Tag: Medicines

  • ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

    ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

    – ರಾಜ್ಯದಲ್ಲಿ 1,400 ಜನೌಷಧಿ ಕೇಂದ್ರಗಳಲ್ಲಿ ಕೇವಲ 180 ಸರ್ಕಾರಿ ಆಸ್ಪತ್ರೆಗಳಿವೆ
    – ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧಿ ಮಾರಾಟವಾಗ್ತಿದೆ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospitals) ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಜನೌಷಧಿಯು ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಹೇಳಿದರು.

    ಬೆಂಗಳೂರಿನಲ್ಲಿ(Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1,400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳು ಏಕೆ ಬೇಕು ಎಂದರು. ಇದನ್ನೂ ಓದಿ: ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

    ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ(BJP) ನಾಯಕರು ರಾಜಕೀಯ ಬೆರೆಸುವುದು ಸರಿಯಲ್ಲ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

    ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನ ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಹಲವು ಜನೌಷಧಿ ಕೇಂದ್ರಗಳ ಒಪ್ಪಂದಗಳು ನವೀಕರಣವಾಗಿಲ್ಲ. ಇನ್ನು ಕೆಲವು ಕೇಂದ್ರಗಳು ಇತ್ತೀಚೆಗೆ ಆರಂಭವಾಗಿದ್ದು, ಅವರು ಸಾಕಷ್ಟು ಬಂಡವಾಳ ಹೂಡಿರುತ್ತಾರೆ. ಅವರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಅವರ ಒಪ್ಪಂದ ಮುಗಿದ ಬಳಿಕವೇ ಸ್ಥಗಿತಗೊಳಿಸುವ ಕುರಿತು ಆಲೋಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

    ಜನೌಷಧಿಯು ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನೌಷಧಿ ಕೇಂದ್ರಗಳಲ್ಲಿ ಜನರಿಕ್ ಮೆಡಿಸಿನ್ ಮಾತ್ರ ಮಾರಾಟ ಮಾಡಬೇಕು. ಆದರೆ ಹಲವು ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಮೆಡಿಸಿನ್‌ಗಳನ್ನ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಔಷಧ ನಿಯಂತ್ರಣ ಮಂಡಳಿಯವರು ಪರಿಶೀಲನೆ ನಡೆಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

    ಸರ್ಕಾರಿ ಆಸ್ಪತ್ರೆಗಳ ಔಷಧ ಕೇಂದ್ರಗಳಲ್ಲಿ ಔಷಧಿಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನ ಬಿಪಿಪಿಐನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಖರೀದಿಗೆ ಅಗತ್ಯವಿರುವ ಹಣಕಾಸಿನ ಲಭ್ಯತೆಯೂ ಆಸ್ಪತ್ರೆಗಳ ಬಳಿ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನ ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನ ತರಿಸುವ ಪದ್ದತಿ ನಿಲ್ಲಬೇಕು ಎಂದು ಹೇಳಿದರು.

  • Maharashtra: ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ – 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

    Maharashtra: ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ – 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

    ಮುಂಬೈ: ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ನಾದೆಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ (Nanded Hospital) ನಡೆದಿದೆ.

    ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಲ್ಲಿ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸೇರಿ 12 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯ ಡೀನ್ ಶಂಕರರಾವ್ ಚವ್ಹಾಣ ಹೇಳಿದ್ದಾರೆ. ಈ ಘಟನೆಗೆ ಔಷಧಿ (Medicines) ಮತ್ತು ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ದೂಷಿಸಿದ್ದಾರೆ.

    ಇಲ್ಲಿರುವ ಸುತ್ತಮುತ್ತಲಿನ 70-80 ಕಿಮೀ ವ್ಯಾಪ್ತಿಗೆ ಇರುವುದೊಂದೇ ಆಸ್ಪತ್ರೆ. ದೂರದ ಸ್ಥಳಗಳಿಂದ ಇಲ್ಲಿಗೆ ಬರುತ್ತಾರೆ. ಕೆಲವು ದಿನಗಳಿಂದೀಚೆಗೆ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೆಲವು ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಿ ಪೂರೈಸಬೇಕು, ಆದ್ರೆ ಇವತ್ತು ‌ಅದೂ ಸಾಕಾಗಿಲ್ಲ. ಇದೇ ಸಮಯಕ್ಕೆ ಸಿಬ್ಬಂದಿಯ ಕೊರತೆಯೂ ಉಂಟಾಗಿದ್ದು, ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Asian Games 2023: ಪಾರುಲ್‌ ಕಣ್ಣಲ್ಲಿ ಬೆಳ್ಳಿ ಬೆಳಕು – 9ನೇ ದಿನವೂ ಭಾರತ ಪದಕಗಳ ಬೇಟೆ

    ಸಾವು ನೋವಿಗೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ (Eknath Shinde) ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

    ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

    – 20 ರಾಜ್ಯಗಳ 76 ಕಂಪನಿಗಳಲ್ಲಿ ಡಿಸಿಜಿಐ ತಪಾಸಣೆ

    ನವದೆಹಲಿ: ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧ ತಯಾರಿಸುತ್ತಿದ್ದ ಕಂಪನಿಗಳ (Pharmaceutical Companies) ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ (Government Of India) ಹಾಗೂ ರಾಜ್ಯ ಸರ್ಕಾರಗಳು, 18 ಕಂಪನಿಗಳ ಪರವಾನಗಿಯನ್ನ ರದ್ದುಗೊಳಿಸಿವೆ.

    ಬರೋಬ್ಬರಿ 20 ರಾಜ್ಯಗಳ 76 ಕಂಪನಿಗಳಿಗೆ ಸೇರಿದ ಸ್ಥಳಗಳಲ್ಲಿ ಭಾರತೀಯ ಔಷಧಿ ನಿಯಂತ್ರಣ ಮಹಾ ನಿರ್ದೇಶನಾಲಯ (DCGI) ಹಾಗೂ ವಿವಿಧ ರಾಜ್ಯ ಸರ್ಕಾರಗಳು ಜಂಟಿ ಕಾರ್ಯಾಚರಣೆ ನಡೆಸಿದ ಬಳಿಕ 18 ಕಂಪನಿಗಳ ಪರವಾನಗಿಯನ್ನು ಸರ್ಕಾರ ರದ್ದುಗೊಳಿಸಿದೆ. ಆದರೆ ಪರವಾನಗಿ ರದ್ದುಗೊಳಿಸಿರುವ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ

    ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುತ್ತಿದ್ದ 76 ಕಂಪನಿಗಳ ಮೇಲೆ ಮೊದಲ ಹಂತದಲ್ಲಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಆಕ್ಟ್ 1940ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ. 18 ಕಂಪನಿಗಳ ಪರವಾನಗಿ ರದ್ದು ಮಾಡಿರುವುದಲ್ಲದೇ, 26 ಕಂಪನಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. 3 ಕಂಪನಿಗಳ ಕೆಲವು ಉತ್ಪನ್ನಗಳಿಗೆ ನೀಡಿದ್ದ ಅನುಮತಿ ರದ್ದು ಮಾಡಲಾಗಿದೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಈ ಕಾರ್ಯಾಚರಣೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಳಪೆ ಗುಣಮಟ್ಟದ ಔಷಧಗಳ ವಿರುದ್ಧದ ವಿಶೇಷ ಅಭಿಯಾನದ ಭಾಗವಾಗಿ ಕಾನೂನು ಜಾರಿ ಸಂಸ್ಥೆಗಳು ಒಟ್ಟು 203 ಕಂಪನಿಗಳನ್ನು ಗುರುತಿಸಲಾಗಿದೆ. ಈ ಪೈಕಿ ಹಿಮಾಚಲ ಪ್ರದೇಶದ 70, ಉತ್ತರಾಖಂಡದ 45 ಹಾಗೂ ಮಧ್ಯಪ್ರದೇಶದ 23 ಕಂಪನಿಗಳು ಸೇರಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳನ್ನ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಈ ಹಿಂದೆ ಮರಿಯನ್ ಬಯೋಟೆಕ್‌ನ ಮೂವರು ಹಿರಿಯ ಉದ್ಯೋಗಿಗಳ ವಿರುದ್ಧ ಕಲಬೆರಕೆ ಔಷಧಗಳ ತಯಾರಿಕೆ ಮತ್ತು ಮಾರಾಟದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ ನಂತರ ನೋಯ್ಡಾ ಪೊಲೀಸರು ಬಂಧಿಸಿದ್ದರು.

    ಏಕೆಂದರೆ ಮೇರಿಯನ್ ಬಯೋಟೆಕ್ ಕಂಪನಿಯ ಔಷಧಿ ಡಿಸೆಂಬರ್ 2022ರಲ್ಲಿ ಉಜ್ಬೇಕಿಸ್ತಾನ್‌ನಲ್ಲಿ ಅನೇಕ ಮಕ್ಕಳ ಸಾವಿಗೆ ಕಾರಣವಾಗಿತ್ತು. ಆಗ ಭಾರತದ ಕೇಂದ್ರ ಡ್ರಗ್ಸ್ ನಿಯಂತ್ರಣ ಮಂಡಳಿ (CDSCO) ಈ ವಿಷಯದ ಬಗ್ಗೆ ತನಿಖೆ ಆರಂಭಿಸಿತ್ತು.

  • ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಕೋಲ್ಕತ್ತಾ: ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್‌ನ ಡೋಗಾಚಿಯಾ ಪ್ರದೇಶದಲ್ಲಿ ನಡೆದಿದೆ. ಅತಿಸಾರದಿಂದ ಅಸ್ವಸ್ಥಗೊಂಡಿರುವುದಾಗಿ ಶಂಕಿಸಲಾಗಿದೆ.

    ಅತಿಸಾರ ಲಕ್ಷಣಗಳು ಕಂಡುಬಂದಿದ್ದು, ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

    ಮಾಹಿತಿ ಪಡೆದ ಆರೋಗ್ಯ ಇಲಾಖೆಯ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿ ರೋಗಿಗಳಿಗೆ ಔಷಧ ವಿತರಣೆ ಮಾಡಿದ್ದಾರೆ. ಗಂಭೀರ ಅನಾರೋಗ್ಯ ಪರಿಣಾಮ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ತಂಡವು ಸೂಚಿಸಿದೆ.

    ಅನಾರೋಗ್ಯಕ್ಕೆ ಒಳಗಾದವರಲ್ಲಿ ಡೊಗಾಚಿಯಾ, ಬಹಿರ್ ರಣಗಾಚಾ ಹಾಗೂ ಮಕಲ್ತಲಾ ನಿವಾಸಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಕೊಲಂಬೊ: ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟು ವಿಷಮಸ್ಥಿತಿ ತಲುಪುತ್ತಿದೆ. ಸುಮಾರು 60 ಲಕ್ಷ ಜನರು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ನಡುವೆ ಅಗತ್ಯ ಔಷಧಗಳು ಹಾಗೂ ಎರಡು ಹೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ವರದಿಯಾಗಿದೆ.

    ಅಂಕಿ-ಅಂಶಗಳ ವರದಿಯ ಪ್ರಕಾರ ಜನರು ಈಗ ಆಹಾರ ಉಳಿಸಲು ದಿನಕ್ಕೆ ಒಮ್ಮೆ ಮಾತ್ರ ಊಟ ಮಾಡುತ್ತಿದ್ದಾರೆ. ಶೇ.25 ರಷ್ಟು ಜನರು ತೀವ್ರ ತೊಂದರೆಯಲ್ಲಿದ್ದು ವೇಶ್ಯಾವಾಟಿಕೆಯಲ್ಲಿ ತೊಡಗಿರುವವರು ಹೆಚ್ಚಾಗುವುದರೊಂದಿಗೆ ಮಹಿಳೆಯರನ್ನು ಬಲವಂತದಿಂದಲೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

    ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹಣಕ್ಕಾಗಿ ಮಹಿಳೆಯರು ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡುತ್ತಿದೆ. ಆಯುರ್ವೇದ ಮತ್ತು ಸ್ಪಾ ಕೇಂದ್ರಗಳು ಈಗ ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿವೆ. ಮಹಿಳೆಯರು ಈ ವ್ಯವಹಾರದಲ್ಲಿ ವೇಗವಾಗಿ ಸೇರಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಕೊಂಚ ಹಣ ಸಂಪಾದಿಸಲು ಸಾಧ್ಯವಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಸ್ಪಾ-ಕೇಂದ್ರಗಳಲ್ಲಿ ಕರ್ಟನ್‌ಗಳನ್ನು ನೇತುಹಾಕುವ ಮೂಲಕ ಲೈಂಗಿಕ ಕ್ರಿಯೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜವಳಿ ಉದ್ಯಮದಲ್ಲಿ ತೊಡಗಿರುವ ಮಹಿಳೆಯರು ಅತ್ಯಂತ ವೇಗವಾಗಿ ಈ ವ್ಯವಹಾರಕ್ಕೆ ಸೇರುತ್ತಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ, ಈ ದೇಶದಲ್ಲಿ ಈ ಪರಿಸ್ಥಿತಿ ಸಂಪೂರ್ಣವಾಗಿ ಹರಡುತ್ತದೆ ಎಂದು ಇಲ್ಲಿನ ತಜ್ಞರು ಹೇಳುತ್ತಿದ್ದಾರೆ. ಜವಳಿ ಉದ್ಯಮ ಮುಚ್ಚುವ ಭೀತಿಯೂ ಎದುರಾಗಿದ್ದು, ಮಹಿಳೆಯರು ಜೀವನ ನಿರ್ವಹಣೆಗಾಗಿ ಪರ್ಯಾಯ ಮಾರ್ಗಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲಿ ಕೆಲವರು ವೇಶ್ಯಾವಾಟಿಕೆಯನ್ನೇ ವೃತ್ತಿಯಾಗಿ ಮಾಡಿಕೊಳ್ಳುತ್ತಿದ್ದಾರೆ.

    ಈ ಕುರಿತು ಲೈಂಗಿಕ ಕಾರ್ಯಕರ್ತರೊಬ್ಬರು ಮಾತನಾಡಿ, ದೇಶದ ಆರ್ಥಿಕತೆ ಹದಗೆಟ್ಟಿರುವುದು ಮಹಿಳೆಯರನ್ನು ಈ ಉದ್ಯಮಕ್ಕೆ ಬರುವಂತೆ ಮಾಡಿದೆ. ಈ ಸಮಯದಲ್ಲಿ ನಾವು ನೋಡಬಹುದಾದ ಉತ್ತಮ ಪರಿಹಾರವೆಂದರೆ ಲೈಂಗಿಕ ಕೆಲಸ ಎಂದು ನಾವು ನಂಬಿದ್ದೇವೆ. ನಮ್ಮ ತಿಂಗಳ ಸಂಬಳ ಸುಮಾರು 28,000 ರೂ. ಮತ್ತು ನಾವು ಓವರ್‌ಟೈಮ್ ಮೂಲಕ 35 ಸಾವಿರದವರೆಗೆ ಗಳಿಸಬಹುದು. ಲೈಂಗಿಕ ಕೆಲಸದಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ಇದಕ್ಕಿಂತ ಹೆಚ್ಚಿನದನ್ನು ಗಳಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 800ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ ಏರಿಕೆ

    800ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ ಏರಿಕೆ

    ನವದೆಹಲಿ: ಸರಿಸುಮಾರು 800ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆಯನ್ನು ಹೆಚ್ಚಳ ಮಾಡಲು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಅನುಮತಿ ನೀಡಿದೆ.

    ಯಾವ ಔಷಧಗಳ ಬೆಲೆ ಏರಿಕೆ: ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಔಷಧಗಳ ಬೆಲೆಗಳ್ಲಿ ಶೇ 10.76 ರಷ್ಟು ಏರಿಕೆ ಮಾಡಲಾಗಿದೆ. ಇದರಿಂದಾಗಿ ಆ್ಯಂಟಿ ಬಯೋಟಿಕ್ ಔಷಧಗಳು, ಉರಿಯೂತ ನಿವಾರಕ ಔಷಧಗಳು, ಕಿವಿ-ಮೂಗು ಹಾಗೂ ಗಂಟಲಿಗೆ ಸಂಬಧಿತ ಔಷಧಗಳು, ಆ್ಯಂಟಿಸೆಪ್ಟಿಕ್, ಆ್ಯಂಟಿ ಫಂಗಲ್ ಹಾಗೂ ನೋವು ನಿವಾರಕ ಔಷಧಗಳ ಬೆಲೆಯಲ್ಲಿ ಏರಿಕೆ ಕಂಡುಬರಲಿದೆ. ಬಹಳಷ್ಟು ವರ್ಷಗಳ ನಂತರ ಒಂದೇ ಬಾರಿಗೆ ಶೇ. 10 ರಷ್ಟು ಬೆಲೆಯೆರಿಕೆ ನಿರ್ಣಯವನ್ನು ಔಷಧ ಕಂಪನಿಗಳು ಸ್ವಾಗತಿಸಿವೆ. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಶೇ 11ರಷ್ಟು ಬೆಲೆ ಏರಿಕೆ: ಔಷಧದ ಬೆಲೆ ನಿಯಂತ್ರಣ ಕಾಯ್ದೆ 2013ರ ಪ್ರಕಾರ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು ವಾರ್ಷಿಕ ಸಗಟು ಬೆಲೆ ಸೂಚ್ಯಂಕ ಅನ್ವಯ ಪ್ರತಿ ವರ್ಷ ಏಪ್ರಿಲ್ 1 ರಂದು ಔಷಧಗಳ ಬೆಲೆಯನ್ನು ಪರಿಷ್ಕರಣೆ ಮಾಡುತ್ತದೆ. 2022ರ ಆರ್ಥಕ ವರ್ಷದಲ್ಲಿ ಸಗಟು ಬೆಲೆ ಸೂಚ್ಯಂಕ ಆಧಾರದ ಮೇಲೆ ಔಷಧಗಳ ಬೆಲೆಯಲ್ಲಿ ಶೇ 10.76ರಷ್ಟು ಏರಿಕೆ ಮಾಡಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.

    ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಗ್ರಾಹಕರ ಮೇಲೆ ಇದರಿಂದಾಗಿ ಇನ್ನಷ್ಟು ಹೊರೆ ಬೀಳಲಿದೆ. ಆರ್ಥಿಕ ಸಲಹೆಗಾರರ ಕಚೇರಿ ಆಂತರಿಕ ವ್ಯಾಪಾರ ಪ್ರಚಾರ ಇಲಾಖೆ ಹಾಗೂ ವಾಣಿಜ್ಯ ಹಾಗೂ ಉದ್ಯಮ ಸಚಿವಾಲಯ ನೀಡಿದ ದತ್ತಾಂಶದ ಆಧಾರವಾಗಿ ಸಗಟು ಬೆಲೆ ಸೂಚ್ಯಂಕವನ್ನು ನಿಗದಿ ಪಡಿಸಲಾಗುತ್ತದೆ.

  • 20 ಲಕ್ಷ ರೂಪಾಯಿ ಮೌಲ್ಯದ ಕೊರೊನಾ ಔಷಧಿ ನೀಡಿದ ನಟ ಬಾಲಕೃಷ್ಣ

    20 ಲಕ್ಷ ರೂಪಾಯಿ ಮೌಲ್ಯದ ಕೊರೊನಾ ಔಷಧಿ ನೀಡಿದ ನಟ ಬಾಲಕೃಷ್ಣ

    ಹೈದರಾಬಾದ್: ಕೊರೊನಾ ಕರಾಳ ಪರಿಸ್ಥಿತಿಯಲ್ಲಿ ಬಾಲಿವುಡ್ ನಟ ಸೋನು ಸೂದ್ ಸೇರಿದಂತೆ ಹಲವು ಕಲಾವಿದರು ಜನರ ಜೀವ ಉಳಿಸಲು ಮುಂದಾಗಿದ್ದಾರೆ. ಕೆಲವರು ತಮ್ಮ ಕೈಲಾದಷ್ಟು ದೇಣಿಗೆ ನೀಡಿದ್ದಾರೆ. ಇದೀಗ ಟಾಲಿವುಡ್ ನಟ ಲೆಜೆಂಡ್ ಬಾಲಕೃಷ್ಣ ಕೂಡ ಜನರಿಗೆ ಸಹಾಯ ಮಾಡಿದ್ದಾರೆ.

    ತೆಲುಗಿನ ನಟ ನಂದಮೂರಿ ಬಾಲಕೃಷ್ಣ ರಾಜಕಾರಣಿ ಕೂಡ ಹೌದು. ಆಂಧ್ರಪ್ರದೇಶದ ಹಿಂದೂಪುರ ಕ್ಷೇತ್ರದ ಶಾಸಕರಾಗಿರುವ ನಂದಮೂರಿ ಬಾಲಕೃಷ್ಣ ಇದೀಗ ತಮ್ಮ ಕ್ಷೇತ್ರದ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ತಮ್ಮ ಹಿಂದೂಪುರ ಕ್ಷೇತ್ರದ ಜನರಿಗೆ ನಂದಮೂರಿ ಬಾಲಕೃಷ್ಣ 20 ಲಕ್ಷ ರೂಪಾಯಿ ಮೌಲ್ಯದ ಕೋವಿಡ್-19 ಔಷಧಿಗಳನ್ನು ನೀಡಿದ್ದಾರೆ.

    ತಮ್ಮ ಕ್ಷೇತ್ರದಲ್ಲಿ ಸೋಂಕಿಗೆ ಒಳಗಾಗಿರುವ ರೋಗಿಗಳಿಗೆ ಔಷಧಿ ಕಿಟ್‍ಗಳನ್ನು ಇಂದು ಬೆಳಗ್ಗೆ ನಂದಮೂರಿ ಬಾಲಕೃಷ್ಣ ಬೆಂಬಲಿಗರು ಹಾಗೂ ತೆಲುಗು ದೇಸಂ ಪಕ್ಷದ ಕಾರ್ಯಕರ್ತರು ವಿತರಿಸಿದ್ದಾರೆ.

  • ಅಮೆರಿಕದಿಂದ ಮೊದಲ ಹಂತದ ವೈದ್ಯಕೀಯ ಪರಿಕರಗಳು ಆಗಮನ- ಭಾರತದ ಜೊತೆಗಿದ್ದೇವೆ ಎಂದ ದೊಡ್ಡಣ್ಣ

    ಅಮೆರಿಕದಿಂದ ಮೊದಲ ಹಂತದ ವೈದ್ಯಕೀಯ ಪರಿಕರಗಳು ಆಗಮನ- ಭಾರತದ ಜೊತೆಗಿದ್ದೇವೆ ಎಂದ ದೊಡ್ಡಣ್ಣ

    – ಯುಎಸ್, ಇಂಡಿಯಾ ದೋಸ್ತಿ

    ನವದೆಹಲಿ: ಭಾರತದಲ್ಲಿ ಕೊರೊನಾ ಸೃಷ್ಟಿಸಿದ ಅವಾಂತರ ಕಂಡು ವಿಶ್ವದ ನಾನಾ ದೇಶಗಳು ಸಹಾಯ ಹಸ್ತ ಚಾಚಲು ಮುಂದಾಗಿದ್ದು, ಇದೀಗ ಅಮೆರಿಕ ಕೊರೊನಾ ತುರ್ತು ಸಹಾಯಕ್ಕಾಗಿ ಮೊದಲ ಹಂತದಲ್ಲಿ ವಿವಿಧ ಅಗತ್ಯ ವೈದ್ಯಕೀಯ ಪರಿಕರಗಳನ್ನು ಪೂರೈಸಿದೆ.

    ಅಮೆರಿಕ ಕಳುಹಿಸಿದ ವಿವಿಧ ವೈದ್ಯಕೀಯ ಸೌಲಭ್ಯಗಳು ಇಂದು ಬೆಳಗ್ಗೆ ಭಾರತ ತಲುಪಿವೆ. ಸೂಪರ್ ಗೆಲಾಕ್ಸಿ ಮಿಲಿಟರಿ ಟ್ರಾನ್ಸ್ ಪೋರ್ಟರ್ ನಲ್ಲಿ ವೈದ್ಯಕೀಯ ವಸ್ತುಗಳನ್ನು ಕಳುಹಿಸಲಾಗಿದ್ದು, ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಗಿದೆ. 400ಕ್ಕೂ ಹೆಚ್ಚು ಆಕ್ಸಿಜನ್ ಸಿಲಿಂಡರ್‍ಗಳು, 1 ಮಿಲಿಯನ್ ಗೂ ಅಧಿಕ ಕೊರೊನಾ ವೈರಸ್ ರ್ಯಾಪಿಡ್ ಟೆಸ್ಟ್ ಕಿಟ್‍ಗಳು, ಇತರೆ ಆಸ್ಪತ್ರೆ ಪರಿಕರಗಳು ಸೇರಿದಂತೆ ವಿವಿಧ ವಸ್ತುಗಳನ್ನು ಇಂದು ಸ್ವೀಕರಿಸಲಾಗಿದೆ.

    ಯುಎಸ್ ಎಂಬಸಿ ಈ ಕುರಿತು ಟ್ವೀಟ್ ಮಾಡಿದ್ದು, ಪೂರೈಕೆ ಮಾಡಿರುವ ಹಲವು ಚಿತ್ರಗಳನ್ನು ಹಂಚಿಕೊಂಡಿದೆ. ಕೊರೊನಾ ತುರ್ತು ಪರಿಹಾರಕ್ಕಾಗಿ ಮೊದಲ ಹಂತದಲ್ಲಿ ವಿವಿಧ ಪರಿಕರಗಳನ್ನು ಅಮರಿಕದಿಂದ ಭಾರತಕ್ಕೆ ಪೂರೈಸಲಾಗಿದೆ. 70 ವರ್ಷಗಳ ಸಹಕಾರವನ್ನು ಮುಂದುವರಿಸಿದ್ದೇವೆ. ಅಮೆರಿಕ ಭಾರತದ ಜೊತೆ ಇರಲಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಿಗೆ ಹೋರಾಡುತ್ತೇವೆ ಎಂದು ತಿಳಿಸಿದೆ. ಅಲ್ಲದೆ ಹ್ಯಾಷ್ ಟ್ಯಾಗ್‍ನೊಂದಿಗೆ ಯುಎಸ್ ಇಂಡಿಯಾ ದೋಸ್ತಿ ಎಂದು ಬರೆಯಲಾಗಿದೆ.

    ಕಂಪನಿಗಳು ಹಾಗೂ ವೈಯಕ್ತಿಕವಾಗಿ ಹಲವರು ದಾನ ನೀಡಿದ ಕೋವಿಡ್ ಪರಿಕರಗಳನ್ನು ಭಾರತಕ್ಕೆ ತಲುಪಿಸಲಾಗುವುದು. ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ನೀಡಲಾಗುತ್ತಿದ್ದು, ಮುಂದಿನ ವಾರ ಸಹ ಮತ್ತೊಂದು ವಿಶೇಷ ವಿಮಾನ ಆಗಮಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಬೈಡೆನ್ ಟ್ವೀಟ್ ಮಾಡಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ನಿರಂತರ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದರು. ಸಾಂಕ್ರಾಮಿಕ ರೋಗದ ಆರಂಭದಲ್ಲಿ ನಮ್ಮ ಆಸ್ಪತ್ರೆಗಳಲ್ಲಿ ತೊಂದರೆಯಾಗಿದ್ದಾಗ ಭಾರತ ಅಮೆರಿಕಕ್ಕೆ ಸಹಾಯ ಮಾಡಿದಂತೆ, ಅಗತ್ಯ ಸಮಯದಲ್ಲಿ ಭಾರತಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದರು.

    ಅಮೆರಿಕ ಮುಂಬರುವ ದಿನಗಳಲ್ಲಿ ತುರ್ತು ಪರಿಹಾರವಾಗಿ 100 ಮಿಲಿಯನ್ ಡಾಲರ್‍ಗೂ ಅಧಿಕ ಮೌಲ್ಯದ ವೈದ್ಯಕೀಯ ವಸ್ತುಗಳನ್ನು ಪೂರೈಸಲಿದೆ ಎಂದು ಸ್ಟೇಟ್ ಡಿಪಾರ್ಟ್‍ಮೆಂಟ್ ವಕ್ತಾರ ನೆಡ್ ಪ್ರೈಸ್ ಗುರುವಾರ ಹೇಳಿದ್ದಾರೆ.

    ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಬೈಡೆನ್ ಫೋನ್ ಮೂಲಕ ಸಂಭಾಷಣೆ ನಡೆಸಿದ್ದು, ಎರಡೂ ದೇಶಗಳಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಚರ್ಚಿಸಿದ್ದಾರೆ. ಎರಡೂ ದೇಶಗಳಲ್ಲಿನ ಕೊರೊನಾ ಸ್ಥಿತಿ ಕುರಿತು ವಿವರವಾಗಿ ಚರ್ಚಿಸಿದ್ದೇವೆ. ಭಾರತಕ್ಕೆ ಬೆಂಬಲವಾಗಿ ನಿಂತಿದ್ದಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಅವರಿಗೆ ಧನ್ಯವಾದಗಳು ಎಂದು ಫೋನ್ ಮಾತುಕತೆ ಬಳಿಕ ಪ್ರಧಾನಿ ಮೋದಿ ತಿಳಿಸಿದ್ದರು.

  • ಕೊರೊನಾ ವಾರಿಯರ್ ಆದ ದಿಗಂತ್ – ಬಡ ರೋಗಿಗಳ ಮನೆಗೆ ತೆರಳಿ ಔಷಧಿ ವಿತರಣೆ

    ಕೊರೊನಾ ವಾರಿಯರ್ ಆದ ದಿಗಂತ್ – ಬಡ ರೋಗಿಗಳ ಮನೆಗೆ ತೆರಳಿ ಔಷಧಿ ವಿತರಣೆ

    ಬೆಂಗಳೂರು: ಕೊರೊನಾ ವೈರಸ್ ಎಂಬ ಶಬ್ದ ಕೇಳಿದರೆ ಸಾಕು ಇಡೀ ವಿಶ್ವವೇ ಬೆಚ್ಚಿಬೀಳುತ್ತಿದೆ. ಇತ್ತ ಭಾರತಲ್ಲೂ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಜಾರಿಮಾಡಿದ್ದ ಲಾಕ್‍ಡೌನ್ ಅವಧಿಯನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ ಬಡ ರೋಗಿಗಳು ಔಷಧಿ ಸಿಗದೇ ಪರದಾಡಬಾರದೆಂದು ನಟ ದಿಗಂತ್ ಅವರು ಬಡವರ ನೆರವಿಗೆ ನಿಂತಿದ್ದಾರೆ.

    ಹೌದು. ರೈಡರ್ಸ್ ರಿಪಬ್ಲಿಕ್ ಮೋಟಾರ್ ಕ್ಲಬ್ ನೇತೃತ್ವದಲ್ಲಿ ನಟ ದಿಗಂತ್ ಹಾಗೂ ಯತೀಶ್ ತಂಡ ಬಡವರ ನೆರವಿಗೆ ಮುಂದಾಗಿದೆ. ಔಷಧಿಗಾಗಿ ಪರದಾಡುವ ಬಡವರಿಗೆ ಅವರ ಮನೆ ಬಾಗಲಿಗೆ ಔಷಧಿಯನ್ನು ತಲುಪಿಸುವ ಕೆಲಸವನ್ನು ತಂಡ ಮಾಡುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲದೇ ಹೊರ ರಾಜ್ಯದಲ್ಲೂ ಔಷಧಿಯ ಅಗತ್ಯವಿರುವ ಮಂದಿಗೆ ಅದನ್ನು ತಲುಪಿಸುವ ಕೆಲಸದಲ್ಲಿ ತಂಡ ನಿರತವಾಗಿದೆ.

    ಇತ್ತ ಲಾಕ್‍ಡೌನ್ ಮತ್ತೆ ಎರಡು ವಾರ ವಿಸ್ತರಣೆ ಆದ ಕಾರಣಕ್ಕೆ ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಹೊತ್ತಿನ ಊಟಕ್ಕಾಗಿ ಜನರು ಪರದಾಡುತ್ತಿದ್ದಾರೆ. ಹೀಗಾಗಿ ಬಡವರ ನೆರವಿಗೆ ಮುಂದೆ ಬಂದಿರುವ ರೈಡರ್ಸ್ ರಿಪಬ್ಲಿಕ್ ಮೋಟಾರ್ ಕ್ಲಬ್ ಸದಸ್ಯರು ಹಾಗೂ ದಿಗಂತ್ ಅವರ ತಂಡ ಜೊತೆಗೂಡಿ ಔಷಧಿ ಅಗತ್ಯವಿರುವ ಬಡವರಿಗೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿದ್ದಾರೆ.

    ಇಂದು ಬೆಳಗ್ಗೆ ಕೊಡಗಿನಿಂದ ಹೊರಟಿದ್ದ ತಂಡ ಬೈಕ್‍ನಲ್ಲಿ ತೆರಳಿ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗೆ ಔಷಧಿ, ಮಾತ್ರೆಯನ್ನು ನೀಡಿ ಸಹಾಯ ಮಾಡಿದ್ದಾರೆ. ತಂಡದ ಈ ವಿನೂತನ ಕಾರ್ಯಕ್ಕೆ ಡಿಸಿಪಿ ಭೀಮಾಶಂಕರ ಗುಳೇದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರೈಡರ್ಸ್ ರಿಪಬ್ಲಿಕ್ ಮೋಟಾರ್ ಕ್ಲಬ್ ತಂಡಕ್ಕೆ ಮತ್ತು ದಿಗಂತ್ ತಂಡಕ್ಕೆ ಶುಭಕೋರಿದ್ದಾರೆ.

    ಈ ಹಿಂದೆ ದಿಗಂತ್ ಪತ್ನಿ ನಟಿ ಐಂದ್ರಿತಾ ರೇ ಲಾಕ್‍ಡೌನ್‍ನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಐಂದ್ರಿತಾ, ನಮ್ಮ ನೆರೆಹೊರೆಯಲ್ಲಿರುವ ನಾಲ್ಕು ಕಾಲಿನ ಸ್ನೇಹಿತರನ್ನು ನಾವು ಮರೆಯಬಾರದು. ಈ ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗುತ್ತಿದೆ ಮತ್ತು ಕೊರೊನಾದಿಂದ ಪ್ರಸ್ತುತ ದೇಶ ಲಾಕ್‍ಡೌನ್ ಆಗಿದೆ. ಈ ಪರಿಸ್ಥಿತಿಯಲ್ಲಿ ಅವುಗಳಿಗೆ ಆಹಾರ ಮತ್ತು ನೀರಿನ ಕೊರತೆ ಊಂಟಾಗಿದೆ. ಆದ್ದರಿಂದ ನೀವು ಮನೆಗೆ ಬೇಕಾದ ದಿನಸಿ ತರಲು ಹೊರಹೋದಾಗ ದಯವಿಟ್ಟು ನಾಯಿಗಳಿಗೆ ಆಹಾರ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

    ಹೀಗೆ ಸಾಕಷ್ಟು ಮಂದಿ ಸಿನಿ ತಾರೆಯರು ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ, ನಿರ್ಗತಿಕರಿಗೆ ಹಾಗೂ ಮೂಕಪ್ರಾಣಿಗಳ ನೆರವಿಗೆ ನಿಂತು ಮಾನವೀಯತೆ ಮೆರೆದಿದ್ದಾರೆ.

  • ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್!

    ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್!

    -ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು!

    ಚಿಕ್ಕಬಳ್ಳಾಪುರ: ಇಲ್ಲಿಯ ಗಲ್ಲಿ ಗಲ್ಲಿಗಳಲ್ಲಿ ನೇರಳೆ ಹಣ್ಣಿನದ್ದೆ ಕಮಾಲ್. ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದ ಬೆಳೆದ ರೈತರಿಗೂ ಲಾಭ ಸೇವಿಸಿದ ಗ್ರಾಹಕರಿಗೂ ಭಾರೀ ಲಾಭವಾಗಿದೆ.

    ನೇರಳೆ ಹಣ್ಣಿನಲ್ಲಿ ವಿವಿಧ ಔಷಧೀಯ ಗುಣಗಳಿವೆ. ಕೆಲವು ಕಾಯಿಲೆಗಳಿಗೆ ನೇರಳೆ ಹಣ್ಣು ರಾಮಬಾಣ ಅನ್ನೋ ಪ್ರಚಾರ ಆಗಿದ್ದೇ ತಡ, ಮಾರುಕಟ್ಟೆಯಲ್ಲಿ ಮುಗಿಬಿದ್ದು ನೇರಳೆ ಹಣ್ಣುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇದರಿಂದ ನೇರಳೆ ಬೆಳೆದ ರೈತರಿಗೆ ಜಣ ಜಣ ಕಾಂಚಣವಾದರೆ, ಗ್ರಾಹಕರು ಔಷಧಿಯುಕ್ತ ಹಣ್ಣು ತಿಂದ ಖುಷಿಪಡುತ್ತಿದ್ದಾರೆ.

    ಕಾಡು ಮೇಡು ಬೆಟ್ಟಗುಡ್ಡ, ರೈತರ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕಂಡರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲ, ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಬಾರೀ ಭಾರೀ ಡಿಮ್ಯಾಂಡ್ ಬಂದಿದೆ. ಮೇ ಹಾಗೂ ಜೂನ್ ತಿಂಗಳಲ್ಲಿ ಮಾತ್ರ ಲಭ್ಯವಿರುವ ನೇರಳೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ಬಂದ ಕಾರಣ ಚಿಕ್ಕಬಳ್ಳಾಪುರದ ಗಲ್ಲಿ ಗಲ್ಲಿಗಳಲ್ಲಿ ಸಣ್ಣ ಹಣ್ಣಿನ ಅಂಗಡಿಯಿಂದ ದೊಡ್ಡ ದೊಡ್ಡ ಹಣ್ಣಿನ ಅಂಗಡಿಗಳಲ್ಲೂ ನೇರಳೆ ಹಣ್ಣಿನದ್ದೇ ಕಾರುಬಾರು. ಕೆ.ಜಿ ನೇರಳೆ ಹಣ್ಣಿಗೆ ಇನ್ನೂರು ರೂಪಾಯಿಂದ ಮುನ್ನೂರು ರೂಪಾಯಿ ಕೊಟ್ಟು ಸಾರ್ವಜನಿಕರು ಖರೀದಿ ಮಾಡುತ್ತಿದ್ದಾರೆ.

    ನೇರಳೆ ಮರದ ಎಲೆ, ಕಾಯಿ, ತೊಗಟೆ, ಹಣ್ಣು, ಬೀಜ ಎಲ್ಲವೂ ಔಷಧೀಯ ಗುಣಗಳನ್ನು ಒಳಗೊಂಡಿದೆ. ಇದರಿಂದ ನೇರಳೆ ಮರಗಳನ್ನು ಬೆಳೆದ ರೈತರಿಗೆ ಪುಲ್ ಡಿಮ್ಯಾಂಡೋ ಡಿಮ್ಯಾಂಡ್. ಮೇ ಜೂನ್ ತಿಂಗಳಲ್ಲಿ ಹಣ್ಣಿಗೆ ಬಾರೀ ಬೇಡಿಕೆ ಬಂದು ಹಣ್ಣುಗಳ ವರ್ತಕರು ರೈತರ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇನ್ನು ಹೂ ಮೊಗ್ಗು ಇರುವಾಗಲೇ ನೇರಳೆ ಮರಗಳ ಗುತ್ತಿಗೆ ಪಡೆಯುತ್ತಾರೆ. ನೇರಳೆ ಮರಕ್ಕೆ ಬಂಗಾರದ ಬೆಲೆ ಬಂದ ಕಾರಣ, ಕಾಡು ಮೇಡುಗಳಲ್ಲಿ ಇರುತ್ತಿದ್ದ ನೇರಳೆ ಮರಗಳು ರೈತರ ಜಮೀನುಗಳಲ್ಲಿ ತೋಟಗಳಾಗಿ ಮಾರ್ಪಡುತ್ತಿವೆ. ಇನ್ನು ಚಿಕ್ಕಬಳ್ಳಾಪುರ ತೋಟಗಾರಿಕಾ ಇಲಾಖೆ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ಸಸಿಯಿಂದ ನಾಟಿ ಮಾಡೋವರೆಗೂ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ.