ಪಾಟ್ನಾ: ಬಿಹಾರದಲ್ಲಿ ಕೊರೊನಾ ಆತಂಕದ ನಡುವೆ ಮತ್ತೊಂದು ಆಘಾತ ಎದುರಾಗಿದೆ. ಬಿಹಾರದಲ್ಲಿ ಮಂಗಳವಾರ ಮೊದಲ ಬಾರಿಗೆ 10 ಸಾವಿರ ಕೊರೊನಾ ಪ್ರಕರಣಗಳ ವರದಿಯಾಗಿವೆ. ಇದರಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿದ್ದ ಏಮ್ಸ್ ಆಸ್ಪತ್ರೆಯ 384 ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗೂ ಸೋಂಕು ತಗುಲಿದೆ.
ಪಾಟ್ನಾ ಏಮ್ಸ್ ಮೆಡಿಕಲ್ ಸೂಪರಿಟೆಂಡೆಂಟ್ ಇಂದು ತಮ್ಮ ಆಸ್ಪತ್ರೆಯ 384 ವೈದ್ಯರು ಸೇರಿದಂತೆ ಅನೇಕ ನರ್ಸಿಂಗ್ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆ ಬಿಹಾರದ ಪಂಚಾಯತಿ ಚುನಾವಣೆಗಳನ್ನ ಮುಂದೂಡಲಾಗಿದೆ. ಚುನಾವಣೆ ಏಪ್ರಿಲ್ ಅಂತ್ಯಕ್ಕೆ ನಿಗದಿಯಾಗಿತ್ತು. 15 ದಿನಗಳ ನಂತರ ಕೊರೊನಾ ಕುರಿತ ವಾಸ್ತವತೆ ಬಗ್ಗೆ ಸಮೀಕ್ಷೆ ನಡೆಸಿ ದಿನಾಂಕ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಂಗಳವಾರ ಬಿಹಾರದಲ್ಲಿ 10,455 ಹೊಸ ಪ್ರಕರಣಗಳು ವರದಿಯಾಗಿದ್ದು, 51 ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರತಿ ಗಂಟೆಗೆ ಇಬ್ಬರು ಕೊರೊನಾದಿಂದ ಬಿಹಾರದಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದವರೆಗೂ 3,42,059 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1,841 ಜನ ಸಾವನ್ನಪ್ಪಿದ್ದಾರೆ. ಸದ್ಯ 49,527 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ.
ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲವು ಬೇಡಿಕೆಗಳನ್ನು ನೀಡಿ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ವಿಚಾರವಾಗಿ ಮೇ 20ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು. ಈ ಬಗ್ಗೆ ಸಮಿತಿ ರಚನೆಯ ಮಾಡಿ ಬೇಡಿಕೆಗಳನ್ನು ಪರಿಶೀಲನೆಯ ಮಾಡುವ ಭರವಸೆ ನೀಡಿಲಾಗಿತ್ತು. ಆದರೆ ಈಗ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಮಾಡಲು ಸಂಘ ತೀರ್ಮಾನಿಸಿದೆ.
ನಮ್ಮ ರಾಜ್ಯದಲ್ಲಿ 23 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಡಾಕ್ಟರ್, ಸ್ಟಾಫ್ ನರ್ಸ್, ಅಂಬುಲೆನ್ಸ್ ಚಾಲಕರು ಸೇರಿ 180 ವಿವಿಧ ಹುದ್ದೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಒಟ್ಟು 1,500 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಕ್ವಾರಂಟೈನ್ ಸೆಂಟರ್ ಮತ್ತು ಫೀಲ್ಡ್ನಲ್ಲಿ ಈ ಸಿಬ್ಬಂದಿಯೇ ಪ್ರಮುಖವಾಗಿ ಕೆಲಸ ಮಾಡುತ್ತಿದ್ದಾರೆ.
ನೌಕರರ ಬೇಡಿಕೆಯೇನು?
1. ಕಡಿಮೆ ವೇತನ
2. ಪರಿಷ್ಕೃತ ವೇತನ ಇಲ್ಲ
3. ಭತ್ಯೆಗಳು ಇಲ್ಲ
4. ವೈದ್ಯಕೀಯ ಸೌಲಭ್ಯವಿಲ್ಲ
5. ರಜೆಗಳು ಇಲ್ಲ (ವರ್ಷಕ್ಕೆ 10 ಮಾತ್ರ)
6. ಸೇವಾ ಭದ್ರತೆ ಇಲ್ಲ
7. ವರ್ಗಾವಣೆ ಇಲ್ಲ (15 ವರ್ಷದಿಂದ ಒಂದೇ ಕಡೆ ಕೆಲಸ)
8. ಬ್ಯಾಂಕಿನಲ್ಲಿ ಸಾಲ ನೀಡುವುದಿಲ್ಲ
9. ಪದೋನ್ನತಿ ಇಲ್ಲ
10. ಹೆಚ್ಆರ್ ಪಾಲಿಸಿ ಇಲ್ಲ
11. ವಿಮೆ ಇಲ್ಲ
12. ಡೆತ್ ಬೆನಿಫಿಟ್ ಇಲ್ಲ
13. ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ
14. ಮಹಿಳಾ ಸಿಬ್ಬಂದಿಗೆ ಕುಟುಂಬ ಶಸ್ತ್ರಚಿಕಿತ್ಸೆಗೆ ರಜೆ ಇಲ್ಲ.
15. ಕಡಿಮೆ ವೇತನವಿದ್ದರೂ ಸರ್ಕಾರಿ ಕೆಲಸ ಎಂದು ಬಿಪಿಎಲ್ ಕಾರ್ಡ್ ನೀಡುವುದಿಲ್ಲ
16. ಹೊರಗುತ್ತಿಗೆ ಪದ್ದತಿ ಕೈಬಿಡಬೇಕು
ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ ನಾಲ್ಕರಂದು ನೌಕರರ ಸಂಘ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಜೊತೆಗೆ ನೌಕರಿರಿಗೆ ಜೂನ್ 4ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ. ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡಬೇಕಾದ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವು ತಂದಿಟ್ಟಿದೆ.
ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ.
ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ ನರಕದಿಂದ ಹೊರಬರಲು ನಾವು ಅವರಿಗೆ ಸಹಕಾರ ಕೊಡಬೇಕು. ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ನಾವು ಈ ಕೊರೊನಾ ಹೋರಾಟದಲ್ಲಿ ಹೋರಾಡಲು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಡಿಸ್ಚಾರ್ಜ್ ಆಗಿದ್ದ ವ್ಯಕ್ತಿಯನ್ನು ಸ್ಥಳೀಯರು ಯೋಧನ ರೀತಿ ಸ್ವಾಗತಿಸಿ ಬರಮಾಡಿಕೊಂಡರು. ತಬ್ಲಿಘಿ ಸಮಾವೇಶಕ್ಕೆ ತೆರಳಿ ಕೊರೊನಾ ಪಾಸಿಟಿವ್ ಆಗಿದ್ದ ತೊಕ್ಕೊಟ್ಟಿನ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವ್ಯಕ್ತಿ ಗುಣಮುಖರಾಗಿ ಮನೆಗೆ ಬರುತ್ತಿದ್ದಾಗ ಇವರನ್ನು ಸ್ವಾಗತಿಸಲು ಸೀಲ್ಡೌನ್ ಆದ ತೊಕ್ಕೊಟ್ಟು ಏರಿಯಾದಲ್ಲಿ 30ಕ್ಕೂ ಹೆಚ್ಚು ಮಂದಿ ಸೇರಿದ್ದರು. ಕೊರೊನಾ ಹರಡದಂತೆ ತೊಕ್ಕೊಟ್ಟಿನಲ್ಲಿ ಬಿಗುವಾದ ಲಾಕ್ಡೌನ್ ಮಾಡಲಾಗಿತ್ತು.
ಈ ವೇಳೆ ಮಾತನಾಡಿದ ವ್ಯಕ್ತಿ, ವೈದ್ಯರು ಮತ್ತು ನರ್ಸ್ಗಳು ಸೇವೆಯನ್ನು ಶ್ಲಾಘಿಸಿದ್ದಾರೆ. ತಮ್ಮ ಜೀವ ಪಣಕ್ಕಿಟ್ಟು ಪೊಲೀಸರು, ವೈದ್ಯರು ಮತ್ತು ನರ್ಸ್ಗಳು ನಮ್ಮನ್ನು ಕೊರೊನಾ ನರಕದಿಂದ ಪಾರು ಮಾಡಿದ್ದಾರೆ. ಅವರಿಗೆ ನಾವು ಸಹಕರಿಸಬೇಕು. ಆಸ್ಪತ್ರೆಯಲ್ಲಿ ತುಂಬಾ ಚೆನ್ನಾಗಿ ನಮ್ಮನ್ನು ನೋಡಿಕೊಂಡಿದ್ದಾರೆ. ಅವರಿಗೆ ಎಷ್ಟೆ ಕಷ್ಟವಾದರೂ ಜನರ ಜೀವ ಉಳಿಸಲು ವೈದ್ಯರು, ಪೊಲೀಸರು, ನರ್ಸ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಣ್ಣಿರಿಡುತ್ತಲೇ ಗುಖಮುಖರಾದ ಸೋಂಕಿತ ಹೇಳಿಕೊಂಡಿದ್ದಾರೆ.
ಈ ವಿಡಿಯೋವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಅವರು ಟ್ವೀಟ್ ಮಾಡಿದ್ದಾರೆ.
– ಮಗಳನ್ನು ನೋಡಿದ ತಕ್ಷಣ ಕಷ್ಟ ಮರೆತುಹೋಯ್ತು
– ಕೊರೊನಾ ಮುಕ್ತ ಭಾರತಕ್ಕೆ ಪಣ
– ದಯವಿಟ್ಟು ಪರಿಸ್ಥಿತಿಯನ್ನು ಅರಿತು ಮನೆಯಲ್ಲಿರಿ
ಬೆಳಗಾವಿ: 21 ದಿನಗಳ ಬಳಿಕ ಮಗಳನ್ನು ಸೇರಿದ ನರ್ಸ್ ಸುಗಂಧ ಅವರು ಪಬ್ಲಿಕ್ ಟಿವಿ ಜೊತೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಮಗಳನ್ನು ಬಿಟ್ಟಿರೋದು ಕಷ್ಟವಾಯ್ತು ಆದ್ರೆ ಕೊರೊನಾ ವಿರುದ್ಧ ಹೋರಾಡೋದು ನಮ್ಮ ಕರ್ತವ್ಯ, ದೇಶಕ್ಕಾಗಿ ಕುಟುಂಬದಿಂದ ವೈದ್ಯಕೀಯ ಸಿಬ್ಬಂದಿಯೆಲ್ಲಾ ದೂರವಿದ್ದೇವೆ ಎಂದು ಹೇಳಿದ್ದಾರೆ.
ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಗಂಧ ಅವರು, ಮಗಳನ್ನು ನೋಡಿದ ತಕ್ಷಣ ಪಟ್ಟ ಕಷ್ಟವೆಲ್ಲ ಮರೆತುಹೋಯ್ತು. ಕೊರೊನಾ ಡ್ಯೂಟಿಯಲ್ಲಿದ್ದಕ್ಕೆ ವೈದ್ಯರು ಹಾಗೂ ನರ್ಸ್ಗಳನ್ನು ಕ್ವಾರಂಟೈನಲ್ಲಿ ಇಟ್ಟಿದ್ದರು. ಈಗ ನಾವೆಲ್ಲಾ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಬಂದಿದ್ದೇವೆ. ಮನೆಯವರನ್ನು ನೋಡಿ ಖುಷಿಯಾಯ್ತು. ನನ್ನ ಮಗಳು ನನ್ನನ್ನು ಹೆಚ್ಚು ಹಚ್ಚಿಕೊಂಡಿದ್ದಾಳೆ. ಅವಳನ್ನು ಹೆಚ್ಚು ನಾನೇ ನೋಡಿಕೊಳ್ಳುತ್ತಿದ್ದೆ. ಇದೇ ಮೊದಲ ಬಾರಿಗೆ ನಾನು ಇಷ್ಟು ದಿನ ಅವಳನ್ನು ಬಿಟ್ಟು ದೂರ ಇದ್ದಿದ್ದು. ಅವಳು ಕೂಡ ನಾನಿಲ್ಲದೇ ಕಷ್ಟಪಟ್ಟಿದ್ದಾಳೆ. ನನ್ನಂತೆ ಸಾಕಷ್ಟು ಮಂದಿ ನರ್ಸಗಳಿಗೆ, ವೈದ್ಯಕೀಯ ಸಿಬ್ಬಂದಿಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ. ಆದರೆ ನಾವೆಲ್ಲಾ ಕೊರೊನಾ ಮುಕ್ತ ಭಾರತವನ್ನು ಮಾಡಲು ಪಣತೊಟ್ಟಿದ್ದೇವೆ. ಮಕ್ಕಳಿದ್ದಾರೆ ಎಂದು ಕರ್ತವ್ಯ ಬಿಟ್ಟು ಮನೆಯಲಿದ್ದರೆ ನಾವು ವೈದ್ಯಕೀಯ ಸಿಬ್ಬಂದಿ ಆಗಿರೋದಕ್ಕೆ ಅರ್ಥವಿಲ್ಲ. ದೇಶಕ್ಕಾಗಿ ವೈದ್ಯಕೀಯ ಸಿಬ್ಬಂದಿ ಹೋರಾಡುತ್ತಿದ್ದೇವೆ ಎಂದು ತಮ್ಮ ಕರ್ತವ್ಯ, ಜವಾಬ್ದಾರಿಗಳ ಬಗ್ಗೆ ಹೇಳಿದರು.
ಕ್ವಾರಂಟೈನ್ನಲ್ಲಿದ್ದಾಗ ತುಂಬಾ ಕಷ್ಟವಾಗಿತ್ತು. ಅತ್ತ ಡ್ಯೂಟಿ ಕೂಡ ಮಾಡುವಂತಿರಲಿಲ್ಲ. ಇತ್ತ ಮನೆಗೂ ಹೋಗುವಂತಿರಲಿಲ್ಲ. ಮಗಳು, ಕುಟುಂಬದವರು ತುಂಬಾ ನೆನಪಾಗುತ್ತಿದ್ದರು. ಮಗಳು ನನಗೋಸ್ಕರ ಕಷ್ಟಪಡುತ್ತಿರೋದನ್ನು ತಿಳಿದು ಮನಸಲ್ಲೇ ತುಂಬಾ ದುಃಖವಾಗುತ್ತಿತ್ತು. 21 ದಿನಗಳು ಕಳೆದು ಮನೆಗೆ ಹೋಗಿ ಮಗಳನ್ನು ನೋಡಿದಾಗ ಮಾತನಾಡೋಕೆ ಆಗಲಿಲ್ಲ. ಅವಳನ್ನು ನೋಡಿದ ಖುಷಿಗೆ ಕಣ್ಣಿರು ಬಂದುಬಿಟ್ಟಿತು. ಅವಳನ್ನು ಎತ್ತಿಕೊಂಡು ಮುದ್ದಾಡಿದೆ ಎಂದು ಖುಷಿಯನ್ನು ಹಂಚಿಕೊಂಡರು.
ದೇವರ ಕೃಪೆಯಿಂದ ಕ್ವಾರಂಟೈನಲ್ಲಿದ್ದ ಯಾವ ಸಿಬ್ಬಂದಿಗೂ ಸೋಂಕು ತಗುಲಿರಲಿಲ್ಲ. ಎಲ್ಲರಿಗೂ ತಪಾಸಣೆ ನಡೆಸಿ ವರದಿ ಬಂದ ಬಳಿಕವೇ ಎಲ್ಲರನ್ನು ಮನೆಗೆ ಕಳುಹಿಸಿದ್ದಾರೆ. ಮತ್ತೆ ಸೋಮವಾರದಿಂದ ನಾವು ಕರ್ತವ್ಯಕ್ಕೆ ತೆರೆಳಲಿದ್ದೇವೆ. ಸದ್ಯ ಜನರಲ್ ವಾರ್ಡಿಗೆ ಡ್ಯೂಟಿ ಹಾಕಿದ್ದಾರೆ. ರೊಟೆಷನಲ್ ಶಿಫ್ಟ್ ಹಾಕುತ್ತಿರುತ್ತಾರೆ. ಪದೇ ಪದೇ ಕೊರೊನಾ ವಾರ್ಡಿಗೆ ಡ್ಯೂಟಿ ಹಾಕಲ್ಲ. ಸಿಬ್ಬಂದಿ ಕಡಿಮೆ ಇದ್ದರೆ ಮಾತ್ರ ಹಾಕುತ್ತಾರೆ. ಆಗ ಮತ್ತೆ ನಮ್ಮನ್ನು ಕ್ವಾರಂಟೈನ್ನಲ್ಲಿ ಇಡುತ್ತಾರೆ ಎಂದು ಸುಗಂಧ ಅವರು ತಿಳಿಸಿದರು.
ವೈದ್ಯಕೀಯ ಸಿಬ್ಬಂದಿ, ಪೊಲೀಸರು ಕಷ್ಟಪಟ್ಟು ಕೊರೊನಾವನ್ನು ತಡೆಗಟ್ಟಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮದವರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇಷ್ಟೆಲ್ಲಾ ಮಾಡುತ್ತಿದ್ದರೂ ಜನರು ಅರ್ಥ ಮಾಡಿಕೊಳ್ಳುತ್ತಿಲ್ಲ. ದಯವಿಟ್ಟು ಪರಿಸ್ಥಿತಿ ಅರ್ಥ ಮಾಡಿಕೊಂಡು ಮನೆಯಲ್ಲಿಯೇ ಇರಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸರ್ಕಾರಿ ನಿಯಮವನ್ನು ಪಾಲಿಸಿ ಸೋಂಕಿನಿಂದ ದೂರವಿದ್ದು, ಸುರಕ್ಷಿತವಾಗಿರಿ ಎಂದು ಸುಗಂಧ ಅವರು ಮನವಿ ಮಾಡಿಕೊಂಡರು.
ಜನರು ಮಾಡುತ್ತಿರುವುದನ್ನು ನೋಡಿದರೆ ಸಿಟ್ಟು ಬರುತ್ತಿದೆ. ಪೊಲೀಸರು ಹೊಡೆಯುತ್ತಾರೆ ಎಂದು ಜನರು ದೂರುತ್ತಿದ್ದಾರೆ. ಇವರು ಹೊರಗೆ ಬಾರದೇ ಮನೆಯಲ್ಲಿದ್ದರೆ ಯಾರೂ ಅವರಿಗೆ ಹೊಡೆಯಲ್ಲ. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ, ಸುಮ್ಮನೆ ಬಂದು ಸೋಂಕಿಗೆ ತುತ್ತಾಗಬೇಡಿ. ನಿಮಗಾಗಿ ನಾವು ಕಷ್ಟಪಡುತ್ತಿದ್ದೇವೆ, ನಮಗಾಗಿ ನೀವು ಮನೆಯಲ್ಲಿ ಇರಿ. ಪೊಲೀಸರಿಗೆ, ವೈದ್ಯಕೀಯ ವರ್ಗಕ್ಕೆ ಸಹಕರಿಸಿ. ಈ ಕೊರೊನಾವನ್ನು ಜೊತೆಗೂಡಿ ನಿರ್ಮೂಲನೆ ಮಾಡೋಣ ಎಂದು ನರ್ಸ್ ಸುನಂದಾ ಕರೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿಗೆ ಮತ್ತೆ ಕೊರೊನಾ ಕಂಟಕ ಎದುರಾಗಿದೆ. ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಆತಂಕ ಹೆಚ್ಚಾಗಿದೆ. ಯಾಕೆಂದರೆ ಕೋವಿಡ್ 19 ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ಇದೆ ಎಂಬ ಶಂಕೆ ವ್ಯಕ್ತವಾಗಿದೆ.
ಗೌರಿಬಿದನೂರು ನಗರದ ಕರಕಲ್ಲೇಹಳ್ಳಿ ನಿವಾಸಿಯಾಗಿದ್ದು, ಈತ ಸಹಾಯವಾಣಿಯಲ್ಲಿ ಕೆಲಸ ಮಾಡುತ್ತಿದ್ದ. 25 ವರ್ಷದ ವೈದ್ಯಕೀಯ ಸಿಬ್ಬಂದಿ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಹೀಗಾಗಿ ತಾನೇ ಸ್ವಯಂಪ್ರೇರಿತವಾಗಿ ಟೆಸ್ಟ್ ಗೆ ಒಳಗಾಗಿದ್ದ. ಈಗ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸಿಬ್ಬಂದಿ ಜೊತೆ ಒಡನಾಟವಿದ್ದ ಇತರೆ ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಜೊತೆಗೆ ಕೊರೊನಾ ಶಂಕಿತ ಸಿಬ್ಬಂದಿ ಕುಟುಂಬದವರಿಗೂ ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸದ್ಯಕ್ಕೆ ಪರೀಕ್ಷಾ ವರದಿಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕಾಯುತ್ತಿದೆ. ಪ್ರತಿದಿನ ಗೌರಿಬಿದನೂರು ನಗರದಿಂದ ಚಿಕ್ಕಬಳ್ಳಾಪುರದ ಕೋವಿಡ್ 19 ಆಸ್ಪತ್ರೆಗೆ ಆಗಮಿಸುತ್ತಿದ್ದನು. ಹೀಗಾಗಿ ಗೌರಿಬಿದನೂರು ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಸಿಬ್ಬಂದಿ ಮನೆ ಹಾಗೂ ಅಕ್ಕಪಕ್ಕ ವೈರಾಣು ನಿವಾರಕ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ.
ಗೌರಿಬಿದನೂರಿಗೆ ಕೊರೊನಾ ಕಂಟಕ ಹಿನ್ನೆಲೆಯಲ್ಲಿ ಗೌರಿಬಿದನೂರನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಬೆಳಗ್ಗೆ 06 ರಿಂದ 09 ಗಂಟೆಯವರೆಗೆ ಹಾಲು, ತರಕಾರಿ ಖರೀದಿಗೆ ಅವಕಾಶ ಮಾಡಲಾಗಿದೆ. ದಿನಸಿ ಅಂಗಡಿ ಹಾಗೂ ಪೆಟ್ರೋಲ್ ಬಂಕ್ ಸಹ ಸಂಪೂರ್ಣ ಬಂದ್ ಆಗಿದೆ. ಮೆಡಿಕಲ್ ಸ್ಟೋರ್ ಹಾಗೂ ಆಸ್ಪತ್ರೆ ಹೊರತುಪಡಿಸಿ ಎಲ್ಲವೂ ಬಂದ್. ಯಾವುದೇ ವಾಹನಗಳು ರಸ್ತೆಗೆ ಇಳಿಯುವಂತಿಲ್ಲ. ಒಂದು ವೇಳೆ ರಸ್ತೆಗೆ ವಾಹನ ಬಂದರೆ ವಾಹನ ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಅಷ್ಟೇ ಅಲ್ಲದೇ ಗೌರಿಬಿದನೂರು ನಗರಕ್ಕೆ ಗ್ರಾಮೀಣ ಭಾಗದ ಜನರ ಪ್ರವೇಶವನ್ನು ಬಂದ್ ಮಾಡಲಾಗಿದೆ. ಅತ್ಯಗತ್ಯ ವಸ್ತುಗಳ ಅವಶ್ಯಕತೆ ಇದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ಸದ್ಯಕ್ಕೆ ಎರಡು ದಿನಗಳ ಕಾಲ ಗೌರಿಬಿದನೂರ ನಗರವನ್ನು ಸೀಲ್ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ 12 ಮಂದಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದು, 8 ಮಂದಿ ಗುಣಮುಖರಾಗಿದ್ದಾರೆ. ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಕೋವಿಡ್-19 ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ 04 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಡಿಸ್ಚಾರ್ಜ್ ಆದ ನಾಲ್ಕೂ ಮಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂ ಗಿಡ ಹಾಗೂ ಹಣ್ಣು ಕೊಟ್ಟು ಬೀಳ್ಕೊಟ್ಟಿದ್ದರು.
ಬೀದರ್: ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಗಿಯಾಗಿದ್ದವರು ಉತ್ತರ ಪ್ರದೇಶದ ಐಸೋಲೇಷನ್ ವಾರ್ಡ್ಗಳಲ್ಲಿ ಉದ್ಧಟತನ ತೋರಿದ್ದಂತೆಯೇ ರಾಜ್ಯದಲ್ಲೂ ನಡೆದುಕೊಳ್ಳುತ್ತಿದ್ದಾರೆ. ಬೀದರಿನ ಬ್ರೀಮ್ಸ್ ಐಸೋಲೇಷನ್ ವಾರ್ಡ್ನಲ್ಲಿರುವ 10 ಜನ ತಬ್ಲಿಘಿ ಸೋಂಕಿತರು, ಮನೆ ಊಟ-ಹೈಫೈ ಕೊಠಡಿ ಬೇಕು ಅಂತ ಕಿರಿಕಿರಿ ಮಾಡುತ್ತಿದ್ದಾರೆ.
ನಾವು ಹೇಳುವ ಸೌಲಭ್ಯ ಕೊಡ್ಲಿಲ್ಲ ಅಂದ್ರೆ ವೈದ್ಯರು, ಸಿಬ್ಬಂದಿಗೆ ಕೊರೊನಾ ಹಬ್ಬಿಸುತ್ತೇವೆ ಎಂದು ಬೆದರಿಕೆ ಹಾಕ್ತಿದ್ದಾರೆ. ಈ ಜಮಾತ್ ದೂರ್ತರ ವರ್ತನೆಯಿಂದ ವೈದ್ಯ-ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರೆ.
ಈ ಬಗ್ಗೆ, ಬೀದರ್ ಆರೋಗ್ಯಾಧಿಕಾರಿ ವಿ.ಜಿ. ರೆಡ್ಡಿ ಅವರು ಪಬ್ಲಿಕ್ಟಿವಿ ಜೊತೆ ಮಾತನಾಡಿ ಸೋಂಕು ಹರಡುವ ಸಾಧ್ಯತೆಯಿಂದಾಗಿ ಮನೆಯಿಂದ ಊಟ ನೀಡಲು ಸಾಧ್ಯವಿಲ್ಲ. ಎಲ್ಲರಿಗೂ ಆಸ್ಪತ್ರೆಯ ಊಟವನ್ನೇ ನೀಡಲಾಗುತ್ತಿದೆ ಎಂದು ಹೇಳಿದ್ದೇವೆ. ಅಷ್ಟೇ ಅಲ್ಲದೇ ನಮ್ಮ ವೈದ್ಯಕೀಯ ಸಿಬ್ಬಂದಿಗೂ ತಾಳ್ಮೆಯಿಂದ ವರ್ತಿಸುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ತಬ್ಲಿಘಿಗಳ ಹುಚ್ಚಾಟ – ಗಾಜಿಯಾಬಾದ್ ಬಳಿಕ ಕಾನ್ಪುರ, ಲಕ್ನೋದಿಂದ ದೂರು
ಲಕ್ನೋ: ಕ್ಯಾರೆಂಟೈನ್ನಲ್ಲಿ ಇರಿಸಲಾಗಿರುವ ತಬ್ಲಿಘಿ ಜಮಾತ್ನ ಜನರು ದುರ್ವತೆ ಕೈಬಿಡುವಂತೆ ಕಾಣುತ್ತಿಲ್ಲ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ಅವರು ಕೆಟ್ಟದಾಗಿ ವರ್ತಿಸಿ, ಅಶ್ಲೀಲತೆ ಮೆರೆದಿದ್ದರು. ಇದರಿಂದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಬ್ಲಿಘಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು. ಇಷ್ಟಾದರೂ ತಬ್ಲಿಘಿಗಳು ತಮ್ಮ ಕೆಟ್ಟ ಚಾಳಿಯನ್ನು ಮುಂದುರಿಸಿದ್ದು, ಗಾಜಿಯಾಬಾದ್ ಬೆನ್ನಲ್ಲೇ ಲಕ್ನೋ ಮತ್ತು ಕಾನ್ಪುರದಿಂದ ಇದೇ ರೀತಿಯ ದೂರುಗಳು ಬಂದಿವೆ ಎಂದು ವರದಿಯಾಗಿದೆ.
ಕಾನ್ಪುರ:
ಕಾನ್ಪುರದ ಲಾಲಾ ಲಜಪತ್ ರೈ ಆಸ್ಪತ್ರೆಯಲ್ಲಿ ತಬ್ಲಿಘಿ ಜಮಾತ್ನ 22 ಮಂದಿಯನ್ನು ಕ್ವಾರೆಂಟೈನ್ನಲ್ಲಿ ಇಡಲಾಗಿದೆ. ಆಸ್ಪತ್ರೆಯು ಗಣೇಶ್ ಶಂಕರ್ ವಿದ್ಯಾ ವೈದ್ಯಕೀಯ ಕಾಲೇಜಿನ ಅಡಿ ಬರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಆರತಿ ಲಾಲ್ ಚಂದಾನಿ, `ತಬ್ಲಿಘಿ ಜಮಾತ್ನಲ್ಲಿ ಭಾಗವಹಿಸಿದ್ದ 22 ಜನರನ್ನು ಕ್ಯಾರೆಂಟೈನ್ ವಾರ್ಡಿಗೆ ದಾಖಲಿಸಲಾಗಿದೆ. ಆದರೆ ಅವರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬಲರಾಂಪುರ:
ಲಕ್ನೋದ ಮಸೀದಿಯಲ್ಲಿ ಸಹರಾನ್ಪುರದ 12 ಜನರು ಸೋಂಕಿಗೆ ಒಳಗಾಗಿದ್ದಾರೆ. ಅವರನ್ನು ಬಲರಾಂಪುರ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇಲ್ಲಿಯೂ ಅವರು ಅಸಭ್ಯ ವರ್ತನೆ, ನೌಕರರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡುವುದು, ಸಿಬ್ಬಂದಿಯನ್ನು ನಿಂದಿಸುವುದನ್ನು ಮಾಡುತ್ತಿದ್ದಾರೆ. ಸೋಂಕಿತರು ಸಿಬ್ಬಂದಿ, ರೋಗಿಗಳನ್ನು ತಬ್ಬಿಕೊಳ್ಳುತ್ತಿದ್ದಾರೆ. ಆಹಾರ ಮತ್ತು ಕುಡಿಯುವ ನೀರನ್ನು ಮಿತಿಯಿಲ್ಲದೆ ಕೇಳುತ್ತಿದ್ದಾರೆ. ಈ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದ್ದರಿಂದ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೊತೆಗೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕುಶಿನಗರ:
ಉತ್ತರ ಪ್ರದೇಶದ ಕುಶಿನಗರದ ಜಮೀನಿನಲ್ಲಿ ಅಡಗಿ ಕುಳಿತಿದ್ದ 14 ಮಂದಿ ತಬ್ಲಿಘಿಗಳನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ನೇಪಾಳಕ್ಕೆ ಪಲಾಯನ ಬೆಳೆಸುವ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರು ಎಲ್ಲರನ್ನೂ ಕ್ವಾರಂಟೈನ್ಗೆ ಕಳುಹಿಸಿದ್ದಾರೆ.
ಮುಸ್ಲಿಂ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹ್ಲಿ ಮತ್ತು ಶಿಯಾ ಧರ್ಮಗುರು ಮೌಲಾನಾ ಸೈಫ್ ರಿಜ್ವಿ ಅವರು ನಿಮ್ಮ ನಡವಳಿಕೆಯನ್ನು ಬದಲಾಯಿಸಿಕೊಳ್ಳಿ ಎಂದು ತಬ್ಲಿಘಿ ಜಮಾತ್ ಜನರಿಗೆ ಸಲಹೆ ನೀಡಿದ್ದರು. ಮೌಲಾನಾ ಖಾಲಿದ್ ರಶೀದ್ ಶನಿವಾರ ವಿಡಿಯೋ ಬಿಡುಗಡೆ ಮಾಡಿ, ‘ನಿಮ್ಮ ನಡವಳಿಕೆಯಿಂದ ಮುಸ್ಲಿಂ ಸಮುದಾಯದ ಹೆಸರನ್ನು ಕಳಂಕಿತಗೊಳಿಸಲಾಗುತ್ತಿದೆ. ಸಮಾಜದಲ್ಲಿ ಕೊರೊನಾದ ಅಪಾಯ ಹೆಚ್ಚುತ್ತಿದೆ. ಶಿಸ್ತಿನಿಂದ ಸರ್ಕಾರದ ಆದೇಶಗಳನ್ನು ಪಾಲಿಸಿ’ ಎಂದು ಕೇಳಿಕೊಂಡಿದ್ದರು.