Tag: Megastar Chiranjeevi

  • 24 ಸಾವಿರ ಡ್ಯಾನ್ಸ್‌ ಸ್ಟೆಪ್ಸ್‌ ಮಾಡಿದ ಹೆಗ್ಗಳಿಕೆ- ಮೆಗಾಸ್ಟಾರ್ ಚಿರಂಜೀವಿ ಗಿನ್ನಿಸ್ ದಾಖಲೆ

    24 ಸಾವಿರ ಡ್ಯಾನ್ಸ್‌ ಸ್ಟೆಪ್ಸ್‌ ಮಾಡಿದ ಹೆಗ್ಗಳಿಕೆ- ಮೆಗಾಸ್ಟಾರ್ ಚಿರಂಜೀವಿ ಗಿನ್ನಿಸ್ ದಾಖಲೆ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆ.22ರಂದು ಅವರಿಗೆ ಭಾರತೀಯ ಚಿತ್ರರಂಗದ ‘ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ. ಡ್ಯಾನ್ಸ್‌ ವಿಚಾರದಲ್ಲಿ‌ ಗಿನ್ನಿಸ್ ದಾಖಲೆ ಬರೆದ ಚಿರಂಜೀವಿಗೆ ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

    69 ವರ್ಷ ವಯಸ್ಸಿನ ಚಿರಂಜೀವಿಯವರು ತನ್ನ 46 ವರ್ಷಗಳ ಅವಧಿಯಲ್ಲಿ 156 ಸಿನಿಮಾಗಳಲ್ಲಿ 537 ಹಾಡುಗಳಲ್ಲಿ 24000 ಡ್ಯಾನ್ಸ್‌ ಸ್ಟೆಪ್ಸ್‌ ಹಾಕಿದ್ದಾರೆ. ಈ ವಿಚಾರವಾಗಿ ವಿಶೇಷ ಗೌರವವನ್ನು ಪಡೆದಿದ್ದಾರೆ.

    ಇನ್ನೂ ನಾನು ಇಲ್ಲಿಗೆ ಬಂದಿರೋದು ಸಂತೋಷವಾಗಿದೆ. ಚಿರಂಜೀವಿಯವರ ಅಭಿಮಾನಿಗಳನ್ನು ನೋಡಲು ಸಂತೋಷವಾಗುತ್ತಿದೆ, ಎಲ್ಲರಿಗೂ ಧನ್ಯವಾದಗಳು. ನಾನು ಕೂಡ ಅವರ ದೊಡ್ಡ ಅಭಿಮಾನಿ ಎಂದು ಆಮೀರ್ ಹೇಳಿದ್ದಾರೆ.

    ಈ ಕಾರ್ಯಕ್ರಮಕ್ಕೆ ಅಶ್ವಿನಿ ದತ್ತ, ಬಿ. ಗೋಪಾಲ್, ಅಲ್ಲು ಅರವಿಂದ್, ಸುರೇಶ್ ಬಾಬು, ರಾಘವೇಂದ್ರ ರಾವ್, ಬಾಬಿ, ಗುಣಶೇಖರ್, ವಸಿಷ್ಠ, ಸುಷ್ಮಿತಾ, ವರುಣ್ ತೇಜ್, ವೈಷ್ಣವ್ ತೇಜ್ ಮುಂತಾದವರು ಆಗಮಿಸಿದ್ದರು.

  • ಪತ್ನಿ ಜೊತೆ ಮೆಗಾಸ್ಟಾರ್ ಚಿರಂಜೀವಿ ಟೆಂಪಲ್ ರನ್

    ಪತ್ನಿ ಜೊತೆ ಮೆಗಾಸ್ಟಾರ್ ಚಿರಂಜೀವಿ ಟೆಂಪಲ್ ರನ್

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರು ಇಂದು (ಆ.22) 69ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪತ್ನಿ ಸುರೇಖಾ (Wife Surekha) ಜೊತೆ ತಿರುಪತಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:Kantara Chapter 1: ಕಳರಿಪಯಟ್ಟು ಕಲಿಕೆಯ ಫೋಟೋ ಹಂಚಿಕೊಂಡ ರಿಷಬ್‌ ಶೆಟ್ಟಿ

    ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಚಿರಂಜೀವಿ ಅವರು ತಿರುಪತಿ ಸನ್ನಿಧಿಗೆ ಭೇಟಿ ಕೊಡುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ನಟನ ಹುಟ್ಟುಹಬ್ಬದ ಹಿನ್ನೆಲೆ ‘ವಿಶ್ವಾಂಭರ’ (Vishwambhara) ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮೆಗಾ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದೆ ಚಿತ್ರತಂಡ.

    ತ್ರಿಶೂಲ ಹಿಡಿದು ಸಖತ್ ಮಾಸ್ ಲುಕ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಜೊತೆಗೆ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಾಗಿದೆ.

    ಅಂದಹಾಗೆ, ‘ವಿಶ್ವಾಂಭರ’ ಸಿನಿಮಾದಲ್ಲಿ  ಚಿರಂಜೀವಿ ಜೊತೆ ತ್ರಿಷಾ, ಮೀನಾಕ್ಷಿ ಚೌಧರಿ, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮುಂದಿನ ವರ್ಷ ಜ.25ರಂದು ಸಿನಿಮಾ ಬಿಡುಗಡೆಯಾಗಲಿದೆ.

  • ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್‌ ಮಾಡಿದ ಶ್ರೀಲೀಲಾ

    ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್‌ ಮಾಡಿದ ಶ್ರೀಲೀಲಾ

    ನ್ನಡದ ನಟಿ ಶ್ರೀಲೀಲಾ (Sreeleela) ಸದ್ಯ ತೆಲುಗಿನಲ್ಲಿ ಬೇಡಿಕೆಯ ನಾಯಕಿಯಾಗಿದ್ದಾರೆ. ನಟನೆ ಮತ್ತು ಡ್ಯಾನ್ಸ್‌ನಲ್ಲಿ ಸೈ ಎನಿಸಿಕೊಂಡಿರುವ ನಟಿ ಈಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ನಟನೆಯ ಸಿನಿಮಾವನ್ನು ‘ಕಿಸ್’ ಬೆಡಗಿ ರಿಜೆಕ್ಟ್ ಮಾಡಿರೋದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

    ‘ವಿಶ್ವಾಂಭರ’ ಸಿನಿಮಾದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಆಶಿಕಾ ರಂಗನಾಥ್ (Ashika Ranganath) ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಬಿಗ್ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲು ಶ್ರೀಲೀಲಾರನ್ನು ಕೇಳಿದ್ರಂತೆ ಚಿತ್ರತಂಡ. ಆದರೆ ನಟಿ ನೋ ಎಂದಿದ್ದಾರೆ. ದುಬಾರಿ ಸಂಭಾವನೆ ಕೊಡುತ್ತೇವೆ ಎಂದರು ಶ್ರೀಲೀಲಾ, ಈ ಪಾಜೆಕ್ಟ್ ಅನ್ನು ತಾನು ಮಾಡಲ್ಲ ಅಂತ ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಶ್ರೀಲೀಲಾರ ನಟನೆ ಮತ್ತು ಡ್ಯಾನ್ಸ್‌ಗೆ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಯಾವುದೇ ಪಾತ್ರ ಮತ್ತು ಡ್ಯಾನ್ಸ್ ಸ್ಟೆಪ್ಸ್ ಕೊಟ್ರು ಹೀರೋಗೆ ಠಕ್ಕರ್ ಕೊಟ್ಟು ನಟಿ ಕುಣಿಯುತ್ತಾರೆ. ಹಾಗಾಗಿ ಸಿನಿಮಾಗಳ ಜೊತೆ ಅವರಿಗೆ ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲು ಕೂಡ ಅವಕಾಶಗಳು ಅರಸಿ ಬರುತ್ತಿವೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದಕ್ಕೆ ಹೆಮ್ಮೆ ಇದೆ- ನಿತ್ಯಾ ಮೆನನ್ ಫಸ್ಟ್ ರಿಯಾಕ್ಷನ್

    ಅಂದಹಾಗೆ, ಬಾಲಿವುಡ್‌ನಲ್ಲಿ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾಗೆ (Siddarth Malhotra) ಹೀರೋಯಿನ್ ಆಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ. ಅಕ್ಟೋಬರ್‌ನಿಂದ ಶೂಟಿಂಗ್ ಶುರುವಾಗಲಿದೆ. ಇದರೊಂದಿಗೆ ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ, ಪವನ್ ಕಲ್ಯಾಣ್ ಜೊತೆಗಿನ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಿವೆ.

  • ವಯನಾಡು ಭೂಕುಸಿತ ದುರಂತ: 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್

    ವಯನಾಡು ಭೂಕುಸಿತ ದುರಂತ: 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್

    ಕೇರಳದ ವಯನಾಡಿನಲ್ಲಿ ಸಂಭವಿಸಿದ (Wayanad Landslide) ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮತ್ತು ರಾಮ್ ಚರಣ್ (Ram Charan) ಮುಂದಾಗಿದ್ದಾರೆ.

    ವಯನಾಡು ಭೂಕುಸಿತ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಚಿರಂಜೀವಿ ಮತ್ತು ರಾಮ್ ಚರಣ್ ಕೇರಳದ ಸಿಎಂ ಫಂಡ್‌ಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ:ಜಾನ್ವಿ ಕಪೂರ್‌ಗೆ ಮತ್ತೆ ಸೋಲು- ಬಾಕ್ಸಾಫೀಸ್‌ನಲ್ಲಿ ‘ಉಲಾಜ್’ ಕಳಪೆ ಕಲೆಕ್ಷನ್

    ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ವಿಕೋಪಕ್ಕೆ ನೂರಾರು ಜನರು ಪ್ರಾಣ ಕಳೆದುಕೊಂಡಿದಕ್ಕೆ ತೀವ್ರ ನೋವಾಗಿದೆ. ವಯನಾಡು ದುರಂತದ ಸಂತ್ರಸ್ತರಿಗಾಗಿ ನನ್ನ ಮನ ಮಿಡಿಯುತ್ತಿದೆ. ಚರಣ್ ಮತ್ತು ನಾನು ಕೇರಳದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಸಂಕಷ್ಟದಲ್ಲಿರುವವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರೆಲ್ಲರಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೆಗಾಸ್ಟಾರ್ ಚಿರಂಜೀವಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಚಿರಂಜೀವಿ, ರಾಮ್ ಚರಣ್ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ (Rashmika Mandanna), ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್, ಅಲ್ಲು ಅರ್ಜುನ್ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

  • ಪಿವಿ ಸಿಂಧು ಜೊತೆ ಕ್ಯಾಮೆರಾಗೆ ಪೋಸ್ ಕೊಟ್ಟ ಮೆಗಾಸ್ಟಾರ್ ಫ್ಯಾಮಿಲಿ

    ಪಿವಿ ಸಿಂಧು ಜೊತೆ ಕ್ಯಾಮೆರಾಗೆ ಪೋಸ್ ಕೊಟ್ಟ ಮೆಗಾಸ್ಟಾರ್ ಫ್ಯಾಮಿಲಿ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬ ಪ್ಯಾರಿಸ್‌ನಲ್ಲಿದ್ದಾರೆ. ಪ್ರಸ್ತುತ 2024ನೇ ಸಾಲಿನ ಒಲಿಂಪಿಕ್ಸ್ ನಡೆಯುತ್ತಿದ್ದು ಸದ್ಯ ಭಾಗಿಯಾಗಿರುವ ಪಿವಿ ಸಿಂಧು (PV Sindhu) ಜೊತೆ ಚಿರಂಜೀವಿ ಫ್ಯಾಮಿಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

    ತೆಲುಗು ನಟ ಚಿರಂಜೀವಿ ಕುಟುಂಬ ಸದ್ಯ ಪ್ಯಾರಿಸ್‌ನಲ್ಲಿ (Paris) ವೆಕೇಷನ್ ಮೂಡ್‌ನಲ್ಲಿದ್ದಾರೆ. ಪ್ಯಾರಿಸ್‌ನಲ್ಲಿ ಒಲಂಪಿಕ್ಸ್ ನಡೆಯುತ್ತಿದ್ದು, ಭಾರತವನ್ನು ಪ್ರತಿನಿಧಿಸಿರುವ ಪಿವಿ ಸಿಂಧು ಜೊತೆ ಚಿರಂಜೀವಿ ದಂಪತಿ ಮತ್ತು ರಾಮ್‌ ಚರಣ್‌ ದಂಪತಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಸಿಂಧುಗೆ ವಿಶೇಷವಾಗಿ ಚಿರಂಜೀವಿ ಕುಟುಂಬ ಶುಭಕೋರಿದೆ.

    ಅಂದಹಾಗೆ, ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್‌ಗಳನ್ನು ಪ್ಯಾರಿಸ್‌ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

  • ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ

    ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಚಿರಂಜೀವಿ ಹೊಸ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ.

    ಚಿರಂಜೀವಿ (Megastar Chiranjeevi) ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ರಶ್ಮಿಕಾಗೆ ಚಾನ್ಸ್ ಸಿಕ್ಕಿದೆ. ಸ್ಪೆಷಲ್ ರೋಲ್ ಆಗಿದ್ರೂ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತಿರುವು ಕೊಡಲಿದೆಯಂತೆ. ನಟಿಗೂ ಕೂಡ ಇಷ್ಟವಾಗಿ ನಟಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗ್ತಿದೆ.‌ ಇದನ್ನೂ ಓದಿ:ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ಶ್ರುತಿ ಹಾಸನ್ ಗರಂ

    ಈ ಸಿನಿಮಾದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿ ಶೂಟಿಂಗ್‌ ನಡೆಯುತ್ತಿದೆ. ಸದ್ಯದಲ್ಲೇ ರಶ್ಮಿಕಾ ಕೂಡ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

    ಅಂದಹಾಗೆ, ಪುಷ್ಪ 2, ಅನಿಮಲ್ 2, ಕುಬೇರ, ಚಾವಾ, ರೈನ್‌ಬೋ, ದಿ ಗರ್ಲ್‌ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ.

  • ತೆಲುಗು ನಟ ಚಿರಂಜೀವಿ ಮಾಜಿ ಅಳಿಯ ಶಿರೀಶ್ ನಿಧನ

    ತೆಲುಗು ನಟ ಚಿರಂಜೀವಿ ಮಾಜಿ ಅಳಿಯ ಶಿರೀಶ್ ನಿಧನ

    ತೆಲುಗಿನ ಮೆಗಾಸ್ಟಾರ್ ಚಿರಂಜೀವಿ (Mega Star Chiranjeevi) ಮಾಜಿ ಅಳಿಯ, ಶ್ರೀಜಾ ಅವರ ಮೊದಲ ಮಾಜಿ ಪತಿ ಶಿರೀಶ್ ಭಾರದ್ವಾಜ್ (Sirish Bharadwaj) ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿರೀಶ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಮೂಲಗಳ ಪ್ರಕಾರ, ಶಿರೀಶ್ ಭಾರದ್ವಾಜ್ ಅವರು ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಆಗಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು (ಜೂನ್ 19) ಬೆಳಗ್ಗೆ ಮೃತಪಟ್ಟಿದ್ದಾರೆ.‌ ಇದನ್ನೂ ಓದಿ:‘ಕುರುಕ್ಷೇತ್ರ’ ಸೆಟ್‌ನಲ್ಲಿ ಪವಿತ್ರಾರನ್ನು ಏನೆಂದು ಪರಿಚಯಿಸಿದ್ರು ದರ್ಶನ್? ‘ಕಾಟೇರ’ ನಟ ಹೇಳಿದಿಷ್ಟು

    ಅಂದಹಾಗೆ,ಶಿರೀಶ್ ಮತ್ತು ಚಿರಂಜೀವಿ ಕಿರಿಯ ಪುತ್ರಿ ಶ್ರೀಜಾ (Sreeja) ಪ್ರೀತಿಸಿ ಮದುವೆಯಾಗಿದ್ದರು. ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ಶ್ರೀಜಾ ಮನೆಯಿಂದ ಹೊರ ನಡೆದಿದ್ದರು. ಬಳಿಕ ಶ್ರೀಜಾ ಮತ್ತು ಶಿರೀಶ್ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಕೆಲ ಮನಸ್ತಾಪಗಳಿಂದ ಶ್ರೀಜಾ ತನ್ನ ಪುತ್ರಿಯೊಂದಿಗೆ ಮತ್ತೆ ತಂದೆ ಚಿರಂಜೀವಿ ಮನೆಗೆ ವಾಪಸ್ ಆಗಿದ್ರು.

    2012ರಲ್ಲಿ ಶ್ರೀಜಾ ಕಿರುಕುಳ ನೀಡಿದ್ದಕ್ಕಾಗಿ ಶಿರೀಶ್ ಭಾರದ್ವಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆ ನಂತರ 2014ರಲ್ಲಿ ಶ್ರೀಜಾ ಅವರು ಶಿರೀಶ್ ಭಾರದ್ವಾಜ್‌ಗೆ ಡಿವೋರ್ಸ್ ನೀಡಿದ್ದರು. ಇದೀಗ ಶಿರಿಷ್ ಭಾರದ್ವಾಜ್ ಬಾರದ ಲೋಕಕ್ಕೆ ಹೋಗಿದ್ದಾರೆ. ಸದ್ಯ ಶಿರೀಶ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

  • ಮೆಗಾಸ್ಟಾರ್ ಚಿರಂಜೀವಿ ಫ್ಯಾನ್ಸ್‌ಗೆ ಸಿಹಿಸುದ್ದಿ

    ಮೆಗಾಸ್ಟಾರ್ ಚಿರಂಜೀವಿ ಫ್ಯಾನ್ಸ್‌ಗೆ ಸಿಹಿಸುದ್ದಿ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ‘ವಿಶ್ವಂಭರ’ (Vishwambhara) ಸಿನಿಮಾ ರಿಲೀಸ್‌ಗೂ ಮುನ್ನವೇ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ವಿಶ್ವಂಭರ ಒಂದೇ ಸಿನಿಮಾ ಅಲ್ಲ, ಬೇರೇ ಬಿಗ್ ಪ್ರಾಜೆಕ್ಟ್‌ಗಳು  ಚಿರಂಜೀವಿ ಕೈಯಲ್ಲಿವೆ ಎಂದು ರಾಮ್ ಚರಣ್ ರಿವೀಲ್ ಮಾಡಿದ್ದಾರೆ.

    ವಿಶ್ವ ಅಪ್ಪಂದಿರ (ಜೂನ್ 16) ಪ್ರಯುಕ್ತ ಚಿರಂಜೀವಿಗೆ ಪುತ್ರ ರಾಮ್ ಚರಣ್ (Ram Charan) ವಿಶೇಷ ಸಂದರ್ಶನವನ್ನು ಮಾಡಿದ್ದಾರೆ. ಚಿರಂಜೀವಿ 4 ಬಿಗ್ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿರುವುದಾಗಿ ರಾಮ್ ಚರಣ್ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಜಾಗಕ್ಕೆ ‘ಡಬಲ್‌ ಇಸ್ಮಾರ್ಟ್‌’ ಎಂಟ್ರಿ- ರಿಲೀಸ್ ಡೇಟ್ ಫಿಕ್ಸ್

    ಇದೀಗ ನಾನು ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಆದರೆ ತಂದೆ, 4 ಸಿನಿಮಾ ಚಿತ್ರಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯಾರ ನಿರ್ದೇಶನ, ಟೈಟಲ್ ಏನು ಎಂಬುದರ ಬಗ್ಗೆ ರಾಮ್ ಚರಣ್ ರಿವೀಲ್ ಮಾಡಿಲ್ಲ. ಮುಂದಿನ ದಿನಗಳಲ್ಲಿ ಚಿತ್ರಗಳ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

    ಸದ್ಯ ಚಿರಂಜೀವಿ ‘ವಿಶ್ವಂಭರ’ ಸಿನಿಮಾದ ಕೆಲಸ ನಡೆಯುತ್ತಿದೆ. ಈ ಚಿತ್ರದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಕನ್ನಡದ ನಟಿ ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ.

  • ಡಿಸಿಎಂ ಆದ ಪವನ್ ಕಲ್ಯಾಣ್‌ಗೆ ಭರ್ಜರಿ ಗಿಫ್ಟ್ ಕೊಟ್ಟ ಚಿರಂಜೀವಿ ಪತ್ನಿ

    ಡಿಸಿಎಂ ಆದ ಪವನ್ ಕಲ್ಯಾಣ್‌ಗೆ ಭರ್ಜರಿ ಗಿಫ್ಟ್ ಕೊಟ್ಟ ಚಿರಂಜೀವಿ ಪತ್ನಿ

    ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಆಗಿರುವ ಪವನ್ ಕಲ್ಯಾಣ್‌ಗೆ (Pawan Kalyan) ಇದೀಗ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಪತ್ನಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಅತ್ತಿಗೆ ಕೊಟ್ಟ ಗಿಫ್ಟ್‌ ನೋಡಿ ಪವನ್‌ ಕಲ್ಯಾಣ್‌ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಚಿರಂಜೀವಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಐ ಲವ್ ಯೂ’ ಯಾವಾಗಲೂ ನೀವೇ ನನ್ನ ಹೀರೋ ಎಂದ ದರ್ಶನ್ ಪುತ್ರ

    ಚಿರಂಜೀವಿ ಪತ್ನಿ ಸುರೇಖಾಗೆ (Surekha) ಪವನ್ ಕಲ್ಯಾಣ್ ಮೇಲೆ ವಿಶೇಷ ಪ್ರೀತಿ, ಕಾಳಜಿ ಇದೆ. ತನ್ನ ಮಗನಂತೆಯೇ ಪವನ್ ಕಲ್ಯಾಣ್‌ರನ್ನು ಸುರೇಖಾ ಕಾಣುತ್ತಾರೆ. ಸಿನಿಮಾ ಬಳಿಕ ರಾಜಕೀಯದಲ್ಲೂ ಸಾಧನೆ ಮಾಡಿರುವ ಡಿಸಿಎಂ ಪವನ್ ಕಲ್ಯಾಣ್‌ಗೆ ಅರ್ಥಪೂರ್ಣ ಉಡುಗೊರೆಯೊಂದನ್ನು ನೀಡಿದ್ದಾರೆ. ಮೌಂಟ್ ಬ್ಲಾಂಕ್ ಪೆನ್ ಅನ್ನು ಗಿಫ್ಟ್ ಮಾಡಿದ್ದಾರೆ.

    ಅತ್ತಿಗೆ ಕೊಟ್ಟಿರುವ ಪೆನ್ನಿನ ಬೆಲೆ ಸುಮಾರು ಒಂದು ಲಕ್ಷ ರೂ. ಮೌಲ್ಯದಾಗಿದೆ. ಮೌಂಟ್ ಬ್ಲಾಂಕ್ ಡಿಸ್ನಿ ಕ್ಯಾರೆಕ್ಟರ್ ಎಡಿಷನ್ ಪೆನ್ ಅನ್ನು ಸುರೇಖಾ, ಪವನ್ ಕಲ್ಯಾಣ್‌ಗೆ ನೀಡಿದ್ದಾರೆ. ವಿಶೇಷ ಉಡುಗೊರೆ ಸ್ವೀಕರಿಸಿದ ಪವನ್ ಕಲ್ಯಾಣ್ ಅತ್ತಿಗೆಗೆ ಧನ್ಯವಾದ ಸಹ ಹೇಳಿದ್ದಾರೆ. ಅಣ್ಣ ಚಿರಂಜೀವಿ, ಅತ್ತಿಗೆ ಜೊತೆ ಪವನ್ ಕಲ್ಯಾಣ್ ಪೆನ್ನು ಹಿಡಿದು ಫೋಸು ಕೊಟ್ಟಿದ್ದಾರೆ. ತೆಲುಗು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತೀಯ ಎಂಬ ಆಶಯ ಹಾಗೂ ಆಶೀರ್ವಾದ ಇದೆ ಎಂದು ಸಂದೇಶ ಕೂಡ ನೀಡಿದ್ದಾರೆ.

    ಇನ್ನೂ ರಾಜಕೀಯದ ಕೆಲಸ ನಡುವೆಯೇ ಒಪ್ಪಿಕೊಂಡಿರುವ ಹರಿಹರ ವೀರ ಮಲ್ಲು ಸಿನಿಮಾ, ಶ್ರೀಲೀಲಾ ಜೊತೆ ಉಸ್ತಾದ್‌ ಭಗತ್‌ ಸಿಂಗ್‌ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳನ್ನು ಪವನ್‌ ಕಲ್ಯಾಣ್‌ ಮುಗಿಸಿಕೊಡಬೇಕಿದೆ.

  • ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್

    ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್

    ನ್ನಡತಿ ಆಶಿಕಾ ರಂಗನಾಥ್‌ಗೆ (Ashika Ranganath) ಗೋಲ್ಡನ್ ಚಾನ್ಸ್ ಸಿಕ್ಕಿದೆ. ಚುಟು ಚುಟು ಬೆಡಗಿಗೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿದೆ. ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಜೊತೆ ತೆರೆಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

    ಕನ್ನಡ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ಆಶಿಕಾ ರಂಗನಾಥ್ ಟಾಲಿವುಡ್‌ನಲ್ಲಿ ಭರವಸೆ ಮೂಡಿಸಿದ್ದಾರೆ. ಸದ್ಯ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ (Vishwambhara Film) ಸಿನಿಮಾದಲ್ಲಿ ಆಶಿಕಾ ಬಹಳ ಮಹತ್ವದ ಪಾತ್ರವೇ ಸಿಕ್ಕಿದೆಯಂತೆ. ವಸಿಷ್ಠ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

    ಈ ಚಿತ್ರದಲ್ಲಿ ತ್ರಿಷಾ, ಮೀನಾಕ್ಷಿ ಚೌಧರಿ, ಬಣ್ಣ ಹಚ್ಚಿದ್ದಾರೆ. ಇವರ ಜೊತೆಗೆ ಆಶಿಕಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಪುಸ್ತಕದಲ್ಲೂ ನೋಡಿ ‘ಡೇರ್ ಡೆವಿಲ್‍ ಮುಸ್ತಾಫಾ’ ಸಿನಿಮಾ

    ಕಳೆದ ವರ್ಷ ನಂದಮೂರಿ ಕಲ್ಯಾಣ್ ನಟನೆಯ ‘ಆಮಿಗೋಸ್’ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸಿದ್ದರು. ಆದರೆ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿತ್ತು. ನಂತರ ನಾಗಾರ್ಜುನ ಜೊತೆ ‘ನಾ ಸಾಮಿ ರಂಗ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಯ್ತು. ಈ ಬೆನ್ನಲ್ಲೇ ಮೆಗಾಸ್ಟಾರ್ ನಟಿಸುವ ಬಂಪರ್ ಅವಕಾಶ ನಟಿಗೆ ಸಿಕ್ಕಿದೆ.


    ಕನ್ನಡದ ನಟಿಯರಾದ ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾ (Sreeleela), ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ ಅವರಂತೆಯೇ ಆಶಿಕಾ ರಂಗನಾಥ್ ಪೈಪೋಟಿ ಗೆಲ್ತಾರಾ? ಎಂದು ಕಾದುನೋಡಬೇಕಿದೆ.