Tag: MBBS Students

  • ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

    ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

    – ತಿಂತಿದ್ದ ಊಟದ ತಟ್ಟೆಯನ್ನು ಅರ್ಧಕ್ಕೆ ಬಿಟ್ಟು ಓಡಿದ ವಿದ್ಯಾರ್ಥಿಗಳು

    ಅಹಮದಾಬಾದ್: ಏರ್ ಇಂಡಿಯಾ ವಿಮಾನವು (Air India Flight) ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಮೇಘಾನಿ ಪ್ರದೇಶದ(Meghani area) ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಡಿದಿದೆ. ಈ ಪರಿಣಾಮ 7 ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ಈ ದುರಂತದ ವೇಳೆ ಮೆಸ್‌ನಲ್ಲಿದ್ದ ವಿದ್ಯಾರ್ಥಿಗಳು ಮಧ್ಯಾಹ್ನ ತಿನ್ನುತ್ತಿದ್ದ ಊಟವನ್ನು ಅರ್ಧಕ್ಕೆ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಅಪಘಾತದ ಭೀಕರತೆಯ ದೃಶ್ಯವನ್ನು ಚಿತ್ರವೊಂದು ವಿವರಿಸುತ್ತದೆ. ಈ ಚಿತ್ರದಲ್ಲಿ ಟೇಬಲ್ ಮೇಲೆ ಬಡಿಸಿಟ್ಟಿದ್ದ ಊಟದ ತಟ್ಟೆ, ಲೋಟ ಎಲ್ಲವೂ ಹಾಗೆ ಇವೆ. ಇದನ್ನೂ ಓದಿ: ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

    ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ಪರಿಣಾಮ ಮೆಡಿಕಲ್ ಕಾಲೇಜಿನ ಅಡುಗೆ ಮನೆಗೆ ಬೆಂಕಿ ಹೊತ್ತಿಕೊಂಡು ಗೋಡೆಗಳು ಛಿದ್ರ ಛಿದ್ರಗೊಂಡಿದೆ. ಈ ದುರಂತದ ವೇಳೆ ಮೆಸ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

  • NEET-UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಮಾಸ್ಟರ್‌ ಮೈಂಡ್‌, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಅರೆಸ್ಟ್‌

    NEET-UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಮಾಸ್ಟರ್‌ ಮೈಂಡ್‌, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಅರೆಸ್ಟ್‌

    ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ NEET-UG Paper Leak Case) ಮಾಸ್ಟರ್‌ ಮೈಂಡ್‌ಗಳಲ್ಲಿ ಒಬ್ಬ ಹಾಗೂ ʻಪರಿಹಾರಕʼರಾಗಿ (Solvers) ಕಾರ್ಯನಿರ್ವಹಿಸಿದ್ದ‌ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳನ್ನ ಕೇಂದ್ರೀಯ ತನಿಖಾ ದಳ (CBI) ಶನಿವಾರ ಬಂಧಿಸಿದೆ.

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತ ಇಬ್ಬರು ʻಸಾಲ್ವರ್ʼ ಗಳನ್ನು ರಾಜಸ್ಥಾನ ಭರತ್‌ಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರ್ ಮಂಗಳಂ ಬಿಷ್ಣೋಯ್ ಮತ್ತು ದೀಪೇಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    ನೀಟ್‌-ಯುಜಿ ಪರೀಕ್ಷೆ ದಿನದಿಂದ ಇವರಿಬ್ಬರು ಹಜಾರಿಬಾಗ್‌ನಲ್ಲಿ ಹಾಜರಿದ್ದರು ಎಂಬುದನ್ನು ಸಿಸಿಟಿವಿ ದೃಢಪಡಿಸಿದೆ. ಆರೋಪಿತ ಮಾಸ್ಟರ್ ಮೈಂಡ್ ಪಂಕಜ್‌ ಕುಮಾರ್‌ ʻಬಿ.ಟೆಕ್ʼ ಪದವೀಧರ ಎಂದು ಹೇಳಲಾಗಿದೆ. ಪಂಕಜ್‌ ಕುಮಾರ್‌ ಕದ್ದಿದ್ದ ಪ್ರಶ್ನೆ ಪತ್ರಿಕೆಯನ್ನು ಮಂಗಳಂ ಬಿಷ್ಣೋಯ್ ಮತ್ತು ದೀಪೇಂದರ್ ಕುಮಾರ್ ಪರಿಹರಿಸಿದ್ದರು ಎಂದು ಸಿಬಿಐ ಹೇಳಿದೆ. ಸದ್ಯ ಮಾಸ್ಟರ್‌ ಮೈಂಡ್‌ ಹಾಗೂ ಇಬ್ಬರು ಸಾಲ್ವರ್‌ಗಳನ್ನ ಸಿಬಿಐ ಬಂಧಿಸಿದ್ದು, ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.

    ನೀಟ್ ಹಗರಣದ ಗದ್ದಲ ಮುಂದುವರಿದ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್ ಆದೇಶದನ್ವಯ ಕೇಂದ್ರವಾರು ಮತ್ತು ನಗರವಾರು ನಿಟ್-ಯುಜಿ ಫಲಿತಾಂಶವನ್ನು ಎನ್‌ಟಿಎ ಪ್ರಕಟಿಸಿದೆ. ಇದನ್ನೂ ಓದಿ: `Public TV’ ಇಂಪ್ಯಾಕ್ಟ್‌: ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಸಚಿವ ಬೋಸರಾಜು ಭೇಟಿ

    ವಿದ್ಯಾರ್ಥಿಗಳ ಗುರುತು ಪತ್ತೆಯಾಗದಂತೆ ಎನ್‌ಟಿಎ ಮುಂಜಾಗ್ರತೆ ವಹಿಸಿದೆ. ಈ ದತ್ತಾಂಶದ ಪ್ರಕಾರ, ಮೊದಲಿಗೆ ಒಂದು ಪರೀಕ್ಷಾ ಕೇಂದ್ರದಲ್ಲಿ ಆರು ಮಂದಿಗೆ 720ಕ್ಕೆ 720 ಅಂಕ ಬಂದಿದ್ದವು. ಈ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. 1,563 ಮಂದಿಗೆ ಗ್ರೇಸ್ ಮಾರ್ಕ್ಸ್ ನೀಡಿದ್ದು ಇದಕ್ಕೆ ಕಾರಣ ಎಂದು ಗುರುತಿಸಿ ಅವರಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಈ ಫಲಿತಾಂಶದ ನಂತ್ರ ಆ ಕೇಂದ್ರದಲ್ಲಿ ಬಂದ ಗರಿಷ್ಠ ಅಂಕ 682 ಎಂಬುದು ಗಮನಾರ್ಹ. ಅದು ಕೂಡ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಅಂಕ ಬಂದಿತ್ತು. ಕೇಂದ್ರವಾರು ಫಲಿತಾಂಶದ ವಿಶ್ಲೇಷಣೆ ಮುಂದುವರೆದಿದೆ. ಇದನ್ನೂ ಓದಿ:  NEET ಪರೀಕ್ಷಾ ಅಕ್ರಮ ಕೇಸ್:‌ ʻಸಾಲ್ವರ್‌ ಗ್ಯಾಂಗ್‌ʼ ಕೆಲಸ ಏನಾಗಿತ್ತು? ಮಾಸ್ಟರ್‌ ಮೈಂಡ್‌ ಮಾಫಿಯಾಗೆ ಸಿಲುಕಿದ್ದು ಹೇಗೆ?

  • ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೊರೊನಾ

    ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೊರೊನಾ

    – ಲಸಿಕೆ ಪಡೆದವರಿಗೂ ಕೊರೊನಾ ಪಾಸಿಟಿವ್
    – ಅಸಡ್ಡೆ ತಂದ ಕುತ್ತು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವೇಗ ಪಡೆದುಕೊಳ್ಳುತ್ತಿದೆ. ಈ ಹಿಂದೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬೆನ್ನಲ್ಲೇ ಜಿಲ್ಲೆಯ “ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜು” ವಿದ್ಯಾರ್ಥಿಗಳಿಗೂ ಕೊರೊನಾ ದೃಢವಾಗಿದೆ. ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸುಮಾರು 450 ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಪರೀಕ್ಷೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಅಂತಿಮ ಎಂಬಿಬಿಎಸ್‍ನ ಸುಮಾರು 150 ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ಮುಂದುವರಿದಿದೆ.

    ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ: ಕಾಲೇಜಿನ ಮೂವರು ವಿದ್ಯಾರ್ಥಿನಿಯರಿಗೆ ಎರಡು ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಯಿತು. ಪ್ರಥಮ ಮತ್ತು ದ್ವಿತೀಯ ವರ್ಷದ 24 ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ನೆಗೆಟಿವ್ ವರದಿ ಬಂದ ವಿದ್ಯಾರ್ಥಿಗಳಿಗೆ ರಜೆ: ಕಾಲೇಜಿನ ಉಳಿದ ಬಹುತೇಕ ವಿದ್ಯಾರ್ಥಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಈ ಪೈಕಿ ಅಂತಿಮ ಎಂಬಿಬಿಎಸ್‍ನ 150 ವಿದ್ಯಾರ್ಥಿಗಳಿಗೆ ಏ. 18ರಿಂದ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅವರನ್ನು ಉಳಿಸಿಕೊಳ್ಳಲಾಗಿದೆ. ನೆಗೆಟಿವ್ ವರದಿ ಬಂದ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ ಎಂದು ಕಾಲೇಜಿನ ನಿರ್ದೇಶಕ ಡಾ. ಗಜಾನನ ನಾಯಕ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.

    ಅಸಡ್ಡೆ ತಂದ ಕುತ್ತು: ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಲಸಿಕೆ ಪಡೆದಿರಲಿಲ್ಲ. ಅಲ್ಲದೇ ಬಿಡುವಿನ ಸಮಯದಲ್ಲಿ ಮೋಜು ಮಸ್ತಿ ಎಂದು ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಹಾಗೂ ಇತರ ಪ್ರದೇಶಗಳಿಗೆ ಈ ವಿದ್ಯಾರ್ಥಿನಿಯರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕ ಮಾಡಿದ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.

    ಮೂವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದನಂತರ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಲಸಿಕೆಯ ಮೊದಲ ಡೋಸ್ ಪಡೆದಿರುವ 24 ವಿದ್ಯಾರ್ಥಿಗಳಲ್ಲೂ ಸೋಂಕು ಪತ್ತೆಯಾಗಿದೆ. ಈ ಲಸಿಕೆ ಪಡೆದ ವಿದ್ಯಾರ್ಥಿಗಳಲ್ಲಿ ಯಾವುದೇ ತರಹದ ರೋಗ ಲಕ್ಷಣವೂ ಇರಲಿಲ್ಲ. ಆರೋಗ್ಯ ಸ್ಥಿತಿ ತೀರಾ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ ಎಂದು ಕಾಲೇಜಿನ ಅಕಾರಿಗಳು ಮಾಹಿತಿ ನೀಡಿದ್ದಾರೆ.

    ಇನ್ನು ಜಿಲ್ಲೆಯಲ್ಲಿ ಇಂದು 66 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,250 ಕ್ಕೆ ಏರಿಕೆ ಕಂಡಿದೆ.

  • ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು

    ದಾವಣಗೆರೆ: ಜಿಲ್ಲಾಸ್ಪತ್ರೆಯ ವೈದ್ಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

    ರಾಜ್ಯ ಸರ್ಕಾರ 8 ತಿಂಗಳ ಶಿಷ್ಯ ವೇತನವನ್ನು ನೀಡದ್ದರಿಂದ ಕಳೆದ ಎರಡು ದಿನಗಳಿಂದ 235 ವೈದ್ಯ ವಿದ್ಯಾರ್ಥಿಗಳು ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ಪೆಂಡಲ್ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಇದಕ್ಕೂ ನಮಗೂ, ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತುಕೊಂಡಿದೆ.

    ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳು ಇಂದು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆಯನ್ನು ನಡೆಸಿದವು. ಕೂಡಲೇ ಸರ್ಕಾರ ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡುವವರೆಗೂ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲವೆಂದು ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv