Tag: Mee too

  • ಮೀಟೂ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶ್ರದ್ಧಾ ಶ್ರೀನಾಥ್!

    ಮೀಟೂ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶ್ರದ್ಧಾ ಶ್ರೀನಾಥ್!

    `ಯೂಟರ್ನ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮುಗೂತಿ ಸುಂದರಿ ಶ್ರದ್ಧಾ ಶ್ರೀನಾಥ್. `ಯೂಟರ್ನ್’ ಸಿನಿಮಾ ಕೊಟ್ಟ ಸಕ್ಸಸ್‌ನಿಂದ ಸ್ಯಾಂಡಲ್‌ವುಡ್ ಅಷ್ಟೇ ಅಲ್ಲದೇ ಪರಭಾಷೆಯಲ್ಲೂ ವಿಭಿನ್ನ ರೀತಿಯ ಸಿನಿಮಾ ಮಾಡಿದ ಚೆಲುವೆ ಶ್ರದ್ಧಾ ಶ್ರೀನಾಥ್. ಸದ್ಯ ದಕ್ಷಿಣ ಭಾರತದಲ್ಲಿ ಸದ್ದು ಮಾಡ್ತಿರುವ ಹೇಮಾ ವರದಿ ಬಗ್ಗೆ ನಟ-ನಟಿಯರು ಒಬ್ಬೊಬ್ಬರಾಗಿ ಮಾತನಾಡುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ಶುರುವಾಗಿವೆ. ಹೀಗಿರುವಾಗ ಈ ಬಗ್ಗೆ ನಟಿ ಶ್ರದ್ಧಾ ಶ್ರೀನಾಥ್ (Shraddha Srinath) ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುವಾಗ ಶ್ರದ್ಧಾ ಮೀಟೂ ಹಾಗೂ ಹೇಮಾ ವರದಿ ಬಗ್ಗೆ ಮೌನ ಮುರಿದಿದ್ದಾರೆ. `ನಾನು ಕೆಲಸ ಮಾಡುವ ಸ್ಥಳದಲ್ಲಿ ಅಂದ್ರೆ ಶೂಟಿಂಗ್ ಸೆಟ್‌ನಲ್ಲಿ ಮುಜುಗುರ ಪಡುವಂತಹ ಯಾವ ಸಂದರ್ಭ ಬಂದಿಲ್ಲ. ಆದರೆ ಕೆಲಸದ ನಂತರ ಅಂದರೆ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗುವಾಗ ಡ್ರೈವರ್ ನೋಡುವ ರೀತಿ, ಬೇರೆ ಜನರು ನೋಡುವ ರೀತಿ ಮುಜುಗುರ ತರಿಸುತ್ತೆ’ ಎಂದಿದ್ದಾರೆ. ಇದನ್ನೂ ಓದಿ: ವಿಜಯ್ ಪಡೆದ ಸಂಭಾವನೆ 275 ಕೋಟಿ: ವೈರಲ್ ಆಯ್ತು ವಿಡಿಯೋ 

    ಜೊತೆಗೆ `ನಾನು ಕೆಲಸ ಮಾಡುವ ಸ್ಥಳದಲ್ಲಿ ಮಹಿಳಾ ಟೆಕ್ನಿಷಿಯನ್‌ಗಳಿಗೆ ಮೂಲಭೂತ ಸೌಕರ್ಯಗಳು ಇರುವುದಿಲ್ಲ. ಅಂತಹ ಸೌಕರ್ಯಗಳನ್ನ ಮಹಿಳಾ ಟೆಕ್ನಿಷಿಯನ್ಸ್ ಅಂದ್ರೆ ಹೇರ್‌ಸ್ಟೈಲಿಸ್ಟ್, ಮೇಕಪ್ ವಿಭಾಗದ ಮಹಿಳೆಯರಿಗೆ ಒದಗಿಸಿಕೊಡಬೇಕು’ ಎಂದು ಮಾತಾಡಿದ್ದಾರೆ. ಇದನ್ನೂ ಓದಿ: ಹಾಲಿವುಡ್ ಅಂಗಳದಲ್ಲಿ ಕಾಂತಾರ ಬೆಡಗಿ ಸಖತ್ ಜಾಲಿ

    ಒಟ್ಟಿನಲ್ಲಿ ಹೇಮಾ ಮಾದರಿಯ ಕಮಿಟಿ ಕನ್ನಡದಲ್ಲೂ ಬೇಕು ಅನ್ನೋದನ್ನ ಖಡಾಖಂಡಿತವಾಗಿ ಹೇಳದೇ, ಒಟ್ಟಾರೆ ಚಿತ್ರರಂಗದಲ್ಲಿ ಶೂಟಿಂಗ್ ಸೆಟ್‌ನಲ್ಲಿ ಮಹಿಳಾ ಟೆಕ್ನಿಷಿಯನ್ಸ್ ಎದುರಿಸುವಂತಹ ಮೂಲಭೂತ ಸೌಕರ್ಯದ ಬಗ್ಗೆ ಧನಿ ಎತ್ತಿದ್ದಾರೆ ನಟಿ ಶ್ರದ್ಧಾ ಶ್ರೀನಾಥ್. ಇದನ್ನೂ ಓದಿ: ಮಾಲಾಶ್ರೀ ನಟನೆಯ ಹೊಸ ಸಿನಿಮಾಗೆ ಮುಹೂರ್ತ

  • ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಮೀಟೂ ಪ್ರಕರಣಗಳು ಒಂದೊಂದೆ ಬೆಳಕಿಗೆ ಬರುತ್ತಿವೆ. ಸಿನಿಮಾ ರಂಗದ ಕರಾಳಮುಖವನ್ನು ಬಿಚ್ಚಿಡುತ್ತಾ, ಒಬ್ಬೊಬ್ಬರೇ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುತ್ತಿದ್ದಾರೆ. ತಮಗೆ ತೊಂದರೆ ಕೊಟ್ಟವರ ಹೆಸರನ್ನು ನೇರವಾಗಿ ಹೇಳದೇ ತಮ್ಮ ಬದುಕಿನಲ್ಲಿ ನಡೆದ ಆ ಕರಾಳ ಸತ್ಯವನ್ನು ಬಯಲು ಮಾಡುವ ಮೂಲಕ ಚಿತ್ರರಂಗದ ಮತ್ತೊಂದು ಮುಖವನ್ನು ಅನಾರವಣಗೊಳಿಸುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮರಾಠಿ ಸಿನಿಮಾ ರಂಗದ ನಟಿಯು ಕೂಡ ಸೇರಿಕೊಂಡಿದ್ದಾರೆ.

    ಇದು ಚಿತ್ರರಂಗದಲ್ಲಿ ನಡೆದಿರುವ ಘಟನೆ ಅಲ್ಲದೇ ಇದ್ದರೂ, ಸಿನಿಮಾ ರಂಗದಲ್ಲಿ ಇರುವವರಿಗೆ ಆದ ಕಹಿ ಘಟನೆ ಆಗಿದ್ದರಿಂದ ಸಿನಿಮಾ ರಂಗ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದೆ. ಈ ಘಟನೆ ನಡೆದದ್ದು ಮರಾಠಿ ಸಿನಿಮಾ ರಂಗದಲ್ಲಾಗಿದ್ದು, ತಮ್ಮ ಜೀವನದಲ್ಲಿ ನಡೆದ ಘಟನೆಯನ್ನು ನಟಿ  ತೇಜಸ್ವಿನಿ ಪಂಡಿತ್ ಹತ್ತು ವರ್ಷಗಳ ನಂತರ ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ.

    ಆಗ ತಾನೆ ಸಿನಿಮಾ ರಂಗಕ್ಕೆ ಬಂದ ದಿನಗಳವು. ಹಾಗಾಗಿ ನನ್ನ ಬಳಿ ತುಂಬಾ ಹಣ ಇರಲಿಲ್ಲ. ಒಂದು ರೀತಿಯಲ್ಲಿ ಕಡಿಮೆ ಹಣದಲ್ಲೇ ನಾನು ಬದುಕು ನಡೆಸುತ್ತಿದ್ದೆ. ಹಾಗಾಗಿ ನನ್ನ ಬಳಿ ಹಣ ಇಲ್ಲ ಅನ್ನು ಕಾರಣಕ್ಕಾಗಿ ಅಂಥದ್ದೊಂದು ಘಟನೆಗೆ ಸಾಕ್ಷಿಯಾಗಬೇಕಾಯಿತು. ಪುಣೆಯ ಅಪಾರ್ಟ್ಮೆಂಟ್ ನಲ್ಲಿ ನಾನು ವಾಸವಿದ್ದೆ. ಆ ಅಪಾರ್ಟ್ಮೆಂಟ್ ಕಾರ್ಪೋರೇಟ್ ಒಬ್ಬರಿಗೆ ಸೇರಿದ್ದಾಗಿತ್ತು. ಬಾಡಿಗೆ ಪಾವತಿಸಲು ಅವರ ಬಳಿ ಹೋದಾಗ, ನೇರವಾಗಿಯೇ ಅವನು ಮಂಚಕ್ಕೆ ಕರೆದ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ತೇಜಸ್ವೀನಿಯನ್ನು ಅವನು ನೇರವಾಗಿ ಮಂಚಕ್ಕೆ ಬರುತ್ತೀಯಾ ಎಂದು ಕೇಳಿದಾಗ ಶಾಕ್ ಆಗಿದ್ದರಂತೆ. ಕೋಪದಿಂದಲೇ ಅವನಿಗೆ ನೀರಿನ ಲೋಟವನ್ನು ಮುಖಕ್ಕೆ ಎಸೆದು ಬಂದಿದೆ ಎಂದು ಹೇಳಿಕೊಂಡಿದ್ದಾರೆ. ‘ಆಗ ಬೈ ಅರಾಚೆ’ ಸಿನಿಮಾದ ಮೂಲಕ ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ತೇಜಸ್ವೀನಿ ಆನಂತರ ಹಲವು ಚಿತ್ರಗಳನ್ನು ಮಾಡಿದ್ದಾರೆ. ಈ ಘಟನೆಯಿಂದಾಗಿ ಅವರು ಎಚ್ಚರಿಕೆಯಿಂದ ಬದುಕಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]