Tag: Meet

  • ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

    ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

    ಹೈದರಾಬಾದ್: ಸ್ಯಾಂಡಲ್‍ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಜೊತೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಮಹೇಶ್ ಬಾಬು ಅವರು ಕೂಡ ಅಲ್ಲಿಯೇ ತಮ್ಮ ‘ಮಹರ್ಷಿ’ ಚಿತ್ರದ ಚಿತ್ರೀಕರಣವನ್ನು ಮಾಡುತ್ತಿದ್ದರು. ಈ ವೇಳೆ ಇಬ್ಬರು ಭೇಟಿ ಆಗಿದ್ದಾರೆ.

    ಮುರಳಿ ಹಾಗೂ ಮಹೇಶ್ ಭೇಟಿ ಆಗಿ ಸುಮಾರು ಒಂದು ಗಂಟೆವರೆಗೂ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ ಅವರು ಸ್ಯಾಂಡಲ್‍ವುಡ್ ಚಿತ್ರಗಳ ಟ್ರೆಂಡ್ ಬದಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಶ್ರೀಮುರಳಿ ಅವರಿಗೆ ಮಹೇಶ್ ಬಾಬು ಅವರ ಪರಿಚಯವಿದೆ. ಈ ಹಿಂದೆ ಇಬ್ಬರು ಹಲವಾರು ಬಾರಿ ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ಇಬ್ಬರು ರಾಮೋಜಿ ಫಿಲಂ ಸಿಟಿಯಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಮಹೇಶ್ ಅವರು ಮುರಳಿ ನಟಿಸಿದ ‘ಉಗ್ರಂ’ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

    ಶ್ರೀಮುರಳಿ ಹಾಗೂ ಮಹೇಶ್ ಬಾಬು ಅವರ ಜೊತೆಗಿರುವ ಫೋಟೋದಲ್ಲಿ ನಟ ಸಾಯಿ ಕುಮಾರ್ ಅವರು ಕೂಡ ಕಾಣಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಭಿಮಾನಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿದ ಶ್ರದ್ಧಾ ಕಪೂರ್

    ಅಭಿಮಾನಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿದ ಶ್ರದ್ಧಾ ಕಪೂರ್

    ಮುಂಬೈ: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ತನ್ನ ಅಭಿಮಾನಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    13 ವರ್ಷದ ಸುಮಯ್ಯ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದಳು. ಸುಮಯ್ಯ, ಶ್ರದ್ಧಾ ಕಪೂರ್ ಅಭಿಮಾನಿ ಆಗಿದ್ದು, ನೆಚ್ಚಿನ ನಟಿಯನ್ನು ಒಮ್ಮೆ ಭೇಟಿ ಮಾಡಬೇಕು ಎಂದು ತನ್ನ ಆಸೆಯನ್ನು ಹೇಳಿಕೊಂಡಿದ್ದಳು. ಹಾಗಾಗಿ ಶ್ರದ್ಧಾ ತಮ್ಮ ಬ್ಯುಸಿ ಶೆಡ್ಯೂಲ್‍ನಲ್ಲೂ ಅಭಿಮಾನಿಯನ್ನು ಭೇಟಿ ಮಾಡಲು ಆಸ್ಪತ್ರೆಗೆ ಆಗಮಿಸಿದ್ದರು.

    ಬಾಲಕಿಯೊಬ್ಬಳು ಶ್ರದ್ಧಾ ಕಪೂರ್ ಅವರನ್ನು ಭೇಟಿ ಮಾಡಲು ಇಷ್ಟಪಡುತ್ತಿದ್ದಾಳೆ ಎಂದು ಸಂಸ್ಥೆಯೊಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿತ್ತು. ಈ ಪೋಸ್ಟ್ ಶ್ರದ್ಧಾ ಕಪೂರ್ ಅವರು ನೋಡಿ ಆ ಸಂಸ್ಥೆ ಬಳಿ ಬಾಲಕಿಯ ಮಾಹಿತಿ ಪಡೆದರು. ಬಳಿಕ ತಮ್ಮ ಬ್ಯುಸಿ ಕೆಲಸದ ನಡುವೆ ಶ್ರದ್ಧಾ ಬಾಲಕಿಯನ್ನು ಭೇಟಿ ಮಾಡಿದ್ದಾರೆ.

    ಶ್ರದ್ಧಾ ಕಪೂರ್ ತನ್ನ ಅಭಿಮಾನಿಯನ್ನು ಭೇಟಿ ಮಾಡಿದ ಬಳಿಕ ಆಕೆಯ ಜೊತೆಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇಂದು ನನಗೆ ಸುಮಯ್ಯಳನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಖುಷಿ ಆಗಿದ್ದೇನೆ. ಸುಮಯ್ಯ ಮುದ್ದು ಏಂಜಲ್ ಆಗಿದ್ದು, ಆಕೆ ಬೇಗ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಅಲ್ಲದೇ ಆಕೆಯ ಚಿಕಿತ್ಸೆಗೆ ನನ್ನಿಂದ ಏನಾದರೂ ಸಹಾಯ ಬೇಕೆಂದರೆ ನನ್ನನ್ನು ಕೇಳಿ” ಎಂದು ಶ್ರದ್ಧಾ ಸಂಸ್ಥೆ ಬಳಿ ಕೇಳಿಕೊಂಡಿದ್ದಾರೆ.

    ತಮ್ಮಿಂದ ಆಸ್ಪತ್ರೆಯ ಇತರ ರೋಗಿಗಳಿಗೆ ತೊಂದರೆ ಆಗದಿರಲು ಶ್ರದ್ಧಾ ಬುರ್ಕಾ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ಮನೆಗೆ ಸುಮಲತಾ, ಅಭಿಷೇಕ್ ಭೇಟಿ

    ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ಮನೆಗೆ ಸುಮಲತಾ, ಅಭಿಷೇಕ್ ಭೇಟಿ

    ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ಮನೆಗೆ ನಟಿ ಸುಮಲತಾ ಅಂಬರೀಶ್ ಹಾಗೂ ಅಭಿಷೇಕ್ ಭೇಟಿ ನೀಡಿದ್ದಾರೆ.

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೇಗೌಡನದೊಡ್ಡಿ ಗ್ರಾಮದ ತಮ್ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮಯ್ಯ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಷಯ ತಿಳಿದ ಸುಮಲತಾ ಅವರು ಇಂದು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದ್ದರು.

    ಸುಮಲತಾ ಅವರು ತಮ್ಮಯ್ಯ ಮನೆಯವರಿಗೆ ಹೆದರಬೇಡಿ. ಕಷ್ಟ ಇದ್ದರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ಜೊತೆ ನಾವಿರುತ್ತೇವೆ ಎಂದು ಸಾಂತ್ವನ ಹೇಳಿ 30 ಸಾವಿರ ರೂ. ಪರಿಹಾರ ಚೆಕ್ ವಿತರಿಸಿದ್ದಾರೆ. ಇದೇ ವೇಳೆ ಸುಮಲತಾ ಅವರಿಗೆ ಹಿರಿಯ ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಾಥ್ ನೀಡಿದ್ದರು.

    ಅಲ್ಲದೇ ಸುಮಲತಾ ಹಾಗೂ ಅಭಿಷೇಕ್ ಅವರು ಮದ್ದೂರು ತಾಲೂಕಿನ ಗೊರವನ ಹಳ್ಳಿ ಗ್ರಾಮಕ್ಕೂ ಭೇಟಿ ನೀಡಿದ್ದಾರೆ. ಗೊರವನ ಹಳ್ಳಿಯ ಅಂಬಿ ಅಭಿಮಾನಿ ಸುರೇಂದ್ರ(50) ನೇಣಿಗೆ ಶರಣಾಗಿದ್ದರು. ಸುಮಲತಾ ಹಾಗೂ ಅಭಿಷೇಕ್ ಸುರೇಂದ್ರ ಅವರ ಕುಟುಂಬಕ್ಕೂ ಸಾಂತ್ವನ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಗಳ ಕುಟುಂಬಸ್ಥರಿಗೆ ಅದನ್ನು ಭರಿಸುವ ಶಕ್ತಿ ನೀಡಲಿ ಎಂದು ಸುಮಲತಾ ಗೊರವನ ಹಳ್ಳಿಯಲ್ಲಿ ಹೇಳಿದ್ದಾರೆ. ಅವರ ಸಾವು ದೈವ ಇಚ್ಚೆ. ಆದರೆ ಇಲ್ಲಿ ಆಗ ಬಾರದಿತ್ತು. ನಮ್ಮ ಕೈಯಲ್ಲಿ ಸಾಂತ್ವನ ಹೇಳಲಿಕ್ಕಷ್ಟೆ ಆಗುವುದು ಎಂದು ಸುಮಲತಾ ಅವರು ಅಂಬಿಯನ್ನು ನೆನೆದು ಗದ್ಗದಿತರಾದರು.

    ಸುಮಲತಾ, ಅಭಿಷೇಕ್, ದೊಡ್ಡಣ್ಣ ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಮೃತ ಸುರೇಶ್ ಮನೆಯಲ್ಲಿ ಎಳನೀರು ಕುಡಿದು ಕುಟುಂಬಸ್ಥರ ಜೊತೆ ಸ್ವಲ್ಪ ಸಮಯ ಕಳೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೇಸ್‍ಬುಕ್ ಗೆಳತಿ ಜೊತೆಗಿನ ಮೊದಲ ಭೇಟಿಯಲ್ಲೇ ಓಡಿ ಹೋದ ಯುವಕ!

    ಫೇಸ್‍ಬುಕ್ ಗೆಳತಿ ಜೊತೆಗಿನ ಮೊದಲ ಭೇಟಿಯಲ್ಲೇ ಓಡಿ ಹೋದ ಯುವಕ!

    ಪಾಟ್ನಾ: ಯುವಕನೊಬ್ಬ ತನ್ನ ಫೇಸ್‍ಬುಕ್ ಗೆಳತಿಯನ್ನು ಮೊದಲ ಬಾರಿ ಭೇಟಿಯಾಗಲು ಹೋದಾಗ ಆಕೆಯನ್ನು ನೋಡಿ ಪಾರ್ಕ್ ನಿಂದಲೇ ಓಡಿ ಹೋದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ಸುಂದರವಾದ ಯುವತಿಯ ಖಾತೆಯನ್ನು ನೋಡಿ ಆಕೆಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಯುವತಿ ಕೂಡ ಆ ಯುವಕನ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ್ದಾಳೆ. ನಂತರ ಯುವಕ ಯುವತಿಗೆ ಮೆಸೇಜ್ ಮಾಡಲು ಆರಂಭಿಸಿ ಹತ್ತಿರವಾಗಿದ್ದಾನೆ. ಯುವತಿ ಕೂಡ ಆತನ ಮೆಸೇಜ್‍ಗೆ ಪ್ರತಿಕ್ರಿಯಿಸುತ್ತಿದ್ದಳು. ಹೀಗೆ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದಾರೆ.

    ಮದುವೆ ಆಗುವ ಮೊದಲು ನಾವಿಬ್ಬರು ಭೇಟಿ ಆಗೋಣ ಎಂದು ಯುವಕ ಯುವತಿ ಬಳಿ ಕೋರಿಕೆ ಇಟ್ಟಿದ್ದಾನೆ. ಯುವತಿ ಈ ಕೋರಿಕೆಯನ್ನು ಸ್ವೀಕರಿಸಿ ಭೇಟಿಗೆ ಒಪ್ಪಿಕೊಂಡಿದ್ದಾಳೆ. ಹೊಸ ವರ್ಷದಂದು ಇಬ್ಬರು ಪಾರ್ಕ್ ವೊಂದರಲ್ಲಿ ಭೇಟಿ ಆಗಲು ನಿರ್ಧರಿಸಿದ್ದಾರೆ. ಭೇಟಿಯಾದ ಬಳಿಕ ತಮ್ಮ ಮುಂದಿನ ಜೀವನದ ಬಗ್ಗೆ ಚರ್ಚೆ ನಡೆಸೋಣ ಎಂದು ಇಬ್ಬರು ಮಾತನಾಡಿಕೊಂಡಿದ್ದರು.

    ತನ್ನ ಫೇಸ್‍ಬುಕ್ ಗೆಳತಿಯನ್ನು ಭೇಟಿ ಮಾಡಲು ಯುವಕ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಮೊದಲೇ ಹೂಗುಚ್ಚವನ್ನು ತೆಗೆದುಕೊಂಡು ಪಾರ್ಕಿಗೆ ಬಂದಿದ್ದ. ಯುವತಿ ಪಾರ್ಕಿಗೆ ಬಂದ ಬಳಿಕ ಆಕೆಯನ್ನು ನೋಡಿ ಯುವಕ ಒಂದು ಕ್ಷಣ ದಂಗಾಗಿದ್ದಾನೆ. ಫೇಸ್‍ಬುಕ್ ನಲ್ಲಿದ್ದ ಯುವತಿ ಬೇರೆ ಹಾಗೂ ಎದುರಿಗೆ ಇದ್ದ ಯುವತಿ ಬೇರೆ ಎಂದು ತಿಳಿದ ಯುವಕ ಪಾರ್ಕಿನಿಂದಲೇ ಓಡಿ ಹೋಗಿದ್ದಾನೆ.

    ಯುವಕನಿಂದ ಮೋಸ ಹೋಗಿದ್ದೇನೆ ಎಂದು ಯುವತಿ ಜನವರಿ 2ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಆಗ ಪೊಲೀಸರು ಯುವಕನನ್ನು ಠಾಣೆಗೆ ಕರೆಸಿ ಮಾತನಾಡಿಸಿದ್ದಾರೆ. ಆಗ ಯುವಕ “ಈ ಯುವತಿ ಫೇಸ್‍ಬುಕ್‍ನಲ್ಲಿ ಬೇರೆ ಫೋಟೋ ಹಾಕಿ ನನಗೆ ಮೋಸ ಮಾಡಿದಲ್ಲದೇ ನನ್ನ ಬಳಿ ಸುಳ್ಳು ಹೇಳಿದ್ದಾಳೆ. ನಾನು ಶ್ರೀಮಂತೆ ಎಂದು ಆಕೆ ನನ್ನ ಬಳಿ ಹೇಳಿದ್ದಳು. ಆದರೆ ಆಕೆ ಬೇರೆಯವರ ಮನೆಯಲ್ಲಿ ಕೆಲಸ ಮಾಡುತ್ತಾಳೆ” ಎಂದು ತಿಳಿಸಿದ್ದಾನೆ.

    ಯುವಕನ ಮಾತು ಕೇಳಿ ಯುವತಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಾಳೆ. ಅಲ್ಲದೇ ಇಬ್ಬರು ಪೊಲೀಸ್ ಠಾಣೆಯಲ್ಲೇ ಆರೋಪ, ಪ್ರತ್ಯಾರೋಪ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ನಿಲ್ಲಿಸಿ, ಇಬ್ಬರಿಗೂ ಬುದ್ಧಿ ಹೇಳಿ ಅವರ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
  • ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.

    ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದ್ದು, ಸಾಲೂರು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ 1ನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ಸಿಡಿದೆದ್ದಿರುವ ಭಕ್ತರು, ಸಾಲೂರು ಮಠದಲ್ಲಿದ್ದ ಕಿರಿಯ ಸ್ವಾಮೀಜಿ ಫೋಟೋ ಹರಿದು ಆಕ್ರೋಶ ಹೊರಹಾಕಿದ್ದಾರೆ.

    ಇತ್ತ ಕೀಟನಾಶಕ ಸೇವಿಸಿ ಅಸ್ವಸ್ಥರಾದವರಿಗೆ 11ನೇ ದಿನವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 33 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 8 ಮಂದಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದರೆ, 12 ಮಂದಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 13 ಮಂದಿಗೆ ಸಾಮಾನ್ಯ ವಾರ್ಡ್ ನಲ್ಲಿ ನೀಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಲ್ಲೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಯಶ್ ಭೇಟಿ

    ಕೊಲ್ಲೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಯಶ್ ಭೇಟಿ

    ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಈ ವಾರ ಬಹುನಿರೀಕ್ಷಿತ `ಕೆಜಿಎಫ್’ ಸಿನಿಮಾ ರಿಲೀಸ್ ಹಿನ್ನೆಲೆಯಲ್ಲಿ ಯಶ್ ಚಿತ್ರತಂಡದ ಜೊತೆ ಸೇರಿ ದೇವಸ್ಥಾನಗಳಿಗೆ ಭೇಟಿ ಮಾಡುತ್ತಿದ್ದಾರೆ. ನಟ ಯಶ್ ಮತ್ತು ಚಿತ್ರತಂಡ ಬೆಂಗಳೂರಿನಿಂದ ಹೊರಟು ಮೊದಲು ಕೊಲ್ಲೂರು ದೇವಸ್ಥಾನ ನಂತರ ಧರ್ಮಸ್ಥಳ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಉಜಿರೆಯಲ್ಲಿರೋ ಪ್ರಸಿದ್ಧ ಸುರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಇದನ್ನೂ ಓದಿ: ಕೊಲ್ಲೂರು ದೇವಸ್ಥಾನಕ್ಕೆ ನಟ ಯಶ್ ಭೇಟಿ

    ಯಶ್ ಹೆಲಿಕಾಫ್ಟರ್ ನಿಂದ ಕೊಲ್ಲೂರಿಗೆ ಬಂದು ನೇರವಾಗಿ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು ನಂತರ ಧರ್ಮಸ್ಥಳ, ಕುಕ್ಕೆಗೆ ಭೇಟಿ ನೀಡಿದ್ದಾರೆ. ತಂದೆಯಾದ ಬಳಿಕ ಯಶ್ ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಕೆಜಿಎಫ್ ಚಿತ್ರದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

    ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿದ್ದು, ಯಶ್, ನಿರ್ಮಾಪಕ ವಿಜಯ್ ಕಿರಗಂದೂರ್ ಸ್ನೇಹಿತರ ಜೊತೆ ಸೇರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದೇ ವಾರ 21ರಂದು ಕೆಜಿಎಫ್ ಸಿನಿಮಾ ರಿಲೀಸ್ ಆಗಲಿದೆ. ಹೀಗಾಗಿ ಚಿತ್ರದ ಒಳಿತಿಗಾಗಿ ಕೆಜಿಎಫ್ ಟೀಮ್ ದೇವಸ್ಥಾನಕ್ಕೆ ಭೇಟಿ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

    ‘ಕೆಜಿಎಫ್’ ಸಿನಿಮಾದ ಹಿಂದಿಯ ಸ್ಪೆಷಲ್ ಹಾಡೊಂದು ಈಗಾಗಲೇ ರಿಲೀಸ್ ಆಗಿದ್ದು, ಮೌನಿ ರಾಯ್ ಹಾಗೂ ಯಶ್ ‘ಗಲಿ ಗಲಿ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ಹಾಡು ಹೊಸ ದಾಖಲೆಯನ್ನು ನಿರ್ಮಿಸಿದೆ. ಕಳೆದ ಬುಧವಾರ ಕೆಜಿಎಫ್ ಸಿನಿಮಾದ ‘ಗಲಿ ಗಲಿ’ ಹಾಡು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಈ ಹಾಡು 13 ಮಿಲಿಯನ್ ವ್ಯೂ ಪಡೆದುಕೊಂಡಿದೆ. ವಿಶ್ವದ ಯಾವ ಸಿನಿಮಾ ಹಾಡು ಕೂಡ ಒಂದು ದಿನಕ್ಕೆ ಈ ಮಟ್ಟಿನ ಹಿಟ್ಸ್ ಪಡೆದುಕೊಂಡಿಲ್ಲ. ಈಗ ಕೆಜಿಎಫ್ ಚಿತ್ರದ ಈ ಹಾಡು ಬಿಡುಗಡೆಯಾಗಿ ಹೊಸ ದಾಖಲೆ ಸೃಷ್ಟಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎ.ಆರ್ ರೆಹಮಾನ್‍ರನ್ನು ಭೇಟಿ ಮಾಡಿದ ಕೊಪ್ಪಳದ ಗಂಗಮ್ಮ

    ಎ.ಆರ್ ರೆಹಮಾನ್‍ರನ್ನು ಭೇಟಿ ಮಾಡಿದ ಕೊಪ್ಪಳದ ಗಂಗಮ್ಮ

    ಬೆಂಗಳೂರು: ಸಂಗೀತ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಕೊಪ್ಪಳದ ಗಂಗಮ್ಮ ಭೇಟಿ ಮಾಡಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಎಲ್ಲರ ಗಮನ ಸೆಳೆದಿದ್ದ ಗಂಗಮ್ಮನ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದಾರೆ. 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದರು.

    ಇದೇ ತಿಂಗಳು 22ಕ್ಕೆ ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಸಿದ್ಧತೆಗಾಗಿ ಎ.ಆರ್ ರೆಹಮಾನ್ ಬೆಂಗಳೂರಿಗೆ ಆಗಮಿಸಿದ್ದರು. ಇದೇ ವೇಳೆ ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ ಶುಭ ಹಾರೈಸಿದ್ದಾರೆ.

    ಗಂಗಮ್ಮ 20 ವರ್ಷದಿಂದಲೂ ಹಾಡುತ್ತಿದ್ದು, ಫೇಸ್‍ಬುಕ್ ವಿಡಿಯೋದಿಂದಾಗಿ ಎಲ್ಲೆಡೆ ಫೇಮಸ್ ಆಗಿದ್ದರು. ಇವರು ಹಾಡುತ್ತಿದ್ದ ವಿಡಿಯೋವನ್ನು ಸ್ಟುಡಿಯೋ ಮಾಲೀಕ ಶಿವಪ್ರಸಾದ್ ಲೈವ್ ಮಾಡಿದ್ದರು. ಆ ವಿಡಿಯೋ 24 ಗಂಟೆಯಲ್ಲಿ ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ಜನ ಹಾಡು ಕೇಳಿದ್ದರು.

    ನಾನು ಚಿಕ್ಕವಯಸ್ಸಿನಿಂದಲೂ ಹಾಡನ್ನು ಹಾಡಲು ಶುರು ಮಾಡಿದೆ. ಆದರೆ ಆಗ ಆರ್ಕೆಸ್ಟ್ರಾ ಇರಲಿಲ್ಲ. ನಂತರ ಕೊಪ್ಪಳದಲ್ಲಿ ಆರ್ಕೆಸ್ಟ್ರಾ ಶುರುವಾದಾಗ 20 ವರ್ಷದಿಂದ ಹಾಡಲು ಶುರು ಮಾಡಿದ್ದೇನೆ. ಈಗ ನಾನು ಗುರುತಿಸಿಕೊಳ್ಳುತ್ತಿದ್ದೇನೆ. ವಿಡಿಯೋ ವೈರಲ್ ಆಗಿದ್ದಕ್ಕೆ ನನ್ನ ಕುಟುಂಬದವರು ಸಂತೋಷವಾಗಿದ್ದಾರೆ ಎಂದು ಗಂಗಮ್ಮ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಶ್, ಪ್ರಭಾಸ್ ಭೇಟಿಯ ಸೀಕ್ರೆಟ್ ರಿವೀಲ್- ಅತೀ ದೊಡ್ಡ ಶೋನಲ್ಲಿ ನಟರು ಭಾಗಿ

    ಯಶ್, ಪ್ರಭಾಸ್ ಭೇಟಿಯ ಸೀಕ್ರೆಟ್ ರಿವೀಲ್- ಅತೀ ದೊಡ್ಡ ಶೋನಲ್ಲಿ ನಟರು ಭಾಗಿ

    ಮುಂಬೈ: ಬಾಹುಬಲಿ ಸೂಪರ್ ಸ್ಟಾರ್ ಪ್ರಭಾಸ್ ಹಾಗೂ ಕೆಜಿಎಫ್ ರಾಕಿ ಭಾಯ್ ಯಶ್ ಮುಂಬೈನಲ್ಲಿ ಭೇಟಿಯಾಗಿರುವ ಸೀಕ್ರೆಟ್ ಈಗ ರಿವೀಲ್ ಆಗಿದ್ದು, ರಾಜಾಹುಲಿ ಹಾಗೂ ಬಾಹುಬಲಿ ಅತೀ ದೊಡ್ಡ ಶೋವೊಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ನಿರ್ದೇಶಕ ಕರಣ್ ಜೋಹರ್ ಇಂದು ಬೆಳಗ್ಗೆ ಟ್ವಿಟ್ಟರಿನಲ್ಲಿ, “ನಾನು ‘ಕಾಫಿ ವಿತ್ ಕರಣ್’ ಕಾರ್ಯಕ್ರಮ ನಡೆಸಿಕೊಡಲು ಹೋಗುತ್ತಿದ್ದೇನೆ. ಈ ಕಾರ್ಯಕ್ರಮ ನಡೆಸಿಕೊಡಲು ತುಂಬಾ ಹೆಮ್ಮೆಯಾಗುತ್ತಿದೆ. ಇಂದು ಹೆಮ್ಮೆಯ ಒಂದು ಕಾಫಿ ಯಾರೂ ಎಂದು ಗೆಸ್ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದರು.

    ಕರಣ್ ಜೋಹರ್ ಟ್ವೀಟಿಗೆ ಎಲ್ಲರೂ ಪ್ರಭಾಸ್, ರಾಜಾಮೌಳಿ ಹಾಗೂ ರಾಣಾ ಬರುತ್ತಾರೆ ಎಂದು ರೀ-ಟ್ವೀಟ್ ಮಾಡಿದರು. ಮತ್ತೆ ಕೆಲವರು ಪ್ರಭಾಸ್ ಹಾಗೂ ಯಶ್ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಗೆಸ್ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಾಹುಬಲಿ-ಕೆಜಿಎಫ್ ‘ರಾಕಿ ಭಾಯ್’ ಮುಂಬೈನಲ್ಲಿ ಭೇಟಿಯಾಗಿದ್ದೇಕೆ?

    https://twitter.com/karanjohar/status/1071233254055911424?ref_src=twsrc%5Etfw%7Ctwcamp%5Etweetembed%7Ctwterm%5E1071233254055911424&ref_url=http%3A%2F%2Fenglish.sakshi.com%2Fentertainment%2F2018%2F12%2F08%2Fbaahubali-prabhas-on-koffee-with-karan-opens-about-anushka-and-martial-status

    ಪ್ರಭಾಸ್ ಹಾಗೂ ಯಶ್ ಒಟ್ಟಿಗೆ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಇಬ್ಬರು ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾದರೆ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲ ಸೌತ್ ನಟರು ಯಶ್ ಹಾಗೂ ಪ್ರಭಾಸ್ ಆಗುತ್ತಾರೆ.

    ಮುಂಬೈನ ಪಾಲಿಭವನ್ ನಿಂದ ಹೊರಡುವಾಗ ಇಬ್ಬರು ನಟರೂ ಪರಸ್ಪರ ತಬ್ಬಿಕೊಂಡು ಬಾಯ್ ಹೇಳಿದ್ದಾರೆ. ಆ್ಯಕ್ಷನ್ ಸಿನಿಮಾದಿಂದ ಖ್ಯಾತಿಗೊಂಡ ಇಬ್ಬರನ್ನು ನೋಡಿ ಎಲ್ಲರಿಗೂ ಖುಷಿಯಾಗಿದೆ. ಇದೇ ವೇಳೆ ಇಬ್ಬರು ಸ್ಟಾರ್ ನಟರೂ ಯಾವುದೇ ಹಮ್ಮಿಲ್ಲದೆ ಫೋಟೋಗೆ ಪೋಸ್ ಕೊಟ್ಟು ಅಭಿಮಾನಿಗಳಿಗೆ ಖುಷಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಬಲ್ ಹಾಕಲು ಹೋದಾಗ ಲವ್ – ಪ್ರೇಯಸಿ ಭೇಟಿ ಆಗಲ್ಲ ಎಂದಿದ್ದಕ್ಕೆ 2 ಮಕ್ಳ ತಂದೆ ನೇಣಿಗೆ

    ಕೇಬಲ್ ಹಾಕಲು ಹೋದಾಗ ಲವ್ – ಪ್ರೇಯಸಿ ಭೇಟಿ ಆಗಲ್ಲ ಎಂದಿದ್ದಕ್ಕೆ 2 ಮಕ್ಳ ತಂದೆ ನೇಣಿಗೆ

    ನವದೆಹಲಿ: ವಿವಾಹಿತ ವ್ಯಕ್ತಿಯೊಬ್ಬ ತಾನು ಪ್ರೀತಿಸಿದ ಯುವತಿ ಭೇಟಿಯಾಗಲು ನಿರಾಕರಿಸಿದ್ದಕ್ಕೆ ನೇಣಿಗೆ ಶರಣಾಗಿರುವ ಘಟನೆ ದೆಹಲಿಯ ಟೈಗ್ರಿ ಪ್ರದೇಶದಲ್ಲಿ ನಡೆದಿದೆ.

    ದೆಹಲಿಯ ಟೈಗ್ರಿ ಪ್ರದೇಶದ ನಿವಾಸಿ ಲಕ್ಷ್ಮಿ ನಾರಾಯಣ್ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಾರಾಯಣ್ ಸಂಗಮ್ ವಿಹಾರ್ ಆಫೀಸ್‍ನಲ್ಲಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. 16 ವರ್ಷದ ಹಿಂದೆ ವಿವಾಹವಾಗಿದ್ದ ನಾರಾಯಣ್‍ಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಪತ್ನಿ ಇದ್ದರೂ ಬೇರೆ ಯುವತಿಯ ಸಹವಾಸ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಕೆಲ ತಿಂಗಳ ಹಿಂದೆ ನಾರಾಯಣ್ ಯುವತಿಯ ಮನೆಗೆ ಕೇಬಲ್ ಹಾಕಲು ಹೋಗಿದ್ದನು. ಆಗ ಯುವತಿ ಜೊತೆ ನಾರಾಯಣ್‍ಗೆ ಸ್ನೇಹವಾಗಿದೆ. ಯುವತಿ ಜೊತೆ ತುಂಬ ಸಲುಗೆ ಬೆಳಸಿಕೊಂಡಿದ್ದ ನಾರಾಯಣ್ ದಿನಾ ವಾಟ್ಸಾಪ್‍ನಲ್ಲಿ ಆಕೆ ಬಳಿ ಮಾತನಾಡುತ್ತಿದ್ದ. ಹೀಗೆ ಮಾತನಾಡುತ್ತ ಅವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಶನಿವಾರ ರಾತ್ರಿ ವೇಳೆ ನಾರಾಯಣ್ ಯುವತಿಯನ್ನು ಪ್ರೀತಿಸುತ್ತಿರುವ ವಿಷಯ ತಿಳಿಸಿ ಆಕೆಗೆ ಭೇಟಿ ಮಾಡಲು ಹೇಳಿದ್ದಾನೆ. ಆಗ ಯುವತಿ ಭೇಟಿಯಾಗಲು ನಿರಾಕರಿಸಿದ್ದಾಳೆ.

    ಯುವತಿಯ ಈ ನಿರ್ಧಾರದಿಂದ ಕೋಪಗೊಂಡ ನಾರಾಯಣ್ ತನ್ನ ಎದೆಯ ಮೇಲೆ ಚಾಕುವಿನಿಂದ ಕೆಲವು ಗಾಯವನ್ನು ಮಾಡಿಕೊಂಡು ಆಕೆಗೆ ಫೋಟೋ ಕಳುಹಿಸಿ ನೀನು ಭೇಟಿಯಾಗಿಲ್ಲ ಅಂದ್ರೆ ಸಾಯ್ತೀನಿ ಎಂದು ಹೆದರಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳ ಕೂಡ ನಡೆದಿದೆ. ಏನೇ ಮಾಡಿದರೂ ಯುವತಿ ಭೇಟಿಯಾಗಲು ಒಪ್ಪದ್ದಕ್ಕೆ ಮನನೊಂದ ನಾರಾಯಣ್ ತಾನು ಕೆಲಸ ಮಾಡುತ್ತಿದ್ದ ಆಫೀಸ್‍ನಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಘಟನೆ ಕುರಿತು ಟೈಗ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿಯನ್ನು ನೋಡಲು ಹೆಚ್ಚು ಮನೆಗೆ ಹೋಗುತ್ತಿದ್ರು ಸ್ಟಾರ್ ನಟ

    ಅಂಬಿಯನ್ನು ನೋಡಲು ಹೆಚ್ಚು ಮನೆಗೆ ಹೋಗುತ್ತಿದ್ರು ಸ್ಟಾರ್ ನಟ

    ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ನೋಡಲು ಚಾಲೆಂಜಿಗ್ ಸ್ಟಾರ್ ದರ್ಶನ್ ಹೆಚ್ಚು ಅವರ ಮನೆಗೆ ಹೋಗುತ್ತಿದ್ದರು.

    ಅಂಬರೀಶ್ ಅವರ ಮನೆಗೆ ತಾರೆಯರು ಆಗಾಗ ಹೋಗುತ್ತಿರುತ್ತಾರೆ. ಆದರೆ ಪ್ರಮುಖವಾಗಿ ದರ್ಶನ್ ಅವರು ಅತಿ ಹೆಚ್ಚು ಬಾರಿ ಅಂಬರೀಶ್ ಅವರ ಮನೆಗೆ ಹೋಗಿದ್ದಾರೆ. ಅವರನ್ನು ಹೊರತುಪಡಿಸಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೋಗುತ್ತಿದ್ದರು. ಅಲ್ಲದೇ ಮೋಹನ್ ಬಾಬು, ರಜನಿಕಾಂತ್, ಚಿರಂಜೀವಿ ಬೆಂಗಳೂರಿಗೆ ಬಂದಾಗ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಆದರೆ ದರ್ಶನ್ ಅವರು ಬಿಡುವು ಇದ್ದಾಗಲೆಲ್ಲಾ ಅಂಬಿ ಮನೆಗೆ ಹೋಗುತ್ತಿದ್ದರು ಎಂದು ಅಂಬರೀಶ್ ಅವರ ಆಪ್ತರಾದ ಸೀನಣ್ಣ ಜೇಳಿದ್ದಾರೆ.

    ದರ್ಶನ್ ಅಂಬಿ ಮನೆಯಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರು. ದರ್ಶನ್ ಅಂಬಿಯ ಮತ್ತೊಂದು ಮಗನಂತೆ ಇದ್ದರು. ಅಂಬಿ, ದರ್ಶನ್‍ಗೆ ಲೇ ಹುಷಾರಾಗಿರು. ಕೆಟ್ಟ ಕೆಲಸ ಮಾಡಬೇಡ ಹಾಗೂ ಕೆಟ್ಟವರ ಜೊತೆ ಸೇರಬೇಡ ಎಂದು ಹೇಳುತ್ತಿದ್ದರು. ಅಣ್ಣ ಅವರ ಮಗ ಅಭಿಷೇಕ್‍ಗೂ ಇದೇ ಮಾತು ಹೇಳುತ್ತಿದ್ದರು. ದರ್ಶನ್ ಅವರು ಕೂಡ ಅಣ್ಣನ ಯಾವುದೇ ಮಾತು ಇಲ್ಲ ಎಂದು ಹೇಳುತ್ತಿರಲಿಲ್ಲ. ಅದು ಸಿನಿಮಾಗೆ ಸಂಬಂಧಿಸಬಹುದು ಅಥವಾ ಅವರ ಖಾಸಗಿ ವಿಷಯಕ್ಕೆ ಸಂಬಂಧಿಸಬಹುದು. ದರ್ಶನ್ ಅವರ ಮಾತನ್ನು ಪಾಲಿಸುತ್ತಿದ್ದರು.

    ದರ್ಶನ್ ಶೂಟಿಂಗ್‍ನಲ್ಲಿ ಬ್ಯುಸಿಯಾಗಿ ಮನೆಗೆ ಬರಲು ಆಗದೇ ಇದ್ದಾಗ ಫೋನ್ ಮಾಡುತ್ತಿದ್ದನು. ಕೆಲವೊಮ್ಮೆ ನಾನು ಫೋನ್ ರಿಸೀವ್ ಮಾಡುತ್ತಿದ್ದೆ. ಆಗ ಅವರು ಮೊದಲು ಅಣ್ಣನಿಗೆ ಫೋನ್ ಕೊಡಿ ಎಂದು ಹೇಳಿ ಹೇಗಿದ್ದೀಯಾ ಅಣ್ಣ ಎಂದು ಕೇಳುತ್ತಿದ್ದರು. ಆಗ ಅವರು ‘ನಾನು ಚೆನ್ನಾಗೇ ಇದ್ದೀನಿ. ನನಗೆ ಏನಾಗಿದೆ. ನೀನ್ ಹೇಗೆ ಇದ್ದೀಯಾ. ಎಲ್ಲಿಇದ್ದಿಯಾ ಎಂದು ಕೇಳಿತ್ತಿದ್ದರು. ಹೀಗೆ ಅವರಿಬ್ಬರ ಮಾತು ಶುರುವಾಗುತ್ತಿತ್ತು ಎಂದು ಸೀನಣ್ಣ ತಿಳಿಸಿದ್ದಾರೆ.

    ಸದ್ಯ ಅಂಬಿ ನಿಧನರಾಗಿದ್ದಾಗ ದರ್ಶನ್ ಸ್ವೀಡನ್‍ನಲ್ಲಿ ಯಜಮಾನ ಚಿತ್ರದ ಶೂಟಿಂಗ್‍ನಲ್ಲಿದ್ದರು. ನಂತರ ಅಂಬಿ ಅವರ ನಿಧನ ಸುದ್ದಿ ಕೇಳಿ ದರ್ಶನ್ ವಿದೇಶದಲ್ಲಿ ಶೂಟಿಂಗ್ ತಮ್ಮ ಚಿತ್ರದ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಲ್ಯಾಂಡ್ ಆಗಿದರು. ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂಗೆ ಅಂಬುಲೆನ್ಸ್ ಮೂಲಕ ಮೃತ ಶರೀರ ಬಂದ ಬಳಿಕ ದರ್ಶನ್ ಅಂಬಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಅಂಬಿ ಮೃತದೇಹಕ್ಕೆ ದರ್ಶನ್ ಹೆಗಲು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv