Tag: Meghana Raj

  • ಆ್ಯಕ್ಷನ್ ಪ್ರಿನ್ಸ್ ಬರ್ತ್‌ಡೇಯಂದು ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ಬರ್ತ್‌ಡೇಯಂದು ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ

    ನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರು ಸರ್ಜಾ (Chiranjeevi Sarja) ಅವರು ನಿಧನರಾಗಿ 3 ವರ್ಷವಾಗಿದೆ. ಅವರ ಅಗಲಿಕೆಯ ನೋವು ಸರ್ಜಾ ಕುಟುಂಬ ಮತ್ತು ಫ್ಯಾನ್ಸ್‌ಗೆ ಇನ್ನೂ ಕಾಡ್ತಿದೆ. ಹೀಗಿರುವಾಗ ಚಿರು ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಹೀರೋ ಧ್ರುವ ಸರ್ಜಾ (Dhruva Sarja) ಹುಟ್ಟುಹಬ್ಬದಂದು (Birthday) ಚಿರು ಸರ್ಜಾ ನಟಿಸಿದ ಕೊನೆಯ ಸಿನಿಮಾ ರಾಜಮಾರ್ತಾಂಡ ಸಿನಿಮಾ ಬೆಳ್ಳಿತೆರೆಗೆ ಅಪ್ಪಳಿಸುತ್ತಿದೆ.

    ಅಕ್ಟೋಬರ್ 6ರಂದು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬವಿದೆ. ತಮ್ಮನ ಹುಟ್ಟುಹಬ್ಬಂದು ಅಣ್ಣನ ಕೊನೆಯ ಸಿನಿಮಾ ಬಿಡುಗಡೆಗೆ ಸಿದ್ಧತೆಗಳು ನಡೆಯುತ್ತಿವೆ. ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಅಕ್ಟೋಬರ್ 6ರಂದು ಬಿಡುಗಡೆ ಮಾಡುವುದಕ್ಕೆ ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ:ಇಂಟರ್‌ನೆಟ್ ಬೆಂಕಿ ಹಚ್ಚಿದ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋಸ್

    ಚಿರಂಜೀವಿ ಸರ್ಜಾ ಅಗಲುವ ಮುನ್ನ ‘ರಾಜಮಾರ್ತಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದರು. ಈ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದ್ದರೂ, ಇನ್ನೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿಯಿತ್ತು. ಅಲ್ಲದೆ ಡಬ್ಬಿಂಗ್ ಕೂಡ ಆಗಿರಲಿಲ್ಲ. ಚಿರು ಅಗಲಿದ ಬಳಿಕ ಉಳಿಸಿ ಹೋದ ಕೆಲಸಗಳನ್ನು ತಾನು ಪೂರ್ಣಗೊಳಿಸುವುದಾಗಿ ಧ್ರುವ ಹೇಳಿದ್ದರು. ಅದರಂತೆಯೇ ಚಿರು ದೃಶ್ಯಗಳಿಗೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಿಕೊಟ್ಟಿದ್ದರು. ಇದನ್ನೂ ಓದಿ:ಇಂಟರ್‌ನೆಟ್ ಬೆಂಕಿ ಹಚ್ಚಿದ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋಸ್

    ‘ರಾಜಮಾರ್ತಾಂಡ’ (Rajamartanda) ಒಂದು ಮಾಸ್ ಸಿನಿಮಾ. ಚಿರಂಜೀವಿ ಸರ್ಜಾ ಈ ಸಿನಿಮಾ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧ್ರುವ ಸರ್ಜಾ ಧ್ವನಿಯಲ್ಲಿ ಚಿರು ನಟನೆಯನ್ನು ಕಣ್ತುಂಬಿಕೊಳ್ಳುವ ಅವಕಾಶ ಈಗ ಅಭಿಮಾನಿಗಳ ಪಾಲಿಗೆ ಒಲಿದು ಬಂದಿದೆ. ಚಿರುಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ ನಟಿಸಿದ್ದಾರೆ.

    ಈ ಸಿನಿಮಾದ ಮೂಲಕ ಚಿರು ಸರ್ಜಾ- ಮೇಘನಾ ರಾಜ್ (Meghana Raj) ಪುತ್ರ ರಾಯನ್ (Rayan) ಕೂಡ ಪರಿಚಯ ಆಗುತ್ತಿದ್ದಾರೆ. ಈ ಬಗ್ಗೆ ನಟಿ ಮೇಘನಾ ಅವರೇ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಸರ್ಜಾ (Meghana Raj) ಹಲವು ವರ್ಷಗಳ ನಂತರ ನಟಿಸಿರುವ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ (Dhruv Sarja) ಹಾಗೂ ಡಾಲಿ ಧನಂಜಯ (Dhananjay) ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್ (Prajwal Devaraj) ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅಭಿನಯಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

    ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

    ನಾನು ಸಾಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

    ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಗೆ ಬಗ್ಗೆ ತುಂಬಾ ಹೆಮ್ಮೆಯಿದೆ: ಧ್ರುವ

    ಅತ್ತಿಗೆ ಬಗ್ಗೆ ತುಂಬಾ ಹೆಮ್ಮೆಯಿದೆ: ಧ್ರುವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಿಕಾಡಾ’ ಚಿತ್ರಕ್ಕೆ ಮೇಘನಾ ರಾಜ್, ಪ್ರಜ್ವಲ್ ಸಾಥ್

    ‘ಸಿಕಾಡಾ’ ಚಿತ್ರಕ್ಕೆ ಮೇಘನಾ ರಾಜ್, ಪ್ರಜ್ವಲ್ ಸಾಥ್

    ಸಿಕಾಡಾ (Cicada) ಪ್ಯಾನ್ ಇಂಡಿಯಾ ಚಿತ್ರದ ಕನ್ನಡದ ಫಸ್ಟ್ ಲುಕ್ ಪೋಸ್ಟರ್ (First Look) ಬಿಡುಗಡೆಯನ್ನು ಸ್ಯಾಂಡಲ್‌ವುಡ್ ತಾರೆಯರಾದ ಮೇಘನಾ ರಾಜ್ (Meghana Raj) ಮತ್ತು ಪ್ರಜ್ವಲ್ ದೇವರಾಜ್ (Prajwal Devaraj) ರಿಲೀಸ್ ಮಾಡಿದ್ದಾರೆ. ಕರ್ನಾಟಕ ಮಾಜಿ ಕೃಷಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಅವರು ತಮ್ಮ ಹೃತ್ಪೂರ್ವಕ ಹಾರೈಕೆಗಳೊಂದಿಗೆ, ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸಿಕಾಡಾ ಚಿತ್ರತಂಡಕ್ಕೆ ಉತ್ತಮ ಯಶಸ್ಸನ್ನು ಕೋರುವ ಮೂಲಕ ತಂಡವನ್ನು ಬೆಂಬಲಿಸಿದರು.

    ಸಿಕಾಡಾ ತೆರೆಯಲ್ಲಿ ಹೊಸ ಮುಖಗಳು, ತಾಜಾ ಪ್ರತಿಭೆಗಳು ಮತ್ತು ಉತ್ತಮ ಅನುಭವದಿಂದ ತುಂಬಿದೆ. ಸಿಕಾಡಾ ನಿರ್ದೇಶಕರಾಗಿ ಶ್ರೀಜಿತ್ ಎಡವನ ಅವರ ಚೊಚ್ಚಲ ಚಿತ್ರ. ತಿರ್ನಾ  ಫಿಲ್ಮ್ಸ್ ಮತ್ತು ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ವಂದನಾ ಮೆನನ್ ಮತ್ತು ಗೋಪಕುಮಾರ್ ಪಿ ನಿರ್ಮಿಸಿರುವ ಈ ಚಿತ್ರದಲ್ಲಿ ರಜಿತ್ ಸಿ.ಆರ್, ಗಾಯತ್ರಿ ಮಯೂರ, ಜೈಸ್ ಜೋಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಬೆಂಗಳೂರು, ಅಟ್ಟಪಾಡಿ, ವಾಗಮೋನ್, ಕೊಚ್ಚಿ ಮುಂತಾದೆಡೆ ಚಿತ್ರೀಕರಣ ನಡೆದಿದೆ.

    ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಈ ಸಿನಿಮಾ ಮೂಡಿಬಂದಿದೆ. ‘ಸಿಕಾಡಾ’ ಚಿತ್ರದ ಒಂದು ವಿಶೇಷತೆಯೆಂದರೆ, ಪ್ರತಿ ಅವತರಣಿಕೆಯ ಚಿತ್ರಕ್ಕೂ ಪ್ರತ್ಯೇಕ ಟ್ಯೂನ್ ಗಳನ್ನು ಕಂಪೋಸ್ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ನಾಲ್ಕು ಭಾಷೆಗಳಲ್ಲಿ ಆ ಭಾಷೆಯ ನೇಟಿವಿಟಿಗೆ ಹೊಂದುವಂತಹ ಟ್ಯೂನ್ ಗಳನ್ನು ಸಂಯೋಜಿಸಲಾಗಿವೆ. ನಾಲ್ಕು ಭಾಷೆಯ ಅವತರಣಿಕೆಗಳಿಗೆಂದೇ ಒಟ್ಟು 24 ಹೊಸ ಹಾಡುಗಳನ್ನು ಕಂಪೋಸ್ ಮಾಡಿರುವುದು ವಿಶೇಷ. ಇದು ಸಿಕಾಡಾದ ವಿಶಿಷ್ಟ ಲಕ್ಷಣವಾಗಿದೆ.

     

    ಶ್ರೀಜಿತ್ ಎಡವನ ಸಂಗೀತ ಸಂಯೋಜಕರೂ ಹೌದು. ಅವರು ‘ಪ್ರೀತಿ ನನ್ನ ಕವಿಯೆ’ ಮತ್ತು ‘ನೆಂಜೋಡು ಚೆರ್ತು’ ನಂತಹ ಸಂಗೀತ ಹಿಟ್‌ಗಳನ್ನು ಸಂಯೋಜಿಸುವ ಮೂಲಕ ತಮಿಳು ಮತ್ತು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದರು. ಈ ಚಿತ್ರದ ಹಾಡುಗಳಿಗೆ ಅದ್ಭುತವಾದ ಸಾಹಿತ್ಯವನ್ನು ರವಿತೇಜ ಅಮರನಾರಾಯಣ ಬರೆದಿದ್ದಾರೆ. ನವೀನ್ ರಾಜ್ ಚಿತ್ರಕ್ಕೆ ಸಿನಿಮಾಟೋಗ್ರಾಫರ್ ಆಗಿದ್ದು, ಶೈಜಿತ್ ಕುಮಾರನ್ ಸಂಕಲನ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಸಾವಿನ ಬಗ್ಗೆ ಅಪಪ್ರಚಾರ ಮಾಡಬೇಡಿ- ಮೇಘನಾ ರಾಜ್

    ಸ್ಪಂದನಾ ಸಾವಿನ ಬಗ್ಗೆ ಅಪಪ್ರಚಾರ ಮಾಡಬೇಡಿ- ಮೇಘನಾ ರಾಜ್

    ರಾಘು- ಸ್ಪಂದನಾ ಅನೋನ್ಯವಾಗಿ ಬದುಕುತ್ತಿದ್ದರು. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ನಟಿ ಮೇಘನಾ ರಾಜ್ (Meghanaraj) ಮನವಿ ಮಾಡಿದ್ದಾರೆ.

    ಸ್ಪಂದನಾ(Spandana) ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ನಟಿ ಮೇಘನಾ ಮಾತನಾಡಿದ್ದಾರೆ. ರಾಘು-ಸ್ಪಂದನಾ ನಮಗೆ ಬಹಳ ಆತ್ಮೀಯರಾಗಿದ್ದರು. ಏನು ನಡೆದಿದೆ, ಏನು ಆಗಿದೆ ಅನ್ನೋದು ಅವರ ಕುಟುಂಬಕ್ಕೆ ತಿಳಿದಿರುತ್ತದೆ. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ. ಆಕೆಗೆ ಮರ್ಯಾದೆ ಕೊಡಿ. ಸೋಷಿಯಲ್ ಮೀಡಿಯಾದಲ್ಲಿ ಇಲ್ಲದೇ ಇರುವ ಸುದ್ದಿಗಳನ್ನ ಹರಡಬೇಡಿ. ಅವರ ಕುಟುಂಬಕ್ಕೆ ಸ್ಪೆಸ್ ಕೊಡಿ.

    ರಾಘು- ಸ್ಪಂದನಾ ನನ್ನ ಫಾಮಿಲಿ ಇದ್ದಂತೆ. ನಾವು ಇರೋ ಪರಿಸ್ಥಿತಿಯಲ್ಲಿ ಇನ್ನೊಂದು ಕುಟುಂಬನ ಹಾಗೇ ನೋಡೋಕೆ ಆಗಲ್ಲ. ನಮ್ಮ ಕುಟುಂಬನೇ ಅವರು. ನನ್ನ ಕುಟುಂಬಕ್ಕೆ ಆಗಿರೋ ನೋವಿದು ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ದೇವರಿಗೆ ಕನ್ನಡದವರ ಮೇಲೆ ಕೋಪ ಬಂದಿದ್ಯಾ- ವಿನೋದ್ ರಾಜ್ ಭಾವುಕ

    ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

    ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರಘಾಟ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್‌ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಬುದ್ಧಿವಂತ 2’ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ- ಅಸಲಿ ಕಾರಣ ಬಿಚ್ಚಿಟ್ಟ ಉಪೇಂದ್ರ

    ‘ಬುದ್ಧಿವಂತ 2’ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ- ಅಸಲಿ ಕಾರಣ ಬಿಚ್ಚಿಟ್ಟ ಉಪೇಂದ್ರ

    ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರು ‘ಕಬ್ಜ’ (Kabzaa) ಸಿನಿಮಾದ ಸಕ್ಸಸ್ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಸೆಪ್ಟೆಂಬರ್ 15ರಂದು ರಿಲೀಸ್ ಆಗಬೇಕಿದ್ದ ಬುದ್ಧಿವಂತ 2 ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಇದರ ಬಗ್ಗೆ ಸ್ವತಃ ಉಪೇಂದ್ರ ಅವರು ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಕಬ್ಜ ಸಿನಿಮಾ ನಂತರ ಬುದ್ಧಿವಂತ 2, ಯುಐ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಉಪ್ಪಿ ಬ್ಯುಸಿಯಾಗಿದ್ದಾರೆ. 2008ರಲ್ಲಿ ಬುದ್ಧಿವಂತ ಸಿನಿಮಾ ಫ್ಯಾನ್ಸ್‌ಗೆ ಇಷ್ಟವಾಗಿತ್ತು. ಉಪೇಂದ್ರ ನಟನೆ, ಬುದ್ಧಿವಂತಿಕೆ ಪ್ರೇಕ್ಷಕರಿಗೆ ಹಿಡಿಸಿತ್ತು. ಇದೀಗ ಅದೇ ಟೈಟಲ್‌ನೊಂದಿಗೆ ಡಿಫರೆಂಟ್ ಆಗಿರೋ ಕಥೆ ಹೇಳೋದಕ್ಕೆ ಉಪ್ಪಿ ಸಜ್ಜಾಗಿದ್ದಾರೆ. ಬುದ್ಧಿವಂತ ಪಾರ್ಟ್ 2 ಬಗ್ಗೆ ಈ ಹಿಂದೆ ಅನೌನ್ಸ್ ಮಾಡಲಾಗಿತ್ತು. ರಿಲೀಸ್ ಬಗ್ಗೆ ಬಿಗ್ ಅಪ್‌ಡೇಟ್ ಹಂಚಿಕೊಡಿದ್ದಾರೆ. ಇದನ್ನೂ ಓದಿ: ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ‘ಬುದ್ಧಿವಂತ 2’ (Buddhivanta 2) ಸಿನಿಮಾವನ್ನು ಟಿ.ಆರ್ ಚಂದ್ರಶೇಖರ್ ಅವರು ನಿರ್ಮಾಣ ಮಾಡ್ತಿದ್ದಾರೆ. ಜಯರಾಮ್ ಮಾಧವನ್ ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವಾರ ಬುದ್ಧಿವಂತ ಚಿತ್ರ ಸೆಪ್ಟೆಂಬರ್ 15ಕ್ಕೆ ತೆರೆಗೆ ಬರೋದಾಗಿ  ಸಿನಿಮಾ ಟೀಮ್ ಹೇಳಿತ್ತು. ಆದರೆ ಈಗ ರಿಲೀಸ್ ಡೇಟ್ ಮುಂದಕ್ಕೆ ಹೋಗಿರೋದರ ಬಗ್ಗೆ ಅಪ್‌ಡೇಟ್ ತಿಳಿಸಿದ್ದಾರೆ. ಸ್ವತಃ ಉಪ್ಪಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

    ನಮ್ಮ ಬುದ್ಧಿವಂತ 2 ಚಿತ್ರಕ್ಕೆ ಸಂಬಂಧಿಸಿದಂತೆ, ಈಗಾಗಲೇ ಪ್ರಕಟಿಸಿದ ಟೀಸರ್ ಬಿಡುಗಡೆ ಹಾಗೂ ಸಿನಿಮಾ ರಿಲೀಸ್ ದಿನಾಂಕಗಳನ್ನು ತಾಂತ್ರಿಕ ಕಾರಣಗಳಿಂದ ಇದೀಗ ಮುಂದೂಡಲಾಗಿದೆ. ಹಾಗಾಗಿ ರಿಲೀಸ್ ಅಪ್‌ಡೇಟ್‌ನ ಶೀಘ್ರದಲ್ಲಿಯೇ ತಿಳಿಸುವುದಾಗಿ ಹೇಳಿದ್ದಾರೆ. ದಯವಿಟ್ಟು ತಮ್ಮ ಪ್ರೀತಿ ಹಾಗೂ ನಿರೀಕ್ಷೆಯನ್ನು ಹೀಗೆ ಕಾಯ್ದಿರಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಎಂದು ಉಪೇಂದ್ರ ಅವರು ಅಭಿಮಾನಿಗಳಿಗೆ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ:ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆ ಮೇಘನಾ ರಾಜ್(Meghana Raj), ಸೋನಾಲ್ ಮೆಂಥರೋ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಿನ್ನ ಕಥೆಯೊಂದಿಗೆ ಬುದ್ಧಿವಂತ ಆರ್ಭಟ ಸದ್ಯದಲ್ಲೇ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

    ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

    ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬುದ್ದಿವಂತ 2 (Buddhivanta 2) ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಅದೊಂದು ಹೊಸ ಬಗೆಯ ಪಾತ್ರವಾಗಿದ್ದು, ಹಾಗಾಗಿ ಕಿಟ್ಟಿ ಒಪ್ಪಿಕೊಂಡು ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪಾತ್ರದ ಮೂಲಕ ಚಿತ್ರಕ್ಕೆ ಹೊಸ ಆಯಾಮವನ್ನು ನೀಡುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು.

    ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ಅಭಿನಯದ ‘ಬುದ್ದಿವಂತ 2’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ  ಚಿತ್ರತಂಡ ಬುದ್ದಿವಂತ 2 ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

    ಬುದ್ದಿವಂತ ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ. ಇದನ್ನೂ ಓದಿ:ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ‌’ಬುದ್ಧಿವಂತ 2′ ಬಿಗ್ ಅಪ್‌ಡೇಟ್

     

    ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ ಬುದ್ದಿವಂತ 2.

    ಜೈದೇವ್ (Jaidev) ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಉಪೇಂದ್ರ ಅವರಿಗೆ ನಾಯಕಿಯರಾಗಿ  ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ (Meghana Raj)ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ‘ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ನಟಿ ಮೇಘನಾ ರಾಜ್ (Meghana Raj) ಅವರು ಕಮ್‌ಬ್ಯಾಕ್ ಆಗಿದ್ದಾರೆ. ಚಿತ್ರದ ಮೊದಲ ಟೀಸರ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಇದರ ನಡುವೆ ಇತ್ತೀಚಿನ ಸಂದರ್ಶನದಲ್ಲಿ ಮೇಘನಾ ರಾಜ್ ಅವರು ಅಚ್ಚರಿಯ ಮಾಹಿತಿಯೊಂದನ್ನ ಬಿಚ್ಚಿಟ್ಟಿದ್ದಾರೆ. ಪತಿ ಚಿರು ಕೊನೆಯ ಸಿನಿಮಾದಲ್ಲಿ ರಾಯನ್ ರಾಜ್‌ ಸರ್ಜಾ ನಟಿಸಿದ್ದಾರಾ? ಎಂಬುದರ ಬಗ್ಗೆ ನಟಿ ಮಾತಾಡಿದ್ದಾರೆ.

    ಮೇಘನಾ ರಾಜ್ ಅವರು ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಮ್ ಬ್ಯಾಕ್ ಸಿನಿಮಾ ಆಗಿರೋ ಕಾರಣ, ಸಿನಿಮಾ ಬಗ್ಗೆ ತುಂಬಾನೇ ಹೈಪ್ ಕ್ರಿಯೇಟ್ ಮಾಡಿದೆ. ಇದರ ಪತಿ ಚಿರು ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಸಿನಿಮಾ ಯಾಕೆ ತಡವಾಗುತ್ತಿದೆ ಎಂದು ನಟಿ ಹೇಳಿದ್ದಾರೆ.

    ಪತಿ ಚಿರಂಜೀವಿ ಸರ್ಜಾ (Chiranjeevi Sarja) ಅವರು ಕೊನೆದಾಗಿ ನಟಿಸಿರುವ ಸಿನಿಮಾ ‘ರಾಜ ಮಾರ್ತಾಂಡ’ (Raja Marthanda) ಚಿತ್ರ. ಸರ್ಜಾ ಫ್ಯಾಮಿಲಿ ಭಾವನಾತ್ಮಕವಾಗಿ ಹತ್ತಿರವಾಗಿದೆ. ಧ್ರುವ ಸರ್ಜಾ ಚಿರು ಪಾತ್ರಕ್ಕೆ ಧ್ವನಿಯಾಗಿದ್ರೆ, ಪುತ್ರ ರಾಯನ್ ರಾಜ್ ಸರ್ಜಾ ಈ ಸಿನಿಮಾದ ಭಾಗವಾಗಿದ್ದಾರೆ. ರಾಯನ್ ಕೂಡ ತಂದೆಯ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಮೇಘನಾ ರಾಜ್ ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ಚಿರು- ಧ್ರುವಗೆ ಇಬ್ಬರ ಬಾಂಡಿಂಗ್ ತುಂಬಾನೇ ಚೆನ್ನಾಗಿತ್ತು. ಡಬ್ಬಿಂಗ್ ಮಾಡುವಾಗ ಧ್ರುವಗೆ ಸೀನ್ ನೋಡಿ ಡಬ್ ಮಾಡೋಕೆ ಕಷ್ಟವಾಗಿದೆ. ಸಿನಿಮಾ ಚೆನ್ನಾಗಿ ಬರಬೇಕು ಎಂಬ ಕಾರಣಕ್ಕೆ ಸಮಯ ತೆಗೆದುಕೊಂಡು ಕೆಲಸ ಮಾಡಿದ್ದಾರೆ.  ಧ್ರುವ ಸರ್ಜಾ ಇನ್ನೂ ಎಳಸು ಅಷ್ಟು ಶಕ್ತಿ ಇಲ್ಲ. ರಾಯನ್- ಅವನಿಗೂ ವ್ಯತ್ಯಾಸವಿಲ್ಲ ಎಂದು ಮೇಘನಾ ರಾಜ್ ಹೇಳಿದ್ದಾರೆ. ಸಿನಿಮಾ ಪ್ರಚಾರದಿಂದ ಹಿಡಿದು ರಿಲೀಸ್‌ ಆಗುವವರೆಗೂ ನನ್ನದು ಮತ್ತು ನನ್ನ ಕುಟುಂಬದ ಬೆಂಬಲವಿರುತ್ತದೆ ಎಂದು ಹೇಳಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

    ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ (Meghana Raj) ‘ತತ್ಸಮ ತದ್ಬವ’ (Tatsama Tadbhava)  ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮೊನ್ನೆಯಷ್ಟೇ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದ್ದರು. ಮೇಘನಾ ರಾಜ್ ಹುಟ್ಟುಹಬ್ಬಕ್ಕಾಗಿ ಮೊನ್ನೆಯಷ್ಟೇ ಚಿತ್ರತಂಡ ಅವರ ಪೋಸ್ಟರ್ (Poster)ರಿಲೀಸ್ ಮಾಡಿತ್ತು.

    ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು  ಮೇಘನಾ ರಾಜ್.

    ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೇ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ಮಾತನಾಡಿ ಮೇಘನಾ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಪಿಎಂ ನರೇಂದ್ರ ಮೋದಿ- ಫ್ರೆಂಚ್ ಪ್ರೆಸಿಡೆಂಟ್ ಜೊತೆ ಮ್ಯಾಡಿ ಊಟ

    ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದಿರುವ ನಿರ್ದೇಶಕ ವಿಶಾಲ್ ಆತ್ರೇಯ,  ಸಂಪೂರ್ಣ ಚಿತ್ರೀಕರಣ ಮುಗಿಸಿ, ರೀರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಪನ್ನಗ ಭರಣ (Pannagabharana)ತಿಳಿಸಿದ್ದಾರೆ.

     

    ನಟಿ ಶ್ರುತಿ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರ ಮಾಡಿದ್ದು, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ. ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪ್ಪಿ ಹುಟ್ಟು ಹಬ್ಬಕ್ಕೆ ‘ಬುದ್ದಿವಂತ’ 2 ರಿಲೀಸ್

    ಉಪ್ಪಿ ಹುಟ್ಟು ಹಬ್ಬಕ್ಕೆ ‘ಬುದ್ದಿವಂತ’ 2 ರಿಲೀಸ್

    ಮಕ್, ಅಯೋಗ್ಯ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ ‘ಬುದ್ದಿವಂತ 2’. (Buddhivanta 2) ನಿರ್ಮಾಣ ಪೂರ್ಣಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ.

    ಈ ಬಾರಿಯ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ  ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ  ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಹಾಗೂ ಬುದ್ದಿವಂತ -2  ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟೀಸರ್ ಮೂಲಕವೇ ಚಿತ್ರದ ಬಿಡುಗಡೆಯ ದಿನಾಂಕ ಕೂಡ ಘೋಷಣೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಇದನ್ನೂ ಓದಿ:ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜಯರಾಮ್ ಮಾಧವನ್ ಬುದ್ಧಿವಂತ 2 ಚಿತ್ರದ ನಿರ್ದೇಶಕರು. ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ (Sonal) ಮೊಂಟೆರೊ ಹಾಗೂ  ಮೇಘನಾ ರಾಜ್ (Meghana Raj)  ನಟಿಸಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty) ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಹೊಸ ಬಗೆಯ ಪಾತ್ರ ಮಾಡಿದ್ದು, ಆ ಪಾತ್ರವೇ ಸಿನಿಮಾದ ವಿಶೇಷತೆಗಳಲ್ಲಿ ಒಂದು ಅಂತಾರೆ ನಿರ್ದೇಶಕರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]