Tag: Megastar Chiranjeevi

  • ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!

    ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!

    ಮೆಗಾಸ್ಟಾರ್ ಚಿರಂಜೀವಿಯವರ (Megastar Chiranjeevi) ಸ್ವಭಾವದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಅವರಿಗೆ ಒಮ್ಮೆ ಒಬ್ಬ ವ್ಯಕ್ತಿ ಇಷ್ಟವಾದರೆ, ಆ ಸ್ನೇಹವನ್ನು ತಮ್ಮ ಜೀವನದುದ್ದಕ್ಕೂ ಹೃದಯದಲ್ಲಿಟ್ಟುಕೊಂಡು ಕಾಪಾಡುತ್ತಾರೆ. ಅದಕ್ಕೆ ಉದಾಹರಣೆ ಎಂಬಂತೆ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ ಟಾಲಿವುಡ್ ನಿರ್ದೇಶಕರಿಗೆ ಅಚ್ಚರಿಯ ಗಿಫ್ಟ್‌ ಕೊಟ್ಟಿದ್ದಾರೆ.

     

    View this post on Instagram

     

    A post shared by Bobby (@director.bobby)

    ಚಿರಂಜೀವಿ ನಿರ್ದೇಶಕ ಬಾಬಿಯವರಿಗೆ (Bobby) ವಿಶೇಷ ಗಿಫ್ಟ್‌ ನೀಡಿದ್ದಾರೆ. ಈ ವಾಚಿನ ಬೆಲೆ ಸುಮಾರು 6-10 ಲಕ್ಷ ರೂ. ಮೌಲ್ಯದ್ದು ಎನ್ನಲಾಗಿದೆ. ಒಮೆಗಾ ಸೀಮಾಸ್ಟರ್ ವಾಚ್ ಇದಾಗಿದ್ದು, ಈ ವಿಚಾರವನ್ನು ನಿರ್ದೇಶಕ ಬಾಬಿಯವರೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಸ್ಟ್‌ನಲ್ಲಿ, ಚಿರಂಜೀವಿ ಗಾರು ಅವರಿಂದ ಒಂದು ಅಚ್ಚರಿಯ ಉಡುಗೊರೆ ಸಿಕ್ಕಿದೆ. ಈ ಉಡುಗೊರೆಗೆ ನಾನು ಬೆಲೆ ಕಟ್ಟಲು ಸಾಧ್ಯವಿಲ್ಲ. ಧನ್ಯವಾದಗಳು ಸಹೋದರ! ಈ ಕ್ಷಣವನ್ನು ನಾನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಕೈಯಲ್ಲಿ ವಾಚ್‌ ಧರಿಸಿರುವ ಫೋಟೋಗಳನ್ನು ಸಹ ಬಾಬಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ನೋಡಿದವರೆಲ್ಲರೂ, ಚಿರಂಜೀವಿಯ ಸ್ನೇಹಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಚಿರಂಜೀವಿ ಪ್ರಸ್ತುತ ವಿಶ್ವಂಭರ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಂಬಿಸಾರ ಖ್ಯಾತಿಯ ವಶಿಷ್ಠ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರ ಜೊತೆಗೆ ಚಿರಂಜೀವಿ ಬ್ಲಾಕ್‌ಬಸ್ಟರ್ ನಿರ್ದೇಶಕ ಅನಿಲ್ ರವಿಪುಡಿ ನಿರ್ದೇಶನದಲ್ಲಿ ಒಂದು ಸಿನಿಮಾ ಕೂಡ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ.

  • ‘ಆಪರೇಷನ್ ಸಿಂಧೂರ’ಗೆ ಜೈ ಹಿಂದ್ ಎಂದ ಮೆಗಾಸ್ಟಾರ್ ಚಿರಂಜೀವಿ

    ‘ಆಪರೇಷನ್ ಸಿಂಧೂರ’ಗೆ ಜೈ ಹಿಂದ್ ಎಂದ ಮೆಗಾಸ್ಟಾರ್ ಚಿರಂಜೀವಿ

    ಡರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ಏರ್‌ಸ್ಟೈಕ್ ಮಾಡಿದ ಭಾರತೀಯ ಸೇನೆ ಕಾರ್ಯವನ್ನು ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕೊಂಡಾಡಿದ್ದಾರೆ.

    ‘ಆಪರೇಷನ್ ಸಿಂಧೂರ’ಗೆ (Operation Sindoor) ಜೈ ಹಿಂದ್ ಎಂದು ಮೆಗಾಸ್ಟಾರ್ ಚಿರಂಜೀವಿ ಬರೆದುಕೊಂಡಿದ್ದಾರೆ. ಈ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಿದ ಭಾರತೀಯ ಸೇನೆಗೆ ಜೈ ಎಂದಿದ್ದಾರೆ. ಇದನ್ನೂ ಓದಿ:ಆಪರೇಷನ್ ಸಿಂಧೂರ: ಪಾಕ್‌ಗೆ ತಕ್ಕ ಪಾಠ ಕಲಿಸಿದ ಭಾರತಕ್ಕೆ ಜೈ ಎಂದ ಬಾಲಿವುಡ್

    ಭಾರತ್ ಮಾತಾ ಕಿ ಜೈ ಆಪರೇಷನ್ ಸಿಂಧೂರ ಎಂದು ಅನುಪಮ್ ಖೇರ್ (Anupam Kher) ಸೋಷಿಯ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಜೈ ಹಿಂದ್ ಸೇನಾ, ಭಾರತ್ ಮಾತಾ ಕಿ ಜೈ ಎಂದು ನಟ ರಿತೇಶ್ ದೇಶ್‌ಮುಖ್ ಬರೆದಿದ್ದಾರೆ. ಇದನ್ನೂ ಓದಿ:ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ

    ನಿಮ್ರತ್ ಕೌರ್ ಎಕ್ಸ್‌ನಲ್ಲಿ, ನಮ್ಮ ಪಡೆಗಳೊಂದಿಗೆ ಒಗ್ಗೂಡಿ. ಒಂದು ದೇಶ. ಒಂದು ಮಿಷನ್. ಜೈಹಿಂದ್, ಆಪರೇಷನ್ ಸಿಂಧೂರ್. ಜೈ ಹಿಂದ್ ಕಿ ಸೇನಾ ಎಂದು ಬರೆದುಕೊಂಡಿದ್ದಾರೆ.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

  • ರಿವೀಲ್ ಆಯ್ತು ‘ವಿಶ್ವಂಭರ’ ಚಿತ್ರದಲ್ಲಿನ ತ್ರಿಷಾ ಕೃಷ್ಣನ್ ಲುಕ್

    ರಿವೀಲ್ ಆಯ್ತು ‘ವಿಶ್ವಂಭರ’ ಚಿತ್ರದಲ್ಲಿನ ತ್ರಿಷಾ ಕೃಷ್ಣನ್ ಲುಕ್

    ಚಿರಂಜೀವಿ ನಟನೆಯ ‘ವಿಶ್ವಂಭರ’ (Vishambhara) ಸಿನಿಮಾದಲ್ಲಿ ತ್ರಿಷಾ ಕೃಷ್ಣನ್ (Trisha Krishnan) ನಾಯಕಿ ಎಂದು ಹರಿದಾಡುತ್ತಿದ್ದ ಸುದ್ದಿಗೆ ಇದೀಗ ಸ್ಪಷ್ಟನೆ ಸಿಕ್ಕಿದೆ. ಈ ಚಿತ್ರದಲ್ಲಿನ ತ್ರಿಷಾ ಪಾತ್ರದ ಲುಕ್ ಅನ್ನು ಚಿತ್ರತಂಡ ಮೇ 4ರಂದು ಅನಾವರಣ ಮಾಡಿದೆ. ಇದನ್ನೂ ಓದಿ:ಅಟ್ಲಿ ಜೊತೆಗಿನ ಚಿತ್ರಕ್ಕಾಗಿ ಅಲ್ಲು ಅರ್ಜುನ್ ತಯಾರಿ ಹೇಗಿದೆ?- ಹೊರಬಿತ್ತು ಅಪ್‌ಡೇಟ್

    ಇಂದು ತ್ರಿಷಾಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಫ್ಯಾನ್ಸ್‌ಗೆ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ‘ವಿಶ್ವಂಭರ’ ಸಿನಿಮಾದಲ್ಲಿ ತ್ರಿಷಾ ಯಾವ ಲುಕ್‌ನಲ್ಲಿ ಕಾಣುತ್ತಾರೆ ಎಂಬುದನ್ನು ಪೋಸ್ಟರ್ ಅನ್ನು ತಂಡ ರಿವೀಲ್ ಮಾಡಿದೆ. ಅವನಿ ಎಂಬ ಪಾತ್ರದಲ್ಲಿ ನಟಿಸಿರುವ ತ್ರಿಷಾ ಚೆಂದದ ಸೀರೆಯುಟ್ಟು ಕಂಗೊಳಿಸಿದ್ದಾರೆ. ನಟಿಯ ಲುಕ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಮತ್ತೆ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಜೋಡಿ?

     

    View this post on Instagram

     

    A post shared by UV Creations (@uvcreationsofficial)


    ಈ ಚಿತ್ರದಲ್ಲಿ ಚಿರಂಜೀವಿ(Chiranjeevi), ತ್ರಿಷಾ ಜೊತೆ ಕನ್ನಡತಿ ಆಶಿಕಾ ರಂಗನಾಥ್ (Ashika Ranganath) ಕೂಡ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಬಗ್ಗೆ ಚಿತ್ರತಂಡ ಅಪ್‌ಡೇಟ್ ನೀಡಲಿದೆ.

  • ಸೆಟ್ಟೇರಿತು ಚಿರಂಜೀವಿ 157ನೇ ಸಿನಿಮಾ- ಕ್ಲಾಪ್ ಮಾಡಿ ಶುಭ ಹಾರೈಸಿದ ವಿಕ್ಟರಿ ವೆಂಕಟೇಶ್

    ಸೆಟ್ಟೇರಿತು ಚಿರಂಜೀವಿ 157ನೇ ಸಿನಿಮಾ- ಕ್ಲಾಪ್ ಮಾಡಿ ಶುಭ ಹಾರೈಸಿದ ವಿಕ್ಟರಿ ವೆಂಕಟೇಶ್

    ಮೆಗಾಸ್ಟಾರ್ ಚಿರಂಜೀವಿ ಹೊಸ ಸಿನಿಮಾ ಸೆಟ್ಟೇರಿದೆ. ಬಹುನಿರೀಕ್ಷಿತ ವಿಶ್ವಂಭರ ಸಿನಿಮಾ ರಿಲೀಸ್‌ಗೂ ಮುನ್ನವೇ ಹೊಸ ಚಿತ್ರಕ್ಕೆ ಚಿರಂಜೀವಿ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಅವರ ಮುಂದಿನ ಸಿನಿಮಾಗೆ ಖ್ಯಾತ ನಿರ್ದೇಶಕ ಅನಿಲ್‌ ರವಿಪುಡಿ ನಿರ್ದೇಶನ ಮಾಡ್ತಿದ್ದಾರೆ. ಇದನ್ನೂ ಓದಿ:ವಿಜಯ್‌ ಸೇತುಪತಿಗೆ ‘ಅಪ್ಪು’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್- ಜೂನ್‌ನಿಂದ ಶೂಟಿಂಗ್‌ ಶುರು

    ಹೈದರಾಬಾದ್‌ನಲ್ಲಿ ಚಿತ್ರದ ಮುಹೂರ್ತ ಸಮಾರಂಭ ಜರುಗಿದೆ. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿ ಶುಭಕೋರಿದ್ದಾರೆ. ನಿರ್ಮಾಪಕ ಅಲ್ಲು ಅರವಿಂದ್ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಿರ್ದೇಶಕ ಕೆ. ರಾಘವೇಂದ್ರ ಫಸ್ಟ್ ಶಾಟ್ ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಿರ್ಮಾಪಕರಾದ ದಿಲ್ ರಾಜು ಹಾಗೂ ಸಿರೀಶ್ ಸ್ಕ್ರಿಪ್ಟ್ ಹಸ್ತಾಂತರಿಸಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕರಾದ ಬಾಬಿ, ವಸಿಷ್ಠ, ಶ್ರೀಕಾಂತ್ ಒಡೆಲಾ, ಖ್ಯಾತ ಕಥೆಗಾರ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ:ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

    ಚಿರಂಜೀವಿ ನಟನೆಯ 157ನೇ ಚಿತ್ರಕ್ಕೆ ನಿರ್ದೇಶಕ‌ ಅನಿಲ್ ರವಿಪುಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಮೆಗಾಸ್ಟಾರ್ ಅವರನ್ನು ಹೊಸ ಅವತಾರದಲ್ಲಿ ಪರಿಚಯಿಸಲು ರೆಡಿಯಾಗಿದ್ದಾರೆ. ಶಂಕರ್ ವರಪ್ರಸಾದ್ ಎಂಬ ಪಾತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ.‌‌ಅನಿಲ್ ರವಿಪುಡಿ ಮನರಂಜನೆಗೆ ಎಮೋಷನ್ ಟಚ್ ಕೊಟ್ಟು ಕಥೆ ರೂಪಿಸಿದ್ದಾರಂತೆ.

    ಶೈನ್ ಸ್ಕ್ರೀನ್‌ಗಳು ಮತ್ತು ಗೋಲ್ಡ್ ಬಾಕ್ಸ್ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಡಿ ಸಾಹು ಗರಪತಿ ಮತ್ತು ಸುಶ್ಮಿತಾ ಕೊನಿಡೇಲ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅರ್ಚನಾ ಪ್ರೆಸೆಂಟ್ ಮಾಡುತ್ತಿದ್ದಾರೆ. ಭೀಮ್ ಸಿಸಿರೋಲಿಯೋ ಸಂಗೀತ ನಿರ್ದೇಶನ, ತಮ್ಮಿರಾಜು ಸಂಕಲನ, ಸಮೀರ್ ರೆಡ್ಡಿ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ. ಶೀಘ್ರದಲ್ಲೇ ಚಿರಂಜೀವಿಯವರ 157 ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ.

  • ‘ಕಿಸ್ಸಿಕ್‌’ ಬೆಡಗಿ ಶ್ರೀಲೀಲಾಗೆ ಖುಲಾಯಿಸಿದ ಅದೃಷ್ಟ- ನಟಿಗೆ ಬಿಗ್‌ ಆಫರ್

    ‘ಕಿಸ್ಸಿಕ್‌’ ಬೆಡಗಿ ಶ್ರೀಲೀಲಾಗೆ ಖುಲಾಯಿಸಿದ ಅದೃಷ್ಟ- ನಟಿಗೆ ಬಿಗ್‌ ಆಫರ್

    ನ್ನಡದ ನಟಿ ಶ್ರೀಲೀಲಾ (Sreeleela) ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರಾಗಿ ಸದ್ದು ಮಾಡುತ್ತಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾದಲ್ಲಿ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಸದ್ಯ ತೆಲುಗಿನ ಸ್ಟಾರ್ ನಟ ಚಿರಂಜೀವಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:‘ಸಿಕಂದರ್’ ಸಿನಿಮಾ ರಿಮೇಕ್ ಎಂದವರಿಗೆ ತಕ್ಕ ಉತ್ತರ ಕೊಟ್ಟ ನಿರ್ದೇಶಕ

    ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟನೆಯ ‘ವಿಶ್ವಂಭರ’ ಸಿನಿಮಾದ ಸೆಟ್‌ಗೆ ಶ್ರೀಲೀಲಾ ಭೇಟಿ ನೀಡಿದ್ದಾರೆ. ಈ ವೇಳೆ, ಅವರಿಗೆ ದುರ್ಗಾ ದೇವಿಯ ಮುಖವಿರುವ ಬೆಳ್ಳಿ ಶಂಖವನ್ನು ಗಿಫ್ಟ್ ಆಗಿ ಚಿರಂಜೀವಿ ನೀಡಿದ್ದಾರೆ. ಈ ಬೆನ್ನಲ್ಲೇ ಶ್ರೀಲೀಲಾ ಬಗ್ಗೆ ಗುಸು ಗುಸು ಶುರುವಾಗಿದೆ. ಶ್ರೀಲೀಲಾ ಅವರು ‘ವಿಶ್ವಂಭರ’ ಚಿತ್ರದಲ್ಲಿ ನಟಿಸುತ್ತಿದ್ದಾರಾ? ಅಥವಾ ಸ್ಪೆಷಲ್‌ ಹಾಡಿಗೆ ಏನಾದರೂ ಹೆಜ್ಜೆ ಹಾಕಲಿದ್ದಾರಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.

    ಈಗಾಗಲೇ ಅಲ್ಲು ಅರ್ಜುನ್ ಜೊತೆ ‘ಪುಷ್ಪ 2’ ಸಿನಿಮಾದಲ್ಲಿ ಸೊಂಟ ಬಳುಕಿಸಿ ಸೈ ಎನಿಸಿಕೊಂಡಿದ್ದಾರೆ. ‘ವಿಶ್ವಂಭರ’ ಚಿತ್ರದ ಸೆಟ್‌ನಲ್ಲಿ ಶ್ರೀಲೀಲಾ ಕಾಣಿಸಿಕೊಂಡಿರೋದು ಹಾಟ್‌ ಟಾಪಿಕ್‌ ಆಗಿದೆ. ಇನ್ನೂ ಅವರು ಈ ಸಿನಿಮಾದ ಭಾಗವಾಗಿದ್ದಾರಾ? ಎಂಬುದನ್ನು ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

    ಇನ್ನೂ ನಿತಿನ್ ಜೊತೆ ‘ರಾಬಿನ್‌ಹುಡ್’, ಪವನ್ ಕಲ್ಯಾಣ್ ಜೊತೆ ‘ಉಸ್ತಾದ್ ಭಗತ್ ಸಿಂಗ್’, ರವಿತೇಜ ಜೊತೆ ‘ಮಾಸ್ ಜಾತ್ರಾ’, ಬಾಲಿವುಡ್‌ನಲ್ಲಿ ಸೈಫ್ ಅಲಿ ಖಾನ್‌ ಪುತ್ರ ಇಬ್ರಾಹಿಂಗೆ ನಾಯಕಿಯಾಗಿ ಹೊಸ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಶ್ರೀಲೀಲಾ ಕೈಯಲ್ಲಿವೆ.

  • ‘ಪುಷ್ಪ 2’ ಬೆಡಗಿ ಶ್ರೀಲೀಲಾಗೆ ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್

    ‘ಪುಷ್ಪ 2’ ಬೆಡಗಿ ಶ್ರೀಲೀಲಾಗೆ ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್

    ನ್ನಡತಿ ಶ್ರೀಲೀಲಾ (Sreeleela) ಸದ್ಯ ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಶ್ರೀಲೀಲಾಗೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕಡೆಯಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಇದನ್ನೂ ಓದಿ:‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ನಿನ್ನೆ (ಮಾ.8) ಮಹಿಳಾ ದಿನಾಚರಣೆಯ ಪ್ರಯುಕ್ತ ಚಿರಂಜೀವಿ ಅವರು ‘ವಿಶ್ವಂಭರ’ (Vishambhara) ಸಿನಿಮಾದ ಸೆಟ್‌ನಲ್ಲಿದ್ದರು. ಈ ವೇಳೆ, ಸೆಟ್‌ನಲ್ಲಿ ಶ್ರೀಲೀಲಾಗೆ ದುಬಾರಿ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ದುರ್ಗಾ ದೇವಿಯ ಮುಖವಿರುವ ಬೆಳ್ಳಿ ಶಂಖವನ್ನು ನಟಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಅದಕ್ಕೆ ಶ್ರೀಲೀಲಾ ಕೂಡ ಸೋಶಿಯಲ್ ಮೀಡಿಯಾದಲ್ಲಿ ಚಿರಂಜೀವಿ ಜೊತೆಗಿನ ಫೋಟೋ ಶೇರ್ ಮಾಡಿ ಥ್ಯಾಂಕ್ಯೂ ಎಂದಿದ್ದಾರೆ.

    ಇನ್ನೂ ‘ವಿಶ್ವಂಭರ’ ಸಿನಿಮಾ ಸೆಟ್‌ನಲ್ಲಿ ಪಿಂಕ್ ಕಲರ್ ಡ್ರೆಸ್‌ನಲ್ಲಿ ಶ್ರೀಲೀಲಾ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಚರ್ಚೆಗೆ ಗ್ರಾಸವಾಗಿದೆ. ಅವರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಈ ಚಿತ್ರವು ಮೇ 9ರಂದು ರಿಲೀಸ್ ಆಗಲಿದ್ದು, ಅಂದು ಶ್ರೀಲೀಲಾ ಇರುವಿಕೆಯ ಬಗ್ಗೆ ಉತ್ತರ ಸಿಗಲಿದೆ.

    ಇನ್ನೂ ನಿತಿನ್ ಜೊತೆ ‘ರಾಬಿನ್‌ಹುಡ್’, ಪವನ್ ಕಲ್ಯಾಣ್ ಜೊತೆ ‘ಉಸ್ತಾದ್ ಭಗತ್ ಸಿಂಗ್’, ರವಿತೇಜ ಜೊತೆ ‘ಮಾಸ್ ಜಾತ್ರಾ’, ಬಾಲಿವುಡ್‌ನಲ್ಲಿ ಸೈಫ್ ಅಲಿ ಖಾನ್‌ಗೆ ನಾಯಕಿಯಾಗಿ ಹೊಸ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಶ್ರೀಲೀಲಾ ಕೈಯಲ್ಲಿವೆ.

  • ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ (Vishwambhara) ಸಿನಿಮಾ ರಿಲೀಸ್‌ಗೂ ಮುನ್ನವೇ ಹೊಸ ಸಿನಿಮಾದ ಬಗ್ಗೆ ಬಿಗ್ ನ್ಯೂಸ್ ಸಿಕ್ಕಿದೆ. ‘ಭಗವಂತ ಕೇಸರಿ’ ಡೈರೆಕ್ಟರ್ ಅನಿಲ್ ರವಿಪುಡಿ (Anil Ravipudi) ಜೊತೆ ಸಿನಿಮಾ ಮಾಡಲು ಚಿರಂಜೀವಿ ಕೈಜೋಡಿಸಿದ್ದಾರೆ.

    ಸಿನಿಮಾ ಸಮಾರಂಭವೊಂದರಲ್ಲಿ ಮುಂದಿನ ಸಿನಿಮಾ ಬಗ್ಗೆ ಚಿರಂಜೀವಿ ಮಾತನಾಡಿ, ಅನಿಲ್ ರವಿಪುಡಿ ಜೊತೆ ಸಿನಿಮಾ ಮಾಡುತ್ತಿರೋದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ವಿಭಿನ್ನ ಕಥೆಯಲ್ಲಿ ಅವರು ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ಬಿಗ್‌ ಬಾಸ್‌’ ಖ್ಯಾತಿಯ ರಂಜಿತ್‌

    ಇತ್ತೀಚಿನ ದಿನಗಳಲ್ಲಿ ಚಿರಂಜೀವಿ ನಟಿಸುತ್ತಿರುವ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗುತ್ತಿದೆ. ಹಾಗಂತ ಫ್ಯಾನ್ಸ್‌ಗೆ ಅವರ ಮೇಲಿರುವ ಕ್ರೇಜ್ ಹಾಗೂ ಅವರಿಗಿರುವ ಬೇಡಿಕೆ ಕಮ್ಮಿಯಾಗಿಲ್ಲ. ಬಿಗ್ ಬಜೆಟ್ ಸಿನಿಮಾಗಳೇ ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರು ಸ್ಟಾರ್ ನಿರ್ದೇಶಕ ಅನಿಲ್ ರವಿಪುಡಿ ಚಿತ್ರಕ್ಕೆ ಚಿರಂಜೀವಿ ಓಕೆ ಎಂದಿದ್ದಾರೆ.

    ಅಂದಹಾಗೆ, ಚಿರಂಜೀವಿ ನಟನೆಯ ಬಹುನಿರೀಕ್ಷಿತ ‘ವಿಶ್ವಂಭರ’ ಚಿತ್ರವು ಮೇ 9ರಂದು ರಿಲೀಸ್ ಆಗಲಿದೆ. ಸಿನಿಮಾದಲ್ಲಿ ತ್ರಿಷಾ ಕೃಷ್ಣನ್, ಮೀನಾಕ್ಷಿ, ಆಶಿಕಾ ರಂಗನಾಥ್, ರಾವ್ ರಮೇಶ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಇನ್ನೂ ಈ ಸಿನಿಮಾದ ಜೊತೆ ನಾನಿ ನಿರ್ಮಾಣದ ಸಿನಿಮಾ ಕೂಡ ಚಿರಂಜೀವಿ ಒಪ್ಪಿಕೊಂಡಿದ್ದಾರೆ.

  • ನಾನಿ ನಿರ್ಮಾಣದ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಮೆಗಾಸ್ಟಾರ್

    ನಾನಿ ನಿರ್ಮಾಣದ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಮೆಗಾಸ್ಟಾರ್

    ನ್ಯಾಚುರಲ್ ನಾನಿ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ನಟನೆಯ ಡೈರೆಕ್ಟರ್ ಶ್ರೀಕಾಂತ್ ಒಡೆಲ ನಿರ್ದೇಶನದ ಸಿನಿಮಾಗೆ ನಾನಿ (Nani) ಸಾಥ್ ನೀಡುತ್ತಿದ್ದಾರೆ. ಇದೀಗ ಚಿತ್ರತಂಡ ಚಿರಂಜೀವಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್ ಮಾಡಿದೆ. ಇದನ್ನೂ ಓದಿ:ಮಾದಕ ವ್ಯಸನಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಉಪೇಂದ್ರ

    ಮೆಗಾಸ್ಟಾರ್ ಚಿರಂಜೀವಿ ಮತ್ತು ನಿರ್ದೇಶಕ ಶ್ರೀಕಾಂತ್ ಒಡೆಲ (Srikanth Odela) ಇಬ್ಬರೂ ಕೈಯನ್ನು ರಕ್ತದಲ್ಲಿ ಅದ್ದಿ ಪರಸ್ಪರ ಕೈ ಹಿಡಿದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ. ‘ಇದು ರಕ್ತದಲ್ಲಿ ಮಾಡಿದ ಪ್ರತಿಜ್ಞೆ’ ಎಂಬ ಅಡಿಬರಹ ಕೊಟ್ಟಿದ್ದಾರೆ. ಪೋಸ್ಟರ್‌ನಲ್ಲಿ ‘ಇವನಿಗೆ ಶಾಂತಿ ಸಿಗುವುದು ಹಿಂಸೆಯಲ್ಲೇ’ ಎಂಬ ಸಾಲು ಬರೆಯಲಾಗಿದೆ. ರಕ್ತದ ಮೆತ್ತಿದ ಕೈನ ಚಿತ್ರ ಪೋಸ್ಟರ್‌ನಲ್ಲಿದೆ.

     

    View this post on Instagram

     

    A post shared by Nani (@nameisnani)

    ಇನ್ನೂ ಚಿರಂಜೀವಿ ಎಂದೂ ನಟಿಸಿರದ ಪವರ್ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ನಾನಿ ನಿರ್ಮಾಣ ಮಾಡುವುದರ ಜೊತೆಗೆ ಸಣ್ಣ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಪಕ್ಕಾ ವಯಲೆನ್ಸ್ ಕತೆಯನ್ನು ಹೇಳೋಕೆ ಮುಂದಾಗಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಡಾಲಿ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಸಾಥ್- ‘ಜೀಬ್ರಾ’ ಟ್ರೈಲರ್‌ ಔಟ್

    ಡಾಲಿ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಸಾಥ್- ‘ಜೀಬ್ರಾ’ ಟ್ರೈಲರ್‌ ಔಟ್

    ತೆಲುಗಿನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ‘ಜೀಬ್ರಾ’ (Zebra) ಬಿಡುಗಡೆಗೆ ಸಜ್ಜಾಗಿದೆ. ಹೈದ್ರಾಬಾದ್‌ನಲ್ಲಿ ‌’ಜೀಬ್ರಾ’ ಟ್ರೈಲರ್ ಕಾರ್ಯಕ್ರಮ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಡಾಲಿ ಧನಂಜಯ (Daali Dhananjay) ಹಾಗೂ ಸತ್ಯದೇವ್ (Satyadev) ಚಿತ್ರಕ್ಕೆ ಸಾಥ್ ಕೊಟ್ಟರು. ‘ಜೀಬ್ರಾ’ ಟ್ರೈಲರ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭಾಷಯ ತಿಳಿಸಿದ್ದಾರೆ.

    ‘ಜೀಬ್ರಾ’ ಸಿನಿಮಾ ಸೂಪರ್ ಹಿಟ್ ಆಗಲಿ ಇಡೀ ತಂಡಕ್ಕೆ ಒಳ್ಳೆಯದಾಗಲಿ, ಇನ್ನೂ ಡಾಲಿ ಧನಂಜಯ ಕನ್ನಡದಲ್ಲಿ ಅದ್ಭುತ ನಟ. ತೆಲುಗಿನಲ್ಲಿ ಸ್ಟಾರ್ ಆಗ್ತಾರೆ ಎಂದು ಡಾಲಿಯನ್ನು ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕೊಂಡಾಡಿದ್ದಾರೆ. ಇದನ್ನೂ ಓದಿ:BBK 11: ಹನುಮಂತನ ಪ್ರಪೋಸ್‌ಗೆ ನಾಚಿ ನೀರಾದ ಚಾರು

    ನಾನು ಸ್ನೇಹ ಜೀವಿ ನೀನು ಸ್ನೇಹ ಜೀವಿ ಅಂತಾ ಸಿಪಾಯಿ ಸಿನಿಮಾ ಹಾಡು ಹೇಳಿ ಚಿರಂಜೀವಿಗೆ ನಮಸ್ಕಾರ ಮಾಡಿ ಡಾಲಿ ಧನಂಜಯ್ ಮಾತನಾಡಿ, ಜೀಬ್ರಾ ಕನ್ನಡಕ್ಕೆ ತುಂಬಾ ಚೆನ್ನಾಗಿ ಡಬ್ ಮಾಡಲಾಗಿದೆ. ನಮ್ಮ ಡೇರ್ ಡೆವಿಲ್ ಮುಸ್ತಫಾ ಸಿನಿಮಾ ತಂಡ ಡಬ್ ಮಾಡಿದೆ.

     

    View this post on Instagram

     

    A post shared by Satyadev (@actorsatyadev)

    ‘ಜೀಬ್ರಾ’ ಕ್ರೈಂ ಥ್ರಿಲ್ಲರ್ ಸಿನಿಮಾ. ನೈಜ ಘಟನೆಗಳಿಂದ ಪ್ರೇರಣೆಗೊಂಡು ಕತೆ ಹೆಣೆಯಲಾಗಿದೆ. ಬ್ಯಾಂಕ್ ಫ್ರಾಡ್ ಸುತ್ತಾ ಚಿತ್ರದ ಕತೆ ಸುತ್ತಲಿದೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಚಿತ್ರದಲ್ಲಿ ಸತ್ಯದೇವ್ ಹೀರೋ ಆಗಿ ನಟಿಸಿದ್ದಾರೆ. ಆದಿ ಎಂಬ ಖಡಕ್ ರೋಲ್‌ನಲ್ಲಿ ಧನಂಜಯ್ ಅಬ್ಬರಿಸಿದ್ದಾರೆ. ಧನಂಜಯ ಅಭಿನಯದ 26ನೇ ಸಿನಿಮಾ ಜೀಬ್ರಾಗೆ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪ್ರಿಯಾ ಭವಾನಿ ಶಂಕರ್ ಹಾಗೂ ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರದಲ್ಲಿಯೇ ಇದ್ದಾರೆ. ಸತ್ಯ ಅಕಾಲ್ ಮತ್ತು ಸುನಿಲ್ ಚಿತ್ರದ ಇತರರು ತಾರಾಬಳಗದಲ್ಲಿದ್ದಾರೆ.

     

    View this post on Instagram

     

    A post shared by Daali Dhananjaya (@dhananjaya_ka)

    ಎಸ್‌. ಎನ್‌. ರೆಡ್ಡಿ, ಎಸ್‌. ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್‌ ಸುಂದರಂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ಚಿತ್ರದ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ, ಮೀರಾಖ್ ಸಂಭಾಷಣೆ ಸಿನಿಮಾಗಿದೆ.

  • ಊಟಿಯಲ್ಲಿ 16 ಕೋಟಿ ಮೌಲ್ಯದ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರಂಜೀವಿ

    ಊಟಿಯಲ್ಲಿ 16 ಕೋಟಿ ಮೌಲ್ಯದ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರಂಜೀವಿ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರು ಕಳೆದ 30 ವರ್ಷಗಳಿಂದ ತೆಲುಗು ಇಂಡಸ್ಟ್ರಿಯಲ್ಲಿ ಸಾಕಷ್ಟು ಉತ್ತಮ ಸಿನಿಮಾಗಳನ್ನು ಕೊಡುವ ಮೂಲಕ ಹೆಸರು ಸಂಪಾದಿಸಿದ್ದಾರೆ. ಹಲವು ಕೋಟಿ ಆಸ್ತಿಯನ್ನು ಸಂಪಾದಿಸಿದ್ದಾರೆ. ಇದೀಗ ಅವರು 16 ಕೋಟಿ ರೂ. ಮೌಲ್ಯದ ಪ್ರಾಪಟಿಯನ್ನು ಊಟಿಯಲ್ಲಿ ಖರೀದಿಸಿದ್ದಾರೆ.

    ಚಿರಂಜೀವಿ ಅವರು ಈಗಾಗಲೇ ಹೈದರಾಬಾದ್, ಬೆಂಗಳೂರು ಸೇರಿದಂತೆ ಹಲವೆಡೆ ಆಸ್ತಿ ಹೊಂದಿದ್ದಾರೆ. ಇದೀಗ ಅವರು ಊಟಿಯ (Ooty) ಗುಡ್ಡದ ಪ್ರದೇಶದಲ್ಲಿ ನಟ 6 ಎಕರೆ ಜಾಗವನ್ನು ಖರೀದಿಸಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಈ ಜಾಗಕ್ಕೆ ಅವರು 16 ಕೋಟಿ ರೂ. ನೀಡಿದ್ದಾರೆ. ಇದನ್ನೂ ಓದಿ:‌’ಸಿಂಗಂ ಅಗೇನ್’ ಟ್ರೈಲರ್ ಔಟ್- ಸೀತೆ ಪಾತ್ರದಲ್ಲಿ ಕರೀನಾ ಕಪೂರ್

    ಅಂದಹಾಗೆ, ‘ವಿಶ್ವಾಂಭರ’ ಸಿನಿಮಾದಲ್ಲಿ ಚಿರಂಜೀವಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ತ್ರಿಷಾ, ಆಶಿಕಾ ರಂಗನಾಥ್ ಸೇರಿದಂತೆ ಹಲವು ನಟಿಸುತ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ.