Tag: medical

  • ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ!

    ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ!

    ಚಿಕ್ಕಮಗಳೂರು: ರಾತ್ರೋರಾತ್ರಿ ಅಂಡಿಗಳ ಶೆಟರ್ ಮುರಿದು ಸರಣಿ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.

    ಶನಿವಾರ ತಡರಾತ್ರಿ ಕಳ್ಳರು ಮೂಡಿಗೆರೆಯ ಕೆ.ಎಂ ರಸ್ತೆಯಲ್ಲಿಯ ವೈನ್ ಶಾಪ್, ಬಾರ್ ಹಾಗೂ ಮೆಡಿಕಲ್ ಸ್ಟೋರ್‍ಗಳಲ್ಲಿ ತಮ್ಮ ಕೈ ಕಳಚ ತೋರಿಸಿದ್ದಾರೆ. ಅಂಗಡಿಗಳ ಶೆಟರ್ ಗಳನ್ನು ಮುರಿದು ಅಂಗಡಿಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

    ನಗರದ ಸುದರ್ಶನ್ ವೈನ್ಸ್, ಎಸ್ ಬಿ ಜಿ ಬಾರ್ ಮತ್ತು ಶಿಫಾ ಮೆಡಿಕಲ್ ಗಳಲ್ಲಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಕಳ್ಳತನ ನಡೆದಿದೆ ಎಂದು ತಿಳಿದು ಬಂದಿದೆ. ಘಟನ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿಶ್ವದ ಮೊದಲ ತಲೆ ಕಸಿ ಯಶಸ್ವಿ ಆಗಿದೆಯೋ? ಇಲ್ವೋ? ತಲೆಕೆಡಿಸಿಕೊಂಡಿದ್ದಾರೆ ವೈದ್ಯರು

    ವಿಶ್ವದ ಮೊದಲ ತಲೆ ಕಸಿ ಯಶಸ್ವಿ ಆಗಿದೆಯೋ? ಇಲ್ವೋ? ತಲೆಕೆಡಿಸಿಕೊಂಡಿದ್ದಾರೆ ವೈದ್ಯರು

    ಲಂಡನ್: ವಿಶ್ವದ ಮೊದಲ ತಲೆ ಕಸಿ ಯಶಸ್ವಿಯಾಗಿದೆ ಎಂದು ಇಟಲಿಯ ಶಸ್ತ್ರಚಿಕಿತ್ಸಕರೊಬ್ಬರು ಘೋಷಿಸಿದ್ದು ಇದೀಗ ವೈದ್ಯಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

    ಇಟಲಿಯ ಟ್ಯುರಿನ್ ಅಡ್ವಾನ್ಸ್‍ಡ್ ನ್ಯೂರೋಮಾಡ್ಯುಲೇಷನ್ ಸಂಸ್ಥೆಯ ಸೆರ್ಜಿಯೋ ಕ್ಯಾನ್‍ವೆರೋ ಅವರು ಚೀನಾದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ  ಹೇಳಿಕೆ ನೀಡಿದ್ದಾರೆ. ಆದರೆ ವಿಶ್ವದಲ್ಲಿರುವ ಹಲವು ವೈದ್ಯರು ಈ ರೀತಿ ನಡೆಯಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

    ಕ್ಯಾನ್‍ವೆರೋ ಹೇಳಿದ್ದು ಏನು?
    ಚೀನಾದ ಹರ್ಬಿನ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 18 ಗಂಟೆಗಳ ಕಾಲ ನಡೆದ ತಲೆ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೆದುಳು ನಿಷ್ಕ್ರಿಯಗೊಂಡಿರುವ ವ್ಯಕ್ತಿಯ ತಲೆಯನ್ನು ಬೇರೊಬ್ಬ ವ್ಯಕ್ತಿಗೆ ಜೋಡಿಸಿದ್ದು, ಜೋಡಣೆಯಾದ ಬಳಿಕ ದೇಹದ ಬೆನ್ನೆಲುಬು, ನರಗಳು ಮತ್ತು ರಕ್ತ ನಾಳಗಳು ಯಶಸ್ವಿಯಾಗಿ ಕಾರ್ಯನಿರ್ವಹಣೆಯಾಗಿದೆ ಎಂದು ಹೇಳಿದ್ದಾರೆ.

    ಸಾಧ್ಯವೇ ಇಲ್ಲ:
    ಈ ಸಂಬಂಧವಾಗಿ ಇಂಗ್ಲೆಂಡಿನ ಕಾರ್ಡಿಫ್ ಮೆಡಿಕಲ್ ವಿಶ್ವವಿದ್ಯಾಲಯಲ್ಲಿ ಪ್ರಾಧ್ಯಾಪಕಾರದ ಡಿಯನ್ ಬರ್ನಟ್ ಎಂಬವರು ಗಾರ್ಡಿಯನ್‍ಗೆ ಲೇಖನ ಬರೆದಿದ್ದು, ತಲೆ ಕಸಿ ನಡೆಯಲು ಸಾಧ್ಯವೇ ಇಲ್ಲ. ದೇಹದ ಉಳಿದ ಅಂಗಾಗಳಂತೆ ತಲೆ ಅಲ್ಲ. ಇಬ್ಬರ ತಲೆ ಬೇರ್ಪಡಿಸಿದರೆ ರಕ್ತ ಪರಿಚಲನೆ ಹೇಗೆ ನಡೆಯುತ್ತದೆ? ಕ್ಯಾನ್‍ವೆರೋ ಅವರು ಮೆದುಳು ನಿಷ್ಕ್ರಿಯಗೊಂಡಿರುವ ವ್ಯಕ್ತಿಯ ತಲೆಯನ್ನು ಜೋಡಿಸಿರುವುದಾಗಿ ಹೇಳಿದ್ದಾರೆ. ಈಗಾಗಲೇ ನಿಷ್ಕ್ರಿಯಗೊಂಡಿರುವ ಮೆದಳು ಬೇರೆ ವ್ಯಕ್ತಿಯ ದೇಹದಲ್ಲಿ ಜೋಡಣೆಯಾದ ಬಳಿಕ ಚುರುಕಾಗಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

    ಕೆಲ ವೈದ್ಯರು ತಲೆ ಕಸಿ ನಡೆಯಲು ಸಾಧ್ಯವೇ ಇಲ್ಲ. ಕ್ಯಾನ್‍ವೆರೋ ಪ್ರಚಾರಕ್ಕಾಗಿ ಈ ರೀತಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎನ್ನುವುದಕ್ಕೆ ಯಾವುದೇ ಪ್ರಬಲವಾದ ಸಾಕ್ಷ್ಯಗಳನ್ನು ನೀಡಿಲ್ಲ. ಹೀಗಾಗಿ ಈ ಶಸ್ತ್ರ ಚಿಕಿತ್ಸೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಈ ಹೃದಯ ಕಸಿ, ಕಿಡ್ನಿ ಕಸಿ  ಮಾಡಿದಂತೆ ತಲೆ ಕಸಿಯನ್ನು ಯಾರಿಂದಲೂ ಮಾಡಲು ಸಾಧ್ಯವಿಲ್ಲ  ಎಂದು ಪ್ರತಿಕ್ರಿಯಿಸಿದ್ದಾರೆ.

     

  • ಹತ್ತೇ ದಿನದಲ್ಲೇ ಎರಡನೇ ಬಾರಿ ಮುಷ್ಕರ – ಬೆಳಗಾವಿ ಚಲೋಗೆ ಖಾಸಗಿ ಆಸ್ಪತ್ರೆಗಳು ಬಂದ್

    ಹತ್ತೇ ದಿನದಲ್ಲೇ ಎರಡನೇ ಬಾರಿ ಮುಷ್ಕರ – ಬೆಳಗಾವಿ ಚಲೋಗೆ ಖಾಸಗಿ ಆಸ್ಪತ್ರೆಗಳು ಬಂದ್

    ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆ ನಿಯಂತ್ರಣ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಚಳಿಗಾಲ ಅಧಿವೇಶನದಲ್ಲಿ ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ಒತ್ತಾಯಿಸಿ ಇಂದು ಖಾಸಗಿ ವೈದ್ಯರು ಬೆಳಗಾವಿ ಚಲೋ ಹೋರಾಟ ಹಮ್ಮಿಕೊಂಡಿದ್ದಾರೆ.

    ಇದರ ಹಿನ್ನೆಲೆ ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆ, ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ಬೆಳಗಾವಿಯಲ್ಲಿ ನಡೆಯುವ ವೈದ್ಯರ ಮುಷ್ಕರಕ್ಕೆ ತೆರಳಿದ್ದಾರೆ. ಒಟ್ಟು ಜಿಲ್ಲೆಯಿಂದ 460 ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಂದೆ ವೈದ್ಯಕೀಯ ಸೇವೆ ಇಲ್ಲ ಎಂದು ಬೋರ್ಡ್, ಬ್ಯಾನರ್ ಹಾಕಲಾಗಿದೆ.

    ಮಂಗಳವಾರ ಬೆಳಗ್ಗಿನವರೆಗೆ ಹೊರ ರೋಗಿಗಳಿಗೆ ಚಿಕಿತ್ಸೆ ಬಂದ್ ಮಾಡಲಾಗಿದೆ. ಇನ್ನು ವೈದ್ಯರ ಮುಷ್ಕರ ಹಿನ್ನಲೆ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳಿಗೆ ರಜೆ ರದ್ದು ಮಾಡಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೆ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಒದಗಿಸುವುದಾಗಿ ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದಾರೆ.

  • ವೈದ್ಯಕೀಯ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಅವ್ಯವಹಾರ- `ಜಿಮ್ಸ್’ ಪಿಠೋಪಕರಣ ಖರೀದಿಯಲ್ಲಿ ಗೋಲ್‍ ಮಾಲ್

    ವೈದ್ಯಕೀಯ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಅವ್ಯವಹಾರ- `ಜಿಮ್ಸ್’ ಪಿಠೋಪಕರಣ ಖರೀದಿಯಲ್ಲಿ ಗೋಲ್‍ ಮಾಲ್

    ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಅನೂಕುಲಕ್ಕಾಗಿ ಕಲಬುರಗಿಯಲ್ಲಿ ಜಿಮ್ಸ್ ಮೆಡಿಕಲ್ ಕಾಲೇಜು ಆರಂಭಿಸಲಾಗಿದ್ದು, ಇದರ ಪಿಠೋಪಕರಣ ಖರೀದಿಯಲ್ಲಿ ಇದೀಗ ಅವ್ಯವಹಾರದ ಆರೋಪ ಕೇಳಿಬಂದಿದೆ.

    ಕಲಬುರಗಿಯ ಜಿಮ್ಸ್ ಮೆಡಿಕಲ್ ಕಾಲೇಜಿನ ಪಿಠೋಪಕರಣ ಖರೀದಿಯಲ್ಲಿ ಭಾರೀ ಗೋಲ್‍ ಮಾಲ್ ನಡೆದಿದೆ ಎಂದು ಆರೋಪಿಸಲಾಗಿದೆ. 2015-16ನೇ ಸಾಲಿನಲ್ಲಿ ಪಿಠೋಪಕರಣ ಖರೀದಿಗಾಗಿ ಕರೆದಿದ್ದ ಟೆಂಡರ್‍ ನಲ್ಲಿ ಒಟ್ಟು 25 ಜನ ಗುತ್ತಿಗೆದಾರರು ಭಾಗವಹಿಸಿದ್ದರು. ಕೆಟಿಟಿಪಿ ಕಾಯ್ದೆ ಪ್ರಕಾರ ಒಂದು ಬಿಡ್ ಬಂದ್ರೆ ಕರೆದ ಟೆಂಡರ್ ರದ್ದುಪಡಿಸಿ ಮತ್ತೊಮ್ಮೆ ಟೆಂಡರ್ ಕರೆಯಬೇಕಿತ್ತು. ಆದರೆ ಇಲ್ಲಿನ ಅಧಿಕಾರಿಗಳು ನಿಯಮ ಉಲಂಘಿಸಿ ತಮಗೆ ಬೇಕಾದವರಿಗೆ ಟೆಂಡರ್ ನೀಡಿದ್ದಾರೆ.

    ಜಿಮ್ಸ್ ಕಾಲೇಜಿನ ಪಿಠೋಪಕರಣ ಸೇರಿದಂತೆ ಇತರೆ ವಸ್ತುಗಳಿಗಾಗಿ ಸರ್ಕಾರ 15 ಕೊಟಿಯ ಟೆಂಡರ್ ಕರೆದಿದ್ದು, ಪ್ರತಿ ವಸ್ತುವಿನಲ್ಲೂ ಎರಡರಿಂದ ಮೂರು ಪಟ್ಟು ಹಣ ಹೆಚ್ಚಿಗೆ ಪಡೆಯಲಾಗಿದೆ. ಸದ್ಯ ಅಡಿಟ್ ವರದಿಯಲ್ಲಿ ಇದು ಉಲ್ಲೇಖವಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟಿಲ್ ರನ್ನ ಕೇಳಿದ್ರೆ, ಅವ್ಯವಹಾರ ನಡೆದಿದ್ರೆ ತನಿಖೆ ನಡೆಸ್ತೀವಿ ಎಂದು ಹೇಳುತ್ತಾರೆ.

  • ಎಕ್ಸಾಂಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿ

    ಎಕ್ಸಾಂಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿ

    ರಾಯಚೂರು: ಪರೀಕ್ಷೆಯಲ್ಲಿ ಫೇಲಾಗಿದಕ್ಕೆ ಮನನೊಂದ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಲಕ್ಷ್ಮಣ ಲೇಔಟ್ ನಲ್ಲಿ ನಡೆದಿದೆ.

    ಬೆಂಗಳೂರು ಮೂಲದ 22 ವರ್ಷದ ನವೀನ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ನವೀನ್ ನಗರದ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದನು. ಮೊದಲ ವರ್ಷದ ಪರೀಕ್ಷೆಯಲ್ಲಿ ನವೀನ್ ಫೇಲ್ ಆಗಿದ್ದನು.

    ಫೇಲ್ ಆದ ಬಳಿಕ ಮಾನಸಿಕ ಖಿನ್ನತೆಗೊಳಾಗಿದ್ದ ನವೀನ್ ಮತ್ತೊಮ್ಮೆ ಪರೀಕ್ಷೆ ಬರೆಯಲು ಹೆದರಿದ್ದ. ಇಂದು ಬೆಳಗ್ಗೆ ನವೀನ್ ತಾಯಿ ಬೆಂಗಳೂರಿನಿಂದ ರಾಯಚೂರಿಗೆ ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ. ನವೀನ್ ಸೋಮವಾರವೇ ಆತ್ಮಹತ್ಯೆಗೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.

    ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಬಡತನದಲ್ಲಿ ಹುಟ್ಟಿ ಬೆಳೆದು, ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿಗೆ ಬೇಕಿದೆ ಆರ್ಥಿಕ ಸಹಾಯ

    ಬಡತನದಲ್ಲಿ ಹುಟ್ಟಿ ಬೆಳೆದು, ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿಗೆ ಬೇಕಿದೆ ಆರ್ಥಿಕ ಸಹಾಯ

    ಹಾಸನ: ಬಡತನದಲ್ಲಿ ಸಾಕಷ್ಟು ಕಷ್ಟ ಪಟ್ಟು ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿ ಇಂದು ಬೆಳಕು ಕಾರ್ಯಕ್ರಮಕ್ಕೆ ತನ್ನ ಉನ್ನತ ಶಿಕ್ಷಣದ ಸಹಾಯ ಕೋರಿ ಬೆಳಕು ಕಾರ್ಯಕ್ರಮ ಬಂದಿದ್ದಾರೆ.

    ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಮ್ಮರಹಟ್ಟಿ ಗ್ರಾಮದ ಉಮೇಶ್ ಎಂಬವರು ಕನ್ನಡ ಮಾಧ್ಯಮದಲ್ಲಿ ಓದಿದ್ದ ಮಗಳು ಉನ್ನತ ಶಿಕ್ಷಣ ಕಾಣುವ ಕನಸನ್ನು ಕಾಣುತ್ತಿದ್ದಾಳೆ. ಉಮೇಶರಿಗೆ ಇಬ್ಬರು ಹೆಣ್ಣು ಮಕ್ಕಳು. ಒಬ್ಬಳು ಎಸ್‍ಎಸ್‍ಎಲ್‍ಸಿ ಓದುತ್ತಿದ್ದಾಳೆ. ಇನ್ನೋಬ್ಬಳೆ ಭೂಮಿಕಾ.

    ಗ್ರಾಮದ ಸಮೀಪದ ಶಿವೇನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಭೂಮಿಕ, ಹೈಸ್ಕೂಲ್ ಓದಿದ್ದು 5 ಕಿಲೋಮೀಟರ್ ದೂರದ ಜಾವಗಲ್‍ನಲ್ಲಿ. ಕುಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದ ಕಾರಣ ಭೂಮಿಕ ಪ್ರತಿದಿನ ಸೈಕಲ್ ಮೂಲಕ 5 ಕಿಲೋಮೀಟರ್ ಹೋಗಿ ಎಸ್‍ಎಸ್‍ಎಲ್‍ಸಿಯಲ್ಲಿ ಗ್ರಾಮಕ್ಕೆ ಹೆಮ್ಮೆಯಾಗುವಂತೆ ಶೇಕಡ 95 ಅಂಕಗಳನ್ನು ಪಡೆದಿದ್ದಾಳೆ. ಮುಂದೆ ದಕ್ಷಿಣ ಕನ್ನಡದ ಉಜಿರೆಯ ಎಸ್‍ಡಿಎಂ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಕೊಡಿಸಿದ್ದಾರೆ. ಅಲ್ಲಿಯೂ ಕೂಡ ತಮ್ಮ ಗ್ರಾಮ ಮತ್ತು ಪೋಷಕರಿಗೆ ಹೆಮ್ಮೆಯಾಗುವಂತೆ ಅಂಕಗಳನ್ನು ಪಡೆದ ಭೂಮಿಕ ಶೇಕಡ 91 ಅಂಕಗಳನ್ನು ಪಡೆದು ಪೋಷಕರ ಪ್ರೀತಿಗೆ ಪಾತ್ರವಾಗಿದ್ದಾಳೆ.

    ಕಳೆದ ಮೂರು ವರ್ಷಗಳಿಂದ ಬರಪರಿಸ್ಥಿತಿ ಇರೋದ್ರಿಂದ ಸರಿಯಾಗಿ ಕೂಲಿ ಕೆಲಸವೂ ಸಿಗುತ್ತಿಲ್ಲ. ಟ್ರಾಕ್ಟರ್ ಡ್ರೈವಿಂಗ್ ಕೆಲಸ ಮಾಡಿ ಅಷ್ಟೋ ಇಷ್ಟೋ ಬಂದಿದ್ದರಲ್ಲಿ ಜೀವನ ಸಾಗಿಸುವ ಉಮೇಶ್ ಕುಟುಂಬಕ್ಕೆ ದುಬಾರಿ ಶಿಕ್ಷಣ ವ್ಯವಸ್ಥೆ ಆತಂಕ ಸೃಷ್ಟಿಸಿದೆ.

    ಪಿಯುಸಿಯಲ್ಲಿ ಭೂಮಿಕಾ ಒಟ್ಟು 540 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ಈಗಾಗಲೆ ಸಿಇಟಿ ಪರಿಕ್ಷೆ ಬರೆದು ಇಂಜಿನಿಯರಿಂಗ್ ಸೀಟ್ ಸಿಕ್ಕಿದೆ. ಬೆಂಗಳೂರಿನ ಅಂಬೇಡ್ಕರ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ರೂ ಕೂಡ ಅದನ್ನ ಈಗಾಗಲೇ ಆರ್ಥಿಕ ಕೊರತೆಯಿಂದಾಗಿ ಕೈಬಿಟ್ಟಿದ್ದಾರೆ. ತಮ್ಮ ಮಗಳಿಗೆ ಮೆಡಿಕಲ್ ಓದಿಸಬೇಕು ಎನ್ನುವ ಆಸೆ ಪೋಷಕರಿಗಿದ್ದು, ಜೊತೆಗೆ ಭೂಮಿಕಾ ಈಗಾಗಲೇ ಯಾವುದೇ ಕೋಚಿಂಗ್ ಇಲ್ಲದೆ ನೀಟ್ ಪರಿಕ್ಷೆ ಕೂಡ ಬರೆದು ಫಲಿತಾಂಶಕ್ಕೆ ಕಾಯುತಿದ್ದಾಳೆ. ಕನ್ನಡ ಮಾದ್ಯಮದಲ್ಲಿ ಓದಿ ಪಿಯುಸಿಯಲ್ಲಿ ಇಂಗ್ಲೀಷ್‍ನಲ್ಲಿಯೇ ಪಾಸ್ ಮಾಡುವ ಮೂಲಕ ಸಾಧನೆ ಮಾಡಿರುವ ಭೂಮಿಕಾಗೆ ಈಗ ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ.

    ಮೆಡಿಕಲ್ ಓದಬೇಕು ಎನ್ನುವ ಭೂಲಿಕಾಳ ಆಸೆಗೆ ನೀಟ್ ಪರಿಕ್ಷೆಯ ಫಲಿತಾಂಶ ಉತ್ತರ ನೀಡಲಿದೆ. ಮೆಡಿಕಲ್ ಸಿಗದಿದ್ದಲ್ಲಿ ಇಂಜಿನಿಯರಿಂಗ್ ಓದುವೆ ಎನ್ನುವ ಭೂಮಿಕ ಮತ್ತು ಆಕೆಯ ಕುಟುಂಬಸ್ಥರು ಆಕೆಯ ವಿದ್ಯಾಭ್ಯಾಸಕ್ಕಾಗಿ ಸಹಾಯಕ್ಕಾಗಿ ಕೇಳಿಕೊಂಡಿದ್ದಾರೆ.

    https://www.youtube.com/watch?v=e502cCeXTvE

  • ಮೆಡಿಕಲ್, ಡೆಂಟಲ್ ಓದೋ ಮಕ್ಕಳಿಗೆ ದುಬಾರಿ ಶುಲ್ಕ ಭಾಗ್ಯ! ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಮೆಡಿಕಲ್, ಡೆಂಟಲ್ ಓದೋ ಮಕ್ಕಳಿಗೆ ದುಬಾರಿ ಶುಲ್ಕ ಭಾಗ್ಯ! ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಬೆಂಗಳೂರು: ಮೆಡಿಕಲ್ ಓದೋ ಕನಸು ಕಾಣ್ತಿರೋ ಮಕ್ಕಳಿಗೆ ಸಿದ್ದರಾಮಯ್ಯ ಸರ್ಕಾರ ದುಬಾರಿ ಶುಲ್ಕದ ಭಾಗ್ಯ ನೀಡಿದೆ. ಮೆಡಿಕಲ್ ಕಾಲೇಜುಗಳ ಲಾಬಿಗೆ ಮತ್ತೊಮ್ಮೆ ಸರ್ಕಾರ ತಲೆ ಬಾಗಿದೆ.ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳ ಶುಲ್ಕವನ್ನ ಶೇಕಡಾ 10 ರಷ್ಟು ಹೆಚ್ಚಳ ಮಾಡುವ ಮೂಲಕ ಬಡ ವಿದ್ಯಾರ್ಥಿಗಳ ಪಾಲಿಗೆ ವೈದ್ಯಕೀಯ ಕೋರ್ಸನ್ನ ಗಗನ ಕುಸುಮವಾಗಿಸಿದೆ.

    ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಬುಧವಾರ ನಡೆದ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಕಳೆದ ವರ್ಷ ಶೇ.20ರಷ್ಟು ಶುಲ್ಕ ಹೆಚ್ಚಳ ಮಾಡಿದ್ದ ಸರ್ಕಾರ ಈ ವರ್ಷ ಮತ್ತೆ ಶೇ.10 ಶುಲ್ಕ ಹೆಚ್ಚಿಸಿದೆ. ಇದ್ರಿಂದ, 7 ಸಾವಿರ ರೂಪಾಯಿ ಶುಲ್ಕ ಹೆಚ್ಚಾಗಿದ್ದು, ಪೋಷಕರು-ವಿದ್ಯಾರ್ಥಿಗಳಿಗೆ ಮತ್ತಷ್ಟು ಹೊರೆಯಾಗಲಿದೆ.

    ಯಾವ ವರ್ಷ ಎಷ್ಟು ಶುಲ್ಕ?

     

  • ಕರಾವಳಿಯಲ್ಲಿ ಹೋಟೆಲ್ ಬಂದ್‍ಗೆ ಬೆಂಬಲವಿಲ್ಲ- ಎಲ್ಲೆಲ್ಲಿ ಮೆಡಿಕಲ್, ಹೋಟೆಲ್ ಬಂದ್ ಇಲ್ಲಿದೆ ಪೂರ್ಣ ಮಾಹಿತಿ

    ಕರಾವಳಿಯಲ್ಲಿ ಹೋಟೆಲ್ ಬಂದ್‍ಗೆ ಬೆಂಬಲವಿಲ್ಲ- ಎಲ್ಲೆಲ್ಲಿ ಮೆಡಿಕಲ್, ಹೋಟೆಲ್ ಬಂದ್ ಇಲ್ಲಿದೆ ಪೂರ್ಣ ಮಾಹಿತಿ

    ಮಂಗಳೂರು: ಕೇಂದ್ರದ ಜಿಎಸ್ ಟಿ ವಿರೋಧಿಸಿ ಹೋಟೆಲ್ ಹಾಗೂ  ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ಮೆಡಿಕಲ್ ಬಂದ್‍ಗೆ ದೇಶಾದ್ಯಂತ ಕರೆ ನೀಡಿದ್ದು, ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  ಕೆಲವೆಡೆ ಮೆಡಿಕಲ್ ಗಳನ್ನು ಬಂದೆ ಮಾಡಿದ್ರೆ, ಇನ್ನು ಕೆಲವೆಡೆ ಹೋಟೆಲ್ ಗಳನ್ನು ಬಂದ್ ಮಾಡುವ ಮೂಲಕ ರಾಜ್ಯದ ಜನತೆ ಬಂದ್ ಗೆ ಪ್ರತಿಕ್ರಿಯಿಸಿದ್ದಾರೆ.

    ಎಲ್ಲೆಲ್ಲಿ, ಯಾವುದು ಬಂದ್? ಬಂದ್ ಇಲ್ಲ?:

    ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಜಿ ಎಸ್ ಟಿ ಕಾಯಿದೆ ವಿರೋಧಿಸಿ ದೇಶಾದ್ಯಂತ ಹೋಟೆಲ್ ಮುಷ್ಕರಕ್ಕೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ಲಭಿಸಿದೆ. ಆಸ್ಪತ್ರೆಗಳ ಮೆಡಿಕಲ್ಸ್ ಶಾಪ್ ಗಳು ಎಂದಿನಂತೆ ತೆರೆದಿದ್ದು, ರೋಗಿಗಳಿಗೆ ಸೇವೆ ಒದಗಿಸುತ್ತಿದೆ. ಹೋಟೆಲ್ ಗಳ ತವರೂರು ಆಗಿರುವ ಮಂಗಳೂರಿನ ಎಲ್ಲಾ ಹೊಟೇಲ್ ಮಾಲಕರು ಮುಂಜಾನೆಯಿಂದಲೇ ಹೊಟೇಲ್ ಗಳನ್ನು ತೆರೆದಿದ್ದು, ಹೊಟೇಲ್ ಮುಷ್ಕರಕ್ಕೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

    ಆದ್ರೆ ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಲಾಗಿರುವ ಮೆಡಿಕಲ್ ಶಾಪ್ ಬಂದ್ ಗೆ ಮಂಗಳೂರಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 520 ಮೆಡಿಕಲ್ ಅಂಗಡಿಗಳು ಬಂದ್ ಆಗಿದ್ದು ಶಾಪ್ ಮಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದ್ರೆ ಮೆಡ್ ಪ್ಲಸ್ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಜೌಷಧ ಮಾರಾಟಗಾರರ ಸಂಘದ ವ್ಯಾಪ್ತಿಗೆ ಒಳಪಡದ ಕಾರಣ ಮತ್ತು ಸ್ವತಃ ಆನ್ ಲೈನ್ ಜೌಷಧ ಮಾರಟ ಮಾಡೋದ್ರಿಂದ ಮೆಡ್ ಪ್ಲಸ್ ಶಾಪ್ ಗಳು ಬಂದ್ ಗೆ ಬೆಂಬಲ ನೀಡಿಲ್ಲ.

    ವಿಜಯಪುರದಲ್ಲಿ ಮೆಡಿಕಲ್ ಬಂದ್ ಗೆ ಬೆಂಬಲ ಇಲ್ಲ ಎಂದಿನಂತೆ ತೆರೆದ ಔಷಧ ಅಂಗಡಿಗಳು ಜಿಲ್ಲೆಯ 800 ಮೆಡಿಕಲ್ ಸ್ಟೋರ್ ಗಳಿದ್ದು ಎಲ್ಲವೂ ಎಂದಿನಂತೆ ಕಾರ್ಯ ನಿರ್ವಹಸುತ್ತಿವೆ ನರ್ಸಿಂಗ್ ಹೋಂ ಹಾಗೂ ಆಸ್ಪತ್ರೆಗಳಲ್ಲಿನ ಮೆಡಿಕಲ್ ಶಾಪ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.

    ತುಮಕೂರಿನಲ್ಲಿ ಆನ್ ಲೈನ್ ಔಷಧ ಮಾರಾಟವನ್ನು ಖಂಡಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಕರೆ ನೀಡಿರುವ ಮೆಡಿಕಲ್ ಶಾಪ್ ಗಳ ಒಂದು ದಿನದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಳೆದ ಮಧ್ಯ ರಾತ್ರಿಯಿಂದ ಮೆಡಿಕಲ್ ಶಾಪ್‍ಗಳು ಬಂದ್ ಆಗಿವೆ. ಜಿಲ್ಲೆಯಲ್ಲಿ 800 ಮೆಡಿಕಲ್ ಸ್ಟೋರ್ ಗಳಿದ್ದು ಎಲ್ಲವೂ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಉಳಿದಂತೆ ನರ್ಸಿಂಗ್ ಹೋಂ ಹಾಗೂ ಆಸ್ಪತ್ರೆಗಳಲ್ಲಿನ ಮೆಡಿಕಲ್ ಶಾಪ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ನಗರದ ಪ್ರಮುಖ ರಸ್ತೆಗಳಾದ ಎಮ್ ಜಿ ರಸ್ತೆ, ಬಾರ್ ಲೈನ್, ಹನುಮಂತಪುರಗಳಲ್ಲಿ ಔಷಧಿ ಅಂಗಡಿಗಳು ಮುಚ್ಚಿದ ದೃಶ್ಯ ಸಾಮಾನ್ಯವಾಗಿದೆ.

    ರಾಯಚೂರಿನಲ್ಲಿ ಕೂಡ ಬಂದ್‍ಗೆ ವ್ಯಾಪಾರಿಗಳು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿನ 850 ಔಷಧಿ ಅಂಗಡಿಗಳನ್ನು ಮುಚ್ಚಲಾಗಿದೆ. ನರ್ಸಿಂಗ್ ಹೋಮ್ ನಲ್ಲಿನ ಅಂಗಡಿಗಳು ಹಾಗೂ ತುರ್ತುಪರಸ್ಥಿತಿ ಹೊರತುಪಡಿಸಿ ಎಲ್ಲಾ ಔಷಧಿ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಮೆಡಿಕಲ್ ಶಾಪ್ ಗಳೆ ತುಂಬಿರುವ ನಗರದ ಡಾಕ್ಟರ್ಸ್ ಲೇನ್ ರಸ್ತೆ ಈಗ ಬಿಕೋ ಎನ್ನುತ್ತಿದೆ. ಬಂದ್ ಮಾಹಿತಿಯಿಲ್ಲದೆ ನಗರಕ್ಕೆ ಬರುವ ರೋಗಿಗಳು ಪರಾಡುವ ಸಾಧ್ಯತೆಯಿದೆ. ಜಿಎಸ್ ಟಿ ವಿರೋಧಿ ಕರೆನೀಡಿದ್ದ ಹೋಟೆಲ್ ಬಂದ್ ಗೆ ರಾಯಚೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಹೋಟೆಲ್ ಗಳು ಕಾರ್ಯನಿರ್ವಹಿಸುತ್ತಿವೆ.

    ಗದಗ್ ನಲ್ಲಿ ಔಷಧ ಅಂಗಡಿ ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯ ನೂರಾರು ಮೆಡಿಕಲ್‍ಗಳನ್ನ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಸ್ಪತ್ರೆಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳು ಮಾತ್ರ ಓಪನ್ ಇವೆ. ಅವುಗಳನ್ನ ಹೊರತು ಪಡಿಸಿ ಎಲ್ಲಾ ಔಷಧ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ನಗರದ ಟಾಂಗಾಕೂಟನಲ್ಲಿ ಅನೇಕ ಮೇಡಿಕಲ್‍ಗಳಿದ್ದು, ಮೆಡಿಕಲ್ ಬಳಿ ನಿತ್ಯ ಸಾಕಷ್ಟು ಜನ ಸೇರಿರುತ್ತಿದ್ದರು. ಇಂದು ಬಂದ್ ನಿಂದ ಬಿಕೋ ಎನ್ನುವಂತಾಗಿದೆ. ಇನ್ನು ಜಿ.ಎಸ್.ಟಿ ವಿರೋಧಿಸಿ ಹೊಟೆಲ್ ಮಾಲಿಕರು ನೀಡಿರುವ ಬಂದ್‍ಗೆ ಗದಗ ಜಿಲ್ಲೆನಲ್ಲಿ ವ್ಯಕ್ತವಾಗಿಲ್ಲ. ಎಂದಿನಂತೆ ಎಲ್ಲಾ ಹೊಟೆಲ್‍ಗಳು ಪ್ರಾರಂಭವಾಗುತ್ತಿವೆ.

  • ಜಿಎಸ್‍ಟಿ ವಿರೋಧಿಸಿ ಹೋಟೆಲ್ ಬಂದ್- ತುರ್ತು ಔಷಧಿ ಬೇಕಂದ್ರೆ ಈ ನಂಬರಿಗೆ ಕರೆ ಮಾಡಿ

    ಜಿಎಸ್‍ಟಿ ವಿರೋಧಿಸಿ ಹೋಟೆಲ್ ಬಂದ್- ತುರ್ತು ಔಷಧಿ ಬೇಕಂದ್ರೆ ಈ ನಂಬರಿಗೆ ಕರೆ ಮಾಡಿ

    ಬೆಂಗಳೂರು: ಇಷ್ಟು ದಿನ ಅದೆಷ್ಟೋ ಬಂದ್‍ಗಳು ಬಂದು ಹೋಗಿವೆ. ಆದ್ರೆ ಯಾವತ್ತೂ ಹೋಟೆಲ್, ಮೆಡಿಕಲ್ ಸ್ಟೋರ್‍ಗಳು ಬಂದ್ ಆಗ್ತಿರ್ಲಿಲ್ಲ. ಆದ್ರೆ ಇವತ್ತು ದೇಶಾದ್ಯಂತ ಹೋಟೆಲ್‍ಗಳು, ಮೆಡಿಕಲ್ ಸ್ಟೋರ್‍ಗಳೇ ಬಂದ್ ಆಗ್ತಿವೆ. ಇದಕ್ಕೆ ಕಾರಣ ಮೋದಿ ಸರ್ಕಾರ.

    ಹೌದು. ಕೇಂದ್ರದ ಉದ್ದೇಶಿತ ಮಹತ್ವಾಕಾಂಕ್ಷಿ ಜಿಎಸ್‍ಟಿ ಬಿಲ್ ಜೂನ್ ಒಂದರಿಂದ ಜಾರಿಗೆ ಬರ್ತಿದೆ. ಆದ್ರೆ 25 ಲಕ್ಷಕ್ಕಿಂತ ಹೆಚ್ಚಿನ ಆದಾಯವಿರುವ ಹೋಟೆಲ್‍ಗಳಿಗೆ ಹೆಚ್ಚಿನ ತೆರಿಗೆ ಮತ್ತು ಆನ್‍ಲೈನ್‍ನಲ್ಲಿ ಔಷಧಿ ಮಾರಾಟ ವಿರೋಧಿಸಿ ಇವತ್ತು ಬಂದ್ ನಡೀತಿದೆ. ಕೇಂದ್ರದ ಜೊತೆ ನಡೆದ ಮಾತುಕತೆ ವಿಫಲವಾದ ಕಾರಣ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಲಾಗ್ತಿದೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಪ್ರತಿಭಟನೆಗೆ ಬೆಂಗಳೂರು ಹೋಟೇಲ್ ಮಾಲೀಕರ ಸಂಘ ಸಾಥ್ ನೀಡ್ತಿದೆ. ಹೀಗಾಗಿ, ಹೋಟೆಲ್‍ಗಳು ಬಂದ್ ಆಗಲಿದ್ದು, ಕಾಫೀ, ಟೀ ಇಲ್ಲ, ಊಟನೂ ಸಿಗೋದಿಲ್ಲ.

    ಈ ನಂಬರಿಗೆ ಕರೆ ಮಾಡಿ: ಮೆಡಿಕಲ್ ಸ್ಟೋರ್‍ಗಳು ಬಂದ್ ಆಗುತ್ತಲ್ಲ ಅನ್ನೋ ಆತಂಕ ಬೇಡ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ 6 ವಿಭಾಗಗಳಲ್ಲಿ ಸರ್ಕಾರ ನೋಡಲ್ ಅಧಿಕಾರಿಗಳ ನೇಮಕ ಮಾಡಿದೆ. ಅಗತ್ಯ ಔಷಧಿಗಳ ಪೂರೈಕೆಗೆ ಸಾರ್ವಜನಿಕರು 104, 108ಗೆ ಕರೆ ಮಾಡಿ ತಿಳಿಸಬಹುದು. ಈ ನೋಡಲ್ ಅಧಿಕಾರಿಗಳು ಔಷಧಿಗಳ ಲಭ್ಯತೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕಿಮ್ಸ್ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಮತ್ತು ಕೆಲವು ನರ್ಸಿಂಗ್ ಹೋಮ್‍ಗಳಲ್ಲಿರೋ ಮೆಡಿಕಲ್ ಶಾಪ್‍ಗಳನ್ನು ಬಂದ್‍ನಿಂದ ಹೊರಗಿಡಲಾಗಿದೆ.

    ಮೆಡಿಕಲ್ ಸ್ಟೋರ್‍ಗಳು ಬಂದ್ ಆಗ್ತಿರೋದು ಇತಿಹಾಸದಲ್ಲಿ ಇದೇ ಮೊದಲು. ಹಾಗೇ ಎಲ್ಲಾ ಹೋಟೆಲ್‍ಗಳು ಬಂದ್ ಆಗೋದಿಲ್ಲ. ಆದ್ರೂ ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ.

    ಬಳ್ಳಾರಿಯಲ್ಲಿ ಹೋಟೆಲ್ ಬಂದ್ ಇಲ್ಲ: ರಾಜ್ಯದ ಹಲವೆಡೆ ಹೋಟೆಲ್ ಮಾಲೀಕರ ಸಂಘದವರು ಬಂದ್‍ಗೆ ಕರೆ ನೀಡಿದ್ರೆ, ಬಳ್ಳಾರಿಯಲ್ಲಿ ಬಂದ್ ಆಚರಿಸದಿರಲು ನಿರ್ಧರಿಸಿದ್ದಾರೆ. ಇವತ್ತು ಬಳ್ಳಾರಿಯಲ್ಲಿ ಹೋಟೆಲ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಸೋಮವಾರ ರಾತ್ರಿ ಸಭೆ ನಡೆಸಿ ಬಂದ್ ಮಾಡದಿರಲು ನಿರ್ಧಾರ ಕೈಗೊಂಡಿದ್ದಾರೆ. ಆದ್ರೆ ಬಳ್ಳಾರಿಯಲ್ಲಿ ಮೆಡಿಕಲ್ ಸ್ಟೋರ್‍ಗಳು ಇಂದು ಪೂರ್ವ ನಿರ್ಧಾರದಂತೆ ಬಂದ್ ಆಗಿವೆ.