Tag: Medical Store

  • ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ:  ಶರಣ ಪ್ರಕಾಶ್‌ ಪಾಟೀಲ್‌

    ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ: ಶರಣ ಪ್ರಕಾಶ್‌ ಪಾಟೀಲ್‌

    ಬೆಂಗಳೂರು: ಕಡಿಮೆ ಬೆಲೆಯ ಜನೌಷಧಿ (Janaushadhi) ಕೇಂದ್ರದ ವಿಚಾರದಲ್ಲಿ ರಾಜಕೀಯ ಆರಂಭವಾಯಿತೇ? ಮೋದಿ ವಿರೋಧಿಸೋ ಸಲುವಾಗಿಯೇ ಜನೌಷಧಿ ಕೇಂದ್ರಕ್ಕೆ ಸರ್ಕಾರ ಬ್ರೇಕ್‌ ಹಾಕಲು ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

    ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ (Sharan Prakash Patil) ಅವರು ನೀಡಿದ ಒಂದು ಹೇಳಿಕೆಯಿಂದ ಈ ಪ್ರಶ್ನೆ ಈಗ ಎದ್ದಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಹೊಸ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಸಿಗುವಾಗ ಜನೌಷಧಿ ಕೇಂದ್ರ ಯಾಕೆ ಬೇಕು? ಇದರಿಂದ ಆಸ್ಪತ್ರೆಯ ಒಳಗಡೆ ವರ್ತುಲ  ಸೃಷ್ಟಿಯಾಗುತ್ತದೆ. ಹಿಂದೆ ಯಾರು ಅನುಮತಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಹೊಸ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಖಡಕ್‌ ಆಗಿಯೇ ಹೇಳಿದ್ದಾರೆ.

    ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಮಾತ್ರೆ ಕೊಡುತ್ತೇವೆ. ಹೀಗಾಗಿ ಜನರು ದುಡ್ಡು ನೀಡಿ ಮಾತ್ರೆ ಖರೀದಿ ಮಾಡುವುದು ಯಾಕೆ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.

    ಸರ್ಕಾರದಿಂದ ಔಷಧಿಗಳು, ಮಾತ್ರೆಗಳು ಉಚಿತ ಬರುತ್ತದೆ ಹೌದು. ಆದರೆ ಎಲ್ಲಾ ಮಾತ್ರೆಗಳು ಸಿಗುವುದಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬಳಿ ಜನೌಷಧಿ ಕೇಂದ್ರ ತೆರೆದರೆ ನಿಮಗೆ ಏನು ಕಷ್ಟ ಎಂದು ಜನರು ಈಗ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

    ಯಾವ ಮಾತ್ರೆಗೆ ಎಷ್ಟೆಷ್ಟು ದರ?
    > ಡೋಲೋ ಮಾತ್ರೆ
    ಮೆಡಿಕಲ್ ಸ್ಟೋರ್- 30 ರೂ. (ಒಂದು ಶೀಟ್‌ಗೆ)
    ಜನೌಷಧಿ ಕೇಂದ್ರ- 15 ರೂ. (ಒಂದು ಶೀಟ್‌ಗೆ)

    ಡಯಾಬಿಟೀಸ್ ಮಾತ್ರೆ
    ಮೆಡಿಕಲ್ ಸ್ಟೋರ್- 20 ರೂ. (ಒಂದು ಶೀಟ್‌ಗೆ)
    ಜನೌಷಧಿ ಕೇಂದ್ರ- 6 ರೂ. (ಒಂದು ಶೀಟ್‌ಗೆ)

    ಬಿಪಿ ಮಾತ್ರೆ (ಟೆಲ್ಮಾ)
    ಮೆಡಿಕಲ್ ಸ್ಟೋರ್- 30 ರೂ. (10 ಮಾತ್ರೆ)
    ಜನೌಷಧಿ ಕೇಂದ್ರ- 12 ರೂ.

    ಕೊಲೆಸ್ಟ್ರಾಲ್‌ ಮಾತ್ರೆ (ಅಟೋರ್ವಾ)
    ಮೆಡಿಕಲ್ ಸ್ಟೋರ್- 30 ರೂ.

    ಕ್ರೇಪ್ ಬ್ಯಾಂಡೇಜ್
    ಮೆಡಿಕಲ್ ಸ್ಟೋರ್- 150 ರೂ.
    ಜನೌಷಧಿ ಕೇಂದ್ರ- 36 ರೂ.

    ಪ್ಯಾರಸೆಟ್‌ಮಲ್
    ಜನೌಷಧಿ ಕೇಂದ್ರ- 25-30 ರೂ.
    ಮೆಡಿಕಲ್ ಸ್ಟೋರ್-120

    ಕೆಮ್ಮಿನ ಔಷಧಿ
    ಜನೌಷಧಿ ಕೇಂದ್ರ- 54 ರೂ.
    ಮೆಡಿಕಲ್ ಸ್ಟೋರ್- 150 ರೂ.

     

  • ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋದಾಗಲೇ ಕುಸಿದು ವ್ಯಕ್ತಿ ಸಾವು

    ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋದಾಗಲೇ ಕುಸಿದು ವ್ಯಕ್ತಿ ಸಾವು

    ಮೈಸೂರು: ಔಷಧಿ ಕೊಳ್ಳಲು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

    ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ (Udayagiri) ಮೆಡಿಕಲ್ ಸ್ಟೋರ್‌ಗೆ (Medical Store) ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಬಂದಿದ್ದರು. ಜಗದೀಶ್ ನೋವಿನ ಹಿನ್ನೆಲೆ ತಮ್ಮ ಎದೆಗೆ ಕೈಹಿಡಿದುಕೊಂಡು ಬಂದಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಮೆಡಿಕಲ್ ಸಿಬ್ಬಂದಿ ಜಗದೀಶ್ ಅವರನ್ನು ವಿಚಾರಿಸುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

    ತಕ್ಷಣ ಮೆಡಿಕಲ್ ಸಿಬ್ಬಂದಿ ಜಗದೀಶ್ ಕಡೆಗೆ ಓಡಿ ಹೋಗಿ ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಜಗದೀಶ್ ಪ್ರಾಣಪಕ್ಷಿ ಹಾರಿಹೋಗಿದೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾನು ಕಾಂಗ್ರೆಸ್ ಸದಸ್ಯೆಯಲ್ಲ – ಉಲ್ಟಾ ಹೊಡೆದ ಶಾಸಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೆಡಿಕಲ್ ಸ್ಟೋರ್ ಮಾಲೀಕನಿಂದ ಶಸ್ತ್ರ ಚಿಕಿತ್ಸೆ – ರೋಗಿ ಸಾವು

    ಮೆಡಿಕಲ್ ಸ್ಟೋರ್ ಮಾಲೀಕನಿಂದ ಶಸ್ತ್ರ ಚಿಕಿತ್ಸೆ – ರೋಗಿ ಸಾವು

    ಲಕ್ನೋ: ಮೆಡಿಕಲ್ ಸ್ಟೋರ್ (Medical Store) ಮಾಲಿಕನೊಬ್ಬ (Owner) ಶಸ್ತ್ರಚಿಕಿತ್ಸೆ (Surgery) ನಡೆಸಿದ ಪರಿಣಾಮ ರೋಗಿ (Patient) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಉತ್ತರಪ್ರದೇಶದ ಖೇಜೂರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ರೆಹಮಾನ್ ಬಂಧಿತ ವ್ಯಕ್ತಿ. ಈತ ವೃಷಣದಲ್ಲಿ ಉಂಟಾಗುವ ಊತದ ಸಮಸ್ಯೆಯಿಂದ ಬಳಲುತ್ತಿದ್ದ ಮುನ್ನಾ ಗುಪ್ತಾಗೆ ಶಸ್ತ್ರಚಿಕಿತ್ಸೆ ನಡೆಸಿದ್ದ. ಆದರೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮುನ್ನಾ ಗುಪ್ತಾನ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ಅದಾದ ಬಳಿಕ ಮುನ್ನಾ ಗುಪ್ತಾನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಅಮೃತ್‍ಪಾಲ್‍ಗೆ ಆಶ್ರಯ ಕೊಟ್ಟಿದ್ದ ಮಹಿಳೆ ಅರೆಸ್ಟ್

    ಘಟನೆಗೆ ಸಂಬಂಧಿಸಿದಂತೆ ಗುಪ್ತಾ ಪುತ್ರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಘಟನೆಗೆ ಸಂಬಂಧಿಸಿ ರೆಹಮಾನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮುನ್ನಾ ಗುಪ್ತಾನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಧು ಪತ್ನಿಗೆ ಸ್ತನ ಕ್ಯಾನ್ಸರ್- ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇನೆಂದು ಭಾವುಕ ಪತ್ರ

  • ಗೆಳತಿ ಕೊಂದು, ಮೃತದೇಹವನ್ನು 4 ದಿನ ಮೆಡಿಕಲ್ ಸ್ಟೋರ್‌ನಲ್ಲೇ ಇಟ್ಕೊಂಡಿದ್ದ ಕಿಲ್ಲರ್

    ಗೆಳತಿ ಕೊಂದು, ಮೃತದೇಹವನ್ನು 4 ದಿನ ಮೆಡಿಕಲ್ ಸ್ಟೋರ್‌ನಲ್ಲೇ ಇಟ್ಕೊಂಡಿದ್ದ ಕಿಲ್ಲರ್

    ರಾಯಪುರ: ದೆಹಲಿಯ ಶ್ರದ್ಧಾ ವಾಕರ್ (Shraddha Walker) ಹತ್ಯೆ ಮಾದರಿಯಲ್ಲೇ ಮತ್ತೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಗೆಳತಿಯನ್ನ ಕೊಂದು ನಾಲ್ಕು ದಿನಗಳ ಕಾಲ ಮೆಡಿಕಲ್ ಸ್ಟೋರ್‌ನಲ್ಲಿ (Medical Store) ಇಟ್ಟಿದ್ದ ಘಟನೆ ಛತ್ತೀಸಘಡದ (Chhattisgarh) ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ.

    ಮೆಡಿಕಲ್ ಸ್ಟೋರ್ ಮಾಲೀಕ ಆಶಿಶ್ ಸಾಹು ಹಣದ ಸಮಸ್ಯೆಯಿಂದ ತನ್ನ ಗೆಳತಿ ಪ್ರಿಯಾಂಕಾಳನ್ನು ಕೊಂದು ಶವವನ್ನು 4 ದಿನಗಳ ಕಾಲ ತನ್ನ ಅಂಗಡಿಯಲ್ಲಿಟ್ಟು ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ. ಮೃತದೇಹವನ್ನು ಬಟ್ಟೆಯೊಂದರಲ್ಲಿ ಸುತ್ತಿ ಕಾರಿನಲ್ಲಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತದಿಂದ ನಿಧನ

    ಪೊಲೀಸರ ಪ್ರಕಾರ, ಸಾಹು ಮತ್ತು ಭಿಲಾಯಿ ನಿವಾಸಿ ಪ್ರಿಯಾಂಕಾ ನಡುವೆ ಹಣಕಾಸಿನ ವಿಚಾರವಾಗಿ ಕೆಲ ದಿನಗಳಿಂದ ಜಗಳ ನಡೆಯುತ್ತಿತ್ತು. ಕೊಲೆಗೆ ಇದೇ ಕಾರಣ ಇರಬಹುದು ಎಂದು ಹೇಳಿದ್ದಾರೆ.

    ಪ್ರಿಯಾಂಕಾ ಬಿಲಾಸ್‌ಪುರದ ಹಾಸ್ಟೆಲ್‌ನಲ್ಲಿ ಕೆಪಿಎಸ್‌ಸಿ (KPSC) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಈ ವೇಳೆ ಆಶಿಶ್ ಸಾಹು ಜೊತೆಗೆ ಆತ್ಮೀಯತೆ ಬೆಳೆದಿದೆ. ನಂತರ ಇಬ್ಬರು ಒಟ್ಟಿಗೆ ಷೇರು ಮಾರುಕಟ್ಟೆಯಲ್ಲಿ (Share Market) ಹಣ ಹೂಡಿಕೆ ಮಾಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿನ ನಷ್ಟದ ನಂತರ ತನ್ನಿಂದ ಸಾಲ ಪಡೆದಿದ್ದ 11 ಲಕ್ಷ ರೂಪಾಯಿಯನ್ನು ಹಿಂದಿರುಗಿಸುವಂತೆ ಆಶಿಶ್‌ಗೆ ಒತ್ತಡ ಹೇರುತ್ತಿದ್ದಳು ಎಂದು ಬಿಲಾಸ್‌ಪುರದ ಎಸ್ಪಿ ಪಾರುಲ್ ಮಾಥುರ್ ತಿಳಿಸಿದ್ದಾರೆ. ಇದನ್ನೂ ಓದಿ: 3 ದಶಕಗಳ ಕಾಲ ನರ್ಮದಾ ಅಣೆಕಟ್ಟು ಯೋಜನೆ ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಯಾತ್ರೆ ಮಾಡ್ತಿದ್ದೀರಾ: ರಾಗಾ ವಿರುದ್ಧ ಮೋದಿ ಕಿಡಿ

    ಕೆಲ ದಿನಗಳ ಹಿಂದೆ ಬಿಲಾಸ್‌ಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕಾ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು. ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಸಾಹುವನ್ನು ಪ್ರಮುಖ ಆರೋಪಿ ಎಂದು ಶಂಕಿಸಿದ್ದು, ಆತನ ಮೇಲೆ ಕಣ್ಣಿಟ್ಟಿತ್ತು. ಕುಟುಂಬದ ಸದಸ್ಯರೊಬ್ಬರು ಪ್ರಿಯಾಂಕಾ ಮತ್ತು ಸಾಹು ಇಬ್ಬರು ಪರಿಚಿತರು. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಬಹಿರಂಗಪಡಿಸಿದರು. ಆದ್ದರಿಂದ ಆರೋಪಿಯನ್ನು ಪ್ರಮುಖ ಶಂಕಿತನಾಗಿ ಗುರುತಿಸಲಾಗಿತ್ತು.

    ಸಾಹು ಅಂಗಡಿ ಮತ್ತು ನಿವಾಸದ ಸುತ್ತಮುತ್ತಲಿನ ಸಿಸಿಟಿವಿಯ (CCTV) ದೃಶ್ಯಗಳ ಜೊತೆಗೆ ಅವನ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿತ್ತು. ನವೆಂಬರ್ 14ರಂದು ಪ್ರಿಯಾಂಕಾಳನ್ನು ಕೊಂದ ಸಾಹು ದೇಹವನ್ನು 4 ದಿನ ಮೆಡಿಕಲ್ ಶಾಪ್‌ನಲ್ಲಿ ಇಟ್ಟಿದ್ದು. ಶವ ವಿಲೇವಾರಿ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ. ಆತ ದೇಹವನ್ನು ಸಾಗಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಪ್ರದೀಪ್ ಆರ್ಯ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಔಷಧಿ ನಕಲಿಯೋ? ಅಸಲಿಯೋ? – ಇನ್ಮುಂದೆ ನೀವೇ ಚೆಕ್ ಮಾಡಬಹುದು

    ಔಷಧಿ ನಕಲಿಯೋ? ಅಸಲಿಯೋ? – ಇನ್ಮುಂದೆ ನೀವೇ ಚೆಕ್ ಮಾಡಬಹುದು

    ನವದೆಹಲಿ: ಇನ್ಮುಂದೆ ನೀವು ತೆಗೆದುಕೊಳ್ಳುವ ಔಷಧಿ (Medicine) ಸುರಕ್ಷಿತವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಲು ಹಾಗೂ ನಕಲಿ ಔಷಧ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ (Central Government) ಶೀಘ್ರದಲ್ಲೇ ಟ್ರ‍್ಯಾಕ್ ಮತ್ತು ಟ್ರೇಸ್ (Track And Trace) ಜಾರಿ ಮಾಡಲು ಮುಂದಾಗಿದೆ.

    ಹೌದು. ನೀವು ತೆಗೆದುಕೊಳ್ಳುತ್ತಿರುವ ಔಷಧಿ ಸುರಕ್ಷಿತವಾಗಿದೆಯೋ ಇಲ್ಲವೋ? ಅದು ನಕಲಿಯೋ ಅಸಲಿಯೋ? ಎಂಬುದನ್ನು ತಿಳಿದುಕೊಳ್ಳುವ ಜೊತೆಗೆ ಕಳಪೆ ಹಾಗೂ ನಕಲಿ ಔಷಧ (Medicine) ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಟ್ರ‍್ಯಾಕ್ ಮತ್ತು ಟ್ರೇಸ್ ಕಾರ್ಯವಿಧಾನ ಪರಿಚಯಿಸಲಿದೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ಪ್ರಾರಂಭಿಕ ಹಂತದಲ್ಲಿ 300 ಔಷಧ ತಯಾರಕರು ತಮ್ಮ ಉತ್ಪನ್ನ ಔಷಧಗಳಿಗೆ ಕ್ಯೂಆರ್‌ಕೋಡ್ ಅನ್ನು ಬಳಸಬೇಕಾಗುತ್ತದೆ. ಇದರಿಂದ ಆಂಟಿಬಯೊಟಿಕ್‌ನ ಪ್ರತಿ ಸ್ಟ್ರಿಪ್‌ 100 ರೂ.ಗಳ ಎಂಆರ್‌ಪಿ (MRP)ಗಿಂತ ಹೆಚ್ಚು ಮಾರಾಟವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

    ಟ್ರ‍್ಯಾಕ್ ಅಂಡ್ ಟ್ರೇಸ್ ಮಾಡೋದು ಹೇಗೆ?

    • ಮೊದಲು ಸರ್ಕಾರಿ ವೆಬ್‌ಸೈಟ್ ಮೂಲಕ ತೆರಳಿ ಕ್ಯೂಆರ್ ಕೋಡ್ (QR Code) ಸ್ಕ್ಯಾನ್ ಮಾಡಬೇಕಾಗುತ್ತದೆ.
    • ಈ ಕೋಡ್ ಔಷಧದ ಬಗೆಗಿನ ಮಾಹಿತಿಯನ್ನು ದೃಢೀಕರಿಸುತ್ತದೆ. ಔಷಧದ ಸರಿಯಾದ ಹೆಸರು, ಬ್ರ‍್ಯಾಂಡ್, ತಯಾರಕರ ಹೆಸರು, ವಿಳಾಸ, ಬ್ಯಾಚ್ ಸಂಖ್ಯೆ, ಇದರೊಂದಿಗೆ ಉತ್ಪಾದನೆ ಹಾಗೂ ಮುಕ್ತಾಯಗೊಳ್ಳುವ ದಿನಾಂಕ ಹಾಗೂ ಉತ್ಪಾದನಾ ಪರವಾನಗಿ ದಿನಾಂಕವನ್ನೂ ತೋರಿಸುತ್ತದೆ.
    • ಇದು ಗ್ರಾಹಕರೇ ಸರ್ಕಾರಿ ಪೋರ್ಟಲ್‌ನಲ್ಲಿ ಯುನಿಕ್ ಐಡಿ ಸಂಖ್ಯೆಯನ್ನು ನಮೂದಿಸಲು ಹಾಗೂ ಮೊಬೈಲ್ ಮೂಲಕ ಅದನ್ನು ಟ್ರ‍್ಯಾಕ್ ಮಾಡಲು ಸಹಕಾರಿಯಾಗುತ್ತದೆ.
    • ಮೊದಲ ಹಂತದಲ್ಲಿ ಅತಿಹೆಚ್ಚು ಮಾರಾಟವಾಗುವ 300 ಔಷಧಗಳನ್ನು ಬಾರ್‌ಕೋಡ್‌ನೊಂದಿಗೆ ಮುದ್ರಿಸಿ ಮಾರುಕಟ್ಟೆಗೆ ಬಿಡಲಾಗುತ್ತದೆ.
    • ಈ ಕ್ರಮದಿಂದಾಗಿ ಉತ್ಪಾದನಾ ವೆಚ್ಚ ಶೇ.3-4 ರಷ್ಟು ಹೆಚ್ಚಳವಾಗಬಹುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಗ್ರಾಹಕರಿಂದ ಸುಲಿಗೆ – 6 ಮೆಡಿಕಲ್ ಸ್ಟೋರ್ ವಿರುದ್ಧ ಕೇಸ್ ದಾಖಲು

    ಗ್ರಾಹಕರಿಂದ ಸುಲಿಗೆ – 6 ಮೆಡಿಕಲ್ ಸ್ಟೋರ್ ವಿರುದ್ಧ ಕೇಸ್ ದಾಖಲು

    ತುಮಕೂರು: ಕೋವಿಡ್ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್‌ಗಳನ್ನು ಎಂಆರ್‌ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ 6 ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಮೊಕದ್ದಮೆ ದಾಖಲಿಸಿದೆ.

    ಕಾನೂನು ಮಾಪನಶಾಸ್ತ್ರ ಇಲಾಖೆಯು ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ನಡೆಸಿದ ತಪಾಸಣೆಯಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ. ಸಹಾಯಕ ನಿಯಂತ್ರಕರ ನೇತೃತ್ವದಲ್ಲಿ ತುಮಕೂರು ಉಪವಿಭಾಗ-1 ಹಾಗೂ 2, ತಿಪಟೂರು ಉಪವಿಭಾಗ ಮತ್ತು ಮಧುಗಿರಿ ಉಪವಿಭಾಗದ ನಾಲ್ಕು ನಿರೀಕ್ಷಕರ ತಂಡ ತಪಾಸಣೆ ನಡೆಸಿದ್ದು, ಎಂಆರ್‍ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 6 ಔಷಧಿ ಮಳಿಗೆ ಸೇರಿದಂತೆ ಪೊಟ್ಟಣ ಸಾಮಾಗ್ರಿ ರೂಪದ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 4 ದಿನಸಿ ಅಂಗಡಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

    ಒಟ್ಟಾರೆ 26 ಔಷಧಿ ಮಳಿಗೆ, 64 ದಿನಸಿ ಅಂಗಡಿ ಹಾಗೂ 14 ನ್ಯಾಯ ಬೆಲೆ ಅಂಗಡಿಗಳನ್ನು ತಪಾಸಣೆ ಮಾಡಲಾಗಿದೆ. ತಪಾಸಣೆ ಸಂದರ್ಭದಲ್ಲಿ ಮೆಡಿಕಲ್ ಸ್ಟೋರ್ ಗಳಿಂದ 7500 ರೂ. ಹಾಗೂ ದಿನಸಿ ಅಂಗಡಿಗಳಿಂದ 4500 ರೂ.ಗಳನ್ನು ವಸೂಲಿ ಮಾಡಲಾಗಿದೆ.

  • ದುಪ್ಪಟ್ಟು ಬೆಲೆಗೆ ಮಾಸ್ಕ್ ಮಾರಾಟ- ಔಷಧಿ ಮಳಿಗೆ ವಿರುದ್ಧ ಪ್ರಕರಣ ದಾಖಲು

    ದುಪ್ಪಟ್ಟು ಬೆಲೆಗೆ ಮಾಸ್ಕ್ ಮಾರಾಟ- ಔಷಧಿ ಮಳಿಗೆ ವಿರುದ್ಧ ಪ್ರಕರಣ ದಾಖಲು

    – ಆಹಾರ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಬಹಿರಂಗ

    ತುಮಕೂರು: ಕೊರೊನಾ ಸೋಂಕಿನ ಆತಂಕ ಹುಚ್ಚುತ್ತಿರುವ ಬೆನ್ನಲ್ಲೇ, ಜನ ಮಾಸ್ಕ್ ಗಳ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಔಷಧಿ ಅಂಗಡಿಯವರು ದುಪ್ಪಟ್ಟು ಬೆಲೆ ಮಾರಾಟ ಮಾಡುತ್ತಿದ್ದಾರೆ. ಇದನ್ನು ಮನಗಂಡ ಅಧಿಕಾರಿಗಳು ಔಷಧಿ ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

    ತುಮಕೂರಿನ ಸಗಟು ಮತ್ತು ಚಿಲ್ಲರೆ ಸೇರಿ ಒಟ್ಟು 15 ಔಷಧಿ ಮಳಿಗೆಗಳ ಮೇಲೆ ದಾಳಿ ನಡೆಸಿದ್ದು, ಸ್ಯಾನಿಟೈಜರ್ ಮತ್ತು ಮಾಸ್ಕ್ ಗಳ ದಾಸ್ತಾನು ಹಾಗೂ ಮಾರಾಟದ ಬಗ್ಗೆ ಪರಿಶೀಲಿಸಿದ್ದಾರೆ. ಈ ವೇಳೆ ಎಂ.ಆರ್.ಪಿ ದರ 16.8 ರೂ. ಇರುವುದನ್ನು 130 ರೂ.ಗಳಂತೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ 1 ಔಷಧಿ ಮಳಿಗೆಯ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

    ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರಯ್ಯ, ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ದೇವರಾಜ್, ಔಷಧ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕ ಗೋಪಾಲ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಮನೋಜ್ ಹಾಗೂ ಜಿಲ್ಲಾ ಅಂಕಿತ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.

    ತುಮಕೂರಿನಲ್ಲಿ 5 ರೂ. ಬೆಲೆಯ ಮಾಸ್ಕನ್ನು 50 ರೂ.ಗೆ ಮಾರಾಟ ಮಾಡುತಿದ್ದಾರೆ. ಇದನ್ನು ಅರಿತ ಅಧಿಕಾರಿಗಳು 15ಕ್ಕೂ ಹೆಚ್ಚು ಔಷಧಿ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಔಷಧಿ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

  • ಕೊರೊನಾ ಎಫೆಕ್ಟ್- ದಾವಣಗೆರೆಯಲ್ಲಿ ಮಾಸ್ಕ್ ದರ ದುಪ್ಪಟ್ಟು

    ಕೊರೊನಾ ಎಫೆಕ್ಟ್- ದಾವಣಗೆರೆಯಲ್ಲಿ ಮಾಸ್ಕ್ ದರ ದುಪ್ಪಟ್ಟು

    ದಾವಣಗೆರೆ: ವಿಶ್ವದೆಲ್ಲೆಡೆ ಮಹಾಮಾರಿ ಕೊರೊನಾ ಆವರಿಸುತ್ತಿದ್ದು, ದೇಶದಲ್ಲಿ ಈ ವರೆಗೆ 61 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿಯೂ ನಾಲ್ಕು ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ಜನತೆ ಮುಂಜಾಗೃತಾ ಕ್ರಮಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದು, ಮಾಸ್ಕ್ ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಮಾಸ್ಕ್ ಗಳ ಬೆಲೆ ದುಪ್ಪಟ್ಟಾಗಿದೆ.

    ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಹೊರಗೆ ಹೋಗಬೇಕೆಂದರೂ ಜನ ಭಯಪಡುವಂತಾಗಿದೆ. ಎಲ್ಲಾದರೂ ಹೋಗಬೇಕು ಎಂದರೆ ಮಾಸ್ಕ್ ಹಾಕಿಕೊಂಡು ಹೋಗುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಔಷಧಿ ಅಂಗಡಿಯವರು, ಮಾಸ್ಕ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಐದು ರೂಪಾಯಿ ಇರುವ ಮಾಸ್ಕ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದಾರೆ. ಈ ಕುರಿತು ಸರ್ಕಾರ ಎಷ್ಟೇ ಎಚ್ಚರಿಕೆ ನೀಡಿದರೂ ಔಷಧಿ ಅಂಗಡಿಯವರು ಮಾತ್ರ ಮಾಸ್ಕ್ ದರ ಹೆಚ್ಚು ಮಾಡುವುದನ್ನು ನಿಲ್ಲಿಸಿಲ್ಲ.

    60 ರೂಪಾಯಿ ಇರುವ ಮಾಸ್ಕ್ ಗಳನ್ನು ನೂರು, ಇನ್ನೂರು, ಮುನ್ನೂರು ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಕೆಲ ಮೆಡಿಕಲ್ ಸ್ಟೋರ್ ಗಳಲ್ಲಿ ನೋ ಸ್ಟಾಕ್ ಎಂದು ಹೇಳುತ್ತಿದ್ದು, ಜನರಿಕ್ ಮಳಿಗೆಗಳಲ್ಲಿ ನೂಕು ನುಗ್ಗಲು ಸಂಭವಿಸುತ್ತಿದೆ. ಬೇರೆ ದಾರಿ ಇಲ್ಲದೆ ಜನರು ದುಪ್ಪಟ್ಟು ಹಣ ನೀಡಿ ಕೊಂಡುಕೊಳ್ಳುತ್ತಾರೆ.

    ಡೀಲರ್ಸ್ ಸಹ ಮೆಡಿಕಲ್ ಸ್ಟೋರ್ ಗಳಿಗೆ ದುಪ್ಪಟ್ಟು ಬೆಲೆಗೆ ಮಾಸ್ಕ್ ನೀಡುತ್ತಿದ್ದಾರೆ. ಇದರಿಂದಾಗಿ ಮೆಡಿಕಲ್ ಸ್ಟೋರಿನವರು ಕೂಡ ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಸ್ವತಃ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದು, ಮಾಸ್ಕ್ ಗಳನ್ನು ದುಪ್ಪಟ್ಟು ದರದಕ್ಕೆ ಮಾರಾಟ ಮಾಡದಂತೆ ತಿಳಿಸಿದ್ದಾರೆ. ಆದರೆ ಮೆಡಿಕಲ್ ಸ್ಟೋರ್ ಗಳು ಹಾಗೂ ಡೀಲರ್ಸ್ ಮಾತ್ರ ಇದಾವುದನ್ನು ಕೇಳದೆ ಮನಬಂದಂತೆ ಮಾಸ್ಕ್ ಮಾರಾಟ ಮಾಡುತ್ತಿದ್ದಾರೆ.

  • ಟೈಡಾಲ್ ಮಾತ್ರೆ ಸೇವಿಸಿ ಯುವಕರ ಸಾವು ಪ್ರಕರಣ- ಮೆಡಿಕಲ್ ಮಾಲೀಕ ಅರೆಸ್ಟ್

    ಟೈಡಾಲ್ ಮಾತ್ರೆ ಸೇವಿಸಿ ಯುವಕರ ಸಾವು ಪ್ರಕರಣ- ಮೆಡಿಕಲ್ ಮಾಲೀಕ ಅರೆಸ್ಟ್

    ಬೆಂಗಳೂರು: ಟೈಡಾಲ್ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರೆ ಮಾರಾಟ ಮಾಡಿದ್ದ ಮೆಡಿಕಲ್ ಅಂಗಡಿ ಮಾಲೀಕನನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.

    ರಾಜಾಜಿನಗರದ ಮೋದಿ ಆಸ್ಪತ್ರೆ ಸಿಗ್ನಲ್ ಬಳಿಯ ‘ಮನ್‍ದೀಪ್ ಫಾರ್ಮ್ ಮೆಡಿಕಲ್ ಶಾಪ್’ ಮಾಲೀಕ ಮನೀಶ್ ಕುಮಾರ್ ನನ್ನ ಬಂಧಿಸಲಾಗಿದೆ. 17ರಂದು ಮೃತ ಯುವಕ ಗೋಪಿಗೆ ಅನಧಿಕೃತವಾಗಿ ಮೆಡಿಕಲ್‍ನಿಂದ ಮನೀಶ್ ಕುಮಾರ್ ಟೈಡಾಲ್ ಮಾತ್ರೆ ಮಾರಾಟ ಮಾಡಿದ್ದನು. ಅದೇ ಮಾತ್ರೆಗಳನ್ನು ತಂದು ಗೋಪಿ, ಅಭಿಷೇಕ್, ಸುಹಾಸ್ ಮಾತ್ರೆಯನ್ನು ಪುಡಿ ಮಾಡಿ ಡಿಸ್ಟಿಲ್ ನೀರಿನಲ್ಲಿ ಬೆರಿಸಿ ಸಿರಿಂಜ್ ಮೂಲಕ ದೇಹಕ್ಕೆ ಇಂಜಕ್ಟ್ ಮಾಡಿಕೊಂಡಿದ್ದರು. ಪರಿಣಾಮ ಗೋಪಿ, ಅಭಿಷೇಕ್ ಮೃತಪಟ್ಟಿದ್ದು, ಸುಹಾಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ:ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಸಾವು- ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ

    ನವೆಂಬರ್ 19ರ ರಾತ್ರಿ ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿತ್ತು. ಗೆಳೆಯನ ಹುಟ್ಟುಹಬ್ಬದ ಪಾರ್ಟಿಗೆ ಗೋಪಿ, ಅಭಿಪೇಕ್ ಜೊತೆಗೆ ಇನ್ನೂ 6 ಮಂದಿ ಯುವಕರು ಹೋಗಿದ್ದರು. ತಡರಾತ್ರಿವರೆಗೂ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದ ಯುವಕರು ನಶೆಗಾಗಿ ಟೈಡಲ್ ಮಾತ್ರೆಯನ್ನು ತೆಗೆದುಕೊಂಡಿದ್ದರು.ಇದನ್ನೂ ಓದಿ:ಗೆಳೆಯನ ಬರ್ತ್ ಡೇ ಪಾರ್ಟಿ ಮಾಡಿದ್ದ ಇಬ್ಬರು ಬಲಿ, 6 ಮಂದಿ ಸ್ಥಿತಿ ಗಂಭೀರ 

    ರಾತ್ರಿ ಪಾರ್ಟಿ ಮಾಡಿದ ಬಳಿಕ ಯುವಕರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಾತ್ರ ಸೇವನೆಯಿಂದ ಗೋಪಿ ಹಾಗೂ ಅಭಿಷೇಕ್ ಮೃತಪಟ್ಟಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಯುವಕರು ಟೈಡಾಲ್ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾರೆ ಎಂಬುದು ಬಯಲಾಗಿತ್ತು. ಈ ಸಂಬಂಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಯುಡಿಆರ್ ಕೇಸ್ ದಾಖಲಾಗಿತ್ತು. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು.