Tag: member

  • ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗದಿದ್ದಕ್ಕೆ ವಿಷ ಕುಡಿದ ಮಹಿಳಾ ಸದಸ್ಯೆ

    ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗದಿದ್ದಕ್ಕೆ ವಿಷ ಕುಡಿದ ಮಹಿಳಾ ಸದಸ್ಯೆ

    ಶಿವಮೊಗ್ಗ: ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತ್ ಮಹಿಳಾ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸದಸ್ಯೆಯನ್ನು ಕೌಸರ್ ಭಾನು(50) ಎಂದು ಗುರುತಿಸಲಾಗಿದೆ.

    ದೊಣಬಘಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದಿದ್ದು ಡ್ರಾಮಾ, ಹೈಡ್ರಾಮಾಕ್ಕೆ ಎಡೆಮಾಡಿಕೊಟ್ಟಿದೆ. ಅಧ್ಯಕ್ಷರಾಗಿ ಖಲೀಲ್, ಉಪಾಧ್ಯಕ್ಷರಾಗಿ ಮಾಲಮ್ಮ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೌಸರ್ ಭಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

    ಆತ್ಮಹತ್ಯೆಗೆ ಯತ್ನಿಸಿದ್ದೇಕೆ?
    2021 ಫೆಬ್ರವರಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆದಿತ್ತು. ಕೌಸರ್ ಭಾನು ಸಹ ದೊಣಬಘಟ್ಟದ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಈ ವೇಳೆ ಖಲೀಲ್ ತಾನು 14 ತಿಂಗಳು ಅಧ್ಯಕ್ಷನಾಗುತ್ತೇನೆ, ನೀವು 14 ತಿಂಗಳ ಬಳಿಕ ಅಧ್ಯಕ್ಷರಾಗಿ ಎಂದು ಕೌಸರ್ ಭಾನು ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಖಲೀಲ್ ಮಾತಿಗೆ ತಕ್ಕಂತೆ 14 ತಿಂಗಳು ಅವಧಿ ಮುಗಿಸಿ ರಾಜೀನಾಮೆ ನೀಡಿದ್ದಾರೆ. ಒಡಂಬಡಿಕೆಯ ಪ್ರಕಾರ ಕೌಸರ್ ಭಾನು ಅಧ್ಯಕ್ಷರಾಗಬೇಕಿತ್ತು ಎಂಬುದು ಅವರ ಬೆಂಬಲಿಗರ ವಾದ. ಆದರೆ ಇಂದು ಗ್ರಾಪಂ ಅಧ್ಯಕ್ಷರಾಗಿ ಖಲೀಮ್ ಆಯ್ಕೆಯಾಗಿದ್ದಾರೆ.

    ಖಲೀಲ್ ಮತ್ತು ಎಲ್ಲಮ್ಮ ನನ್ನ ಬಳಿ ಹಣ ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬೇಕಿದ್ದ ನನಗೆ ಅಧ್ಯಕ್ಷ ಸ್ಥಾನ ತಪ್ಪಿಸಿದ್ದಾರೆ ಎಂದು ಕೌಸರ್ ಭಾನು ಆರೋಪಿಸಿದ್ದಾರೆ. ವಿಷ ಸೇವಿಸಿದ್ದ ಕೌಸರ್ ಭಾನು ಅವರನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    Live Tv

  • ಗ್ರಾಮ ಪಂಚಾಯ್ತಿ ಸದಸ್ಯೆ ನೇತೃತ್ವದಲ್ಲೇ ಬಾಲ್ಯ ವಿವಾಹ – ಪ್ರಕರಣ ತಡವಾಗಿ ಬೆಳಕಿಗೆ

    ಗ್ರಾಮ ಪಂಚಾಯ್ತಿ ಸದಸ್ಯೆ ನೇತೃತ್ವದಲ್ಲೇ ಬಾಲ್ಯ ವಿವಾಹ – ಪ್ರಕರಣ ತಡವಾಗಿ ಬೆಳಕಿಗೆ

    ಶಿವಮೊಗ್ಗ: 33 ವರ್ಷದ ವ್ಯಕ್ತಿ 16 ವರ್ಷದ ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಲ್ಲದಕೋಣೆ ಗ್ರಾಮದಲ್ಲಿ ನಡೆದಿದ್ದು, ಬಾಲ್ಯ ವಿವಾಹ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಫೆ.27 ರಂದು ಯಲ್ಲದಕೋಣೆ ಗ್ರಾಮದ ರಮೇಶ್ (33) ಹಾಗೂ ಬಳ್ಳಾರಿ ಜಿಲ್ಲೆಯ ಕೆ.ಕರ್ನಾರ್ ಹಟ್ಟಿಯ 16 ವರ್ಷದ ಬಾಲಕಿ ಜೊತೆ ವಿವಾಹ ನಡೆದಿದೆ. ವಧು ಅಪ್ರಾಪ್ತೆ ಎಂದು ತಿಳಿದಿದ್ದರೂ, ಗ್ರಾಮದ ರಾಘವೇಂದ್ರ, ಪ್ರವೀಣ್, ಅನಿಲ್, ಶ್ರೀಧರ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯೆ ಶ್ವೇತಾ ಶಿವಾನಂದ್ ನೇತೃತ್ವದಲ್ಲಿ ಬಾಲ್ಯ ವಿವಾಹ ನೆರವೇರಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿ

    POLICE JEEP

    ಇದೀಗ ಬಾಲ್ಯ ವಿವಾಹ ಪ್ರಕರಣ ಬಹಿರಂಗವಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿ

  • ಮಂಗಳ ಮುಖಿಯರಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಮಂಗಳ ಮುಖಿಯರಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ತುಮಕೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.

    ಮಂಗಳಮುಖಿಯರು ಹಣ ಕೇಳಿದಾಗ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಕೋಡ್ಲಾಪುರ ಗ್ರಾಮಪಂಚಾಯತ್ ಸದಸ್ಯ ರಂಗನಾಥ್ ಹಲ್ಲೆಗೊಳಗಾಗಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಹರಿದಾಡ್ಕೊಂಡು ಮಂಗಳಮುಖಿಯರ ಮಾರಾಮಾರಿ

    ರಂಗನಾಥ್ ಅವರ ಬೈಕನ್ನು ಅಡ್ಡಗಟ್ಟಿ ಇಬ್ಬರು ಮಂಗಳಮುಖಿಯರು ಹಣ ಕೇಳಿದ್ದಾರೆ. ರಂಗನಾಥ್ ಹಣ ನೀಡಲು ನಿರಾಕರಿಸಿದಾಗ ರಂಗನಾಥ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಮಂಗಳ ಮುಖಿಯರ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರ ಮೇಲೆ ಇಂತಹ ಹಲ್ಲೆಗಳು ಮೇಲಿಂದ ಮೇಲೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಡಾ.ಬಿ.ಆರ್ ಅಂಬೇಡ್ಕರ್ ನಿಂದಿಸಿ ಬೆಲೆ ತೆತ್ತ ಗ್ರಾಮ ಪಂಚಾಯ್ತಿ ಸದಸ್ಯ

    ಡಾ.ಬಿ.ಆರ್ ಅಂಬೇಡ್ಕರ್ ನಿಂದಿಸಿ ಬೆಲೆ ತೆತ್ತ ಗ್ರಾಮ ಪಂಚಾಯ್ತಿ ಸದಸ್ಯ

    ಚಾಮರಾಜನಗರ: ಗ್ರಾಮ ಪಂಚಾಯ್ತಿ ಸದಸ್ಯನೋರ್ವ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮ ಪಂಚಾಯ್ತಿ ಸದಸ್ಯ ಹೊಸ ಹಂಪಾಪುರ ಗ್ರಾಮದ ನಾಗರಾಜು ಅಲಿಯಾಸ್ ನಾಗಟ್ಟಿ ರಾಜೀನಾಮೆ ನೀಡಿದ ಸದಸ್ಯ. ಜೂನ್.25 ರಂದು ಗ್ರಾಮ ಪಂಚಾಯ್ತಿಯಲ್ಲಿ ವಿಚಾರವೊಂದರ ಬಗ್ಗೆ ಮಾತನಾಡುವಾಗ ಅಂಬೇಡ್ಕರ್ ಬಗ್ಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸನಿಹದಲ್ಲಿದ್ದ ಕೆಲವರು ಈ ಮಾತನ್ನು ಕೇಳಿಸಿಕೊಂಡಿದ್ದು, ಹಳೇ ಹಂಪಾಪುರ ಗ್ರಾಮಸ್ಥರಿಗೆ ಈ ವಿಚಾರ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಯುವಕರ ಗುಂಪೊಂದು ನಾಗರಾಜು ಅವರನ್ನು ಪ್ರಶ್ನಿಸಲು ಮುಂದಾಗಿದ್ದು ಸಂಪರ್ಕಕಕ್ಕೆ ಆತ ಸಿಕ್ಕಿರಲಿಲ್ಲ.

    ಈ ಬಗ್ಗೆ ದಲಿತ ಮುಂಖಡರು ಪಂಚಾಯ್ತಿ ಮಾಡಲು ಸೇರಿದ್ದು ನಾಗರಾಜು ಸಭೆಗೆ ಹಾಜರಾಗಿಲ್ಲ. ಬಳಿಕ ಅದೇ ರೀತಿ ಕರೆಯಲಾಗಿದ್ದ ಮತ್ತೊಂದು ಸಭೆಗೆ ಬಂದ ನಾಗರಾಜು ನಾನೇನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಅದಕ್ಕೊಪ್ಪದ ದಲಿತ ಮುಖಂಡರು ಅಂಬೇಡ್ಕರ್ ಅವರನ್ನು ನಿಂದಿಸಿರುವುದು ನಮಗೆ ತಿಳಿದಿದೆ. ಆದ್ದರಿಂದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವಂತೆ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಮಾಡಬೇಕೆಂದು ಸೂಚಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಡಿ ತನಿಖೆಯ ಎಸ್‍ಐಟಿ ಮುಖ್ಯಸ್ಥರ ರಜೆ ಅವಧಿ ಮತ್ತೆ ವಿಸ್ತರಣೆ

    ಪರಿಣಾಮ ಜೂ.28 ರಂದು ನಾಗರಾಜು ತಮ್ಮ ರಾಜೀನಾಮೆ ಪ್ರತಿಯನ್ನು ಉಪವಿಭಾಗಧಿಕಾರಿ, ತಾಲೂಕು ಪಂಚಾಯ್ತಿಯ ಇಒ ಸೇರಿದಂತೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ನೀಡಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಪೂಜೆ ಸಲ್ಲಿಸಿದ್ದಾರೆ.

  • ಮಂಡ್ಯ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನ ಹರಾಜು

    ಮಂಡ್ಯ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನ ಹರಾಜು

    ಮಂಡ್ಯ: ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯ ಪ್ರಕ್ರಿಯೆಗಳು ಜರುಗುತ್ತಿದ್ದು, ಈ ಮೂಲಕ ಲೋಕಲ್ ವಾರ್ ಗರಿಗೆದರಿದೆ. ಇನ್ನೊಂದೆಡೆ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ನೆಪ ಇಟ್ಟುಕೊಂಡು ಗ್ರಾಮ ಪಂಚಾಯ್ತಿಗಳಲ್ಲಿ ಅಭ್ಯರ್ಥಿ ಸ್ಥಾನವನ್ನು ಹರಾಜು ಹಾಕಲಾಗುತ್ತಿದೆ. ಹರಾಜು ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ.

    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ಕುರಿ-ಕೋಳಿಗಳ ರೀತಿ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನವನ್ನು ಹರಾಜು ಹಾಕುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಲಕ್ಷಾಂತ ರೂಪಾಯಿಗಳಿಗೆ ಗ್ರಾಮ ಪಂಚಾಯ್ತಿ ಸ್ಥಾನವನ್ನು ಲಾಳನಕೆರೆ ಗ್ರಾಮಸ್ಥರು ಮನೆಯೊಂದರಲ್ಲಿ ಬಿಡ್ ಮೂಲಕ ಹರಾಜು ಹಾಕಿದ್ದಾರೆ.

    ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಯವರೆಗೆ ಸವಲತ್ತುಗಳು ದೊರಕಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯ್ತಿ ವ್ಯವಸ್ಥೆಯನ್ನು ಭಾರತ ದೇಶದಲ್ಲಿ ಮಾಡಕೊಳ್ಳಲಾಗಿದೆ. ಆದರೆ ಇದೀಗ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಲಕ್ಷಾಂತರ ರೂಪಾಯಿಗಳಿಗೆ ಹರಾಜು ಹಾಕುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ.

  • ಬಿಜೆಪಿ ಶಾಸಕ, ಬೆಂಬಲಿಗರ ತಳ್ಳಾಟ ಪ್ರಕರಣ- ಪುರಸಭೆ ಸದಸ್ಯೆಗೆ ಗರ್ಭಪಾತ

    ಬಿಜೆಪಿ ಶಾಸಕ, ಬೆಂಬಲಿಗರ ತಳ್ಳಾಟ ಪ್ರಕರಣ- ಪುರಸಭೆ ಸದಸ್ಯೆಗೆ ಗರ್ಭಪಾತ

    ಬಾಗಲಕೋಟೆ: ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

    ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಈಕೆಗೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. ಇದೀಗ ಅವರಿಗೆ ಗರ್ಭಪಾತವಾಗಿದೆ. ಇದನ್ನೂ ಓದಿ: ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿ ಬಿಜೆಪಿ ಶಾಸಕ, ಬೆಂಬಲಿಗರ ಅಸಭ್ಯ ವರ್ತನೆ

    ನಡೆದಿದ್ದೇನು?:
    ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದರು. ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿತ್ತು. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆಯಿಂದ ವರ್ತನೆ ಮಾಡಲಾಗಿತ್ತು. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದನ್ನೂ ಓದಿ: ನಾನು ಮಹಿಳೆಯ ರಕ್ಷಣೆಗೆ ಮುಂದಾಗಿದ್ದೆ- ಅಸಭ್ಯ ವರ್ತನೆಗೆ ಸಿದ್ದು ಸವದಿ ಸಮರ್ಥನೆ

    ಘಟನೆ ಸಂಬಂಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಚಾಂದಿನಿ ನಾಯ್ಕ್, ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ತೆರಳಿದ್ದೆವು. ಈ ವೇಳೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಘಟನೆ ನಡೆಯುವ ಮುನ್ನವೇ ನಮಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೆವು. ಆದರೆ ಅವರು ಯಾವುದೇ ರಕ್ಷಣೆ ನೀಡಲು ಮುಂದಾಗಲಿಲ್ಲ. ಶಾಸಕರು ಹಾಗೂ ಅವರ ಬೆಂಬಲಿಗರು ನಮ್ಮನ್ನು ಹಿಡಿದು ಎಳೆದಾಡಿ, ಮೆಟ್ಟಿಲು ಮೇಲಿನಿಂದ ತಳ್ಳಿ ತುಳಿದಾಡಿದ್ದರು. ಘಟನೆಯಿಂದ ಮಾಸಿಕವಾಗಿ, ದೈಹಿಕವಾಗಿ ನೋವಾಗಿದ್ದು, ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ ಎಂದು ಅಲವತ್ತುಕೊಂಡಿದ್ದರು. ಇದನ್ನೂ ಓದಿ: ಹಿಡಿದು, ಎಳೆದಾಡಿ, ಮೆಟ್ಟಿಲಿನಿಂದ ತಳ್ಳಿದ್ರು- ಪುರಸಭೆ ಸದಸ್ಯೆ ಕಣ್ಣೀರು

  • ಸಜ್ಜನ ಕೋಟಾ ಶ್ರೀನಿವಾಸ ಪೂಜಾರಿ ಸಿಎಂ ಆಗಲಿ ಎಂಬುದೇ ನನ್ನ ಹಾರೈಕೆ: ಶರವಣ

    ಸಜ್ಜನ ಕೋಟಾ ಶ್ರೀನಿವಾಸ ಪೂಜಾರಿ ಸಿಎಂ ಆಗಲಿ ಎಂಬುದೇ ನನ್ನ ಹಾರೈಕೆ: ಶರವಣ

    –  ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಸಿಎಂ ಗೈರು

    ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ ಎಂದು ಟಿ.ಎ ಶರವಣ ಹೇಳಿದ್ದಾರೆ.

    ಇಂದು ವಿಧಾನಸೌಧದಲ್ಲಿ ಅವಧಿ ಪೂರ್ಣಗೊಳಿಸಿದ 15 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ವಿಪಕ್ಷ ನಾಯಕ ಎಸ್.ಆರ್ ಪಾಟೀಲ್, ವಿಪಕ್ಷ ಸಚೇತಕ ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ. ಅಲ್ಲದೆ ಶರವಣ, ಜಯಮಾಲ, ಜಯಮ್ಮ, ರೇವಣ್ಣ, ಶರಣಪ್ಪ ಮಟ್ಟೂರು, ಬೋಸರಾಜು ಸೇರಿ ಹಲವು ನಿವೃತ್ತಿ ಹೊಂದಿದ ಪರಿಷತ್ ಸದಸ್ಯರು ಕೂಡ ಪಾಲ್ಗೊಂಡಿದ್ದಾರೆ.

    ಶರವಣ ಮಾತನಾಡಿ, ನಾನು ಮತ್ತೆ ಪುನರಾಯ್ಕೆ ಆಗುತ್ತೇನೆಂಬ ನಿರೀಕ್ಷೆ ಇತ್ತು. ಆದರೆ ನಿರಾಸೆ ಆಗಿದೆ. ಕೇವಲ ಮುನ್ನೂರು ಜನ ಮಾತ್ರ ಶಾಸಕರು ಎಂದು ಕರೆಸಿಕೊಳ್ಳುತ್ತಾರೆ. ಅವರಲ್ಲಿ ನಾನೂ ಒಬ್ಬನಾಗಿದ್ದೆ ಅನ್ನೋದೇ ಸಂತೋಷದ ವಿಚಾರ. ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ನನಗೆ ಸಹಕಾರ ಕೊಟ್ಟ ಎಲ್ಲರಿಗೂ ಪಕ್ಷಾತೀತವಾಗಿ ಧನ್ಯವಾದಗಳು ಎಂದು ತಿಳಿಸಿದರು.

    ಹಿಂದುಳಿದ ಸಮುದಾಯದಿಂದ ಬಂದ ನನಗೆ ಉತ್ತಮ ಅವಕಾಶ ದೊರಕಿಸಿ ಕೊಟ್ಟಿದ್ರಿ. ನನಗೆ ತಂದೆ ಇಲ್ಲ. ಸಭಾಪತಿಗಳನ್ನು ತಂದೆ ಸ್ಥಾನದಲ್ಲಿ ನೋಡಿದ್ದೇನೆ. ಕೋಟಾ ಶ್ರೀನಿವಾಸ್ ಪೂಜಾರಿಯನ್ನು ಸೋದರನ ಸ್ಥಾನದಲ್ಲಿ ನೋಡಿದ್ದೇನೆ ಎಂದು ಹೇಳುತ್ತಾ ತಿಪ್ಪಣ್ಣ ಕಮಕನೂರು ಭಾವುಕರಾದರು. ಜಯಮಾಲ, ತಿಪ್ಪಣ್ಣ ಕಮಕನೂರು, ಶರಣಪ್ಪ ಮಟ್ಟೂರು, ಜಯಮ್ಮ, ಬೋಸರಾಜ್, ಎಚ್.ಎಂ.ರೇವಣ್ಣ, ಟಿಎ ಶರವಣ, ಎಂಸಿ ವೇಣುಗೋಪಾಲ್‍ಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿದ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ 8 ಮಂದಿ ನಿವೃತ್ತ ಪರಿಷತ್ ಸದಸ್ಯರು ಮಾತ್ರ ಇದ್ದರು. ಉಳಿದ 8 ಜನರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

    ಕಾರ್ಯಕ್ರಮಕ್ಕೆ ಸಿಎಂ ಗೈರು:
    ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗೈರಾಗಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಸಿಎಂ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ.

  • ಬೆಳ್ಳಂಬೆಳಿಗ್ಗೆ ಝಳಪಿಸಿದ ಲಾಂಗ್- ಜಿ.ಪಂ ಸದಸ್ಯನ ಕೊಲೆಗೆ ಯತ್ನ

    ಬೆಳ್ಳಂಬೆಳಿಗ್ಗೆ ಝಳಪಿಸಿದ ಲಾಂಗ್- ಜಿ.ಪಂ ಸದಸ್ಯನ ಕೊಲೆಗೆ ಯತ್ನ

    ಯಾದಗಿರಿ: ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ದುಷ್ಕರ್ಮಿಗಳು, ಜಿಲ್ಲಾಡಳಿತ ಭವನದ ಸಮೀಪದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ.

    ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕಳುಹಿಸಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ ಗ್ರಾಮದ ನಿವಾಸಿಯಾದ ಮರಿಲಿಂಗಪ್ಪ ಅವರು, ಖಾನಾಪುರ್ ಎಸ್‍ಎಚ್ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.

    ಮರಿಲಿಂಗಪ್ಪ ಇಂದು ಬೆಳಿಗ್ಗೆ ನಗರದ ಹೊರ ವಲಯದಲ್ಲಿ ಜಿಲ್ಲಾಡಳಿತ ಭವನದ ಸಮೀಪ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮರಿಲಿಂಗಪ್ಪ ಮೇಲೆ ಲಾಂಗ್ ನಿಂದ ದುಷ್ಕರ್ಮಿಗಳು ದಾಳಿ ಮಾಡಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮರಿಲಿಂಗಪ್ಪರನ್ನು ಕಂಡು ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿ, ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

  • ಸ್ಮಶಾನದಲ್ಲಿ ಮಗಳ ಹುಟ್ಟುಹಬ್ಬ – ಮೌಢ್ಯಕ್ಕೆ ಸೆಡ್ಡು ಹೊಡೆದ ಕಾರ್ಯಕರ್ತ

    ಸ್ಮಶಾನದಲ್ಲಿ ಮಗಳ ಹುಟ್ಟುಹಬ್ಬ – ಮೌಢ್ಯಕ್ಕೆ ಸೆಡ್ಡು ಹೊಡೆದ ಕಾರ್ಯಕರ್ತ

    ಚಿಕ್ಕೋಡಿ: ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಹೋಟೆಲ್‍ನಲ್ಲಿ ಅಥವಾ ಮನೆಯಲ್ಲಿ ಆಚರಿಸುವುದು ಸಾಮಾನ್ಯ ಸಂಗತಿ. ಆದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಮಹೇಶ ಶಿಂಗೆ ಅವರು ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.

    ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತನಾಗಿರುವ ಮಹೇಶ ಶಿಂಗೆ, ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸಿ ಮಾಢ್ಯಕ್ಕೆ ಸೆಡ್ಡು ಹೊಡಿದಿದ್ದಾರೆ. ಮಹೇಶ ಶಿಂಗೆ ತಮ್ಮ ಮಗಳಾದ ಜೀಜಾಬಾಯಿ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು, ಸ್ಮಶಾನದಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

    ಸ್ಮಶಾನದಲ್ಲಿ ಹಾಡು, ಮಾತು, ಚರ್ಚೆಯೊಂದಿಗೆ ಉಪಾಹಾರ ಸೇವಿಸಿ ಸಂಭ್ರಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾನವ ಬಂದುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ, ತಾ.ಪಂ ಸದಸ್ಯ ಹೂವಣ್ಣಾ ಚೌಗಲೆ, ಮುನ್ನಾ ಬಾಗವಾನ್, ಜೀವನ ಮಾಂಜರೇಕರ್, ಗಾಯತ್ರಿ ಮಾಳಗಿ ಆನಂದ ಗೋಕಾಕ್, ಪುಂಡಲೀಕ ದನವಾಡೆ ಸೇರಿದಂತೆ ನೂರಾರು ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಮತ್ತು ದಲಿತ ಮುಖಂಡರು ಇದ್ದರು.

  • ಕಾಂಟ್ರಾಕ್ಟರ್ ಬಳಿ ಲಂಚ ಪಡೆಯುತ್ತಿದ್ದ ಗ್ರಾ.ಪಂ ಸದಸ್ಯ, ಪಿಡಿಓ ಎಸಿಬಿ ಬಲೆಗೆ

    ಕಾಂಟ್ರಾಕ್ಟರ್ ಬಳಿ ಲಂಚ ಪಡೆಯುತ್ತಿದ್ದ ಗ್ರಾ.ಪಂ ಸದಸ್ಯ, ಪಿಡಿಓ ಎಸಿಬಿ ಬಲೆಗೆ

    ರಾಮನಗರ: ಕಾಂಟ್ರಾಕ್ಟರ್ ಬಳಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮ ಪಂಚಾಯತ್‍ನಲ್ಲಿ ನಡೆದಿದೆ.

    ಮುದುಗೆರೆ ಗ್ರಾಮ ಪಂಚಾಯತ್‍ನ ಪಿಡಿಓ ಮಂಜುಳಾ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಮಹೇಶ್ ಎಸಿಬಿ ಬಲೆಗೆ ಬಿದ್ದವರು. ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ನಿವಾಸಿಯೊಬ್ಬರು ಮುದುಗೆರೆ ಗ್ರಾಮ ಪಂಚಾಯತಿಯಿಂದ ನರೇಗಾ ಯೋಜನೆಯ ಪೈಪ್‍ಲೈನ್ ಕಾಮಗಾರಿ ಗುತ್ತಿಗೆ ಪಡೆದು ಕಾಮಗಾರಿ ಮುಗಿಸಿದ್ದರು. ಆದರೆ ಅವರಿಗೆ ಕಾಮಗಾರಿಯ 65 ಸಾವಿರ ಬಿಲ್ ಹಣವನ್ನ ಮಂಜೂರು ಮಾಡಲು ಶೇ.17ರಷ್ಟು ಕಮಿಷನ್ ನೀಡುವಂತೆ ಗ್ರಾಮ ಪಂಚಾಯತಿ ಸದಸ್ಯ ಮಹೇಶ್ ಬೇಡಿಕೆ ಇಟ್ಟಿದ್ದರು.

    ಈ ಬಗ್ಗೆ ಪಿಡಿಓ ಬಳಿ ಪ್ರಶ್ನಿಸಿದರೆ ಮಹೇಶ್ ಹೇಳಿದಂತೆ ಮಾಡು. ಕಮಿಷನ್ ಕೊಟ್ಟು ಬಿಲ್ ಮಂಜೂರು ಮಾಡಿಕೊಳ್ಳುವಂತೆ ತಿಳಿಸಿದ್ದರು. ಹೀಗಾಗಿ ಗುತ್ತಿಗೆದಾರ ರಾಮನಗರ ಎಸಿಬಿ ಅಧಿಕಾರಿಗಳಿಗೆ ಸಲ್ಲಿಸಿದ್ದ.

    ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಿಡಿಓ ಮಂಜುಳಾ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಮಂಗಳವಾರ ಲಂಚವಾಗಿ 11 ಸಾವಿರ ರೂಪಾಯಿ ಪಡೆಯುತ್ತಿದ್ದರು. ಈ ವೇಳೆ ಎಸಿಬಿ ಡಿವೈಎಸ್‍ಪಿ ಮಲ್ಲೇಶ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.