Tag: mekedatupadayatra

  • ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

    ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

    ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿದೆ.

    ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

    ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಆರಂಭದಲ್ಲೇ ಪ್ರಶ್ನಿಸಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತು.

    ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಿದ್ದರೂ ಯಾಕೆ ಸುಮ್ಮನಿದ್ದೀರಿ. ಹೈಕೋರ್ಟ್ ಆದೇಶ ನೀಡುವವರೆಗೂ ನೀವು ಕ್ರಮ ಕೈಗೊಳ್ಳುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿತು.

    ಕೋವಿಡ್ ಹೆಚ್ಚುತ್ತಿರುವ ನಡುವೆ ರ್ಯಾಲಿ ನಡೆಸುತ್ತಿದ್ದೀರಾ? ರ್‍ಯಾಲಿಗೆ ಮುನ್ನ ನೀವು ಅನುಮತಿ ಪಡೆದಿದ್ದೀರ ಎಂದು ಕೆಪಿಸಿಸಿಗೆ ಹೈಕೋರ್ಟ್ ಪ್ರಶ್ನೆ ಪ್ರಶ್ನೆ ಮಾಡಿ ಉತ್ತರ ನೀಡುವಂತೆ ಸೂಚಿಸಿದೆ.

    ಸರ್ಕಾರದ ಪರವಾಗಿ ಹಾಜರಾರ ಎಎಜಿ, ಈಗಾಗಲೇ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್‍ಐಆರ್ ದಾಖಲಾದ್ದು, ಮೂರು ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ? ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಈ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್ ತಾಕೀತು ಮಾಡಿದೆ. ಈ ಸಂಬಂಧ ಒಂದು ದಿನ ಅವಕಾಶ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜ.14ಕ್ಕೆ ಮುಂದೂಡಿದೆ. ಇದನ್ನೂ ಓದಿ:  ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು

    ಅರ್ಜಿಯಲ್ಲಿ ಏನಿದೆ?: ರಾಜ್ಯದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಪ್ರಾರಂಭವಾಗಿದ್ದು, ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅವರು ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು. ಜೊತೆಗೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಕ್ರಮಕ್ಕಾಗಿ ಮನವಿ ಮಾಡಿ ನರೇಂದ್ರ ಪ್ರಸಾದ್ ಹಾಗೂ ಶಂಭುಲಿಂಗೇಶ್ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ತನಿಖಾ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ನೇತೃತ್ವ

  • ಪಾದಯಾತ್ರೆಯಲ್ಲಿದ್ದ ಎಚ್.ಎಂ.ರೇವಣ್ಣಗೆ ಸೋಂಕು – ಕಾಂಗ್ರೆಸ್‍ನಿಂದ ರಾಜ್ಯಕ್ಕೆ ಕೊರೊನಾ ರಫ್ತು ಎಂದ ಬಿಜೆಪಿ

    ಪಾದಯಾತ್ರೆಯಲ್ಲಿದ್ದ ಎಚ್.ಎಂ.ರೇವಣ್ಣಗೆ ಸೋಂಕು – ಕಾಂಗ್ರೆಸ್‍ನಿಂದ ರಾಜ್ಯಕ್ಕೆ ಕೊರೊನಾ ರಫ್ತು ಎಂದ ಬಿಜೆಪಿ

    ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ, ಕಾಂಗ್ರೆಸ್ ಪ್ರಾಯೋಜಿತ ಸುಳ್ಳಿನಜಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್ ಬೆಂಗಳೂರಿಗೆ ನೀರು ಕೊಡುತ್ತೇವೆ ಹೇಳಿ, ಈಗ ಬೆಂಗಳೂರಿಗೆ ಕೋವಿಡ್ ಸೋಂಕು ಹಂಚುತ್ತಿದೆ. ಡಿಕೆಶಿ ಅವರೇ ಕೋವಿಡ್‍ಯಾತ್ರೆ ಮುಂದುವರೆಸಿ ಬೆಂಗಳೂರನ್ನು ಕೋವಿಡ್ ಹಬ್ ಮಾಡುವ ಯೋಜನೆಯಿದೆಯೇ ಎಂದು ಪ್ರಶ್ನಿಸಿದೆ.

    ಭಾನುವಾರ ಎಚ್‍ಎಂ ರೇವಣ್ಣ ನಗಾರಿ ಹೊಡೆಯುವ ಮೂಲಕ ಮೆಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಈ ವಿಚಾರವನ್ನೇ ಬಿಜೆಪಿ ಪ್ರಸ್ತಾಪಿಸಿ ಡಿಕೆ ಶಿವಕುಮಾರ್ ಅವರನ್ನು ಕುಟುಕಿದೆ.

    ಮೊದಲನೇ ಅಲೆಯ ವೇಳೆ ದೇಶಾದ್ಯಂತ ಸುದ್ದಿಯಾಗಿದ್ದ ತಬ್ಲಿಘಿಗಳಿಗೆ ಕಾಂಗ್ರೆಸ್ಸನ್ನು ಹೋಲಿಸಿದೆ. ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ. ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿ ಸಮ. ಇಬ್ಬರೂ ಹರಡುತ್ತಿರುವುದು ಕೋವಿಡ್ ಸೋಂಕು. ತಬ್ಲಿಘಿಗಳು ಮೊದಲನೇ ಅಲೆಗೆ ಕಾರಣರಾದರೆ ಕಾಂಗ್ರೆಸ್ಸಿಗರು ಮೂರನೇ ಅಲೆಗೆ ಕಾರಣವಾಗುತ್ತಿದ್ದಾರೆ.

    ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸುಳ್ಳಿನಜಾತ್ರೆ ಈಗ ಕೊರೋನಾ ಮೂರನೇ ಅಲೆಯ ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ. ಕೋವಿಡ್ ಸೂಪರ್ ಸ್ಪ್ರೆಡರ್ ಕಾಂಗ್ರೆಸ್ ಎಂದು ಟ್ವೀಟ್ ಮಾಡಿದೆ.

    ಟ್ವೀಟ್‍ನಲ್ಲಿ ಏನಿದೆ?:
    ಕೊರೋನಾ ಸ್ಪ್ರೆಡರ್ ಡಿಕೆ ಸೋದರರೇ ನಿಮ್ಮ ಸುಳ್ಳಿನಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಡಾರಿಗಳು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೊನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಇದನ್ನೂ ಓದಿ: ಜನವರಿ ಅಂತ್ಯಕ್ಕೆ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆ ಸಾಧ್ಯತೆ – ದೆಹಲಿಯಲ್ಲಿ ಖಾಸಗಿ ಕಚೇರಿಗಳು ಬಂದ್

    ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೋವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೋವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ಇದನ್ನೂ ಓದಿ: ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ