Tag: Milk price

  • ಇಂದಿನಿಂದ ಹಾಲಿನ ದರ ಏರಿಕೆ – ಬೆಳಗ್ಗೆ ಸಪ್ಲೈ ಆದ ಹಾಲಿನಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ

    ಇಂದಿನಿಂದ ಹಾಲಿನ ದರ ಏರಿಕೆ – ಬೆಳಗ್ಗೆ ಸಪ್ಲೈ ಆದ ಹಾಲಿನಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ

    – ಮಧ್ಯಾಹ್ನ ಸಪ್ಲೈ ಆಗೋ ಹಾಲಿನ ಪ್ಯಾಕೆಟ್‌ನಲ್ಲಿ ಪರಿಷ್ಕೃತ ದರ ಸಾಧ್ಯತೆ

    ಬೆಂಗಳೂರು: ಇಂದಿನಿಂದ ಹಾಲಿನ ದರ (Nandini Milk) ಏರಿಕೆಯಾಗಲಿದೆ. ಆದರೆ, ಮಂಗಳವಾರ ಬೆಳಗ್ಗೆ ಸಪ್ಲೈ ಆದ ಹಾಲಿನಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ.

    ಬೆಳಗ್ಗೆ ಸರಬರಾಜಾಗಿರುವ ಹಾಲನ್ನು ಹಳೇ ದರದಲ್ಲೇ ಮಾರಾಟ ಮಾಡಲಾಗಿದೆ. ಮಧ್ಯಾಹ್ನ ಸಪ್ಲೈ ಅಗುವ ಹಾಲಿನ ಪ್ಯಾಕೆಟ್‌ನಲ್ಲಿ ಪರಿಷ್ಕೃತ ದರ ಜಾರಿ ಆಗಲಿದೆ. ಇದನ್ನೂ ಓದಿ: ನಾಳೆಯಿಂದ ದುನಿಯಾ ದುಬಾರಿ – ಹಾಲು, ಮೊಸರು ದುಬಾರಿ.. ಕಸಕ್ಕೂ ಕಾಸು, ಯಾವುದಕ್ಕೆ ಎಷ್ಟು ದರ ಹೆಚ್ಚಳ?

    ನಿನ್ನೆ ಹಳೇ ದರಕ್ಕೆ ಪ್ರಿಂಟ್ ಮಾಡಿ ಹಾಲನ್ನ ನಂದಿನಿ ಬೂತ್‌ಗಳಿಗೆ ಸಪ್ಲೈ ಮಾಡಲಾಗಿದೆ. ಮಧ್ಯಾಹ್ನ ಬರುವ ಹಾಲಿನಲ್ಲಿ ಏರಿಕೆ ಆಗಿರುವ ದರ ಜಾರಿಯಾಗಲಿದೆ. ಏನೇ ಆದರೂ ಹಾಲಿನ ದರ ಏರಿಕೆಯಿಂದ ಸಾರ್ವಜನಿಕರಿಗೆ ಭಾರೀ ಸಮಸ್ಯೆ ಆಗಲಿದೆ.

    ಮಧ್ಯಾಹ್ನದಿಂದ ಪರಿಷ್ಕೃತ ಹಾಲಿನ ದರ ಜಾರಿಯಾಗಲಿದೆ. ಹಾಲು ಎಷ್ಟು ರೇಟ್ ಆಗಿದೆ ಅಂತಾ ಜನ ಕೇಳಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಒಂದು ದಿನಕ್ಕೆ ಎರಡು ಬಾರಿ ನಂದಿನಿ ಬೂತ್‌ಗಳಿಗೆ ಮತ್ತು ಅಂಗಡಿಗಳಿಗೆ ಹಾಲು ಸಪ್ಲೈ ಆಗಲಿದೆ. ಇದನ್ನೂ ಓದಿ: ದರ ಏರಿಕೆ ಜೊತೆಗೆ ಹೆಚ್ಚುವರಿ ಹಾಲು ಕಡಿತ?

    ಬೆಳಗ್ಗೆ ಬಂದಿರುವ ಹಾಲಿನ ಪ್ಯಾಕೆಟ್‌ಗಳಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ. ಮಧ್ಯಾಹ್ನ ಬರುವ ಹಾಲಿನ ಪ್ಯಾಕೆಟ್‌ನಲ್ಲಿ ಪರಿಷ್ಕೃತ ದರ ಮುದ್ರಣ ಆಗಲಿದೆ.

  • ನಾಳೆಯಿಂದ ದುನಿಯಾ ದುಬಾರಿ – ಹಾಲು, ಮೊಸರು ದುಬಾರಿ.. ಕಸಕ್ಕೂ ಕಾಸು, ಯಾವುದಕ್ಕೆ ಎಷ್ಟು ದರ ಹೆಚ್ಚಳ?

    ನಾಳೆಯಿಂದ ದುನಿಯಾ ದುಬಾರಿ – ಹಾಲು, ಮೊಸರು ದುಬಾರಿ.. ಕಸಕ್ಕೂ ಕಾಸು, ಯಾವುದಕ್ಕೆ ಎಷ್ಟು ದರ ಹೆಚ್ಚಳ?

    ಬೆಂಗಳೂರು: ಗ್ಯಾರಂಟಿಗಳ (Congress Guarantee) ಭಾರದ ಮಧ್ಯೆ ರಾಜ್ಯದ ಜನತೆಗೆ ಬಸ್, ಮೆಟ್ರೋ ಬಳಿಕ ಹಾಲು, ಮೊಸರು, ವಿದ್ಯುತ್‌ ದರ ದುಬಾರಿಯಾಗಲಿದೆ. ಅಷ್ಟೇ ಅಲ್ಲದೇ ಏಪ್ರಿಲ್‌ 1ರಿಂದ ಕಸಕ್ಕೂ ಸೆಸ್ ಕಟ್ಬೇಕಿದೆ.

    ಇಂಧನ ಇಲಾಖೆ ನೌಕರರ ಪಿಂಚಣಿ ಗ್ರಾಚ್ಯೂಟಿಗಾಗಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಿದ್ದ ಸರ್ಕಾರ ಅದೇ ಮಾದರಿಯಲ್ಲಿ ಹಾಲಿನ ದರ (Milk Price) ಹೆಚ್ಚಿಸಿ ರೈತರಿಗೆ ಪ್ರೋತ್ಸಾಹ ಧನ ಕೊಡಲು ಹೊರಟಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ನಂದಿನಿ ಹಾಲು-ಮೊಸರಿನ ಬೆಲೆಯನ್ನು ನಾಲ್ಕು ರೂಪಾಯಿ ಹೆಚ್ಚಿಸಿದೆ. ಹೀಗಾಗಿ ಪ್ರಸಕ್ತ ವರ್ಷ ಏಪ್ರಿಲ್‌ 1ರಿಂದ ದುನಿಯಾ ಮತ್ತಷ್ಟು ದುಬಾರಿಯಾಗಲಿದೆ.

    ಯಾವುದೆಲ್ಲಾ ಏರಿಕೆ?
    ಹಾಲು: ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳ

    ಮೊಸರು: ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್‌ನಲ್ಲಿ ಕಾಫಿ, ಟೀ ಸದ್ಯದಲ್ಲೇ ಏರಿಕೆ ಸಾಧ್ಯತೆಯಿದೆ.

    ವಿದ್ಯುತ್‌: ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ, ಅಲ್ಲದೇ ಮಾಸಿಕ ಶುಲ್ಕ 20 ರೂ. ಹೆಚ್ಚಳ, ಇದರಿಂದ 120 ರೂ. ಇದ್ದ ನಿಗದಿತ ಶುಲ್ಕ 140 ರೂ.ಗಳಿಗೆ ಏರಿಕೆಯಾಗಿದೆ.

    ಕಸ ಸಂಗ್ರಹ ಸೆಸ್ (ಮಾಸಿಕ)
    ವಸತಿ ಕಟ್ಟಡ:
    600 ಚದರಡಿವರೆಗೆ – 10 ರೂ., 601-1000 ಚದರಡಿ – 50 ರೂ., 1001-2000 ಚದರಡಿ – 100 ರೂ., 2001-3000 ಚದರಡಿ – 150 ರೂ., 3001-4000 ಚದರಡಿ – 200 ರೂ., 4000 ಚದರಡಿ ಮೇಲ್ಪಟ್ಟು – 400 ರೂ.

    ವಾಣಿಜ್ಯ ಕಟ್ಟಡ:
    ನಿತ್ಯ 5ಕೆಜಿವರೆಗೆ – 500 ರೂ. ನಿತ್ಯ 10 ಕೆಜಿವರೆಗೆ – 1400 ರೂ. ನಿತ್ಯ 25 ಕೆಜಿವರೆಗೆ – 3500 ರೂ. ನಿತ್ಯ 50 ಕೆಜಿವರೆಗೆ – 7000 ರೂ., ನಿತ್ಯ 100 ಕೆಜಿವರೆಗೆ – 14000 ರೂ.

    ಹೊಸ ವಾಹನ ಖರೀದಿಗೆ ಹೆಚ್ಚುವರಿ ಸೆಸ್: ಉಕ್ಕು, ಬಿಡಿಭಾಗ ದುಬಾರಿ, ಇದರ ಜೊತೆಗೆ ಬಿಡಿ ಭಾಗ, ಉಕ್ಕುಗಳ ಆಮದು ದರ ಕೂಡ ಏಪ್ರಿಲ್‌ನಿಂದ ಏರಿಕೆಯಾಗುತ್ತಿದೆ. ಇದರ ಪರಿಣಾಮ ಏಪ್ರಿಲ್ 1 ರಿಂದ ವಾಹನ ಬೆಲೆ ದುಬಾರಿಯಾಗುತ್ತಿದೆ.

    ಮುದ್ರಾಂಕ ಶುಲ್ಕ: 50ರೂ.ನಿಂದ 500ರೂ.ಗೆ ಹೆಚ್ಚಳ

    ಅಫಿಡವಿಟ್ ಶುಲ್ಕ: 20 ರೂ.ನಿಂದ 100 ರೂ. ಏರಿಕೆ

    ಮುಂದೆ ಏನೇನು ಏರಿಕೆ?
    ಶೀಘ್ರ ನೀರಿನ ದರ ಏರಿಕೆ:
    ಲೀಟರ್‌ಗೆ ಒಂದು ಪೈಸೆ ಏರಿಕೆ. ಏ.1ರಿಂದ ಜಾರಿ ಆಗುವ ಸಾಧ್ಯತೆಯಿದೆ.

  • ಹಾವೇರಿ ಹಾಲು ಒಕ್ಕೂಟದಿಂದ ಹಾಲಿನ ದರ 3.50 ರೂ. ಇಳಿಕೆ!

    ಹಾವೇರಿ ಹಾಲು ಒಕ್ಕೂಟದಿಂದ ಹಾಲಿನ ದರ 3.50 ರೂ. ಇಳಿಕೆ!

    ಹಾವೇರಿ: ರಾಜ್ಯದಲ್ಲಿ ಸರ್ಕಾರ ಪ್ರತಿ ಲೀಟರ್ ಹಾಲಿಗೆ 4 ರೂ. ಏರಿಕೆ (Milk Price Hike) ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು. ಆದ್ರೆ ಹಾವೇರಿ ಜಿಲ್ಲಾ ಹಾಲು ಒಕ್ಕೂಟ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ಪ್ರತಿ ಲೀಟರ್ ಹಾಲಿನ ದರ 3.50 ರೂ. ಇಳಿಕೆ ಮಾಡಿದೆ.

    ಮಾರ್ಚ್ 28 ರಿಂದ ಆದೇಶವನ್ನ ಜಾರಿಗೆ ಮಾಡಿದೆ. ಏಪ್ರೀಲ್ 1 ರಿಂದ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಿಸಲು ಕೆಎಂಎಫ್ (KMF) ನಿರ್ಧಾರ ಮಾಡಿದೆ. ಆದರೆ ಹಾವೇರಿ ಹಾಲು ಒಕ್ಕೂಟ ಮಾತ್ರ ಲೀಟರ್ ಹಾಲಿಗೆ 3.50 ರೂ.ಪಾಯಿ ಕಡಿಮೆ ಮಾಡಿ ಆದೇಶ ಮಾಡಿದೆ, ಇದು ರೈತರ ಆಕ್ರೋಶ ಕಾರಣವಾಗಿದೆ. ಇದನ್ನೂ ಓದಿ: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

    ಎಮ್ಮೆ ಹಾಲಿಗೆ ಲೀಟರ್‌ಗೆ 43 ರೂ. ನೀಡಲಾಗುತ್ತಿತ್ತು. ಹಸುವಿನ ಹಾಲಿಗೆ 30.50 ರೂಪಾಯಿ ನೀಡಲಾಗ್ತಿತ್ತು. ಆದರೆ ಆರ್ಥಿಕ ನಷ್ಟ ಉಂಟಾಗಿದೆ ಎಂಬ ಕಾರಣ ನೀಡಿ 3.50 ರೂಪಾಯಿ ಕಟ್ ಮಾಡಿದೆ. ಮಾರ್ಚ್ 27ರಂದೇ ಹಾವೆಮುಲ್‌ ಆದೇಶ ಮಾಡಿದೆ. ಇದರಿಂದ 43 ರೂ. ಇದ್ದ ಎಮ್ಮೆ ಹಾಲಿನ ದರ 39.50 ರೂ., 30.50 ರೂ. ಇದ್ದ ಹಸುವಿನ ಹಾಲಿನ ದರ 27 ರೂ.ಗಳಿಗೆ ಇಳಿಕೆಯಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

    ಹಾಲು ಉತ್ಪನ್ನಗಳ ದರ ಕುಸಿತವಾಗಿದೆ. ಹಾಲು ಉತ್ಪಾದಕರಿಗೆ ಹೆಚ್ಚಿನ ದರ ನೀಡಿ ಒಕ್ಕೂಟಕ್ಕೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಒಕ್ಕೂಟದ ಆರ್ಥಿಕ ನಷ್ಟ ಕಡಿಮೆ ಮಾಡಲು ದರ ಕಡಿಮೆ ಮಾಡಲಾಗಿದೆ ಎಂದು ಹಾಲು ಒಕ್ಕೂಟ ನಿರ್ದೇಶಕರು ಆದೇಶ ಮಾಡಿದ್ದಾರೆ. ಆದರೆ ಜಿಲ್ಲೆಯ ಹಾಲು ಉತ್ಪಾದಕ ರೈತರು ಗ್ರಾಹಕರಿಗೆ 4 ಏರಿಕೆ ಮಾಡಿದ್ದಾರೆ. ಮೊದಲು ಕೊಡುವ ದರದಲ್ಲಿ ಇಳಿಕೆ ಮಾಡಿದ್ದು ಯಾವ ನ್ಯಾಯ ನಿಮ್ಮದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್‌ – ಆಡಿಯೋದಲ್ಲಿ ಬಯಲಾಯ್ತು ಸಂಚಿನ ರಹಸ್ಯ

  • ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

    ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

    ಬೆಂಗಳೂರು: ಹಾಲು ಒಕ್ಕೂಟಗಳ (Milk Unions) ದರ ಏರಿಕೆಯ (Milk Price) ಒತ್ತಡಕ್ಕೆ ಮಣಿಯದ ಸಿಎಂ ಸಿದ್ದರಾಮಯ್ಯ (Siddaramaiah), ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಹಾಲಿನ ದರ ಹೆಚ್ಚಳದ ಬಗ್ಗೆ ತೀರ್ಮಾನಿಸುವುದಾಗಿ ನಿರ್ಣಯ ಮಾಡಿದ್ದಾರೆ. ಹಾಲು ದರ ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ, ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

    ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂದು ಸಭೆಯಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ.

    ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ 2%ಕ್ಕಿಂತ ಹೆಚ್ಚಾಗಬಾರದು ಎಂದು ಸಲಹೆ ‌ನೀಡಿದ್ದಾರೆ ಎನ್ನಲಾಗಿದೆ.

    ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಹಾಲು ಒಕ್ಕೂಟಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಹಕಾರ ಸಚಿವ, ಪಶುಸಂಗೋಪನಾ ಸಚಿವರು ಹಾಜರಿದ್ದರು

  • ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಬೆಂಗಳೂರು: ರಾಜ್ಯ ಸರ್ಕಾರ ಉಚಿತ ಗ್ಯಾರಂಟಿಗಳನ್ನ ಘೋಷಿಸಿ ಅದರಲ್ಲಿ ಕೆಲವೊಂದನ್ನ ನೀಡುತ್ತಲೂ ಇದೆ. ಆದ್ರೆ ಯಾವಾಗ ಗ್ಯಾರಂಟಿ ಅನುಷ್ಠಾನಕ್ಕೆ ಬಂತೋ ಆಗಿನಿಂದ ಜನರ ಮೇಲೆ ದರ ಏರಿಕೆಯ ಬರೆ ಹಾಕುತ್ತಲೇ ಇದೆ. ಇದೀಗ ಹಾಲಿನ ದರ ಹೆಚ್ಚಳ (Milk Price Hike) ಮಾಡಲು ಸರ್ಕಾರ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಕರೆದಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದು, ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇವು, ಆಹಾರ, ಕೂಲಿ ಸೇರಿ ಇತರೇ ಖರ್ಚುಗಳು ಹೆಚ್ಚಾಗಿರುವುದರಿಂದ ಪ್ರತಿ ಲೀ. ಹಾಲಿಗೆ 5 ರೂ. ನಂತೆ ದರ ಹೆಚ್ಚಳ ಮಾಡಲು ವಿವಿಧ ಹಾಲು ಒಕ್ಕೂಟಗಳು ಪಶುಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆ ದರ ಹೆಚ್ಚಳ ಪ್ರಸ್ತಾಪವಾಗಿದ್ದು, ಸರ್ಕಾರದ ಅನುಮತಿ ಬಾಕಿಯಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಬೆಮುಲ್‌ನಿಂದ ಬೆಳಗಾವಿ ರೈತರಿಗೆ ಗುಡ್‌ನ್ಯೂಸ್‌ – ಹಸು, ಎಮ್ಮೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ

    ಬೆಮುಲ್‌ನಿಂದ ಬೆಳಗಾವಿ ರೈತರಿಗೆ ಗುಡ್‌ನ್ಯೂಸ್‌ – ಹಸು, ಎಮ್ಮೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ

    ಬೆಳಗಾವಿ: ಜಿಲ್ಲೆಯ ರೈತರಿಗೆ ಬೆಮುಲ್ ಗುಡ್ ನ್ಯೂಸ್ ನೀಡಿದೆ. ಹಾಲಿನ ಪ್ರೋತ್ಸಾಹ ಧನ ಪರಿಷ್ಕ್ರತ ದರವನ್ನು ಬೆಮುಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದ್ದಾರೆ.

    ಎಮ್ಮೆ‌ ಹಾಲಿಗೆ 3.40 ರೂ., ಹಸು ಹಾಲಿಗೆ ರೂ. ಪ್ರೋತ್ಸಾಹ ಹೆಚ್ಚಳ ಮಾಡಲಾಗಿದೆ. ಗೋಕಾಕ್‌ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ಕುರಿತು ತೀರ್ಮಾನ ಪ್ರಕಟಿಸಿದ್ದಾರೆ.

    ದರ ಪರಿಷ್ಕರಣೆಯಿಂದ ಪ್ರಸಕ್ತ ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 41.60 ರೂ. ಇದ್ದು ಈಗ 3.49 ರೂ., 5 ರೂ. ಪ್ರೋತ್ಸಾಹ ದನ ಸೇರಿ ಒಟ್ಟು 50 ರೂ. ರೈತರಿಗೆ ಸಿಗಲಿದೆ. ಅದರಂತೆ ಹಸು ಹಾಲಿನ ದರ ಪ್ರತಿ ಲೀಟರ್‌ಗೆ 29.10 ರೂ. ಇದ್ದು ಈಗ 1 ರೂ. ಮತ್ತು 5 ರೂ. ಪ್ರೋತ್ಸಾಹ ದನ ಸೇರಿ 35 ರೂ. ಸಿಗಲಿದೆ ಎಂದು ಹೇಳಿದ್ದಾರೆ.

    ರೈತರಿಗೆ 10 ದಿನಗಳಲ್ಲಿ ಬಿಲ್ ಪಾವತಿ ಮಾಡಲಾಗುತ್ತಿದೆ.‌ ಇದರಿಂದ ರೈತರಿಗೂ ಗ್ರಾಹಕರಿಗೂ ಅನುಕೂಲವಾಗಲಿದೆ.‌ ಕಳೆದ ವರ್ಷ 68 ಲಕ್ಷ ರೂ. ನಿವ್ವಳ ಲಾಭ ಜಿಲ್ಲಾ‌ ಹಾಲು ಒಕ್ಕೂಟಕ್ಕೆ ಆಗಿತ್ತು. ಪ್ರಸಕ್ತ ಮಾರ್ಚ್ ಅಂತ್ಯದವರೆಗೆ ಲಾಭ ತರಲು ಕೆಲಸ ಮಾಡಲಾಗುತ್ತಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

  • ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬಳಿಕ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದೆ. ಶೀಘ್ರವೇ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಖುದ್ದು ಸುಳಿವು ನೀಡಿದ್ದಾರೆ.

    ಹಾಲಿನ ದರ ಏರಿಕೆ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?

    ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 17 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ನಾಯಿ ಶವ ಪತ್ತೆ

    ಒಟ್ಟಾರೆ ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

  • ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ಹಾಲು – 5 ರೂ. ದರ ಹೆಚ್ಚಳ ಆಗುತ್ತಾ?

    ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ಹಾಲು – 5 ರೂ. ದರ ಹೆಚ್ಚಳ ಆಗುತ್ತಾ?

    – ಹೆಚ್ಚುವರಿ 50 ಎಂಎಲ್ ಹಾಲು ಕಡಿತ

    ಬೆಂಗಳೂರು: ಹಾಲಿನ (Milk) ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ (KMF) ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಬೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ ನಂದಿನಿ ಹಾಲಿನಲ್ಲಿ 50 ಎಂಎಲ್ ಹೆಚ್ಚುವರಿ ನೀಡಿ, 2 ರೂ. ಹೆಚ್ಚಳ ಮಾಡಲಾಗಿತ್ತು. ಈ ಹೆಚ್ಚುವರಿ ಹಾಲು ವಾಪಸ್‍ಗೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸದ್ಯ ನಂದಿನಿ ವಿವಿಧ ಹಾಲಿನ ದರಗಳ ಮಾಹಿತಿ

    50 ಎಂಎಲ್ ಹಾಲು ಕಡಿತಕ್ಕೆ ಕಾರಣವೇನು?
    ಐದು ವರ್ಷದಲ್ಲಿ ಏಕಾಏಕಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಹೀಗಾಗಿ ಕೆಎಂಎಫ್ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ 2 ರೂ. ಹೆಚ್ಚು ಮಾಡಿತ್ತು. ಆದರೆ ಈಗ ಹಾಲಿನ ಉತ್ಪಾದನೆ ಯಥಾಸ್ಥಿತಿಗೆ ಬಂದಿದೆ. ಹೀಗಾಗಿ ಹೆಚ್ಚುವರಿ ಹಾಲು 50 ಎಂಎಲ್‍ನ್ನು ಕಡಿತ ಮಾಡಿ ಈ ಹಿಂದಿನಂತೆ ಸರಬರಾಜು ಮಾಡಲು ನಿರ್ಧಾರ ಮಾಡಲಾಗಿದೆ.

    ಇಡ್ಲಿ ದೋಸೆ ಹಿಟ್ಟು: ಇಂದಿನಿಂದ ಇಡೀ ಬೆಂಗಳೂರು ನಗರದಲ್ಲಿ ಇಡ್ಲಿ ದೋಸೆ ಹಿಟ್ಟು ನೀಡಿದ್ದೇವೆ. ಖಾಸಗಿಯವರು ದೋಸೆ ಹಿಟ್ಟು/ಇಡ್ಲಿ ಹಿಟ್ಟು ಎಷ್ಟು ಮಾರ್ಕೆಟಿಂಗ್ ಮಾಡ್ತಾರೋ ಅದರ 20% ನಷ್ಟು ನಾವು ನೀಡುತ್ತೇವೆ. ಅಂದರೆ 5 ಸಾವಿರ ಮೆಟ್ರಿಕ್ ಟನ್ ನೀಡಲಿದ್ದೇವೆ. 15-20% ನಷ್ಟು ಸದ್ಯಕ್ಕೆ ನೀಡಲಿದ್ದೇವೆ. ಈಗ ಖಾಸಗಿಯವರು 30 ಸಾವಿರ ಮೆಟ್ರಿಕ್ ಟನ್ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.‌

    ಎಲ್ಲರಿಗೂ ಪ್ರೋಟಿನ್ ಬೇಕು. ಹೀಗಾಗಿ ಗುಣಮಟ್ಟದ ಹಿಟ್ಟು ನೀಡುತ್ತೇವೆ. ಇದು ನಂದಿನಿ, ಪಾರ್ಲರ್ ಆನ್‍ಲೈನ್‍ನಲ್ಲಿಯೂ ಸಿಗಲಿದೆ. ಬೆಂಗಳೂರಿನಲ್ಲಿ ಆರಂಭಿಕ ದಿನದಲ್ಲಿ ಮಾರ್ಕೆಟಿಂಗ್ ಮಾಡುತ್ತೇವೆ. ಶೀಘ್ರದಲ್ಲೇ ಬೇರೆ ಕಡೆಯೂ ಆರಂಭಿಸಲಿದ್ದೇವೆ ಎಂದು ಮಾಹಿತಿ ನಿಡಿದ್ದಾರೆ.

  • ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ

    ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ

    -1 ಲೀಟರ್ ಹಾಲಿನ ಬೆಲೆ ಬರೋಬ್ಬರಿ 4 ರೂ. ಏರಿಕೆ

    ಬಳ್ಳಾರಿ: ರಾಜ್ಯದಲ್ಲಿ ಹಾಲಿನ ದರ (Milk Price) ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಂಎಫ್ (KMF) ಹಾಗೂ ಸರ್ಕಾರ ಧೋರಣೆ ಅನುಸರಿಸಿದೆ. ಪ್ರತೀ ಲೀಟರ್ ಹಾಲಿನ ಮೇಲೆ ಎರಡು ರೂ. ದರ ಏರಿಕೆ ಮಾಡೋದಾಗಿ ಹೇಳಿತ್ತು. ಆದರೆ ಸರ್ಕಾರ, ಕೆಎಂಎಫ್ ಹೇಳಿದ್ದ ದರವೇ ಒಂದು, ಹೆಚ್ಚಳ ಮಾಡಿದ್ದೇ ಮತ್ತೊಂದು ಎನ್ನುವಂತಾಗಿದ್ದು, ಗ್ರಾಹಕರ ಕಣ್ಣು ಕೆಂಪಾಗಿಸಿದೆ. ಒಂದು ಲೀಟರ್ ಹಾಲಿನ ಮೇಲೆ ಬರೋಬ್ಬರಿ ನಾಲ್ಕು ರೂ. ಹೆಚ್ಚಳ ಮಾಡಿ, ಜನರ ಜೇಬಿಗೆ ಕತ್ತರಿ ಹಾಕಿದೆ.

    ಪೆಟ್ರೋಲ್ ಬೆಲೆ ಏರಿಕೆಯ ಬಳಿಕ ಇದೀಗ ಸರ್ಕಾರ ಹಾಲಿನ ದರ ಏರಿಕೆ ಮಾಡಿ, ಜನರಿಗೆ ಶಾಕ್ ನೀಡಿದೆ. ಕೆಎಂಎಫ್ ಹಾಗೂ ಸರ್ಕಾರದಿಂದ ಅರ್ಧ ಲೀಟರ್ ಹಾಗೂ ಒಂದು ಲೀಟರ್ ಹಾಲಿನ ಪ್ಯಾಕೆಟ್‌ಗೆ ಹೆಚ್ಚುವರಿಯಾಗಿ 50 ಎಂಎಲ್ ಹೆಚ್ಚಿಸಿ, ಎರಡು ರೂ. ಹೆಚ್ಚಳ ಮಾಡುವುದಾಗಿ ಹೇಳಿತ್ತು. ಆದರೆ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ಗ್ರಾಹಕರಿಗೆ ಶಾಕ್ ನೀಡಲಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದನ್ನೂ ಓದಿ: ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಎಫ್ ಹಾಗೂ ಸರ್ಕಾರ ಸುಳ್ಳು ಹೇಳಿದ್ದು, ನಂದಿನಿ ಶುಭಂ ಗೋಲ್ಡ್ ಹಾಲಿನ ಮೇಲೆ ಲೀಟರ್‌ಗೆ ನಾಲ್ಕು ರೂ. ದರ ಏರಿಕೆ ಮಾಡಿ, ರಾಜ್ಯದ ಜನರಿಗೆ ಮೋಸ ಮಾಡಿರೋದು ಬಟಾಬಯಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಭಾರೀ ಮಳೆಗೆ ಕುಸಿದ ರಸ್ತೆ – ಮೋದಿ ತವರಲ್ಲಿ ಇದೆಂಥಾ ಘಟನೆ ಅಂತ ಕಾಂಗ್ರೆಸ್‌ ತೀವ್ರ ತರಾಟೆ

    ಹೌದು. ಶುಭಂ ಗೋಲ್ಡ್ (Shubham Gold) ಅರ್ಧ ಲೀಟರ್ ಪ್ಯಾಕೆಟ್ ಖರೀದಿ ಮಾಡಿದರೆ ಇನ್ನೂ ದುಬಾರಿಯಾಗಲಿದೆ. ಯಾಕೆಂದರೆ ಒಂದು ಲೀಟರ್ ಹಳೇ ದರ 49 ರೂ. ಇದ್ದು, ಹೊಸ ದರ 53 ರೂ. ಆಗಿದೆ. ಅದೇ ನೀವೇನಾದರೂ ಅರ್ಧ ಲೀಟರ್ ಪ್ಯಾಕೆಟ್ ತೆಗೆದುಕೊಂಡರೆ ಹಳೆಯ ದರ 26 ರೂ. ಇದ್ದದ್ದು ಹೊಸ ದರ 29 ರೂ. ಆಗಿದೆ. ಅರ್ಧ ಲೀಟರ್‌ನ ಎರಡು ಪ್ಯಾಕೇಟ್ ಖರೀದಿಸಿದರೆ 6 ರೂ. ಹೆಚ್ಚಾದಂತಾಗುತ್ತದೆ. ಸರ್ಕಾರ ಏಕಾಏಕಿ ದರ ಹೆಚ್ಚಳ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದೆ. ಕೂಡಲೇ ಈ ಅನ್ಯಾಯದ ದರ ಹೆಚ್ಚಳ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೈಸೂರು ಮುಡಾದಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ, ಸಾವಿರಾರು ಕೋಟಿ ಆಸ್ತಿ ಕಳ್ಳರ ಪಾಲು – ಸಿ.ಟಿ ರವಿ ಆರೋಪ

    ಇನ್ನು ಸರ್ಕಾರ ಹಾಗೂ ಕೆಎಮ್‌ಎಫ್ ಹೇಳಿದ್ದೇ ಒಂದು ದರ. ಈಗ ಮಾರಟ ಮಾಡುತ್ತಿರುವುದೇ ಒಂದು ದರ. ಹೀಗಾಗಿ ಸರ್ಕಾರ ಹೇಳುವುದೊಂದು, ಮಾಡಿರುವುದು ಒಂದು ಎಂದು ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಫ್ಯಾಟ್ ಕಂಟೆಂಟ್ ಜಾಸ್ತಿ ಇರೋ ಈ ಶುಭಂ ಗೋಲ್ಡ್ ಹಾಲಿಗೆ ಜಾಸ್ತಿ ಬೇಡಿಕೆ ಇರುವುದರಿಂದ ಬೆಲೆ ಜಾಸ್ತಿ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ನಂದಿನಿ ಶುಭಂ ಗೋಲ್ಡ್ ಹಾಲಿನ ದರ ಹೆಚ್ಚಳಕ್ಕೆ ಅಧಿಕಾರಿಗಳು ವಿಚಿತ್ರ ಸಮಜಾಯಿಷಿ ನೀಡುತ್ತಿದ್ದಾರೆ. ಶುಭಂ ಗೋಲ್ಡ್ ಹಾಲಿನಲ್ಲಿ 5% ಫ್ಯಾಟ್, 9% ಎನ್‌ಎಸ್‌ಎಫ್ ಇದೆ. ಯಾವ ಹಸುವಿನಿಂದಲೂ ಈ ಮಾದರಿ ಹಾಲು ಸಿಗೋದಿಲ್ಲ. ಇಷ್ಟು ಫ್ಯಾಟ್ ಹಾಗೂ ಕೆಎಂಎಫ್ ಬರಬೇಕು ಎಂದರೆ ಜೆರ್ಸಿ ಹಸು ಹಾಗೂ ಎಮ್ಮೆಯಿಂದ ಮಾತ್ರ ಸಾಧ್ಯ. ಬಳ್ಳಾರಿ, ರಾಯಚೂರು, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಯ ದೂರದ ರೈತರಿಂದ ನಾವು ಖರೀದಿ ಮಾಡುತ್ತಿದ್ದೇವೆ. ಹೀಗಾಗಿ ಸಾಗಾಣಿಕೆ ವೆಚ್ಚ, ಉತ್ಪಾದನಾ ವೆಚ್ಚಗಳು ಹೆಚ್ಚಾಗುತ್ತಿವೆ. ಹೀಗಾಗಿ ದರ ಹೆಚ್ಚು ಮಾಡಿದ್ದೇವೆ ಎಂದು ರಾಬಕೊವಿ ಹಾಲು ಒಕ್ಕೂಟದ ಎಂಡಿ ಪೀರ್ ನಾಯ್ಕ್ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಶುಭಂ ಗೋಲ್ಡ್ ನಂದಿನಿ ಹಾಲಿನ ದರ 2 ರೂ. ಅಲ್ಲ, ಲೀಟರ್‌ಗೆ 4 ರೂ. ಹೆಚ್ಚಳ! 

    ಈಗಾಗಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನರ ಬದುಕು ಬರ್ಬಾದ್ ಆಗಿದೆ. ಇದೆಲ್ಲದರ ನಡುವೆ ಇದೀಗ ಸರ್ಕಾರ ಹಾಲಿನ ದರ ಏರಿಕೆ ಮಾಡಿ, ಜನರ ಗಾಯದ ಬರೆ ಎಳೆದು, ಜನರ ಜೇಬಿಗೆ ಕತ್ತರಿ ಹಾಕಿದೆ. ಹೀಗಾಗಿ ಕೂಡಲೇ ಕೆಎಂಎಫ್ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ. ಇದನ್ನೂ ಓದಿ: ಕೋಟಿ ಕುಳವೆಂದು ಯುವಕನ ಅಪಹರಿಸಿ ತೆಲಂಗಾಣಕ್ಕೆ ಕರೆದೊಯ್ದು ಹಲ್ಲೆಗೈದ ಗ್ಯಾಂಗ್!

  • ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

    ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

    ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ ಚರ್ಚೆ ವಿಚಾರಕ್ಕೆ ಬೆಳಗಾವಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರು ಪರ ಇಲ್ಲ, ಯಾರ ವಿರೋಧವೂ ಇಲ್ಲ. ಸದ್ಯಕ್ಕೆ ಡಿಸಿಎಂ ಸ್ಥಾನ ಖಾಲಿ ಇಲ್ಲ ಖಾಲಿ ಇದ್ದಾಗ ನೋಡ್ತಾರೆ ಎಂದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ನಿಲುವು ಇರುವ ಪಕ್ಷ ಕಾಂಗ್ರೆಸ್.ವೈಯಕ್ತಿಕವಾಗಿ ಕೆಲವರು ಮಾತಾಡಿದ್ದಾರೆ. ಪಕ್ಷ ತೀರ್ಮಾನ ಮಾಡುತ್ತದೆ‌. ಪಕ್ಷದ ಜವಾಬ್ದಾರಿ ಅಧ್ಯಕ್ಷರು, ಮುಖ್ಯಮಂತ್ರಿ ಇದ್ದಾರೆ ಅವರು ನೋಡಿಕೊಳ್ತಾರೆ. ಡಿಸಿಎಂ ಚರ್ಚೆ ವಿಚಾರದ ಕುರಿತು ನಾನು ಮಾತಾಡಲ್ಲ ಎಂದು ಹೇಳಿದರು.

    ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯ ವಿಚಾರಕ್ಕೆ, ಅವರು ಅಧ್ಯಕ್ಷರು ನೋಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣಕ್ಕೆ ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ಡಿಕೆಶಿ ಅಥವಾ ಡಿಕೆ ಸುರೇಶ್ ಯಾರು ಅಂತಾ ತೀರ್ಮಾನ ಆಗಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಕುಳಿತು ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಗಳಿಗೆ ಜಮೀನು ಕೊಡುವುದಾಗಿ ಹೇಳಿದ್ದಕ್ಕೆ ತಾಯಿಯ ಹತ್ಯೆ – ಆರೋಪಿ ಅರೆಸ್ಟ್

    ಮಂಡ್ಯದಲ್ಲಿ (Mandya) ನನ್ನ ಸೋಲಿಸಲು ಯತ್ನಿಸಿದ್ರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ‌ ಪ್ರತಿಕ್ರಿಯಿಸಿ, ನಮ್ಮನ್ನ ಸೋಲಿಸಲು ನೋಡಿದ್ರೂ ಆಗ ಜನ ಗೆಲ್ಲಿಸಿದ್ರು. ನಾನು ಜೆಡಿಎಸ್ ನಲ್ಲಿ ಇಲ್ಲಾ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಬೇಕು. ನಮ್ಮ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡಿದ್ದೇವೆ. ಕುಮಾರಸ್ವಾಮಿ ಅವರು ಕೆಲಸ ಮಾಡಲಿ ಒಂದು ವರ್ಷ ಏನೂ ಮಾತಾಡಲ್ಲ ಎಂದರು.

    ಕುಮಾರಸ್ವಾಮಿ (HD Kumaraswamy) ಹೊಸದಾಗಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ತಂದೆ ಮಾಡಲು ಆಗದ್ದನ್ನ ಕೆಲಸ ಮಾಡ್ತೀನಿ ಅಂತಾ ಭರವಸೆ ಕೊಟ್ಟಿದ್ದಾರೆ. ಅವರು ಕೆಲಸ ಮಾಡಿದ್ರೇ ನಾನು ಹೆಚ್ಚು ಖುಷಿಪಡುತ್ತೇನೆ. ಈಗ ಕುಮಾರಸ್ವಾಮಿ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ. ದೇವೆಗೌಡರ ಕುಟುಂಬದ ಬಗ್ಗೆ ವೈಯಕ್ತಿಕವಾಗಿ ಮಾತಾಡಿಲ್ಲ. ಕೋರ್ಟ್ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ಕುಮಾರಸ್ವಾಮಿ ಅವರು ಡಿವೈಡ್ ಆಗಿದ್ದೇವೆ ಅಂತಾ ಹೇಳ್ತಿದ್ದಾರೆ. ಆದರೆ ಹೀಗಾಗಬಾರದಿತ್ತು ಅದನ್ನ ಕಾನೂನು ನೋಡುತ್ತದೆ ಎಂದರು.