Tag: matrimonial

  • ಮದ್ವೆ ಹೆಸ್ರಲ್ಲಿ ವಿಧವೆಯರಿಗೆ ವಂಚನೆ- ಎಂ.ಕಾಂ ಪದವೀಧರನ ಬಂಧನ

    ಮದ್ವೆ ಹೆಸ್ರಲ್ಲಿ ವಿಧವೆಯರಿಗೆ ವಂಚನೆ- ಎಂ.ಕಾಂ ಪದವೀಧರನ ಬಂಧನ

    ಮೈಸೂರು: ಮದುವೆ ಆಗುವುದಾಗಿ ನಂಬಿಸಿ ವಿಧವೆಯರನ್ನು ವಂಚಿಸಿದ ವಂಚಕ ಈಗ ಪೊಲೀಸರ ಅತಿಥಿ ಆಗಿದ್ದಾನೆ.

    ಕೊಯಮತ್ತೂರಿನ ಯುವರಾಜ್ ಬಂಧಿತ ಆರೋಪಿ. ಮೈಸೂರಿನ ಕೆ.ಆರ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಯುವರಾಜ್, ವಿಧವೆಯರಿಂದ ಚಿನ್ನದ ಸರ, ನಗದು ಲಪಟಾಯಿಸಿ ಕಣ್ಮರೆಯಾಗುತ್ತಿದ್ದನು. ಯುವರಾಜ್ ಅಮಾಯಕ ವಿಧವೆಯರನ್ನೇ ಟಾರ್ಗೆಟ್ ಮಾಡುತ್ತಿದ್ದನು. ಶಾದಿ. ಕಾಂ ಮ್ಯಾಟ್ರಿಮೋನಿಯಲ್ ವೆಬ್‍ಸೈಟ್ ಮೂಲಕ ವಿಧವೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು.

    ಬಾಳು ಕೊಡುವ ನೆಪದಲ್ಲಿ ಹಾಸನ, ಮೈಸೂರು, ಬೆಂಗಳೂರಿನ ನಾಲ್ವರು ವಿಧವೆಯರಿಗೆ ವಂಚಿಸಿದ್ದನು. ಮದುವೆ ಆಗಬೇಕಿದರೆ ದೋಷ ನಿವಾರಣೆ ಪೂಜೆ ಮಾಡಿಸಬೇಕು. ಪೂಜೆಗೆ ನಿಮ್ಮ ಚಿನ್ನದ ಸರ ಬೇಕು ಎಂದು ಹೇಳಿ ಚಿನ್ನದ ಸರ ಪಡೆದು ವಂಚಿಸುತ್ತಿದ್ದನು. ವಿಧವೆಯೊಬ್ಬರು ಕೊಟ್ಟ ದೂರಿನ ಆಧಾರದ ಮೇಲೆ ಮೈಸೂರಿನ ಕೆ.ಆರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚಕನನ್ನು ಬಂಧಿಸಿದ್ದಾರೆ.

    ಎಂ.ಕಾಂ ಓದಿರುವ ವಂಚಕ ಯುವರಾಜ್, ಆಟೋ ಮೊಬೈಲ್ ವ್ಯಾಪಾರ ನಡೆಸುತ್ತಿರುವುದಾಗಿ ವಿಧವೆಯರನ್ನು ನಂಬಿಸುತ್ತಿದ್ದನು. ಶಾದಿ. ಕಾಂ ಹಾಗೂ ಸಂಗಮ್ ಮ್ಯಾಟ್ರಿಮೋನಿಯಲ್ ನಲ್ಲಿ ಮೆಂಬರ್ ಆಗಿ ವಿಧವೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ತನಿಖೆ ವೇಳೆಯಲ್ಲಿ ನಾಲ್ಕು ವಿಧವೆಯರಿಗೆ ವಂಚಿಸಿರುವ ಮಾಹಿತಿ ಬಯಲಾಗಿದೆ.

  • ಮೂರನೇ ಮದ್ವೆಯಾಗಲು ಹೊರಟ ಪತಿಗೆ ಗೂಸ ಕೊಟ್ಟ ಪತ್ನಿಯರು

    ಮೂರನೇ ಮದ್ವೆಯಾಗಲು ಹೊರಟ ಪತಿಗೆ ಗೂಸ ಕೊಟ್ಟ ಪತ್ನಿಯರು

    ಚೆನ್ನೈ: ಮೂರನೇ ಮದುವೆಯಾಗಲು ಹೋದ 26 ವರ್ಷದ ಗಂಡನನ್ನು ಹಿಡಿದು ಪತ್ನಿಯರಿಬ್ಬರು ಥಳಿಸಿರುವ ಘಟನೆ ತೆಮಿಳುನಾಡಿದ ಕೊಯಮತ್ತೂರಿನಲ್ಲಿ ನಡೆದಿದೆ.

    2016 ರಲ್ಲಿ ಮೊದಲನೇ ಮದುವೆಯಾದ ಈತ ಮದುವೆ ನಂತರ ತನ್ನ ಮೊದಲ ಹೆಂಡತಿಗೆ ಹೊಡೆಯುವುದು. ಕೆಟ್ಟ ಪದಗಳಿಂದ ನಿಂದಿಸುವುದನ್ನು ಮಾಡುತ್ತಿದ್ದನು. ದಿನ ಪತಿ ಕೊಡುತ್ತಿದ್ದ ಚಿತ್ರ ಹಿಂಸೆಯನ್ನು ಸಹಿಸಲಾಗಿದೆ ಆಕೆ ಅವನನ್ನು ಬಿಟ್ಟು ತನ್ನ ತವರು ಮನೆ ಸೇರಿದ್ದಳು.

    ಮೊದಲ ಹೆಂಡತಿ ಪೋಷಕರ ಮನೆ ಸೇರಿದ ನಂತರ 2019 ರಲ್ಲಿ ನನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಆಗಲೇ ಮದುವೆಯಾಗಿ ವಿಚ್ಛೇದವಾಗಿದ್ದ 26 ವರ್ಷದ ಯುವತಿಯನ್ನು ಮ್ಯಾಟ್ರಿಮೋನಿಯಲ್ ಭೇಟಿ ಆಗಿ ವಿವಾಹವಾಗಿದ್ದಾನೆ. ನಂತರ ಎರಡನೇ ಹೆಂಡತಿಗೂ ದಿನ ವರದಕ್ಷಿಣೆ ವಿಚಾರವಾಗಿ ನಿಂದಿಸುವುದು ಮತ್ತು ಹೊಡೆಯುವುದು ಮಾಡಿದ್ದಾನೆ. ಇದರಿಂದ ಬೇಸತ್ತ ಯುವತಿ ಆತನನ್ನು ಬಿಟ್ಟು ಆಕೆಯೂ ಹೆತ್ತವರ ಮನೆ ಸೇರಿದ್ದಾಳೆ.

    ಕಳೆದ ವಾರ ಈ ಪತಿರಾಯ ಮೂರನೇ ಮದುವೆಯಾಗಲು ಮ್ಯಾಟ್ರಿಮೋನಿಯಲ್‍ನಲ್ಲಿ ಯುವತಿಯನ್ನು ಹುಡುಕುತ್ತಿದ್ದಾನೆ ಎಂಬ ವಿಚಾರ ಈ ಇಬ್ಬರು ಹೆಂಡತಿಯರಿಗೆ ತಿಳಿದು ಬಂದಿದೆ. ಈ ವಿಚಾರವಾಗಿ ಪತಿಯನ್ನು ಭೇಟಿಯಾಗಲು ಇಬ್ಬರು ಅವನು ಕೆಲಸ ಮಾಡುತ್ತಿದ್ದ ಕೊಯಮತ್ತೂರಿನ ರಾಸಿಪಾಲಯಂನ ಅವನ ಕಂಪನಿ ಬಳಿ ಬಂದಿದ್ದಾರೆ. ಆದರೆ ಆ ಕಂಪನಿಯವರು ಅವರಿಗೆ ಒಳಗೆ ಹೋಗಲು ಅನುಮತಿ ನೀಡಿಲ್ಲ.

    ಇದರಿಂದ ಕೋಪಗೊಂಡ ಪತ್ನಿಯರು ಕಂಪನಿಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನಂತರ ಕಂಪನಿಯಿಂದ ಹೊರಬಂದ ಪತಿಯನ್ನು ಗೇಟಿನ ಬಳಿ ಹಿಡಿದುಕೊಂಡು ಇಬ್ಬರು ಥಳಿಸಿದ್ದಾರೆ. ಈ ಸಂಬಂಧ ಇಬ್ಬರು ಮಾಜಿ ಪತ್ನಿಯರು ತಮ್ಮ ಮಾಜಿ ಗಂಡನ ಮೇಲೆ ಸುಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

  • ಒಂದಲ್ಲ, ಎರಡಲ್ಲ ಮ್ಯಾಟ್ರಿಮೋನಿ ತಾಣದಲ್ಲಿ 75ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ಕಾಮುಕ ಅರೆಸ್ಟ್!

    ಒಂದಲ್ಲ, ಎರಡಲ್ಲ ಮ್ಯಾಟ್ರಿಮೋನಿ ತಾಣದಲ್ಲಿ 75ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ಕಾಮುಕ ಅರೆಸ್ಟ್!

    ಬೆಂಗಳೂರು: ನೀವು ಮ್ಯಾಟ್ರಿಮೋನಿ ತಾಣದಲ್ಲಿ ಮದುವೆಯಾಗಲು ಸೂಕ್ತ ವರನನ್ನು ಹುಡುಕುತ್ತಿದ್ದೀರಾ. ಹಾಗಾದ್ರೆ ನೀವು ಎಚ್ಚರವಾಗಿರುವುದು ಒಳಿತು. ಅಪ್ಪಿ ತಪ್ಪಿ ಸರಿಯಾಗಿ ಯೋಚಿಸದೇ ನಿರ್ಧಾರ ತೆಗೆದುಕೊಂಡರೆ ನೀವು ಮೋಸ ಹೋಗುವುದು ಖಂಡಿತ.

    ಹೌದು. ಒಂದಲ್ಲ ಎರಡಲ್ಲ, ಬರೋಬ್ಬರಿ 75 ಮಂದಿಗೆ ವಂಚನೆ ಎಸಗಿದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ ಸಾದತ್ ಖಾನ್ (28) ಬಂಧಿತ ಆರೋಪಿ. ಲೈಂಗಿಕವಾಗಿ ಬಳಸಿಕೊಂಡು ಅವರಿಂದಲೇ ಹಣ ಪಡೆದು ಪರಾರಿಯಾಗುತ್ತಿದ್ದ ಖದೀಮ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

    ಮ್ಯಾಟ್ರಿಮೋನಿ ತಾಣದಲ್ಲಿನ ಪ್ರೊಫೈಲ್‍ಗಳನ್ನು ಟಾರ್ಗೆಟ್ ಮಾಡುತ್ತಿದ್ದ, ಈತ ನಾನು ಕೇಂದ್ರ ಸರ್ಕಾರದ ಉದ್ಯೋಗಿ/ ಕಂಪೆನಿಯ ಸಿಇಒ ಇತ್ಯಾದಿ ಹೆಸರಿನಲ್ಲಿ ಪ್ರೊಫೈಲ್ ಕ್ರಿಯೆಟ್ ಮಾಡುತ್ತಿದ್ದ. ಈ ವೆಬ್‍ಸೈಟ್ ಗಳಲ್ಲಿ ಯುವತಿಯರನ್ನು/ ವಿಚ್ಚೇದನವಾಗಿರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಮದುವೆಯಾಗುವುದಾಗಿ ನಂಬಿಸಿ, ನಂತರ ಲೈಂಗಿಕವಾಗಿ ಬಳಸಿಕೊಂಡು ಅವರಿಂದಲೇ ಹಣ ಪಡೆದು ಸಾದತ್ ಖಾನ್ ಪರಾರಿಯಾಗುತ್ತಿದ್ದ.

    ಸುಮಾರು 40 ಕ್ಕೂ ಹೆಚ್ಚು ಮಹಿಳೆಯರಿಗೆ ಹಣ ಪಡೆದು ಮೋಸ ಮಾಡಿದ್ದು, 75 ರಿಂದ 100 ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಬಳಸಿರುವ ಮಾಹಿತಿ ಈಗ ಸಿಕ್ಕಿದೆ. ಬೆಂಗಳೂರಿನ ಯಲಹಂಕ, ಜಯನಗರ, ಮೈಸೂರು ಕೆ. ಅರ್.ಪುರ. ಧಾರವಾಡ ಸೇರಿದಂತೆ 8 ಕಡೆ ಅಧಿಕೃತ ದೂರು ದಾಖಲಾಗಿದೆ. ಪಿಯೂ ಓದಿದ ಬಳಿಕ ಐಟಿಐ ಮಾಡಿದ್ದ ಈತ ಹೇರ್ ಸ್ಟೈಲ್, ಬಾಡಿ ಸ್ಟ್ರಕ್ಚರ್, ಭಾಷೆ, ಊರು ಎಲ್ಲ ಬದಲಾಯಸಿಕೊಂಡಿದ್ದ. ಅನ್ ಲೈನ್‍ಲ್ಲಿ ಫಾರೀನ್ ಇಂಗ್ಲಿಷ್  ಶೈಲಿಯನ್ನು ಕಲಿತು ಯುವತಿಯರನ್ನು ಪಟಾಯಿಸುತ್ತಿದ್ದ. ಓರ್ವ ಮಹಿಳೆ ಬಳಿಯಿಂದ 20 ಲಕ್ಷ ಹಣ ಸುಲಿಗೆ ಮಾಡಿದ್ದಾನೆ. ನಿವೃತ್ತ ಸರ್ಕಾರಿ ಅಧಿಕಾರಿಯ ಮಗಳಿಗೂ ಮೋಸ ವಂಚಕ ಮೋಸ ಮಾಡಿದ್ದಾನೆ. ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್, ಸರ್ಕಾರಿ ನೌಕರರು, ಟೆಕ್ಕಿಗಳು, ಕಾರ್ಪೊರೇಟ್ ಸಂಸ್ಥೆಯ ಮುಖ್ಯಸ್ಥರು ಸಹ ಇವನಿಂದ ಮೋಸ ಹೋಗಿದ್ದು, ಕೆಲ ಮಹಿಳೆಯರ ಸಂಪೂರ್ಣ ಆಸ್ತಿ ಕಿತ್ತುಕೊಂಡಿರುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಈತನಿಗೆ ಇದೆ 17 ಹೆಸರು: ಅತಿಯಾದ ಕುಡುಕನಾದ ಈತನಿಗೆ ಹಣ ಬೇಕಿತ್ತು. ಹೀಗಾಗಿ ಸುಲಭವಾಗಿ ಯುವತಿಯರಿಂದ ಹಣ ಸಿಗುತ್ತದೆ ಎನ್ನುವ ಕಾರಣಕ್ಕೆ ಮ್ಯಾಟ್ರಿಮೋನಿ ತಾಣಗಳಲ್ಲಿ 17 ವಿವಿಧ ಹೆಸರಿಟ್ಟುಕೊಂಡು ಆರೋಪಿ ವಂಚಿಸುತ್ತಿದ್ದ. ಒಂದು ತಾಣದಲ್ಲಿ ಸರ್ಕಾರಿ ನೌಕರಿ, ಟೆಕ್ಕಿ, ಬ್ಯಾಂಕ್ ಮ್ಯಾನೇಜರ್ ಇತ್ಯಾದಿ ಹೆಸರುಗಳನ್ನು ನಮೂದಿಸಿ ಪರಿಚಯ ಮಾಡಿಕೊಂಡು ಯುವತಿಯರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ.

    ಮ್ಯಾಟ್ರಿಮೋನಿಯಲ್ಲಿ ಹೇಗೆ? ಸಾಧಾರಣವಾಗಿ ಮ್ಯಾಟ್ರಿಮೋನಿ ತಾಣಗಳಲ್ಲಿ ಸ್ವ ವಿವರದ ಮಾಹಿತಿಯ ಜೊತೆ ತನಗೆ ಬೇಕಾದ ವಧು/ ವರ ಹೇಗಿರಬೇಕು ಎನ್ನುವುದನ್ನು ತಿಳಿಸಲು ಆಯ್ಕೆಗಳಿರುತ್ತದೆ. ಈ ಆಯ್ಕೆಯಲ್ಲಿ ಯುವತಿಯರು ಯಾವ ರೀತಿಯ ವರ ಇರಬೇಕು ಎನ್ನುವುದನ್ನು ನಮೂದಿಸಿದ್ದಾರೋ, ಆ ಬೇಕಾಗಿದ್ದ ಮಾಹಿತಿಗೆ ಅನುಗುಣವಾಗಿ ಈತ ತನ್ನ ಪ್ರೊಫೈಲ್ ಕ್ರಿಯೆಟ್ ಮಾಡಿ ಟಾರ್ಗೆಟ್ ಆಗಿದ್ದ ಯುವತಿಯರನ್ನು ಖೆಡ್ಡಾಕ್ಕೆ ಬೀಳಿಸುತ್ತಿದ್ದ.

    ಲೈಫ್‍ಸ್ಟೈಲ್ ನೋಡಿ ಮನಸೋತ್ರು: ಹುಡುಗಿಯರು ಮತ್ತು ಮಹಿಳೆಯರು ಶ್ರೀಮಂತ ವರನನ್ನೇ ಹುಡುಕುತ್ತಿದ್ದಾರೆ ಎನ್ನುವುದು ಸಾದತ್‍ಗೆ ತಿಳಿದಿತ್ತು. ಇದಕ್ಕಾಗಿ ಈತ ಪರಸ್ಪರ ಪರಿಚಯವಾಗುವ ವೇಳೆ ಐಷಾರಾಮಿ ಕಾರುಗಳನ್ನು ಬುಕ್ ಮಾಡಿ ಸ್ಥಳಕ್ಕೆ ಬಂದು ಭೇಟಿ ಮಾಡುತ್ತಿದ್ದ. ಬೆನ್ಜ್, ಆಡಿ ಕಾರ್‍ಗಳನ್ನು ಬಾಡಿಗೆ ಪಡೆದು ಹೆಣ್ಣುಮಕ್ಕಳ ಮುಂದೆ ಓಡಾಡುತ್ತಿದ್ದ. ಪ್ರೊಫೈಲ್ ನೋಡಿ ಈತನಿಗೆ ಬಿದ್ದಿದ್ದ ಹುಡುಗಿಯರು ಈತನ ಹೈಫೈ ಲೈಫ್‍ಸ್ಟೈಲ್ ನೋಡಿ ಮನಸೋಲುತ್ತಿದ್ದರು.

    ಹಣ ಪಡೆದು ವಂಚನೆ: ಪರಿಚಯವಾದ ಹುಡುಗಿ ಬಳಿ ನನಗೆ ಸ್ವಲ್ಪ ಸಹಾಯ ಮಾಡಬೇಕು ಎಂದು ಎಂದು ಹೇಳಿ ಅವರಿಂದ ಹಣವನ್ನು ಪಡೆಯುತ್ತಿದ್ದ. ಪಡೆದ ಹಣದಲ್ಲಿ ಅರ್ಧ ಹಣವನ್ನು ತನ್ನ ಶೋಕಿ ಲೈಫ್ ಗೆ ಬಳಸುತ್ತಿದ್ದರೆ ಅರ್ಧ ಹಣವನ್ನು ಬೇರೆ ಯುವತಿಗೆ ನೀಡುತ್ತಿದ್ದ. ಈತನ ಈ ವಿಶೇಷ ಉಪಕಾರವನ್ನು ನೋಡಿ ಹುಡುಗಿಯರು ಸಾದತ್ ಮೇಲೆ ಮತ್ತಷ್ಟು ನಂಬಿಕೆ ಇಡುತ್ತಿದ್ದರು. ಈ ರೀತಿಯ ಸಹಾಯ ಮಾಡಿದ ಕೆಲ ದಿನಗಳ ಬಳಿಕ ಅದೇ ಹುಡುಗಿಯರಿಂದ ಹಣವನ್ನು ಪಡೆಯುತ್ತಿದ್ದ.

    ಬ್ಲ್ಯಾಕ್‌ಮೇಲ್‌ ಆಟ: ಯುವತಿಯರಿಗೆ ಈತನ ಮೇಲೆ ನಂಬಿಕೆ ಜಾಸ್ತಿ ಆಗುತ್ತಿದ್ದಂತೆ ಈತ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಲೈಂಗಿಕವಾಗಿ ಬಳಸಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ತನ್ನ ನಿಜರೂಪವನ್ನು ತೋರಿಸುತ್ತಿದ್ದ.

    ಬಂಧನವಾಗಿದ್ದ: ಈ ಹಿಂದೆ ಈ ಪ್ರಕರಣದಲ್ಲೇ ಪೊಲೀಸರು ಬಂಧಿಸಿದ್ದರು. ಆದರೆ ಜೈಲಿನಿಂದ ಜಾಮೀನು ಪಡೆದು ಬಿಡುಗಡೆಯಾಗಿ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸುತ್ತಿದ್ದ. ಸಾಫ್ಟ್ ವೇರ್ ಎಂಜಿನಿಯರ್, ಪ್ರೊಫೆಸರ್ ಉದ್ಯೋಗದಲ್ಲಿರುವ ಯುವತಿಯರು ಮತ್ತು ವಿಚ್ಛೆದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕೃತ್ಯವನ್ನು ಎಸಗುತ್ತಿದ್ದ. ಲೈಂಗಿಕವಾಗಿ ಶೋಷಣೆಗೆ ಒಳಗಾದ ಯುವತಿಯರು/ ಮಹಿಳೆಯರು ಪೈಕಿ ಬಹುತೇಕ ಮಂದಿ ದೂರು ನೀಡದೇ ಇದ್ದ ಕಾರಣ ತನ್ನ ವಿಕೃತ ಆಟವನ್ನು ಮುಂದುವರಿಸುತ್ತಿದ್ದ.

    ಪೊಲೀಸರ ಮನವಿ: ಅರೋಪಿಯ ಎಲ್ಲಾ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಲಾಗಿದೆ. ಈತ ಉಮೇಶ್ ರೆಡ್ಡಿಯ ರೀತಿಯ ಮತ್ತೊಬ್ಬ ವಿಕೃತ ಮನಸ್ಸಿನ ವ್ಯಕ್ತಿ. ಅನೇಕ ಮಹಿಳೆಯರು ಮರ್ಯಾದೆಗೆ ಅಂಜಿ ದೂರು ನೀಡಲು ಬರುತ್ತಿಲ್ಲ. ಈ ಹಿಂದೆ ಯಲಹಂಕದಲ್ಲಿ ಒಂದು ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ. ಧಾರವಾಡ ಠಾಣೆಯಲ್ಲಿ ಒಮ್ಮೆ ಅರೆಸ್ಟ್ ಆಗಿದ್ದ. ಜೈಲಿಗೆ ಹೋಗಿ ಬಂದ ಮೇಲೆ ಎಲ್ಲಾ ಬದಲಾಯಿಸಿಕೊಳ್ಳುತ್ತಾನೆ. ಪೊಲೀಸರು ಮಾರುವೇಷದಲ್ಲಿ ಹೋಗಿ ಲಾಡ್ಜ್ ನಲ್ಲಿ ಆರೋಪಿಯನ್ನು ಹಿಡಿದಿದ್ದಾರೆ. ಶ್ರೀಮಂತ ಮಹಿಳೆಯರ ಲೈಫ್ ಸ್ಟೈಲ್ ತಿಳಿದುಕೊಂಡಿದ್ದ ಈತ ಆನಂತರ, ಡೈವೋರ್ಸ್ ಆದ ಮಹಿಳೆಯರು, ಲೇಟ್ ಮದುವೆಯಾದವರು, ಗಂಡ ಹೆಂಡತಿಯರ ಸಬಂಧ ಸರಿಯಿಲ್ಲದವರನ್ನು ಟಾರ್ಗೆಟ್ ಮಾಡಿ ಕೃತ್ಯ ಎಸಗುತ್ತಿದ್ದ. ಈತನಿಂದ ನೊಂದವರು ಯಾರಾದರೂ ಇದ್ದರೆ ಬಂದು ದೂರು ಕೊಡಬಹುದು ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ. ಹರ್ಷಾ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ಬಾಹುಬಲಿ ಪ್ರಭಾಸ್‍ಗೆ ವಧುಬೇಕಾಗಿದೆ!- ಈ ಅರ್ಹತೆ ನಿಮಗಿದ್ರೆ ನೀವು ಟ್ರೈ ಮಾಡಬಹುದು!

    ಬಾಹುಬಲಿ ಪ್ರಭಾಸ್‍ಗೆ ವಧುಬೇಕಾಗಿದೆ!- ಈ ಅರ್ಹತೆ ನಿಮಗಿದ್ರೆ ನೀವು ಟ್ರೈ ಮಾಡಬಹುದು!

    ಬೆಂಗಳೂರು: ಬಾಹುಬಲಿ ಭಾಗ- 2 ರಿಲೀಸ್ ಆದ ಬಳಿಕ ಡಾರ್ಲಿಂಗ್ ಪ್ರಭಾಸ್ ಯಾವಾಗ ಮದುವೆ ಆಗ್ತಾರೆ ಅನ್ನೋದೇ ದೊಡ್ಡ ಸುದ್ದಿಯಾಗ್ಬಿಟ್ಟಿದೆ. ಇತ್ತ ಬಾಹುಬಲಿಗೊಂದು ಹುಡುಗಿ ಹುಡುಕಿಕೊಡಿ ಅಂತಾ ರಾಣಾ ದಗ್ಗುಬಾಟಿ ಮ್ಯಾಟ್ರಿಮೋನಿಯಲ್ ಜಾಹೀರಾತು ಕೊಟ್ಟಿದ್ದಾರೆ.

    36 ವರ್ಷದ ಗೌರವಾನ್ವಿತ ಕುಟುಂಬದ ಸೇನಾನಾಯಕ. ಮನೆ ಕೆಲಸದಲ್ಲಿ ಎಲ್ಲಾ ರೀತಿಯ ಸಹಾಯ ಮಾಡುತ್ತಾನೆ. ಮದುವೆಯ ಸಂಬಂಧ ಕಂಡುಬಂದರೆ ಬೆಟ್ಟವನ್ನೂ ಹತ್ತುವ ಸಮರ್ಥ. ಮೇಕ್ ಅಪ್ ಮಾಡುವುದು ಚೆನ್ನಾಗಿ ಗೊತ್ತು. ವಧುವಿಗೂ ಮೇಕ್ ಅಪ್ ಮಾಡಬಲ್ಲ ಎಂದು ಗೆಳೆಯನ ಗುಣಗಾನ ಮಾಡಿದ್ದಾರೆ.


    ವರ ಗುಡ್ಡ, ಬೆಟ್ಟ ಹತ್ತಿ ಓಡಿ ಬರುವಷ್ಟು ವಧುವಿಗೆ ಸೌಂದರ್ಯವಿರಬೇಕು. ಶತ್ರುಗಳನ್ನು ಹೊಡೆದೋಡಿಸುವ ಸೇನಾ ಸಾಮರ್ಥ್ಯವಿರಬೇಕು. ತನ್ನ ಅತ್ತೆ ವನವಾಸಕ್ಕೆ ಕಳಿಸಿದ್ರೂ ಆಕೆಯನ್ನ ಗೌರವಿಸಬೇಕು. ಮನೆಗೆಲಸದ ಜತೆಗೆ ಮಿಲಿಟರಿ ತರಬೇತಿ ಹೊಂದಿರಬೇಕು ಎಂದು ಬೇಡಿಕೆಗಳ ಪಟ್ಟಿ ಮಾಡಿದ್ದಾರೆ. ಈ ಜಾಹೀರಾತನ್ನು ರಾಣಾ 2016ರಲ್ಲೇ ಪೋಸ್ಟ್ ಮಾಡಿದ್ದಾರೆ.

    ಈ ಮೂಲಕ ಆನ್ ಸ್ಕ್ರೀನ್ ನಲ್ಲಿ ಎದುರು ಬದುರಾಗಿ ಜಿದ್ದಿಗೆ ಬಿದ್ದವರಂತೆ ನಟಿಸಿ ಪ್ರೇಕ್ಷಕರನ್ನು ಸೂರೆ ಮಾಡಿದ್ದ ಬಾಹುಬಲಿ ನಟರಾದ ಪ್ರಭಾಸ್ ಮತ್ತು ರಾಣಾ ದಗ್ಗುಬಾತಿ ಆಫ್ ಸ್ಕ್ರೀನ್ ನಲ್ಲಿ ಬೆಸ್ಟ್ ಫ್ರೆಂಡ್ಸ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಒಟ್ಟಿನಲ್ಲಿ ಸಿನಿಮಾದಲ್ಲಿ ಬಾಹುಬಲಿ ಪ್ರಭಾಸ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ ರಾಣಾ ನಿಜ ಜೀವನದಲ್ಲಿ ಪ್ರಭಾಸ್ ಗೊಂದು ಹೆಣ್ಣು ಕೊಡಿ ಎಂದು ಟ್ವಿಟರ್ ನಲ್ಲಿ ತಮಾಷೆಯ ಜಾಹೀರಾತು ನೀಡಿರುವುದನ್ನು ಓದಿ ಅಭಿಮಾನಿಗಳು ನಗುತ್ತಿದ್ದಾರೆ.