Tag: Mines

  • ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ

    ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ

    ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ.

    ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ.

    ಈ ವಜ್ರಗಳನ್ನು ಕಾರ್ಮಿಕರ ಸುಬಲ್ ಜಿಲ್ಲಾ ವಜ್ರದ ಕಚೇರಿಗೆ ನೀಡಿದ್ದಾನೆ. ಅವುಗಳನ್ನು ಸರ್ಕಾರದ ನಿಯಮಗಳ ಪ್ರಕಾರ ಹರಾಜು ಮಾಡಲಾಗುತ್ತದೆ ಎಂದು ಶ್ರೀ ಪಾಂಡೆ ಹೇಳಿದ್ದಾರೆ. ಜೊತೆಗೆ ಇದರ ಮಾರಾಟದಿಂದ ಬಂದ ಹಣದಲ್ಲಿ ಶೇಕಡಾ 12 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ ನಂತರ, ಉಳಿದ 88 ಶೇಕಡಾ ಮಾರಾಟದ ಆದಾಯವನ್ನು ಸುಬಲ್ ಅವರಿಗೆ ನೀಡುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇತ್ತೀಚೆಗೆ ಮಧ್ಯಪ್ರದೇಶದ ಬುಂದೇಲ್‍ಖಂಡ್ ಪ್ರದೇಶದ ಪನ್ನಾದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ 10.69 ಕ್ಯಾರೆಟ್ ವಜ್ರ ಸಿಕ್ಕಿತ್ತು.

  • ಬಿಜೆಪಿಯನ್ನ ಅಲುಗಾಡಿಸಲು ಸಿದ್ದವಾಗಿದೆ ಸೂತ್ರ- ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ

    ಬಿಜೆಪಿಯನ್ನ ಅಲುಗಾಡಿಸಲು ಸಿದ್ದವಾಗಿದೆ ಸೂತ್ರ- ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ

    ಬೆಂಗಳೂರು: ಕರ್ನಾಟಕದ ರಾಜಕಾರಣದಲ್ಲಿ ಮತ್ತೆ ಗಣಿ ಗದ್ದಲ ಶುರುವಾಗಿದೆ. ಸಿಬಿಐ ಕೈಬಿಟ್ಟದ್ದ ಅಕ್ರಮ ಅದಿರು ಪ್ರಕರಣವನ್ನು ಎಸ್‍ಐಟಿ ಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ಎರಡು ಮಹತ್ವದ ಪ್ರಕರಣಗಳನ್ನು ಸಿಬಿಐ ಕೈಬಿಟ್ಟಿತ್ತು. ಕಾರವಾರ, ಮಂಗಳೂರು ಬಂದರಿನಲ್ಲಿ ಅಕ್ರಮ ರಫ್ತು ಪ್ರಕರಣವನ್ನು ಸಿಬಿಐ ಸೂಕ್ತ ಸಾಕ್ಷ್ಯಗಳಿಲ್ಲ ಎಂದು ಕೈಬಿಟ್ಟಿತ್ತು. ಈ ಸಹಸ್ರಾರು ಕೋಟಿ ಪ್ರಕರಣದ ಹಿಂದೆ ಕಳ್ಳ ಕುಳಗಳೇ ಇದ್ದು, ನರೇಂದ್ರ ಮೋದಿ, ಅಮಿತ್ ಶಾ ಜೊತೆ ಇರುವ ಉದ್ಯಮಿಗಳು ಶಾಮೀಲಾಗಿದ್ದಾರೆ ಎನ್ನಲಾಗಿದೆ.

    ಉದ್ಯಮಿಗಳ ಮೇಲೆ ಎಸ್‍ಐಟಿ ಅಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬಿಜೆಪಿಯ ಹಣಬಲಕ್ಕೆ ಬ್ರೇಕ್ ಹಾಕಲು ಈ ಪ್ಲ್ಯಾನ್ ಮಾಡಿದೆ. ಬಿಜೆಪಿಯ ಐಟಿ ಶಸ್ತ್ರಕ್ಕೆ ಪ್ರತಿಯಾಗಿ ಎಸ್‍ಐಟಿ ಶಸ್ತ್ರ ಬಳಸಲು ಮುಂದಾಗಿದೆ. ನವೆಂಬರ್ 8ರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗುವ ಸಾಧ್ಯತೆ ಇದೆ.