Tag: mentally challenged

  • ಮಾನಸಿಕ ಅಸ್ವಸ್ಥನನ್ನು ರಕ್ಷಿಸಲು ಹೋದ ಪೊಲೀಸ್‍ಗೆ ಥಳಿಸಿದ ಕುಡುಕರು!

    ಮಾನಸಿಕ ಅಸ್ವಸ್ಥನನ್ನು ರಕ್ಷಿಸಲು ಹೋದ ಪೊಲೀಸ್‍ಗೆ ಥಳಿಸಿದ ಕುಡುಕರು!

    ಚೆನ್ನೈ: ಮಾನಸಿಕ ಅಸ್ವಸ್ಥನನ್ನು ರಕ್ಷಿಸಲು ತೆರಳಿದ ಪೊಲೀಸ್ ಕಾನ್ಸ್ ಸ್ಟೇಬಲ್‍ (Police Constable) ನನ್ನೇ ಕುಡುಕರಿಬ್ಬರು ಥಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ (Kanyakumari) ಯಲ್ಲಿ ನಡೆದಿದೆ.

    ಆರೋಪಿಗಳನ್ನು ಸ್ವರ್ಣರಾಜ್ ಹಾಗೂ ಜೆರಿನ್ ಎಂದು ಗುರುತಿಸಲಾಗಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ

    ಕುಡುಕರಿಬ್ಬರು ಮಾನಸಿಕ ಅಸ್ವಸ್ಥನ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಇದನ್ನು ಗಮನಿಸಿದ ಪೊಲೀಸ್ ಕಾನ್ಸ್ ಸ್ಟೇಬಲ್ ಅವರು ಆತನನ್ನು ಕುಡುಕರಿಂದ ರಕ್ಷಿಸಲು ತೆರಳಿದ್ದಾರೆ. ಇದರಿಂದ ಮತ್ತೆ ರೊಚ್ಚಿಗೆದ್ದ ಕುಡುಕರು ಪೊಲೀಸ್ (Police) ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ.

    ALCOHOL

    ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದನ್ನು ಗಮನಿಸಿದ ವಾಹನಸವಾರರು ಕೂಡಲೇ ಮಧ್ಯಪ್ರವೇಶ ಮಾಡಿದ್ದಾರೆ. ಅಲ್ಲದೆ ಕುಡುಕರಿಗೇ ಥಳಿಸಿದ್ದಾರೆ. ಸದ್ಯ ಮೂವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಆರೋಪಿಗಳ ವಿರುದ್ಧ ಕೀರಿಪಾರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ- 2 ವರ್ಷದ ಬಳಿಕ ಆರೋಪಿ ಬಂಧನ

    ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ- 2 ವರ್ಷದ ಬಳಿಕ ಆರೋಪಿ ಬಂಧನ

    – ಮೊಬೈಲ್ ಬಳಸಿ ಸಿಕ್ಕಾಕ್ಕೊಂಡ ಆರೋಪಿ

    ಮುಂಬೈ: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಎರಡು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.

    ಮುಂಬೈನ ಟಾರ್ಡಿಯೋದಲ್ಲಿ ಅಕ್ಟೋಬರ್ 2018ರಂದು ಪ್ರಕರಣ ನಡೆದಿದ್ದು, ಕೃತ್ಯ ಎಸಗಿ ಆರೋಪಿ ನೇಪಾಳಕ್ಕೆ ಪರಾರಿಯಾಗಿದ್ದ. ಹೀಗಾಗಿ ಬಂಧನದಿಂದ ತಪ್ಪಿಸಿಕೊಂಡಿದ್ದ. ಕಳೆದ ವಾರ ಪಾಟ್ನಾದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮನೋಜ್ ಸಹಾ ಎಂದು ಗುರುತಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್‍ಶೀಟ್ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಆರಂಭದಲ್ಲಿ ಮೂವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಹೇಳಿಕೆ ನೀಡಿದ್ದಳು. ಬಳಿಕ ಹೇಳಿಕೆ ಬದಲಿಸಿದ್ದಳು. ಈ ಹಿನ್ನೆಲೆ ಆರೋಪಿ ವಿರುದ್ಧ ಅತ್ಯಾಚಾರ ಆರೋಪವನ್ನು ಕೈಬಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಅಕ್ಟೋಬರ್ 10, 2018ರಂದು ತನ್ನ ಸಹೋದರಿಯೊಂದಿಗೆ ಜಗಳ ಮಾಡಿಕೊಂಡು ಯುವತಿ ಮನೆ ತೊರೆದಿದ್ದಳು. ಬಳಿಕ ಮುಂಬೈ ಸೆಂಟ್ರಲ್ ರೈಲು ಹತ್ತಿ ತೆರಳಿದ್ದಳು. ಟಾರ್ಡಿಯೊದಲ್ಲಿ ರಸ್ತೆಯ ಮೇಲೆ ಮಲಗಿದ್ದಳು. ಈ ವೇಳೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಮರುದಿನ ಯುವತಿ ಮನೆಗೆ ಬಂದಿದ್ದು, ಆಕೆಯ ನಡವಳಿಕೆಯಲ್ಲಿ ಬದಲಾವಣೆಯಾಗಿರುವುದನ್ನು ಕಟುಂಬಸ್ಥರು ಗಮನಿಸಿದ್ದಾರೆ. ಬಳಿಕ ತಂದೆಯ ಬಳಿ ಘಟನೆ ಕುರಿತು ವಿವರಿಸಿದ್ದಾಳೆ.

    ಇದೀಗ ಯುವತಿಗೆ 20 ವರ್ಷಗಳಾಗಿದ್ದು, ಆರಂಭದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಳು. ಬಳಿಕ ಹೇಳಿಕೆ ಬದಲಾಯಿಸಿದ್ದಳು. ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿತ್ತು. ಬಳಿಕ ಆರೋಪಿ ಸಹಾನನ್ನು ಗುರುತಿಸಲಾಗಿದ್ದು, ಈತ ಬಿಹಾರದ ಸೀತಾಮರಿ ಜಿಲ್ಲೆಗೆ ಪರಾರಿಯಾಗಿದ್ದ. ಇದಕ್ಕೂ ಮೊದಲು ನೇಪಾಳಕ್ಕೆ ತೆರಳಿ ತನ್ನ ಸಹೋದರಿಯ ಮನೆಯಲ್ಲಿ ಆಶ್ರಯ ಪಡೆದಿದ್ದ ಎಂದು ಪೊಲಿಸರು ತಿಳಿಸಿದ್ದಾರೆ.

    ಆರೋಪಿ ಮೊಬೈಲ್ ಬಳಸುವುದನ್ನು ನಿಲ್ಲಿಸಿದ್ದ. ಆದರೆ ತನ್ನ ಸ್ನೇಹಿತನೊಂದಿಗೆ ಸಂಪರ್ಕದಲ್ಲಿದ್ದ. ಈ ತನಿಖೆಯ ಬೆಳವಣಿಗೆ ಕುರಿತು ಮಾಹಿತಿ ನೀಡುತ್ತಿದ್ದ. ಈ ವೇಳೆ ಆರೋಪಿ ನೇಪಾಳದಿಂದ ಬಿಹಾರಕ್ಕೆ ಆಗಮಿಸಿದ್ದ. ಇತ್ತೀಚೆಗೆ ತನ್ನ ಸ್ನೇಹಿತನಿಗೆ ಕರೆ ಮಾಡುವ ಮೂಲಕ ಆರೋಪಿ ತನ್ನ ಲೊಕೇಶನ್ ರಿವೀಲ್ ಮಾಡಿದ್ದ. ಬಳಿಕ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ.

  • ಬಾಲಕನ ಮರ್ಮಾಂಗಕ್ಕೆ ಇಟ್ಟಿಗೆ ಕಟ್ಟಿ ನೇತಾಡಿಸಿ ಶಿಕ್ಷೆ!

    ಬಾಲಕನ ಮರ್ಮಾಂಗಕ್ಕೆ ಇಟ್ಟಿಗೆ ಕಟ್ಟಿ ನೇತಾಡಿಸಿ ಶಿಕ್ಷೆ!

    ಲಕ್ನೋ: 16 ವರ್ಷದ ಮಾನಸಿಕ ಅಸ್ವಸ್ಥ ಬಾಲಕನ ಮರ್ಮಾಂಗಕ್ಕೆ ಇಟ್ಟಿಗೆ ಕಟ್ಟಿ ನೇತಾಡಿಸುವ ಮೂಲಕ ಆತನ ಸಂಬಂಧಿಕರು ಶಿಕ್ಷೆ ನೀಡಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಶಹಜಾನ್‍ಪುರದಲ್ಲಿ ನಡೆದಿದೆ.

    ಈ ಘಟನೆ ಮೇ 26ರಂದು ನಡೆದಿದ್ದು, ಈ ಬಗ್ಗೆ ದೂರು ನೀಡಲು ತೆರಳಿದಾಗ ಬಳಿಕ ಬಾಲಕನ ಸಹೋದರಿ ಹಾಗೂ ಆತನ ಕುಟುಂಬಸ್ಥರ ಮೇಲೆ ದಾಳಿ ನಡೆದಿದೆ.

    ಘಟನೆ ಕುರಿತು ಬಾಲಕ ತಂದೆ ಹರಿ ರಾಮ್ ಮಾತನಾಡಿ, ನನ್ನ ಮಗ ಸಂದೀಪ್(ಹೆಸರು ಬದಲಾಯಿಸಲಾಗಿದೆ) ಮಾನಸಿಕ ಅಸ್ವಸ್ಥನಾಗಿದ್ದು, ಗ್ರಾಮದ ಕೆಲ ಬಾಲಕರೊಂದಿಗೆ ಕೂಡಿ ಆಟವಾಡುತ್ತಿದ್ದನು. ಈ ವೇಳೆ ಗಲಾಟೆ ನಡೆದಿದೆ. ಪರಿಣಾಮ ಮಗನ ಮೇಲೆ ಸಿಟ್ಟುಗೊಂಡ ನನ್ನ ಕೆಲ ಸಂಬಂಧಿಕರು ಆತನ ಮರ್ಮಾಂಗಕ್ಕೆ ಇಟ್ಟಿಗೆಯನ್ನು ಕಟ್ಟಿ ನೇತಾಡಿಸಿದ್ದಾರೆ. ಅಲ್ಲದೆ ನಂತರ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಈ ವಿಚಾರ ಹರಿದಾಡುತ್ತಿದ್ದಂತೆಯೇ ನಮ್ಮ ಗಮನಕ್ಕೆ ಬಂದಿದ್ದು, ಕೂಡಲೇ ದೂರು ದಾಖಲಿಸಲು ಪೊಲೀಸ್ ಠಾಣೆಯತ್ತ ತೆರಳುತ್ತಿದ್ದೆವು. ಈ ವೇಳೆ ಸಂಬಂಧಿಕರು ದೂರು ದಾಖಲಿಸಿದಂತೆ ನಮ್ಮನ್ನು ತಡೆದು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

    ಬಾಲಕನ ಸಹೋದರಿ ಧ್ವನಿ ಮಾತನಾಡಿ, ಘಟನೆ ನಡೆದ ಬಳಿಕ ನಾನು ಹಾಗೂ ನಮ್ಮ ತಾಯಿ ಜೊತೆ ಸಂಬಂಧಿಕರ ಬಳಿ ಯಾಕೆ ಹೀಗೆ ಮಾಡಿದ್ರಿ ಎಂದು ಕೇಲಲು ಹೋದೆವು. ಈ ವೇಳೆ ನಮಗೆ ಹಾಗೂ ಸಂಬಂಧಿಕರ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅಲ್ಲದೆ ನಮ್ಮ ತಾಯಿ ಮೇಲೆ ಅವರು ಹಲ್ಲೆ ಮಾಡಲು ಯತ್ನಿಸಿದರು. ಇದೇ ಸಂದರ್ಭದಲ್ಲಿ ನಾನು ತಾಯಿಯನ್ನು ರಕ್ಷಿಸಲು ಹೋದೆ. ಆಗ ಹಿಂಬಂದಿಯಿಂದ ಬಂದು ಸಂಬಂಧಿಕರು ನನ್ನ ಹಾಗೂ ತಾಯಿಯ ತಲೆಗೆ ಕೋಲಿನಿಂದ ಹೊಡೆದರು ಎಂದು ಕಣ್ಣೀರು ಹಾಕಿದ್ದಾಳೆ.

    ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತೇವೆ. ಅಲ್ಲದೆ ಘಟನೆಯ ಬಗ್ಗೆ ಸತ್ಯಾಸತ್ಯತೆ ಅರಿತುಕೊಂಡು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಯಾದವ್ ಭರವಸೆ ನೀಡಿದ್ದಾರೆ.

    ಸದ್ಯ ವೈರಲ್ ಆದ ವಿಡಿಯೋವನ್ನು ನೋಡಿದ್ದೇವೆ. ಹೀಗಾಗಿ ಅದರ ಸತ್ಯಾಸತ್ಯತೆಯನ್ನು ಅರಿತು ತನಿಖೆ ಮುಂದುವರಿಸುತ್ತೇವೆ. ಒಂದು ವೇಳೆ ವಿಡಿಯೋದಲ್ಲಿ ನಡೆದ ಘಟನೆ ಸತ್ಯವಾಗಿದ್ದರೆ ಆರೋಪಿಗಳ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಯಾದವ್ ತಿಳಿಸಿದ್ದಾರೆ.

    ವೈರಲಾದ ವಿಡಿಯೋ ಕುರಿತು ಮೇ 26ರಂದು ಬಂದಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

  • 28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    ಕೋಲ್ಕತ್ತಾ: ದೆಹಲಿಯ ನಿರ್ಭಯಾ ಪ್ರಕರಣವನ್ನೇ ಹೋಲುವ ಭಯಾನಕ ಘಟನೆಯೊಂದು ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಬುಡಕಟ್ಟು ಜನಾಂಗದ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಬಳಿಕ ಆಕೆಯ ಗುಪ್ತಾಂಗಕ್ಕೆ ರಾಡೊಂದನ್ನು ತೂರಿದ್ದಾರೆ. ಸಂತ್ರಸ್ಥೆ ಮಾನಸಿಕ ಅಸ್ವಸ್ಥೆ ಎಂಬುದಾಗಿ ವರದಿಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ ರಾಂಪ್ರಬೆಶ್ ಶರ್ಮಾ ಹಾಗೂ 50 ವರ್ಷದ ಅಂಧಾರು ಬರ್ಮನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಡಿಜಿ ಅನೂಜ್ ಶರ್ಮಾ ತಿಳಿಸಿದ್ದಾರೆ.

    ಏನಿದು ಘಟನೆ?: ಫೆಬ್ರವರಿ 18 ರಂದು ಪಶ್ಚಿಮ ಬಂಗಾಳದ ದಿನಜಪೋರ್ ಜಿಲ್ಲೆಯ ಕುಶ್ಮುಂಡಿ ಪ್ರದೇಶದಲ್ಲಿ ಸಂತ್ರಸ್ತೆ ಉತ್ಸವವೊಂದಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಘಟನೆಯ ಬಳಿಕ ಚಿಂತಾನಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಾಯ್ಗಂಜ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಲ್ಡಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಳಿಕ ಮಹಿಳೆ ನೆಲದಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಕೂಡಲೇ ನಮಗೆ ಮಾಹಿತಿ ರವಾನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಆಸ್ಪತ್ರೆಗೆ ದಾಖಲಾಗುವ ವೇಳೆ ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಲ್ಲಿಯವರೆಗೆ ಅವರನ್ನು ಸಿಸಿಯು(ಕ್ರಿಟಿಕಲ್ ಕೇರ್ ಯುನಿಟ್) ನಲ್ಲಿ ಇಡಲಾಗಿತ್ತು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ್ದಾರೆ.

    ಮಹಿಳೆ ಅನಾಥೆ: ಸಂತ್ರಸ್ತೆ 10 ವರ್ಷಗಳ ಹಿಂದೆ ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಒಬ್ಬರೇ ಜೀವನ ನಡೆಸುತ್ತಿದ್ದರು. ಅಲ್ಲದೇ ಕಳೆದ ಕೆಲ ವರ್ಷಗಳ ಹಿಂದೆ ಮದುವೆ ಕೂಡ ಆಗಿದ್ದು, ಈಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದ ಬಳಿಕ ಪತಿ ವಿಚ್ಚೇಧನ ನೀಡಿದ್ದಾನೆ. ಹೀಗಾಗಿ ಮಹಿಳೆ ಒಬ್ಬರೇ ಜೀವಿಸುತ್ತಿದ್ದು, ಇವರಿಗೆ ನೆರೆಹೊರೆಯವರು ಆಹಾರ ಕೊಡುತ್ತಿದ್ದರು.

    ತನಿಖೆಗೆ ಬಿಜೆಪಿ ಒತ್ತಾಯ: ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುವುದು ಇದೇ ಮೊದಲಲ್ಲ. ಇಂತಹ ಅನೇಕ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಇಂತಹ ಪ್ರಕರಣಗಳನ್ನು ಪೊಲೀಸರು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸರು ತಳ್ಳಿ ಹಾಕುವ ಮೊದಲು ಸ್ಪಷ್ಟವಾಗಿ ತನಿಖೆ ನಡೆಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಅಲ್ಲಿನ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

  • ಆಧಾರ್‍ನಿಂದ 2 ವರ್ಷಗಳ ನಂತರ ಹೆತ್ತವರನ್ನ ಮತ್ತೆ ಸೇರಿದ 9ರ ಬುದ್ಧಿಮಾಂದ್ಯ ಬಾಲಕ

    ಆಧಾರ್‍ನಿಂದ 2 ವರ್ಷಗಳ ನಂತರ ಹೆತ್ತವರನ್ನ ಮತ್ತೆ ಸೇರಿದ 9ರ ಬುದ್ಧಿಮಾಂದ್ಯ ಬಾಲಕ

     

    ನವದೆಹಲಿ: ಕುಟುಂಬದಿಂದ ಬೇರ್ಪಟ್ಟಿದ್ದ ಬುದ್ಧಿಮಾಂದ್ಯ ಬಾಲಕನೊಬ್ಬ ಆಧಾರ್ ನೆರವಿನಿಂದ ಸೋಮವಾರದಂದು ಮತ್ತೆ ಹರಿಯಾಣದ ಪಾಣಿಪತ್‍ನಲ್ಲಿರುವ ತನ್ನ ಪೋಷಕರ ಮಡಿಲು ಸೇರಿದ್ದಾನೆ.

    9 ವರ್ಷದ ಗೌರವ್ ಎರಡು ವರ್ಷಗಳ ಬಳಿಕ ತನ್ನ ಪೋಷಕರನ್ನ ಭೇಟಿಯಾಗಿದ್ದಾನೆ. ಮಕ್ಕಳ ಆಶ್ರಯ ಗೃಹದಲ್ಲಿ ಅಧಿಕಾರಿಗಳು ಆಧಾರ್ ನೋಂದಣಿಗಾಗಿ ಎಲ್ಲಾ ಹುಡುಗರ ಬಯೋಮೆಟ್ರಿಕ್ ವಿವರಗಳನ್ನ ಪಡೆದಿದ್ರು. ಆದ್ರೆ ಒಬ್ಬ ಹುಡುಗನ ವಿವರವನ್ನ ಮಾತ್ರ ನೊಂದಾಯಿಸಲು ಆಗಿರಲಿಲ್ಲ. ಯಾಕಂದ್ರೆ ಆತನ ಹೆಸರು ಅದಾಗಲೇ ನೋಂದಣಿಯಾಗಿತ್ತು. ಬಳಿಕ ದಹಲಿ ಮಹಿಳಾ ಆಯೋಗ ನಡೆಸುತ್ತಿದ್ದ ಸರ್ಕಾರೇತರ ಸಂಸ್ಥೆ ಪಾಲ್ನಾ ದಲ್ಲಿದ್ದ ಬಾಲಕ ಗೌರವ್‍ನನ್ನ ಸಲಾಮ್ ಬಾಲಕ್ ಟ್ರಸ್ಟ್‍ಗೆ ಕಳಿಸಲಾಗಿತ್ತು.

    ಪಾಲ್ನಾದಲ್ಲಿ 8 ವರ್ಷ ವಯಸ್ಸಿನವರೆಗಿನ ಮಕ್ಕಳನ್ನ ಮಾತ್ರ ನೋಡಿಕೊಳ್ಳಲಾಗುತ್ತದೆ. ಆದ್ದರಿಂದ ಗೌರವ್‍ನನ್ನು ಇಲ್ಲಿಗೆ ವರ್ಗಾಯಿಸಲಾಯ್ತು. ನಿಯಮಿತವಾಗಿ ನಡೆಸಲಾಗುವ ಆರೋಗ್ಯ ಪರೀಕ್ಷೆ ವೇಳೆ ಬಾಲಕ ಎಡಿಎಸ್‍ಪಿ(ಆಲ್ಝಿಮರ್ಸ್ ಡಿಸೀಸ್ ಸೀಕ್ವೆನ್ಸಿಂಗ್ ಪ್ರಾಜೆಕ್ಟ್) ನಿಂದ ಬಳಲುತ್ತಿದ್ದಾನೆ ಎಂದು ಗೊತ್ತಾಯಿತು. ಆದ್ದರಿಂದ ಆತನಿಗೆ ತನ್ನ ಹಾಗೂ ಪೋಷಕರ ಹೆಸರು ಬಿಟ್ಟರೆ ಬೇರೆ ಯಾವುದೂ ನೆನಪಿರಲಿಲ್ಲ ಅಂತ ಟ್ರಸ್ಟ್‍ನ ಕೋ-ಆರ್ಡಿನೇಟರ್ ಸಂಜಯ್ ದುಬೇ ಹೇಳಿದ್ದಾರೆ.

    ಬಯೋಮೆಟ್ರಿಕ್ ಪರಿಶೀಲನೆ ವೇಳೆ ಬಾಲಕನ ವಿವರಗಳು ಪಾಣಿಪತ್‍ನಲ್ಲಿದ್ದ ಆತನ ಪೋಷಕರೊಂದಿಗೆ ಹೊಂದಿಕೆ ಆಗಿತ್ತು. ಇದನ್ನ ಬೆನ್ನತ್ತಿ ಆತನ ಪೋಷಕರನ್ನು ದೆಹಲಿಗೆ ಕರೆಸಲಾಗಿತ್ತು. ಈ ಮೂಲಕ ಬುದ್ಧಿಮಾಂದ್ಯ ಬಾಲಕ ಕೊನೆಗೂ ತನ್ನ ಪೋಷಕರನ್ನ ಸೇರುವಂತಾಯ್ತು ಎಂದು ಅವರು ಹೇಳಿದ್ದಾರೆ. 2 ವರ್ಷಗಳ ನಂತರ ಮಗ ಸಿಕ್ಕಿದ್ದಕ್ಕೆ ಗೌರವ್ ತಂದೆ ವಿಕಾಸ್ ಸಂತೋಷಗೊಂಡಿದ್ದಾರೆ.

    ನನಗೆ ನೆನಪಿದೆ, ಅಂದು 2015ರ ಭಾನುವಾರ. ಮನೆಯ ಹೊರಗಡೆ ಆಟವಾಡ್ತಿದ್ದ ಗೌರವ್ ಕಾಣೆಯಾಗಿದ್ದ. ನಾವು ಆತನಿಗಾಗಿ ಎಲ್ಲಾ ಕಡೆ ಹುಡುಕಾಡಿದೆವು. ಕೊನೆಗೆ ಪೊಲೀಸ್ ಠಾಣೆಗೂ ದೂರು ಕೊಟ್ಟೆವು. ಟಿವಿ, ನ್ಯೂಸ್‍ಪೇಪರ್‍ಗಳಲ್ಲಿ ಜಾಹಿರಾತು ಕೊಟ್ಟರೂ ನಮ್ಮ ಮಗನನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ರೆ ನಮ್ಮ ನಂಬಿಕೆ ಕುಗ್ಗಿರಲಿಲ್ಲ. ಅಂತೂ ಆಧಾರ್‍ನಿಂದ ನಮ್ಮ ದೊಡ್ಡ ಮಗ ಮತ್ತೆ ನಮಗೆ ಸಿಕ್ಕಿದ್ದಾನೆ ಅಂತ ತಂದ ವಿಕಾಸ್ ಸಂತೋಷ ವ್ಯಕ್ತಪಡಿಸಿದ್ದಾರೆ.

  • ಪೋಷಕರು ಬಿಟ್ಟು ಹೋದ ಬುದ್ಧಿಮಾಂದ್ಯ ಮೊಮ್ಮಗನನ್ನು ಕೂಲಿ ಮಾಡಿ ಸಾಕ್ತಿರೋ ಅಜ್ಜಿ- ಚಿಕಿತ್ಸೆಗೆ ಬೇಕಿದೆ ನೆರವು

    ಪೋಷಕರು ಬಿಟ್ಟು ಹೋದ ಬುದ್ಧಿಮಾಂದ್ಯ ಮೊಮ್ಮಗನನ್ನು ಕೂಲಿ ಮಾಡಿ ಸಾಕ್ತಿರೋ ಅಜ್ಜಿ- ಚಿಕಿತ್ಸೆಗೆ ಬೇಕಿದೆ ನೆರವು

    ವಿಜಯಪುರ: ಹೆತ್ತವರಿಗೆ ಹೆಗ್ಗಣ ಕೂಡ ಮುದ್ದು ಅಂತಾರೆ. ತಂದೆ ತಾಯಿಗೆ ಮಕ್ಕಳು ಹೇಗಿದ್ದರೂ ಅವರೇ ಸರ್ವಸ್ವವಿದ್ದಂತೆ. ಆದ್ರೆ ಮಗಿನಿಗೆ ಫಿಟ್ಸ್ ಇದೆ, ಬುದ್ಧಿಮಾಂದ್ಯನಾಗಿದ್ದಾನೆ ಅಂತಾ ಅಜ್ಜಿ ಹತ್ತಿರ ಮಗನನ್ನು ಬಿಟ್ಟು ತಂದೆ ತಾಯಿ ನಾಪ್ತೆಯಾಗಿದ್ದಾರೆ. ಈಗ ಈ ಬುದ್ಧಿಮಾಂದ್ಯ ಮಗುವಿಗೆ ಅಜ್ಜಿಯೇ ಎಲ್ಲಾ. ಆದ್ರೆ ಆ ಅಜ್ಜಿಯ ಪಾಡು ಮಾತ್ರ ಶೋಚನೀಯ.

    ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಚಿಮ್ಲಗಿ ಬಿ1 ಪುನರ್ವಸತಿ ಕೇಂದ್ರದಲ್ಲಿರೋ ಬಾಲಕನ ಹೆಸರು ಬಸವರಾಜ. ಇವನು ಹುಟ್ಟಿದ ನಾಲ್ಕು ವರ್ಷಗಳವರೆಗೆ ಎಲ್ಲರಂತೆ ಚೆನ್ನಾಗಿದ್ದ. ಆದ್ರೆ ತದನಂತರ ಇವನಿಗೆ ಫೀಟ್ಸ್ ಬರಲು ಆರಂಭಿಸಿತಂತೆ. ಇದೇ ರೀತಿ ಒಂದು ಬಾರಿ ಫಿಟ್ಸ್ ಬಂದಾಗ ಕೆಳಗೆ ಬಿದ್ದ ನಂತರ ಇವನ ಮೆದುಳಿಗೆ ಪೆಟ್ಟು ಬಿದ್ದಿದ್ದು, ಆಗಿನಿಂದ ಇವನು ಬುದ್ಧಿಮಾಂದ್ಯನಾಗಿದ್ದಾನೆ ಅಂತಾರೆ ಬಸವರಾಜ ಅಜ್ಜಿ ಶಾಂತಾಬಾಯಿ.

    ಬಸವರಾಜ ಶಾಂತಾಬಾಯಿಯ ಮಗಳ ಮಗನಾಗಿದ್ದು, ಮಗ ಬುದ್ಧಿಮಾಂದ್ಯನಾದ ನಂತರ ಬಸವರಾಜನ ತಂದೆ ತಾಯಿ ಇಬ್ಬರೂ ಅಜ್ಜಿ ಹತ್ತಿರ ಬಿಟ್ಟು ನಾಪತ್ತೆಯಾಗಿದ್ದಾರೆ. ತಂದೆ ತಾಯಿ ಬಿಟ್ಟು ಹೋದ ಮೇಲೆ ಬಸವರಾಜನನ್ನು ಅಜ್ಜಿ ಶಾಂತಾಬಾಯಿ ಸಾಕಿ ಸಲಹುತ್ತಿದ್ದು, ಬಸವರಾಜನ ದಿನನಿತ್ಯದ ಎಲ್ಲ ಕರ್ಮಾದಿಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದ್ರೆ ಶಾಂತಾಬಾಯಿ ಕೂಲಿ ಕಾರ್ಮಿಕರಾಗಿದ್ದು, ಪ್ರತಿನಿತ್ಯ ಕೂಲಿ ಮಾಡಿ ಬಂದರೆ ಇವರ ಜೀವನ ಸಾಗುತ್ತದೆ. ಆದ್ರೆ ಮನೆಯಲ್ಲಿ ಶಾಂತಾಬಾಯಿ ಬಿಟ್ಟರೆ ಬೇರೆ ಯಾರೂ ಇಲ್ಲದ ಕಾರಣ ಕೆಲಸಕ್ಕೆ ಹೋಗುವಾಗ ಮನೆಯ ಹೊರಗಡೆ ಇರುವ ಗಿಡಕ್ಕೆ ಬಸವರಾಜನ ಕಾಲನ್ನ ಸರಪಳಿ ಹಾಕಿ ಕಟ್ಟಿ ಹೋಗುತ್ತಾರೆ. ಕೆಲಸದಿಂದ ಮರಳಿ ಬರುವವರೆಗೂ ಅಕ್ಕಪಕ್ಕದವರಿಗೆ ನೋಡುತ್ತಿರಲು ಹೇಳಿ ಹೋಗುತ್ತಾರೆ. ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕಾರಣ ಬಸವರಾಜನಿಗೆ ಚಿಕಿತ್ಸೆ ಕೊಡಿಸಲಾಗದೆ ಪರದಾಡುತ್ತಿದ್ದಾರೆ ಅನ್ನೋದು ಸ್ಥಳೀಯರ ಮಾತು.

    ಬಸವರಾಜನಿಗೆ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಲ್ಲಿ ಗುಣಮುಖನಾಗಬಹುದೆಂಬುದು ಸ್ಥಳೀಯರ ಅಭಿಪ್ರಾಯ. ಇನ್ನು ಶಾಂತಾಬಾಯಿಗೂ ವಯಸ್ಸಾಗಿದ್ದು, ನಾನು ಇಲ್ಲದೆ ಹೋದರೆ ಬಸವರಾಜನ ಗತಿ ಏನು ಅಂತಾ ಚಿಂತಿಸುತ್ತಿದ್ದಾರೆ. ಬೆಳಕು ಕಾರ್ಯಕ್ರಮದಿಂದಾದರು ಬಸವರಾಜನ ಬಾಳಲ್ಲಿ ಬೆಳಕು ಮರಳಿ ಬರಲಿ ಅನ್ನೋದು ಸ್ಥಳೀಯರ ಆಶಯ.

    https://www.youtube.com/watch?v=Drx0lVtn_zw

  • ಮಂಡ್ಯ: ಹೆಚ್‍ಡಿಕೆ ಸ್ಥಳಕ್ಕೆ ಬರಬೇಕೆಂದು ನೀರಿನ ಟ್ಯಾಂಕ್ ಏರಿ ಮಾನಸಿಕ ಅಸ್ವಸ್ಥನ ಪ್ರತಿಭಟನೆ

    ಮಂಡ್ಯ: ಹೆಚ್‍ಡಿಕೆ ಸ್ಥಳಕ್ಕೆ ಬರಬೇಕೆಂದು ನೀರಿನ ಟ್ಯಾಂಕ್ ಏರಿ ಮಾನಸಿಕ ಅಸ್ವಸ್ಥನ ಪ್ರತಿಭಟನೆ

    ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಸ್ಥಳಕ್ಕೆ ಬರಬೇಕು ಹಾಗೂ ಫ್ರೀ ಡ್ರಿಂಕ್ಸ್, ಸಿಗರೇಟ್ ಬೇಕು ಅಂತ ಮಾನಸಿಕ ಅಸ್ವಸ್ಥನೊಬ್ಬ ನೀರಿನ ಟ್ಯಾಂಕ್ ಮೇಲೆ ಹತ್ತಿ ಪ್ರತಿಭಟನೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯದ ಮಳ್ಳವಳ್ಳಿ ತಾಲೂಕಿನ ಅಂಕನಹಳ್ಳಿಯಲ್ಲಿ ಪ್ರಸನ್ನ ಎಂಬಾತ ವಿಚಿತ್ರ ಪ್ರತಿಭಟನೆ ಮೂಲಕ ಆತಂಕ ಸೃಷ್ಟಿಸಿದ್ದಾನೆ. ಇಂದು ಬೆಳ್ಳಂಬೆಳಗ್ಗೆ ನೀರಿನ ಟ್ಯಾಂಕ್ ಮೇಲೆ ಅರೆ ಬೆತ್ತಲಾಗಿ ಹತ್ತಿದ ಯುವಕ ಮದ್ಯ, ಸಿಗರೇಟ್ ಕೊಡದಿದ್ರೆ ಮೇಲಿಂದ ಜಿಗಿಯುತ್ತೀನಿ ಅಂತ ಬೆದರಿಕೆ ಹಾಕಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಯುವಕನನ್ನ ಎಷ್ಟೇ ಮನವೊಲಿಸಿದ್ರೂ ಕೆಳಗಿಳಿಯಲಿಲ್ಲ.

    ಕಡೆಗೆ ಅವನ ಬೇಡಿಕೆ ಈಡೇರಿಸೋದಾಗಿ ಹೇಳಿ ಉಪಾಯವಾಗಿ ಟ್ಯಾಂಕ್ ಮೇಲೆ ಹತ್ತಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

  • ಮಾನವೀಯತೆ ಮರೆತ್ರಾ ಬೆಂಗಳೂರು ಜನ?

    ಮಾನವೀಯತೆ ಮರೆತ್ರಾ ಬೆಂಗಳೂರು ಜನ?

    ಬೆಂಗಳೂರು: ನಡುರಸ್ತೆಯಲ್ಲೇ ಮಾನಸಿಕ ಅಸ್ವಸ್ಥನನ್ನು ದುಷ್ಕರ್ಮಿಗಳು ಮನಬಂದಂತೆ ಥಳಿಸಿರೋ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ.

    ದುಷ್ಕರ್ಮಿಗಳು ಮಾನಸಿಕ ಅಸ್ವಸ್ಥತನನ್ನು ಶನಿವಾರ ದೊಣ್ಣೆಯಿಂದ ಥಳಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾನಸಿಕ ಅಸ್ವಸ್ಥ ಎಷ್ಟು ಬೇಡಿಕೊಂಡ್ರು ಬಿಡದೆ ಮನಬಂದಂತೆ ಥಳಿಸಿದ್ದಾರೆ. ಆದ್ರೆ ಈ ವೇಳೆ ಸ್ಥಳದಲ್ಲಿದ್ದವರು ಕೇವಲ ನಿಂತು ನೋಡುತ್ತಿದ್ದರೇ ಹೊರತು ಅಸ್ವಸ್ಥ ವ್ಯಕ್ತಿಯ ಸಹಾಯಕ್ಕೆ ಬಾರದೇ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.

    ಮಾನಸಿಕ ಅಸ್ವಸ್ಥನನ್ನು ಕಾಪಾಡಲು ಬೀದಿ ನಾಯಿಯೊಂದು ಪರದಾಟ ನಡೆಸಿರುವುದನ್ನು ಕೂಡ ವೀಡಿಯೋದಲ್ಲಿ ನೋಡಬಹುದು. ನಾಯಿಗಿರುವ ಮಾನವೀಯತೆ, ಮನುಷ್ಯರಿಗೆ ಇಲ್ಲವಾಯ್ತ? ಅಂತ ವೀಡಿಯೋ ನೋಡಿದವರು ಮರುಕ ವ್ಯಕ್ತಪಡಿಸಿದ್ದಾರೆ.

    ಥಳಿತಕ್ಕೊಳಗಾದ ವ್ಯಕ್ತಿ ಯಾರು? ಈತನಿಗೆ ಯಾವ ಕಾರಣಕ್ಕೆ ಹೊಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

    https://www.youtube.com/watch?v=kGUkemk612c