಗಳಿಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಕೈಚೆಲ್ಲಿದ ಪರಿಣಾಮ ತಂಡಕ್ಕೆ ಸೋಲಾಯಿತು.

    ತೀಕ್ಷ್ಣ ಬೌಲಿಂಗ್‌ ಬಾಂಗ್ಲಾ ತತ್ತರ: ಮೊದಲು ಫೀಲ್ಟಿಂಗ್‌ ಮಾಡುವ ಅವಕಾಶ ಪಡೆದ ಲಂಕಾ ಪರ ಬೌಲರ್‌ಗಳು ಉತ್ತಮ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಮಾರಕ ಬೌಲಿಂಗ್‌ ದಾಳಿ ನಡೆಸಿದ ಮಥೀಶ ಪತಿರಣ 7.4 ಓವರ್‌ಗಳಲ್ಲಿ 32 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಮಹೀಶ್‌ ತೀಕ್ಷಣ 2 ವಿಕೆಟ್‌, ಧನಂಜಯ ಡಿ ಸಿಲ್ವಾ, ದುನಿತ್‌ ಹಾಗೂ ದಸುನ್‌ ಶನಾಕ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಂಟೆಗೆ 175 ಕಿ.ಮೀ ವೇಗದಲ್ಲಿ ಲಂಕಾ ವೇಗಿಯಿಂದ ಬೌಲಿಂಗ್ – ವಿಡಿಯೋ ನೋಡಿ

    ಗಂಟೆಗೆ 175 ಕಿ.ಮೀ ವೇಗದಲ್ಲಿ ಲಂಕಾ ವೇಗಿಯಿಂದ ಬೌಲಿಂಗ್ – ವಿಡಿಯೋ ನೋಡಿ

    ಬ್ಲೂಮ್‍ಫಾಂಟೈನ್: ಶ್ರೀಲಂಕಾ ದೇಶದ ಅಂಡರ್ 19 ತಂಡದ ಬೌಲರ್ ಮತೀಶಾ ಪತಿರಣ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 175 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಈ ಸಾಧನೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

    ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಬ್ಲೂಮ್‍ಫಾಂಟೈನ್‍ನಲ್ಲಿ ನಡೆದ ಭಾರತ ತಂಡದ ಎದುರಿನ ‘ಎ’ ಗುಂಪಿನ ಲೀಗ್ ಪಂದ್ಯದ ವೇಳೆ ಮತೀಶಾ ಪತಿರಣ ಈ ಸಾಧನೆ ಮಾಡಿದ್ದಾರೆ.

    https://twitter.com/GOATKingKohli/status/1219214778050072576

    ಭಾರತದ ಇನಿಂಗ್ಸ್ ನ 4ನೇ ಓವರ್ ಬೌಲಿಂಗ್ ಮಾಡಿದ ಪತಿರಣ ಕೊನೆಯ ಎಸೆತವನ್ನು ಭಾರೀ ವೇಗದಲ್ಲಿ ಎಸೆದರು. ಸ್ಟ್ರೈಕ್‍ನಲ್ಲಿ ಇದ್ದ ಯಶಸ್ವಿ ಜೈಸ್ವಾಲ್ ಎದುರು ಪತಿರಣ ಎಸೆದ ಬೌನ್ಸರ್ ಲೆಗ್‍ಸೈಟ್ ಕಡೆಗೆ ವೈಡ್ ಆಗಿತ್ತು. ಆದರೆ ಟೆಲಿವಿಷನ್ ಪರದೆ ಮೇಲೆ ಪತಿರಣ ಎಸೆದ ಆ ಎಸೆತದ ವೇಗವನ್ನು ಗಂಟೆಗೆ 175 ಕಿ.ಮೀ ವೇಗ ಹೊಂದಿದೆ ಎಂದು ಪ್ರದರ್ಶಿಸಲಾಯಿತು.

    ಆದರೆ ಕೆಲವರು ಈ ದಾಖಲೆಯನ್ನು ಅಲ್ಲಗಳೆದಿದ್ದಾರೆ. ಏಕೆಂದರೆ ಪತಿರಣ ಅವರು ಅದೇ ಓವರ್ ನಲ್ಲಿ ಎಸೆದ ಉಳಿದ ಐದು ಎಸೆತಗಳು ಹೆಚ್ಚು-ಕಡಿಮೆ ಗಂಟೆಗೆ 140 ಕಿ.ಮೀ. ವೇಗದಲ್ಲಿತ್ತು. ಹೀಗಾಗಿ ರೆಕಾರ್ಡಿಂಗ್‍ನಲ್ಲಿ ದೋಷವಿದೆ ಎಂದು ತಿಳಿದುಬಂದಿದೆ. ಆದ್ದರಿಂದ ಅತಿ ವೇಗದ ಬೌಲಿಂಗ್ ದಾಖಲೆ ಶೋಯೆಬ್ ಅಖ್ತರ್ ಅವರ ಹೆಸರಿನಲ್ಲಿ ಉಳಿದಿದೆ.

    ಶ್ರೀಲಂಕಾ ತಂಡದ ನಾಯಕ, ವೇಗದ ಬೌಲರ್ ಲಸಿತ್ ಮಾಲಿಂಗ ಅವರ ಶೈಲಿಯಲ್ಲೇ ಪತಿರಣ ಬೌಲಿಂಗ್ ಮಾಡುತ್ತಿದ್ದಾರೆ. ಈ ಹಿಂದೆಯೂ ಅವರು ಭಾರೀ ಸುದ್ದಿಯಾಗಿದ್ದರು. ಪತಿರಣ ಅವರು 2019ರ ಸೆಪ್ಟೆಂಬರ್ ನಲ್ಲಿ ಕಾಲೇಜು ಮಟ್ಟದ ಟೂರ್ನಿಯೊಂದರಲ್ಲಿ ಕೇವಲ 7 ರನ್ ನೀಡಿ 6 ವಿಕೆಟ್‍ಗಳನ್ನು ಕಬಳಿಸಿದ್ದರು. ಅವರ ಈ ಸಾಧನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಅಖ್ತರ್ ಹೆಸರಲ್ಲಿದೆ ವಿಶ್ವದಾಖಲೆ:
    ಕ್ರಿಕೆಟ್ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೌಲ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಅವರ ಹೆಸರಲ್ಲಿದೆ. ಅಖ್ತರ್ 2003ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 161.3 ಕಿ.ಮೀ ವೇಗದಲ್ಲಿ ಬೌಲ್ ಮಾಡಿದ್ದರು. ಅಕ್ತರ್ ಹೊರತಾಗಿ ಆಸ್ಟ್ರೇಲಿಯಾದ ವೇಗಿಗಳಾದ ಬ್ರೆಟ್ ಲೀ ಮತ್ತು ಶಾನ್ ಟೈಟ್ ಕೂಡ 160 ಕಿ.ಮೀ ವೇಗದ ಗಡಿ ಮುಟ್ಟಿದ್ದಾರೆ. ಭಾರತದ ಪರ ಜಸ್‍ಪ್ರೀತ್ ಬುಮ್ರಾ 153 ಕಿ.ಮೀ ವೇಗದಲ್ಲಿ ಬೌಲ್ ಮಾಡಿರುವುದು ದಾಖಲೆಯಾಗಿದೆ.