Tag: Memory

  • ತಾಯಿಯ ನೆನಪು ಹಂಚಿಕೊಂಡ ನಟ ಜಗ್ಗೇಶ್

    ತಾಯಿಯ ನೆನಪು ಹಂಚಿಕೊಂಡ ನಟ ಜಗ್ಗೇಶ್

    ಸೋಶಿಯಲ್ ಮೀಡಿಯಾದಲ್ಲಿ ಬಹಳ ಆ್ಯಕ್ಟೀವ್ ಆಗಿರುವ ನಟರಲ್ಲೊಬ್ರು ಅಂದ್ರೆ ಅವರು ನವರಸನಾಯಕ ಜಗ್ಗೇಶ್ (Jaggesh), ತಾಯಿ ಬಗೆಗಿನ ನೆನಪಿನ ಭಾವನೆಯನ್ನು ಜಗ್ಗೇಶ್ ಆಗಾಗ ಇದೇ ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳೋದುಂಟು. ಇದೀಗ ಜಗ್ಗೇಶ್ ಪತ್ರಿಕೆಯಲ್ಲಿ ಬಂದಿದ್ದ ಒಂದು ಸುದ್ದಿಯ ಫೋಟೋ ಹಾಕಿ ಮನದ ದುಗುಡ ಹೊರಹಾಕಿದ್ದಾರೆ.

    ದೊಡ್ಡಬಳ್ಳಾಪುರದಲ್ಲಿ ಮಗನೇ ತಾಯಿಯನ್ನ ಕೊಂದ ಘಟನೆ ದಿನಪತ್ರಿಕೆಯಲ್ಲಿ ಸುದ್ದಿಯಾಗಿದೆ. ಈ ಸುದ್ದಿ ಪ್ರತಿಯನ್ನ ಹಂಚಿಕೊಂಡ ಜಗ್ಗೇಶ್ ತಮ್ಮ ತಾಯಿಯ ನೆನಪನ್ನ ಹಂಚಿಕೊಂಡು ಭಾವುಕರಾದಂತೆ ಪದಗಳನ್ನ ಬರೆದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ತಾಯಿ ಫೋಟೋ ಹಾಗೂ ಇದುವರೆಗು ತಾವು ಜೋಪಾನವಾಗಿ ಇಟ್ಟುಕೊಂಡಿರುವ ತಾಯಿಯ ಸೀರೆ ಅವರು ಬಳಸುತ್ತಿದ್ದ 10 ಪೈಸೆ ನಾಣ್ಯ ಇನ್ನಿತರ ವಸ್ತುಗಳ ಫೋಟೋವನ್ನೂ ತೋರಿಸಿದ್ದಾರೆ. ತಮಗೆ 29 ವರ್ಷ ಇದ್ದಾಗಲೇ ತಾಯಿಯನ್ನ ಕಳೆದುಕೊಂಡಿರೋದಾಗಿ ಹೇಳಿಕೊಂಡಿರುವ ಜಗ್ಗೇಶ್ ತಮ್ಮ 62ನೇ ವಯಸ್ಸಿನಲ್ಲೂ ಅಮ್ಮ ಬಳಸಿದ ವಸ್ತುಗಳನ್ನ ದೇವರ ಮನೆಯಲ್ಲಿಟ್ಟು ಈಗಲೂ ಪೂಜಿಸುವುದು ನಿತ್ಯ ಆಚರಣೆ ಎಂದಿದ್ದಾರೆ.

    ಅಮ್ಮನನ್ನೇ ಮಗ ಕೊಲೆ ಮಾಡಿದ ಎಂದು ಸುದ್ದಿ ಓದಿ ಭಾವುಕರಾದ ಜಗ್ಗೇಶ್ ದಿನಚರಿ ಮರೆತು ಸ್ನಾನ ಪೂಜೆ ಇಲ್ಲದೆ ಶವದಂತೆ ಕುಳಿತುಬಿಟ್ಟರಂತೆ, ಹೀಗಾಗಿ ನೊಂದು ಮಾತು ಮುಂದುವರೆಸಿದ ಜಗ್ಗೇಶ್ `ತಂದೆ ತಾಯಿ ನೋಯಿಸುವವರು ನರಕ ಇಲ್ಲೇ ಅನುಭವಿಸುತ್ತಾರೆ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

     

    ಹೀಗೆ ಬರಹ ಮುಂದುವರೆಸಿರುವ ಜಗ್ಗೇಶ್ ಸಮಾಜ ಎತ್ತ ಸಾಗ್ತಿದೆ, ಇನ್ನೆಂಥ ದುರ್ದಿನಗಳನ್ನ ನಾವು ನೋಡಬೇಕಿದೆ, ಸಸಿ ಇದ್ದಾಗ ಸರಿ ಮಾಡಬೇಕು ಹೆಮ್ಮರವಾದ್ಮೇಲೆ ಸರಿ ಮಾಡಲಾಗದು ಎಂದು ಬುದ್ಧಿಮಾತು ಹೇಳಿದ್ದಾರೆ ಜಗ್ಗೇಶ್. ಅಂದಹಾಗೆ ಜಗ್ಗೇಶ್ ಈಗಲೂ ತಮ್ಮ ಕತ್ತಲ್ಲಿ ತಾಯಿ ಧರಿಸುತ್ತಿದ್ದ ಮಾಂಗಲ್ಯ ಸರ ಧರಿಸುತ್ತಾರೆ. ತಾಯಿ ಬಗ್ಗೆ ಆಗಾಗ ತಮ್ಮ ನೆನಪುಗಳನ್ನ ಹಂಚಿಕೊಳ್ಳುತ್ತಲೇ ಇರುತ್ತಾರೆ.

  • ಈ ಲಕ್ಷಣಗಳು ಕಂಡು ಬಂದರೆ ನಿಮಗೆ ಮರೆವಿನ ಕಾಯಿಲೆ ಇದೆ ಎಂದರ್ಥ

    ಈ ಲಕ್ಷಣಗಳು ಕಂಡು ಬಂದರೆ ನಿಮಗೆ ಮರೆವಿನ ಕಾಯಿಲೆ ಇದೆ ಎಂದರ್ಥ

    ವಯಸ್ಸಾದ ಬಳಿಕ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲಿ ಪ್ರಮುಖವಾದ ಸಮಸ್ಯೆ ಎಂದರೆ ಮರೆವಿನ ಕಾಯಿಲೆ. ಹೌದು, ಇಂದು ವಿಶ್ವ ಅಲ್ಝೈಮರ್ ಡೇ (ಮರೆವಿನ ಕಾಯಿಲೆ) ವಯಸ್ಸಾದ ಬಳಿಕ ಒಂದೊಂದೇ ವಿಷಯದ ಬಗ್ಗೆ ಜ್ಞಾಪಕ ಶಕ್ತಿ ಕುಂದುತ್ತಾ ಬರುವುದೇ ಅಲ್ಝೈಮರ್ ಎನ್ನುತ್ತೇವೆ.

    ಈ ಕಾಯಿಲೆ ಪ್ರಾರಂಭದಲ್ಲಿ ಅಷ್ಟಾಗಿ ಸಮಸ್ಯೆ ಎನಿಸದೇ ಹೋದರೂ ಆ ನಂತರದಲ್ಲಿ ಇದೇ ದೊಡ್ಡ ಕಾಯಿಲೆಯಾಗಬಹುದು. ಇದನ್ನು ಮೊದಲ ಹಂತದಲ್ಲೇ ಆರೈಕೆ ಮಾಡಿದರೆ, ನಿಂಯತ್ರಣದಲ್ಲಿ ಇಡಬಹುದು. ಸಾಮಾನ್ಯವಾಗಿ 60 ರಿಂದ 80 ವರ್ಷ ವಯಸ್ಸಿನವರಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ, ಇದು ಅನುವಂಶಿಯವಾಗಿಯೂ ಬರಬಹುದು. ಮರೆವಿನ ಕಾಯಿಲೆಗೆ ಇಂಥದ್ದೇ ಚಿಕಿತ್ಸೆ ಇರುವುದಿಲ್ಲ. ಆದರೆ, ಆರೋಗ್ಯ ಸಮಸ್ಯೆ ಎದುರಾದರೆ ಮಾತ್ರ ಚಿಕಿತ್ಸೆ ನೀಡಬಹುದು. ಮರೆವಿನ ಕಾಯಿಲೆಯ ಕೆಲವು ಹಂತಗಳು ಹೀಗಿವೆ.

    ಮೊದಲ ಹಂತ: ಈ ಹಂತದಲ್ಲಿ ಅಲ್ಝೈಮರ್ ಇರುವ ವ್ಯಕ್ತಿಯಲ್ಲಿ ಯಾವುದೇ ರೀತಿಯ ದೌರ್ಬಲ್ಯ ಕಂಡು ಬರುವುದಿಲ್ಲ. ಸಣ್ಣ ಪುಟ್ಟ ಮರೆವುಗಳು ಮಾತ್ರ ಕಾಣಿಸುತ್ತವೆ. ಇಟ್ಟ ವಸ್ತುಗಳನ್ನು ಮರೆಯುತ್ತಿರುವುದು ಇತ್ಯಾದಿ. ಇದು ಅತಿ ಸಾಮಾನ್ಯವೆನಿಸುತ್ತದೆ. ಇದನ್ನೂ ಓದಿ:  ಶಾರುಖ್ ಅಭಿಮಾನಿಗೆ ಕೊನೆಗೂ ಸುಪ್ರೀಂನಲ್ಲಿ ಸಿಕ್ತು ಜಯ

    ಎರಡನೇ ಹಂತ: ಈ ಹಂತದಲ್ಲಿ ಮರೆವು ಕೊಂಚ ಏರಿಕೆಯಾಗಿರುತ್ತದೆ. ಇಟ್ಟ ವಸ್ತು ಆ ಕ್ಷಣದಲ್ಲೇ ಮರೆಯುವುದು, ಈಗಷ್ಟೇ ತಿಂದ ತಿಂಡಿಯನ್ನೇ ಮರೆಯುವುದು, ಮಾತುಗಳನ್ನು ಮರೆಯುವುದು ಇತ್ಯಾದಿ. ಆದರೆ, ಈ ಹಂತದಲ್ಲಿ, ತಾವು ಮರೆತ ವಿಷಯಗಳನ್ನು ಕೆಲವು ಕ್ಷಣದಲ್ಲಿ ನೆನಪು ಮಾಡಿಕೊಂಡರೆ ಮರುಕಳುಹಿಸುತ್ತಿರುತ್ತದೆ. ಈ ಹಂತದಲ್ಲಿಯೂ ಕೆಲವರು ಹೆಚ್ಚಾಗಿ ಗಮನ ಹರಿಸುವುದಿಲ್ಲ.

    ಮೂರನೇ ಹಂತ: ಈ ವೇಳೆ ಮರೆವು ಸ್ವಲ್ಪ ಹೆಚ್ಚಾಗಿಯೇ ಕಾಡುತ್ತದೆ. ದೈನಂದಿನ ಚಟುವಟಿಕೆಗಳನ್ನೇ ಮರೆಯುವುದು, ಹಣವನ್ನು ಎಣಿಸಲು ಸಾಧ್ಯವಾಗದೇ ಇರುವುದು, ಸರಳ ಸಮಸ್ಯೆಗಳನ್ನು ಪರಿಹರಿಸಲು ಆಗದೇ ಇರುವುದು, ಬಣ್ಣಗಳ ಗುರುತಿಸುವಿಕೆಯಲ್ಲಿ ಕಷ್ಟ, ಮಾತುಗಳನ್ನೇ ಮರೆಯುವುದು ಇತ್ಯಾದಿ ಸಮಸ್ಯೆಗಳು ಉಲ್ಭಣಗೊಳ್ಳುತ್ತಾ ಹೋಗುತ್ತವೆ. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

    ಮಧ್ಯಮ ಹಂತ: ಈ ಹಂತದಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಿ ಕಾಡ ತೊಡಗುತ್ತದೆ. ಸಂಬಂಧಗಳನ್ನೇ ಮರೆಯುವುದು, ವ್ಯಕ್ತಿಗಳನ್ನು ಗುರುತಿಸಲು ಆಗದೇ ಇರುವುದು, ತೀವ್ರ ಕೋಪ, ಆತಂಕ, ಒತ್ತಡ, ಚಡಪಡಿಕೆ ಇತ್ಯಾದಿ ಸಮಸ್ಯೆಗಳು ಉಲ್ಭಣವಾಗುತ್ತದೆ. ಈ ಹಂತದಲ್ಲಿಯೇ ವೈದ್ಯರನ್ನು ಕಾಣುವುದು ಹೆಚ್ಚು ಉತ್ತಮ.

    ಕೊನೆಯ ಹಂತ: ಮರೆವು ಕೊನೆಯ ಹಂತಕ್ಕೆ ತಲುಪಿದಾಗ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಡ ಬಹುದು. ದೈಹಿಕ ಚಟುವಟಿಕೆಗಳ ಮೇಲೆ ನಿಯಂತ್ರಣವಿಲ್ಲದೇ ಇರುವುದು, ಮಾತನಾಡುವುದನ್ನೇ ಮರೆಯುವುದು, ಖಿನ್ನತೆ, ಕರುಳು ಸಂಬಂಧ ಕಾಯಿಲೆ, ತೂಕ ಇಳಿಯುವುದು, ಆಹಾರ ಸೇವನೆಯಲ್ಲಿ ಕಷ್ಟ, ನರಳುವಿಕೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ.  ಇದನ್ನೂ ಓದಿ:  ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಇದು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಯಾದ್ದರಿಂದ ವೈದ್ಯರನ್ನು ಕಾಣುವುದರಿಂದ ಚಿಕಿತ್ಸೆ ಮೂಲಕ ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಬಹುದು, ಆದರೆ ಮರೆವನ್ನು ಸಂಪೂರ್ಣವಾಗಿ ಗುಣಪಡಿಸಲು ಆಗದು. ಇದನ್ನು ಆಪ್ತಸಮಾಲೋಚಕರನ್ನು ಭೇಟಿ ಮಾಡಿ, ಈ ಸಮಸ್ಯೆಯಿಂದಾಗುತ್ತಿರುವ ಮಾನಸಿಕ ಒತ್ತಡವನ್ನು ನಿಯಂತ್ರಿಸಿಕೊಳ್ಳುವ ಬಗ್ಗೆ ಸಲಹೆ ಪಡೆಯಬಹುದು.

  • ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗದಗ್‍ನಲ್ಲಿ ಸ್ಮರಣೋತ್ಸವ

    ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗದಗ್‍ನಲ್ಲಿ ಸ್ಮರಣೋತ್ಸವ

    ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು.

    ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ಮರಣೋತ್ಸವ ಆಚರಿಸಿದರು. ಈ ಆಟೋ ರ‍್ಯಾಲಿಗೆ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ ಪಾಟೀಲ್ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದ್ಲಿ ಇತ್ತೀಚಿಗೆ ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ಯೋಧರಿಗೆ ಸನ್ಮಾನಿಸಲಾಯಿತು. ಅವರು ಸಹ ಇಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

    ನಗರದ ತೋಂಟದಾರ್ಯ ಮಠದಿಂದ ಆರಂಭವಾದ ರ್ಯಾಲಿ, ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಈ ಆಟೋ ರ್ಯಾಲಿ ನಡೆಯಿತು. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಶಾಸಕ ಕಳಕಪ್ಪ ಬಂಡಿ, ಎಸ್.ವಿ ಸಂಕನೂರ ಸೇರಿದಂತೆ ಅನೇಕರು ಸ್ಮರಣೋತ್ಸವದಲ್ಲಿ ಭಾಗಿಯಾಗಿದ್ದರು.

    ಗದಗ ಆಟೋ ಚಾಲಕ ಸಂಘದಿಂದ ಭಾರತೀಯ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ದಾರಿಯುದ್ದಕ್ಕೂ ಪುಷ್ಪಗಳನ್ನು ಎರಚುವ ಮೂಲಕ ಭಾರತ ಮಾತೆಗೆ ಜೈಘೋಷ ಕೂಗಿದರು.

  • 1.9 ವರ್ಷಕ್ಕೆ ಗಿನ್ನಿಸ್ ದಾಖಲೆ ಬರೆದ ಪೋರ

    1.9 ವರ್ಷಕ್ಕೆ ಗಿನ್ನಿಸ್ ದಾಖಲೆ ಬರೆದ ಪೋರ

    ಹೈದರಾಬಾದ್: ಜ್ಞಾಪಕ ಶಕ್ತಿ ಮೂಲದ ಹೈದರಾಬಾದ್‍ನ 1 ವರ್ಷ 9 ತಿಂಗಳ ಪೋರ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಬರೆದಿದ್ದಾನೆ.

    ಹೈದರಾಬಾದ್‍ನ ಆದಿತ್ ವಿಶ್ವನಾಥ ಗೌರಿ ಶೆಟ್ಟಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದಂತೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ತೆಲುಗು ಬುಕ್ ಆಫ್ ರೆಕಾರ್ಡ್ಸ್ ಮತ್ತು ಸ್ಮರಣ ಶಕ್ತಿಗಾಗಿ ಮತ್ತೆರಡು ದಾಖಲೆಗಳನ್ನು ನಿರ್ಮಿಸಿದ್ದಾನೆ. ವರ್ಣಮಾಲೆ, ಚಿತ್ರಾತ್ಮಕ ವಸ್ತುಗಳು, ಲೋಗೋ, ಧ್ವಜ, ಹಣ್ಣು, ಪ್ರಾಣಿಗಳನ್ನು ಪುಟ್ಟ ಪೋರ ಗುರುತಿಸುವುದರೊಂದಿಗೆ ದಾಖಲೆ ಬರೆದಿದ್ದಾನೆ. ಈ ಮೂಲಕ ಸಣ್ಣ ವಯಸ್ಸಿನಲ್ಲೇ ತಮ್ಮ ಪೋಷಕರು ಹೆಮ್ಮೆ ಪಡುವಂತೆ ಮಾಡಿದ್ದಾನೆ.

    ಈ ಕುರಿತು ಮಾಹಿತಿ ನೀಡಿರುವ ತಾಯಿ ಸ್ನೇಹಿತಾ ಅವರು, ಆದಿತ್ ಕೇವಲ ಸ್ಥಳೀಯ ಅಂಶಗಳನಷ್ಟೇ ಅಲ್ಲದೇ ಜಾಗತಿಕ ಅಂಶಗಳನ್ನು ನೆನಪಿಟ್ಟುಕೊಳ್ಳುವ ಮೂಲಕ ದಾಖಲೆ ನಿರ್ಮಿಸಿದ್ದಾನೆ. ಆದಿತ್ಯ ವಯಸ್ಸಿನ ಮಕ್ಕಳು ನರ್ಸರಿ ಹಾಡು ಕಲಿಯಲು ಪ್ರಯತ್ನಿಸುತ್ತಾರೆ. ಆದರೆ ಆದಿತ್ ಬಣ್ಣ, ಪ್ರಾಣಿ, ಧ್ವಜ, ಹಣ್ಣು, ಆಕೃತಿ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉಪಕರಣಗಳು, ದೇವತೆಗಳು, ಕಾರಿನ ಲೋಗೋ, ವರ್ಣಮಾಲೆ, ಪ್ರಾಣಿಗಳು, ದೇಹದ ಭಾಗಗಳು, ವೈವಿಧ್ಯಮಯ ಚಿತ್ರಗಳನ್ನು ಗುರುತಿಸಬಲ್ಲ ಎಂದು ತಿಳಿಸಿದ್ದಾರೆ.

    ನಾವು ಮೊದಲು ಆದಿತ್ ಸಾಮರ್ಥ್ಯವನ್ನು ಪರೀಕ್ಷಿಸಲು ಭಾರತದ ಧ್ವಜ ಚಿತ್ರವನ್ನು ತೋರಿಸಿದ್ದೇವು. ಸ್ವಾತಂತ್ರ್ಯ ದಿನಾವಣೆಯ ವೇಳೆ ಮೋದಿ ಭಾಷಣ ಮಾಡುತ್ತಿದ್ದ ಆದಿತ್ ಧ್ವಜಕ್ಕೆ ನಮಸ್ಕಾರ ಮಾಡುತ್ತಿದ್ದ. ಒಮ್ಮೆ ಧ್ವಜ ನೋಡಿ ಬೇಗನೆ ಅರಿತುಕೊಳ್ಳಲು ಸಾಧ್ಯ ಎಂದು ಆಗ ನಮಗೆ ತಿಳಿಯಿತು. ಆ ಬಳಿಕ ಬೇರೆ ಬೇರೆ ದೇಶಗಳ ಧ್ವಜಗಳನ್ನು ಆತನಿಗೆ ಪರಿಚಯಿಸಲಾಯಿತು. ಆದಿತ್ ಕಾರ್ಯ ನೆನಪು ಈಗಿನ ವಯಸ್ಕರಿಗೂ ನೆನಪಿಟ್ಟುಕೊಳ್ಳುವುದು ಕಷ್ಟಕರವಾಗಿದೆ.

    ಮಗುವಿನ ಸಾಧನೆ ಕುರಿತು ಪ್ರತಿಕ್ರಿಯೆ ನೀಡಿರುವ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ, ಆದಿತ್ ವಸ್ತುಗಳನ್ನು ಗುರುತಿಸಲು ತೀಕ್ಷ್ಣವಾದ ಸ್ಮರಣೆ ಹೊಂದಿರುವ ಅಸಾಧಾರಣ ಮಗು. ಜೊತೆಗೆ ದೇಶಗಳ ಧ್ವಜ, ಕಾರಿನ ಲೋಗೋ, ಚಿತ್ರಗಳು, ವಾಹನ ನಕ್ಷೆ ಸೇರಿದಂತೆ ವರ್ಣಮಾಲೆಗಳನ್ನು 1 ವರ್ಷ 9 ತಿಂಗಳ ವಯಸ್ಸಿನಲ್ಲಿ ಗುರುತಿಸುತ್ತಾನೆ ಎಂದು ತಿಳಿಸಿದೆ.

  • ಪೇಜಾವರಶ್ರೀಗಳ 60ರ ದಶಕದ ಕ್ರಾಂತಿ ನೆನೆದ ಜನ

    ಪೇಜಾವರಶ್ರೀಗಳ 60ರ ದಶಕದ ಕ್ರಾಂತಿ ನೆನೆದ ಜನ

    ಉಡುಪಿ: ಅಸ್ಪೃಶ್ಯತೆ ನಿವಾರಣೆ ಉದ್ದೇಶ ಇಟ್ಟುಕೊಂಡು ಪೇಜಾವರಶ್ರೀಗಳು ದಲಿತ ಕೇರಿಗೆ ಪ್ರವೇಶ ಮಾಡಿದ್ದು, ಬ್ರಾಹ್ಮಣ ವಲಯದಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು. 1960ರ ಈ ಸಾಮಾಜಿಕ ಕ್ರಾಂತಿಯನ್ನು ನೆನೆದು ದಲಿತ ವಠಾರ ಹೆಮ್ಮೆ ವ್ಯಕ್ತಪಡಿಸಿದೆ.

    ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ 60ರ ದಶಕದಲ್ಲಿ ಮಾಡಿದ ಕ್ರಾಂತಿ ದೇಶದಲ್ಲೇ ಸಂಚಲನವನ್ನುಂಟು ಮಾಡಿತ್ತು. ಕೇರಿ ಪ್ರವೇಶ, ಪಾದಪೂಜೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ದಲಿತರಿಗೆ ಬ್ರಾಹ್ಮಣ ದೀಕ್ಷೆ ಕೂಡಾ ಶ್ರೀಗಳು ಮಾಡಿದ ಕ್ರಾಂತಿಗಳಲ್ಲೊಂದು. ವಿಶ್ವೇಶತೀರ್ಥ ಸ್ವಾಮೀಜಿ ಆರಾಧನೆಯನ್ನು ಕರಂಬಳ್ಳಿಯ ದಲಿತ ಬಡಾವಣೆಯಲ್ಲಿ ಆಚರಿಸಲಾಯ್ತು.

    ಪೇಜಾವರಶ್ರೀ ಭಾವಚಿತ್ರ ಇಟ್ಟು ಶ್ರೀಗಳ ಹೋರಾಟ, ದಲಿತ ಕೇರಿಗೆ ಹೋದ ನೆನಪುಗಳನ್ನು ಈ ಸಂದರ್ಭದಲ್ಲಿ ಮೆಲುಕು ಹಾಕಲಾಯಿತು. ಸ್ಥಳೀಯರಾದ ಭುಜಂಗ ಮಾತನಾಡಿ, ಪೇಜಾವರ ಸ್ವಾಮೀಜಿ ಬ್ರಾಹ್ಮಣರಾಗಿದ್ದರೂ ನಮ್ಮ ವಠಾರಕ್ಕೆ ಬಂದಿದ್ದರು. ನಮ್ಮ ಪುಣ್ಯ ಎಂದು ಇದನ್ನು ಭಾವಿಸುತ್ತೇವೆ. ಇವತ್ತು ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆಶೀರ್ವಾದ ನಮ್ಮ ಜೊತೆ ಇದೆ ಎಂದು ಹೇಳಿದರು.

    ಕರಂಬಳ್ಳಿ ವ್ಯಾಪ್ತಿಯ ಹಿಂದುಳಿದ, ದಲಿತ, ಕೊರಗ, ಸಮುದಾಯದ ನೂರಾರು ಜನ ಶ್ರೀಗಳಿಗೆ ಪುಷ್ಪಾಂಜಲಿ ಅರ್ಪಣೆ ಮಾಡಿದರು. ಆರಾಧನೆ ಲೆಕ್ಕದ ವಿಶೇಷ ಭೋಜನ ಸ್ವೀಕರಿಸಿದರು. ಪೇಜಾವರಶ್ರೀ ಕಾರ್ಯಕ್ರಮ ಆಯೋಜನೆಯಾದ ಸಂದರ್ಭದಲ್ಲಿ ಈ ಭಾಗಕ್ಕೆ ಆಗಾಗ ಭೇಟಿ ನೀಡುತ್ತಿದ್ದರು ಎಂದು ಇಲ್ಲಿನ ಜನ ಸ್ಮರಿಸುತ್ತಾರೆ.

  • ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

    ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

    ನೆನಪುಗಳನ್ನು ಹಿಡಿಯುವ ಹಂಬಲ. ಆದರೆ ಕೈ ಸಿಗದೇ ಓಡಿ ಹೋಗುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ನೆನಪುಗಳು ಸದಾ ಇರುತ್ತವೆ. ಕೆಲವರಿಗೆ ಸಿಹಿ ನೆನಪುಗಳಾದ್ರೆ ಇನ್ನೂ ಕೆಲವರಿಗೆ ಕಹಿ ನೆನಪುಗಳು ಅಚ್ಚಳಿಯದೇ ಉಳಿದಿವೆ. ಆದರೆ ಮನುಷ್ಯನ ಜೀವನ ಮಾತ್ರ ನೆನಪು ಮತ್ತು ಕನಸಿನ ಮಧ್ಯೆ ಸಾಗುತ್ತದೆ.

    ನನ್ನ ಬದುಕಿನಲ್ಲಿ ಸದಾ ಹಸಿರಾಗಿ ಉಳಿದುಕೊಂಡಿರುವ ಒಂದು ಸಿಹಿ ನೆನಪಿನ ಪುಟ್ಟ ಕಥೆ ನಿಮಗಾಗಿ….

    ನಾನು ಹಳ್ಳಿಯ ಹೊಲ-ಗದ್ದೆ, ಸ್ನೇಹಿತರು, ಜಾತ್ರೆ, ಹಬ್ಬ-ಹರಿದಿನಗಳ ಮಧ್ಯೆ ಅಲೆದಾಡಿ ಬೆಳೆದಿದ್ದೆ. ಆದರೆ ಹುಟ್ಟೂರಿನಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಕಾಲಿಟ್ಟಿದ್ದೆ. ಪಟ್ಟಣಕ್ಕಿಂತ ನಮಗೆ ಪಟ್ಟಣದ ಹಾಸ್ಟೆಲ್ ಒಂದು ಜೈಲು ಎಂದು ಅನ್ನಿಸುತ್ತಿತ್ತು. ಆದರೆ ಮೊದ ಮೊದಲು ಹೊಸ ಹಾಸ್ಟೆಲ್ ಜೀವನಕ್ಕೆ ಹೊಂದಿಕೊಳ್ಳುವಾಗ ದಿನಗಳು ವರ್ಷಗಳೇ ಕಳೆದಂತೆ ಭಾಸವಾಗುತ್ತಿತ್ತು. ಕಾಲಕ್ರಮೇಣ ದಿನ ಕಳೆದಂತೆ ತರಗತಿಯಲ್ಲಿನ ಸಹಪಾಠಿಗಳು ಮತ್ತು ಹಾಸ್ಟೆಲ್ ನ ಸ್ನೇಹಿತರು ಹತ್ತಿರವಾದರು. ಬಳಿಕ ನಮ್ಮದೇ ಆದ ಗುಂಪು ಮಾಡಿಕೊಂಡು ಕಾಲೇಜ್, ಸುತ್ತಾಟ, ತರಲೆ ಮತ್ತು ಆಟವಾಡಿಕೊಂಡು ದಿನಗಳನ್ನು ಕಳೆಯುತ್ತಿದ್ದವು.

    ಆರಂಭದಲ್ಲಿ ಹಾಸ್ಟೆಲ್ ಗೆ ಬಂದಾಗ ಭಾನುವಾರ ಬಂದರೆ ಸಾಕು ಊರಿಗೆ ಹೊರಡಲು ಸಿದ್ಧರಾಗುತ್ತಿದ್ದೆವು. ಆದರೆ ಕೆಲವು ದಿನಗಳ ನಂತರ ಯಾಕಾದರೂ ರಜೆ ಬರುತ್ತದೋ ಎಂದು ಹೇಳುವಂತಾಯಿತು. ಅಷ್ಟರ ಮಟ್ಟಿಗೆ ಸ್ನೇಹಿತರೆಲ್ಲರೂ ಹತ್ತಿರವಾಗಿದ್ದೆವು.

    ಕದ್ದ ಹಣ್ಣು ತುಂಬಾ ರುಚಿ:
    ರಜೆಯ ಒಂದು ದಿನ ಹಾಸ್ಟೆಲ್ ನಲ್ಲಿ ಕ್ರಿಕೆಟ್ ಆಡಿ ಮುಗಿದ ಬಳಿಕ ವರಾಂಡದಲ್ಲಿ ಕುಳಿತು ಸ್ನೇಹಿತರೆಲ್ಲರೂ ಹರಟೆ ಹೊಡೆಯುತ್ತಿದ್ದೆವು. ಈ ಸಮಯದಲ್ಲಿ ನಮ್ಮಲ್ಲೊಬ್ಬ ಗೆಳೆಯ ಹಾಸ್ಟೆಲ್ ಹಿಂದಿನ ತೋಟದಲ್ಲಿರುವ ಹಲಸಿನ ಹಣ್ಣಿನ ಬಗ್ಗೆ ಹೇಳಿದ್ದ. ಮೊದಲೇ ಕಾಲೇಜ್- ಹಾಸ್ಟೆಲ್ ನ ಜೀವನ. ನಮಗೆ ಆ ರಾತ್ರಿಯೇ ಹಲಸಿನ ಹಣ್ಣನ್ನು ಕದಿಯುವ ಯೋಚನೆಯಾಯಿತು.

    ಕೊನೆಗೆ ತಡರಾತ್ರಿಯೇ ಹಣ್ಣು ಕದಿಯಲು ನಿಪುಣ ಕಳ್ಳರಂತೆ ಯೋಜನೆ ರೂಪಿಸಿದೆವು. ಯಾರು ಮರ ಹತ್ತುವರು? ಹಣ್ಣನ್ನು ನೆಲಕ್ಕೆ ಬೀಳದಂತೆ ಕ್ಯಾಚ್ ಹಿಡಿಯುವುದು ಯಾರು? ಹಾಗೂ ತೋಟದ ಮಾಲೀಕ ಬರುವುದೊಳಗೆ ಹಿಂದಿರುಗಬೇಕು ಎಂದು ಪಿಸುಗುಟ್ಟುತ್ತಾ ತೋಟಕ್ಕೆ ನುಗ್ಗಿದೆವು. ಶಬ್ದ ಬರದಂತೆ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿದ್ದೆವು. ಆದರೆ ಕೆಲ ಹೊತ್ತಿನಲ್ಲಿ ತೋಟದೊಳಗೆ ಜೋರಾದ ಶಬ್ದ ಕೇಳಿಸಿತು. ಎಲ್ಲರು ತೋಟದ ಮಾಲೀಕ ಬಂದನೆಂದು ಹೆದರಿ ತೋಟದಿಂದ ಕಾಲ್ಕಿತ್ತೆವು.

    ನಾವು ಓಡಿ ಹೋಗುತ್ತಿದ್ದಂತೆ ನಮ್ಮ ಹಿಂದೆಯೇ ಯಾರೋ ಇದ್ದಾರೆಂದು ಭಾಸವಾಯಿತು. ಒಮ್ಮೆ ಎಲ್ಲರೂ ಧೈರ್ಯ ಮಾಡಿ ಹಿಂದೆ ತಿರುಗಿ ನೋಡಿದರೆ ಗುಟುರಾಕುತ್ತಿದ್ದ ಹಂದಿಗಳು. ನಕ್ಕರೇ ತೋಟದ ಮಾಲೀಕ ಬರುತ್ತಾರೆ ಎಂದು ಮನಸಿನಲ್ಲೇ ನಕ್ಕು ಅವುಗಳನ್ನು ಓಡಿಸಿದೆವು. ಬಳಿಕ ಹಲಸಿನ ಹಣ್ಣಿನ ಜೊತೆ ಸಪೋಟ ಹಣ್ಣನ್ನು ಕಿತ್ತು ತೋಟದಿಂದ ಬಂದೆವು. ‘ಕದ್ದು ತಿನ್ನುವ ರುಚಿಯೇ ಬೇರೆ’ ಎಂಬ ಗಾದೆಯಂತೆ ತಂದಿಟ್ಟ ಹಣ್ಣುಗಳು ಕೇವಲ ಮೂರು ದಿನಗಳಲ್ಲಿ ಖಾಲಿಯಾಗುತ್ತಿದ್ದವು. ಯಾರನ್ನು ಕೇಳಿದರು ‘ತಿಂದವರ್ಯಾರು’ ಎಂಬ ಮರು ಪ್ರಶ್ನೆ ಹುಟ್ಟಿಕೊಳ್ಳುತ್ತಿತ್ತು.

    ಹಾಸ್ಟೆಲ್ ನ ಸಪ್ಪೆ ಊಟ ತಿಂದು ಮರಗಟ್ಟಿದ್ದ ನಾಲಗೆಗೆ ರುಚಿ ಬೇಕೆನಿಸಿದಾಗ ಕೋಳಿ ಸುಟ್ಟು ತಿನ್ನುವ ಖಯಾಲಿ. ಉಪ್ಪು-ಖಾರ ಸರಿಯಾಗಿಲ್ಲ ಎಂದರೂ ಹಾಸ್ಟೆಲ್ ಊಟಕ್ಕಿನ್ನ ಮೋಸವಿಲ್ಲ ಎಂದು ಬಾಯಿ ಚಪ್ಪರಿಸಿಕೊಂಡು ತಿನ್ನುವಾಗ ಬಿಸಿ ಕೋಳಿ ತುಟಿ ಸುಟ್ಟ ನೆನಪು. ಆದರೆ ಹಳ್ಳಿಯಿಂದ ಕಾಲೇಜಿಗೆ ಈಗ ಬಂದಂತೆ ಭಾವನೆ, ನೋಡಿದರೆ ಕಾಲೇಜು ಜೀವನವೇ ಮುಗಿದು ಹೋಯಿತು.

    ಕದ್ದು ತಿಂದ ಹಣ್ಣು, ತುಟಿ ಸುಟ್ಟ ಕೋಳಿ, ಕಾಲೇಜಿನಲ್ಲಿ ಸ್ನೇಹಿತರ ಕೋಳಿ ಜಗಳ, ಸೆಂಡಾಫ್ ದಿನದ ಹುಚ್ಚು ಕುಣಿತ, ಪಕ್ಕದ ಡಿಪಾರ್ಟ್ ಮೆಂಟಿನ ಊಟ, ಜೂನಿಯರ್ ಗಳ ಹರಟೆ… ಇವೆಲ್ಲವೂ ಈಗ ಬರೀ ನೆನಪು ಮಾತ್ರ…

     – ಪವನ್ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv 

  • 33 ವರ್ಷದ ಹಿಂದಿನ ನೆನಪು ಮಾಡಿಕೊಂಡು ಮುಗಳ್ನಕ್ಕ ಪವರ್ ಸ್ಟಾರ್

    33 ವರ್ಷದ ಹಿಂದಿನ ನೆನಪು ಮಾಡಿಕೊಂಡು ಮುಗಳ್ನಕ್ಕ ಪವರ್ ಸ್ಟಾರ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ 33 ವರ್ಷದ ಹಿಂದಿನ ನೆನಪು ಮಾಡಿಕೊಂಡು ಖುಷಿಯಲ್ಲಿದ್ದಾರೆ.

    ಪುನೀತ್ ರಾಜ್‍ಕುಮಾರ್ ಬಾಲ ನಟರಾಗಿ ‘ಬೆಟ್ಟದ ಹೂವು’ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತ್ತಿತ್ತು. ಸದ್ಯ ಪುನೀತ್ ಬೆಟ್ಟದ ಹೂವು ಚಿತ್ರದ ದಿನಗಳನ್ನು ನೆನಪಿಸಿಕೊಂಡು ಫೇಸ್‍ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಸಂತಸದಲ್ಲಿದ್ದಾರೆ.

    ಬೆಟ್ಟದ ಹೂವು ಚಿತ್ರ 1985ರಲ್ಲಿ ಬಿಡುಗಡೆಯಾಗಿ ಇಂದಿಗೆ 33 ವರ್ಷಗಳು ಆಗಿದೆ. ಪುನೀತ್ ರಾಜ್‍ಕುಮಾರ್ ಅವರು ಬೆಟ್ಟದ ಹೂವು ಚಿತ್ರೀಕರಣ ಜಾಗಕ್ಕೆ ಭೇಟಿ ಮಾಡಿ ತಮ್ಮ ಬಾಲ್ಯದ ನೆನಪುಗಳನ್ನು ವಿಡಿಯೋ ಮೂಲಕ ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಪುನೀತ್ ‘ನಟಸಾರ್ವಭೌಮ’ ಚಿತ್ರದ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಬೆಟ್ಟದ ಹೂವು ಚಿತ್ರದ ಚಿತ್ರೀಕರಣ ಸ್ಥಳದ ನೆನಪಾಗಿ ಕೂಡಲೇ ಕಾರನ್ನು ಅತ್ತಿಗುಂಡಿ ಕಡೆಗೆ ತಿರುಗಿಸಿದ್ದಾರೆ.

    ಪುನೀತ್ ಆ ಸ್ಥಳಕ್ಕೆ ಹೋದ ನಂತರ ಶೂಟಿಂಗ್ ಸ್ಥಳ, ಶೂಟಿಂಗ್ ಸೆಟ್ ಎಲ್ಲಿ ಹಾಕಿದ್ದು ಹಾಗೂ ಚಿತ್ರದಲ್ಲಿ ಯಾರ್ಯಾರು ಯಾವ ಪಾತ್ರ ಮಾಡಿದ್ದರು ಎಂಬುದನ್ನು ವಿವರಿಸಿದ್ದಾರೆ. 33 ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಬೆಟ್ಟದ ಹೂವು ಚಿತ್ರೀಕರಣ ನೆನಪನ್ನು ಮೆಲುಕು ಹಾಕಿದ್ದಾರೆ.

    ಪುನೀತ್ ಚಿತ್ರೀಕರಣ ಜಾಗಕ್ಕೆ ಭೇಟಿ ನೀಡಿದ್ದಲ್ಲದೇ ಅತ್ತಿಗುಂಡಿಯ ಗ್ರಾಮಸ್ಥರನ್ನು ಮಾತನಾಡಿಸಿ ಚಿತ್ರೀಕರಣದ ಸ್ಥಳ ಹಾಗೂ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews