Tag: Mini Truck

  • Bengaluru| ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಟ್ರಕ್

    Bengaluru| ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಟ್ರಕ್

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ವೊಂದು (Mini Truck) ಪೆಟ್ರೋಲ್ ಬಂಕ್‌ಗೆ ನುಗ್ಗಿದ ಘಟನೆ ಬೆಂಗಳೂರಿನ (Bengaluru) ಚಾಮರಾಜಪೇಟೆ (Chamrajpet) ಮುಖ್ಯರಸ್ತೆಯ ನಯಾರಾ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

    ಚಾಮರಾಜಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸನ್‌ಪ್ಯೂರ್ ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ರಕ್ ನುಗ್ಗಿದ ಪರಿಣಾಮ ಪೆಟ್ರೋಲ್ ಬಂಕ್‌ನ (Petrol Bunk) ಶೌಚಾಲಯದ ಕಟ್ಟಡ ಜಖಂಗೊಂಡಿದೆ. ಅಲ್ಲದೇ ಡಿಕ್ಕಿಯ ರಭಸಕ್ಕೆ ಒಂದು ಬೈಕ್ ಕೂಡ ಲಾರಿಯಡಿಗೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬಿಗ್‌ ರಿಲೀಫ್‌ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ

    ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ

  • ಮಿನಿ ಟ್ರಕ್ ಮೇಲೆ ಉರುಳಿ ಬಿದ್ದ ಮಾವು ತುಂಬಿದ್ದ ಲಾರಿ – 9 ಮಂದಿ ಸಾವು, 11 ಜನರಿಗೆ ಗಾಯ

    ಮಿನಿ ಟ್ರಕ್ ಮೇಲೆ ಉರುಳಿ ಬಿದ್ದ ಮಾವು ತುಂಬಿದ್ದ ಲಾರಿ – 9 ಮಂದಿ ಸಾವು, 11 ಜನರಿಗೆ ಗಾಯ

    ಅಮರಾವತಿ: ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಬಿದ್ದು 9 ಮಂದಿಯನ್ನ ಬಲಿ ಪಡೆದ ಘಟನೆ ಆಂಧ್ರದ (Andhra Pradesh) ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ.

    ಮಿನಿ ಟ್ರಕ್‌ನಲ್ಲಿ 20 ಮಂದಿ ಪ್ರಯಾಣಿಕರಿದ್ದರು. ಅವರೆಲ್ಲರೂ ರಾಜಂಪೇಟೆಯಿಂದ ಕೊಡೂರಿಗೆ ಪ್ರಯಾಣಿಸುತ್ತಿದ್ದರು. 20 ಪ್ರಯಾಣಿಕರಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶೂಟಿಂಗ್ ವೇಳೆ ಯಡವಟ್ಟು: SUVಯಲ್ಲಿ ಸ್ಟಂಟ್ ವೇಳೆ ಅವಘಡ – ತಮಿಳುನಾಡಿನ ಸ್ಟಂಟ್‌ಮೆನ್ ಸಾವು

    ಮಾವು ಹೊತ್ತೊಯ್ಯುತಿದ್ದ ಲಾರಿಯ (Lorry) ಹಿಂಬದಿ ಚಕ್ರ ಮರಳಿನಲ್ಲಿ ಸಿಲುಕಿಕೊಂಡಿದ್ದರಿಂದ ನಿಯಂತ್ರಣ ತಪ್ಪಿ ಮಿನಿ ಟ್ರಕ್ ಮೇಲೆ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

    ಘಟನೆಯ ಕುರಿತು ಆಂಧ್ರ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

  • ಆಟೋ ರಿಕ್ಷಾ, ಟ್ರಕ್ ಡಿಕ್ಕಿ – 5 ಮಂದಿ ಸಾವು, ನಾಲ್ವರಿಗೆ ಗಾಯ

    ಆಟೋ ರಿಕ್ಷಾ, ಟ್ರಕ್ ಡಿಕ್ಕಿ – 5 ಮಂದಿ ಸಾವು, ನಾಲ್ವರಿಗೆ ಗಾಯ

    ಭೋಪಾಲ್: ಆಟೋ ರಿಕ್ಷಾ ಮತ್ತು ಮಿನಿ ಟ್ರಕ್ ಡಿಕ್ಕಿಯಾಗಿ ಐದು ಮಂದಿ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

    ಮೃತರು ಸಾಗರ್ ಜಿಲ್ಲೆಯ ನಿವಾಸಿ ಧನರಾಜ್ ಗೋಸ್ವಾಮಿ (35), ಅರ್ಬಾಜ್ ಖಾನ್ (19), ಇಮಾನುದ್ದೀನ್ (28), ರೈನ್ ಖುರೇಷಿ (14), ಭೋಪಾಲ್‍ನ ನಿವಾಸಿ ಅಮಿತ್ ಲೋಧಿ (27) ಮೃತ ದುರ್ದೈವಿಗಳು.

    ಆಟೋ ರಿಕ್ಷಾ ರೈಸನ್‍ನಿಂದ ರಾಜ್ಯದ ರಾಜಧಾನಿ ಭೋಪಾಲ್ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ನಾಲ್ವರು ಮೃತಪಟ್ಟರೆ ಟ್ರಕ್‍ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಜಿಲ್ಲಾ ಕೇಂದ್ರದಿಂದ 22 ಕಿ.ಮೀ ದೂರದಲ್ಲಿರುವ ಉಮ್ರಾವ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಡಿಯಾ ಸೇತುವೆ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ವೇಗದ ಚಾಲನೆ ಮಾಡಿದ್ದಕ್ಕೆ ಆಟೋ ರಿಕ್ಷಾ ಮತ್ತು ಟ್ರಕ್ ಚಾಲಕನ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಿಸಲಾಗಿದೆ.

  • ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ 11 ಜನರ ಸಾವು

    ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ 11 ಜನರ ಸಾವು

    – ಮುಂದಿನ ತಿಂಗ್ಳು ಮದ್ವೆ ನಿಶ್ಚಯವಾಗಿದ್ದ ಯುವಕ
    – ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬ
    – ನಿದ್ದೆಯಲ್ಲಿದ್ದವರು ಏಳಲೇ ಇಲ್ಲ

    ಗಾಂಧಿನಗರ: ಗುಜರಾತಿನ ವಡೋದರ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ 11 ಜನರು ಮೃತಪಟ್ಟಿದ್ದಾರೆ.

    ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಇಡೀ ಕುಟುಂಬವೊಂದು ನಾಶವಾಗಿದೆ. ಮೂವರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತ ಸುರೇಶ್ ಮದುವೆ ಮುಂದಿನ ತಿಂಗಳು ನಿಶ್ಚಯವಾಗಿತ್ತು. ಸೂ ರತ್ ನಗರದ ನಿವಾಸಿಯಾಗಿದ್ದ ಕುಟುಂಬ ವಾಸಿಸುತ್ತಿದ್ದ ಸೊಸೈಟಿಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

    ಆಸ್ಪತ್ರೆಗೆ ಬರುವ ಮೊದಲೇ ಒಂಬತ್ತು ಜನರು ಸಾವನ್ನಪ್ಪಿದ್ದರು. ಇನ್ನಿಬ್ಬರಿಗೆ ಚಿಕಿತ್ಸೆ ನೀಡುವಷ್ಟರಲ್ಲಿ ಪ್ರಾಣ ಬಿಟ್ಟಿದ್ದರು. ಐವರು ಮಹಿಳೆಯರು, ನಾಲ್ಕು ಜನ ಪುರಷರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 11 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೆಚ್ಚು ರಕ್ತಸ್ರಾವವಾದ ಹಿನ್ನೆಲೆ ಎಲ್ಲರ ಸಾವು ಆಗಿದೆ ಎಂದು ವಡೋದರ ಸಯ್ಯಾಜಿ ಆಸ್ಪತ್ರೆಯ ವೈದ್ಯ ರಂಜನ್ ಮಾಹಿತಿ ನೀಡಿದ್ದಾರೆ.

    ಮಲಗಿದ್ದವರು ಏಳಲೇ ಇಲ್ಲ: ವಡೋದರ ಜಿಲ್ಲೆಯ ವಾಘೋಡಿಯಾ ಚೌಕ್ ಬಳಿಯಲ್ಲಿ ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಅಪಘಾತ ಸಂಭವಿಸಿದೆ. ಮೃತರು ಮಿನಿ ಟ್ರಕ್ ಬಾಡಿಗೆ ಪಡೆದು ಸೂರತ್ ನಿಂದ ಪಾಗಾಗಢದ ಮೂಲಕ ಡಾಕೋರ್ ದೇವಸ್ಥಾನಕ್ಕೆ ತೆರಳುತ್ತಿದ್ದರು. ಅಪಘಾತದ ವೇಳೆ ಪ್ರಯಾಣಿಕರೆಲ್ಲರೂ ನಿದ್ರೆಯಲ್ಲಿದ್ದರು. ಘಟನೆಯ ಬಳಿಕ ಪ್ರಯಾಣಿಕರು ಚೀರಾಟ ಕೇಳಿದ ಸ್ಥಳೀಯರು ಸಹಾಯಕ್ಕೆ ಆಗಮಿಸಿ ಅಂಬುಲೆನ್ಸ್ ಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ಜನರು ವಾಹನದಲ್ಲಿ ಸಿಲುಕಿದ್ದವರು ರಕ್ಷಣಾ ಕಾರ್ಯಕ್ಕೆ ಮುಂದಾಗಿ ಪ್ರಾಣ ಉಳಿಸಲು ಹರಸಾಹಸಪಟ್ಟಿದ್ದರು.

    ವಾಘೋಡಿಯಾ ಚೌಕ್ ಬಳಿ ದೇವಸ್ಥಾನಕ್ಕೆ ಹೊರಟ್ಟಿದ್ದ ಮಿನಿ ಟ್ರಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 11 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿಯ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಗುಜರಾತ ಸಿಎಂ ವಿಜಯ್ ರೂಪಾನಿ ಸೂಚಿಸಿದ್ದಾರೆ.

  • ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್‌ಗೆ ಲಾರಿ ಡಿಕ್ಕಿ – ಐವರು ಸಾವು

    ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್‌ಗೆ ಲಾರಿ ಡಿಕ್ಕಿ – ಐವರು ಸಾವು

    – ಟ್ರಕ್‍ನಲ್ಲಿದ್ದ 30 ಜನರಲ್ಲಿ  6 ಜನರಿಗೆ ಗಂಭೀರ ಗಾಯ

    ರಾಯಚೂರು: ಲಾರಿ ಹಾಗೂ ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ರಾಯಚೂರು ಜಿಲ್ಲೆಯ 5 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಶಂಶಾಬಾದ್ ಬಳಿ ಘಟನೆ ನಡೆದಿದೆ.

    ಘಟನೆಯಲ್ಲಿ ಮೂವರು ಮಹಿಳೆಯರು, ಬಾಲಕಿ, ಬಾಲಕ ಸೇರಿ ಒಟ್ಟು ಐವರು ಮೃತಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಚಾಲಕ ನಿರ್ಲಕ್ಷದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ KA 36 B 8264  ನಂಬರಿನ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು. ಶಂಶಾಬಾದ್ ಬಳಿ ವೇಗವಾಗಿ ಬಂದ GJ 06 BT 0823 ನಂಬರಿನ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಐವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್‍ಆರ್.ವೆಂಕಟೇಶ್ ಅವರು ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

  • ವಿಡಿಯೋ: ಮಾರ್ಕೆಟ್‍ನಲ್ಲಿ ತರಕಾರಿ ವಿಂಗಡಿಸುತ್ತಿದ್ದ ಯುವಕನ ಮೇಲರಗಿ ಬಂತು ಪಿಕ್‍ಅಪ್ ಟ್ರಕ್

    ವಿಡಿಯೋ: ಮಾರ್ಕೆಟ್‍ನಲ್ಲಿ ತರಕಾರಿ ವಿಂಗಡಿಸುತ್ತಿದ್ದ ಯುವಕನ ಮೇಲರಗಿ ಬಂತು ಪಿಕ್‍ಅಪ್ ಟ್ರಕ್

    ಮಂಗಳೂರು: ನಿಂತಿದ್ದ ಪಿಕ್ ಅಪ್ ಟೆಂಪೋವೊಂದು ಚಾಲಕನ ಅವಂತರದಿಂದ ಯುವಕನಿಗೆ ಗುದ್ದಿದ ಪರಿಣಾಮ ಆತ ಕೆಳಗೆ ಬಿದ್ದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್‍ನಲ್ಲಿ ನಡೆದಿದ್ದು ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸೆಂಟ್ರಲ್ ಮಾರ್ಕೆಟ್‍ನಲ್ಲಿ ಸೋಮವಾರ ಬೆಳಗ್ಗೆ ಸುಮಾರು 7.52ಕ್ಕೆ ತರಕಾರಿಗಳನ್ನು ವಿಂಗಡನೆ ಮಾಡುತ್ತಿದ್ದ ಕಾರ್ಮಿಕ ಯುವಕನ ಮೇಲೆ ಅಲ್ಲೇ ನಿಲ್ಲಿಸಿದ್ದ ಪಿಕ್‍ಅಪ್ ಟ್ರಕ್ ಹರಿದಿದೆ. ನಿಂತಿದ್ದ ಪಿಕ್‍ಅಪ್ ಟ್ರಕ್ ಚಲಾಯಿಸಲು ಆರಂಭಿಸಿದ ವೇಳೆ ಚಾಲಕ ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದು ಯುವಕನಿದ್ದ ಕಡೆಗೆ ಬಂದಿದೆ. ಇದನ್ನ ನೋಡಿದ ಯುವಕ ಪಕ್ಕಕ್ಕೆ ಸರಿಯಬೇಕು ಎನ್ನುವಷ್ಟರಲ್ಲಿ ವಾಹನ ಆತನನ್ನೇ ಎಳೆದುಕೊಂಡು ಮುಂದೆ ಹೋಗಿದೆ. ಈ ಎಲ್ಲಾ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬಳಿಕ ಚಾಲಕ ವಾಹನವನ್ನು ನಿಲ್ಲಿಸಿದ್ದಾನೆ. ಈ ಘಟನೆಯಲ್ಲಿ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯಾದಿಂದ ಪಾರಾಗಿದ್ದಾನೆ.

    https://www.youtube.com/watch?v=kSUHsKocWfc