ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ (Divorce) ಆಗಿದೆ. ಚಿರಂಜೀವಿ ಮನೆ ಮಗಳು ನಿಹಾರಿಕಾ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ. ಹಲವು ವರ್ಷಗಳ ಪ್ರೀತಿಗೆ ನಟಿ ಡಿವೋರ್ಸ್ ನೀಡುವ ಮೂಲಕ ಅಂತ್ಯ ಹಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪುತ್ರಿ ಶ್ರೀಜಾ ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬೆನ್ನಲ್ಲೇ ನಿಹಾರಿಕಾ (Niharika) ಕೂಡ ಡಿವೋರ್ಸ್ ಹಾದಿ ಹಿಡಿದಿದ್ದಾರೆ.
ಟಾಲಿವುಡ್ನ ನಟ ಚಿರಂಜೀವಿ ಅವರ ಸಹೋದರ, ನಟ ನಾಗ ಬಾಬು ಪುತ್ರಿ ನಿಹಾರಿಕಾ ಕೊನಿಡೆಲಾ ಅವರ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ತಿಳಿಸಿರಲಿಲ್ಲ. ಇದೀಗ ಸಿಕ್ಕಿರುವ ಅಧಿಕೃತ ಮಾಹಿತಿ ಪ್ರಕಾರ, ನಿಹಾರಿಕಾ- ಚೈತನ್ಯ ಜೊನ್ನಲಗಡ್ಡ ದಾಂಪತ್ಯ ಬದುಕು ಅಂತ್ಯಗೊಂಡಿದ್ದು, ಈಗಾಗಲೇ ಇಬ್ಬರಿಗೂ ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್ಗೆ ಮಂಜೂರು ನೀಡಿದೆ ಎನ್ನಲಾಗಿದೆ. ಆದರೆ ಈ ಡಿವೋರ್ಸ್ಗೆ ಕಾರಣವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ.
ನಟಿ ನಿಹಾರಿಕಾ ಅವರ ಮದುವೆಯು ಪ್ರಭಾಕರ್ ರಾವ್ ಅವರ ಪುತ್ರ ಚೈತನ್ಯ ಜೊನ್ನಲಗಡ್ಡ ಅವರ ಜೊತೆ 2020ರ ಡಿಸೆಂಬರ್ 9ರಂದು ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿನ ಒಬೆರಾಯ್ ಉದಯ್ ವಿಲಾಸ್ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಇಡೀ ಮೆಗಾ ಸ್ಟಾರ್ ಕುಟುಂಬವು ಮದುವೆಗೆ ಹಾಜರಾಗಿತ್ತು. ವೈಭವದಿಂದ ನಡೆದಿಂದ ಮದುವೆಯಲ್ಲಿ ಇಡೀ ಕುಟುಂಬವು ಹಾಡಿ ಕುಣಿದಿತ್ತು. ಆದರೆ ನಿಹಾರಿಕಾ ಅವರ ಮದುವೆ ಕೇವಲ ಎರಡೂವರೆ ವರ್ಷಗಳಲ್ಲಿ ಮುರಿದುಬಿದ್ದಿರುವುದು ಬೇಸರದ ವಿಷ್ಯವಾಗಿದೆ. ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?
ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ- ಚೈತನ್ಯ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ಇದೀಗ ವದಂತಿ ನಿಜವಾಗಿದೆ.
ಇದರ ಜೊತೆ ಮೆಗಾ ಫ್ಯಾಮಿಲಿ ನಟ ಪವನ್ ಕಲ್ಯಾಣ್ (Pawan Kalyan) ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ. ಆದರೆ ಈಗ ನೋಡಿದರೆ ಮೂರನೇ ಪತ್ನಿಗೂ ಡಿವೋರ್ಸ್ ನೀಡಿದ್ದಾರಾ ಎನ್ನುವ ಗುಮಾನಿ ಎದ್ದಿದೆ. ಒಟ್ನಲ್ಲಿ ಪವನ್ ಕಲ್ಯಾಣ್, ಶ್ರೀಜಾರಂತೆಯೇ ನಿಹಾರಿಕಾ ಕೂಡ ದಾಂಪತ್ಯದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]





ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ಚರಣ್ ಕೂಡ ತಮ್ಮ ಸ್ವಂತ ಪ್ರತಿಭೆಯಿಂದ ಟಾಲಿವುಡ್ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ಆರ್ಆರ್ಆರ್ ಸೂಪರ್ ಸಕ್ಸಸ್ನಲ್ಲಿರುವ ನಟ ರಾಮ್ ಚರಣ್ ಸದ್ಯ ಎದುರಾಗುತ್ತಿರುವ ಏಕೈಕ ಪ್ರಶ್ನೆ ಮಕ್ಕಳನ್ನ ಹೊಂದುವ ಕುರಿತು ಸಾಕಷ್ಟು ಕಡೆ ಕೇಳಲಾಗುತ್ತಿದೆ. ಇನ್ನು ಉಪಾಸನಾ ಅವರನ್ನ ಕೂಡ ಇದೇ ರೀತಿ ಪ್ರಶ್ನೀಸಲಾಗುತ್ತಿದೆ. ಇದನ್ನೂ ಓದಿ:










