Tag: Max Movie

  • ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

    ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

    – ಕಿಚ್ಚ 47ನೇ ಚಿತ್ರಕ್ಕೆ ಮ್ಯಾಕ್ಸ್‌ ಮಾಂತ್ರಿಕ ಆಕ್ಷನ್‌ ಕಟ್.. ವಿಜಯ್‌ ಕಾರ್ತಿಕೇಯ ಜೊತೆ ಕೈ ಜೋಡಿಸಿದ ಸುದೀಪ್‌

    ಕಿಚ್ಚ ಸುದೀಪ್‌ (Kiccha Sudeep) ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಬಿಲ್ಲ ರಂಗ ಭಾಷಾ ಸಿನಿಮಾದಲ್ಲಿ ಬ್ಯುಸಿಯಾಗಿರುವ ಅಭಿನಯ ಚಕ್ರವರ್ತಿ ಇದೀಗ ಮತ್ತೊಮ್ಮೆ ಮ್ಯಾಕ್ಸ್‌ (Max) ಚಿತ್ರ ಮಾಂತ್ರಿಕ ವಿಜಯ್‌ ಕಾರ್ತಿಕೇಯ ಜೊತೆ ಕೈ ಜೋಡಿಸಿದ್ದಾರೆ. ಮ್ಯಾಕ್ಸ್‌ ಸೂಪರ್‌ ಹಿಟ್‌ ಬಳಿಕ ಮತ್ತೊಮ್ಮೆ ಈ ಜೋಡಿ ಮ್ಯಾಕ್ಸ್‌ 2ಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದ್ರೆ ಸುದೀಪ್‌ ಹಾಗೂ ವಿಜಯ್‌ ಮ್ಯಾಕ್ಸ್‌ 2 ಪಕ್ಕಕ್ಕಿಟ್ಟು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ 47ನೇ ಸಿನಿಮಾ ಇಂದು ಅನೌನ್ಸ್‌ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ. ಜುಲೈ 7 ರಿಂದ ಸಿನಿಮಾ ಶೂಟಿಂಗ್ ಪ್ಲಾನ್ ಮಾಡಿರುವ ಚಿತ್ರತಂಡ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಸುದೀಪ್ 47ನೇ ಚಿತ್ರವನ್ನು ತಮಿಳಿನ ಬಿಗ್ ಪ್ರೊಡಕ್ಷನ್ ಹೌಸ್ ಸತ್ಯಜ್ಯೋತಿ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ವಿಷ್ಣುವರ್ಧನ್ ಜೊತೆ ಸತ್ಯಜ್ಯೋತಿ ಚಿತ್ರ ನಿರ್ಮಾಣ ಮಾಡಿದ್ದ ಸತ್ಯಜ್ಯೋತಿ ಫಿಲಂಸ್ ಈಗ 39 ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದೆ. ಇದನ್ನೂ ಓದಿ: ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

    ಚಿತ್ರದ ಕುರಿತು ಮಾತನಾಡಿದ ಸುದೀಪ್‌, ಮ್ಯಾಕ್ಸ್ ನಂತರ ನಾವು ಮತ್ತೆ ಒಂದಾಗಿದ್ದೇವೆ. ಸದ್ಯಕ್ಕೆ ಮ್ಯಾಕ್ಸ್ 2 ಸಿನಿಮಾ ಕೈ ಬಿಟ್ಟಿದ್ದೀವಿ. ಈ‌ ವರ್ಷ ಎರಡು ಸಿನಿಮಾ ಮಾಡುತ್ತೇವೆ. ಬಿಲ್ಲರಂಗ ಬಾಷ ಸಿನಿಮಾ ಈ ವರ್ಷ ರಿಲೀಸ್ ಆಗಲ್ಲ. ಆದರೆ ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25 ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ಬಿಗ್ ಬಾಸ್ ಶುರು ಆಗುತ್ತೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

  • ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಚಿತ್ರದುರ್ಗ: ಕನ್ನಡ ಚಿತ್ರರಂಗದಲ್ಲಿ (Kannada Film Industry) ಸದಾ ಒಗ್ಗಟ್ಟು ಹೀಗೆ ಇರಲಿ ಎಂದು ಬಯಸೋನು ನಾನು ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಒಗ್ಗಟ್ಟಿನ ಮಂತ್ರ ಜಪಿಸಿದರು.

    ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಅದ್ಧೂರಿಯಾಗಿ ನಡೆಯಿತು. ಈ ವೇಳೆ ನಗರದ ಜಗದ್ಗುರು ಜಯದೇವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರ ದುರ್ಗದ ಸಹಸ್ರಾರು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ವಲಸೆ ಹೆಚ್ಚಲಿದೆ – ನಾರಾಯಣಮೂರ್ತಿ ಆತಂಕ

    ಹುಚ್ಚ ಸಿನಿಮಾದಿಂದ ಪ್ರಾರಂಭವಾದ ನಟ ಸುದೀಪ್ ಹಾಗೂ ಚಿತ್ರದುರ್ಗದೊಂದಿಗಿನ ಅವರ ನಂಟಿನ ವಿಶೇಷ ವೀಡಿಯೋವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. ಇದೇ ವೇಳೆ ಚಿತ್ರದುರ್ಗದಲ್ಲಿ ಸುದೀಪ್ ಅವರ ‘ಮ್ಯಾಕ್ಸ್’ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ – ಕಾರ್ಯಕರ್ತರನ್ನು ಕಂಡು ಸಿ.ಟಿ ರವಿ ಭಾವುಕ

    ಈ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ, ಈ ಹಿಂದೆ ದುರ್ಗಕ್ಕೆ ಬರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಒಬ್ಬನೇ ಬಂದಿಲ್ಲ. ಈಗ ಕುಟುಂಬ ಸಮೇತ ಬಂದಿದ್ದೇನೆ. ಹಾಗೆಯೇ ಚಿತ್ರದುರ್ಗಕ್ಕೆ ಪ್ರತಿಸಲ ಬರುವಾಗಲೂ ಬಹಳ ಸಂತೋಷವಾಗುತ್ತದೆ. ಹುಚ್ಚ ಸಿನಿಮಾ ಯಾರೂ ಮರೆಯಲು ಸಾಧ್ಯವಿಲ್ಲ. ಅಂಥದ್ದೊಂದು ಪ್ರೀತಿಯನ್ನು ಚಿತ್ರದುರ್ಗ ಕೊಟ್ಟಿದೆ ಎಂದು ಸ್ಮರಿಸಿದರು. ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ಗೆ ಕೋರ್ಟ್‌ ಸಮನ್ಸ್‌

    ಜೊತೆಗೆ ಕನ್ನಡ ಚಿತ್ರರಂಗ ಒಗ್ಗಟ್ಟಾಗಿ ಇರೋದನ್ನು ನೋಡೋನು ನಾನು. ನಮ್ಮಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಹೀಗಾಗಿ ನೀವೆಲ್ಲರೂ ಹೊಸ ಪ್ರತಿಭೆಗಳಿಗೆ ಸಪೋರ್ಟ್ ಮಾಡಬೇಕು ಎಂದರು. ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

    ಈ ಕಾರ್ಯಕ್ರಮದಲ್ಲಿ ಸುದೀಪ್ ಪತ್ನಿ ಪ್ರಿಯಾ ಸುದೀಪ್, ಮಗಳು ಸಾನ್ವಿ, ಅಕ್ಕನ ಮಗ ಸಂಚಿತ್ ಕೂಡಾ ಭಾಗವಹಿಸಿದ್ದರು. ಇವರೊಂದಿಗೆ ನಾಯಕ ನಟರಾದ ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ನಿರ್ದೇಶಕರಾದ ಎ.ಪಿ.ಅರ್ಜುನ್, ರೋಹಿತ್ ಪದಕಿ, ಅನೂಪ್ ಭಂಡಾರಿ, ಶ್ರೇಯಸ್ ಮಂಜು, ನಿರೂಪ್ ಭಂಡಾರಿ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ: ಮಂಡ್ಯ| ಮೂರು ದಿನಗಳ ಅಕ್ಷರ ಜಾತ್ರೆಗೆ ತೆರೆ

    ನಟ ಯುವ ರಾಜ್‌ಕುಮಾರ್ ಹಾಗು ಡಾಲಿ ಧನಂಜಯ ಕೂಡ ಸುದೀಪ್ ಅವರ ಮೇಲೆ ಅವರ ಅಭಿಮಾನಿಗಳು ತೋರಿದ ಪ್ರೀತಿ ಹಾಗೂ ಅಭಿಮಾನಕ್ಕೆ ಫುಲ್ ಫಿದಾ ಆದರು. ಸುದೀಪ್ ಅವರ ಒಗ್ಗಟ್ಟಿನ ಗುಣವನ್ನು ಶ್ಲಾಘಿಸಿದರು. ಇದನ್ನೂ ಓದಿ: ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

  • BB Season 11 | ಬೇರೆಯವರನ್ನು ನೋಡ್ಬೇಕು ಅಂತಾ ನಾನು ವೇಟ್ ಮಾಡ್ತಾ ಇದೀನಿ: ಸುದೀಪ್

    BB Season 11 | ಬೇರೆಯವರನ್ನು ನೋಡ್ಬೇಕು ಅಂತಾ ನಾನು ವೇಟ್ ಮಾಡ್ತಾ ಇದೀನಿ: ಸುದೀಪ್

    ಬೆಂಗಳೂರು: ಈ ಬಾರಿಯ ಬಿಗ್ ಬಾಸ್ (Bigg Boss) ರಿಯಾಲಿಟಿ ಶೋ ನಿರೂಪಣೆಯನ್ನು ಸುದೀಪ್ ಮಾಡಲ್ವಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಸುದೀಪ್ ಅವರು ನೀಡಿದ ಹೇಳಿಕೆಯಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.

    ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕೆಲವು ದಿನಗಳಲ್ಲೇ ಸೀಸನ್ 11 (Season 11) ಆರಂಭವಾಗಲಿದೆ. ಇಲ್ಲಿಯವರೆಗೂ ನಡೆದ 10 ಸೀಸನ್‌ಗಳನ್ನು ನಟ ಅಭಿನಯ ಚಕ್ರವರ್ತಿ ಸುದೀಪ್ (Abhinaya Chakravarty Sudeep) ನಿರೂಪಕರಾಗಿ ನಡೆಸಿಕೊಂಡು ಬಂದಿದ್ದರು.ಇದನ್ನೂ ಓದಿ: ಕೋರ್ಟ್ ಆದೇಶ ಪಾಲಿಸದ ಮಸ್ಕ್ – ಬ್ರೆಜಿಲ್‍ನಲ್ಲಿ ಎಕ್ಸ್ ಸೇವೆ ಸ್ಥಗಿತ

    ಕಳೆದ ಕೆಲವು ದಿನಗಳಿಂದ ಬಿಗ್ ಬಾಸ್ ಸೀಸನ್ 11ರ ನಿರೂಪಕ ಬದಲಾಗುವ ಕುರಿತು ಸುದ್ದಿ ಎಲ್ಲೆಡೆ ಹಬ್ಬಿತ್ತು ಆದರೆ ಇದಕ್ಕೆ ಸಂಬಂಧಿಸಿದಂತೆ ವಾಹಿನಿಯಾಗಲಿ, ನಟ ಸುದೀಪ್ ಆಗಲಿ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿರಲಿಲ್ಲ.

    ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಬಿಗ್ ಬಾಸ್ ಸೀಸನ್ -11 ಕ್ಕೆ ಬೇರೆಯವರೂ ಬರಲಿ ಅಂತಾ ಕಾಯ್ತಾ ಇದೀನಿ. ಬಿಗ್ ಬಾಸ್‌ನ 10 ಸೀಸನ್‌ಗಳನ್ನು ನಾನು ಡೆಡಿಕೇಟ್ ಮಾಡಿದ್ದೀನಿ. ಕಳೆದ 10 ಸೀಸನ್‌ಗಳನ್ನು ನಾನು ನಡೆಸಿಕೊಂಡು ಬಂದಿದ್ದೀನಿ. ನಾನು ಬಿಗ್ ಬಾಸ್ ನಡೆಸಿಕೊಡ್ತೀನಿ ಅಂತಾ ಎಲ್ಲರಿಗೂ ಗೊತ್ತಿದೆ. ಆದರೆ ನಾನು ಹೇಗೆ ನಡೆಸಿಕೊಡುತ್ತಿದ್ದೆ ಅಂತಾ ಯಾರಿಗಾದರೂ ಗೊತ್ತಿದ್ಯಾ? ಬಿಗ್ ಬಾಸ್‌ಗಾಗಿ ನಾನು ಎಲ್ಲಿದ್ದರೂ ಬರಬೇಕಾಗುತ್ತದೆ. ಬಿಗ್ ಬಾಸ್ ನಡೆಸಬೇಕಾದರೆ ಅದರ ಹಿಂದಿನ ಸ್ಥಿತಿ ಹೇಗಿರುತ್ತದೆ ಅಂತಾ ನನಗೆ ಗೊತ್ತಿದೆ ಎಂದು ಬಿಚ್ಚಿಟ್ಟರು.ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ

    ಈ ಸಂದರ್ಭದಲ್ಲಿ ಸಿನಿಮಾಗೆ ನ್ಯಾಯ ಕೊಡಬೇಕಾ? ಅಥವಾ ಬಿಗ್ ಬಾಸ್ ಶೋಗೆ ನ್ಯಾಯ ಕೊಡಬೇಕಾ? ಎಂದು ಪ್ರಶ್ನಿಸಿದರು. ಸುದೀಪ್ ಅವರು ಈ ಮಾತನ್ನು ಆಡಿದ ಬೆನ್ನಲ್ಲೇ ಈ ಬಾರಿಯ ಶೋನದಲ್ಲಿ ನಿರೂಪಣೆ ಮಾಡ್ತಾರೋ ಇಲ್ವೋ ಪ್ರಶ್ನೆ ಎದುರಾಗಿದೆ. ಮಾಧ್ಯಮಗೋಷ್ಠಿಯಲ್ಲಿ ನಾನು ಶೋ ನಡೆಸಿಕೊಡುತ್ತೇನೆ ಅಥವಾ ನಡೆಸಿಕೊಡುವುದಿಲ್ಲ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟವಾದ ಉತ್ತರ ನೀಡಿಲ್ಲ. ವಾಹಿನಿ ಸಹ ಈ ವಿಚಾರದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ ಬಿಗ್ ಬಾಸ್ ಆರಂಭವಾಗುವವರೆಗೂ ಕುತೂಹಲ ಮುಂದುವರಿಯಲಿದೆ.