Tag: milk powder

  • ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 18.14 ಲಕ್ಷ ಮೌಲ್ಯದ ಕ್ಷೀರ ಭಾಗ್ಯ ಹಾಲಿನ ಪುಡಿ ಜಪ್ತಿ

    ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 18.14 ಲಕ್ಷ ಮೌಲ್ಯದ ಕ್ಷೀರ ಭಾಗ್ಯ ಹಾಲಿನ ಪುಡಿ ಜಪ್ತಿ

    ಬಾಗಲಕೋಟೆ: ಅಕ್ರಮವಾಗಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು (Milk Powder) ಸಂಗ್ರಹಿಸಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಘಟನೆ ಬಾದಾಮಿ (Badami) ತಾಲೂಕಿನ ಸೂಳಿಕೇರಿ ಬಳಿ ನಡೆದಿದೆ.

    ಬಾಗಲಕೋಟೆ (Bagalkot) ಸಿಇಎನ್ ಪೊಲೀಸರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಹಾಲಿನ ಪುಡಿ ಪ್ಯಾಕೆಟ್ ಜೊತೆಗೆ ರಾಗಿಹಿಟ್ಟು, ಅಡುಗೆ ಎಣ್ಣೆಯ ಜೊತೆ ಬೊಲೆರೋ ವಾಹನವನ್ನು ಜಪ್ತಿ ಮಾಡಿದ್ದಾರೆ.

    ಸಿದ್ದಪ್ಪ ಕಿತ್ತಲಿ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಸಿದ್ದಪ್ಪನನ್ನು ಬಂಧಿಸಿದ ಸಿಇಎನ್ ಪೊಲೀಸರು ಈಗ ವಿಚಾರಣೆ ನಡೆಸುತ್ತಿದ್ದಾರೆ. ಸಿದ್ದಪ್ಪ ಕಿತ್ತಲಿ ಮೂಲತಃ ಸೂಳಿಕೇರಿ ಗ್ರಾಮದವನಾಗಿದ್ದು, ಹುನಗುಂದ ಹಾಗೂ ಬಾದಾಮಿ ತಾಲೂಕಿನ ಶಾಲೆಗಳಿಗೆ ಹಾಲಿನ ಪೌಡರ್ ಸರಬರಾಜು ಮಾಡುವ ಸಬ್ ಲೀಸ್‌ದಾರನಾಗಿದ್ದ.  ಇದನ್ನೂ ಓದಿ: ಮಿಸ್ಟರ್‌ 360 ಮೇಲೆ ಆರ್‌ಸಿಬಿ ಕಣ್ಣು – ಈ ಸಲ ಕಪ್‌ ನಮ್ಮದಾಗುತ್ತಾ ಅಂತಿದ್ದಾರೆ ಫ್ಯಾನ್ಸ್‌?

    ದಾಸ್ತಾನುಗಳನ್ನ ಶಾಲೆಗಳಿಗೆ ಸರಿಯಾಗಿ ಸರಬರಾಜು ಮಾಡದೇ, ವಂಚಿಸಿ ತನ್ನ ಮನೆ ಎದುರುಗಡೆ ಇರುವ ಶೆಡ್‌ನಲ್ಲಿ ಹಾಲಿನ ಪೌಡರ್, ಅಡುಗೆ ಎಣ್ಣೆ, ರಾಗಿಹಿಟ್ಟು ಸಂಗ್ರಹ ಮಾಡಿ ಇಟ್ಟಿದ್ದ.

    ಒಟ್ಟು 18.14 ಲಕ್ಷ ರೂ. ಮೌಲ್ಯದ ಹಾಲಿನ ಪುಡಿ, ರಾಗಿ ಹಿಟ್ಟು, ಅಡುಗೆ ಎಣ್ಣೆ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಸಿದ್ದಪ್ಪ, ಮಹಾಲಿಂಗಪುರದ ಮೂಲ ಲೀಸ್‌ದಾರ ಶ್ರೀಶೈಲ ಅಂಗಡಿ ಎನ್ನುವ ವ್ಯಕ್ತಿಯಿಂದ ಸರಬರಾಜು ಮಾಡಲು ಸಬ್ ಲೀಸ್‌ ಪಡೆದಿದ್ದ.

    4,474 ಕೆಜಿ ಕೆಜಿ ಹಾಲಿನ ಪುಡಿ ಪಾಕೆಟ್‌,  325 ಕೆಜಿ ರಾಗಿ ಹಿಟ್ಟು, 50 ಕೆಜಿ ಅಡುಗೆ ಎಣ್ಣೆ ಸಂಗ್ರಹಿಸಿ ಒಂದು ಬೊಲೆರೋ ವಾಹನದಲ್ಲಿ ಮಹಾರಾಷ್ಟ್ರಕ್ಕೆ ಸಾಗಿಸಲು ಯತ್ನಿಸಿದ್ದ.

     

  • ಮಕ್ಕಳಿಗೆ ನೀಡಬೇಕಿದ್ದ ಹಾಲಿನ ಪುಡಿಯನ್ನು ಹೂತಿಟ್ಟ ಶಿಕ್ಷಕರು!

    ಮಕ್ಕಳಿಗೆ ನೀಡಬೇಕಿದ್ದ ಹಾಲಿನ ಪುಡಿಯನ್ನು ಹೂತಿಟ್ಟ ಶಿಕ್ಷಕರು!

    ರಾಯಚೂರು: ಮಕ್ಕಳಿಗೆ ನೀಡಬೇಕಾದ ಹಾಲಿನ ಪುಡಿಯನ್ನು ಪ್ರೌಢ ಶಾಲಾ ಆವರಣದಲ್ಲಿ ಶಿಕ್ಷಕರು ಹೂತಿಟ್ಟ ಘಟನೆ ಜಿಲ್ಲೆಯ ಲಿಂಗಸುಗೂರಿನ ಯರಡೋಣಾ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಸರ್ಕಾರದಿಂದ ಮಕ್ಕಳಿಗೆ ನೀಡುವ ಹಾಲಿನ ಪುಡಿಯನ್ನ ಯರಡೋಣಾ ಗ್ರಾಮದ ಪ್ರೌಢ ಶಾಲೆಯ ಆವರಣದಲ್ಲಿ ಗುಂಡಿ ತೆಗೆದು ಅಲ್ಲಿನ ಶಿಕ್ಷಕರು ಹೂತಿಟ್ಟಿದ್ದಾರೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರದಿಂದ ಶಾಲಾ ಮಕ್ಕಳಿಗೆ ಬರುವ ದಾಸ್ತಾನುಗಳ ಚೀಲದಲ್ಲೆ ಹಾಲಿನ ಪುಡಿಯನ್ನ ತುಂಬಿ ಹೂತಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಮಕ್ಕಳಿಗೆ ನೀಡುವ ಇನ್ನಿತರ ದಾಸ್ತಾನುಗಳನ್ನೂ ಕೂಡ ಶಿಕ್ಷಕರು ನೆಲದಲ್ಲಿ ಹೂತಿಟ್ಟಿದ್ದಾರೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.

    ಯರಡೋಣಾ ಪ್ರೌಢ ಶಾಲೆಯಲ್ಲಿ ಒಟ್ಟು 290 ವಿದ್ಯಾರ್ಥಿಗಳು ಇದ್ದಾರೆ. ಆದರೆ ಇಲ್ಲಿನ ಶಿಕ್ಷಕರು ಮಕ್ಕಳಿಗೆ ನೀಡಬೇಕಾದ ಹಾಲಿನ ಪುಡಿಯನ್ನು ಮಣ್ಣಿಗೆ ಹಾಕಿ ಹಾಳು ಮಾಡಿದ್ದಾರೆ. ಕೆಲವು ದಿನಗಳಿಂದ ಶಾಲಾ ಆವರಣದಲ್ಲಿ ದುರ್ನಾತ ಬರುತ್ತಿತ್ತು. ಆದ್ದರಿಂದ ಗ್ರಾಮಸ್ಥರು ಶಾಲಾ ಶಿಕ್ಷಕರಿಗೆ ತಿಳಿಸಿದದ್ರೂ ತಲೆಕೆಡಿಸಿಕೊಂಡಿರಲಿಲ್ಲ. ಕೊನೆಗೆ ದುರ್ವಾಸನೆ ತಾಳಲಾರದೆ ಗ್ರಾಮಸ್ಥರೇ ಶಾಲಾ ಆವರಣದಲ್ಲಿ ಗುಂಡಿ ಅಗೆದು ನೋಡಿದಾಗ ಹಾಲಿನ ಪುಡಿಯನ್ನು ಹೂತಿಟ್ಟ ಸತ್ಯಾಂಶ ಬಯಲಿಗೆ ಬಂದಿದೆ.

    ಇದನ್ನು ಕಂಡು ಗ್ರಾಮಸ್ಥರ ಕೋಪ ನೆತ್ತಿಗೇರಿದೆ. ಸರ್ಕಾರ ಮಕ್ಕಳಿಗೆ ಕೊಟ್ಟ ಪದಾರ್ಥವನ್ನು ಶಿಕ್ಷಕರು ಮೂರ್ಖರಂತೆ ಹೂತಿಟ್ಟಿದ್ದಾರೆ. ಈ ಮೂಲಕ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ ಅಂತ ಶಿಕ್ಷಕರ ವಿರುದ್ಧ ಕಿಡಿಕಾರಿದ್ದಾರೆ. ಹೀಗೆ ತಪ್ಪು ಮಾಡಿರುವ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶಿಕ್ಷಕರು ಯಾಕೆ ಹೀಗೆ ಮಾಡಿದ್ದಾರೆ ಅಂತ ಯಾರಿಗೂ ತಿಳಿದಿಲ್ಲ. ಆದ್ರೆ ಪಾಠ ಕಲಿಸಬೇಕಾದ ಶಿಕ್ಷಕರೇ ಈ ರೀತಿ ಮಾಡಿದರೆ ಮಕ್ಕಳಿಗೆ ಇನ್ನೇನು ಕಲಿಸುತ್ತಾರೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv