Tag: minister ananthkumar hegde

  • ಏಕಾಏಕಿ ಎದ್ದುನಿಂತು ಪ್ರಶ್ನೆ ಕೇಳುವ ಮೂಲಕ ಸಚಿವ ಹೆಗ್ಡೆಯವರನ್ನು ತಬ್ಬಿಬ್ಬು ಮಾಡಿದ ವಯೋವೃದ್ಧೆ!

    ಏಕಾಏಕಿ ಎದ್ದುನಿಂತು ಪ್ರಶ್ನೆ ಕೇಳುವ ಮೂಲಕ ಸಚಿವ ಹೆಗ್ಡೆಯವರನ್ನು ತಬ್ಬಿಬ್ಬು ಮಾಡಿದ ವಯೋವೃದ್ಧೆ!

    ಕಾರವಾರ: ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಯೋವೃದ್ಧೆಯೊಬ್ಬರು ಏಕಾಏಕಿಯಾಗಿ ಎದ್ದು ನಿಂತು ಪ್ರಶ್ನೆ ಕೇಳುವ ಮೂಲಕ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆಯವರನ್ನು ತಬ್ಬಿಬ್ಬು ಮಾಡಿದ ಘಟನೆ ಅಂಕೋಲದಲ್ಲಿ ನಡೆದಿದೆ.

    ಜನಸುರಕ್ಷಾ ಯಾತ್ರೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ವೇದಿಕೆ ಮೇಲೆ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣ ಹಾಗೂ ಈಗಿರುವ ಕಾಂಗ್ರೆಸ್ ಸರ್ಕಾರ ದಲ್ಲಿ ಆದ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣ ಕುರಿತು ಅಂಕಿ ಅಂಶಗಳನ್ನು ನೀಡಿ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು.

    ಈ ವೇಳೆ ನಾನು ಉತ್ತರ ಕೊಡುತ್ತೇನೆ ಎಂದು ಹೇಳುವ ಮೂಲಕ ವಯೋವೃದ್ಧೆಯೊಬ್ಬರು ದಿಢೀರ್ ಎದ್ದು ನಿಂತು ತಬ್ಬಿಬ್ಬು ಮಾಡಿದ್ದಾರೆ. ಅಂಕೋಲದ ಹಟ್ಟೀಕೇರಿ ನಿವಾಸಿ ಸುಶೀಲ ನಾಯ್ಕ ಎಂಬವರೇ ಅನಂತಕುಮಾರ್ ಹೆಗ್ಡೆ ಅವರು ಕಾಂಗ್ರೆಸ್‍ಗೆ ಅಂಕಿ ಅಂಶದ ಸಮೇತ ಹಾಕಿದ ಪ್ರಶ್ನೆಗೆ ಉತ್ತರ ನೀಡುವುದಾಗಿ ಹೇಳಿದ್ದಾರೆ.

    ಸಭೆಯಲ್ಲಿ ಏಕಾಏಕಿ ಎದ್ದುನಿಂತು ನೀವು ಹಾಕಿದ ಪ್ರಶ್ನೆಗೆ ನಾನು ಉತ್ತರಿಸುತ್ತೇನೆ, ನಾನು ಕೇಳುವ ಪ್ರಶ್ನೆಗೆ ನೀವು ಉತ್ತರಿಸಿ ಎಂದು ವೃದ್ಧ ಮಹಿಳೆ ಹೇಳುತ್ತಿರುವಂತೆ ಕಾರ್ಯಕ್ರಮ ಸ್ಥಳದಿಂದ ವೃದ್ಧ ಮಹಿಳೆಯನ್ನು ಸಮಾಧಾನಪಡಿಸಿ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರು ಕರೆದೊಯ್ದರು. ನಂತರ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಯೋವೃದ್ಧೆಯ ಪತಿಯನ್ನು ಅನಂತಕುಮಾರ್ ಹೆಗಡೆ ಮಾತನಾಡಿಸಿ ಈ ಪ್ರಹಸನಕ್ಕೆ ತೆರೆ ಎಳೆದರು.

    https://www.youtube.com/watch?v=LO8g8ZnIxCY

  • ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ನಟ ಜಗ್ಗೇಶ್ ಟಾಂಗ್

    ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ನಟ ಜಗ್ಗೇಶ್ ಟಾಂಗ್

    ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಕನ್ನಡ ಯೋಗ್ಯ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಇದೀಗ ನಟ, ಬಿಜೆಪಿ ನಾಯಕ ಜಗ್ಗೇಶ್ ಕೂಡ ಟಾಂಗ್ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, `ಅನಂತಕುಮಾರ್ ಹೆಗ್ಡೆ ವ್ಯಾಕರಣಬದ್ಧ ಕನ್ನಡ ಮಾತಾಡುತ್ತಾರೆ ನನಗಿಷ್ಟವಾದರು. ಅಂದಮಾತ್ರಕ್ಕೆ ಬೇರೆ ಭಾಗದವರಿಗೆ ಕನ್ನಡ ಬರೋಲ್ಲಾ ಎಂದು ಭಾವಿಸದಿರಿ! ಕರ್ನಾಟಕದ ಒಂದೊಂದು ಪ್ರಾಂತ್ಯಕ್ಕೂ ಒಂದು ಸೊಗಡಿದೆ. ಆ ಪ್ರಾಂತ್ಯದ ಅನುಸಾರ ಆ ಸೊಗಡು ಅವರ ನಾಲಿಗೆಯಲ್ಲಿರುತ್ತೆ. ಮಾತಾಡುವಷ್ಟೇ ಬರವಣಿಗೆಯು ಕಲಿಯಿರಿ ಎನ್ನಿ. ಹಂಗಿಸಬೇಡಿ. ನೀವು ಮಂತ್ರಿ ಸಾಮಾನ್ಯನಲ್ಲ ಅಂತ ಹೇಳಿದ್ದಾರೆ.

    ಅನಂತಕುಮಾರ್ ಹೆಗ್ಡೆ ಅವರೇ ನಾನು ತುಮಕೂರು ಜಿಲ್ಲೆ ಗ್ರಾಮೀಣ ಭಾಗದವನು ನಮ್ಮದು ಗ್ರಾಮೀಣ ಕನ್ನಡ. ಮನೆಯಲ್ಲಿ ಗ್ರಾಮೀಣ ಒಕ್ಕಲಿಗ ಮನೆತನದ ಭಾಷೆಯೇ ನಾನು ಮಾತಾಡೋದು. ನನ್ನ ಕಲಾಕ್ಷೇತ್ರದಲ್ಲಿ ಎಲ್ಲಾ ವರ್ಗದ ಭಾಷೆ ತಪ್ಪಿಲ್ಲದೆ ಬಳಸುವೆ. ಇದಕ್ಕೆ ವ್ಯಾಕರಣದ ತಾಲೀಮು ಬೇಕು ಅದು ಇದೆ.ನಮ್ಮ ಕನ್ನಡದ ಮಕ್ಕಳಿಗೆ ವ್ಯಾಕರಣಬದ್ಧ ಕನ್ನಡ ಕಲಿಯಲು ಪ್ರೇರೆಪಿಸಿ ಅಂತ ತಿಳಿ ಹೇಳಿದ್ದಾರೆ.

    ಹೆಗ್ಡೆ ನೀಡಿದ್ದ ಹೇಳಿಕೆಯೇನು?: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ `ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ’ ಅಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಹೆಗ್ಡೆಯವರು, ಇಂಗ್ಲಿಷ್ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು. ಶುದ್ಧ ಕನ್ನಡ ಯಾರಲ್ಲೂ ಇಲ್ಲ. ಎಲ್ಲೋ ಒಂದು ಕಡೆ ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದವರನ್ನು ಹೊರತುಪಡಿಸಿದರೆ ಇತರರಿಗೆ ಸರಿಯಾಗಿ ಕನ್ನಡ ಮಾತನಾಡುವ ಯೋಗ್ಯತೆಯೇ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಬೆಂಗಳೂರಿನ ಪರಿಸ್ಥಿತಿಯಂತೂ ಕೇಳುವುದೇ ಬೇಡ. ಅಲ್ಲಿನ ಸ್ಥಿತಿ ಚಿಂತಾಜನಕವಾಗಿದೆ. ಬೇಸಿಕ್ ಸ್ಕಿಲ್ ಇಲ್ಲದ ಸಿದ್ದಣ್ಣ ಸರಕಾರ ಇದೆ. ರೀಜನಲ್ ಸ್ಕಿಲ್ ಗ್ಯಾಪ್ ಎನಾಲಿಸಿಸ್ ಮಾಡಲು ಕೇಂದ್ರ ಸರಕಾರ ನಮ್ಮ ರಾಜ್ಯ ಸರಕಾರಕ್ಕೆ ಅನುದಾನ ನೀಡಿದೆ. ಅದನ್ನು ನಮ್ಮ ಸಿದ್ದಣ್ಣ ಸರಕಾರ ಹೇಗೆ ಬಳಸುತ್ತದೋ ನೋಡಬೇಕು. ಬೇಸಿಕ್ ಸ್ಕಿಲ್ ಇಲ್ಲದವರು ಏನು ಮಾಡುತ್ತಾರೆ ಎಂದು ಲೇವಡಿ ಮಾಡಿದ್ದರು. ಹೆಗ್ಡೆ ಹೇಳಿಕೆ ಕುರಿತಂತೆ ಶಾಸಕ ಸುರೇಶ್ ಕುಮಾರ್ ಕೂಡ ವಿರೋಧಿಸಿದ್ದು, ಕೂಡಲೇ ಸಚಿವರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದರು.

    https://www.youtube.com/watch?v=jE4xn6DpZhY