Tag: milind

  • ಮಿಲಿಂದ್ ಗೌತಮ್ ಈಗ ಅನ್ ಲಾಕ್ ರಾಘವ!

    ಮಿಲಿಂದ್ ಗೌತಮ್ ಈಗ ಅನ್ ಲಾಕ್ ರಾಘವ!

    ಹೊಸ ವರ್ಷದ ಆರಂಭದಲ್ಲಿಯೇ ಹೊಸತನದ ಒಂದಷ್ಟು ಸಿನಿಮಾಗಳು ತೆರೆಗಾಣುವ ಸನ್ನಾಹದಲ್ಲಿದೆ. ಈ ವಾರ ಅಂದರೆ, ಫೆಬ್ರವರಿ 7ರಂದು ಬಿಡುಗಡೆಗೆ ಸಜ್ಜಾಗಿರುವ ‘ಅನ್ ಲಾಕ್ ರಾಘವ’ (Unlock Raghava) ಚಿತ್ರ ಕೂಡ ಅಂಥಾ ಭರವಸೆ ಮೂಡಿಸಿರೋ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ. ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ ಟ್ರೈಲರ್‌ನೊಂದಿಗೆ ಗಮನ ಸೆಳೆದಿರೋ ಈ ಸಿನಿಮಾ ಮೂಲಕ ಮಿಲಿಂದ್ ಗೌತಮ್ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸದರಿ ಟ್ರೈಲರ್‌ನಲ್ಲಿ ಮಿಲಿಂದ್ ಪಾತ್ರದ ಒಂದಷ್ಟು ಝಲಕ್‌ಗಳು ಜಾಹೀರಾಗಿವೆ. ನಟನೆ, ಸಾಹಸ ಸೇರಿದಂತೆ ಎಲ್ಲದರಲ್ಲಿಯೂ ತರಬೇತಿ ಪಡೆದು, ಪಳಗಿಕೊಂಡಿರುವ ಮಿಲಿಂದ್ ಗೌತಮ್ ಮೊದಲ ಹೆಜ್ಜೆಯಲ್ಲಿಯೇ ಭರವಸೆ ಮೂಡಿಸಿದ್ದಾರೆ.

    ಮೂಲತಃ ತೀರ್ಥಹಳ್ಳಿಯವರಾದ ಮಿಲಿಂದ್ ಗೌತಮ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಅದರ ಪರಿಧಿಯಲ್ಲಿಯೇ ಬದುಕು ಕಟ್ಟಿಕೊಳ್ಳುವ ವಿಪುಲ ಅವಕಾಶಗಳಿದ್ದರೂ ಬಣ್ಣದ ಜಗತ್ತೆಂಬುದು ಆರಂಭದಿಂದಲೂ ಅವರನ್ನು ಸೆಳೆಯುತ್ತಾ ಬಂದಿತ್ತು. ಹಾಗಂತ ನಟನಾಗಿಯೇ ಬಿಡಬೇಕೆಂಬ ತೀವ್ರವಾದ ಆಕಾಂಕ್ಷೆಯೇನೂ ಇರಲಿಲ್ಲ. ಇಂಥಾ ಮಿಲಿಂದ್ ಗೌತಮ್ ಚಿತ್ರರಂಗಕ್ಕೆ ನಟನಾಗಿ ಪಾದಾರ್ಪಣೆ ಮಾಡಿದ್ದೇ ಅಚಾನಕ್ಕಾಗಿ. 2019ರ ಸುಮಾರಿಗೆ ‘ವೀಕೆಂಡ್’ ಎಂಬ ಚಿತ್ರ ಶುರುವಾಗಿತ್ತು. ಅದೊಂದು ದಿನ ಆ ಸಿನಿಮಾ ನಿರ್ದೇಶಕರು ಪುಟ್ಟ ಪಾತ್ರವೊಂದರಲ್ಲಿ ನಟಿಸೋ ಅವಕಾಶ ಕೊಟ್ಟಿದ್ದರಂತೆ. ಆ ಮೂಲಕ ಕ್ಯಾಮೆರಾ ಮುಂದೆ ನಿಂತಿದ್ದ ಮಿಲಿಂದ್ ಪಾಲಿಗೆ ಅದಾಗಲೇ ಇದ್ದ ನಟನೆಯ ಆಸಕ್ತಿ ತೀವ್ರಗೊಂಡಿತ್ತು. ಇದನ್ನೂ ಓದಿ:ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು

    ಅದಾದ ನಂತರ ವಿನಾಯಕ್ ಅವರ ಗರಡಿಯಲ್ಲಿ ನಟನೆ, ಸಾಹಸ, ಡ್ಯಾನ್ಸ್ ಮುಂತಾದವುಗಳಲ್ಲಿ ತರಬೇತಿ ಪಡೆದುಕೊಂಡಿದ್ದರು. ಅದೆಲ್ಲ ಆಗುತ್ತಲೇ ಮಂಜುನಾಥ್ ಡಿ ಅವರು ‘ಅನ್‌ಲಾಕ್ ರಾಘವ’ ಚಿತ್ರವನ್ನು ನಿರ್ಮಾಣ ಮಾಡಲು ತಯಾರಾಗಿದ್ದರು. ದೀಪಕ್ ಮಧುವನಹಳ್ಳಿ ಚೆಂದದ ಕಥೆ ಸಿದ್ಧಪಡಿಸಿಕೊಂಡು ಅದಾಗಲೇ ಪರಿಚಿತರಿದ್ದ ಮಿಲಿಂದ್ ಗೌತಮ್‌ಗೆ ನಾಯಕನಾಗೋ ಅವಕಾಶ ಕಲ್ಪಿಸಿದ್ದರು. ಆ ಹಂತದಲ್ಲಿಯೇ ಕಥೆ, ಡಿಸ್ಕಷನ್ನು, ತಯಾರಿಗಳೆಲ್ಲವೂ ಮುಗಿದು ಮಿಲಿಂದ್ ನಾಯಕ ನಟನಾಗಿದ್ದರು. ಹೀಗೆ ಆರಂಭಿಕ ಹೆಜ್ಜೆಯಲ್ಲಿಯೇ ಒಂದೊಳ್ಳೆ ಪಾತ್ರ, ಭಿನ್ನವಾದ ಕಥೆ ಮತ್ತು ಪ್ರತಿಭಾನ್ವಿತ ತಂಡದ ಸಾಥ್ ಸಿಕ್ಕ ಖುಷಿ ಅವರಲ್ಲಿದೆ.

    ಇದು ಕಾಮಿಡಿ ಥ್ರಿಲ್ಲರ್ ಬಗೆಯ ಸಿನಿಮಾ. ಸತ್ಯಪ್ರಕಾಶ್ ಇದಕ್ಕೆ ಕಥೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಪಕ್ಕಾ ಕಮರ್ಶಿಯಲ್ ಜಾಡಿನಲ್ಲಿ ರೂಪುಗೊಂಡಿರೋ ‘ಅನ್‌ಲಾಕ್ ರಾಘವ’ ಚಿತ್ರದಲ್ಲಿ ಶೋಭರಾಜ್, ಸಾಧು ಕೋಕಿಲಾ, ಕಡೂರು ಧರ್ಮಣ್ಣ, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಸುಂದರ್, ವೀಣಾ ಸುಂದರ್ ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ. ರೆಚೆಲ್ ನಾಯಕಿಯಾಗಿ ಮಿಲಿಂದ್ ಅವರಿಗೆ ಸಾಥ್ ಕೊಟ್ಟಿದ್ದಾರೆ. ಮಯೂರ ಮೋಷನ್ ಪಿಕ್ಚರ್ಸ್ ಹಾಗೂ ಐಪ್ಲೆಕ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲವಿತ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ, ಅನೂಪ್ ಸಿಳೀನ್ ಸಂಗೀತ, ಅಜಯ್ ಮತ್ತು ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ. ಇದರೊಂದಿಗೆ ಹೊಸ ಪ್ರತಿಭೆ ಮಿಲಿಂದ್ ಗೌತಮ್ ನಾಯಕನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳು ದಟ್ಟವಾಗಿಯೇ ಕಾಣಿಸುತ್ತಿವೆ.

  • ಮಿಲಿಂದ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ

    ಮಿಲಿಂದ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ

    ಚಿತ್ರ ಆರಂಭವಾದಗಿನಿಂದಲೂ  ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ‘ಅನ್ ಲಾಕ್ ರಾಘವ’ (Unlock Raghava) ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ ‘ನನ್ನ ಹುಡುಗಿ’ ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬ (Birthday) ದಂದು ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

    ಹಲವು ವಿಶೇಷಗಳನ್ನು ಹೊಂದಿರುವ ‘ಅನ್ ಲಾಕ್ ರಾಘವ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಬರಲಿದೆ. ನಾಯಕ ಮಿಲಿಂದ್ (Milind) ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿನ ಚಿತ್ರೀಕರಣ ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ನಡೆದಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ‌. ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಮಿಲಿಂದ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ.  ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

    ಸತ್ಯಪ್ರಕಾಶ್ ಅವರು ಈ ಚಿತ್ರದ ಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ  (Deepak Madhuvanahalli) ನಿರ್ದೇಶನ ಮಾಡಿದ್ದಾರೆ. ನನ್ನ ಮಗ ಮಿಲಿಂದ್ ನಾಯಕನಾಗಿ ನಟಿಸಿರುವ ಈ ಚಿತ್ರ ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬರುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ.ಡಿ.  ಮತ್ತೊಬ್ಬ ನಿರ್ಮಾಪಕರಾದ ಗಿರೀಶ್ ಕುಮಾರ್ ಸಹ ಚಿತ್ರದ ಕುರಿತು ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ತಿಳಿಸಿದರು.

    ಹೃದಯಶಿವ ಅವರು ಬರೆದು ಅನೂಪ್ ಸೀಳಿನ್ ಸಂಗೀತ ನೀಡಿ, ವರಾಹ ರೂಪಂ ಹಾಡಿನ ಖ್ಯಾತಿಯ ಸಾಯಿವಿಘ್ನೇಶ್ ಹಾಡಿರುವ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರದುರ್ಗದ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡು ನನ್ನ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವುದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ಮಿಲಿಂದ್.

    ನಾಯಕಿ ರೆಚೆಲ್ ಡೇವಿಡ್ (Rachel David) ಸಹ ಹಾಡಿನ ಬಗ್ಗೆ ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ಕೋರಿದರು. ಛಾಯಾಗ್ರಾಹಕ ಲವಿತ್, ಸಂಕಲನಕಾರ ಅಜಯ್ ಹಾಗೂ ನೃತ್ಯ ಸಂಯೋಜಕ ಮುರಳಿ ಮಾಸ್ಟರ್ ಹಾಡಿನ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

  • ರಿಲೀಸ್ ಆಯಿತು ‘ಮೂಡ್ಸ್ ಆಫ್ ರಾಘವ’ ಟೀಸರ್

    ರಿಲೀಸ್ ಆಯಿತು ‘ಮೂಡ್ಸ್ ಆಫ್ ರಾಘವ’ ಟೀಸರ್

    ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ ಲಾಕ್ ರಾಘವ’ (Unlock Raghava) ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಈ ಟೀಸರ್ (Teaser) ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

     

    ಮಿಲಿಂದ್ (Milind) ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಟೀಸರ್ ನ ಮಿಸ್ ಮಾಡದೇ ನೋಡಿ.. ರಾಘವನಿಗೆ ನಿಮ್ಮ ಪ್ರೋತ್ಸಾಹ ನೀಡಿ ಎನ್ನುತ್ತಿದೆ ಚಿತ್ರತಂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

    ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

    ಸ್ಯಾಂಡ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ಲಾಕ್ ರಾಘವ’ (Unlock Raghava) ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಈಗ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ‌ ಬಂದಿದೆ.  ಚಿತ್ರದ ಆಡಿಯೋ (Audio) ರೈಟ್ಸ್ ಎ2 ಮ್ಯೂಸಿಕ್ ಪಾಲಾಗಿದೆ. ದಾಖಲೆ ಮೊತ್ತಕ್ಕೆ ಹೊಸ ನಾಯಕನಟನ ಚಿತ್ರದ ಆಡಿಯೋ ರೈಟ್ಸ್ ಮಾರಾಟವಾಗಿರುವುದು ವಿಶೇಷ.

    ದಾಖಲೆ ಮೊತ್ತಕ್ಕೆ ಮಾರಾಟವಾಗಿರುವ ವಿಷಯ ಮಾತ್ರ ತಿಳಿದು ಬಂದಿದ್ದು. ಹೆಚ್ಚಿನ ವಿವರಗಳನ್ನು ಚಿತ್ರತಂಡವಾಗಲಿ ಅಥವಾ ಮ್ಯೂಸಿಕ್ ಕಂಪೆನಿಯಾಗಲಿ ಬಹಿರಂಗಪಡಿಸಿಲ್ಲ. ಇದಲ್ಲದೇ ಮತ್ತೊಂದು ವಿಶೇಷತೆಯನ್ನೂ ‘ಅನ್ಲಾಕ್ ರಾಘವ’ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಹೊತ್ತು ತಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಟೀಸರ್ ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

    ‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.

     

    ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಲೈಮ್ಯಾಕ್ಸ್ ತಲುಪಿದ ‘ಅನ್ ಲಾಕ್ ರಾಘವ’ ಸಿನಿಮಾ

    ಕ್ಲೈಮ್ಯಾಕ್ಸ್ ತಲುಪಿದ ‘ಅನ್ ಲಾಕ್ ರಾಘವ’ ಸಿನಿಮಾ

    ವಿಭಿನ್ನವಾದ ಟೈಟಲ್ ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ (Unlock Raghava) ಸಿನಿಮಾದ  ಕ್ಲೈಮ್ಯಾಕ್ಸ್ ಚಿತ್ರೀಕರಣ ಭರದಿಂದ ಸಾಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಕ್ಲೈಮಾಕ್ಸ್ ಹಾಸ್ಯಲೇಪನದೊಂದಿಗೆ ಸಾಕಷ್ಟು ಅಚ್ಚರಿ ಮೂಡಿಸಲಿದೆ ಎನ್ನುತ್ತಿದೆ ಚಿತ್ರತಂಡ. ದೀಪಕ್ ಮಧುವನಹಳ್ಳಿ (Deepak Madhavanahalli) ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಿಲಿಂದ್ (Milind) ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರೇಚಲ್ ಡೇವಿಡ್ (Rachel David) ನಟಿಸುತ್ತಿದ್ದಾರೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ನಾಯಕ, ನಾಯಕಿ ಒಳಗೊಂಡಂತೆ ಸಾಧುಕೋಕಿಲ, ಸುಂದರ್, ವೀಣಾ ಸುಂದರ್, ಶೋಭರಾಜ್, ಅವಿನಾಶ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಅನ್ ಲಾಕ್ ರಾಘವ ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ “ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಎಂಟು ದಿನಗಳ ಕಾಲ ಕ್ಲೈಮಾಕ್ಸ್ ಚಿತ್ರೀಕರಣ ಯೋಜಿಸಿದ್ದು, ಇನ್ನು ಮೂರು ದಿನದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಯಲಿದೆ. ಎರಡು ಸಾಂಗ್ ಹಾಗೂ ಟಾಕಿ ಪೋಷನ್ ಮುಗಿಸಿದ್ರೆ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗುತ್ತದೆ. ಒಟ್ಟು 50 ರಿಂದ 55 ದಿನ ಚಿತ್ರೀಕರಣ ಮಾಡಿದ್ದೇವೆ. ಎಲ್ಲಾ ಕಲಾವಿದರ ಕಾಂಬಿನೇಶನ್ ನಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಿಸುತ್ತಿದ್ದೇವೆ. ವಿನೋದ್ ಮಾಸ್ಟರ್ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ರೀತಿಯ ಪ್ರಯತ್ನ ಸಿನಿಮಾದಲ್ಲಿದೆ. ಆಕ್ಷನ್ ಜೊತೆಗೆ ಹ್ಯೂಮರ್ ಕೂಡ ಇಡೀ ಸಿನಿಮಾದಲ್ಲಿ ಜೊತೆಯಾಗಿ ಟ್ರಾವೆಲ್ ಆಗಲಿದೆ. ಸಿನಿಮಾಗೆ ಏನೂ ಕೊರತೆ ಆಗದ ಹಾಗೆ ನಿರ್ಮಾಪಕರು ನೋಡಿಕೊಂಡಿದ್ದಾರೆ” ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಚಿತ್ರದ ನಿರ್ಮಾಪಕ ಮಂಜುನಾಥ್.ಡಿ ಮಾತನಾಡಿ “ಒಳ್ಳೆಯ ಕಂಟೆಂಟ್ ಕೊಟ್ರೆ ಖಂಡಿತಾ ಜನ ಸಿನಿಮಾವನ್ನು ನೋಡ್ತಾರೆ, ಗೆಲ್ಲಿಸ್ತಾರೆ. ಈ ಸಿನಿಮಾದ ಕಂಟೆಂಟ್ ತುಂಬಾ ಚೆನ್ನಾಗಿದೆ, ಒಳ್ಳೆಯ ಕಲಾವಿದರು ಇದ್ದಾರೆ. ಗೆಲ್ತೀವಿ ಎನ್ನುವ ಕಾನ್ಫಿಡೆನ್ಸ್ ನಿಂದ ಹೆಜ್ಜೆ ಇಟ್ಟಿದ್ದೇವೆ. ಏಪ್ರಿಲ್ ನಂತರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಡಿ.ಸತ್ಯಪ್ರಕಾಶ್ ಅವರು ಮಾತನಾಡಿ “ಖಂಡಿತವಾಗಿಯೂ, ಇಡೀ ಸಿನಿಮಾವನ್ನು ನಗ್ತಾ ನಗ್ತಾ ಸಿನಿಮಾ ನೋಡ್ತೀರ. ಸಬ್ಜೆಕ್ಟ್ ಬಹಳ ವಿಭಿನ್ನವಾಗಿದೆ. ದೊಡ್ಡ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಸಾಧುಕೋಕಿಲ ಸರ್ ಪೂರ್ತಿ ಸಿನಿಮಾದಲ್ಲಿ ಕಾಣಿಸಿಕೊಳ್ತಾರೆ. ಇನ್ನು ಸುಂದರ್ ಸರ್ ಬಹಳ ವಿಭಿನ್ನ ಪಾತ್ರ ನಿರ್ವಹಿಸಿದ್ದಾರೆ. ಅವರ ಪಾತ್ರದ ವೈಶಿಷ್ಟ್ಯವನ್ನು ಫಿಲಂ ನೋಡಿನೇ ತಿಳ್ಕೋಬೇಕು. ವಿಶೇಷ ಅಂದರೆ ಎಲ್ಲ ಪಾತ್ರಗಳಿಗೂ ಅದರದ್ದೇ ಆದ ವಿಶೇಷತೆಗಳಿವೆ. ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡುವ ಸಿನಿಮಾವಿದು. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಇನ್ನು ನನ್ನ ದೀಪಕ್ ಅವರ ಸ್ನೇಹ 15 ವರ್ಷದ್ದು. ನಾನು ಕಥೆಯಲ್ಲಿ ಬರೆದಿರೋ ಹ್ಯೂಮರನ್ನು ದೀಪಕ್ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಇಡೀ ಸಿನಿಮಾ ಕಟ್ಟುವಾಗ ನಮ್ಮ ಜೊತೆ ಸಪೋರ್ಟಿವ್ ಆಗಿ ನಿಂತು ನಿರ್ಮಾಪಕರಾದ  ಮಂಜುನಾಥ್ ಅವರು ಸಹಕಾರ ನೀಡಿದ್ದಾರೆ” ಎಂದು ಮಾಹಿತಿ ಹಂಚಿಕೊಂಡರು.

    ನಾಯಕ ನಟ ಮಿಲಿಂದ್ ಮಾತನಾಡಿ “ಒಬ್ಬ ಹೀರೋ ಆಗಿ ನನಗೆ ಬಹಳ ಮುಖ್ಯವಾದ ಸಿನಿಮಾವಿದು. ಅದ್ಭುತವಾದ ಕಥೆ ಆಯ್ಕೆ ಮಾಡಿಕೊಂಡಿದ್ದೇನೆ. ಈ ಸಿನಿಮಾದ ಶಕ್ತಿ ಎಂದರೆ ಸತ್ಯ ಸರ್ ಬರವಣಿಗೆ. ಕಮರ್ಶಿಯಲ್ ಸಿನಿಮಾವಾದ್ರು ಕೂಡ ಜಾಸ್ತಿ ಹೊಡೆದಾಟ ಬಡಿದಾಟಕ್ಕೆ ಹೋಗಿಲ್ಲ. ಬದಲಾಗಿ ರೋಮ್ಯಾನ್ಸ್ ಮತ್ತು ಕಾಮಿಡಿ ಜಾನರ್ ಸಿನಿಮಾವಿದು ಅದಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಮೊದಲ ಸಿನಿಮಾದಲ್ಲಿ ಪೆಟ್ಟು ತಿಂದಿದ್ದರಿಂದ, ಈ ಸಿನಿಮಾ ಮಾಡುವಾಗ ಒಂದು ಫಿಯರ್ ಇತ್ತು. ನಿರ್ದೇಶಕ ದೀಪಕ್ ಸರ್ ಅದನ್ನೆಲ್ಲ ಹೋಗಲಾಡಿಸಿ, ಸಾಕಷ್ಟು ತಿದ್ದಿದ್ದಾರೆ. ನಾನು ಈ ಸಿನಿಮಾ ಮಾಡೋದಕ್ಕೆ ಮುಖ್ಯ ಕಾರಣ ಅಂದ್ರೆ ನಮ್ಮ ತಂದೆ. ಅವರಿಗೆ ಸಿನಿಮಾ ಅಂದ್ರೆ ಪ್ಯಾಶನ್, ನಾನು ನಟನಾಗಬೇಕು ಎಂಬುದು ಅವರ ಆಸೆ. ಈ ಸಿನಿಮಾ ಜರ್ನಿಯಲ್ಲಿ ಪ್ರತಿ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಎನ್ನುವ ಕಾನ್ಫಿಡೆನ್ಸ್ ಇದೆ“ ಎಂದು ಭರವಸೆಯ ಮಾತುಗಳನ್ನಾಡಿದರು.

    ನಾಯಕ ನಟಿ, ರೇಚಲ್ ಡೇವಿಡ್ ಮಾತನಾಡಿ “ವಿಶೇಷವಾದಂತಹ ಪಾತ್ರ ನನ್ನದು. ಈಗ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಇಲ್ಲಿವರೆಗೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹಿರಿಯ ನಟರೊಂದಿಗೆ ನಟಿಸಿದ್ದು ಒಳ್ಳೆ ಅನುಭವ ನೀಡಿದೆ. ಚಿತ್ರದಲ್ಲಿ ಜಾನಕಿ ಹೆಸರಲ್ಲಿ ಆರ್ಕಿಯೋಲಜಿಸ್ಟ್ ಪಾತ್ರ ನಿರ್ವಹಿಸಿದ್ದೇನೆ” ಎಂದು ತಿಳಿಸಿದರು. ಹಿರಿಯ ನಟ ಅವಿನಾಶ್ ಮಾತನಾಡಿ “ಇದು ಬಹಳ ಒಳ್ಳೆಯ ಕಥಾಹಂದರ ಇರುವ ಸಿನಿಮಾ. ಹಲವು ಕಲಾವಿದರು ಈ ಚಿತ್ರದಲ್ಲಿದ್ದೇವೆ. ಬೇರೆ ರೀತಿಯ ಕಥೆ ಮಾಡಿಕೊಂಡಿದ್ದಾರೆ. ಥ್ರಿಲ್ ಇದೆ, ಹ್ಯೂಮರ್ ಇದೆ, ವಿಡಂಬನಾತ್ಮಕವಾಗಿ ಸಿನಿಮಾ ಹೋಗುತ್ತೆ. ನಿರ್ದೇಶಕ ದೀಪಕ್ ಸಿನಿಮಾವನ್ನು ತುಂಬಾ ಚೆನ್ನಾಗಿ ನಿರ್ದೇಶಿಸಿದ್ದಾರೆ. ಈ ಸಿನಿಮಾ ನನಗೆ ಒಳ್ಳೆಯ ಅನುಭವ ನೀಡಿದೆ” ಎಂದು ತಿಳಿಸಿದರು.

    ‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್. ಡಿ, ಡಿ ಸತ್ಯಪ್ರಕಾಶ್ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದಾರೆ.  ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್

    ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್

    ವಿಭಿನ್ನವಾದ ಟೈಟಲ್‌ನಿಂದ ಗಮನ ಸೆಳೆದಿರುವ  ‘ಅನ್‌ ಲಾಕ್‌ ರಾಘವ’ ಸಿನಿಮಾ ಈಗಾಗಲೇ 50ಕ್ಕೂ ಹೆಚ್ಚಿನ ದಿನಗಳ ಕಾಲ ಚಿತ್ರೀಕರಣ ಕಂಪ್ಲೀಟ್‌ ಮಾಡಿದೆ. ಕೋಟೆ ನಾಡು ಚಿತ್ರದುರ್ಗದ ವಿಭಿನ್ನ ಪ್ರದೇಶಗಳಲ್ಲಿಹಾಗೂ ಬೆಂಗಳೂರಿನ ವಿವಿಧೆಡೆ ಇಷ್ಟು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕ್ಲೈಮ್ಯಾಕ್ಸ್‌ ಮತ್ತು ಹಾಡಿನ ಭಾಗದ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ಅದನ್ನು ಸದ್ಯದಲ್ಲೇ ಚಿತ್ರತಂಡ ಆರಂಭಿಸಲಿದೆ.

    ‘ಅನ್‌ ಲಾಕ್‌ ರಾಘವ’ ಚಿತ್ರದ ನಾಯಕನಾಗಿ ‘ವೀಕೆಂಡ್‌’ ಚಿತ್ರದಲ್ಲಿನಟಿಸಿದ್ದ ಮಿಲಿಂದ್‌, ನಾಯಕಿಯಾಗಿ ‘ಲವ್‌ ಮಾಕ್ಟೇಲ್‌ 2’ ಖ್ಯಾತಿಯ ರೇಚಲ್‌ ಡೇವಿಡ್‌ ನಟಿಸುತ್ತಿದ್ದಾರೆ. ಸಾಧುಕೋಕಿಲ, ಅವಿನಾಶ್‌, ರಮೇಶ್‌ ಭಟ್‌, ವೀಣಾ ಸುಂದರ್‌, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಮೂಗು ಸುರೇಶ್‌, ಭೂಮಿ ಶೆಟ್ಟಿ ಅವರು ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಹಾಸ್ಯಪ್ರಧಾನವಾದ ನವಿರಾದ ಪ್ರೇಮಕತೆಯುಳ್ಳ ‘ಅನ್‌ ಲಾಕ್‌ ರಾಘವ’ ಚಿತ್ರವನ್ನು ದೀಪಕ್‌ ಮಧುವನಹಳ್ಳಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ ಸತ್ಯಪ್ರಕಾಶ್‌ ರಾಘವನ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದಿದ್ದಾರೆ.  ಸತ್ಯ – ಮಯೂರ ಪಿಕ್ಚರ್ಸ್‌ ಬ್ಯಾನರ್‌ನಡಿ ಮಂಜುನಾಥ್‌ ಡಿ ಮತ್ತು ಸತ್ಯಪ್ರಕಾಶ್‌ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಲವಿತ್‌ ಛಾಯಾಗ್ರಹಕರಾಗಿದ್ದು, ರಾಗನಿಧಿ ಅನೂಪ್‌ ಸೀಳಿನ್‌ ಸಂಗೀತ ನೀಡಿದ್ದಾರೆ. ಬಾಕಿ ಉಳಿದಿರುವ ಚಿತ್ರೀಕರಣವನ್ನು ಮುಗಿಸಿಕೊಂಡು 2023ರಲ್ಲಿಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ಮಿಲಿಂದ್ ಜೊತೆ ಡ್ಯುಯೆಟ್ ಹಾಡಲಿದ್ದಾರೆ ‘ಲವ್ ಮಾಕ್ಟೈಲ್’  ನಟಿ ರಚೆಲ್ ಡೇವಿಡ್

    ನಟ ಮಿಲಿಂದ್ ಜೊತೆ ಡ್ಯುಯೆಟ್ ಹಾಡಲಿದ್ದಾರೆ ‘ಲವ್ ಮಾಕ್ಟೈಲ್’ ನಟಿ ರಚೆಲ್ ಡೇವಿಡ್

    ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ.  ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ ಜೋಡಿಯಾಗಿ ಲವ್ ಮಾಕ್ಟೈಲ್ ಖ್ಯಾತಿಯ  ರಚೆಲ್ ಡೇವಿಡ್  ತೆರೆ ಹಂಚಿಕೊಳ್ಳುತ್ತಿದ್ದಾರೆ.

     ಇತ್ತೀಚೆಗೆ ಸತ್ಯ ಪ್ರಕಾಶ್ ನಿರ್ದೇಶನದಲ್ಲಿ ತೆರೆಕಂಡ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಈ ಚಿತ್ರವನ್ನು ನಿರ್ದೇಶನದ ಜೊತೆ ನಿರ್ಮಾಪಕ ಮಂಜುನಾಥ್ ಜೊತೆಗೂಡಿ ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ  ಮತ್ತೊಂದು ಸಿನಿಮಾ ನಿರ್ಮಾಣಕ್ಕೆ  ಮುಂದಾಗಿದ್ದು,  ಈ ಚಿತ್ರಕ್ಕೂ ಮಯೂರ ಪಿಕ್ಚರ್ಸ್ ಡಿ.ಮಂಜುನಾಥ್ ಕೈ ಜೋಡಿಸಿದ್ದಾರೆ. ನೂತನ ಚಿತ್ರದ ಟೈಟಲ್ ಹಾಗೂ ನಾಯಕ ಮಿಲಿಂದ್, ನಾಯಕಿ ರಚೆಲ್ ಡೇವಿಡ್ ಪಾತ್ರದ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದನ್ನೂ ಓದಿ:‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾಗ್ಯರಾಜ್, ರಾಜು ಜೇಮ್ಸ್ ಬಾಂಡ್, ಕಳ್ಬೆಟ್ಟದ ದರೋಡೆಕೋರರು ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಾಲ್ಕನೇ ಸಿನಿಮಾವಿದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ವರ್ಕ್,ಅಜಯ್ ಸಂಕಲನ ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]

  • ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ ವಿಚಾರಗಳನ್ನು ಪರಿಣಾಮಕಾರಿಯಾಗಿಯೇ ದೃಷ್ಯೀಕರಿಸಲಾಗಿದೆ.

    ಹೊರ ಜಗತ್ತಿನಲ್ಲಿ ಇವರಿಗೇನೂ ಕಮ್ಮಿ ಇಲ್ಲ ಎಂಬಂಥಾ ಇಮೇಜು, ಅದಕ್ಕೆ ಸರಿಯಾಗಿ ರೂಢಿಸಿಕೊಂಡ ಥಳುಕು ಬಳುಕಿನ ಲೈಫ್ ಸ್ಟೈಲ್… ಆದರೆ ಬದುಕಿನ ನೆತ್ತಿಯ ಮೇಲೆ ಸದಾ ನೇತಾಡುತ್ತಲೇ ಇರುವ ಅನಿಶ್ಚಿತತೆಯ ತೂಗುಗತ್ತಿ. ಯಾವುದೇ ಕ್ಷಣದಲ್ಲಿಯಾದರೂ ನೆಚ್ಚಿಕೊಂಡ ಕೆಲಸವನ್ನು ಬಿಟ್ಟು ಬೀದಿಯಲ್ಲಿ ನಿಲ್ಲಬಹುದಾದ ಬದುಕು… ಇದು ಐಟಿ ಬಿಟ ವಲಯದಲ್ಲಿ ಕೆಲಸ ಮಾಡೋರ ಸಾಮಾನ್ಯ ಗೋಳು. ಇಂಥಾ ಅಕ್ಷರಸ್ಥರೇ ಬದುಕಿನ ಅನಿವಾರ್ಯತೆಗೆ ಸಿಕ್ಕಿ ಅಡ್ಡ ದಾರಿ ಹಿಡಿದರೆ, ಕ್ರಿಮಿನಲ್ಲುಗಳಾದರೆ ಅದರ ಪರಿಣಾಮ ಘೋರ. ಇಂಥಾ ವಾಸ್ತವವನ್ನು ಸವರಿಕೊಂಡು ಹೋದಂತೆ ಭಾಸವಾಗುವ ರೋಚಕ ಕಥೆಯನ್ನು ವೀಕೆಂಡ್ ಚಿತ್ರ ಹೊಂದಿದೆ.

    ನಾಯಕ ಅಜೆಯ್ ಸಾಫ್ಟ್‍ವೇರ್ ಕ್ಷೇತ್ರದಲ್ಲಿಯೇ ಕಾರ್ಯ ನಿರ್ವಹಿಸುವಾತ. ಈತನ ಮೇಲೆ ಸಹೋದ್ಯೋಗಿಯೊಬ್ಬಳು ಮೋಹಗೊಂಡಿದ್ದರೆ ಈತ ಮಾತ್ರ ನಾಯಕಿಯ ಹಿಂದೆ ಬಿದ್ದಿರುತ್ತಾನೆ. ಈ ಪ್ರೇಮದ ಹಿನ್ನೆಲೆಯಲ್ಲಿಯೇ ನಿರ್ದೇಶಕರು ಐಟಿ ಬಿಟಿ ಕ್ಷೇತ್ರದ ಅಷ್ಟೂ ವಿಚಾರಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವ ಜಾಣ್ಮೆ ತೋರಿದ್ದಾರೆ. ಅಲ್ಲಿನ ಕೆಲಸದೊತ್ತಡ, ಸಂಬಳ ಪಡೆಯಲು ಮಾಡಬೇಕಾದ ಅನಿವಾರ್ಯ ಸರ್ಕಸ್ಸುಗಳೆಲ್ಲವನ್ನು ಕೂಡಾ ಮನ ಮುಟ್ಟುವಂತೆ ದೃಷ್ಯದ ಚೌಕಟ್ಟಿಗೆ ಒಗ್ಗಿಸಲಾಗಿದೆ.

    ಇಂಥಾ ಎಲ್ಲ ಸರ್ಕಸ್ಸುಗಳಾಚೆಗೂ ಕೆಲಸ ಕಳೆದುಕೊಂಡಾಗ ಈ ಐಟಿ ಉದ್ಯೋಗಿಗಳ ಬದುಕು ಹೇಗಿರುತ್ತೆ? ಎಂಥೆಂಥಾ ಅವಘಡಗಳು ಸಂಭವಿಸಬಹುದೆಂಬುದನ್ನು ನಿರ್ದೇಶಕರು ರುಚಿಕಟ್ಟಾಗಿಯೇ ನಿರೂಪಿಸಿದ್ದಾರೆ. ಹಾಗಂತ ಈ ಸಿನಿಮಾ ಇಂಥಾ ಒಳತೋಟಿ, ತಲ್ಲಣಗಳಲ್ಲಿಯೇ ಕಳೆದು ಹೋಗಿದೆ ಅಂದುಕೊಳ್ಳಬೇಕಿಲ್ಲ. ಕಾಮಿಡಿ, ಪ್ರೀತಿ ಸೇರಿದಂತೆ ಎಲ್ಲೆಲ್ಲಿ ಯಾವುದನ್ನು ಬೆರೆಸಬೇಕೋ ಅದನ್ನು ಅಚ್ಚುಕಟ್ಟಾಗಿಯೇ ಮಾಡಲಾಗಿದೆ. ಆದ್ದರಿಂದಲೇ ವೀಕೆಂಡ್ ಎಂಬುದು ಸಂಪೂರ್ಣ ಎಂಟರ್‍ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆ. ಒಂದಿಡೀ ಚಿತ್ರ ಇಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬರಲು ಬೇರೇನೇ ಕಾರಣಗಳಿದ್ದರೂ ಅನಂತ್ ನಾಗ್ ಎಂಬ ಮೇರು ನಟ ಈ ಚಿತ್ರದ ಪ್ರಧಾನ ಆಕರ್ಷಣೆ. ಅವರಿಲ್ಲಿ ಸಾಫ್ಟ್‍ವೇರ್ ಮೊಮ್ಮಗನ ತಾತನಾಗಿ, ತಪ್ಪಾದಾಗ ತಿದ್ದುವ ಹಿರಿಯನ ಪಾತ್ರವನ್ನು ಎಂದಿನಂತೆಯೇ ಮನಸೂರೆಗೊಳ್ಳುವಂತೆ ನಿರ್ವಹಿಸಿದ್ದಾರೆ.

    ವಿಶೇಷವೆಂದರೆ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಮಂಜುನಾಥ್ ಡಿ ಅವರೇ ಪೊಲೀಸ್ ಅಧಿಕಾರಿಯಾಗಿಯೂ ಅಬ್ಬರಿಸಿದ್ದಾರೆ. ಈ ಪಾತ್ರವೂ ಸೇರಿದಂತೆ ಗೋಪಿನಾಥ್ ಭಟ್, ರಘು ನೀನಾಸಂ ಸೇರಿದಂತೆ ಎಲ್ಲ ಪಾತ್ರಗಳೂ ಮನಮುಟ್ಟುವಂತಿವೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಕೂಡಾ ತಂತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಶಶಿಧರ್ ಅವರ ಛಾಯಾಗ್ರಹಣ ಕಥೆಗೆ ಹೊಸಾ ಓಘವನ್ನೇ ನೀಡಿದೆ. ಹೀಗೆ ಕಮರ್ಶಿಯಲ್ ವೇನಲ್ಲಿ ರೋಚಕವಾದ ಕಥೆ ಹೇಳೋ ಈ ಚಿತ್ರ ಮನಮಿಡಿಯುವಂಥಾ ಒಂದು ಸಂದೇಶವನ್ನೂ ರವಾನಿಸುತ್ತದೆ. ಇಡೀ ಸಿನಿಮಾ, ಶ್ರಮ ಸಾರ್ಥಕ ಅನ್ನಿಸೋದು ಈ ಕಾರಣದಿಂದಲೇ. ಒಟ್ಟಾರೆಯಾಗಿ ವೀಕೆಂಡ್ ಒಂದೊಳ್ಳೆ ಚಿತ್ರ ನೋಡಿದ ಖುಷಿಯನ್ನು ನೋಡುಗರೆಲ್ಲರ ಮನಸಿಗಿಳಿಯುವಂತೆ ಮಾಡುತ್ತದೆ.

    ರೇಟಿಂಗ್: 3.5/5 

  • ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

    ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

    ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ.

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ಅವರು ನಿರ್ಮಾಣ ಮಾಡಿರೋ ಚಿತ್ರ ವೀಕೆಂಡ್. ಇದೊಂದು ಯುವ ಆವೇಗವನ್ನು ಒಳಗೊಂಡಿರುವ, ಈ ಮೂಲಕವೇ ಸಾಮಾಜಿಕ ಕಾಳಜಿಯನ್ನೂ ಕೂಡಾ ಪ್ರಚುರಪಡಿಸೋ ಪಕ್ಕಾ ಕಮರ್ಶಿಯಲ್ ಚಿತ್ರ. ಹೊಸ ತಂತ್ರಜ್ಞಾನ, ಹೊಸ ಬಗೆಯ ನಿರೂಪಣೆಯೊಂದಿಗೆ ವೀಕೆಂಡ್ ಬೇರೆಯದ್ದೇ ರೀತಿಯಲ್ಲಿ ಪ್ರೇಕ್ಷಕರಿಗೆಲ್ಲ ಮಜಾ ಕೊಡುವಂತೆ ಮೂಡಿ ಬಂದಿದೆಯಂತೆ.

    ಇಲ್ಲಿ ಸಾಫ್ಟ್‍ವೇರ್ ಉದ್ಯೋಗಿಗಳ ಜಗತ್ತನ್ನು ಕಣ್ಣಿಗೆ ಕಟ್ಟಿದಂತೆ ಅನಾವರಣಗೊಳಿಸಲಾಗಿದೆಯಂತೆ. ಹೇಳಿ ಕೇಳಿ ಐಟಿ ವಲಯದ ಮಂದಿಗೆ ಈ ವೀಕೆಂಡ್ ಮೋಜು ಮಸ್ತಿ ಅನ್ನೋದು ಫೇವರಿಟ್ ಅಂಶ. ಆದರೆ ಅಳತೆ ಮೀರಿದರೆ ವೀಕೆಂಡ್ ಮಸ್ತಿ ಎಂಬುದು ಭೀಕರ ಅನಾಹುತಗಳಿಗೂ ಕಾರಣವಾಗಿ ಬಿಡುತ್ತದೆ. ಅಂಥಾ ಅಂಶಗಳನ್ನು ಫ್ಯಾಮಿಲಿ ಸೆಂಟಿಮೆಂಟಿನ ಸುತ್ತ ಬೆಸೆದು ರೋಚಕವಾದ ಕಥೆಯ ಮೂಲಕ ಈ ಚಿತ್ರವನ್ನು ಅಣಿಗೊಳಿಸಲಾಗಿದೆ.

    ಈ ಚಿತ್ರದಲ್ಲಿ ಅನಂತ್ ನಾಗ್ ನಾಯಕನ ತಾತನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರದ್ದು ಯುವ ಸಮೂಹವನ್ನು ಸರಿ ದಾರಿಗೆ ತರುವ, ತನ್ನ ಮೊಮ್ಮಗನನ್ನು ಎಲ್ಲ ಎಡವಟ್ಟುಗಳಿಂದ ಪಾರುಗಾಣಿಸೋ ಪಾತ್ರ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ.

  • ವೀಕೆಂಡ್ ಹಾಡುಗಳ ಹಂಗಾಮಾ!

    ವೀಕೆಂಡ್ ಹಾಡುಗಳ ಹಂಗಾಮಾ!

    ಬೆಂಗಳೂರು: ಹಾಡುಗಳೇ ಚಿತ್ರವೊಂದರ ಆಹ್ವಾನ ಪತ್ರಿಕೆ ಇದ್ದಂತೆ ಎಂಬ ಮಾತಿದೆ. ಆದ್ದರಿಂದಲೇ ಹಾಡುಗಳು ಗೆದ್ದರೆ ಚಿತ್ರಕ್ಕೂ ಗೆಲುವು ಗ್ಯಾರೆಂಟಿ ಎಂಬ ನಂಬಿಕೆ. ಇದಕ್ಕೆ ತಕ್ಕುದಾಗಿಯೇ ಹಾಡುಗಳು ಹಿಟ್ ಆದರೆ ಆ ಸಿನಿಮಾ ಕೂಡಾ ಹಿಟ್ ಆಗುತ್ತದೆ ಎಂಬ ನಂಬಿಕೆಯೂ ಗಾಂಧಿನಗರದಲ್ಲಿದೆ. ಇದು ಬಹುತೇಕ ಸತ್ಯವೂ ಹೌದು. ಈ ನಿಟ್ಟಿನಲ್ಲಿ ನೋಡ ಹೋದರೆ ಈ ವಾರ ಬಿಡುಗಡೆಗೆ ರೆಡಿಯಾಗಿರೋ ವೀಕೆಂಡ್ ಚಿತ್ರದ ಗೆಲುವು ನಿಚ್ಚಳವಾಗಿದೆ.

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ಅವರು ನಿರ್ಮಾಣ ಮಾಡಿರೋ ಈ ಚಿತ್ರವನ್ನು ಶೃಂಗೇರಿ ಸುರೇಶ್ ನಿರ್ದೇಶನ ಮಾಡಿದ್ದಾರೆ. ಈಗ್ಗೆ ಮೂರು ದಶಕಗಳಿಂದೀಚೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿರೋ ಸುರೇಶ್ ಅವರು ಈಗಿನ ಯುವ ಸಮುದಾಯದ ತಲ್ಲಣಗಳನ್ನು ಸಾಮಾಜಿಕ ಕಾಳಜಿಯೊಂದಿಗೆ ಕಮರ್ಷಿಯಲ್ ವೇನಲ್ಲಿ ಈ ಮೂಲಕ ದೃಷ್ಯೀಕರಿಸಿದ್ದಾರೆ.

    ಈ ಚಿತ್ರ ಹಾಡುಗಳು ಮತ್ತು ಟ್ರೈಲರ್ ಮೂಲಕವೇ ಜನಮಾನಸಕ್ಕೆ ಹತ್ತಿರಾಗಿದೆ. ಅದರಲ್ಲಿಯೂ ಹಾಡುಗಳಂತೂ ನವೀನ ರೀತಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿವೆ. ಶ್ರೀಲಂಕಾ ಮೂಲದ ಮನೋಜ್ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾದ ಮೂರು ಹಾಡುಗಳು ಮೂಡಿ ಬಂದಿವೆ. ಅನನ್ಯಾ ಭಟ್ ಹಾಡಿರೋ ಐಲಾ ಐಲಾ ಎಂಬ ಪಾರ್ಟಿ ಸಾಂಗ್ ಅಂತೂ ಹೊಸಾ ಕ್ರೇಜ್ ಸೃಷ್ಟಿಸಿ ಬಿಟ್ಟಿದೆ.

    ಈ ಚಿತ್ರದಲ್ಲಿ ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ಅಭಿನಯಿಸಿದ್ದಾರೆ. ಶಶಿಧರ್ ಛಾಯಾಗ್ರಹಣ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ, ಮನೋಜ್ ಸಂಗೀತ ಹಾಗೂ ಅನಂತ್ ನಾಗ್, ಮಂಜುನಾಥ್, ನೀನಾಸಂ ರಘು, ಬ್ಯಾಂಕ್ ಸತೀಶ್, ನೀತು ಬಾಲಾ, ವೀಣಾ ಜಯಶಂಕರ್, ಸಂಜಯ್ ನಾಗೇಶ್, ಮಂಜುನಾಥ ಶಾಸ್ತ್ರಿ, ಗೋಪಿನಾಥ್ ಭಟ್, ನಾಗಭೂಷಣ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.