Tag: mental man

  • ವಿದ್ಯುತ್ ತಂತಿ ಮೇಲೆ ಹತ್ತಿ ವ್ಯಕ್ತಿಯಿಂದ ಅವಾಂತರ: ವಿಡಿಯೋ ನೋಡಿ

    ವಿದ್ಯುತ್ ತಂತಿ ಮೇಲೆ ಹತ್ತಿ ವ್ಯಕ್ತಿಯಿಂದ ಅವಾಂತರ: ವಿಡಿಯೋ ನೋಡಿ

    ಚೆನ್ನೈ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ತಂತಿ ಮೇಲೆ ಹತ್ತಿ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಆತಂಕ ಸೃಷ್ಟಿ ಮಾಡಿದ ಘಟನೆ ತಮಿಳುನಾಡಿನ ಈರೋಡ್‍ನಲ್ಲಿ ನಡೆದಿದೆ.

    ಇರೇನ್ (55) ವಿದ್ಯುತ್ ತಂತಿ ಹತ್ತಿದ ವ್ಯಕ್ತಿ. ಮೂಲತ: ಬೆಂಗಳೂರಿನ ಇರೇನ್ ಪೊಲ್ಲಾಚ್ಚಿಯಲ್ಲಿರುವ ತನ್ನ ಹೆಂಡತಿಯನ್ನು ಭೇಟಿಯಾಗಲು ತನ್ನ ಇಬ್ಬರೂ ಮಕ್ಕಳ ಜೊತೆ ಹೋಗುತ್ತಿದ್ದನು. ಈ ವೇಳೆ ಇದಕ್ಕಿಂತೆ ಆತ ವಿದ್ಯುತ್ ಕಂಬ ಏರಿ ತಂತಿ ಮೇಲೆ ಹತ್ತಿದ್ದಾನೆ. ಈ ವಿಚಾರ ಕೂಡಲೇ ಯಾವುದೇ ಅನಾಹುತ ಸಂಭವಿಸಬಾರದೆಂದು ತಕ್ಷಣ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು.

    ಇರೇನ್‍ನನ್ನು ಪೆರುಂದುರೈ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದರು. ನಂತರ ಈರೋಡ್‍ನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಈ ವೇಳೆ ಇರೇನ್ ತನ್ನ ಇಬ್ಬರ ಮಕ್ಕಳ ಜೊತೆ ಆಸ್ಪತ್ರೆಯಿಂದ ಓಡಿ ಹೋಗಲು ಪ್ರಯತ್ನಿಸಿದ್ದನು. ಆದರೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಇರೇನ್ ಪುನಃ ಓಡಿ ಹೋಗಿ ವಿದ್ಯುತ್ ಕಂಬದ ಮೇಲೆ ಹತ್ತಲು ಯತ್ನಿಸಿದ್ದಾನೆ. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲು ಸಿಬ್ಬಂದಿಯವರು ವಿದ್ಯುತ್ ಪೂರೈಕೆಯನ್ನು ನಿಲ್ಲಿಸಿದ್ದರು. ಈ ವೇಳೆ ಇರೇನ್ ವಿದ್ಯುತ್ ತಂತಿ ಮೇಲೆ ನಡೆದುಕೊಂಡು ಹೋಗಿ ಎಲ್ಲರಿಗೆ ಆತಂಕ ಸೃಷ್ಟಿ ಮಾಡಿಸಿದ್ದನು.

    ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಇರೇನ್ ಜೊತೆ ಮಾತನಾಡಿ ಆತನ ಮನವೊಲಿಸಿ, ಕಂಬದಿಂದ ಇಳಿಯುವಂತೆ ಹೇಳಿದ್ದಾರೆ. ಆಗ ಇರೇನ್ ತಕ್ಷಣ ಕಂಬದಿಂದ ಇಳಿಯಲು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸದ್ಯ ಇರೇನ್‍ಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

    ಇರೇನ್ ಮಾನಸಿಕ ಅಸ್ವಸ್ಥನಾಗಿದ್ದು, ಆತನಿಗೆ ಹಾಗೂ ಆತನ ಮಕ್ಕಳಿಗೆ ಆಹಾರ ನೀಡಿದ್ದಾರೆ. ನಂತರ ಇರೇನ್ ಪತ್ನಿಗೆ ವಿಷಯವನ್ನು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    https://www.youtube.com/watch?v=KALMzP6w0JE&feature=youtu.be

  • ಉಡುಪಿಯಲ್ಲಿ ಮನಬಂದಂತೆ ಕಲ್ಲೆಸೆದು ಬೀದಿ ರಂಪಾಟ ಮಾಡ್ತಿದ್ದ ಮಾನಸಿಕ ಅಸ್ವಸ್ಥ ಅರೆಸ್ಟ್

    ಉಡುಪಿಯಲ್ಲಿ ಮನಬಂದಂತೆ ಕಲ್ಲೆಸೆದು ಬೀದಿ ರಂಪಾಟ ಮಾಡ್ತಿದ್ದ ಮಾನಸಿಕ ಅಸ್ವಸ್ಥ ಅರೆಸ್ಟ್

    ಉಡುಪಿ: ಜಿಲ್ಲೆಯ ಮಲ್ಪೆ, ವಡಭಾಂಡೆಶ್ವರ, ಹೂಡೆ, ಆದಿ ಉಡುಪಿ, ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತ ಮಾನಸಿಕ ರೋಗಿಯೊರ್ವ ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಾ, ಸೊತ್ತುಗಳನ್ನು ನಾಶ ಮಾಡುತ್ತ, ಪರಿಸರದಲ್ಲಿ ಭಯ ಪಡಿಸುವ ಚಟುವಟಿಕೆಗಳನ್ನು ಮಾಡುವ ಮೂಲಕ ಜನರಲ್ಲಿ ಆತಂಕ ಸೃಷ್ಠಿಸಿದ್ದಾನೆ.

    ಸುಮಾರು 30 ವರ್ಷದ ಯುವಕನನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಕಾನೂನು ಪ್ರಕ್ರಿಯೆ ನಡೆಸಿ ಧಾರವಾಡದ ಮಾನಸಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾನಸಿಕ ವ್ಯಕ್ತಿಯ ಉಗ್ರ ಪ್ರತಾಪಕ್ಕೆ ಬಹಳಷ್ಟು ಜನ ಹಲ್ಲೆಗೊಳಗಾದ ಪ್ರಕರಣಗಳು ಮಲ್ಪೆ ಪರಿಸರದಲ್ಲಿ ಈ ಹಿಂದೆ ನಡೆದಿವೆ.

    ಕಲ್ಲುಗಳನ್ನು ಕಾರಣ ಇಲ್ಲದೆ ಸಾರ್ವಜನಿಕರ ತಲೆಗೆ ಗುರಿಯಿಟ್ಟು ಹೊಡೆಯುತ್ತಿದ್ದನು. ಅಲ್ಲದೇ ಸೋಡಾ ಬಾಟಲಿಗಳನ್ನು ಎಸೆಯುತ್ತಿದ್ದ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಇದರಿಂದಾಗಿ ಸ್ಥಳೀಯರು, ಮಹಿಳೆಯರು, ಶಾಲಾ ಮಕ್ಕಳು ರಸ್ತೆಯಲ್ಲಿ ತಿರುಗಾಡಲು ಹೆದರುತ್ತಿದ್ದರು. ಈತನ ಉಪಟಳ ಎಲ್ಲೆ ಮೀರಿದಾಗ, ಸಾರ್ವಜನಿಕರು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ಗಮನಕ್ಕೆ ತಂದಿದ್ದಾರೆ.

    ಸಾರ್ವಜನಿಕರ ಮನವಿಗೆ ಸ್ಪಂದಿಸಿದ ವಿಶು ಶೆಟ್ಟಿ ಅವರು ಮಾನಸಿಕ ವ್ಯಕ್ತಿಯ ರಾದ್ಧಾಂತ ಚಟುವಟಿಕೆಗಳ ವಿಚಾರ ಎಳೆ ಎಳೆಯಾಗಿ ಮನವಿಯಲ್ಲಿ ಉಲ್ಲೇಖಿಸಿ, ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ. ತಿಂಗಳು ಕಾಲ ನೀರಿಕ್ಷಿಸುತ್ತಾ, ಕಾಲ ಕಳೆದರೂ ಜಿಲ್ಲಾಡಳಿತದಿಂದ ಯಾವೊಂದು ಸ್ಪಂದನೆ ಸಿಕ್ಕಿರಲಿಲ್ಲ. ಇತ್ತ ಮಾನಸಿಕನ ರಂಪಾಟವು ಮದಗಜದಂತೆ ಹೆಚ್ಚಾಯಿತು. ವಾಹನಗಳ ಜಖಂಗೊಳಿಸುವುದು, ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡಲು ಶುರು ಮಾಡಲಾರಂಭಿಸಿದ್ದಾನೆ.

    ಈ ಹಿನ್ನೆಲೆಯಲ್ಲಿ ಪೊಲೀಸರ ಸಹಾಯದಿಂದ ಸಮಾಜ ಸೇವಕರು ಒಟ್ಟಾಗಿ ಮಾನಸಿಕ ಯುವಕನನ್ನು ಹಿಡಿದು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಉಡುಪಿಯಲ್ಲಿ ಸರ್ಕಾರಿ ಮಾನಸಿಕ ಆಸ್ಪತ್ರೆ ಸ್ಥಾಪನೆ ಮಾಡಬೇಕೆಂದು ದಶಕದಿಂದ ಒತ್ತಾಯಿಸುತ್ತಾ ಇದ್ದರೂ ಸರ್ಕಾರಗಳು ಇತ್ತ ಗಮನವನ್ನೇ ಕೊಡುತ್ತಿಲ್ಲ ಎಂಬುದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.