Tag: Minister DK Shivakumar

  • ಬಿಎಸ್‍ವೈ ಹೇಳಿದಂತೆ ಡಿಕೆಶಿಯನ್ನ ಅಪ್ಪ-ಮಕ್ಕಳು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಎ.ಮಂಜು

    ಬಿಎಸ್‍ವೈ ಹೇಳಿದಂತೆ ಡಿಕೆಶಿಯನ್ನ ಅಪ್ಪ-ಮಕ್ಕಳು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಎ.ಮಂಜು

    – ಕೆಎಂಎಫ್ ನಲ್ಲಿ ಭಾರೀ ಹಗರಣ
    – ರೇವಣ್ಣ ವರ್ಗಾವಣೆ ಮಂತ್ರಿ

    ಹಾಸನ: ಸದನದಲ್ಲಿ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದಂತೆ ಇಂದು ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಅಪ್ಪ-ಮಕ್ಕಳು ಮುಂಬೈ ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.

    ನಗರದಲ್ಲಿ ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಪ್ಪ-ಮಕ್ಕಳ ಜೊತೆ ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಯಾವುದೋ ಕಾಲದಿಂದಲೂ ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ನೇರವಾಗಿ ಹೇಳಿದ್ದೆ. ಈಗ ಅವರು ಇದನ್ನು ಅರ್ಥೈಸಿಕೊಂಡಂತೆ ಕಾಣಿಸುತ್ತಿದೆ. ಆದರೆ ಈಗಲೂ ಕೂಡ ಸಿದ್ದರಾಮಯ್ಯ ಅವರ ಮೇಲೆಯೇ ಆರೋಪ ಮಾಡಲಾಗುತ್ತಿದೆ. ಜೆಡಿಎಸ್ ಪಕ್ಷದಿಂದ ಹೋದ ಶಾಸಕರ ಬಗ್ಗೆ ಮಾತನಾಡುತ್ತಿಲ್ಲ ಎಂದರು.

    ಇದೇ ಸಂದರ್ಭದಲ್ಲಿ ಕೆಎಂಎಫ್ ನಲ್ಲಿ ಭಾರೀ ಹಗರಣ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಈ ಹಗರಣಗಳು ಹಾಸನ ಜಿಲ್ಲೆಯ ರೈತರಿಗೆ ಮಾರಕವಾಗಿದೆ. ಕೆಎಂಎಫ್ ಆಡಳಿತ ಮಂಡಳಿಯಿಂದ ಒಂದು ಲೀಟರ್ ಗೆ 23 ರೂ. ನೀಡುತ್ತಿದೆ. ಮಂಡ್ಯ, ಮೈಸೂರಿನಲ್ಲಿ 25 ರೂ. ಲೀಟರ್ ನೀಡಲಾಗುತ್ತಿದೆ. ಒಬ್ಬ ರೈತನಿಗೆ ಎರಡು ರೂಪಾಯಿ ಕಡಿಮೆ ಹಣ ನೀಡುತ್ತಿದ್ದಾರೆ. ಪ್ರತಿ ದಿನ 10 ಲಕ್ಷ ಲೀಟರ್ ಹಾಲು ಸಂಗ್ರಹಣೆ ಆಗುತ್ತಿದೆ. ದಿನಕ್ಕೆ 20 ಲಕ್ಷ ರೂ. ತಿಂಗಳಿಗೆ 6 ಕೋಟಿ ರೂ. ರೈತರಿಗೆ ನಷ್ಟ ಆಗುತ್ತಿದೆ ಎಂದರು.

    ಸಚಿವ ರೇವಣ್ಣ ಅವರಿಗೆ ಕೆಎಂಎಫ್ ಮೇಲೆ ವ್ಯಾಮೋಹವಿದೆ. ಅದು ಕೂಡ ಸರ್ಕಾರ ಅಭದ್ರತೆಗೆ ಇದು ಒಂದು ಕಾರಣವಾಗಿದ್ದು, ಆದರೂ ಅವರು ತಮ್ಮ ಹಳೇ ಚಾಳಿ ಬಿಟ್ಟಿಲ್ಲ. ಸರ್ಕಾರ ಸಂಕಷ್ಟದಲ್ಲಿದ್ದರೂ ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಸಚಿವರ ಸ್ಥಾನ ಬದಲಾಗಿದ್ದು, ಅವರು ವರ್ಗಾವಣೆ ಮಂತ್ರಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಸುಪ್ರೀಂಕೋರ್ಟ್ ನ ಎಲ್ಲಾ ಆದೇಶಗಳನ್ನು ಗಾಳಿಗೆ ತೂರಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯಪಾಲರು ಕೂಡಲೇ ತಡೆ ನೀಡಬೇಕು ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ತನ್ನ ಸ್ಥಾನಗಳನ್ನು ಕಳೆದುಕೊಂಡಿದೆ. ಅಲ್ಲದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಿಂದ ಅಭಿವೃದ್ಧಿಯಾಗಲ್ಲ ಎಂದು ಜನ ಮನಗಂಡಿದ್ದಾರೆ. ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಜನಪರವಾದ ಕೆಲಸವನ್ನು ಮಾಡುತ್ತದೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಮಳೆ ಬಂದ್ರೂ ಪಟ್ಟು ಬಿಡದ ಕನಕಪುರ ಬಂಡೆ- ಹೋಟೆಲ್ ಎದುರು ಕೊಡೆ ಹಿಡಿದುಕೊಂಡೇ ಠಿಕಾಣಿ

    ಮಳೆ ಬಂದ್ರೂ ಪಟ್ಟು ಬಿಡದ ಕನಕಪುರ ಬಂಡೆ- ಹೋಟೆಲ್ ಎದುರು ಕೊಡೆ ಹಿಡಿದುಕೊಂಡೇ ಠಿಕಾಣಿ

    ಮುಂಬೈ: ಮಳೆ ಬಂದರೂ ಕೊಡೆ ಹಿಡಿದುಕೊಂಡೇ ಸಚಿವ ಡಿ.ಕೆ ಶಿವಕುಮಾರ್ ಅವರು ಮುಂಬೈನ ರೆನೈಸನ್ಸ್ ಹೋಟೆಲ್ ಮುಂಭಾಗ ಪಟ್ಟು ಬಿಡದೆ ಕುಳಿತಿದ್ದಾರೆ.

    ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲಿಲ್ಲ. ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

    ಬಿಜೆಪಿ ಮುಖಂಡರಿಬ್ಬರು ಮಂಗಳವಾರ ರಾತ್ರಿ ಅತೃಪ್ತ ಶಾಸಕರನ್ನು ಭೇಟಿಯಾದ ಬೆನ್ನಲ್ಲೇ ಇಂದು ಸಚಿವ ಡಿಕೆ ಶಿವಕುಮಾರ್, ಜಿ.ಟಿ ದೇವೇಗೌಡ ಹಾಗೂ ಶಾಸಕ ಶಿವಲಿಂಗೇ ಗೌಡ ಅವರು ಮುಂಬೈಗೆ ತೆರಳಿದ್ದಾರೆ. ಮುಂಬೈಗೆ ಬರುವ ಮಾಹಿತಿ ಬೆನ್ನಲ್ಲೇ ಅಲ್ಲಿನ ಪೊಲೀಸ್ ಅಲರ್ಟ್ ಆಗಿದ್ದು, ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ. ಹೀಗಾಗಿ ಹೋಟೆಲ್ ಬಳಿ ಬಂದರೂ ಡಿಕೆಶಿಗೆ ಒಳಗಡೆ ಹೋಗಲು ಸಾಧ್ಯವಾಗಿಲ್ಲ.

    ಹೋಟೆಲ್ ಒಳಗಡೆ ಹೋಗಲು ಪೊಲೀಸರು ನಿರಾಕರಿಸುತ್ತಿದ್ದಂತೆಯೇ ಡಿಕೆಶಿ ಹಾಗೂ ಪೊಲೀಸರ ಮಧ್ಯೆ ಮಾತುಕತೆ ನಡೆದಿದೆ. ನಾವು ಒಂದೇ ಕುಟುಂಬದವರು. ನಮ್ಮ ಮಧ್ಯೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ನಾವು ಸರಿಪಡಿಸಲು ಬಂದಿದ್ದೇವೆಯೋ ಹೊರತು, ಬೆದರಿಕೆ ಹಾಕಲು ಬಂದಿಲ್ಲ. ನಿನ್ನೆ ಬಿಜೆಪಿಯವರನ್ನು ಬಿಟ್ಟಿದ್ದೀರಿ, ಆದರೆ ಇವತ್ತು ನಮ್ಮವರನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಸಚಿವರು ಮನವಿ ಮಾಡಿಕೊಂಡರೂ ಪೊಲೀಸರು ಸುತಾರಾಂ ಒಪ್ಪಿಲ್ಲ. ಹೀಗಾಗಿ ಇಬ್ಬರು ಮುಖಂಡರೊಂದಿಗೆ ಡಿಕೆಶಿ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಅತೃಪ್ತರು, ನಮಗೆ ಡಿಕೆಶಿ ಮೇಲೆ ಗೌರವವಿದೆ. ನಾವಿಂದು ಉನ್ನತ ಸ್ಥಾನಕ್ಕೇರಲು ಅವರೇ ಕಾರಣ. ಹೀಗಾಗಿ ಮುಂಬೈನಲ್ಲಿ ಅವರಿಗೆ ಅವಮಾನ ಆಗುವುದು ನಮಗೆ ಸರಿ ಅನ್ನಿಸುತ್ತಿಲ್ಲ. ಆದರೆ ಯಾವುದೇ ಕಾರಣಕ್ಕೂ ನಾವು ಯಾರನ್ನೂ ಭೇಟಿ ಮಾಡಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

    ಒಂದೆಡೆ ಅತೃಪ್ತರು ಡಿಕೆಶಿ ಭೇಟಿಗೆ ನಿರಾಕರಿಸಿದರೆ ಇತ್ತ ಸಚಿವರು ನಾನು ಶಾಸಕರನ್ನು ಭೇಟಿ ಮಾಡಿಯೇ ಬೆಂಗಳೂರಿಗೆ ವಾಪಸ್ಸಾಗುವುದು ಎಂಬ ಹಠಕ್ಕೆ ಬೀಳುವ ಮೂಲಕ ಮುಂಬೈನಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.

  • ನನ್ನ ಸ್ನೇಹಿತರ ಭೇಟಿಗೆ ನಾಳೆ ಮುಂಬೈಗೆ ಹೋಗ್ತೀನಿ – ಡಿಕೆಶಿ

    ನನ್ನ ಸ್ನೇಹಿತರ ಭೇಟಿಗೆ ನಾಳೆ ಮುಂಬೈಗೆ ಹೋಗ್ತೀನಿ – ಡಿಕೆಶಿ

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಪಕ್ಷದ ಶಾಸಕರ ಮನವೊಲಿಸಿ ಕರೆತರಲು ನಾಳೆ ಮುಂಬೈಗೆ ತೆರಳುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲವನ್ನು ಆರಂಭ ಮಾಡಿರುವ ಬಿಜೆಪಿ ಶಾಸಕರು ಈಗ ಏನು ತಿಳಿಯದಂತೆ ಮಾತನಾಡುತ್ತಿದ್ದಾರೆ. ಆದ್ದರಿಂದ ನನ್ನ ಸ್ನೇಹಿತರು, ಶಾಸಕರನ್ನು ಭೇಟಿ ಮಾಡಲು ನಾಳೆ ಮುಂಬೈಗೆ ತೆರಳುತ್ತೇನೆ. ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಈ ಹಿಂದೆ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕರು. ಪಕ್ಷ ಸಂಕಷ್ಟದಲ್ಲಿ ಇದ್ದ ವೇಳೆ ಅವರು ಹೆಗಲು ನೀಡಿ ನಿಂತಿದ್ದರು. ಆದರೆ ಇಂದು ಅವರು ಅಸಮಾಧಾನ ಹೊಂದಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದರು.

    ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಶಾಸಕರು ಹೇಳಿದ್ದಾರೆ. ಅದರಲ್ಲೂ ಸೋಮಶೇಖರ್ ಅವರು ಪಕ್ಷದ ಪರ ಸಂಕಷ್ಟದ ಸಮಯದಲ್ಲಿ ಕೆಲಸ ಮಾಡಿದ್ದರು. ಅವರೊಂದಿಗೆ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಮಾತನಾಡುವ ಅಗತ್ಯವಿದೆ. ಆದ್ದರಿಂದ ನಾನು ಅವರ ಭೇಟಿಗೆ ತೆರಳುತ್ತೇನೆ ಎಂದರು. ಅಲ್ಲದೇ ಇದೇ ಸಂದರ್ಭದಲ್ಲಿ ರಿವರ್ಸ್ ಆಪರೇಷನ್ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾರು ಏನು ಮಾತನಾಡುತ್ತಾರೆ ಮಾತನಾಡಲಿ. ಜನರನ್ನು ತಪ್ಪು ದಾರಿಗೆ ಎಳೆಯುವ ಅವರ ಯತ್ನ ಸಫಲ ಆಗುವುದಿಲ್ಲ ಎಂದರು.

    ಕೆಲವರಿಗೆ ಕೆಲವು ಸಮಸ್ಯೆಗಳಿರುತ್ತವೆ, ಹಾಗೆಯೇ ನನಗೂ ಹೊಟ್ಟೆ ನೋವು ಇದ್ದು, ಔಷಧಿ ತೆಗೆದುಕೊಳ್ಳುತ್ತಿದ್ದೇನೆ. ಅದರಂತೆ ಶಾಸಕರಿಗೂ ಕೆಲವು ಅಸಮಾಧಾನಗಳಿವೆ. ಶಾಸಕ ಸ್ಥಾನಕ್ಕೆ ಆಯ್ಕೆ ಆಗಿರುವ 224 ಮಂದಿಯೂ ನನಗೆ ಸ್ನೇಹಿತರಾಗಿದ್ದು, ಎಲ್ಲರೂ ನನ್ನ ಬಳಿ ಅವರ ಕೆಲಸ ಮಾಡಿಕೊಳ್ಳಲು ಬರುತ್ತಾರೆ. ಆದರೆ ನಾನು ಎಂದು ಅವರ ಬಳಿ ಅಭಿವೃದ್ಧಿ ವಿಚಾರ ಬಿಟ್ಟು ರಾಜಕೀಯ ಮಾತನಾಡಿಲ್ಲ. ಯಾರು ಏನು ಮಾತನಾಡುತ್ತಾರೆ ಎಲ್ಲವನ್ನು ನಾನು ಹೇಳಿಕೊಳ್ಳುತ್ತೇನೆ ಎಂದರು.

  • ಸಮ್ಮಿಶ್ರ ಸರ್ಕಾರ ಉರುಳಿದ ಬಳಿಕ ‘ಕೈ’ಗೆ ಶಕುನಿ ಯಾರು ಅನ್ನೋದು ಗೊತ್ತಾಗುತ್ತೆ: ಶ್ರೀರಾಮುಲು

    ಸಮ್ಮಿಶ್ರ ಸರ್ಕಾರ ಉರುಳಿದ ಬಳಿಕ ‘ಕೈ’ಗೆ ಶಕುನಿ ಯಾರು ಅನ್ನೋದು ಗೊತ್ತಾಗುತ್ತೆ: ಶ್ರೀರಾಮುಲು

    ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕುನಿಯಿಂದ ನಾವು ಸೋತ್ತಿದ್ದೇವೆ ಎಂದು ಗೊತ್ತಾಯಿತು ಎಂದು ಶಾಸಕ ಶ್ರೀರಾಮುಲು ಅವರು ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಹೇಳದೆ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲೇ ಇಂದು ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿ ಇಲ್ಲದ ಸ್ಥಿತಿಗೆ ತಲುಪಿದೆ. ಆದರೆ ಕೆಲ ನಾಯಕರು ಪ್ರಚಾರಕ್ಕೆ ಮಾತನಾಡುತ್ತಾ ನೆಗೆಟಿವ್ ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.

    ಬಳ್ಳಾರಿ ಜಿಲ್ಲೆಯಲ್ಲಿ ಕೃಷ್ಣೆ ಬತ್ತಿ ಹೋಗಿದ್ದರೂ ಕೂಡ ಇದುವರೆಗೂ ಉಸ್ತುವಾರಿ ಸಚಿವರಾಗಿ ಒಮ್ಮೆಯೂ ಭೇಟಿ ನೀಡಿಲ್ಲ. ಜನರು ಕುಡಿಯಲು ನೀರು ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದರೆ ಇವರು ಇಲ್ಲಿ ಮಾತನಾಡುತ್ತಿದ್ದಾರೆ. ಬಳ್ಳಾರಿಯಲ್ಲಿ ನಾನೇ ಸುಪ್ರೀಂ ಎಂದು ಪೋಸ್ ಕೊಟ್ಟವರು ಮೂಲೆ ಸೇರಿದ್ದಾರೆ. ಉಸ್ತುವಾರಿ ಸಚಿವರು ಯಾವ ರೀತಿ ಕೆಲಸ ಮಾಡಿದ್ದಾರೆ ಗೊತ್ತಿದೆ ಎಂದರು.

    ಮಹಾಭಾರತದ ಕುರುಕ್ಷೇತ್ರದಲ್ಲಿ ಶಕುನಿಯಿಂದ ನಾವು ಸೋತಿದ್ದು ಎಂದು ಸೋತ ಬಳಿಕ ಕೌರವರಿಗೆ ತಿಳಿಯಿತು. ಕಾಂಗ್ರೆಸ್‍ಗೆ ಈಗ ಕೂಡ ಶಕುನಿ ಮಾತಿನಿಂದ ಸೋಲಾಗಿದೆ ಎಂದು ಗೊತ್ತಾಗಿದೆ. ಆದರೆ ಸಮ್ಮಿಶ್ರ ಸರ್ಕಾರ ಉರುಳಿ ಹೋದ ಬಳಿಕ ಕಾಂಗ್ರೆಸ್ ನಾಯಕರಿಗೆ ಶಕುನಿ ಮಾಮಾ ಯಾರು ಎಂಬ ಬಗ್ಗೆ ಜ್ಞಾನೋದಯ ಆಗುತ್ತೆ ಎಂದರು.

    ನಿನ್ನೆಯಷ್ಟೇ ಕುಂದಗೋಳದಲ್ಲಿ ಮಾತನಾಡಿದ್ದ ಸಚಿವ ಡಿಕೆ ಶಿವಕುಮಾರ್ ಅವರು, ತಮಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿ ಆಗಿದ್ದ ಕಾಂಗ್ರೆಸ್ ಶಾಸಕರು ಬಿಜೆಪಿ ಪಕ್ಷ ಸೇರಲು ಆಹ್ವಾನ ನೀಡಿದ್ದರು ಎಂದು ಪರೋಕ್ಷವಾಗಿ ಶ್ರೀರಾಮುಲು ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಇದೇ ರೀತಿ ಇಂದು ಶ್ರೀರಾಮುಲು ಅವರು ಕೂಡ ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಹೇಳದೆ ಟಾಂಗ್ ನೀಡಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಡಿಕೆಶಿ, ಶ್ರೀರಾಮುಲು ಮುಖಾಮುಖಿ – ಎದುರಾಗುತ್ತಿದ್ದಂತೆ ಪಂಚಿಂಗ್ ಡೈಲಾಗ್ ಹೊಡೆದ ನಾಯಕರು

    ಡಿಕೆಶಿ, ಶ್ರೀರಾಮುಲು ಮುಖಾಮುಖಿ – ಎದುರಾಗುತ್ತಿದ್ದಂತೆ ಪಂಚಿಂಗ್ ಡೈಲಾಗ್ ಹೊಡೆದ ನಾಯಕರು

    ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಮುಳುಗಿರುವ ಕಾಂಗ್ರೆಸ್, ಬಿಜೆಪಿ ನಾಯಕರು ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇಂದು ಪ್ರಚಾರ ಮುಗಿಸಿ ಬೆಂಗಳೂರಿಗೆ ಹೋರಾಟ ಸಚಿವ ಡಿಕೆ ಶಿವಕುಮಾರ್ ಹಾಗೂ ಶಾಸಕ ಶ್ರೀರಾಮುಲು ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿದಂತೆ ಸಚಿವ ಡಿಕೆ ಶಿವಕುಮಾರ್ ಅವರು ಶ್ರೀರಾಮುಲು ಅವರೊಂದಿಗೆ ಮಾತಕತೆ ನಡೆಸಿದ್ದು, ಸುಮಾರು 30 ನಿಮಿಷ ಕಾಲ ಇಬ್ಬರು ಮಾತನಾಡಿದ್ದಾರೆ. ಇದೇ ವೇಳೆ ಶ್ರೀರಾಮುಲು ಅಣ್ಣ ಎಂದು ಕರೆಯುವ ಮೂಲಕ ಡಿಕೆ ಶಿವಕುಮಾರ್ ಅವರು ಕೈಮುಗಿದು ಮಾತನಾಡಿದರು. ಡಿಕೆ ಶಿವಕುಮಾರ್ ಅವರ ಈ ಮಾತಿಗೆ ಕ್ಷಣ ಕಾಲ ಕಕ್ಕಾಬಿಕ್ಕಿಯಾದ ಶ್ರೀರಾಮುಲು ಅವರು, ಟ್ರಬಲ್ ಶೂಟರ್ ಎಂದು ಕರೆದು ಮುಗಳ್ನಕ್ಕರು. ಆ ಮೂಲಕ ಇಬ್ಬರು ಮಾತಿನಲ್ಲೇ ಕಾಲೆಳೆದುಕೊಂಡರು.

    ಅಪರೇಷನ್ ಕಮಲ: ಇದಕ್ಕೂ ಮುನ್ನ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಎರಡು ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಆ ಬಳಿಕ ದೇಶದಲ್ಲಿ ನಮ್ಮ ಸರ್ಕಾರ ರಚನೆ ಆದರೆ ಕರ್ನಾಟಕದಲ್ಲೂ ನಮ್ಮದೇ ಸರ್ಕಾರ ರಚನೆ ಆಗಲಿದೆ. ಈಗಾಗಲೇ 104 ಸ್ಥಾನಗಳಲ್ಲಿ ಗೆದ್ದಿದ್ದು, ಉಪಚುನಾವಣೆ ಬಳಿಕ 106 ಆಗುತ್ತೆ. ಇದರ ಬೆನ್ನಲ್ಲೇ ಇಬ್ಬರು ಪಕ್ಷೇತರರು ಬೆಂಬಲ ಸಿಗುತ್ತೆ. ಇನ್ನು ಹೆಚ್ಚಿನ ಶಾಸಕನ್ನು ಸೆಳೆಯಲು ನಮ್ಮ ರಾಜ್ಯಾಧ್ಯಕ್ಷರು ಪ್ರಯತ್ನ ನಡೆಸಿದ್ದಾರೆ. ಸರ್ಕಾರ ರಚನೆ ಮಾಡಲು ಪ್ರಯತ್ನ ನಡೆಸಿದ್ದಾರೆ ಎಂದು ಪರೋಕ್ಷವಾಗಿ ಆಪರೇಷ್‍ನ್ ಕಮಲ ಸುಳಿವು ನೀಡಿದರು.

    ಕುಮಾರಸ್ವಾಮಿ ರೆಸಾರ್ಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ವಿಶ್ರಾಂತಿ ಪಡೆಯುವುದಕ್ಕೆ ನನ್ನ ವಿರೋಧ ಇಲ್ಲಾ. ಆದರೆ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಅವರ ಆಡಳಿತ ಸೀಮಿತವಾಗಬಾರದು. ನಾವೇನೂ ತಪ್ಪು ಮಾಡಿಲ್ಲ, ಉಳಿದ ಜಿಲ್ಲೆಗಳ ಕಡೆ ಗಮನ ಹರಿಸಲಿ ಎಂದು ಸಲಹೆ ನೀಡಿದರು. ಅಲ್ಲದೇ ಸಚಿವ ಡಿಕೆ ಶಿವಕುಮಾರ್ ಅವರು ಅಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರ ಮಾತಿನಲ್ಲೇ ಒಂದು ಅರ್ಥ ಇರುತ್ತೆ, ಮನಸ್ಸಿನಲ್ಲಿ ಮತ್ತೊಂದು ಅರ್ಥ ಇರುತ್ತೆ. ಈ ವಿಚಾರ ಎಲ್ಲರಿಗೂ ತಿಳಿದಿದ್ದು. ನಮ್ಮನ್ನು ಅಣ್ಣ ಎಂದು ಕರೆದರೆ ಏನು ಆಗುವುದಿಲ್ಲ. ಅವರ ಮಾತಿನ ಒಳಾರ್ಥ ಎಲ್ಲರಿಗೂ ತಿಳಿದಿದೆ ಎಂದರು.

  • ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

    ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

    ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶಣ್ಣ ನಾನು ಪಕ್ಷದಲ್ಲೇ ಇದ್ದೇವೆ. ಇದು ಹೈಕಮಾಂಡ್ ಅವರಿಗೂ ತಿಳಿದಿದೆ. ಆದ್ದರಿಂದ ಮಾಧ್ಯಮಗಳಿಗೆ ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದರು.

    ನಮ್ಮಲ್ಲಿ ಇರುವ ಅಸಮಾಧಾನವನ್ನು ನಾವೇ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸುಕೊಳ್ಳುತ್ತೇವೆ. ಈ ಬಗ್ಗೆ ಹೈಕಮಾಂಡ್‍ಗೆ ತಿಳಿಸಿದ್ದೇವೆ. ನಮ್ಮಲ್ಲಿ ಯಾರು ಸಂಧಾನ ಮಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ. ಕುಂದಗೋಳದಲ್ಲಿ ನಾವು ಗೆಲ್ಲುತ್ತೇವೆ. ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರೂ ನಮ್ಮ ನಾಯಕರಾಗಿದ್ದಾರೆ. ಯಾರು ಅಂತಕ ಪಡೆಯುವ ಅಗತ್ಯವಿಲ್ಲ ಎಂದರು.

    ಇತ್ತ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ರಮೇಶ್ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ತಮ್ಮತ್ತ ಸೆಳೆದು ಬಿಜೆಪಿಗೆ ಚಮಕ್ ನೀಡಿದ್ದಾರೆ. ಆ ಮೂಲಕ ಸಮ್ಮಿಶ್ರ ಸರ್ಕಾರ ಚುನಾವಣೆ ಬಳಿಕ ಉಳಿಯುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.

  • ಶಿವಮೊಗ್ಗದಲ್ಲಿ ಮಧು ಗೆಲುವು ಖಚಿತ – ಸರ್ವೆ ನೋಡಿ ಕೂದಲು ಬಿಳಿಯಾಗಿದೆ ಎಂದ್ರು ಡಿಕೆಶಿ

    ಶಿವಮೊಗ್ಗದಲ್ಲಿ ಮಧು ಗೆಲುವು ಖಚಿತ – ಸರ್ವೆ ನೋಡಿ ಕೂದಲು ಬಿಳಿಯಾಗಿದೆ ಎಂದ್ರು ಡಿಕೆಶಿ

    – ಬೆಳಗಾವಿ ಬ್ರದರ್ಸ್ ದೊಡ್ಡವರು, ಪ್ರೀತಿ ಜಾಸ್ತಿ ಇರುತ್ತೆ
    – ಸತೀಶ್ ಜಾರಕಿಹೋಳಿ ಅವರು ದೊಡ್ಡವರು, ಸಾಹುಕಾರರು

    ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನದ ಬೆನ್ನಲ್ಲೇ ರಾಜ್ಯದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಿದ್ದು, ಇತ್ತ ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವಿನ ವೈಮನಸ್ಸು ಹೊರ ಬಹಿರಂಗವಾಗುತ್ತಿದೆ. ಇಂದು ಸಚಿವ ಡಿಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಚುನಾವಣಾ ಕುರಿತ ಆಕ್ಷೇಪಕ್ಕೆ ವ್ಯಂಗ್ಯವಾಡಿ ಟಾಂಗ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ನಾನು ಉಪಚುನಾವಣೆ ಜವಾಬ್ದಾರಿ ಹಿನ್ನೆಲೆಯಲ್ಲಿ ಕುಂದಗೋಳಕ್ಕೆ ತೆರಳಬೇಕಿತ್ತು. ಆದರೆ ಐಟಿ ಪ್ರಕರಣದ ಸಂಬಂಧ ವಿಚಾರಣೆ ಇರುವುದರಿಂದ ನ್ಯಾಯಾಲಯಕ್ಕೆ ಹಾಜರಾಗಿದ್ದು, ನಾಳೆಯೂ ನ್ಯಾಯಾಲಯಕ್ಕೆ ಹೋಗಬೇಕು ಎಂದು ವಿವರಿಸಿದರು.

    ಇದೇ ವೇಳೆ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರೇ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮಂಡ್ಯ ಸೇರಿದಂತೆ ಹಲವು ಕ್ಷೇತ್ರಗಳ ಚುನಾವಣಾ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಸಮಿಕ್ಷೆಗಳನ್ನು ನೋಡಿ ನೋಡಿ ನನ್ನ ಕೂದಲು ಬೆಳ್ಳಗಾಗಿದೆ ಎಂದು ವ್ಯಂಗ್ಯವಾಡಿದರು.

    ಉತ್ತರ ಕರ್ನಾಟಕದತ್ತ ಡಿಕೆಶಿ: ಮೈಸೂರು ಪ್ರಾಂತ್ಯದ ರಾಜಕೀಯದಿಂದ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂಬ ಅನುಮಾನ ಮಾಡಿದೆ. ಇತ್ತ ಕುಂದಗೋಳ ಕ್ಷೇತ್ರದ ಉಸ್ತುವಾರಿಯನ್ನಾಗಿ ಹೈಕಮಾಂಡ್ ಡಿಕೆಶಿ ಅವರನ್ನು ನೇಮಕ ಮಾಡಿರುವುದಕ್ಕೆ ಸತೀಶ್ ಜಾರಕಿಹೊಳಿ ಸೇರಿದಂತೆ, ಆ ಭಾಗದ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕುರಿತಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಅವರು, ಸತೀಶ್ ಜಾರಕಿಹೋಳಿ ಅವರು ದೊಡ್ಡವರು, ಸಾಹುಕಾರ್ ಇದ್ದಾರೆ. ನಾಯಕರು ಯಾರೇ ಆಗಲಿ ಇನ್ನೊಬ್ಬರ ಬಗ್ಗೆ ಜಾಸ್ತಿ ಏಕೆ ಮಾತನಾಡುತ್ತಾರೆ ಅಂದರೆ, ಅವರಿಗೆ ನಮ್ಮ ಮೇಲೆ ಜಾಸ್ತಿ ಪ್ರೀತಿ ಇರುತ್ತದೆ. ಆದ್ದರಿಂದಲೇ ಅವರು ನನ್ನನ್ನು ನೆನೆಸಿಕೊಳ್ಳುತ್ತಾರೆ. ಅಲ್ಲದೇ ಅವರು ನಾಯಕರು ನಾವು ಸಾಮಾನ್ಯ ಪ್ರಜೆಗಳು. ಪಕ್ಷ ನೀಡಿದ ಜವಾಬ್ದಾರಿಯನ್ನಷ್ಟೇ ನಾನು ನಿರ್ವಹಿಸುತ್ತಿದ್ದೇನೆ ಎಂದರು. ಇದೇ ಸಮಯದಲ್ಲಿ ರಮೇಶ್ ಜಾರಕಿಹೊಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ರಮೇಶ್ ಜಾರಕಿಹೋಳಿ ಬೆಂಗಳೂರಿನಲ್ಲಿ ಇದ್ದಾರಾ? ಇದ್ದರೆ ಅವರೊಂದಿಗೆ ಮಾತನಾಡುತ್ತೇನೆ. ಬೆಂಗಳೂರಲ್ಲೇ ಇದ್ದರೆ ಕಾಲ್ ಮಾಡಿ ಮಾತನಾಡುತ್ತೇನೆ ಎಂದು ವ್ಯಂಗ್ಯವಾಗಿ ನಕ್ಕು ಸುಮ್ಮನಾದರು.

    ಸಚಿವ ಶಿವಳ್ಳಿ ಅವರು ನಾನು ಉತ್ತಮ ಸ್ನೇಹಿತರು. ಅವರನ್ನು ಸೋನಿಯಾ ಗಾಂಧಿ ಅವರ ಬಳಿ ಕರೆದುಕೊಂಡು ಹೋಗಿ ಪಕ್ಷಕ್ಕೆ ಸೇರ್ಪಡೆ ಮಾಡಿದ್ದು ನಾನು. ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸಲು ನನ್ನ ಕುಟುಂಬಕ್ಕೆ ನಾನು ಅನ್ಯಾಯ ಮಾಡುತ್ತಿದ್ದೇನೆ. ಕುಟುಂಬದೊಂದಿಗೆ ಪ್ರವಾಸ ಮಾಡುವ ನಿರ್ಧಾರ ಮಾಡಿದ್ದೆ. ಆದರೆ ಪಕ್ಷ ಹೆಚ್ಚಿನ ಜವಾಬ್ದಾರಿ ನೀಡಿದ ಪರಿಣಾಮ ನಾನು ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾರು ವಿರೋಧಿಗಳು ಇಲ್ಲ, ಎಲ್ಲರೂ ನನ್ನ ಸ್ನೇಹಿತರೇ ಎಂದರು.

  • ಡಿಕೆಶಿ ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ – ರಮೇಶ್ ಜಾರಕಿಹೊಳಿ

    ಡಿಕೆಶಿ ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ – ರಮೇಶ್ ಜಾರಕಿಹೊಳಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ನಿರಂತರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾ, ಬಂಡಾಯದ ಭಾವುಟ ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಲೀಡರೇ ಅಲ್ಲ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಧಾನಕ್ಕೆ ಡಿಕೆ ಶಿವಕುಮಾರ್ ಸಿದ್ಧ ಎಂಬ ಹೇಳಿಕೆಗೆ ತಿರುಗೇಟು ನೀಡಿದರು. ಡಿಕೆ ಶಿವಕುಮಾರ್ ಲೀಡರೇ ಅಲ್ಲ. ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ ಎಂದು ಹೇಳಿದರು. ಆ ಮೂಲಕ ಮತ್ತೊಮ್ಮೆ ರಾಹುಲ್‍ರೊಂದಿಗೆ ಚರ್ಚೆ ನಡೆಸುತ್ತರಾ ಎನ್ನುವ ಪ್ರಶ್ನೆ ಎದ್ದಿದೆ.

    ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ಆಪರೇಷನ್ ಕಮಲ ಈ ಬಾರಿಯೂ ವಿಫಲವಾಗಲಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದ್ದು. ರಾಹುಲ್ ಗಾಂಧಿ ಮನವೊಲಿಸಿದರೆ ಕಾಂಗ್ರೆಸ್‍ನಲ್ಲೇ ಉಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

    ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್ ಅವರು, ಶಾಸಕ ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರವನ್ನ ಪಕ್ಷದ ನಾಯಕರು, ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳುತ್ತಾರೆ. ಅವರು ಎಲ್ಲವನ್ನೂ ಗಮನಿಸುತ್ತಾರೆ. ನಾವು ಮನವೊಲಿಸಲು ಪ್ರಯತ್ನ ಪಟ್ಟೆವು, ಆದರೆ ನಾನು ಮನವೊಲಿಸಲು ಅವರು ಸಿಕ್ಕರೆ ತಾನೇ? ಸಿಕ್ಕರೆ ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಅಲ್ಲದೇ ಇಲ್ಲಿಯವರೆಗೂ ಅವರನ್ನ ಗೌರವದಿಂದ ಕಂಡಿದ್ದೇವೆ. ಪಕ್ಷ ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಅವರಿಗೆ ನೀಡಿದೆ. ಅವರಿಗೆ ಉಸಿರುಕಟ್ಟುವಂತೆ ಏನಾಗಿದೆಯೋ ಗೊತ್ತಿಲ್ಲ. ಭಗವಂತ ಅವರ ಆಸೆ ಈಡೇರಿಸುವಂತೆ ಮಾಡಲಿ ಎಂದು ಹೇಳಿ ಟಾಂಗ್ ನೀಡಿದ್ದರು.

  • ಸಿದ್ದರಾಮಯ್ಯ ಆದ್ಮೇಲೆ ನೆಕ್ಸ್ಟ್ ನಾನೇ!

    ಸಿದ್ದರಾಮಯ್ಯ ಆದ್ಮೇಲೆ ನೆಕ್ಸ್ಟ್ ನಾನೇ!

    ವಿಜಯಪುರ: ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಜಪ ಶುರುವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಗೃಹ ಸಚಿವ ಎಂಬಿ ಪಾಟೀಲ್ ಘೋಷಿಸಿಕೊಂಡಿದ್ದಾರೆ.

    ಬಬಲೇಶ್ವರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿಎಂ ಆಗ್ತೀನಿ. ನನಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ದುರಾಸೆ ಇಲ್ಲ. ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಹೇಳಿದರು.

    ಇದೇ ವೇಳೆ ಐಟಿ ದಾಳಿಗೆ ಪ್ರತಿಕ್ರಿಯೆ ನೀಡಿ, ನನ್ನ ಸಂಬಂಧಿಕರು ಹಾಗೂ ಸ್ನೇಹಿತರ ಮನೆ ಮೇಲೆ ನಾಳೆಯೂ ಐಟಿ ದಾಳಿ ಆಗಬಹುದು. ಅವರ ಮನೆಯಲ್ಲಿ 6 ಲಕ್ಷ ರೂ. ನಗದು ಇರಬಹುದು. ಐಟಿ ದಾಳಿ ಮಾಡಬೇಕಿದ್ದರೆ ಆಪರೇಷನ್ ಕಮಲ ಮಾಡುವವರ ಮನೆಯಲ್ಲಿ ಐಟಿ ದಾಳಿ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾನು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳುವ ಶಕ್ತಿ ನನಗಿದೆ. ಈಶ್ವರಪ್ಪ ಅವರನ್ನು ಈ ರೀತಿ ಹೇಳುವಂತೆ ಕೇಳಿ ನೋಡೋಣ ಎಂದು ಟಾಂಗ್ ನೀಡಿದ್ದರು. ಆ ಬಳಿಕ ಮತ್ತೆ ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತ ಚರ್ಚೆ ಹೆಚ್ಚಾಗಿತ್ತು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್, ನನಗೆ ಇನ್ನೂ ವಯಸ್ಸಿದೆ ಎಂಬ ಉತ್ತರಿಸಿದ್ದರು.

  • ಅಯ್ಯೋ.. ಡೋಂಟ್ ವರಿ ಬಾಬಾ: ಡಿಕೆಶಿಗೆ ಬಿಎಸ್‍ವೈ ತಿರುಗೇಟು

    ಅಯ್ಯೋ.. ಡೋಂಟ್ ವರಿ ಬಾಬಾ: ಡಿಕೆಶಿಗೆ ಬಿಎಸ್‍ವೈ ತಿರುಗೇಟು

    ಶಿವಮೊಗ್ಗ: ಅಯ್ಯೋ.. ಡೋಂಟ್ ವರಿ ಬಾಬಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ಸಚಿವ ಡಿ.ಕೆ.ಶಿವಕುಮಾರ್ ಅವರ ತಂತ್ರಕ್ಕೆ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಚುನಾವಣೆಯ ಕಡೆ ಗಳಿಗೆಯಲ್ಲಿ ಬಂದು ಹಗುರವಾಗಿ ಮಾತಾಡಿದರೆ ಏನು ಆಗಲ್ಲ. ಡೈರಿ ಬಗ್ಗೆ ತಾವು ಹೇಳುತ್ತಿರುವುದು ಸುಳ್ಳು ಅಂತ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿದೆ. ಆದರೂ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ರಾಜಕೀಯ ಅಸ್ತಿತ್ವದ ಪ್ರಶ್ನೆಯಾಗಿರುವ ಶಿವಮೊಗ್ಗ ಕ್ಷೇತ್ರ

    ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಪುತ್ರ ಬಿ.ವೈ. ರಾಘವೇಂದ್ರ ಅವರು ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕಲು ಸಿಎಂ ಕುಮಾರಸ್ವಾಮಿ ಮತ್ತು ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದು, ಭದ್ರಾವತಿಯಲ್ಲಿ ಮೊದಲ ಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಭದ್ರಾವತಿಯಲ್ಲಿ ಬಂಡಾಯ ಶಮನವಾಗಿದೆ. ಹಾವು ಮುಂಗುಸಿಯಂತಿದ್ದ ಭದ್ರಾವತಿಯ ಕಾಂಗ್ರೆಸ್ ಶಾಸಕ ಸಂಗಮೇಶ್, ಜೆಡಿಎಸ್‍ನ ಅಪ್ಪಾಜಿ ಗೌಡ ದಶಕಗಳ ಬಳಿಕ ಒಂದಾಗಿದ್ದಾರೆ. ಇಬ್ಬರ ಮಧ್ಯೆ ಇದ್ದ ಮುನಿಸಿಗೆ ಟ್ರಬಲ್ ಶೂಟರ್, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇತಿಶ್ರೀ ಹಾಡಿದ್ದಾರೆ. ಈ ಮೂಲಕ ಇಬ್ಬರು ನಾಯಕರನ್ನು ಅಕ್ಕ ಪಕ್ಕದಲ್ಲಿ ಕೂರಿಸಿಕೊಂಡು ಶುಕ್ರವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಇನ್ನು ಮುಂದೆ ಶಾಸಕ ಸಂಗಮೇಶ್ ಹಾಗೂ ಅಪ್ಪಾಜಿ ಗೌಡ ಜಂಟಿಯಾಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದರು.