Tag: MeghaShree

  • ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ನ್ನಡ ಚಿತ್ರರಂಗದಲ್ಲಿ ಬಹಳ ದಿನಗಳ ನಂತರ ಮ್ಯೂಸಿಕಲ್ ಲವ್‌ಸ್ಟೋರಿ ಹೊಂದಿರುವ ಚಿತ್ರವೊಂದು ರೆಡಿಯಾಗಿದೆ. ಪ್ರೇಮಲೋಕ, ಎಕ್ಸ್ಕ್ಯೂಸ್‌ಮಿ ಚಿತ್ರಗಳ ನಂತರ ಅದೇ ಜಾನರ್‌ನಲ್ಲಿ ತಯಾರಾಗಿರುವ ಮತ್ತೊಂದು ಚಿತ್ರದ ಹೆಸರು ರಿದಂ. ಚಿತ್ರೋದ್ಯಮದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪಳಗಿರುವ ಮಂಜು ಮಿಲನ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರವಿದು. ಈಗಾಗಲೇ ಬಿಡುಗಡೆಯ ಹಂತ ತಲುಪಿರುವ ರಿದಂ, ಸದ್ಯದಲ್ಲೇ ಸೆನ್ಸಾರ್ ಮನೆಗೆ ತೆರಳಲಿದೆ.

    ಚಿತ್ರದಲ್ಲಿ ನಾಯಕನಾಗೂ ನಟಿಸಿರುವ ಮಂಜುಮಿಲನ್ ಈಗಾಗಲೇ ತಮ್ಮ ಬ್ಯಾನರ್ ಮೂಲಕ ೨ ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ್ದು, ಇದು ಅವರ ಮೂರನೇ ಚಿತ್ರ. ಜೋಗಿ ಪ್ರೇಮ್, ಕಾಶೀನಾಥ್, ವಾಸು ಅವರಂಥ ನಿರ್ದೇಶಕರ ಬಳಿ ಪಳಗಿರುವ ಇವರು,  ಒಬ್ಬ ಸಿಂಗರ್ ಹಾಗೂ ವಯಲಿನ್ ನುಡಿಸೋ ಯುವತಿಯ  ನಡುವೆ ನಡೆಯುವ ಲವ್‌ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಚಿತ್ರದ ನಾಯಕಿಯಾಗಿ ಕೃಷ್ಣತುಳಸಿ ಖ್ಯಾತಿಯ ಮೇಘಶ್ರೀ ಅವರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಈಗಾಗಲೇ ಬೆಂಗಳೂರು, ಮೈಸೂರು, ಮೇಲುಕೋಟೆ ಅಲ್ಲದೆ ಸಾಗರದಾಚೆಯ ಸಿಂಗಪೂರ್‌ನಲ್ಲಿ ಸುಮಾರು ೬೨ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದಾರೆ. ಚಿತ್ರದಲ್ಲಿ ಸಪ್ತಸ್ವರಗಳನ್ನು ಪ್ರತಿನಿಧಿಸುವಂತೆ ಏಳು ಸುಂದರವಾದ. ಹಾಡುಗಳಿದ್ದು, ಎ.ಟಿ. ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮಲ್ಲಿಕಾರ್ಜುನ್ ಚಿತ್ರಕ್ಕೆ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.  ಹಿರಿಯ ಕಲಾವಿದರಾದ ಸುಮನ್, ಪದ್ಮಾವಾಸಂತಿ, ವಿನಯಾಪ್ರಸಾದ್, ಗಿರಿಜಾ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ.

    ಫ್ಯಾಮಿಲಿ ಸೆಂಟಿಮೆಂಟ್ ಜೊತೆಗೆ ಒಂದು ಎಮೋಷನಲ್ ಲವ್‌ಸ್ಟೋರಿಯನ್ನು ರಿದಂ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹೇಳಹೊರಟಿರುವ ನಿರ್ದೇಶಕ ಕಮ್ ನಾಯಕ ಮಂಜು ಮಿಲನ್ ಅವರು ಮುಂದಿನ ತಿಂಗಳು ಚಿತ್ರದ ಟ್ರೈಲರನ್ನು ಸ್ಟಾರ್ ನಟರೊಬ್ಬರ ಕೈಲಿ ಬಿಡುಗಡೆ ಮಾಡಿಸುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭೋಜ್‍ಪುರಿ ಸಿನಿಮಾದಲ್ಲಿ ಕನ್ನಡತಿ ಮೇಘಶ್ರೀ ಮಿಂಚು

    ಭೋಜ್‍ಪುರಿ ಸಿನಿಮಾದಲ್ಲಿ ಕನ್ನಡತಿ ಮೇಘಶ್ರೀ ಮಿಂಚು

    ಬೆಂಗಳೂರು: ಕಿರುತೆರೆ ಬೆಡಗಿ, ಸ್ಯಾಂಡಲ್‍ವುಡ್ ಚೆಂದದ ನಟಿ, ಕೃಷ್ಣ ತುಳಸಿ ಸಿನಿಮಾದಲ್ಲಿ ಸಂಚಾರಿ ವಿಜಯ್ ಜೊತೆ ನಟಿಸಿ ಗಮನ ಸೆಳೆದ ಮಲೆನಾಡಿನ ಹುಡುಗಿ ಮೇಘಶ್ರೀ, ಸ್ಯಾಂಡಲ್‍ವುಡ್, ಟಾಲಿವುಡ್, ಕಾಲಿವುಡ್ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಈಕೆ ಇದೀಗ ಭೋಜ್‍ಪುರಿ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ.

    ಭೋಜ್‍ಪುರಿಯ ಖ್ಯಾತ ನಟನ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿರುವ ಸಂಭ್ರಮದಲ್ಲಿರುವ ಮೇಘಶ್ರೀ ಈ ಮೂಲಕ ಕನ್ನಡದ ಕಂಪು ಪಸರಿಸುತ್ತಿದ್ದಾರೆ. ಭೋಜ್‍ಪುರಿ ಚಿತ್ರರಂಗದ ಖ್ಯಾತ ನಟ ಕೇಸರಿಲಾಲ್ ಯಾದವ್ ಅಭಿನಯದ “ಅಪರಾಧಿ” ಸಿನಿಮಾದಲ್ಲಿ ಮೇಘಶ್ರೀ ನಟಿಸುತ್ತಿದ್ದಾರೆ. ಕೇಸರಿಲಾಲ್ ಯಾದವ್ ಜೊತೆ ನಾಯಕಿಯಾಗಿ ಸ್ಕ್ರೀನ್ ಶೇರ್ ಮಾಡಿರುವ ಸಂತಸದಲ್ಲಿರುವ ಮೇಘಶ್ರೀ ತಮ್ಮ ಪಾತ್ರದ ಬಗ್ಗೆಯೂ ಸಖತ್ ಥ್ರಿಲ್ ಆಗಿದ್ದಾರೆ. ಕ್ರೈಂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಈ ಚಿತ್ರದ ಶೂಟಿಂಗ್ ಉತ್ತರಪ್ರದೇಶದ ಗೋರಖ್‍ಪುರ್ ನಲ್ಲಿ ಭರದಿಂದ ಸಾಗುತ್ತಿದೆ. “ಅಪರಾಧಿ” ಚಿತ್ರಕ್ಕೆ ಶೇಖರ್ ಶರ್ಮಾ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಎಲ್ಲಾ ಅಡೆತಡೆಗಳಿಗೂ ‘ಗ್ರೂಫಿ’ ಸಕ್ಸಸ್ ಉತ್ತರ – 25 ದಿನದ ಸಂಭ್ರಮದಲ್ಲಿ ಚಿತ್ರತಂಡ

    ಇದಕ್ಕೂ ಮುನ್ನ ಕೇಸರಿಲಾಲ್ ಯಾದವ್ ಜೊತೆ “ರೈಟ್” ಸಿನಿಮಾದಲ್ಲಿ ನಟಿಸಿರುವ ಮೇಘಶ್ರೀಗೆ “ಅಪರಾಧಿ” ಎರಡನೇ ಭೋಜ್‍ಪುರಿ ಸಿನಿಮಾ. “ರೈಟ್” ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರರಂಗದ ವಾತಾವರಣ, ಚಿತ್ರತಂಡದ ಸಹಕಾರ ಹಾಗೂ ಭೋಜ್ ಪುರಿ ಸಂಸ್ಕೃತಿ ವೇಷ ಭೂಷಣ ತುಂಬಾ ಖುಷಿ ಕೊಟ್ಟಿದೆ. ಸಿನಿಮಾ ಬಿಡುಗಡೆಯನ್ನು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ಮೇಘಶ್ರೀ.

    ಕಿರುತೆರೆ, ಹಿರಿತೆರೆ ಎರಡರಲ್ಲೂ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ಮೇಘಶ್ರೀ ಮೂಲತಃ ಮಲೆನಾಡಿನವರು. ಕಿರುತೆರೆ ಮೂಲಕ ಪ್ರೇಕ್ಷಕರ ಮನಗೆದ್ದ ನಟಿಗೆ ಸಾಲು ಸಾಲು ಸಿನಿಮಾ ಆಫರ್‍ ಗಳು ಒಲಿದು ಬಂತು. ಕೃಷ್ಣ ತುಳಸಿ, ಕದ್ದುಮುಚ್ಚಿ, ಮಾರ್ಚ್ 22, ದಶರಥ, ರಾಜಾಮಾತಾರ್ಂಡ ಚಿತ್ರದಲ್ಲಿ ನಟಿಸಿರುವ ಮೇಘಶ್ರೀ ಕೈಯಲ್ಲಿ ಹಲವು ಕನ್ನಡ ಸಿನಿಮಾಗಳಿವೆ. ಇದರ ಜೊತೆಗೆ ತಮಿಳು ಚಿತ್ರರಂಗದಲ್ಲೂ ಬ್ಯುಸಿಯಾಗಿದ್ದಾರೆ. ತಮಿಳು ಸಿನಿಮಾವೊಂದರಲ್ಲಿ ಲೀಡ್ ರೋಲ್ ನಲ್ಲಿ ಬಣ್ಣಹಚ್ಚಿದ್ದಾರೆ. ತಮಿಳಿನ ಖ್ಯಾತ ಧಾರಾವಾಹಿಯೊಂದರಲ್ಲೂ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ನಾನಿನ್ನೂ ಬದುಕುವುದಿಲ್ಲ: ನಟಿ ವಿಜಯಲಕ್ಷ್ಮೀ ಅತಂಕ

  • ಕದ್ದುಮುಚ್ಚಿ: ಬಚ್ಚಿಟ್ಟ ಭಾವಗಳ ಬೆರಗಾಗಿಸೋ ಕಥೆ!

    ಕದ್ದುಮುಚ್ಚಿ: ಬಚ್ಚಿಟ್ಟ ಭಾವಗಳ ಬೆರಗಾಗಿಸೋ ಕಥೆ!

    ಬೆಂಗಳೂರು: ದುಡ್ಡೊಂದಿದ್ದರೆ ಸಕಲ ಸುಖಗಳೂ ಕಾಲ ಬುಡದಲ್ಲಿ ಮುದುರಿ ಮಲಗುತ್ತವೆ ಅನ್ನೋ ಮನಸ್ಥಿತಿ ಅನೇಕರಿಗಿದೆ. ಆದರೆ ದುಡ್ಡು ಕಾಸಿನಾಚೆಗೆ ಸಿಗೋ ಪ್ರೀತಿ, ನೆಮ್ಮದಿಯೇ ಬದುಕೆಂಬ ಸತ್ಯ ಅನೇಕರ ಅರಿವಿಗೆ ಬಂದಿರೋದಿಲ್ಲ. ಇಂಥಾದ್ದೊಂದು ಸೂಕ್ಷ್ಮ ಎಳೆಯಲ್ಲಿಟ್ಟುಕೊಂಡು ರೂಪುಗೊಂಡಿರುವ ಮಧುರವಾದ ಕಥೆಯನ್ನು ಕದ್ದುಮುಚ್ಚಿ ಚಿತ್ರ ಒಳಗೊಂಡಿದೆ.

    ಈಗಿನ ಕಾಲಮಾನದ ಕೆಲ ಪೋಷಕರಲ್ಲಿಯೂ ದುಡ್ಡೇ ದೊಡ್ಡದು ಎಂಬಂಥಾ ಭ್ರಮ ಇದೆ. ಇದೇ ಮನಸ್ಥಿತಿಯಲ್ಲಿಯೇ ತಮ್ಮ ಮಕ್ಕಳ ಎಳೇ ಮನಸುಗಳನ್ನವರು ಪದೇ ಪದೆ ಘಾಸಿಗೊಳಿಸುತ್ತಿರುತ್ತಾರೆ. ಹಾಗೆಯೇ ನೋವುಣ್ಣುತ್ತಾ ಬೆಳೆದ ಹುಡುಗನೊಬ್ಬ ಎಲ್ಲ ಸಂಪತ್ತನ್ನೂ ಕಡೆಗಣಿಸಿ ಪ್ರೀತಿಯನ್ನಷ್ಟೇ ಅರಸಿ ಹೊರಡೋ ಯುವಕನೊಬ್ಬನ ಸುತ್ತಲಿನ ಕಥೆ ‘ಕದ್ದುಮುಚ್ಚಿ’ ಚಿತ್ರದ್ದು.

    ಹಾಗೆ ಪ್ರೀತಿಯನ್ನರಸಿ ಹೊರಡೋ ಹುಡುಗನ ಮುಂದೆ ಮಲೆನಾಡ ದೇವತೆಯಂಥಾ ಹುಡುಗಿಯೊಬ್ಬಳು ಎದುರಾಗುತ್ತಾಳೆ. ಆ ನಂತರ ಹುಡುಗನ ಬದುಕು ಹೇಗೆ ಬದಲಾಗುತ್ತೆ, ಆತ ಅರಸಿ ಹೊರಟ ಪ್ರೀತಿ ಸಿಗುತ್ತದಾ ಎಂಬುದು ಕಥೆಯ ಜೀವಾಳ. ಆದರೆ ಒಟ್ಟಾರೆ ಸಿನಿಮಾದಲ್ಲಿ ಊಹಿಸಲಾರದ ತಿರುವುಗಳಿವೆ. ಮನಸಾರೆ ನಗುವಂಥಾ ಕಾಮಿಡಿ, ಮೈನವಿರೇಳಿಸೋ ಸಾಹಸ ಮತ್ತು ನೇರವಾಗಿ ಎದೆಗೇ ನಾಟಿಕೊಳ್ಳುವಂಥಾ ಭಾವನಾತ್ಮಕ ವಿಚಾರಗಳೂ ಇವೆಯಂತೆ. ಇಂಥಾ ಹತ್ತಾರು ವೈಶಿಷ್ಟ್ಯಗಳನ್ನ ಹೊಂದಿರೋ ಈ ಚಿತ್ರ ಬಿಡುಗಡೆಯ ಹಾದಿಯಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕದ್ದುಮುಚ್ಚಿ: ಹಳತು ಹೊಸತರ ಮಹಾಸಂಗಮ!

    ಕದ್ದುಮುಚ್ಚಿ: ಹಳತು ಹೊಸತರ ಮಹಾಸಂಗಮ!

    ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಮೂಲಕವೇ ಬಹು ಕಾಲದ ನಂತರ ಹಿರಿಯ ಕಲಾವಿದರನೇಕರು ಮತ್ತೆ ಪ್ರೇಕ್ಷಕರೊಂದಿಗೆ ಮುಖಾಮುಖಿಯಾಗಿದ್ದಾರೆ. ನಿರ್ಮಾಪಕರೇ ಹೇಳೋ ಪ್ರಕಾರ ಈ ಸಿನಿಮಾ ಹಳತು ಮತ್ತು ಹೊಸತರ ಮಹಾಸಂಗಮ!

    ಕದ್ದುಮುಚ್ಚಿ ಚಿತ್ರವನ್ನ ನಿರ್ದೇಶಕ ವಸಂತ್ ರಾಜಾ ಇಂಥಾ ನಾನಾ ವಿಶೇಷತೆಗಳೊಂದಿಗೆ ರೂಪಿಸಿದ್ದಾರೆ. ಹಳೇ ತಲೆಮಾರಿನ ಕಲಾವಿದರನ್ನೂ ಕೂಡಾ ಮತ್ತೆ ಕಣ್ತುಂಬಿಕೊಳ್ಳುವ ಸದಾವಕಾಶವನ್ನು ಕದ್ದುಮುಚ್ಚಿ ಚಿತ್ರ ಓಪನ್ನಾಗಿಯೇ ಪ್ರೇಕ್ಷಕರಿಗೆ ಕೊಟ್ಟಿದೆ.

    ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನ ಆಳಿದ್ದ ದೊಡ್ಡಣ್ಣ ಈ ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ್ದಾರೆ. ಹೊನ್ನವಳ್ಳಿ ಕೃಷ್ಣ ಕೂಡಾ ಇದಕ್ಕೆ ಜೊತೆಯಾಗಿದ್ದಾರೆ. ಇವರೊಂದಿಗೆ ಸದ್ಯದ ಲೀಡ್ ಹಾಸ್ಯ ನಟ ಚಿಕ್ಕಣ್ಣನ ಸಾಥ್ ಕೂಡಾ ಇದೆ. ಈ ಮೂವರ ಪಾತ್ರಗಳೂ ಕೂಡಾ ಕಥೆಯೊಂದಿಗೇ ಹೊಸೆದುಕೊಂಡಿದೆಯಂತೆ. ಈವರೆಗೂ ನಾನಾ ಹೀರೋಗಳ ಜೊತೆ ಕಾಮಿಡಿ ಕಮಾಲ್ ಸೃಷ್ಟಿಸಿದ್ದ ಚಿಕ್ಕಣ್ಣ ಇಲ್ಲಿ ದೊಡ್ಡಣ್ಣರಂಥ ಹಿರಿಯ ಕಲಾವಿದರಿಗೆ ಜೊತೆಯಾಗಿದ್ದಾರೆ.

    ಈ ಹಿರಿ ಕಿರಿಯರ ಜುಗಲ್ಬಂದಿ ಕೂಡಾ ಕದ್ದುಮುಚ್ಚಿ ಸಿನಿಮಾದ ಮುಖ್ಯ ಆಕರ್ಷಣೆ ಎನ್ನಲಡ್ಡಿಯಿಲ್ಲ. ಅದರ ನಿಜವಾದ ಸೊಗಸು ಅನಾವರಣಗೊಳ್ಳೋ ಕಾಲ ಹತ್ತಿರದಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!

    ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!

    ಬೆಂಗಳೂರು: ನಾದಬ್ರಹ್ಮ ಹಂಸಲೇಖ ಸಂಗೀತ ನಿರ್ದೇಶನದ ಸ್ಪರ್ಶದೊಂದಿಗೇ ಕದ್ದುಮುಚ್ಚಿ ಎಂಬ ಹೊಸಬರ ಚಿತ್ರವೊಂದು ಸುದ್ದಿಯಲ್ಲಿದೆ. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಮತ್ತು ಬಿಗ್ ಬಾಸ್ ಫೇಮಿನ ಮೇಘಶ್ರೀ ಅಭಿನಯದ ಈ ಸಿನಿಮಾವೀಗ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಮೆಲುವಾಗಿ ತಾಕಿದೆ. ಬದುಕಿಗೆ ಹತ್ತಿರವಾದ, ಮನೋರಂಜನಾತ್ಮಕ ಅಂಶಗಳನ್ನೂ ಹೊಂದಿರುವ ಈ ಚಿತ್ರವನ್ನು ಅಕ್ಕರಾಸ್ಥೆಯಿಂದಲೇ ನಿರ್ಮಾಣ ಮಾಡಿರುವವರು ವಿ.ಜಿ ಮಂಜುನಾಥ್.

    ಸಿನಿಮಾ ಎಂಬುದರ ಸೆಳೆತವೇ ಮಾಯೆಯಂಥಾದ್ದು. ಅದು ಎತ್ತೆತ್ತಲ್ಲಿಂದಲೋ ಮನಸುಗಳನ್ನ ಸೆಳೆದು ಬಿಡುತ್ತದೆ. ಗೊತ್ತೇ ಆಗದಂತೆ ತನ್ನ ಭಾಗವಾಗಿಸಿಕೊಂಡು ಬಿಡುತ್ತದೆ. ಈ ಮಾತಿಗೆ ಹತ್ತಾರು ಉದಾಹರಣೆಗಳಿವೆಯಾದರೂ ಕದ್ದುಮುಚ್ಚಿ ಚಿತ್ರದ ನಿರ್ಮಾಪಕರಾದ ಮಂಜುನಾಥ್ ಅದಕ್ಕೆ ತಾಜಾ ಉದಾಹರಣೆಯಂಥವರು.

    ಆದಿಚುಂಚನಗಿರಿ ಸಮೀಪದ ವಡ್ಡರಹಳ್ಳಿಯವರಾದ ಮಂಜುನಾಥ್ ಅಪ್ಪಟ ರೈತಾಪಿ ವರ್ಗದಿಂದಲೇ ಬಂದವರು. ಈವತ್ತಿಗೂ ಅವರ ಬೇರುಗಳಿರೋದು ಅಲ್ಲಿಯೇ. ಆರಂಭ ಕಾಲದಲ್ಲಿ ಮಂಜುನಾಥ್ ಅವರ ಆಸಕ್ತಿಯಿದ್ದದ್ದು ಶಿಕ್ಷಣ ಕ್ಷೇತ್ರದತ್ತ. ಟಿಸಿಎಚ್ ಸೇರಿದಂತೆ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದ ಅವರು ಅಚಾನಕ್ಕಾಗಿ ಇಂಡಸ್ಟ್ರಿಯಲ್ ವಲಯಕ್ಕೆ ಪಾದಾರ್ಪಣೆ ಮಾಡಿದ್ದ 2000ನೇ ಇಸವಿಯಲ್ಲಿ. ಆದಿತ್ಯ ಬಿರ್ಲಾ ಕಂಪೆನಿಯ ಸ್ಟೀಲ್ ಸರಬರಾಜು ಉದ್ಯಮ ಆರಂಭಿಸಿ ಅದರಲ್ಲಿಯೇ ಪರಿಶ್ರಮ ಪಟ್ಟು ಗೆದ್ದ ಮಂಜುನಾಥ್ ಅವರ ಪ್ರಧಾನ ಕನಸಾಗಿದ್ದದ್ದು ಸಿನಿಮಾ.

    ಆರಂಭ ಕಾಲದಿಂದಲೂ ಮಂಜುನಾಥ್ ಅವರಿಗೆ ಸಿನಿಮಾ ಎಂದರೆ ಎಲ್ಲಿಲ್ಲದ ಪ್ರೀತಿ. ಅವರ ಮನೋರಂಜನೆಯ ಮೂಲವಾಗಿದ್ದದ್ದೂ ಕೂಡಾ ಸಿನಿಮಾಗಳೇ. ಅವರೊಬ್ಬ ಉದ್ಯಮಿಯಾಗಿ ಬೆಳೆದ ನಂತರ ಒಂದೊಳ್ಳೆ ಸಿನಿಮಾ ಮಾಡ ಬೇಕೆಂಬ ಹಂಬಲ ತೀವ್ರವಾಗಿತ್ತು. ಮನೋರಂಜನೆಯ ಅಂಶಗಳ ಜೊತೆಗೆ ಈ ಸಮಾಜಕ್ಕೆ ಸಂದೇಶ ಸಾರುವಂಥಾ ಕಥೆಯೊಂದು ಸಿಕ್ಕರೆ ಸಿನಿಮಾ ಮಾಡೋ ನಿರ್ಧಾರದೊಂದಿಗೆ ಮಂಜುನಾಥ್ ಮುಂದುವರೆಯುತ್ತಿದ್ದರು. ಅದೇ ಕಾಲಕ್ಕೆ ಸರಿಯಾಗಿ ನಿರ್ದೇಶಕ ವಸಂತ್ ಮಂಜುನಾಥ್ ಅವರನ್ನು ಸಂಪರ್ಕಿಸಿದ್ದರು.

    ವಸಂತ್ ಹೇಳಿದ ಕಥೆ ಇಷ್ಟವಾಗಿ 2016ರಲ್ಲಿ ಅದು ಟೇಕಾಫ್ ಕೂಡಾ ಆಗಿತ್ತು. ಆದರೆ ಎಲ್ಲವೂ ಅಚ್ಚುಕಟ್ಟಾಗಿ ಮೂಡಿ ಬರಬೇಕೆಂಬ ಮನಸ್ಥಿತಿಯ ಮಂಜುನಾಥ್ ಎಲ್ಲದರಲ್ಲಿಯೂ ಅಕ್ಕರಾಸಕ್ತಿಯಿಂದಲೇ ಗಮನ ಹರಿಸಿದ್ದರು. ಆದ್ದರಿಂದಲೇ ಕೊಂಚ ತಡವಾದರೂ ಇಡೀ ಚಿತ್ರ ಚೆಂದಗೆ ಮೂಡಿ ಬಂದಿದೆ ಎಂಬ ಆತ್ಮತೃಪ್ತಿ ಮಂಜುನಾಥ್ ಅವರಲ್ಲಿದೆ.

    ನಗರ ಜೀವನದ ಜಂಜಾಟಗಳಿಂದ ರೋಸತ್ತು ಮತ್ಯಾವುದೋ ಮಾಯೆಯ ಬೆಂಬಿದ್ದು ಹೊರಡೋ ಯುವಕನ ಸುತ್ತಾ ಈ ಚಿತ್ರದ ಕಥೆ ಬಿಚ್ಚಿಕೊಳ್ಳುತ್ತದೆಯಂತೆ. ಆ ಹುಡುಕಾಟದಲ್ಲಿಯೇ ಭರ್ಜರಿ ಮನೋರಂಜನೆಯೊಂದಿಗೆ ಬದುಕಿಗೆ ಹತ್ತಿರವಾದ ಅಂಶಗಳೂ ಅನಾವರಣಗೊಳ್ಳುತ್ತಾ ಸಾಗುತ್ತವೆ. ಕಡೆಗೊಂದು ಪರಿಣಾಮಕಾರಿಯಾದ ಸಂದೇಶವನ್ನೂ ನೀಡಲಾಗಿದೆ. ಒಟ್ಟಾರೆಯಾಗಿ ಇದು ಹೊಸಾ ಸಾಧ್ಯತೆಗಳನ್ನು ಕಾಣಿಸುವಂಥಾ ಪಕ್ಕಾ ಕಮರ್ಶಿಯಲ್ ಚಿತ್ರ.

    ಅದೇನೇ ಅಡೆತಡೆಗಳು ಎದುರಾದರೂ ಮಂಜುನಾಥ್ ಯಾವುದಕ್ಕೂ ಕೊರತೆ ಮಾಡದಂತೆ ಕದ್ದುಮುಚ್ಚಿ ಚಿತ್ರವನ್ನ ರೂಪಿಸಿದ್ದಾರೆ. ಇದರಲ್ಲಿ ಕಲಾವಿದರದ್ದೊಂದು ದೊಡ್ಡ ದಂಡೇ ಇದೆ. ಕಾಮಿಡಿಯೂ ಈ ಚಿತ್ರದ ಪ್ರಧಾನ ಅಂಶ. ಚಿಕ್ಕಣ್ಣ, ಹೊನ್ನವಳ್ಳಿ ಕೃಷ್ಣ, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಅನೇಕರ ಕಾಮಿಡಿ ಕಮಾಲ್ ಈ ಚಿತ್ರದಲ್ಲಿದೆ. ಇನ್ನುಳಿದಂತೆ ಬಿ.ವಿ ರಾಧಾ, ಸುಚೇಂದ್ರ ಪ್ರಸಾದ್ ಮುಂತಾದವರ ಅದ್ಧೂರಿ ತಾರಾಗಣವನ್ನ ಕದ್ದುಮುಚ್ಚಿ ಚಿತ್ರ ಹೊಂದಿದೆ.

    ಈ ಮೂಲಕ ಹೊಸಾ ಅಲೆಯ ಚೆಂದದ್ದೊಂದು ಚಿತ್ರವನ್ನ ನಿರ್ಮಾಣ ಮಾಡಿದ ಖುಷಿ ಮಂಜುನಾಥ್ ಅವರಿಗಿದೆ. ಈಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡಿರೋದರಿಂದ ಇದೇ ತಿಂಗಳ ಇಪ್ಪತ್ತೆರಡನೇ ತಾರೀಕಿನಂದು ಈ ಚಿತ್ರವನ್ನ ತೆರೆಗಾಣಿಸುವ ಯೋಜನೆಯನ್ನೂ ಅವರು ಹಾಕಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv