Tag: mentally disturbed

  • ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್

    ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್

    ಹಾವೇರಿ: ಊಟ ಕೊಡುವ ನೆಪದಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಹಾವೇರಿಯ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ತಸ್ಲೀಮ್ ಸೆರವಾಡ(23) ಎಂದು ಗುರುತಿಸಲಾಗಿದೆ. ಆರೋಪಿ ಊಟ ಕೊಡುವ ನೆಪದಲ್ಲಿ ಡಿಸೆಂಬರ್ 7ರ ಮಧ್ಯರಾತ್ರಿ ಮುಸುಕು ಹಾಕಿಕೊಂಡು 40 ವರ್ಷದ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ. ಎಪಿಎಂಸಿ ಬಳಿಯ ಉಜ್ಜೀವನ್ ಫೈನಾನ್ಸ್ ಕಟ್ಟಡದಲ್ಲಿ ಘಟನೆ ನಡೆದಿತ್ತು.

    ಸಿಸಿಟಿವಿ ದೃಶ್ಯ ಆಧರಿಸಿ ಕಟ್ಟಡದ ಮಾಲೀಕ ನವೀನಕುಮಾರ ತೋಟಣ್ಣನವರ ಪೋಲಿಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು 48 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅಸ್ವಸ್ಥ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಪಿಐ ಮಂಜಣ್ಣ ನೇತೃತ್ವದಲ್ಲಿ ಆರೋಪಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಿಂಚಿದ ಮಾನಸಿಕ ಅಸ್ವಸ್ಥ ಭಿಕ್ಷುಕ

    ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಿಂಚಿದ ಮಾನಸಿಕ ಅಸ್ವಸ್ಥ ಭಿಕ್ಷುಕ

    ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣದ ಕಲ್ಲೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಪಟ್ಟಣದಾದ್ಯಂತ ಸ್ವಾಗತ ಕೋರುವ ಕಟೌಟ್ ಹಾಗೂ ಬ್ಯಾನರ್ ಗಳನ್ನ ಹಾಕಲಾಗಿದೆ. ಅವುಗಳ ನಡುವೆ ಒಂದು ಬ್ಯಾನರ್ ಮಾತ್ರ ಎಲ್ಲ ಗಮನ ಸೆಳೆಯುತ್ತಿದೆ. ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಾನಸಿಕ ಅಸ್ವಸ್ಥ ಭಿಕ್ಷುಕನೊಬ್ಬ ನಿಂತಿರುವ ಕಟೌಟ್ ನೋಡಲು ಜನ ಮುಗಿ ಬೀಳುತಿದ್ದಾರೆ.

    ತಮಿಳುನಾಡು ಮೂಲದ ಗೋಪಾಲಯ್ಯ(50) ಬೋರ್‍ವೆಲ್ ವಾಹನದ ಜೊತೆ ಕೆಲಸಕ್ಕೆ ಬಂದು ಕಳೆದ ಹತ್ತು ವರ್ಷಗಳಿಂದ ಮೂಡಲಗಿಯಲ್ಲೇ ವಾಸವಾಗಿದ್ದಾನೆ. ಗೋಪಾಲಯ್ಯ ಬೋರ್ ವೆಲ್ ಕೆಲಸದಲ್ಲಿ ತೊಡಗಿದ್ದಾಗ ತೆಲೆಗೆ ಪೆಟ್ಟು ಬಿದ್ದು ಬುದ್ಧಿಭ್ರಮಣೆಯಾಗಿದೆ. ಹುಚ್ಚರಂತೆ ಬೀದಿಗಳಲ್ಲಿ ಅಲೆದಾಡುತಿದ್ದಾನೆ. ಯಾರಾದರೂ ಆಹಾರ ಕೊಟ್ಟರೆ ತಿಂದು ಅಲ್ಲೋ ಇಲ್ಲೋ ಮಲಗಿಕೊಂಡು ಕಾಲ ಕಳೆಯುತ್ತಿದ್ದಾನೆ.

    ಸ್ವಭಾವದಲ್ಲಿ ಯಾರಿಗೂ ಕೆಡುಕನ್ನ ಬಯಸದ ಈತ ಇಡೀ ಪಟ್ಟಣದ ಜನತೆಯ ಪ್ರೀತಿಯ ‘ಗೋಪ್ಯಾ’ ಎಂದೆ ಚಿರಪರಿಚಿತನಾಗಿದ್ದಾನೆ. ಈತನಿಗೆ ಅಭಿಮಾನಿಗಳು ಕೂಡ ಇದ್ದಾರೆ. ಈ ಬಾರಿ ನಡೆದ ಕಲ್ಲೇಶ್ವರ ಜಾತ್ರೆ ಸಂದರ್ಭದಲ್ಲಿ ಅಭಿಮಾನಿಗಳು ಈತನ ಭಾವಚಿತ್ರ ಇರುವ ದೊಡ್ಡ ಸ್ವಾಗತ ಕಟೌಟ್ ಹಾಕಿ ಅಭಿಮಾನ ಮೆರೆದಿದ್ದಾರೆ.

    ದೊಡ್ಡ ನಾಯಕರ ಕಟೌಟ್ ನಡುವೆ ಗೋಪ್ಯಾನ ಈ ಕಟೌಟ್ ಎಲ್ಲರ ಗಮನ ಸೆಳೆಯುತ್ತಿದೆ.