Tag: minister A. Manju

  • ಸಚಿವ ಎ.ಮಂಜು ವಿರುದ್ಧ ಡಿಸಿ ರೋಹಿಣಿ ಸೆಡ್ಡು – ಹಾಸನದ ಮಂತ್ರಿಗಳ ಕಚೇರಿಗೆ ಬೀಗ

    ಸಚಿವ ಎ.ಮಂಜು ವಿರುದ್ಧ ಡಿಸಿ ರೋಹಿಣಿ ಸೆಡ್ಡು – ಹಾಸನದ ಮಂತ್ರಿಗಳ ಕಚೇರಿಗೆ ಬೀಗ

    ಹಾಸನ: ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಲ್ಲಿ ಇದ್ದರು, ಹಾಸನ ಮಂತ್ರಿಗಳ ಕಚೇರಿಯ ಮುಂಬಾಗಿಲಿಗೆ ಬೀಗ ಹಾಕಿ ಒಳಗೆ ಸಿಬ್ಬಂದಿ  ಕಾರ್ಯನಿರ್ವಹಿಸುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಅವರು ಸಚಿವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

    ಸಚಿವ ಎ.ಮಂಜು ಕಚೇರಿಯಲ್ಲಿ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದರು, ಆದರೆ ಈ ವೇಳೆ ಎಷ್ಟೇ ಪ್ರಯತ್ನ ಮಾಡಿದರು ಸಿಬ್ಬಂದಿ ಕಚೇರಿ ಬಾಗಿಲು ತೆರೆಯದ ಕಾರಣ ಜಿಲ್ಲಾಧಿಕಾರಿಗಳು ಕಚೇರಿಯನ್ನು ವಶಕ್ಕೆ ಪಡೆಯಲು ಆದೇಶ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ಡಿಸಿ ಕಚೇರಿ ಸಿಬ್ಬಂದಿ ಮತ್ತೊಂದು ಬೀಗ ಜಡಿದಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಕಚೇರಿಯಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಅವರನ್ನು ಪರಿಶೀಲನೆ ನಡೆಸಿದ ಬಳಿಕ ಹೊರಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ನೀತಿ ಸಂಹಿತೆ ಜಾರಿ ಬಳಿಕ ಸರ್ಕಾರಿ ಕಟ್ಟಡ ದುರ್ಬಳಕೆ ಆರೋಪ ಇದಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾಣಾಧಿಕಾರಿಯಿಂದ ನೋಟಿಸ್ ಜಾರಿಯಾಗಿದೆ. ಚುನಾವಣಾ ಸಿಬ್ಬಂದಿ ಸ್ಥಳಪರಿಶಿಲನೆ ವೇಳೆ ಹೊರಗಿನಿಂದ ಬೀಗಹಾಕಿ ಒಳಗೆ ಕೆಲಸಮಾಡಲಾಗುತ್ತಿತ್ತು ಎಂಬ ಬಗ್ಗೆ ಉಲ್ಲೇಖಿಸಿ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೇ ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರಿ ಕಟ್ಟಡವನ್ನ ರಾಜಕೀಯ ವ್ಯಕ್ತಿಗಳಿಗೆ ಬಿಟ್ಟು ಕೊಟ್ಟ ಕುರಿತು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಏಪ್ರಿಲ್ 2 ರೊಳಗೆ ಉತ್ತರ ನೀಡಲು ಸೂಚನೆ ನೀಡಲಾಗಿದೆ.

     

  • ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗೆ ಕರೆ ಮಾಡಿ ಸಚಿವ ಮಂಜು ಹೇಳಿಕೆ ಸುಳ್ಳೆಂದು ಸಾಬೀತು ಪಡಿಸಿದ ರೇವಣ್ಣ

    ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗೆ ಕರೆ ಮಾಡಿ ಸಚಿವ ಮಂಜು ಹೇಳಿಕೆ ಸುಳ್ಳೆಂದು ಸಾಬೀತು ಪಡಿಸಿದ ರೇವಣ್ಣ

    ಬೆಂಗಳೂರು: ಪಶು ಆಹಾರದ ಬೆಲೆಯನ್ನು ಸರ್ಕಾರ ಕೂಡಲೇ ಕಡಿಮೆ ಮಾಡಬೇಕು ಅಂತ ಮಾಜಿ ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

    ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಎಂಎಫ್‍ನ 5 ಪಶು ಆಹಾರ ಘಟಕಗಳು ಲಾಭದಲ್ಲಿ ನಡೆಯುತ್ತಿವೆ. ಹೀಗಿದ್ದರೂ ಪಶು ಆಹಾರದ ಬೆಲೆಯನ್ನು ಕೆಎಂಎಫ್ ಹಾಗೂ ಸರ್ಕಾರ ಕಡಿಮೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಈ ವರ್ಷ ಪಶು ಆಹಾರ ಘಟಕಗಳು 65 ಕೋಟಿ ರೂ. ಲಾಭದಲ್ಲಿದ್ದು ಪಶು ಆಹಾರದ ಬೆಲೆಯನ್ನ ಟನ್ ಗೆ 2 ಸಾವಿರ ಕಡಿಮೆ ಮಾಡಬೇಕು. ಸಾಧ್ಯವಾದರೆ 5 ಸಾವಿರ ಕಡಿಮೆ ಮಾಡಿ. ಇಲ್ಲವಾದರೆ ಟನ್ ಗೆ 2 ಸಾವಿರ ಮಾಡಲೇಬೇಕು ಎಂದು ಒತ್ತಾಯಿಸಿದರು.

    ನನ್ನ ಅವಧಿಯಲ್ಲಿ ನೋ ಪ್ರಾಫಿಟ್, ನೋ ಲಾಸ್ ಇದ್ದರು ಕಡಿಮೆ ಬೆಲೆಗೆ ಪಶು ಆಹಾರ ನೀಡುತ್ತಿದ್ದೆ. ಆದರೆ ಪ್ರಸ್ತುತ ಸರ್ಕಾರ ಹಾಗೂ ಕೆಎಂಎಫ್, ಖಾಸಗಿ ಕಂಪನಿಗಳ ಜೊತೆ ಡೀಲ್ ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬಂದ ಲಾಭವನ್ನು ರೈತರಿಗೆ ನೀಡಿ ಪಶು ಆಹಾರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

    ಸಚಿವರ ಹೇಳಿಕೆಗೆ ತಿರುಗೇಟು: ಈ ಮುಂಚೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ಎ.ಮಂಜು ಅವರು ಕೆಎಂಎಫ್ ನಷ್ಟದಲ್ಲಿ ನಡೆಯುತ್ತಿಲ್ಲ. ಕೆಎಂಎಫ್ 12 ಮಹಾಮಂಡಳಿಗಳು ಲಾಭದಲ್ಲಿವೆ. ಬೆಣ್ಣೆ ಸಂಗ್ರಹ ಇಲ್ಲ ಎಂದು ಹೇಳಿದ್ದರು. ಸಚಿವ ಎ.ಮಂಜು ಅವರಿಗೆ ಸವಾಲ್ ಹಾಕಿದ ಅವರು, 10 ಕೆಎಂಎಫ್ ಮಹಾಮಂಡಳಿಗಳು ನಷ್ಟದಲ್ಲಿ ನಡೆಯುತ್ತಿವೆ. ಪ್ರಸಕ್ತ ಸಾಲಿನಲ್ಲಿ 115 ಕೋಟಿ ರೂ. ಲಾಸ್ ನಲ್ಲಿ ನಡೆಯುತ್ತಿದೆ ಎಂದು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದರು.

    ಆದರೆ ಸಚಿವರ ಹೇಳಿಕೆ ಕುರಿತು ಪತ್ರಕರ್ತರು ಮರು ಪ್ರಶ್ನೆ ಹಾಕಿದ ವೇಳೆ ಕೂಡಲೇ ಕೆಎಂಎಫ್ ನ ಮಾರುಕಟ್ಟೆ ನಿರ್ದೇಶಕರಿಗೆ ಪತ್ರಿಕಾಗೋಷ್ಠಿಯ ಮಧ್ಯೆ ರೇವಣ್ಣ ದೂರವಾಣಿ ಕರೆ ಮಾಡಿದರು. ಈ ವೇಳೆ ಮಾತನಾಡಿದ ಅಧಿಕಾರಿ, ಸದ್ಯ 7 ಸಾವಿರ ಮೆಟ್ರಿಕ್ ಟನ್ ಬೆಣ್ಣೆ ಸ್ಟಾಕ್ ಇದೆ. ಕೆನೆರಹಿತ ಹಾಲಿನ ಪುಡಿ 16,680 ಮೆಟ್ರಿಕ್ ಟನ್ ಸ್ಟಾಕ್ ಇದೆ ಎಂದು ಮಾಹಿತಿ ನೀಡಿದರು.

    https://www.youtube.com/watch?v=Sa-JwR02H4E

  • ರಾಜಕೀಯದಲ್ಲಿ ನಟನೆ ಮಾಡಲು ನಟ ಉಪೇಂದ್ರಗೆ ಸಾಧ್ಯವಿಲ್ಲ: ಸಚಿವ ಎ.ಮಂಜು

    ರಾಜಕೀಯದಲ್ಲಿ ನಟನೆ ಮಾಡಲು ನಟ ಉಪೇಂದ್ರಗೆ ಸಾಧ್ಯವಿಲ್ಲ: ಸಚಿವ ಎ.ಮಂಜು

    ಹಾಸನ : ನಟ ಉಪೇಂದ್ರ ರಾಜಕೀಯ ಪ್ರವೇಶ ಕುರಿತು ಪಶುಸಂಗೋಪನಾ ಸಚಿವ ಎ.ಮಂಜು ತಮ್ಮದೇ ಶೈಲಿಯಲ್ಲಿ ಲೇವಡಿ ಮಾಡಿ ರಿಯಲ್ ಸ್ಟಾರ್‍ಗೆ ಟಾಂಗ್ ನೀಡಿದ್ದಾರೆ.

    ನಟ ಉಪೇಂದ್ರ ಸಿನೆಮಾದಲ್ಲಿಯೇ ಉಳಿದಿದ್ದರೆ ಅವರ ಗೌರವ ಉಳಿಯುತ್ತಿತ್ತು. ರಾಜಕೀಯದಲ್ಲಿ ನಟನೆ ಮಾಡಲು ಸಾಧ್ಯವಿಲ್ಲ, ರಾಜಕೀಯದಲ್ಲಿ ನಟನೆ ಮಾಡಲು ಹೊರಟರೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಹೇಳಿದರು.

    ಉಪೇಂದ್ರ ರಾಜಕೀಯದಲ್ಲಿ ಯಶಸ್ಸು ಕಾಣುವುದು ಅಸಾಧ್ಯ, ಅವರು ನಟನಾಗಿಯೇ ಮುಂದುವರೆದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಚಲನ ಚಿತ್ರ ನಟರು ಮತ್ತು ಅಧಿಕಾರಿಗಳು ಗ್ಲಾಮರ್ ಮತ್ತು ಅಧಿಕಾರದಲ್ಲಿದ್ದಾಗ ಜನರ ಅಭಿಮಾನ ನೋಡಿ ರಾಜಕೀಯಕ್ಕೆ ಬರುತ್ತಾರೆ. ಆದರೆ ವಾಸ್ತವದಲ್ಲಿ ರಾಜಕಾರಣಿಗಳ ಕೆಲಸ ಸುಲಭವಲ್ಲ. ಇಲ್ಲಿ ನಾವೇ ಪ್ರತಿಯೊಬ್ಬರಿಗೂ ಅಭಿಮಾನ ತೋರಬೇಕು ಎಂದು ಉಪ್ಪಿಗೆ ಸಲಹೆ ನೀಡಿದರು.