Tag: Mehbooba Mufti

  • ಕಾಶ್ಮೀರದ ಮೀಸಲಾತಿ ನೀತಿ – ಏನಿದು ವಿವಾದ?

    ಕಾಶ್ಮೀರದ ಮೀಸಲಾತಿ ನೀತಿ – ಏನಿದು ವಿವಾದ?

    ಮ್ಮು ಮತ್ತು ಕಾಶ್ಮೀರದ (Jammu and Kashmir) ನೂತನ ಮೀಸಲಾತಿ ನೀತಿಯ (Reservation Policy) ವಿರುದ್ಧ ಸಾರ್ವಜನಿಕರು ಹಾಗೂ ರಾಜಕೀಯ ಮುಖಂಡರಿಂದ ಪರ ಹಾಗೂ ವಿರೋಧದ ಧ್ವನಿ ಕೇಳಿಬರುತ್ತಿದೆ. ಈ ನೂತನ ಮೀಸಲಾತಿ ವಿರುದ್ಧ ಪ್ರತಿಭಟನೆಗಳು ಸಹ ನಡೆಯುತ್ತಿವೆ. ಈ ನೀತಿ ಕೆಲ ವರ್ಗಗಳಿಗೆ ಹೆಚ್ಚಿನ ಮೀಸಲು ಹಾಗೂ ಇನ್ನೂ ಕೆಲವರಿಗೆ ತೀರ ಕಡಿಮೆ ಅವಕಾಶವನ್ನು ಕೊಡುತ್ತದೆ ಎಂಬುದು ಪ್ರತಿಭಟನಾಕಾರರ ವಾದ.

    ಲೋಕಸಭೆಯು ಡಿ.2023 ರಲ್ಲಿ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿತು. ಇದು ಉದ್ಯೋಗ, ಶಿಕ್ಷಣ ಸಂಸ್ಥೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಮೀಸಲು ಕ್ಷೇತ್ರಗಳಿಗೆ ಪರಿಶಿಷ್ಟ ಪಂಗಡಗಳ (ST) ವರ್ಗಕ್ಕೆ ಮೀಸಲಾತಿಯನ್ನು ಒದಗಿಸುತ್ತದೆ. ಈ ಮಸೂದೆಯು ಪಹಾರಿ ಜನಾಂಗ, ಪದಾರಿ ಬುಡಕಟ್ಟುಗಳು, ಕೋಲಿಗಳು ಮತ್ತು ಗಡ್ಡಾ ಬ್ರಾಹ್ಮಣ ಜನಾಂಗಕ್ಕೆ ಎಸ್‌ಟಿ ಸ್ಥಾನಮಾನವನ್ನು ನೀಡುವ ಮೂಲಕ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

    ಹೊಸ ಮೀಸಲಾತಿ ವ್ಯವಸ್ಥೆಯು ಅಲ್ಪಸಂಖ್ಯಾತ ಬುಡಕಟ್ಟುಗಳಿಗೆ ಉದ್ಯೋಗದಲ್ಲಿ 60% ಸ್ಥಾನಗಳನ್ನು ನೀಡುತ್ತದೆ. ಇನ್ನೂ ಉಳಿದ 40% ಮೀಸಲಾತಿ ಬಹುಸಂಖ್ಯಾತರಿಗೆ ಸಿಗಲಿದೆ. ಹೊಸ ನೀತಿಯಿಂದ ನಮಗೆ ಸಮಸ್ಯೆಯಾಗಲಿದೆ ಎಂದು ಮೀಸಲಾತಿ ವಿರುದ್ಧ ಧ್ವನಿ ಎತ್ತಿರುವ ಬಹುಸಂಖ್ಯಾತರು ಆರೋಪಿಸಿದ್ದಾರೆ. ಈ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೀಸಲಾತಿ ವಿಷಯ ಮತ್ತೊಮ್ಮೆ ಸಾರ್ವಜನಿಕ ಚರ್ಚೆ ಮತ್ತು ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿದೆ.

    ಏನಿದು ನೂತನ ಮೀಸಲಾತಿ ನೀತಿ?
    ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಆಡಳಿತವು 2005ರ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ನಿಯಮಗಳನ್ನು ತಿದ್ದುಪಡಿ ಮಾಡಿತು. ಈ ಹೊಸ ತಿದ್ದುಪಡಿ ಮೂಲಕ ಸಾಮಾನ್ಯ ವರ್ಗದ ಮೀಸಲಾತಿಯ ಪ್ರಮಾಣವನ್ನು ಕಡಿಮೆ ಮಾಡಿತು. ಈ ಮೂಲಕ ಪಹಾರಿಗಳು ಮತ್ತು ಇತರ ಮೂರು ಬುಡಕಟ್ಟುಗಳಿಗೆ 10% ರಷ್ಟು ಮೀಸಲಾತಿಯನ್ನು ಅನುಮೋದಿಸಿತು. ಇದರಿಂದ ಪರಿಶಿಷ್ಟ ಪಂಗಡ (ST) ವರ್ಗದ ಅಡಿಯಲ್ಲಿ ಒಟ್ಟು ಮೀಸಲಾತಿಗಳನ್ನು 20%ಗೆ ಏರಿಕೆ ಆಯಿತು.

    ಮೀಸಲಾತಿ ನೀತಿಯ ಮರುಪರಿಶೀಲನೆಗೆ ಹೆಚ್ಚಿದ ಒತ್ತಾಯ
    ನೂತನ ಮೀಸಲಾತಿ ನೀತಿಯು ರಾಜಕಾರಣಿಗಳು ಮತ್ತು ವಿದ್ಯಾರ್ಥಿಗಳ ಟೀಕೆಯನ್ನು ಎದುರಿಸುತ್ತಿದೆ. ಈ ನೀತಿಯಿಂದ ಅನ್ಯಾಯವಾಗಿದೆ, ಮೀಸಲಾತಿ ನೀತಿಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ (Omar Abdullah) ಅವರ ನಿವಾಸದ ಹೊರಗೆ ಪ್ರತಿಭಟನೆಗಳು ನಡೆದಿವೆ. ಇದರಿಂದಾಗಿ ಸರ್ಕಾರ ಮೀಸಲಾತಿ ನೀತಿ ಮರುಮೌಲ್ಯಮಾಪನ ಮಾಡಲು 3 ಸದಸ್ಯರ ಸಮಿತಿಯನ್ನು ರಚಿಸಿದೆ. ಅಲ್ಲದೇ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರವಾಗಿ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ಹೀಗಿರುವಾಗ ಅವರ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಇದೀಗ ಒಮರ್ ಅಬ್ದುಲ್ಲಾ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುತ್ತಿದೆ.

    ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದೇನು?
    ಜಮ್ಮು ಮತ್ತು ಕಾಶ್ಮೀರದಲ್ಲಿ ಮೀಸಲಾತಿ ನೀತಿಯನ್ನು ಪರಿಶೀಲಿಸಲು ರಚಿಸಲಾದ ಸಂಪುಟ ಉಪ ಸಮಿತಿಯು ಆರು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸಧ್ಯ ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

    ಮೀಸಲಾತಿಗೆ ಹೊಸದಾಗಿ ಗುರುತಿಸಲ್ಪಟ್ಟ ಜಾತಿಗಳು
    ಪದ್ದರಿ ಬುಡಕಟ್ಟು, ಪಹಾರಿ ಜನಾಂಗೀಯ ಗುಂಪು, ಗಡ್ಡಾ ಬ್ರಾಹ್ಮಣ ಮತ್ತು ಕೋಲಿ ಸಮುದಾಯಗಳನ್ನು ಒಳಗೊಂಡಂತೆ ಕಡಿಮೆ ಪ್ರಾತಿನಿಧ್ಯದ ಗುಂಪುಗಳಿಗೆ ಹೆಚ್ಚುವರಿ 10% ಮೀಸಲಾತಿಯನ್ನು ಒದಗಿಸಲಾಗಿದೆ.

    ಹೊಸ ವಿವಾದ ಏನು?
    ಕೆಲವು ರಾಜಕೀಯ ಮುಖಂಡರು ಮೀಸಲಾತಿ ನೀತಿಗೆ ಆಕ್ಷೇಪಣೆ ಎತ್ತಿದ್ದಾರೆ. ಅದರ ನ್ಯಾಯಸಮ್ಮತತೆ ಮತ್ತು ಪರಿಣಾಮವನ್ನು ಪ್ರಶ್ನಿಸಿದ್ದಾರೆ. ಈ ನೀತಿಯನ್ನು ಪರಿಚಯಿಸಿದಾಗ ಲೆಫ್ಟಿನೆಂಟ್ ಗವರ್ನರ್ ಆಡಳಿತದ ಸಮಯದಲ್ಲಿ ಯಾವುದೇ ಗಮನಾರ್ಹ ವಿರೋಧವಿರಲಿಲ್ಲ. ಆದರೆ ನೂತನ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ವಿವಾದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇದು ರಾಜಕೀಯ ಪ್ರೇರಿತ ಎಂಬ ಆರೋಪ ಸಹ ಇದೆ.

    ಮೆಹಬೂಬಾ ಮುಫ್ತಿ ಹೇಳಿದ್ದೇನು?
    ಇದು ಬಹಳ ಗಂಭೀರವಾದ ವಿಚಾರವಾಗಿದೆ. ಚಿಕ್ಕಂದಿನಿಂದಲೂ ನಮ್ಮ ಮಕ್ಕಳಿಗೆ ಕಷ್ಟಪಟ್ಟು ದುಡಿದು ಜೀವನದಲ್ಲಿ ಯಶಸ್ಸು ಗಳಿಸಲು ಹೇಳುತ್ತೇವೆ. ಆದರೆ ಇಂದು ಅರ್ಹತೆಯೇ ಅತಿ ದೊಡ್ಡ ಸವಾಲಾಗಿದೆ. ಪ್ರಸ್ತುತ ಮೀಸಲಾತಿ ನೀತಿಯು ಓಪನ್ ಮೆರಿಟ್ ವಿದ್ಯಾರ್ಥಿಗಳ ಮೇಲೆ ಅಸಮಾನವಾದ ಪರಿಣಾಮ ಬೀರುತ್ತಿದೆ ಎಂದು ಅವರು (Mehbooba Mufti) ಕಳವಳ ವ್ಯಕ್ತಪಡಿಸಿದ್ದಾರೆ.

    ನಿರುದ್ಯೋಗ ನಿಜವಾದ ಸವಾಲು
    ಜಮ್ಮು ಮತ್ತು ಕಾಶ್ಮೀರವು ನಿರುದ್ಯೋಗ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ವರದಿ ಪ್ರಕಾರ 32.8% ನಿರುದ್ಯೋಗ ಇಲ್ಲಿದೆ. ಇದು ಭಾರತದಲ್ಲಿಯೇ ಅತ್ಯಧಿಕವಾಗಿದೆ. ಮರ್ವಾ, ಪದ್ದಾರ್, ವಾರ್ವಾನ್, ದುಡು, ಬನಿ ಮತ್ತು ಭಲೆಸ್ಸಾದಂತಹ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ, ಕಳಪೆ ಮೂಲಸೌಕರ್ಯ, ಅಸಮರ್ಪಕ ಶಿಕ್ಷಣ ಮತ್ತು ಸೀಮಿತ ಉದ್ಯೋಗಾವಕಾಶಗಳೊಂದಿಗೆ ಪರಿಸ್ಥಿತಿ ಈ ಹಂತದಲ್ಲಿದೆ.

    ಈ ಪ್ರದೇಶಗಳಲ್ಲಿನ ಯುವಕರು ಸಾಮಾನ್ಯವಾಗಿ ಉದ್ಯೋಗಕ್ಕಾಗಿ ವಲಸೆ ಹೋಗುತ್ತಾರೆ. ಇದರಿಂದ ಮೀಸಲಾತಿಯ ವಿಷಯದಲ್ಲಿ ಜನರನ್ನು ವಿಭಜಿಸುವ ಬದಲು, ರಾಜಕೀಯ ನಾಯಕರು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಉತ್ತಮ ಶಿಕ್ಷಣ ಸೌಲಭ್ಯಗಳು ಮತ್ತು ಕೈಗಾರೀಕರಣದ ಮೂಲಕ ನಿರುದ್ಯೋಗವನ್ನು ಪರಿಹರಿಸುವತ್ತ ಗಮನಹರಿಸಬೇಕು ಎಂಬ ವಾದವೂ ಇನ್ನೊಂದೆಡೆ ಕೇಳಿ ಬಂದಿದೆ.

    ಯಾರ್ಯಾರಿಗೆ ಎಷ್ಟೆಷ್ಟು ಮೀಸಲಾತಿ?
    1. ವರ್ಗ A: (36%): ಪರಿಶಿಷ್ಟ ಜಾತಿಗಳು (SC 8%), ಇತರೆ ಹಿಂದುಳಿದ ವರ್ಗಗಳು (OBC 8%), ಪರಿಶಿಷ್ಟ ಪಂಗಡಗಳು (ST-1, 10%), ಪರಿಶಿಷ್ಟ ಪಂಗಡಗಳು (ST-2 10%)

    2. ವರ್ಗ B: ಎಲ್ಲರಿಗೂ ಸಾಮಾನ್ಯ ಮೀಸಲಾತಿಗಳು (24%) – ಇವು ಸಾಮಾನ್ಯ ಮತ್ತು ಮೀಸಲು ವರ್ಗಗಳೆರಡಕ್ಕೂ ಅನ್ವಯಿಸುತ್ತವೆ. ಹಿಂದುಳಿದ ಪ್ರದೇಶಗಳ ನಿವಾಸಿಗಳು (RBA 10%), ನಿಯಂತ್ರಣ ರೇಖೆಯ ಪ್ರದೇಶಗಳು (ALC 4%), ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS 10%)

    3. ವರ್ಗ C: ಅಡ್ಡ ಮೀಸಲಾತಿಗಳು (10%) – ಇವುಗಳು ಎಲ್ಲಾ ವಿಭಾಗಗಳಿಗೂ ಅನ್ವಯಿಸುತ್ತವೆ (A, B, ಮತ್ತು D). ಮಾಜಿ ಸೈನಿಕರು 6%, ವಿಕಲಾಂಗ ವ್ಯಕ್ತಿಗಳು (PWD 4%),

    4. ವರ್ಗ D: ಸಾಮಾನ್ಯ ವರ್ಗ (30%): ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

  • J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

    J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

    – ಜಮ್ಮು-ಕಾಶ್ಮೀರ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಪಿಡಿಪಿ ಮುಖ್ಯಸ್ಥೆ
    – ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಕಿಡಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದು, ಈ ನಡುವೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ (Mehbooba Mufti) ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಶನಿವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಾಡೆಲ್‌ ಅನ್ನೇ ಅನುಸರಿಸಿದಂತಿದೆ.

    ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತವಾಗಿ (Free Electricity) ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.

    ಮುಂದುವರಿದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಹಬೂಬಾ ಮುಫ್ತಿ, ದೇವಸ್ಥಾನಗಳು, ಮಸೀದಿಗಳು ಮತ್ತು ಗುರುದ್ವಾರಗಳಿಗೆ ತಮ್ಮ ಪಕ್ಷವು ಉಚಿತ ವಿದ್ಯುತ್ ಕಲ್ಪಿಸಲಿದೆ. ತಮ್ಮ ಪಕ್ಷವು ಗುತ್ತಿಗೆ ಶಿಕ್ಷಕರ ಗೌರವಧನ ಹೆಚ್ಚಿಸಲಿದೆ. ಜೈಲಿನಲ್ಲಿರುವವರಿಗೆ ಉಚಿತ ಸೌಲಭ್ಯ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ.

    ಪಿಡಿಪಿ ಏಕಾಂಗಿ ಸ್ಪರ್ಧೆ:
    ಹೊರತುಪಡಿಸಿ, ಮುಂಬರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (NC) ಮತ್ತು ಕಾಂಗ್ರೆಸ್ (Congress) ನಡುವಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದರು. ಆ ಎರಡೂ ಪಕ್ಷಗಳು ಯಾವುದೇ ಅಜೆಂಡಾ ಹೊಂದಿಲ್ಲ ಮತ್ತು ಕೇವಲ ಸೀಟು ಹಂಚಿಕೊಂಡು ಅಧಿಕಾರಕ್ಕೆ ಬರುವುದಷ್ಟೇ ಅವರ ಮೈತ್ರಿ ಉದ್ದೇಶ. ತಮ್ಮ ಪಕ್ಷವು ಯಾವುದೇ ಅಜೆಂಡಾ ಇಲ್ಲದೇ ಕೇವಲ ಸೀಟು ಹಂಚಿಕೆಯ ಮಾತುಕತೆಯಿಂದಾಗಿ ಯಾವುದೇ ಮೈತ್ರಿ ಅಡಿಯಲ್ಲಿ ಸ್ಪರ್ಧಿಸುವುದಿಲ್ಲ. ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

    ನಮ್ಮ ಅಜೆಂಡಾವನ್ನು ಎನ್‌ಸಿ ಮತ್ತು ಕಾಂಗ್ರೆಸ್‌ ಒಪ್ಪಿದರೆ ಅವರು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿ. ನಾವೂ ಅವರನ್ನು ಬೆಂಬಲಿಸುತ್ತೇವೆ. ನನಗೆ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವುದು ಎಲ್ಲಕ್ಕಿಂತ ಮುಖ್ಯವಾಗಿದೆ ಎಂದರು.

    ಅಲ್ಲದೇ 2014 ರಿಂದ 2018ರ ವರೆಗೆ ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಕುರಿತು ಮಾತನಾಡಿ, ನಾವು ಈ ಹಿಂದೆ ಮೈತ್ರಿ ಮಾಡಿಕೊಂಡಾಗ ನಮಗೆ ಒಂದು ಅಜೆಂಡಾ ಇತ್ತು. ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ, ಅವರು ನಮ್ಮ ಅಜೆಂಡಾವನ್ನು ಒಪ್ಪಿದ ಬಳಿಕವಷ್ಟೇ ಮೈತ್ರಿ ಮಾಡಿಕೊಂಡಿದ್ದೆವು ಎಂದು ತಿಳಿಸಿದರು.

  • ಭಾರತ ಪ್ರಗತಿಯತ್ತ ಸಾಗಲು ಭಾರತ್ ಜೋಡೋ ಯಾತ್ರೆಗೆ ಜೊತೆಯಾಗುತ್ತೇನೆ: ಮೆಹಬೂಬಾ ಮುಫ್ತಿ

    ಭಾರತ ಪ್ರಗತಿಯತ್ತ ಸಾಗಲು ಭಾರತ್ ಜೋಡೋ ಯಾತ್ರೆಗೆ ಜೊತೆಯಾಗುತ್ತೇನೆ: ಮೆಹಬೂಬಾ ಮುಫ್ತಿ

    ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಭಾಗವಹಿಸಲು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮುಖ್ಯಸ್ಥೆ ಮೆಹಬೂಬಾ ಮುಫ್ತಿ Mehbooba (Mufti) ಒಪ್ಪಿಕೊಂಡಿದ್ದಾರೆ. ಭಾರತ ಪ್ರಗತಿಯತ್ತ ಸಾಗಲು ಮತ್ತು ಬದಲಾವಣೆಗಾಗಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ರಾಹುಲ್ ಗಾಂಧಿ ನನ್ನನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ಯಾರೊಂದಿಗಾದರೂ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ ಭಾರತ್ ಜೋಡೋ ಯಾತ್ರೆಗೆ ಜೊತೆಯಾಗುತ್ತೇನೆ. ಭಾರತದ ಪ್ರಗತಿಗಾಗಿ ಹೆಜ್ಜೆ ಇಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‍ಎಸ್ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತಿದೆ: ರವೀಂದ್ರ ಜಡೇಜಾ

    ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ, ಹರಿಯಾಣದ ಬಳಿಕ ವಿರಾಮ ನೀಡಲಾಗಿದೆ. 10 ರಾಜ್ಯಗಳ ಮೂಲಕ 2,800 ಕಿ.ಮೀ.ಗೂ ಹೆಚ್ಚು ಕ್ರಮಿಸಿರುವ ಯಾತ್ರೆ ಒಂಬತ್ತು ದಿನಗಳ ಚಳಿಗಾಲದ ವಿರಾಮದಲ್ಲಿದ್ದು, ಜನವರಿ 3 ರಂದು ಪುನರಾರಂಭಗೊಳ್ಳಲಿದೆ. ಇದನ್ನೂ ಓದಿ: ಬೆಳಗಾವಿ ಸೇರಿ 865 ಹಳ್ಳಿಗಳು ನಮಗೆ ಸೇರಬೇಕು – ಮಹಾರಾಷ್ಟ್ರ ಅಸೆಂಬ್ಲಿ ಸರ್ವಾನುಮತದ ನಿರ್ಣಯ

    Live Tv
    [brid partner=56869869 player=32851 video=960834 autoplay=true]

  • 24 ಗಂಟೆಯೊಳಗೆ ಸರ್ಕಾರಿ ವಸತಿ ಗೃಹ ಖಾಲಿ ಮಾಡಿ – ಕಾಶ್ಮೀರ ಮಾಜಿ ಸಿಎಂ ಮುಫ್ತಿ ಸೇರಿ 7 ಮಂದಿಗೆ ನೋಟಿಸ್‌

    24 ಗಂಟೆಯೊಳಗೆ ಸರ್ಕಾರಿ ವಸತಿ ಗೃಹ ಖಾಲಿ ಮಾಡಿ – ಕಾಶ್ಮೀರ ಮಾಜಿ ಸಿಎಂ ಮುಫ್ತಿ ಸೇರಿ 7 ಮಂದಿಗೆ ನೋಟಿಸ್‌

    ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೌಸಿಂಗ್ ಕಾಲೋನಿ ಖಾನಬಲ್ ಪ್ರದೇಶದಲ್ಲಿನ ಸರ್ಕಾರಿ ವಸತಿ ಗೃಹಗಳನ್ನು ಖಾಲಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಸೇರಿದಂತೆ ಏಳು ಮಾಜಿ ಶಾಸಕರಿಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

    ಅನಂತನಾಗ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ಅವರು ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಈ ನೋಟಿಸ್‌ ಹೊರಡಿಸಿದ್ದಾರೆ. ಮಾಜಿ ಶಾಸಕ ಮೊಹಮ್ಮದ್ ಅಲ್ತಾಫ್ ವಾನಿ, ಮಾಜಿ ಶಾಸಕ ಅಬ್ದುಲ್ ರಹೀಮ್ ರಾಥರ್, ಮಾಜಿ ಶಾಸಕ ಅಬ್ದುಲ್ ಮಜೀದ್ ಭಟ್ ಮತ್ತು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ವಸತಿ ಗೃಹ ತೆರವು ಮಾಡಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಸೇವೆ ಮಾಡಲು ನೇಮಕವಾಗಿದ್ರು 10 ಜನ!

    ಇವರಿಗೆ ಸೇರಿದ ಸರ್ಕಾರಿ ವಸತಿ ಗೃಹ ಸಂಖ್ಯೆ 1, 4, 6 ಮತ್ತು 7 ರ ನಿವಾಸಗಳನ್ನು ತೆರವು ಮಾಡಲು ತಿಳಿಸಲಾಗಿದೆ. 24 ಗಂಟೆಗಳ ಒಳಗೆ ಖಾಲಿ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಾಜಿ ಶಾಸಕ ಅಲ್ತಾಫ್ ಷಾ ಅಲಿಯಾಸ್ ಕಾಲೋ, ಮಾಜಿ ಎಂಎಲ್‌ಸಿ ಬಶೀರ್ ಶಾ ಅಲಿಯಾಸ್ ವೀರಿ, ಮಾಜಿ ಎಂಎಲ್‌ಸಿ ಚೌಧರಿ ನಿಜಾಮುದ್ದೀನ್, ಮಾಜಿ ಶಾಸಕ ಅಬ್ದುಲ್ ಕಬೀರ್ ಪಠಾಣ್ ಮತ್ತು ಎಂಸಿ ಕೌನ್ಸಿಲರ್ ಶೇಖ್ ಮೊಹಿಯುದ್ದೀನ್ ಸೇರಿದಂತೆ ಇತರರು ಸಹ ಸರ್ಕಾರಿ ವಸತಿ ಗೃಹ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ಹೌಸಿಂಗ್ ಕಾಲೋನಿ ಖಾನಬಾಳದಲ್ಲಿ ಸರ್ಕಾರಿ ಕ್ವಾರ್ಟರ್ಸ್ ಇದ್ದು, ನಿಗದಿತ ಸಮಯದೊಳಗೆ ನಿವೇಶನ ತೆರವು ಮಾಡದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • BJP ಸರ್ಕಾರದಿಂದ ಹಿಂದುತ್ವ ಅಜೆಂಡಾ ಪ್ರಚಾರ- ಮೆಹಬೂಬಾ ಮುಫ್ತಿ ಆಕ್ಷೇಪ

    BJP ಸರ್ಕಾರದಿಂದ ಹಿಂದುತ್ವ ಅಜೆಂಡಾ ಪ್ರಚಾರ- ಮೆಹಬೂಬಾ ಮುಫ್ತಿ ಆಕ್ಷೇಪ

    ಶ್ರೀನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು (Central Government) ಕಾಶ್ಮೀರದಲ್ಲಿ ಹಿಂದುತ್ವ ಅಜೆಂಡಾ ಪ್ರಚಾರ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು (Students) `ರಘುಪತಿ ರಾಘವ ರಾಜಾ ರಾಂ’ ಹಾಡುತ್ತಿರುವ ವೀಡಿಯೋವನ್ನು (Viral Video) ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಮುಫ್ತಿ, ಇದು ಕೇಂದ್ರ ಸರ್ಕಾರದ ಹಿಂದುತ್ವ (Hindutva) ಅಜೆಂಡಾವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ತೆರವು ಪ್ರಹಸನಕ್ಕೆ ಬಿತ್ತಾ ಬ್ರೇಕ್..?- ವಿಲ್ಲಾಗಳ ಕಡೆ ಮುಖಮಾಡದ ಜೆಸಿಬಿ!

    `ಧಾರ್ಮಿಕ ವಿದ್ವಾಂಸರನ್ನು ಜೈಲಿಗಟ್ಟುವುದು, ಜಮ್ಮಾ ಮಸೀದಿಯನ್ನು (Jama Masjid) ಮುಚ್ಚುವುದು ಮತ್ತು ಶಾಲಾ ಮಕ್ಕಳಿಗೆ ಹಿಂದೂ ಸ್ತೋತ್ರ ಹಾಡಲು ನಿರ್ದೇಶಿಸುವುದು ಕಾಶ್ಮೀರದಲ್ಲಿ ಭಾರತ ಸರ್ಕಾರದ ನಿಜವಾದ ಹಿಂದುತ್ವವನ್ನು ಬಿಂಬಿಸಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    1 ನಿಮಿಷ 45 ಸೆಕೆಂಡುಗಳಿರುವ ಈ ವೀಡಿಯೋನಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ `ರಘುಪತಿ ರಾಘವ ರಾಜಾ ರಾಂ’ (Raghupati Raghav Raja Ram) ಭಜನೆಯನ್ನು ಪಠಿಸುತ್ತಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    bjP

    ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ (BJP Leader) ಕವೀಂದರ್ ಗುಪ್ತಾ, ಮುಫ್ತಿಯವರು ಎಲ್ಲವನ್ನೂ ವಿವಾದಾತ್ಮಕವಾಗಿ ಪ್ರಯತ್ನಿಸುತ್ತಿದ್ದಾರೆ. ಕಾಶ್ಮೀರದ ಶಾಲೆಯೊಂದರಲ್ಲಿ ಹಾಡಿದ ಭಜನೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಈ ಭಜನಾ ಗೀತೆಯಲ್ಲಿ `ಈಶ್ವರ ಅಲ್ಲಾ ತೇರೋ ನಾಮ್, ಸಬ್ಕೋ ಸನ್ಮತಿ ದೇ ಭಗವಾನ್’ ಕೂಡ ಇದೆ. ಮೆಹಬೂಬಾ ಮುಫ್ತಿಗೆ ಈ ಸನ್ಮತಿ ಸಿಗಲಿ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಂಡಿತ್‌ ಕುಟುಂಬದ ಭೇಟಿ ತಡೆಯಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ: ಮುಫ್ತಿ

    ಪಂಡಿತ್‌ ಕುಟುಂಬದ ಭೇಟಿ ತಡೆಯಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ: ಮುಫ್ತಿ

    ಶ್ರೀನಗರ: ಇತ್ತೀಚೆಗೆ ಶೋಪಿಯಾನ್‍ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವುದನ್ನು ತಡೆಯಲು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗುಪ್ಕರ್ ಪ್ರದೇಶದಲ್ಲಿನ ತಮ್ಮ ನಿವಾಸದ ಗೇಟ್‍ಗೆ ಬೀಗ ಹಾಕಿರುವ ಹಾಗೂ ಮನೆ ಹೊರಗೆ ಸಿಆರ್‍ಪಿಎಫ್ ವಾಹನಗಳನ್ನು ನಿಲ್ಲಿಸಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಕೇಂದ್ರದ ಕಠಿಣ ನೀತಿಯಿಂದಾಗಿ ಕಾಶ್ಮೀರಿ ಪಂಡಿತರ ಹತ್ಯೆ ಆಗುತ್ತಿದೆ. ಮುಖ್ಯ ವಾಹಿನಿಯಲ್ಲಿ ನನ್ನನ್ನು ಶತ್ರು ಎಂದು ಬಿಂಬಿಸುತ್ತಿದ್ದಾರೆ. ಆದರೆ ಇಂದು ನನ್ನನ್ನೇ ಗೃಹ ಬಂಧನದಲ್ಲಿ ಇರಿಸಲಾಗಿದೆ. ಈ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಗೃಹ ಬಂಧನ ಮಾಡಿರುವುದು ಸ್ವಂತ ಭದ್ರತೆಗಾಗಿ ಎಂದು ಹೇಳುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

    Live Tv
    [brid partner=56869869 player=32851 video=960834 autoplay=true]

  • ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ – ಪ್ರತಿಪಕ್ಷಗಳ ಆಕ್ರೋಶ

    ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ – ಪ್ರತಿಪಕ್ಷಗಳ ಆಕ್ರೋಶ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ತೆರವುಗೊಳಿಸಿದ ನಂತರ ಇದೇ ಮೊದಲಬಾರಿಗೆ ಚುನಾವಣೆ ನಡೆಯುತ್ತಿದ್ದು, ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ 2019 ರಲ್ಲಿ 370ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಾಗಲಿದೆ. ಇದರಿಂದ ಕಾಶ್ಮೀರೇತರೂ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಅನುವು ಮಾಡಿಕೊಡಲಿದೆ. ಇದನ್ನೂ ಓದಿ: ಹಬ್ಬಕ್ಕೂ ಮುನ್ನ ಎಕೆ 47 ಒಳಗೊಂಡ ದೋಣಿ ಪತ್ತೆ – ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

    ಜಮ್ಮು ಹಾಗೂ ಕಾಶ್ಮೀರ ಮುಖ್ಯ ಚುನಾವಣಾ ಅಧಿಕಾರಿ ಹಿರ್ದೇಶ್ ಕುಮಾರ್, ಚುನಾವಣೆಗೆ ಮುನ್ನ 20 ಲಕ್ಷಕ್ಕೂ ಅಧಿಕ ಹೊಸ ಮತದಾರರು ಈ ಪ್ರದೇಶದಲ್ಲಿ ನೋಂದಣಿಯಾಗುವ ಸಾಧ್ಯತೆ ಇದೆ. ಇದರಿಂದ ಮತದಾರರ ಸಂಖ್ಯೆ ಶೇ.33ಕ್ಕೂ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ಈ ಕೇಂದ್ರಾಡಳಿತ ಪ್ರದೇಶದಲ್ಲಿ 76 ಲಕ್ಷ ಮತದಾರರಿದ್ದಾರೆ ಎಂದು ಹೇಳಿದ್ದಾರೆ.

    370ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಈ ಮೊದಲು ಮತ ಹಾಕಲು ಸಾಧ್ಯವಿಲ್ಲದವರೂ ಈಗ ಮತದಾರರಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ಈ ಹಿನ್ನೆಲೆ ಕಾಶ್ಮೀರಿಯಲ್ಲದವರು ಸೇರಿ ಮತದಾರರ ಅಂತಿಮ ಪಟ್ಟಿಯಲ್ಲಿ 20 – 25 ಲಕ್ಷ ಹೊಸ ಮತದಾರರು ಸೇರ್ಪಡೆಯಾಗುವ ಸಾಧ್ಯತೆಯಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ವಾಸಿಸುತ್ತಿರುವ ಹಾಗೂ ಕೆಲಸ ಮಾಡುತ್ತಿರುವ ಯಾರಾದರೂ ಅಲ್ಲಿ ಇನ್ಮುಂದೆ ಮತ ಹಾಕಬಹುದಾಗಿದೆ ಎಂದು ಹಿರ್ದೇಶ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ವೇಳೆ ಇನ್ಸ್‌ಪೆಕ್ಟರ್, ಕಾನ್‍ಸ್ಟೇಬಲ್ ನಾಗಿಣಿ ಡ್ಯಾನ್ಸ್ – ಇಬ್ಬರು ಎತ್ತಂಗಡಿ

    ಚುನಾವಣಾ ಆಯೋಗದ ಈ ನಡೆಗೆ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ, `ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ತಾತ್ಕಾಲಿಕ ಮತದಾರರನ್ನು ಆಮದು ಮಾಡಿಕೊಳ್ಳುವ ಅಗತ್ಯವಿದೆಯೇ? ಜಮ್ಮು ಹಾಗೂ ಕಾಶ್ಮೀರದ ಜನರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಿದಾಗ ಇವುಗಳಲ್ಲಿ ಯಾವುದೂ ಬಿಜೆಪಿಗೆ ಸಹಾಯ ಮಾಡುವುದಿಲ್ಲ ಎಂದು ಅವರು ಟೀಕಿಸಿದ್ದಾರೆ.

    ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಬಿಜೆಪಿ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವತ್ತ ಗಮನ ಹರಿಸಿದೆ. ಸ್ಥಳೀಯರಲ್ಲದವರಿಗೆ ಮತ ಚಲಾಯಿಸಲು ಅವಕಾಶ ನೀಡುವುದು ಅಂದರೆ ನಿಸ್ಸಂಶಯವಾಗಿ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವುದು. ಸ್ಥಳೀಯರನ್ನು ಬಲಹೀನಗೊಳಿಸಲು ಕಬ್ಬಿಣದ ಮುಷ್ಟಿಯೊಂದಿಗೆ ಜಮ್ಮು ಹಾಗೂ ಕಾಶ್ಮೀರದ ಆಡಳಿತವನ್ನು ಮುಂದುವರಿಸುವುದು ನಿಜವಾದ ಗುರಿಯಾಗಿದೆ. ಅದಕ್ಕಾಗಿ ಹಿಂಬಾಗಿಲಿನಿಂದ 25 ಲಕ್ಷ ಬಿಜೆಪಿ ಮತದಾರರನ್ನು ತರುವ ಪ್ರಯತ್ನ ಮಾಡುತ್ತಿದೆ ಎಂದು ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಶ್ರೀನಗರ: ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲೇಬೇಕೆಂಬ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಅಲ್ಲಿನ ಆಡಳಿತವೇ ಜನರನ್ನು ಒತ್ತಾಯಿಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15ರ ನಡುವೆ ದೇಶದ ನಾಗರಿಕರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಪ್ರೇರೇಪಿಸುತ್ತಿದೆ. ಆದರೆ ಕಾಶ್ಮೀರ ಆಡಳಿತ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಜನತೆಗೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?
    ಈ ಕುರಿತು ಪ್ರಚಾರದ ವೀಡಿಯೋ ಒಂದನ್ನು ಹಂಚಿಕೊಂಡಿರುವ ಮುಫ್ತಿ ಅವರು, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ. ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್‌ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಎ ಬೆಂಬಲಿಸಿ ಗದಗದಲ್ಲಿ ಬೃಹತ್ ತಿರಂಗಾ ರ‍್ಯಾಲಿ

    ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

    ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಮರಿಗೆ ತೊಂದರೆ ಕೊಡೋದನ್ನ ನೋಡಲು ಸಿಎಂಗಳ ಪೈಪೋಟಿ : ಮುಫ್ತಿ

    ಮುಸ್ಲಿಮರಿಗೆ ತೊಂದರೆ ಕೊಡೋದನ್ನ ನೋಡಲು ಸಿಎಂಗಳ ಪೈಪೋಟಿ : ಮುಫ್ತಿ

    ಶ್ರೀನಗರ: ಮುಸ್ಲಿಮರಿಗೆ ಯಾರು ಹೆಚ್ಚು ತೊಂದರೆ ಕೊಡ್ತಾರೆ ಎಂಬುದನ್ನು ನೋಡಲು ದೇಶದ ಮುಖ್ಯಮಂತ್ರಿಗಳು ಪೈಪೋಟಿಗೆ ಬಿದ್ದಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.

    ನಿನ್ನೆ ಆರ್‌ಎಸ್‌ಎಸ್ ಕಾರ್ಯಕ್ರಮವೊಂದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಬಿಸ್ವಾ ಶರ್ಮಾ ಮದರಸಾಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಾದ ಒಂದು ದಿನದ ಬಳಿಕ ಪ್ರತಿಕ್ರಿಯಿಸಿರುವ ಮುಫ್ತಿ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯತೆ ಪರಿಕಲ್ಪನೆ ಸಂವಿಧಾನದಿಂದ ಬಂದಿಲ್ಲ, ಅದು ಪ್ರಾಚೀನ ಬೇರುಗಳನ್ನು ಹೊಂದಿದೆ: JNU ಕುಲಪತಿ

    Mehbooba Mufti

    ಮುಸ್ಲಿಮರಿಗೆ ಯಾರು ಹೆಚ್ಚು ತೊಂದರೆ ಕೊಡ್ತಾರೆ ಎಂಬುದನ್ನು ನೋಡಲು ಸಿಎಂಗಳು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ಹಾಗಾಗಿಯೇ ಮಂದಿರ, ಮಸೀದಿಗಳ ವಿಚಾರಗಳನ್ನು ಎತ್ತಲಾಗುತ್ತಿದೆ. ಗುಜರಾತ್ ಮತ್ತು ಉತ್ತರ ಪ್ರದೇಶಗಳಲ್ಲಿ ಮುಸ್ಲಿಮರು ಪ್ರತಿಕ್ರಿಯಿಸುವಂತೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

    modi (1)

    ಬ್ರಿಟಿಷರಂತೆ ಬಿಜೆಪಿ: ಬ್ರಿಟಿಷರು ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುತ್ತಿದ್ದರು. ಬಿಜೆಪಿಯೂ ಈಗ ಅದನ್ನೇ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮೌನವಾಗಿ ನೋಡುತ್ತಿದ್ದಾರೆ. ಅವರ ಪಕ್ಷವು ಮಾಡುತ್ತಿರುವುದೇ ಸರಿ ಎಂದು ಭಾವಿಸುತ್ತಿದ್ದಾರೆ ಎಂದು ಕುಟುಕಿದ್ದಾರೆ.

  • ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

    ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

    ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆರೋಪಿಸಿದರು.

    ಸರ್ಕಾರಿ ನೌಕರಾಗಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವು ನನ್ನ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿತ್ತು. 2016 ರಲ್ಲಿ ಈ ರೀತಿಯ ಯಾವುದೇ ಹತ್ಯೆ ನಡೆದಿಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ರೀತಿಯ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಮುಫ್ತಿ ಅವರು ದೇಶದಲ್ಲಿ ದ್ವೇಷದ ವಾತಾವರಣವನ್ನು ಸೃಷ್ಟಿಸಿದ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ 

    Gyanvapi Masjid 1

    ಜ್ಞಾನವಾಪಿ ಮಸೀದಿಯ ವಿಷಯ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ನಿಜವಾದ ಸಮಸ್ಯೆಗಳನ್ನು ದೂರವಿಡಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ಈಗ ಜ್ಞಾನವಾಪಿ ಮಸೀದಿ ಸಮಸ್ಯೆ ಹಿಂದೆ ಇದ್ದಾರೆ. ನಾವು ಪೂಜಿಸುವುದೆಲ್ಲ ನಮ್ಮ ದೇವರು. ನೀವು ನೋಡುತ್ತಿರುವ ಎಲ್ಲ ಮಸೀದಿಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ