Tag: Military School

  • ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್

    ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್

    ನವದೆಹಲಿ: ಹೆಣ್ಣು ಮಕ್ಕಳು ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

    ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

    Indian Army orders inquiry into alleged harassment of woman officer in  Punjab - India News

    ‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ. ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    147 More Women Officers Granted Permanent Commission, Results of Some  Withheld: Indian Army

    ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು. ಸೈನಿಕ ಶಾಲೆಗಳಲ್ಲಿ ರಕ್ಷೆ ಮತ್ತು ಶಿಕ್ಷೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶಿಸಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

  • 159 ಕೋಟಿ ವೆಚ್ಚ – ಈ ವರ್ಷವೇ ರಾಯಣ್ಣ ಸೈನಿಕ ಶಾಲೆ ಪ್ರಾರಂಭ

    ಬೆಂಗಳೂರು: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಕನಕ ಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿರುವ ಕನಕದಾಸ ಪ್ರತಿಮೆಗೆ ಮಲಾರ್ಪಣೆ ಮಾಡಿ ಮಾತನಾಡಿದ ಅವರು, ಕನಕದಾಸರ ದಾಸ ಶ್ರೇಷ್ಠರು ಅವರು ಮೊದಲು ರಾಜ ಆಗಿದ್ದರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ಕೊಟ್ಟ ತತ್ವಜ್ಞಾನಿ. ವಿಶ್ವಮಾನ ಕಲ್ಪನೆ ಸಾರಿದವರು, ಸತ್ಯವನ್ನು ಹೇಳಿದವರು. ಕನಕದಾಸರು ಶಿಗ್ಗಾಂವ ತಾಲೂಕಿನಲ್ಲಿ ಜನಿಸಿದರು. ಇವರ ಕರ್ಮ ಭೂಮಿ ಕಾಗಿನೆಲೆಯಾಗಿದೆ. ರಾಜ್ಯಾದ್ಯಂತ ದಾಸರ ಪದಗಳನ್ನು ಹಾಡುತ್ತಾ ಜನರಿಗೆ ಜೀವದ ದಾರಿ ತೋರಿಸಿದವರು. ಕುಲ ಕುಲ ಎಂದು ಬಡೆದಾಡದಿರಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ: ಸಿದ್ದರಾಮಯ್ಯ

    ಅವರ ತತ್ವ ಆದರ್ಶಗಳು ಇವತ್ತಿಗೂ ಪ್ರಸ್ತುತವಾಗಿದೆ. ಅವರ ವಿಚಾರಗಳನ್ನು ಇಟ್ಟುಕೊಂಡು ಬಾಡಗ್ರಾಮದಲ್ಲಿ ಕನಕದಾಸರ ಅರಮನೆ ನಿರ್ಮಾಣ ಮಾಡಲಾಗಿದೆ. ಕಾಗಿನೆಲೆಯಲ್ಲಿ ಸ್ಮಾರಕವನ್ನು ಕೂಡ ಮಾಡಿದ್ದೇವೆ. ಕನಕದಾಸರ ತ್ರಿಪದಿಗಳು, ದಾಸರ ಪದಗಳು ಆದರ್ಶ, ಸಂಕಲ್ಪವಾಗುವ ದಿನವಾಗಿದೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಕ್ಕಟ್ಟು – ಕಾಂಗ್ರೆಸ್‍ನಿಂದ ಟಿಕೆಟ್ ಘೋಷಣೆ ವಿಳಂಬ

    ಅದೇ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಸಮಾಧಿ ಅಭಿವೃದ್ಧಿ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ. ಯುವಕರಿಗಾಗಿ ಆದರ್ಶಪ್ರಾಯ ಮತ್ತು ಶಿಸ್ತಿನ ಶಾಲೆ ಮಾಡುತ್ತಿದ್ದೇವೆ. ಈ ಬಗ್ಗೆ ಕೇಂದ್ರದ ರಾಜನಾಥ್ ಸಿಂಗ್ ಅವರ ಜೊತೆಗೆ ಮಾತನಾಡಿದ್ದೇನೆ. ಜೊತೆಗೆ ಪತ್ರನೂ ಬರೆದಿದ್ದೇನೆ. ಸೈನಿಕ ಶಾಲೆ ಪೂರ್ಣವಾದ ಮೇಲೆ ಕೇಂದ್ರ ರಕ್ಷಣಾ ಇಲಾಖೆ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಕೆಲಸ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ ತಿಳಿಸಿದರು.

  • ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

    ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

    ಬೆಳಗಾವಿ: ಕೆಲವೇ ದಿನಗಳಲ್ಲಿ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಲೋಕಾರ್ಪಣೆಗೊಳ್ಳಲಿದೆ. ಈ ಶಾಲೆಯಲ್ಲಿ ಸಂಗೊಳ್ಳಿ ರಾಯಣ್ಣನನಂತಹ ಸೈನಿಕರನ್ನು ರಾಷ್ಟ್ರದ ರಕ್ಷಣೆಗಾಗಿ ತಯಾರು ಮಾಡುತ್ತೇವೆ ಎಂದು ಜಲಸಂಪನ್ಮೂಲ ಇಲಾಖೆ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯ ಬಸವರಾಜ್ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು. ಇದನ್ನೂ ಓದಿ: ಹುತಾತ್ಮ ಸೋನಿಯಾ ಗಾಂಧಿ – ಭಾಷಣ ವೇಳೆ ಡಿಕೆಶಿ ಯಡವಟ್ಟು

    ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಮಾಡುವುದರ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಹೆಸರಿನಲ್ಲಿ ಸಂಗೊಳ್ಳಿಯಲ್ಲಿ ಒಂದು ಸೈನಿಕ ಶಾಲೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಅದು ಕೆಲವೇ ದಿನಗಳಲ್ಲಿ ಲೋಕಾರ್ಪಣೆ ಆಗಲಿದೆ. ಮಹನೀಯರ ಹೆಸರಿನಲ್ಲಿ ಕೇವಲ ಸಮುದಾಯ ಭವನ ಕಟ್ಟುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ದೇಶದ ಮಹನೀಯರ ಹೆಸರಿನಲ್ಲಿ ಶಾಲೆಗಳನ್ನು ತೆರೆಯುವ ಮೂಲಕ ಅವರನ್ನು ಜೀವಂತವಾಗಿ ಇಡುವ ಕೆಲಸ ಮಾಡಬೇಕು ಎಂದು ತಮ್ಮ ಅಭಿಪ್ರಾಯಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಬೆನಕೆ, ಡಿಸಿ ಮಹಾಂತೇಶ್ ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ, ಜಿಲ್ಲಾ ಪಂಚಾಯತಿ ಸಿಇಓ ದರ್ಶನ್, ಅಶೋಕ್ ಸದಲಗೆ, ವಿಶೇಷ ಉಪನ್ಯಾಸಕ ನೀಡಿದ ಮಹೇಶ್ ಚನ್ನಂಗಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

  • ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆ – ಅಧಿಕಾರಿಗಳ ಯಡವಟ್ಟು ವಿದ್ಯಾರ್ಥಿಗಳ ಭವಿಷ್ಯಕ್ಕೆ ತಣ್ಣೀರು

    ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆ – ಅಧಿಕಾರಿಗಳ ಯಡವಟ್ಟು ವಿದ್ಯಾರ್ಥಿಗಳ ಭವಿಷ್ಯಕ್ಕೆ ತಣ್ಣೀರು

    -ಒಎಂಆರ್ ಶೀಟ್, ಪ್ರಶ್ನೆಪತ್ರಿಕೆ ಅದಲು ಬದಲು
    – ಜಿಲ್ಲಾಡಳಿತದೊಂದಿಗೆ ಪೋಷಕರ ಗಲಾಟೆ

    ಚಿತ್ರದುರ್ಗ: ಕನ್ನಡ ಹಾಗು ಆಂಗ್ಲ ಮಾಧ್ಯಮದ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟನ್ನು ಪರೀಕ್ಷಾ ವೀಕ್ಷಕರು ಅದಲು ಬದಲು ಮಾಡಿ ವಿದ್ಯಾರ್ಥಿಗಳಿಗೆ ನೀಡಿರುವ ಪರಿಣಾಮ ಕೇಂದ್ರ ಸರ್ಕಾರದ ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತಣ್ಣೀರು ಹಾಕಿದಂತಾಗಿದೆ.

    ಚಿತ್ರದುರ್ಗದ ಬಾಪೂಜಿ ಪರೀಕ್ಷಾ ಕೇಂದ್ರದಲ್ಲಿ ಇಂದು ಎನ್‍ಡಿಎ ಅಡಿಯಲ್ಲಿ ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ದೇಶದ ವಿವಿಧೆಡೆಯಿಂದ ವಿದ್ಯಾರ್ಥಿಗಳು ಅವರ ಪೋಷಕರೊಂದಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಧಾವಿಸಿದ್ದರು. ನಂತರ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಇಕ್ಕಟ್ಟಿಗೆ ಸಿಲುಕುವಂತಾಗಿದೆ.

    ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಆಂಗ್ಲ ಭಾಷೆಯ ಬದಲಾಗಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪತ್ರಿಕೆ, ಓಎಂಆರ್ ಶೀಟ್ ಹಾಗೂ ಕನ್ನಡ ಮಾದ್ಯಮದವರಿಗೆ ಆಂಗ್ಲ ಭಾಷೆಯ ಪ್ರಶ್ನೆ ಪತ್ರಿಕೆ, ಓಎಂಆರ್ ಶೀಟ್ ನೀಡಿ ಪರೀಕ್ಷೆ ಬರೆಸಿದ್ದಾರೆ. ಪರೀಕ್ಷೆ ಆರಂಭವಾಗಿ ಒಂದು ಗಂಟೆಯ ಬಳಿಕ ಎಚ್ಚೆತ್ತು ಮತ್ತೆ ಉತ್ತರಪತ್ರಿಕೆಯನ್ನು ಅದಲು, ಬದಲು ಮಾಡಿ ಬರೆಸಿದ್ದಾರೆ. ಇದರಿಂದಾಗಿ ವರ್ಷವಿಡಿ ಸೈನಿಕ ಶಾಲೆ ಸೇರಲು ತಯಾರಿ ನಡೆಸಿ ಅಂತಿಮವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲು ಸಹ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ.

    ಪರೀಕ್ಷಾ ಕೇಂದ್ರದಲ್ಲಿ ಅಧಿಕಾರಿಗಳ ಅಚಾತುರ್ಯವೇ ಎಡವಟ್ಟಿಗೆ ಕಾರಣವೆಂದು ವಿದ್ಯಾರ್ಥಿಗಳ ಪೋಷಕರು ಜಿಲ್ಲಾಡಳಿತದ ನಿರ್ಲಕ್ಷ್ಯ ವಿರುದ್ಧ ಕಿಡಿ ಕಾರುತ್ತಿದ್ದು, ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಬದಲಾವಣೆ ಹೇಗಾಯಿತು ಎಂದು ಅಧಿಕಾರಿಗಳ ಬಳಿ ಪ್ರಶ್ನೆ ಎತ್ತಿದ್ದಾರೆ.

    ಅಧಿಕಾರಿಗಳ ಈ ಅಚಾತುರ್ಯದಿಂದಾಗಿ 400 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಬದಲಿ ಓಎಂಆರ್ ಶೀಟ್ ನೀಡಲಾಗಿದೆ. ಹೀಗಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಬದಲಿ ಪರೀಕ್ಷೆ ನೀಡಬೇಕೆಂಬ ಆಗ್ರಹಿಸಿದ್ದಾರೆ.

    ಪರೀಕ್ಷೆಗೆಂದು ಬಂದಿದ್ದ ವಿದ್ಯಾರ್ಥಿಗಳು ಒಂದು ತಿಂಗಳಿಗೆ ಸುಮಾರು ಐದಾರು ಸಾವಿರ ರೂಪಾಯಿ ಖರ್ಚು ಮಾಡಿಕೊಂಡು ತರಬೇತಿ ಪಡೆದು ಪರೀಕ್ಷೆಗೆ ಧಾವಿಸಿದ್ದ ವಿದ್ಯಾರ್ಥಿಗಳ ಮುಂದಿನ ಗತಿ ಏನೆಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳ ಜೊತೆ ವಿದ್ಯಾರ್ಥಿಗಳು ಮತ್ತು ಪೋಷಕರು ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ಚಿತ್ರದುರ್ಗ ನಗರ ಠಾಣೆ ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದರು.