Tag: militants

  • ಉಗ್ರನ ಜೇಬಿನಲ್ಲಿ ಮ್ಯಾಪ್ – ಮೇ 23 ರಂದು ಭಾರೀ ದಾಳಿಗೆ ಸ್ಕೆಚ್!

    ಉಗ್ರನ ಜೇಬಿನಲ್ಲಿ ಮ್ಯಾಪ್ – ಮೇ 23 ರಂದು ಭಾರೀ ದಾಳಿಗೆ ಸ್ಕೆಚ್!

    ಶ್ರೀನಗರ: ಕಳೆದ ಗುರುವಾರ ಶೋಪಿಯಾನ್‍ನಲ್ಲಿ ಯೋಧರ ಗುಂಡಿನ ದಾಳಿಗೆ ಹತನಾದ ಉಗ್ರನ ಜೇಬಿನಲ್ಲಿ ಸಿಕ್ಕ ಮ್ಯಾಪ್ ಒಂದು ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ನಡೆಯಬೇಕಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ.

    ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನವನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಹಲವಾರು ದಾಳಿಯನ್ನು ಕಾಶ್ಮೀರದಲ್ಲಿ ಮಾಡಲಿದ್ದಾರೆ ಎಂದು ಭಾರತೀಯ ಗುಪ್ತಚರ ಇಲಾಖೆ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿತ್ತು.

    ಈ ಮಾಹಿತಿಗೆ ಪೂರಕ ಎಂಬಂತೆ ಗುರುವಾರ ಸೇನೆಯ ಗುಂಡಿನ ದಾಳಿಗೆ ಬಲಿಯದ ಉಗ್ರನ ಜೇಬಿನಲ್ಲಿ ನಕ್ಷೆ ದೊರಕಿದೆ. ಈ ಮ್ಯಾಪ್‍ನ ಪ್ರಕಾರ ಶ್ರೀನಗರ ಮತ್ತು ಅವಂತಿಪೋರದಲ್ಲಿರುವ ಭಾರತೀಯ ವಾಯುಪಡೆಯ ನಲೆಗಳ ಮೇಲೆ ಮೇ 23 ರಂದು ದಾಳಿ ಮಾಡಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.

    ಮೇ 14 ರಂದು ನಡೆದ ಸಭೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ರಿಯಾಜ್ ನೈಕೂ, ಜೈಶ್-ಇ- ಮೊಹಮ್ಮದ್ ಉಗ್ರಸಂಘಟನೆಯ ಇಬ್ಬರು ಉಗ್ರರು ಮತ್ತು ಲಷ್ಕರ್-ಇ-ತೊಯ್ಬಾ ಸಂಘಟನೆಯ ರಿಯಾಜ್ ದಾರ್ ಎಂಬ ನಾಲ್ಕು ಉಗ್ರರು ಸೇರಿಕೊಂಡು ವಾಯು ನೆಲೆಗಳ ಮೇಲೆ ದಾಳಿ ಮಾಡಲು ಸಂಚು ಮಾಡಿದ್ದರು ಎಂದು ತಿಳಿದುಬಂದಿದೆ.

    ಪುಲ್ವಾಮ ಮತ್ತು ಶೋಪಿಯಾನ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ಉಗ್ರರನ್ನು ಕೊಲ್ಲಲಾಗಿತ್ತು. ಆ ಸಮಯದಲ್ಲಿ ಈ ಮಾಹಿತಿಯು ಹೊರಬಂದಿದೆ. ಈ ಗುಂಡಿನ ಕಾಳಗದಲ್ಲಿ 2 ಜನ ಭಾರತೀಯ ಯೋಧರು ವೀರಮರಣ ಅಪ್ಪಿದ್ದರು.

  • ಇಬ್ಬರು ಉಗ್ರರು ಫಿನಿಶ್

    ಇಬ್ಬರು ಉಗ್ರರು ಫಿನಿಶ್

    ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

    ಬಾರಾಮುಲ್ಲಾದ ಕಲಾಂತಾರ ಪ್ರದೇಶದಲ್ಲಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದು ಉರುಳಿಸಲಾಗಿದೆ. ಈ ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಶ್ರೀನಗರದ ರಕ್ಷಣಾ ವಿಭಾಗದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ.

    ಉಗ್ರರ ಅಡಗುತಾಣಗಳ ಕುರಿತು ಖಚಿತ ಮಾಹಿತಿ ಪಡೆದು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದಾರೆ. ಆಗ ಇಬ್ಬರ ಮಧ್ಯೆ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರನ್ನು ಸೇನೆ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ.

    ಗಾಯಗೊಂಡ ಸಿಬ್ಬಂದಿಯನ್ನು ಬಾದಾಮಿಬಾಗ್ ಕಂಟೋನ್ಮೆಂಟ್‍ನಲ್ಲಿ ಸೇನೆಯ 92 ಬೇಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಕಾಲಿಯಾ ತಿಳಿಸಿದ್ದಾರೆ. ಬಳಿಕ ಸೇನೆಯಿಂದ ಕಾರ್ಯಾಚರಣೆ ಮುಂದುವರಿದಿದೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

  • 2019ರ 70 ದಿನಗಳಲ್ಲಿ 44 ಉಗ್ರರ ಹತ್ಯೆ – ಪುಲ್ವಾಮಾ ದಾಳಿ ಬಳಿಕ 18 ಪಾಪಿಗಳ ಚೆಂಡಾಡಿದ ಸೇನೆ

    2019ರ 70 ದಿನಗಳಲ್ಲಿ 44 ಉಗ್ರರ ಹತ್ಯೆ – ಪುಲ್ವಾಮಾ ದಾಳಿ ಬಳಿಕ 18 ಪಾಪಿಗಳ ಚೆಂಡಾಡಿದ ಸೇನೆ

    ನವದೆಹಲಿ: ಭಾರತೀಯ ಸೇನೆ ಈ ವರ್ಷದಿಂದ ಆರಂಭಗೊಂಡು ಇಂದಿನವರೆಗಿನ(ಮಾರ್ಚ್ 11) 70 ದಿನಗಳಲ್ಲಿ ಇದುವರೆಗೂ 44 ಉಗ್ರರನ್ನು ಹತ್ಯೆ ಮಾಡಿದೆ.

    ಈ ಬಗ್ಗೆ ಜಮ್ಮು ಕಾಶ್ಮೀರದಲ್ಲಿ ಸಿಆರ್‍ಪಿಎಫ್, ಪೊಲೀಸರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಥ್ರಾಲ್ ಪ್ರದೇಶದಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಲಾಗಿದೆ.

    ಪುಲ್ವಾಮಾ ದಾಳಿಯ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 18 ಉಗ್ರರು ಬಲಿಯಾಗಿದ್ದು, ಇದರಲ್ಲಿ 6 ಮಂದಿ ಪಾಕಿಸ್ತಾನದ ಮೂಲದವರು ಎನ್ನುವುದು ಖಚಿತವಾಗಿದೆ. ಪ್ರಮುಖವಾಗಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಮದಾಸೀರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್ ಕೂಡ ಎನ್‍ಕೌಂಟರ್‍ನಲ್ಲಿ ಬಲಿಯಾಗುವ ಕುರಿತು ಕಾಶ್ಮೀರದ ಐಜಿ ಎಸ್‍ಪಿ ಪಾಣಿ ಖಚಿತ ಪಡಿಸಿದ್ದಾರೆ.

    ದಕ್ಷಿಣ ಕಾಶ್ಮೀರದ ಥ್ರಾಲ್ ನಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ. ಉಗ್ರರ ವಿರುದ್ಧ ಸರ್ಚ್ ಕಾರ್ಯಾಚರಣೆ ನಡೆಸುವ ವೇಳೆ ಯೋಧರ ವಿರುದ್ಧವೇ ದಾಳಿ ನಡೆಸಿದ್ದರು. ಪ್ರತಿ ದಾಳಿ ನಡೆದ ವೇಳೆ ಮೋದ್ ನೊಂದಿಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.

    ಸೇನಾ ಮೂಲಗಳಿಂದ ಲಭಿಸಿದ ಮಾಹಿತಿ ಅನ್ವಯ ಸೇನೆಯ ಕಾರ್ಯಾಚರಣೆಯಲ್ಲಿ ಸತ್ತ ಉಗ್ರರಲ್ಲಿ ಬಹುತೇಕರು ಜೈಷ್ ಇ ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದಾರೆ. ಗಡಿ ನಿಯಂತ್ರಣ ರೇಖೆಯ ಬಳಿ 2018 ರಲ್ಲಿ ನಡೆದ ಕಾರ್ಯಾಚರಣೆಯಲ್ಲಿ 1,629 ಮಂದಿ ಉಗ್ರರನ್ನು ಸೇನೆ ಹತ್ಯೆ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ

    ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ

    ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರನ್ನು ಉಗ್ರರು ಅಪಹರಣಗೈದಿದ್ದಾರೆ ಎನ್ನುವ ಒಂದು ಸುದ್ದಿ ಪ್ರಕಟವಾಗಿತ್ತು. ಆದರೆ ಯೋಧ ಅಪಹರಣಗೊಂಡಿಲ್ಲ ಅವರು ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

    ಜಮ್ಮು ಕಾಶ್ಮೀರದ ಲೈಟ್ ಇನ್‍ಫ್ಯಾಂಟ್ರಿಗೆ ಸೇರಿದ ಯಾಸೀನ್ ಭಟ್ ಅವರನ್ನು ಉಗ್ರರು ಕಿಡ್ನಾಪ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿತ್ತು.

    ಈ ಸುದ್ದಿಗೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ, ಬದ್ಗಾಮ್ ಬಳಿಯ ಖಾಜಿಪೋರದಿಂದ ಯೋಧರೊಬ್ಬರನ್ನು ಅಪಹರಣ ಮಾಡಲಾಗಿದೆ ಎನ್ನುವ ಸುದ್ದಿ ನಿಜವಲ್ಲ. ಅವರು ಸುರಕ್ಷಿತವಾಗಿದ್ದು, ವದಂತಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

    ಕಳೆದ ವರ್ಷ ಜೂನ್ ತಿಂಗಳಿನಲ್ಲೂ ಯೋಧರೊಬ್ಬರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದರು. ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಔರಂಗಜೇಬ್ ಅವರನ್ನು ಅಪಹರಣ ಮಾಡಿದ್ದರು.

    23 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ್ದ ಔರಂಗಜೇಬ್ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಪುಲ್ವಾಮಾದಲ್ಲಿ ಶಸ್ತ್ರ ಸಜ್ಜಿತ ಉಗ್ರರು ಸುತ್ತುವರಿದು ಅಪಹರಣ ಮಾಡಿ ಹತ್ಯೆಗೈದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರ್ ಸ್ಟ್ರೈಕ್‍ನಲ್ಲಿ ಸುಮಾರು 250 ಉಗ್ರರು ಬಲಿ: ಕೇಂದ್ರ ಸಚಿವ ವಿಕೆ ಸಿಂಗ್

    ಏರ್ ಸ್ಟ್ರೈಕ್‍ನಲ್ಲಿ ಸುಮಾರು 250 ಉಗ್ರರು ಬಲಿ: ಕೇಂದ್ರ ಸಚಿವ ವಿಕೆ ಸಿಂಗ್

    ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ದಾಳಿಯಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ರಕ್ಷಣಾಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

    ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ವಾಯುಸೇನೆ ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಭಾರತ ಏರ್ ಸ್ಟ್ರೈಕ್ ಉಗ್ರರ ನೆಲೆಗಳ ಮೇಲೆ ಮಾತ್ರ ನಡೆಸುವ ಉದ್ದೇಶ ಹೊಂದಿತ್ತು. ಏಕೆಂದರೆ ಜನವಸತಿ ಪ್ರದೇಶದಲ್ಲಿ ದಾಳಿ ನಡೆಸಿದರೆ ನಾಗರಿಕರು ಸಾವನ್ನಪ್ಪುವ ಕಾರಣದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದ್ದರಿಂದ ಜನವಸತಿಯಿಂದ ದೂರ ನಿರ್ಮಾಣ ಮಾಡಲಾಗಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಲಕೋಟ್ ಕಟ್ಟಡದಲ್ಲಿ ನೆಲೆಸಿದ್ದ ವ್ಯಕ್ತಿಗಳನ್ನು ಆಧಾರಿಸಿ ಅವರು ಹೇಳಿಕೆ ಕೊಟ್ಟಿದ್ದಾರೆ. ಅವರು ಅಧಿಕೃತವಾಗಿ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಲ್ಲ. ಅಷ್ಟು ಮಂದಿ ಸಾವನ್ನಪ್ಪಿರಬಹುದು ಎಂದು ಅಂದಾಜಿನಲ್ಲಿ ಹೇಳಿದ್ದಾರೆ ಅಷ್ಟೇ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ವಕ್ತಾರರದ ದಿಗ್ವಿಜಯ್ ಸಿಂಗ್ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೇ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿಂದತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದಾರೆ. ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದರು.

    ಗುಜರಾತ್‍ನಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಭಾರತದ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಉರಿಯಲ್ಲಿ ಉಗ್ರರ ದಾಳಿ ಬಳಿಕ ಭಾರತ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಉಗ್ರರು ಅಲರ್ಟ್ ಆಗಿದ್ದರಿಂದ ವಾಯು ದಾಳಿ ನಡೆಸಲಾಗಿದೆ. ಪುಲ್ವಾಮಾ ದಾಳಿಯ ಬಳಿಕ ಫೆಬ್ರವರಿ 26 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏರ್ ಸ್ಟ್ರೈಕ್ ನಡೆಸಲು ಅನುಮತಿ ನೀಡಿತ್ತು. ಭಾರತ ಯಶಸ್ವಿಯಾಗಿ ಉಗ್ರರ ತಾಣಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿ ಯಾವುದೇ ಹಾನಿಗೆ ಒಳಗಾಗದೇ ಭಾರತಕ್ಕೆ ಹಿಂದಿರುಗಿತ್ತು ಎಂದು ಹೇಳಿದ್ದರು.

    ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.

    ಕೇಂದ್ರ ಸರ್ಕಾರ ಅಧಿಕೃತವಾಗಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವುದನ್ನು ತಿಳಿಸಿರಲಿಲ್ಲ. ಈ ಮಧ್ಯೆ ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಕಿಡಿಕಾರಿ, ದೇಶದ ರಕ್ಷಣಾ ಮಾಹಿತಿ ಬಿಜೆಪಿ ಪಕ್ಷದ ಅಧ್ಯಕ್ಷರ ಕೈಗೆ ಹೇಗೆ ಸಿಕ್ಕಿತ್ತು ಎಂದು ಪ್ರಶ್ನಿಸಿದ್ದರು. ಈಗ ಏರ್ ಸ್ಟ್ರೈಕ್ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿಕೆ ಸಿಂಗ್ 250 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ನೀಡಬೇಕಾದ ಉತ್ತರವನ್ನು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

    ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

    ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

    ಭದ್ರತಾಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದೆ. ಅಲ್ಲದೇ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕುಪ್ವಾರದಲ್ಲೂ ಉಗ್ರರ ಉಪಟಳ ಮುಂದುವರಿದಿದ್ದು, ಮೂವರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಸುತ್ತುವರಿದಿದೆ.

    ಹಂದ್ವಾರದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದರು. ಮುಂಜಾನೆ ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಯೂ ಕೂಡ ಪ್ರತ್ಯುತ್ತರವಾಗಿ ಅವರ ವಿರುದ್ಧ ಗುಂಡಿನ ಚಕಮಕಿ ನಡೆಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಸದ್ಯಕ್ಕೆ ಭಯೋತ್ಪದಾಕರು ಗುಂಡಿನ ಚಕಮಕಿ ನಿಲ್ಲಿಸಿದ್ದು, ಮೂವರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಸುತ್ತುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ

    ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ

    ಮಂಡ್ಯ: ನಮ್ಮ ಭಾರತೀಯ ಮಗನನ್ನು ಬಲಿ ತೆಗೆದುಕೊಂಡವರು ಭೂಮಿಯ ಮೇಲೆ ಉಳಿಯಬಾರದು. ನಮ್ಮ ಭಾರತದ ಮೇಲೆ ಮತ್ತೆ ಯಾವತ್ತೂ ಉಗ್ರರು ದಾಳಿ ಮಾಡಲು ಮುಂದಾಗಬಾರದು ಎಂದು ಹುತಾತ್ಮ ಗುರು ಅವರ ತಂದೆ ಹೊನ್ನಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೊದಲು ದಾಳಿ ನಡೆಸಿದ ಭಾರತೀಯ ಸೈನ್ಯಕ್ಕೆ ಧನ್ಯವಾದ ಅರ್ಪಿಸಿದರು. ಬಳಿಕ ನಿಜವಾದ ಗಂಡಸರೇ ಆದರೆ ಭಾರತ ದೇಶಕ್ಕೆ ಬರಲಿ. ಹೇಡಿಗಳ ರೀತಿ ಬಚ್ಚಿಟ್ಟುಕೊಂಡಿದ್ದಾರೆ. ಅವರ ಮೇಲೆ ಇನ್ನೂ ದಾಳಿ ನಡೆಸಬೇಕು, ನಮ್ಮನ್ನ ಕಣ್ಣೆತ್ತಿ ಕೂಡ ನೋಡಬಾರದು. ಆ ರೀತಿ ಮಾಡಬೇಕು. ನಮ್ಮ ದೇಶದ ಜನರನ್ನ ಕಂಡರೆ ನಡುಗುವಂತೆ ಮಾಡಬೇಕು ಎಂದು ಹೇಳಿದ್ದಾರೆ.

    ನಮಗೆ ಆಗಿರುವ ಅನ್ಯಾಯ ಮತ್ತೆ ಯಾರಿಗೂ ಆಗಬಾರದು. ಭೂಮಿಯ ಮೇಲೆ ಉಗ್ರರನ್ನು ಬೇರು ಸಮೇತ ಕಿತ್ತು ಹಾಕಬೇಕು. ಉಗ್ರರು ಎಷ್ಟು ಜನರಿದ್ದರೆ ಅವರನ್ನು ಹುಡುಕಿ ಹುಡುಕಿ ಕೊಲ್ಲಬೇಕು. ಇನ್ನು ಉಳಿದವರು ಮುಂದೆ ಭಾರತದ ಮೇಲೆ ಕೈ ಎತ್ತಬಾರದು. ಭಾರತದ ಜನರನ್ನು ಕಂಡರೆ ಭಯ ಪಡಬೇಕು ಎಂದು ಅವರು ತಿಳಿಸಿದ್ದಾರೆ.

    ಭಾರತದವರು ಏನು ಮಾಡುತ್ತಾರೆ ಎನ್ನುವ ಭಯದಲ್ಲಿಯೇ ಉಗ್ರರು ಇರಬೇಕು. ನಮ್ಮವರನ್ನು ಅವರು ಮೋಸದಿಂದ ಕೊಲೆ ಮಾಡಿದ್ದಾರೆ. ಈಗ ಬಿಟ್ಟರೆ ಮತ್ತೆ ಅವರು ಸಿಗುವುದಿಲ್ಲ. ನಮ್ಮವರು ಉಗ್ರರನ್ನು ಮೋಸದಿಂದ ಕೊಲೆ ಮಾಡುತ್ತಿಲ್ಲ. ರಿಯಲ್ ಆಗಿ ಕೊಲೆ ಮಾಡುತ್ತಿದ್ದೀವಿ ಎಂದರು.

    https://www.youtube.com/watch?v=G0QMmWYgOEU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮಾಯಕ ಯುವಕನನ್ನು ಅಪಹರಿಸಿ ಹತ್ಯೆಗೈದ ಉಗ್ರರು

    ಅಮಾಯಕ ಯುವಕನನ್ನು ಅಪಹರಿಸಿ ಹತ್ಯೆಗೈದ ಉಗ್ರರು

    ಕಾಶ್ಮೀರ್: ಯುವಕನನ್ನು ಅಪರಿಸಿ ಬಳಿಕ ಹತ್ಯೆಗೈಯುವ ಮೂಲಕ ಉಗ್ರರು ಮತ್ತೆ ತಮ್ಮ ಕ್ರೌರ್ಯವನ್ನು ಮೆರೆದ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

    ಸೋಫಿಯಾ ಜಿಲ್ಲೆಯ ಸಫ್ನಾಗ್ರಿ ನಿವಾಸಿ ನದೀಮ್ ಮಂಜೂರು ಕೊಲೆಯಾದ ದುರ್ದೈವಿ ಯುವಕ. ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪುಲ್ವಾಮಾ ಜಿಲ್ಲೆಯ ಕಿಲೋರ್ ಪೊಲೀಸರು ತಿಳಿಸಿದ್ದಾರೆ.

    ನದೀಮ್ ಮಂಜೂರುನನ್ನು ಉಗ್ರರು ರಾತ್ರಿ ವೇಳೆ ಅಪಹರಿಸಿದ್ದಾರೆ. ಬಳಿಕ ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನದೀಮ್ ಶವವು ಪುಲ್ವಾಮಾ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

    ಈ ಕುರಿತು ಜಮ್ಮು-ಕಾಶ್ಮೀರ ಪೊಲೀಸ್ ವಕ್ತಾರ ಟ್ವೀಟ್ ಮಾಡಿದ್ದು, ಉಗ್ರರು ನದೀಮ್‍ನನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಚುರುಕು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಭಾರತೀಯ ಸೇನಾ ಪಡೆ!

    ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಭಾರತೀಯ ಸೇನಾ ಪಡೆ!

    ಶ್ರೀನಗರ: ಶುಕ್ರವಾರ ಮೂವರು ಪೊಲೀಸ್ ಪೇದೆಯನ್ನು ಅಪಹರಿಸಿ ಹತ್ಯೆ ಮಾಡಿದ್ದ ಪಾಕ್ ವಿರುದ್ಧ ಭಾರತೀಯ ಸೇನಾ ಪಡೆ 5 ಮಂದಿ ಉಗ್ರರನ್ನು ಸೆದೆಬಡಿಯುವ ಮೂಲಕ ತನ್ನ ಸೇಡು ತೀರಿಸಿಕೊಂಡಿದೆ.

    ಶುಕ್ರವಾರ ಮುಂಜಾನೆ ಮೂವರು ಪೊಲೀಸರ ಮನೆಗೆ ನುಗ್ಗಿ ಅವರನ್ನು ಅಪಹರಿಸಿ ಉಗ್ರರು ಹತ್ಯೆ ಮಾಡಿದರು. ಈ ಘಟನೆ ನಸುಕಿನಲ್ಲೇ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಗಡಿ ದಾಟುತ್ತಿದ್ದ ಐವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.

    ಭಾರತೀಯ ಸೇನೆಯ ಸಿಬ್ಬಂದಿಗಳ ಒಂದು ತಂಡ, ಕೇಂದ್ರ ರಿಸರ್ವ್ ಪೊಲೀಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಗುರುವಾರ ಕಾರ್ಡಿನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದರು. ಶುಕ್ರವಾರದ ತನಕ ಗುಂಡಿನ ಚಕಮಕಿ ಕೊನೆಗೆ ಒಂದು ಎನ್‍ಕೌಂಟರ್ ಆಗಿ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದಾರೆ.

    ಗುರುವಾರ ಇಬ್ಬರು ಉಗ್ರರನ್ನು ಕೊಲ್ಲಲಾಗಿದ್ದು, ಇನ್ನುಳಿದ ಮೂವರು ಮಂದಿ ಉಗ್ರರನ್ನು ಶುಕ್ರವಾರ ಹತ್ಯೆ ಮಾಡಲಾಗಿದೆ. ಹತ್ಯೆಗೊಳಗಾದವರೆಲ್ಲರೂ ಉಗ್ರರು ಎಂದು ಗುರುತಿಸಲಾಗಿದೆ ಅಂತಾ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

    ಈ ಘಟನೆಯ ಹಿನ್ನೆಲೆ ಇತ್ತೀಚೆಗೆ ಹಿಜ್ಬುಲ್ ಮುಜಾಹಿದೀನ್ ತಂಡದಿಂದ ಮುಸ್ಲಿಂ ಪೊಲೀಸ್ ಅಧಿಕಾರಿಗಳು ರಾಜಿನಾಮೆ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಬಂದಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ 6 ಎಸ್‍ಪಿಓ ಅಧಿಕಾರಿಗಳು ರಾಜಿನಾಮೆ ನೀಡಿದ್ದಾರೆ ಎಂಬ ಮಾಹಿತಿ ಕೇಳಿ ಬರುತ್ತಿತ್ತು. ಆದ್ರೆ ಈ ವದಂತಿಯನ್ನು ಕೇಂದ್ರ ಗೃಹ ಇಲಾಖೆ ನಿರಾಕರಿಸಿದೆ.

    ಉಗ್ರರಿಂದ ಹತ್ಯೆಗೊಳಗಾದ ಮೂವರು ಪೊಲೀಸ್ ಅಧಿಕಾರಿಗಳಾದ ಜವಾನ್ಸ್ ನಿಸಾರ್ ಅಹಮ್ಮದ್, ಫಿರ್ದೋಸ್ಸ್ ಕುಚಾಯ್ ಹಾಗೂ ಕುಲ್ವಾನ್ಟ್ ಸಿಂಗ್ ಅವರಿಗೆ ಗೌರವವನ್ನು ಸಲ್ಲಿಸುತ್ತೇವೆ. ಇನ್ನೂ ಮುಂದೆ ಈ ಅಮಾನವೀಯ ಕೃತ್ಯವನ್ನು ಖಂಡಿಸಿ ಅಪರಾಧಿಗಳನ್ನು ಕಾನೂನಿನ ಪ್ರಕಾರ ಸೆದೆಬಡಿಯುತ್ತೇವೆ ಎಂದು ಕಾಶ್ಮೀರದ ಪೊಲೀಸ್ ಪಡೆ ಟ್ವೀಟ್ ಮಾಡಿದೆ.

    ಬಹುಕಾಲದ ನಂತರ ಪಾಕ್-ಭಾರತದ ಚರ್ಚಿಗೆ ಅವಕಾಶ ಸಿಕ್ಕಿತ್ತು. ಆದರೆ ಇದೀಗ ಈ ನೀಚ ಕೃತ್ಯವೆಸಗಿದ್ದರಿಂದ ಪಾಕ್‍ನೊಂದಿಗೆ ದೀರ್ಘ ಗಂಟೆಯ ಚರ್ಚೆಯನ್ನು ಭಾರತ ರದ್ದು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು

    ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು

    ಶ್ರೀನಗರ: “ನೀವು ಬೇಕಿದ್ದರೆ ನನ್ನನ್ನು ಗುಂಡಿಕ್ಕಿ ಕೊಂದು ಬಿಡಿ. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ಬಹಿರಂಗ ಪಡಿಸುವುದಿಲ್ಲ”. ಇದು ಉಗ್ರರ ಗುಂಡೇಟಿಗೆ ಬಲಿಯಾದ ಲ್ಯಾನ್ಸ್ ನಾಯಕ್ ಮುಕ್ತಾರ್ ಅಹ್ಮದ್ ಮಲ್ಲಿಕ್ ಅವರ ಕೊನೆಯ ಮಾತು.

    ಮುಕ್ತಾರ್ ಅವರ ಮಗ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಗ ನಾಲ್ಕು ದಿನದ ಬಳಿಕ ಸೆಪ್ಟೆಂಬರ್ 15 ರಂದು ಮೃತಪಟ್ಟಿದ್ದರು.

    ಮಗ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಕ್ತಾರ್ ಅಹ್ಮದ್ ಕುಲ್ಗಾಂಗೆ ಬಂದಿದ್ದರು. ಸೋಮವಾರ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಸಿದ್ಧತೆ ನಡೆಸುತ್ತಿದ್ದಾಗ ಪತ್ರಕರ್ತರ ವೇಷವನ್ನು ಧರಿಸಿ ಮೂವರು ಉಗ್ರರು ಮನೆಯನ್ನು ಪ್ರವೇಶಿಸಿದ್ದಾರೆ.

    ಮಗನ ಅಂತ್ಯಸಂಸ್ಕಾರ ನಡೆಸುತ್ತಿದ್ದಾಗ ಉಗ್ರರು ತಮ್ಮ ನಿಜ ರೂಪವನ್ನು ತೋರಿಸಿ ಸೇನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಮಾಹಿತಿ ನೀಡುವಂತೆ ಮಲ್ಲಿಕ್ ಅವರನ್ನು ಬಲವಂತ ಪಡಿಸಿದ್ದಾರೆ. ಆದರೆ ಮಲ್ಲಿಕ್ ಅವರು, ನೀವು ಬೇಕಾದರೆ ನನ್ನನ್ನು ಗುಂಡಿಟ್ಟು ಹತ್ಯೆ ಮಾಡಬಹುದು. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ನೀಡುವುದಿಲ್ಲ ಎಂದು ಖಂಡತುಂಡವಾಗಿ ಹೇಳಿದ್ದಾರೆ. ನಿರೀಕ್ಷೆ ಮಾಡದ ಉತ್ತರ ಬಂದ ಹಿನ್ನೆಲೆಯಲ್ಲಿ ಮೂವರು ಉಗ್ರರು ಮಲ್ಲಿಕ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು.

    ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಮರ್ ಮಜೀದ್, ಓವೈಸಿ ರಾಜಾ, ಜಾವೀದ್ ಭಟ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು ಅವರ ಶೋಧ ಕಾರ್ಯ ಆರಂಭಗೊಂಡಿದೆ.

    ಭಾರತೀಯ ಸೇನೆ ಉಗ್ರರ ಕಾರ್ಯಯೋಜನೆಗಳನ್ನು ವಿಫಲ ಮಾಡುತ್ತಿರುವ ಹಿನ್ನೆಲೆಯಲ್ಲಿ ಉಗ್ರರು ಈಗ ಕಾಶ್ಮೀರದ ಸೈನಿಕರ ಕುಟುಂಬಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಕಾಶ್ಮೀರದ ಸೈನಿಕರನ್ನು ಹತ್ಯೆ ಮಾಡಲು ಮುಂದಾಗುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv