Tag: Meet

  • ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

    ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

    ಕೋಲಾರ: ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಕೋಲಾರದಲ್ಲಿ ಪ್ರತ್ಯಕ್ಷರಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುದುಕುಳ ಬಳಿ ಇರುವ ಜೋಯನ್ ಗಾಲ್ಫ್‍ಗೆ ನಟ ಯಶ್ ಬುಧವಾರ ಭೇಟಿ ನೀಡಿದ್ದಾರೆ. ಈ ವೇಳೆ ಗಾಲ್ಫ್ ಅಧ್ಯಕ್ಷ ರೈ ಹಾಗೂ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿಯನ್ನು ಯಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಯಶ್ ಭೇಟಿ ನೀಡಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾಕಿಂಗ್ ಸ್ಟಾರ್ ಜೊತೆ ಪೀಪಲ್ ಸ್ಟಾರ್ ಎಂಎಲ್‍ಎ ಎಂದು ಹಣೆ ಪಟ್ಟಿ ಬರೆದು ಹಂಚಿಕೊಂಡಿದ್ದಾರೆ. ಭೇಟಿ ವೇಳೆ ನಟ ಯಶ್ ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿ ನೂತನ ಶಾಸಕರಾಗಿ ಆಯ್ಕೆ ಆಗಿರುವ ಶಾಸಕ ಎಸ್‍ಎನ್ ನಾರಾಯಣಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಕ್ರೀಯರಾಗಿದ್ದ ನಟ ಯಶ್ ತಮ್ಮ ಆಪ್ತ ವಲಯದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

    ಸದ್ಯ ಸ್ಯಾಂಡಲ್‍ವುಡ್ ಸಿನಿಮಾ ಅಭಿಮಾನಿಗಳು ಯಶ್ ಅವರ ಕೆಜಿಎಫ್ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದು, ಚಿತ್ರ ತಂಡ ಆರಂಭದಿಂದಲೇ ಚಿತ್ರ ಕಥೆಯ ಕುರಿತ ರೋಚಕತೆಯನ್ನು ಉಳಿಸಿಕೊಂಡು ಬರುತ್ತಿದೆ. ಚಿತ್ರದಲ್ಲಿ ಯಶ್ ಅವರ ಲುಕ್ ಸಹ ಅಭಿಮಾನಿಗಳಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳ ಹಿಂದೆ ಯಶ್ ರ ಹೊಸ ಲುಕ್ ನ ಫೋಟೋವನ್ನು ಅಭಿಮಾನಿಗಳೇ ಸಿದ್ಧಗೊಳಿಸಿ ಬಿಡುಗಡೆಗೊಳಿಸಿದ್ದರು. ಸದ್ಯಕ್ಕೆ ಕೆಜಿಎಫ್ ಚಿತ್ರೀಕರಣ ನಡೆಯುತ್ತಿದ್ದು, ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿಯಿದೆ.

  • ಪ್ರಧಾನಿ ಮೋದಿ ಭೇಟಿಗೆ ತೆರಳಲಿರುವ ಸಿಎಂ ಹೆಚ್‍ಡಿಕೆ

    ಪ್ರಧಾನಿ ಮೋದಿ ಭೇಟಿಗೆ ತೆರಳಲಿರುವ ಸಿಎಂ ಹೆಚ್‍ಡಿಕೆ

    ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್.ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಹೆಚ್.ಡಿ ಕುಮಾರಸ್ವಾಮಿ ದೆಹಲಿಯ ರಾಜ್‍ಘಾಟ್‍ನಲ್ಲಿರುವ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3:30 ಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

    ಪ್ರಧಾನಿ ಭೇಟಿ ವೇಳೆ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದು, ಆಡಳಿತಾತ್ಮಕ ಸಹಕಾರ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಇದರ ಜೊತೆಗೆ ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಿದ್ದಾರೆ.

    ಪ್ರಧಾನಿ ಭೇಟಿ ಬಳಿಕ ಕೇಂದ್ರದ ರೈಲು ಹಾಗೂ ಇಂಧನ ಸಚಿವರನ್ನು ಹೆಚ್.ಡಿ ಕುಮಾರಸ್ವಾಮಿ ಭೇಟಿಯಾಗಲಿದ್ದು, ರೈಲ್ವೆ ಯೋಜನೆಗಳು ಹಾಗೂ ಕಲ್ಲಿದ್ದಲು ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ.

  • ಕೃಷ್ಣಾದಲ್ಲಿ ಮುಖ್ಯಮಂತ್ರಿ ಹೆಚ್‍ಡಿಕೆ ಭೇಟಿ ಅವಕಾಶಕ್ಕೆ ಸಮಯ ನಿಗದಿ!

    ಕೃಷ್ಣಾದಲ್ಲಿ ಮುಖ್ಯಮಂತ್ರಿ ಹೆಚ್‍ಡಿಕೆ ಭೇಟಿ ಅವಕಾಶಕ್ಕೆ ಸಮಯ ನಿಗದಿ!

    ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯರಿರುತ್ತಾರೆ.

    ಅವರ ಜೆಪಿ ನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣಿಯಿಂದ ಬಡಾವಣೆಯ ಇತರ ನಿವಾಸಿಗಳಿಗೆ ಅಡಚಣಿಯಾಗುವುದರಿಂದ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಇಚ್ಚಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

    ಕುಮಾರಸ್ವಾಮಿಯವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಜನತಾ ದರ್ಶನವನ್ನು ಆರಂಭಿಸಿದ್ದರು. ಈಗ ಈ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಇದನ್ನು ಮುಂದುವರಿಸಿದ್ದಾರೆ.

    ರಾಜ್ಯದಲ್ಲಿ ಕುಮಾರಪರ್ವ ಆರಂಭ ಆಗಿದೆ. ಈ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮುಂದಿರೋ ಸವಾಲು ಶುಕ್ರವಾರ ಸದನದಲ್ಲಿ ವಿಶ್ವಾಸಮತ ಗೆಲ್ಲೋದು. ಈ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕಸರತ್ತು ಮುಂದುವರೆಸಿದ್ದಾರೆ. ಜೆಡಿಎಸ್ ಶಾಸಕರು ಇರೋ ರೆಸಾರ್ಟ್‍ಗೆ ತೆರಳಿದ ಕುಮಾರಸ್ವಾಮಿ ಅಲ್ಲೇ ರಾತ್ರಿ ಕಳೆದಿದ್ದಾರೆ.

    ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ ಅಂತಾ ಕಿವಿ ಮಾತು ಹೇಳಿದ್ದಾರೆ. ಅತ್ತ ಕಾಂಗ್ರೆಸ್ ಶಾಸಕರಿಗೂ ಇದೇ ರೀತಿಯ ಕಿವಿ ಮಾತನ್ನು ನಾಯಕರು ಹೇಳ್ತಿದ್ದಾರೆ. ನಿನ್ನೆ ಸೋನಿಯಾ ಮತ್ತು ರಾಹುಲ್ ಖುದ್ದು ಶಾಸಕರನ್ನು ಭೇಟಿ ಮಾಡಿ ನಮ್ಮೊಂದಿಗೆ ಇರಿ ಎಂದಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಂಜೆ ನಗರದ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

    ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಅನುರಿಸಬೇಕಾದ ತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇನ್ನು ಸ್ಪೀಕರ್ ಆಯ್ಕೆಗೆ ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ. ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಾಳೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

  • ಹುತಾತ್ಮ ಯೋಧರ ಕುಟುಂಬವನ್ನು ಹೊರಗೆ ನಿಲ್ಲಿಸಿ 1 ಗಂಟೆ ಕಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು!

    ಹುತಾತ್ಮ ಯೋಧರ ಕುಟುಂಬವನ್ನು ಹೊರಗೆ ನಿಲ್ಲಿಸಿ 1 ಗಂಟೆ ಕಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು!

    ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದಿದ್ದ ಯೋಧರೊಬ್ಬರ ಕುಟುಂಬವನ್ನು ಕಾಂಗ್ರೆಸ್ ಕಾರ್ಯಕರ್ತರು ಹೊರಗೆ ನಿಲ್ಲಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಹುತಾತ್ಮ ಯೋಧ ಜಾವೀದ್ ಹಾಗೂ ಅವರ ಕುಟುಂಬಸ್ಥರು ಜಿಲ್ಲೆಯ ಹರಿಹರ ತಾಲೂಕಿನವರು. ಮಂಗಳವಾರ ಜಾವೀದ್ ಅವರ ಕುಟುಂಬವನ್ನು ಭೇಟಿ ಮಾಡಿ ರಾಹುಲ್ ಗಾಂಧಿ ಸಾಂತ್ವಾನ ಹೇಳಿದ್ದರು. ಅಷ್ಟೇ ಅಲ್ಲದೇ ಇಂದು ಭೇಟಿಯಾಗುವಂತೆ ಕೂಡ ಹೇಳಿದ್ದರು.

    ಹೀಗಾಗಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದ ಯೋಧರ ಕುಟುಂಬಸ್ಥರಿಗೆ ಪೊಲೀಸ್ ಅಧಿಕಾರಿಗಳು ಭೇಟಿಯಾಗಲು ಪಾಸ್ ಕೇಳುತ್ತಿದ್ದು, ಇಬ್ಬರು ಪುಟ್ಟ ಮಕ್ಕಳು ಜೊತೆ ಯೋಧ ಜಾವೀದ್ ಅವರ ಮಡದಿ ಹಾಗೂ ಕುಟುಂಬಸ್ಥರು ರಾಗಾ ಭೇಟಿಗೆಂದು ಒಂದು ಗಂಟೆಯಿಂದ ಕಾಯುತ್ತಿದ್ದಾರೆ.

    ರಾಹುಲ್ ಗಾಂಧಿ ಯೋಧರ ಕುಟುಂಬವನ್ನು ಇಂದು ತಮ್ಮ ಗೆಸ್ಟ್ ಹೌಸ್‍ಗೆ ಬಂದು ಭೇಟಿಯಾಗುವಂತೆ ಹೇಳಿದ್ದರು. ಅಲ್ಲಿದ್ದ ಸಿಬ್ಬಂದಿ ಯೋಧ ಜಾವೀದ್ ಅವರ ಕುಟುಂಬಕ್ಕೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನೀಡಲಿಲ್ಲ. ಬೆಳಗ್ಗೆನೇ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದಿದ್ದರೂ, ಭೇಟಿಗೆ ಅವಕಾಶ ನೀಡಲಿಲ್ಲ ಎಂದು ಜಾವೀದ್ ಅವರ ಕುಟುಂಬದವರು ಕಾದುಕಾದು ವಾಪಸ್ಸಾಗಿದ್ದಾರೆ.

    ರಾಜಸ್ಥಾನದ ಪೋಖ್ರಾನ್‍ನಲ್ಲಿ ಯೋಧ ಜಾವೀದ್ ಹುತಾತ್ಮರಾಗಿದ್ದರು.

  • ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

    ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ ಹಾಗೂ ಪ್ರಮೋದಾ ದೇವಿ ಒಡೆಯರ್ ಅವರು ಗೌಪ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಯದುವೀರ್ ಒಡೆಯರ್ ಅವರನ್ನು ಬಿಟ್ಟು ಇಬ್ಬರೇ ಮಾತುಕತೆ ನಡೆಸಿದರು.

    ಅಮಿತ್ ಶಾ ಅವರು ತಮ್ಮ ಮಾತುಕತೆ ವೇಳೆ ಒಡೆಯರ್ ಅವರಿಗೆ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಬೇಕು. ಇದಕ್ಕಾಗಿ ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ರಾಜಕೀಯ ಪ್ರವೇಶಕ್ಕೆ ಒಪ್ಪಿಗೆ ಸೂಚಿಸಿದರೆ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಖಚಿತ ಭರವಸೆ ನೀಡಿದರು ಎಂಬುದಾಗಿ ಮೂಲಗಳು ತಿಳಿಸಿವೆ.

    ಅಮಿತ್ ಶಾ ಅವರ ರಾಜಕೀಯ ಪ್ರವೇಶದ ಮನವಿಯನ್ನು ಪ್ರಮೋದಾ ದೇವಿ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಒಡೆಯರ್ ಅವರು ಸಮಾನ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜಕೀಯ ಪ್ರವೇಶದ ಕುರಿತು ಆಸಕ್ತಿ ಇದೆ. ಆದರೆ ಇದು ಸೂಕ್ತ ಸಮಯವಲ್ಲ ಎಂದು ಅಮಿತ್ ಶಾ ಅವರ ಮನವಿಯನ್ನು ನಗುತ್ತಲೇ ತಿರಸ್ಕರಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ರಾಜಕೀಯ ಎಂಟ್ರಿ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಯದುವೀರ್ ಒಡೆಯರ್

    ಭೇಟಿ ವೇಳೆ ಯದುವೀರ್ ಪುತ್ರ ಆದ್ಯವೀರ್ ನನ್ನು ಶಾ ಮುದ್ದಾಡಿದರು. ರಾಜಮನೆತನದ ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

  • ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಜಮಿನ್ ಅವರಿಗೆ ಸ್ವಾಗತ ಕೋರಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಮೋದಿ ಅವರು, ನನ್ನ ಆತ್ಮೀಯ ಗೆಳೆಯನಿಗೆ ಭಾರತಕ್ಕೆ ಸ್ವಾಗತ, ನಿಮ್ಮ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    ಇಸ್ರೇಲ್ ಗೆ ಪ್ರಧಾನಿ ನರೇಂದ್ರ ಮೋದಿ ಜುಲೈ ನಲ್ಲಿ ಭೇಟಿ ನೀಡಿದ್ದಾಗ ಇಸ್ರೇಲ್ ಪ್ರಧಾನಿ ನೆತನ್ಯಾಹು ಸಹ ಶಿಷ್ಟಾಚಾರ ಬದಿಗಿರಿಸಿ ನಮ್ಮ ಪ್ರಧಾನಿಯನ್ನು ಟೆಲ್ ಅವೀವ್‍ ವಿಮಾನ ನಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಧರ್ಮ ಗುರು ಪೋಪ್ ಅವರಿಗೆ ಈ ಸ್ವಾಗ ನೀಡಿದ್ದರು. ಇಸ್ರೇಲ್ ಪ್ರಧಾನಿಯಿಂದ ಈ ವಿಶೇಷ ಸ್ವಾಗತ ಪಡೆದ ಮೂರನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದರು.

    ಆರು ದಿನಗಳ ಭಾರತದ ಭೇಟಿಗೆ ಆಗಮಿಸುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಅವರಿಗೆ ಪ್ರಧಾನಿ ಮೋದಿ ರಾತ್ರಿ ಔತಣ ಕೂಟ ಏರ್ಪಡಿಸಿದ್ದಾರೆ. ಅಲ್ಲದೇ ಇಸ್ರೇಲ್ ಪ್ರಧಾನಿ ತಾಜ್ ಮಹಲ್ ಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಸ್ರೇಲ್ ಪ್ರಧಾನಿ ಬೆಂಜಮಿನ್ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಭವನದ ಮುಂದೆ ಅಧಿಕೃತ ಸ್ವಾಗತ ಕಾರ್ಯಕ್ರಮ ನಡೆಯಿತು. ನಂತರ ಅವರು ತೀನ್ ಮೂರ್ತಿ ಸ್ಮಾರಕಕ್ಕೆ ಭೇಟಿ ನೀಡಿದರು. 100 ವರ್ಷಗಳ ಹಿಂದೆ ಭಾರತದ ಮೂರು ರೆಜಿಮೆಂಟ್ ಗಳು ಹೈಫಾ ಯುದ್ಧದಲ್ಲಿ ಭಾಗವಹಿಸಿದ್ದ ಸ್ಮರಣೆಗಾಗಿ ಈ ಸ್ಮಾರಕ ನಿರ್ಮಿಸಲಾಗಿದೆ. ಅಲ್ಲದೇ ಈ ವೇಳೆ ತೀನ್ ಮೂರ್ತಿ ಮಾರ್ಗ್ ಚೌಕಕ್ಕೆ ತೀನ್ ಮೂರ್ತಿ ಹೈಫಾ ಚೌಕ್ ಎಂದು ಮರುನಾಮಕರಣ ಮಾಡಲಾಯಿತು. ಇದನ್ನೂ ಓದಿ: ಟ್ರಂಪ್, ಪೋಪ್ ಬಳಿಕ ಇಸ್ರೇಲಿನಲ್ಲಿ ಮೋದಿಗೆ ಸಿಕ್ತು ‘ಆ’ ವಿಶೇಷ ಸ್ವಾಗತ: ವಿಡಿಯೋ ನೋಡಿ

    ಈ ಸ್ಮಾರಕದಲ್ಲಿ ಸ್ಥಾಪನೆ ಮಾಡಲಾಗಿರುವ ಮೂರು ಕಂಚಿನ ಪ್ರತಿಮೆಗಳು ಮೈಸೂರು, ಹೈದರಾಬಾದ್ ಮತ್ತು ಜೋಧ್ಪುರ್ ಪಡೆಗಳನ್ನು ಪ್ರತಿನಿಧಿಸುತ್ತವೆ. ಮೊದಲ ವಿಶ್ವ ಯುದ್ಧ ಸಮಯದಲ್ಲಿ ಇಸ್ರೇಲ್ ನ ಹೈಫಾ ನಗರವನ್ನು 1918, ಸೆಪ್ಟೆಂಬರ್ 23 ಬ್ರಿಟಿಷ್ ಒಕ್ಕೂಟ ಸೈನ್ಯ ಜಯಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೈನಿಕರ ತೋರಿದ ಸಾಧನೆಯ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿತ್ತು. ಹೈಫಾ ನಗರವನ್ನು ವಿಮೋಚನೆ ಮಾಡುವ ಸಮರದಲ್ಲಿ ಭಾರತದ 44 ಸೈನಿಕರು ತಮ್ಮ ಜೀವವನ್ನು ತ್ಯಾಗ ಮಾಡಿದ್ದರು.

    ಪ್ರಧಾನಿ ಮೋದಿ ಶಿಷ್ಟಾಚಾರ ಉಲ್ಲಂಘಿಸುವುದು ಇದೇ ಮೊದಲೆನಲ್ಲ. ಈ ಹಿಂದೆ 2015ರ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಆಗಮಿಸಿದ್ದ ವೇಳೆ ಮೋದಿ ವಿಮಾನ ನಿಲ್ದಾಣಕ್ಕೆ ಹೋಗಿ ಅವರನ್ನು ಸ್ವಾಗತಿಸಿದ್ದರು. ಇದಾದ ಬಳಿಕ ಬುಲೆಟ್ ರೈಲು ಯೋಜನೆ ಶಂಕುಸ್ಥಾಪನೆಗೆ ಆಗಮಿಸಿದ್ದ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರನ್ನು 2017ರ ಸೆಪ್ಟೆಂಬರ್ ನಲ್ಲಿ ಮೋದಿ ಗುಜರಾತ್ ನ ಅಹಮದಬಾದ್ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರಿದ್ದರು.

    ಭಾರತಕ್ಕೆ ಭೇಟಿ ನೀಡುತ್ತಿರುವ ಎರಡನೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಗಿದ್ದು, ಈ ಹಿಂದೆ 2003ರಲ್ಲಿ ಏರಿಯಲ್ ಶರೋನ್ ಭಾರತ ಪ್ರವಾಸ ಕೈಗೊಂಡಿದ್ದರು.

  • ಧರ್ಮಸ್ಥಳದ ಬಳಿಕ ಬೆಂಗ್ಳೂರಿಗೆ ಪ್ರಧಾನಿ- ಮೋದಿ ಬರೋ ರಸ್ತೆಯ ಗುಂಡಿಗಳೆಲ್ಲಾ ಮಾಯ

    ಧರ್ಮಸ್ಥಳದ ಬಳಿಕ ಬೆಂಗ್ಳೂರಿಗೆ ಪ್ರಧಾನಿ- ಮೋದಿ ಬರೋ ರಸ್ತೆಯ ಗುಂಡಿಗಳೆಲ್ಲಾ ಮಾಯ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದ್ರಿ ಅವರ ಕೃಪೆಯಿಂದ ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳೇ ಮಾಯವಾಗಿದ್ದು, ರಸ್ತೆಗಳೆಲ್ಲಾ ಥಳ ಥಳ ಎಂದು ಹೊಳೆಯುತ್ತಿವೆ.

    ರಸ್ತೆ ಗುಂಡಿಗಳಲ್ಲಿ ಬಿದ್ದು ಐವರು ಸತ್ತರೂ ತಲೆಕೆಡಿಸಿಕೊಳ್ಳಿಲ್ಲ. ಜನರು ಯಮಗುಂಡಿ ರಸ್ತೆಗಳನ್ನು ಮುಚ್ಚಿ ಅಂತಾ ಕೇಳಿಕೊಂಡರು ಸರ್ಕಾರಕ್ಕೆ ಕಾಳಜಿ ಇರಲಿಲ್ಲ. ಆದರೆ ಪ್ರಧಾನಿ ಮೋದಿ ಅವರು ನಗರಕ್ಕೆ ಭೇಟಿ ನೀಡುತ್ತಾರೆ ಎಂದು ಒಂದೇ ದಿನದಲ್ಲಿ ಯಮಗುಂಡಿಗಳಂತಹ ರಸ್ತೆಗಳೆಲ್ಲವನ್ನು ರಿಪೇರಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮೋದಿ ಅವರು ಬರುವ ರಸ್ತೆಗಳೆಲ್ಲಾ ಥಳ ಧಳ ಅಂತಾ ಹೊಳೆಯುತ್ತಿವೆ.

    ಪ್ರಧಾನಿ ಮೋದಿ ಹೆಚ್‍ಎಲ್‍ನಿಂದ ಪ್ಯಾಲೇಸ್ ಗ್ರೌಂಡ್‍ಗೆ ಬರಲಿದ್ದಾರೆ. ಹೀಗಾಗಿ ಎಂಜಿ ರೋಡ್, ಒಲ್ಡ್ ಟ್ರಿನಿಟಿ ರೋಡ್, ಡಿಕೆನ್ಸನ್ ರೋಡ್, ರಾಜಭವನ ರಸ್ತೆ, ಸ್ಯಾಂಕಿ ರೋಡ್‍ನಲ್ಲಿ ಇದ್ದಂತಹ ಯಮಗುಂಡಿಗಳು ಒಂದೇ ದಿನದಲ್ಲಿ ಮಾಯವಾಗಿವೆ.

    ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಆಗಮಿಸುತ್ತಿದ್ದು, ಮಂಜುನಾಥ ದೇವರಿಗೆ ಪೂಜೆಯನ್ನು ಸಲ್ಲಿಸಿ ನಂತರ ಮಧ್ಯಾಹ್ನ ಸುಮಾರು 3.30 ಕ್ಕೆ ಬೆಂಗಳೂರಿಗೆ ಬಜ್ಪೆಯಿಂದ ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಬಂದು ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಲಹರಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಸಂಜೆ ಸುಮಾರು 4.45 ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಧಾನಿ ಮೋದಿ ಅವರು ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಸಂಜೆ 5.10 ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಸಂಜೆ 6.20 ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

     

  • ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಗೌಪ್ಯ ಮಾತುಕತೆ!

    ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಗೌಪ್ಯ ಮಾತುಕತೆ!

    ಬಳ್ಳಾರಿ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಮಾಜಿ ಡಿವೈಎಸ್ಪಿ ಅಧಿಕಾರಿ ಅನುಪಮಾ ಶೆಣೈ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ರ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ.

    ಬಳ್ಳಾರಿಯ ಖಾಸಗಿ ಹೋಟೆಲ್‍ವೊಂದರಲ್ಲಿ ಭೇಟಿ ಕಾರ್ಯಕ್ರಮ ನಡೆದಿದ್ದು, ಶೆಣೈ ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಅನುಪಮಾ ಶೆಣೈ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಬಿಜೆಪಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಹೀಗಾಗಿ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಇಬ್ಬರು ನಾಯಕರು ಮಾಧ್ಯಮಗಳ ಕಣ್ಣು ತಪ್ಪಿಸಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಈ ಹಿಂದೆ ಪೊಲೀಸ್ ಕೆಲಸ ಮಾಡುವಾಗ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದ್ದರು, ಆದರೆ ಈಗ ರಾಜಕಾರಣಿಗಳ ಮೇಲೆ ಪೊಲೀಸ್ ಪ್ರಯೋಗ ಮಾಡೋಣ ಎಂದು ಶೆಣೈ ತಿಳಿಸಿದ್ದರು. ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷದ ಜೊತೆ ಸೇರುವುದಿಲ್ಲ. ಎಲ್ಲ ಅಂದು ಕೊಂಡಂತೆ ಆದರೆ ಬಳ್ಳಾರಿಯಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಲ್ಲೇ ನನಗೆ ಹೆಚ್ಚು ಜನರ ಬೆಂಬಲವಿದೆ. ಹಲವು ಪಕ್ಷಗಳ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಜನರ ದನಿಯಾಗುವ ಯಾವ ಪಕ್ಷವು ಇಲ್ಲ ಎಂದು ಹೇಳಿದ್ದರು.