ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಇವತ್ತು ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇವತ್ತು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದರು.
ಬಿಲ್ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ – ಯತ್ನಾಳ್ ಕಿಡಿ
ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆ ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನ ಬಳಕೆ ಮಾಡಿಕೊಳ್ಳೋಣ. ಬಳಕೆ ಆಗುವ ಮುನ್ನ ಶಸ್ತ್ರತ್ಯಾಗ ಮಾತು ಯಾಕೆ? ಎಂದು ತಿರುಗೇಟು ಕೊಟ್ಟಿದ್ದಾರೆ.
ಇದಕ್ಕೆ ಹಿಂದೆಯೂ ಕಾಯ್ದೆ ಇತ್ತು. ಆಗ ಈ ಕಿರುಕುಳ ಇರಲಿಲ್ಲ. ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್ ಫಿಕ್ಸ್ ಮಾಡೋದ್ರಲ್ಲಿ ಕಾಣದ ಕೈಗಳು ಇವೆ. ಬೆಂಗಳೂರಿನಲ್ಲಿ ಅಡಿಗೆ 100 ರೂ. ಪ್ಲ್ಯಾನ್ ಸ್ಯಾಕ್ಷನ್ ಮಾಡುವುದರ ಹಿಂದೆ ಕಾಣದ ಕೈಗಳು ಇವೆ. ಮೈಕ್ರೋ ಫೈನಾನ್ಸ್ ಹಿಂದೆಯೂ ಕಾಣದ ಕೈಗಳು ಇರಬಹುದು ಎಂದರು.ಇದನ್ನೂ ಓದಿ: ಕಿಯೋನಿಕ್ಸ್ ವೆಂಡರ್ಸ್ಗಳ ಬಾಕಿ ಮೊತ್ತ ಬಿಡುಗಡೆಯಾಗುತ್ತಿದೆ – ಶರತ್ ಬಚ್ಚೇಗೌಡ
ಬೆಂಗಳೂರು: ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಈ ಮೊದಲು ಬಿಲ್ನಲ್ಲಿ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ರೂ. ಮಾಡಿದ್ದೇವೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು. ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲೋದಿಲ್ಲ. ಇದಕ್ಕಾಗಿ ದಂಡ ಮತ್ತು ಶಿಕ್ಷೆ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಮಾತ್ರ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ
ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಆಗಿದೆ ಕೂಡಲೇ ಸುಗ್ರಿವಾಜ್ಞೆ ಜಾರಿ ಆಗಲಿದೆ ಎಂದರು.
ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದುಕೊಂಡು ಬಿಲ್ ಸಿದ್ದ ಮಾಡುವುದು ತಡವಾಗಿದೆ. ಮೊದಲ ಕರಡು ಸಿದ್ಧ ಮಾಡಿದಾಗ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಚರ್ಚಿಸಿದ್ದೆವು. ಹೀಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಕಾನೂನು ಇಲಾಖೆಗೆ ಸೂಚನೆ ಕೊಟ್ಟಿದ್ದರು. ಇದಕ್ಕೆ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕೋರ್ಟ್ಗೆ ಹೋದರೂ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಅಂದುಕೊಂಡಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
– ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲಲ್ಲ
ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ (Micro Finance) ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದರು.
ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.
ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಅಂತನೇ ಬಿಲ್ ಸಿದ್ಧ ಮಾಡಲು ತಡವಾಯಿತು. ಮೊದಲ ಕರಡು ಸಿದ್ಧ ಮಾಡಿದಾಗ ಈ ಬಗ್ಗೆ ಚರ್ಚೆ ಮಾಡಿದ್ದೆವು. ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಅಂತ ಸಿಎಂ ಸೂಚನೆ ನೀಡಿದ್ದರು. ಕಾನೂನು ಇಲಾಖೆಗೆ ಸೂಚನೆ ಕೊಟ್ಟರು ಸಹ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕಂಪನಿಗಳು ಕೋರ್ಟ್ಗೆ ಹೋದರು ಸಹ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಭಾವಿಸಿದ್ದೇವೆ ಎಂದು ನುಡಿದರು.
ಹಸುಗಳನ್ನ ಕದ್ದವರನ್ನ ಗುಂಡಿಟ್ಟು ಕೊಲ್ಲುತ್ತೇನೆ ಎಂಬ ಸಚಿವ ಮಂಕಾಳ್ ವೈದ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದರ ಬಗ್ಗೆ ಗೊತ್ತಾಗಲಿಲ್ಲ. ಅವರು ವೈಯಕ್ತಿಕವಾಗಿ ಏನೋ ಹೇಳಿರುತ್ತಾರೆ ಎಂದರು.
ಬೆಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪ ಬಗ್ಗೆ ಮಾತನಾಡಿ, ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮತಾಂತರದ ಬಗ್ಗೆ ಹಿಂದೆಯೇ ಕಾನೂನು ಮಾಡಿದ್ದೇವೆ. 2020-21ರಲ್ಲಿ ಕಾನೂನು ತಂದಿದ್ದರು. ಅದನ್ನು ವಿತ್ ಡ್ರಾ ಮಾಡುವ ಪ್ರಕ್ರಿಯೆ ಆಗಿತ್ತು. ಅದು ಯಾವ ಹಂತದಲ್ಲಿ ಇದೆ ಎಂದು ಕಾನೂನು ಇಲಾಖೆ ಬಳಿ ಕೇಳಬೇಕು. ಮತಾಂತರ ಮಾಡೋ ಬಗ್ಗೆ ನಮ್ಮ ಇಲಾಖೆಗೆ ದೂರು ಬಂದರೆ ಅಥವಾ ಬಲವಂತ ಮಾಡುತ್ತಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಹೇಳಿದರು.
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹಿಜಬ್ಗೆ ಅವಕಾಶ ನೀಡುವ ವಿಚಾರವಾಗಿ ಗೃಹ ಸಚಿವರ ಜೊತೆ ಸಭೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಸುದೀರ್ಘವಾದ ಚರ್ಚೆ ಅವಶ್ಯಕತೆ ಇದೆ. ಚರ್ಚೆ ಮಾಡಿ ಆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇನ್ನೂ ಒಂದು ತಿಂಗಳು ಪರೀಕ್ಷೆಗೆ ಸಮಯ ಇದೆ. ಸಭೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಪರಮೇಶ್ವರ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಕೆಲ ಸಚಿವರು ಭೇಟಿ ಮಾಡುತ್ತಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿಯಾಗಿದೆ. ನನಗೇ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಹ ಸುದ್ದಿ ಹುಟ್ಟಿ ಹಾಕುತ್ತಾರೆ ಎನ್ನುವುದೇ ಗೊತ್ತಾಗುತ್ತಿಲ್ಲ. ನಾನು ಯಾವುದೇ ನಿಯೋಗವನ್ನು ಹೈಕಮಾಂಡ್ ಬಳಿ ತೆಗೆದುಕೊಂಡು ಹೋಗುತ್ತಿಲ್ಲ. ಅಂತಹ ಯಾವುದೇ ರಾಜಕೀಯ ಬೆಳವಣಿಗೆಯೂ ಇಲ್ಲ. ನಾನು ಮೊನ್ನೆಯೇ ಹೇಳಿದ್ದೇನೆ. ಇಲಾಖೆ ಕೆಲಸ ಇದ್ದಾಗ ಹೋಗುತ್ತೇನೆ ಬಿಟ್ಟರೆ ಬೇರೆ ವಿಚಾರಕ್ಕೆ ನಾನು ದೆಹಲಿಗೆ ಹೋಗುವುದಿಲ್ಲ. ದೆಹಲಿಗೆ ಹೋಗಬಾರದು ಅಂತ ಏನಿಲ್ಲ. ಬ್ಯಾನ್ ಆರ್ಡರ್ ಕೂಡಾ ಇಲ್ಲ. ದೆಹಲಿಗೆ ಹೋಗುವ ಅಗತ್ಯ ಇಲ್ಲ. ಅಗತ್ಯ ಬಿದ್ದಾಗ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು.
-ತಪ್ಪಿತಸ್ಥರಿಗೆ 10 ವರ್ಷದವರೆಗೆ ಕಠಿಣ ಶಿಕ್ಷೆ, 5 ಲಕ್ಷದವರೆಗೆ ದಂಡ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ (Siddaramaiah) ಒಪ್ಪಿಗೆ ನೀಡಿದ್ದು, ರಾಜಭವನಕ್ಕೆ ಸರ್ಕಾರ ಸುಗ್ರೀವಾಜ್ಞೆ ಕಳುಹಿಸಿದೆ.
ಸುಗ್ರೀವಾಜ್ಞೆಯ ಪ್ರಕಾರ, ತಪ್ಪಿತಸ್ಥರಿಗೆ 10 ವರ್ಷಗಳ ಕಾಲ ಶಿಕ್ಷೆ ವಿಧಿಸಲು ಅವಕಾಶವಿದೆ. ಅಲ್ಲದೇ 5 ಲಕ್ಷದವರೆಗೆ ದಂಡ ವಿಧಿಸಲು ಪ್ರಸ್ತಾಪವಿದೆ. ಇನ್ನು ಅನಧಿಕೃತವಾಗಿ ಸಾಲ ನೀಡಿದ್ದರೇ ಅದನ್ನು ಮನ್ನಾ ಮಾಡಲಾಗುವುದು. ನೋಂದಣಿ ರಹಿತ ಮೈಕ್ರೋ ಫೈನಾನ್ಸ್ಗಳ ಅಸಲು, ಬಡ್ಡಿ ಕೂಡ ಮನ್ನಾ ಆಗಲಿದೆ. ಖಾಸಗಿ ಬಡ್ಡಿದಾರರಿಗೂ ಕಡಿವಾಣ ಬೀಳಲಿದೆ. ಇದನ್ನೂ ಓದಿ: Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ
ಸುಗ್ರೀವಾಜ್ಞೆಯ ಅಂಶಗಳೇನು?
ಲೇವಾದೇವಿದಾರರು ನೋಂದಣಿ ಮಾಡದೆ ಸಾಲ ವಹಿವಾಟು ಮಾಡುವಂತಿಲ್ಲ. ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಕಡ್ಡಾಯ. ನೋಂದಣಿ ವೇಳೆ ಸಾಲಗಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಲಿಖಿತ ಮುಚ್ಚಳಿಕೆ ನೀಡಬೇಕು. ಸಾಲಗಾರರಿಂದ ಯಾವುದೇ ಅಡಮಾನ ಇಟ್ಟುಕೊಳ್ಳುವಂತಿಲ್ಲ. ಅಡಮಾನ ಇಟ್ಟುಕೊಂಡಿದ್ದರೆ ತಪ್ಪದೇ ಹಿಂತಿರುಗಿಸಬೇಕು. ನೋಂದಣಿ ಮಾಡಿಕೊಳ್ಳದ ಲೇವಾದೇವಿದಾರರಿಗೆ ಸಾಲ ಮರುಪಾವತಿಸುವಂತಿಲ್ಲ. ಅಸಲು, ಬಡ್ಡಿ ಎರಡೂ ಮನ್ನಾ ಆಗಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಲಾಲ್ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ
ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರವು ಪ್ರಾಧಿಕಾರಕ್ಕೆ ಇರಲಿದೆ. ಸುಗ್ರೀವಾಜ್ಞೆಯಲ್ಲಿರುವ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ, ಪ್ರಾಧಿಕಾರವು ನೋಟಿಸ್ ನೀಡದೆ ನೋಂದಣಿಯನ್ನು ಅಮಾನತು ಅಥವಾ ರದ್ದು ಮಾಡಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಕರಡು ಬಿಲ್ (Draft Bill) ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ ಆಗಲಿದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ತಡೆಗೆ ಸುಗ್ರಿವಾಜ್ಞೆ ಜಾರಿ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಗ್ರಿವಾಜ್ಞೆ ಇವತ್ತು ಆಗಬಹುದು ಅನಿಸುತ್ತದೆ. ಸಿಎಂಗೆ ಆರೋಗ್ಯ ತೊಂದರೆ ಇದೆ. ಕರಡು ಬಿಲ್ ಸಿಎಂ ನೋಡಬೇಕು. ಅವರು ನೋಡಿ ಸಹಿ ಹಾಕಬೇಕು. ಅವರು ಸಹಿ ಮಾಡಿ ಡ್ರಾಫ್ಟ್ ಕಳುಹಿಸುತ್ತಾರೆ. ಅದಾದ ಮೇಲೆ ಸುಗ್ರಿವಾಜ್ಞೆ ಜಾರಿ ಆಗುತ್ತದೆ ಎಂದರು. ಇದನ್ನೂ ಓದಿ: ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್ ಲೇವಡಿ
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ತಾಯಿ ಆತ್ಮಹತ್ಯೆ ಬೆನ್ನಲ್ಲೇ ಮಗನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ (Malavalli) ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಡೆದಿದೆ.
ಮೈಕ್ರೋ ಫೈನಾನ್ಸ್ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಲ್ಕು ದಿನದ ಹಿಂದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಪ್ರೇಮ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿಯ ಸಾವಿನಿಂದಾಗಿ ಮನನೊಂದು ಅನಾರೋಗ್ಯಕ್ಕೆ ತುತ್ತಾಗಿ ಅಂಗವೈಕಲ್ಯದಿಂದ ಬಳಲುತ್ತಿದ್ದರು. ಮುಂದೆ ಜೀವನ ಹೇಗೆ ಎಂದು ತಿಳಿಯದೇ ಹಲಗೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಹಲಗೂರು ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ತಾಯಿ ಸಾವನ್ನಪ್ಪಿದ್ದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರೇಮ ಹಾಗೂ ರಂಜಿತ್ ಆತ್ಮಹತ್ಯೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: Budget 2025: ಎನ್ಡಿಎ ದೋಸ್ತಿ ಬಿಹಾರ್ಗೆ ಬಂಪರ್ – ಬಜೆಟ್ನಲ್ಲಿ ಭರಪೂರ ಕೊಡುಗೆ
ಸಕಾಲಕ್ಕೆ ಸಾಲ ಕಟ್ಟದ ಸುಬ್ರಹ್ಮಣ್ಯ ಮನೆ ಮೇಲೆ ಸಾಲದ ವಿವರವನ್ನು ಫೈನಾನ್ಸ್ ಸಿಬ್ಬಂದಿ ಬರೆದಿದ್ದರು. ಅತ್ತ, ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತ ಮಹಿಳೆಯರು ಮೂರು ದಿನ ಸ್ಮಶಾನದಲ್ಲಿ ಕಾಲ ಕಳೆದ ಘಟನೆ ರಾಯಚೂರಿನ ಹಟ್ಟಿಯಲ್ಲಿ ನಡೆದಿದೆ.
ಇನ್ನು, ಬೆಂಗಳೂರಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಚಾಮರಾಜನಗರದ 7ನೇ ತರಗತಿ ಬಾಲಕನೊಬ್ಬ, 3 ಲಕ್ಷ ಸಾಲ ಪಡೆದ ಅಪ್ಪ ಅಮ್ಮನಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಕಿರುಕುಳ ಕೊಡ್ತಿದ್ದಾರೆ. ಕಿಡ್ನಿ ಮಾರಿ, ಸಾಲ ಕಟ್ತೀನಿ. ಇದಕ್ಕೆ ಸರ್ಕಾರ ಅನುಮತಿ ಕೊಡ್ಬೇಕು ಎಂದು ಕೋರಿದ್ದಾರೆ. ಇದನ್ನು ಕೇಳಿ ಸಚಿವ ಮಹದೇವಪ್ಪ ಶಾಕ್ ಆಗಿ, ಮೈಕ್ರೋ ಫೈನಾನ್ಸ್ವರು ಹೇಗೆ ಟಾರ್ಚರ್ ಕೊಡ್ತಿದ್ದಾರೆ ಅನ್ನೋದು ಅರ್ಥವಾಗ್ತಿದೆ ಎಂದಿದ್ದಾರೆ.ಇದನ್ನೂ ಓದಿ: ಅಸ್ತಿ ವಿಸರ್ಜನೆಯಿಂದ ಕಾವೇರಿ ನದಿ ಮಲಿನ – ವೈಜ್ಞಾನಿಕವಾಗಿ ಅಸ್ತಿ ಬಿಡಲು ಯೋಜನೆ ರೂಪಿಸುವಂತೆ ಕೋರ್ಟ್ ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು (Micro Finance Bill) ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸರ್ಕಸ್ ನಡೆಸಿದೆ. ಗುರುವಾರ ನಡೆದ ಸಂಪುಟ ಸಭೆಯು ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಇಂದು ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:
•ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು… pic.twitter.com/rTx5vaCxwD
ಈ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಮಸೂದೆಯ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಲು, ಕೆಲವು ಬದಲಾವಣೆ ಮಾಡಲು ಕಾನೂನು ಮತ್ತು ಹಣಕಾಸು ಇಲಾಖೆಯ ನಾಲ್ವರು ಹಿರಿಯ ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಇನ್ನೆರಡು ದಿನಗಳಲ್ಲಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ (HK Patil), ಕಳೆದ ಕೆಲ ದಿನಗಳಿಂದ ಮೈಕ್ರೋ ಫೈನಾನ್ಸ್ ತೊಂದರೆ ವಿಚಾರ ಚರ್ಚೆ ಆಗಿತ್ತು. ಸಾಲ ವಸೂಲಿ ಪ್ರಕ್ರಿಯೆಯ ಘಟನೆ ನೋಡಿದರೆ ಬಹಳ ಅಮಾನವೀಯವಾಗಿ ನಡೆದಿದೆ. ಇದರಿಂದ ಆತ್ಮಹತ್ಯೆ ಕೂಡ ನಡೆದಿದೆ. ಹಾಗಾಗಿ ಮೈಕ್ರೋ ಫೈನಾನ್ಸ್ಗೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತಿದ್ದೇವೆ. ಈಗಾಗಲೇ ಮಸೂದೆ ಸಿದ್ಧವಾಗಿದ್ದು, ಮಸೂದೆಯಲ್ಲಿ ಕೆಲವು ವಿಚಾರಗಳನನ್ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಅಲ್ಲದೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿ ನಿಗದಿಪಡಿಸುವ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ಸಂಪುಟದ ಅನುಮೋದನೆ ನೀಡಿತು ಎಂದು ಸಚಿವರು ವಿವರಿಸಿದರು.
ಪ್ರಮುಖ ಕಾಮಗಾರಿಗಳಿಗೆ ಸಂಪುಟ
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.
* 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗೆ ಅನುಮೋದನೆ.
* ʻಹೊಂಬೆಳಕು ಯೋಜನೆʼಯಡಿ 25.00 ಕೋಟಿಗಳ ವೆಚ್ಚದಲ್ಲಿ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
* 44.50 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
* ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ, 2024 ಹಿಂಪಡೆಯಲು ಸಂಪುಟ ನಿರ್ಧಾರ
* ʻಅಪ್ಸರಕೊಂಡ-ಮುಗಲಿ ಕಡಲ ವನ್ಯಜೀವಿಧಾಮʼ ಎಂದು ಘೋಷಣೆ ಸೇರಿದಂತೆ ಇನ್ನಿತರ ಪ್ರಮುಖ ಕಾರ್ಯಕ್ರಮಗಳಿಗೆ ಒಪ್ಪಿಗೆ ಸೂಚಿಸಲಾಯಿತು.
ಬೆಂಗಳೂರು: ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್ನಲ್ಲಿ (Cabinet) ತರಲಿದ್ದು, ಸುಗ್ರೀವಾಜ್ಞೆ (Ordinance) ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.
ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ಸಿಎಂ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ. ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ಇವತ್ತು ಬಿಲ್ ಬಗ್ಗೆ ನಾನು, ಕಾನೂನು ಸಚಿವರು, ಕಂದಾಯ ಸಚಿವರು ಸಭೆ ಮಾಡಿ ಬಿಲ್ ಅಂತಿಮ ಮಾಡುತ್ತೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ
ಈಗಾಗಲೇ SP-DCಗಳ ಸಭೆ ಮಾಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಹಾಯವಾಣಿ ಕೂಡಾ ಪ್ರಾರಂಭ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಡುವುದು ಮತ್ತು ಇದಕ್ಕಾಗಿ ಒಂದು ಪ್ರತ್ಯೇಕ ವಿಂಗ್ ಪ್ರಾರಂಭ ಮಾಡೋದು ಬಿಲ್ ನಲ್ಲಿ ಅಂಶಗಳನ್ನ ಸೇರಿಸಿದ್ದೇವೆ ಎಂದರು.
ಕೆಲವು ಮೈಕ್ರೋ ಫೈನಾನ್ಸ್ ಅವರು ಹಣ ವಸೂಲಿಗೆ ಔಟ್ ಸೋರ್ಸ್ ಕೊಟ್ಟಿರುತ್ತಾರೆ. ಅವರು ಬಂದು ಗುಂಡಾ ವರ್ತನೆ ಮಾಡೋ ಕೆಲಸ ಮಾಡ್ತಿದ್ದಾರೆ. ಆದರೆ ಅದನ್ನ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೀವಿ. ಕಂಪನಿ ಅವರಿಗೂ ಈಗಾಗಲೇ ಸೂಚನೆ ಕೊಟ್ಟಿದ್ದೇವೆ. ಇವತ್ತು ಸುಗ್ರಿವಾಜ್ಞೆ ಹೊರಡಿಸೋ ಕಾನೂನು ಬಗ್ಗೆ ಸಭೆ ಮಾಡಿ ಇವತ್ತೇ ಕಾನೂನು ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.