Tag: migration

  • ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

    ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

    ಹರಿಯಾಣ: ಇಲ್ಲಿನ ಎಷ್ಟೋ ಯುವಜನರು ಅಮೆರಿಕಕ್ಕೆ (USA) ವಲಸೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲ ಬಿಜೆಪಿ ಸರ್ಕಾರದ ಆಡಳಿತ, ನಿರುದ್ಯೋಗ ಸಮಸ್ಯೆ ಸೃಷ್ಟಿಸಿರುವುದೇ ಕಾರಣ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕಿಡಿ ಕಾರಿದರು.

    ಅ.5ರಂದು ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಗಾ, ನಿರುದ್ಯೋಗ ಸಮಸ್ಯೆಗಳ ಕುರಿತು ಮಾತನಾಡುತ್ತಾ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಹರಿಯಾಣ ಯುವಕರು ಏಕೆ ಅಮೆರಿಕ್ಕೆ ಹೋಗುತ್ತಿದ್ದಾರೆ ಗೊತ್ತೇ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: WWCL : ಯಾವ ತಂಡಕ್ಕೆ ಯಾವ ನಟಿ ಕ್ಯಾಪ್ಟನ್?

    ಇತ್ತೀಚೆಗೆ ನಾನು ಯುಎಸ್‌ನ ಡಲ್ಲಾಸ್‌ಗೆ ಭೇಟಿ ನೀಡಿದ್ದೆ. ಅಲ್ಲಿ ಹರಿಯಾಣದಿಂದ ವಲಸೆ (Migration) ಹೋಗಿದ್ದ ಹಲವಾರು ಯುವಕರನ್ನು ಭೇಟಿಯಾದೆ. ಅವರ ವಲಸೆಗೆ ಬಿಜೆಪಿ ಸರ್ಕಾರದ ಆಡಳಿತವೇ ಕಾರಣ ಎಂದು ದೂರಿದರು. ಇದನ್ನೂ ಓದಿ: KWIN City Project | ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: ಡಿ.ಕೆ.ಶಿವಕುಮಾರ್

    ಒಂದೇ ರೂಮ್‌ನಲ್ಲಿ 15 ರಿಂದ 20 ಜನ ಮಲಗಿದ್ದನ್ನು ನೋಡಿದೆ. ಅಲ್ಲೊಬ್ಬ ಯುವಕ ಅಮೆರಿಕಕ್ಕೆ ಬರೋದಕ್ಕಾಗಿಯೇ ಸುಮಾರು 30 ರಿಂದ 50 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಮತ್ತೊಬ್ಬ ಯುವಕ ತಮ್ಮ ಭೂಮಿಯನ್ನೇ ಮಾರಾಟ ಮಾಡಿರುವುದಾಗಿ ಹೇಳಿಕೊಂಡರು. ಇನ್ನೂ ಕೆಲವರು ಇಲ್ಲಿ ಕೆಲಸ ಗಿಟ್ಟಿಕೊಳ್ಳಲು ಪಟ್ಟ ಹರಸಾಹಸಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟರು. ಅದೇ ರೀತಿ ಕರ್ನಾಲ್‌ನ ಮನೆಯೊಂದಕ್ಕೆ ಭೇಟಿ ನೀಡಿದ್ದಾಗ ಅಮೆರಿಕದಲ್ಲಿ ಕೆಲಸಮಾಡುತ್ತಿದ್ದ ಇಲ್ಲಿನ ಯುವಕ ಕುಟುಂಬಸ್ಥರಿಗೆ ಕರೆ ಮಾಡಿದ್ದ, ಆತನ ಮಗು ವೀಡಿಯೋ ಕರೆಯಲ್ಲಿ ಮಾತನಾಡುತ್ತಾ ನಮ್ಮೂರಿಗೆ ವಾಪಸ್‌ ಬನ್ನಿ ಅಂತ ಚೀರಾಡುತ್ತಿತ್ತು. ಇದೆಲ್ಲವನ್ನೂ ನೋಡಿದಾಗ ಹರಿಯಾಣ ಸರ್ಕಾರ ತನ್ನ ರಾಜ್ಯ ಮತ್ತು ಇಲ್ಲಿನ ಯುವ ಜನತೆಯನ್ನು ಮಗಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ. ಅಲ್ಲದೇ ಇಲ್ಲಿನ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳಿಗೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಿಡಿ ಕಾರಿದರು.

    ಇದೇ ವೇಳೆ ರಾಹುಲ್ ಗಾಂಧಿ ಹರಿಯಾಣಕ್ಕೆ ಕಾಂಗ್ರೆಸ್‌ ನೀಡಿರುವ ಭರವಸೆಗಳನ್ನು ಪುನರುಚ್ಚರಿಸಿದರು. ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು

  • ಜೀವನಕ್ಕಿಂತ ಜೀವ ಮುಖ್ಯ, ತಾಂತ್ರಿಕ ಸಮಿತಿ ಹೇಳಿದಂತೆ ಕೇಳಿ: ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

    ಜೀವನಕ್ಕಿಂತ ಜೀವ ಮುಖ್ಯ, ತಾಂತ್ರಿಕ ಸಮಿತಿ ಹೇಳಿದಂತೆ ಕೇಳಿ: ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಹೇಳಿದ್ದಾರೆ.

    ಕೋವಿಡ್ ನಿಯಂತ್ರಣಕ್ಕೆ ಸರ್ವಪಕ್ಷಗಳ ಸದಸ್ಯರ ಜೊತೆ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಸರ್ವಪಕ್ಷಗಳ ಸದಸ್ಯರ ಮಾತುಗಳನ್ನು ವಿವರವಾಗಿ ಆಲಿಸಿದರು. ಎಲ್ಲ ಸದಸ್ಯರ ಮಾತಿನ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದರು.

    ಜನರು ವಲಸೆ ಹೋಗ್ತಾರೆ ಎಂದು ಯೋಚನೆ ಮಾಡಬೇಡಿ, ವಲಸೆ ಹೋದವರು ವಾಪಸ್ ಬಂದಿದ್ದಾರೆ. ಊಟ ಸಿಗಲ್ಲ ಅಂತಾ ಯೋಚನೆ ಮಾಡಬೇಡಿ. ಆರೋಗ್ಯ ಕರ್ನಾಟಕ ನಮಗೆ ಬೇಕು ಎಂದು ಹೇಳಿದ ರಾಜ್ಯಪಾಲರು, ಸಾರ್ವಜನಿಕರು ಚಿಂತೆ ಮಾಡಬೇಡಿ. ಜೀವನಕ್ಕಿಂತ ಜೀವ ಮುಖ್ಯವಾಗಿದೆ. ತಾಂತ್ರಿಕ ಸಮಿತಿ ನಿರ್ಣಯದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದರು.

    ರಾಜ್ಯ ಸರ್ಕಾರ ಸಾರ್ವಜನಿಕರ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸಿಎಂ ಯಡಿಯೂರಪ್ಪ ತಾಂತ್ರಿಕ ಸಮಿತಿ ಜೊತೆ ಚರ್ಚೆ ಮಾಡಿ, ಆದಷ್ಟು ಶೀಘ್ರ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸೂಚಿಸಿದರು.

  • ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

    ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

    – ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ
    – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ
    – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ

    ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು ಒಂದಿಲ್ಲೊಂದು ಗ್ರಾಮ ಖಾಲಿಯಾಗುತ್ತಿದೆ. ಮಹಾನಗರಗಳತ್ತ ಜೀವನ ನಡೆಸಲು ಕೆಲಸ ಅರಸಿ ಹಳ್ಳಿ ಜನರು ಗುಳೆ ಹೋಗುತ್ತಿದ್ದಾರೆ.

    ಸಿಂಧನೂರು ಬಸ್ ನಿಲ್ದಾಣದಿಂದ ಶನಿವಾರ ತಡರಾತ್ರಿ ಹತ್ತಾರು ಹಳ್ಳಿಗಳ ನೂರಾರು ಜನ ದುಡಿಯಲು ಬೆಂಗಳೂರಿಗೆ ಗುಳೆ ಹೋಗಿದ್ದಾರೆ. ತಡರಾತ್ರಿ ಗಂಟು- ಮೂಟೆ ಕಟ್ಟಿಕೊಂಡು ಮಕ್ಕಳೊಂದಿಗೆ ಬಂದ ಜನ, ಬಸ್ ಇಲ್ಲದೆ ಪರದಾಡಿದರು. ನಂತರ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿ ಜನರನ್ನ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಮಳೆ ಬೆಳೆ ಇಲ್ಲದೆ, ಕೂಲಿ ಕೆಲಸವೂ ಸಿಗದೆ ಜನ ತಮ್ಮ ಗ್ರಾಮಗಳನ್ನು ಬಿಡುತ್ತಿದ್ದಾರೆ.

    ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡರ ಸ್ವಕ್ಷೇತ್ರ ಸಿಂಧನೂರು ನೀರಾವರಿ ಪ್ರದೇಶವಾದರು ಬರ ನಿರ್ವಹಣೆ ಸಾಧ್ಯವಾಗಿಲ್ಲ. ಇತ್ತೀಚೆಗಷ್ಟೆ ಮಾನವಿ ತಾಲೂಕಿನ ಜನರು ತಂಡೋಪತಂಡವಾಗಿ ಗುಳೆ ಹೋಗಿದ್ದರು. ಆಗ ಕೂಡ ಗುಳೆ ಹೋಗುವವರಿಗಾಗಿಯೇ ಹೆಚ್ಚುವರಿಯಾಗಿ ನಾಲ್ಕು ಬಸ್‍ಗಳನ್ನ ಬಿಡಲಾಗಿತ್ತು.

    ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2019-20 ನೇ ಸಾಲಿನಲ್ಲಿ ಕೇವಲ ಶೇಕಡಾ 12.08 ರಷ್ಟು ಜನರಿಗೆ ಮಾತ್ರ ಕೂಲಿ ಕೆಲಸ ನೀಡಲಾಗಿದೆ. 85 ಲಕ್ಷ ಮಾನವ ದಿನಗಳನ್ನ ಸೃಜನೆ ಮಾಡಬೇಕಾದಲ್ಲಿ ಕೇವಲ 10 ಲಕ್ಷ 27 ಸಾವಿರ ದಿನಗಳನ್ನ ಮಾತ್ರ ಸೃಜನೆ ಮಾಡಲಾಗಿದ್ದು, 23 ಕೋಟಿ 79 ಲಕ್ಷ ಅನುದಾನ ಬಳಕೆ ಮಾಡಲಾಗಿದೆ. ಕಳೆದ ವರ್ಷ ಶೇಕಡಾ 114.59 ರಷ್ಟು ಸಾಧನೆ ಮಾಡಿ, 268 ಕೋಟಿ 65 ಲಕ್ಷ ರೂ. ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿತ್ತು. ಹೀಗಾಗಿ ಕಳೆದ ವರ್ಷ ಗುಳೆ ಹೋಗುವವರ ಸಂಖ್ಯೆ ಸ್ವಲ್ಪ ಕಡಿಮೆಯಿತ್ತು. ಆದರೆ ಈ ಬಾರಿ ಭೀಕರ ಬರಗಾಲ ಎದುರಾಗಿರುವುದರಿಂದ ಜನ ಜಾನುವಾರುಗಳು ತತ್ತರಿಸಿ ಹೋಗಿವೆ. ಜಾನುವಾರುಗಳನ್ನ ಮಾರಾಟ ಮಾಡಿ ಜನ ಗುಳೆ ಹೋಗುತ್ತಿದ್ದಾರೆ.

  • ರಾಯಚೂರಿನಲ್ಲಿ ವಯೋವೃದ್ಧರ ಗ್ರಾಮಗಳ ನಿರ್ಮಾಣ : ಖಾತ್ರಿಯಿಲ್ಲದ ಉದ್ಯೋಗದಿಂದ ಯುವಕರು ನಗರಪಾಲು

    ರಾಯಚೂರಿನಲ್ಲಿ ವಯೋವೃದ್ಧರ ಗ್ರಾಮಗಳ ನಿರ್ಮಾಣ : ಖಾತ್ರಿಯಿಲ್ಲದ ಉದ್ಯೋಗದಿಂದ ಯುವಕರು ನಗರಪಾಲು

    -ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ವೈಫಲ್ಯ
    -ಕೆಲಸವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ಗುಳೆ ಹೊರಟ ಜನ

    ವಿಜಯ್ ಜಾಗಟಗಲ್

    ರಾಯಚೂರು: ಹೆಗಲ ಮೇಲೊಂದು ಕೈಯಲ್ಲೊಂದು ಮೂಟೆ ಹಿಡಿದು ಬೆಂಗಳೂರು, ಪುಣೆ, ಮುಂಬೈ ಬಸ್‍ಗಾಗಿ ಜನ ಕಾಯುತ್ತಿದ್ದಾರೆ. ಈಗ ಬಸ್ ಹತ್ತಿದವರು ಕೈಯಲ್ಲೊಂದಿಷ್ಟು ಕಾಸು ಸಂಪಾದಿಸಿಕೊಂಡು ಎರಡೋ, ಮೂರೋ ತಿಂಗಳ ಬಳಿಕವಷ್ಟೇ ತಮ್ಮ ಗ್ರಾಮಗಳಿಗೆ ಮರುಳುತ್ತಾರೆ. ಅಲ್ಲಿಯವರೆಗೆ ಇಡೀ ಗ್ರಾಮವನ್ನ ಕಾಯುವವರು ವಯೋವೃದ್ಧರು ಹಾಗೂ ಬಾಗಿಲಿಗೆ ಹಾಕಿದ ಬೀಗಗಳು ಮಾತ್ರ. ಇವರು ಮರಳಿ ಬರುವವರೆಗೆ ಮನೆಗಳಲ್ಲಿ ಯಾವ ಶುಭಕಾರ್ಯಗಳೂ ಇಲ್ಲ. ಯಾಕಂದ್ರೆ ಇವರ ಬಳಿ ಮೂರು ಹೊತ್ತು ಸರಿಯಾಗಿ ಊಟಮಾಡಲು ಸಹ ಹಣವಿಲ್ಲ. ಇದು ರಾಯಚೂರಿನ ಗ್ರಾಮೀಣ ಭಾಗದ ಕೃಷಿ ಕೂಲಿಕಾರ್ಮಿಕರು ಹಾಗೂ ಸಣ್ಣ ಮತ್ತು ಅತೀಸಣ್ಣ ರೈತರ ಪ್ರತಿ ವರ್ಷದ ಪರಿಸ್ಥಿತಿ.

    ಕಳೆದ ನಾಲ್ಕೈದು ವರ್ಷಗಳಿಂದ ಬೆಂಬಿಡದೆ ಭೂತದಂತೆ ಕಾಡುತ್ತಿರುವ ಬರಗಾಲ ರೈತರನ್ನ ಇನ್ನಷ್ಟು ಬಡತನಕ್ಕೆ ತಳ್ಳುತ್ತಿದ್ದು ದೊಡ್ಡ ಸಾಲಗಾರರನ್ನಾಗಿ ಮಾಡುತ್ತಿದೆ. ಹೀಗಾಗಿ ಜನ ಬೇಸಿಗೆ ಆರಂಭದಲ್ಲೆ ನಗರ ಪ್ರದೇಶಗಳಲ್ಲಿನ ಕೂಲಿ ಕೆಲಸಗಳ ಕಡೆ ಆಕರ್ಷಿತರಾಗುತ್ತಿದ್ದಾರೆ. ಆದ್ರೆ ಗುಳೆ ತಪ್ಪಿಸಲು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ರಾಯಚೂರಿನಲ್ಲಿ ಶುರುವಾದ ಕಾಮ್ ಮಾಂಗೋ ಅಭಿಯಾನ ಸಹ ಗ್ರಾಮೀಣ ಜನರ ಕೈಹಿಡಿದಿಲ್ಲ. ಬರಗಾಲದಲ್ಲಿ ಕೆಲಸವಿಲ್ಲದೆ ಗುಳೆ ಹೊರಡುವ ಜನರಿಗೆ ಕೆಲಸ ನೀಡಲು ಅರ್ಜಿ ಕೇಳಿದ ಅಭಿಯಾನ ಸೋತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದ ಕೊರತೆಯಿಂದ ಹಳ್ಳ ಹಿಡಿದಿದೆ.

    ರಾಯಚೂರು ತಾಲೂಕಿನ ಯಾಪಲದಿನ್ನಿ, ಆತ್ಕೂರು, ಉಡುಮಗಲ್-ಖಾನಪುರ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಅಡಿ ಅರ್ಜಿಯನ್ನೇ ಸ್ವೀಕರಿಸುತ್ತಿಲ್ಲ. ಇನ್ನು ಅರ್ಜಿ ಸ್ವೀಕಾರವಾದ ಕಡೆಗಳಲ್ಲಿ ಕಾಮಗಾರಿ ಮಾಡಿದರೆ ಹಣ ಬಿಡುಗಡೆ ಮಾಡುತ್ತಿಲ್ಲ. ಬೇಸಿಗೆಯಲ್ಲಿ ಉದ್ಯೋಗ ಪಡೆದವರು ಶೇಕಡಾ 75 ರಷ್ಟು ಕಾಮಗಾರಿ ಪೂರ್ಣಗೊಳಿಸಿದರೂ ಸಂಪೂರ್ಣ ಹಣ ನೀಡಬೇಕು ಅನ್ನೋ ನಿಯಮವನ್ನೇ ಗಾಳಿಗೆ ತೂರಲಾಗಿದೆ. ಹೀಗಾಗಿ ಜನ ಸರ್ಕಾರದ ಯೋಜನೆಯನ್ನ ನಂಬದೇ ಗುಳೆ ಹೊರಟಿದ್ದಾರೆ. ರಾಯಚೂರು ತಾಲೂಕಿನ ಮರ್ಚಡ, ಗಾಜರಾಳ, ನಾನದೊಡ್ಡಿ ಗ್ರಾಮಗಳಿಂದ ಪ್ರತಿನಿತ್ಯ 20ಕ್ಕೂ ಹೆಚ್ಚು ಜನ ನಗರ ಪ್ರದೇಶಗಳ ಬಸ್ ಹತ್ತುತ್ತಿದ್ದಾರೆ.

    ಪ್ರಮುಖವಾಗಿ ಜಿಲ್ಲೆಯ ದೇವದುರ್ಗ, ಲಿಂಗಸುಗೂರು, ರಾಯಚೂರು ತಾಲೂಕುಗಳಿಂದ ಹೆಚ್ಚೆಚ್ಚು ಜನ ಬರಕ್ಕೆ ಹೆದರಿ ಚಿಕ್ಕಮಕ್ಕಳನ್ನ ಕಟ್ಟಿಕೊಂಡು ಗುಳೆ ಹೋಗುತ್ತಿದ್ದಾರೆ. 2016-17ರ ಸಾಲಿನಲ್ಲಿ ಯೋಜನೆಗೆ 99 ಕೋಟಿ 68 ಲಕ್ಷ ರೂ. ಖರ್ಚು ಮಾಡಲಾಗಿದೆ ಅಂತ ಸರ್ಕಾರಿ ದಾಖಲೆಗಳು ಹೇಳುತ್ತವೆ. ಆದ್ರೆ ಕೂಲಿ ಹಣ ಸಿಗದೆ ಫಲಾನುಭವಿಗಳು ಕಂಗಾಲಾಗಿದ್ದಾರೆ. ಯೋಜನೆಯಡಿ ಜಿಲ್ಲೆಯ ಐದು ತಾಲೂಕುಗಳಲ್ಲಿ 7431 ಕುಟುಂಬಗಳು 100 ಮಾನವ ದಿನಗಳನ್ನ ಪೂರೈಸಿದ್ದರೆ, 82 ಕುಟುಂಬಗಳು 150 ದಿನಗಳ ಕೂಲಿ ಕೆಲಸವನ್ನ ಪೂರೈಸಿವೆ. ಕೃಷಿ ಹೊಂಡ, ಒಡ್ಡು ನಿರ್ಮಾಣ, ತೋಟಗಾರಿಕೆ ಸಸಿ ನೆಡುವುದು ಸೇರಿ 8633 ಕಾಮಗಾರಿಗಳು ಪೂರ್ಣಗೊಂಡಿದ್ದು, 447 ಕಾಮಗಾರಿಗಳು ಪ್ರಗತಿಯಲ್ಲಿವೆ.

    ಗುಳೆ ಹೋಗುವವರಲ್ಲಿ ಎರಡು ವಿಧ: ವೃತ್ತಿಪರ ಕೂಲಿ ಕೆಲಸಗಾರರು ಹಾಗೂ ವೃತ್ತಿಪರರಲ್ಲದ ಕೆಲಸಗಾರರು ಇದ್ದಾರೆ. ನರೇಗಾ ಅಡಿ ಪ್ರತಿದಿನ 233 ರೂಪಾಯಿ ಕೂಲಿ ನೀಡಲಾಗುತ್ತೆ. ಆದ್ರೆ ವೃತ್ತಿಪರ ಕೂಲಿಕಾರರು ನಗರ ಪ್ರದೇಶಗಳಲ್ಲಿ 500 ರಿಂದ 600 ರೂಪಾಯಿ ದುಡಿಯುತ್ತಾರೆ. ಹೀಗಾಗಿ ವೃತ್ತಿಪರ ಕೂಲಿಕಾರರ ಗುಳೆ ತಡೆಯಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಅಂತ ರಾಯಚೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದ್ದಾರೆ. ಇನ್ನು ವೃತ್ತಿಪರರಲ್ಲದ ಕೂಲಿಕಾರರಿಗಾಗಿ ಯೋಜನೆಯಡಿ ಕೆಲಸ ನೀಡುತ್ತಿದ್ದೇವೆ. ಈಗಾಗಲೇ 58 ಲಕ್ಷ ಮಾನವ ದಿನಗಳ ಸೃಜನೆ ಮಾಡಿದ್ದೇವೆ ಅಂತ ತಿಳಿಸಿದ್ದಾರೆ.

    ಕೇವಲ ಉದ್ಯೋಗ ಮಾತ್ರವಲ್ಲದೆ ಕುಡಿಯುವ ನೀರಿನ ಸಮಸ್ಯೆ, ಬೆಳೆ ಹಾನಿ, ಸಾಲ ತೀರಿಸಲಾಗದೆ ಜನ ಗುಳೆ ಹೋಗುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರ ಪರಿಹಾರವನ್ನ ಸಮರ್ಪಕವಾಗಿ ವಿತರಿಸದೇ ಪರಸ್ಪರ ಆರೋಪಗಳಲ್ಲಿ ತೊಡಗಿದ್ದು, ಸರ್ಕಾರದ ಮೇಲಿನ ವಿಶ್ವಾಸವನ್ನ ಜನ ಕಳೆದುಕೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಇನ್ನೂ ಭೀಕರ ಬರಗಾಲದ ಮುನ್ಸೂಚನೆಯಿರುವುದರಿಂದ ರೈತರು ಮಾರ್ಚ್ ಆರಂಭದಲ್ಲೇ ಗುಳೆ ಹೋಗುತ್ತಿದ್ದಾರೆ.