Tag: Minister G.T.Deve Gowda

  • ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

    ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು.

    ಮ್ಯಾರಥಾನ್ ಚಾಲನೆ ಬಳಿಕ ಸಚಿವರು ಓಟಗಾರರ ಜೊತೆಗೆ ಸ್ಪರ್ಧೆ ನೀಡಲು ಮುಂದಾದರು. ಆದರೆ ಪಂಚೆ ಧರಿಸಿದ್ದ ಜಿ.ಟಿ.ದೇವೇಗೌಡ ಅವರು, ಪಂಚೆಯನ್ನು ಎರಡೂ ಕೈಯಲ್ಲಿ ಹಿಡಿದುಕೊಂಡು ವೇಗವಾಗಿ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಕಾಲು ತೊಡರಾಗಿ ನೆಲಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯವಾಗಿಲ್ಲ. ಸಚಿವರು ಬೀಳುತ್ತಿದ್ದಂತೆ ಇಬ್ಬರು ಕ್ಯಾಮೆರಾ ಮೆನ್ ಹಾಗೂ ಒಬ್ಬರು ಮ್ಯಾರಥಾನ್ ಸ್ಪರ್ಧಿ ಅವರ ಕೈ ಹಿಡಿದು ಮೇಲೆತ್ತಿದ್ದಾರೆ.

    ಇದಕ್ಕೂ ಮುನ್ನ ಮ್ಯಾರಥಾನ್ ಉದ್ಘಾಟನೆಗೆ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದಿದ್ದರು. ಇದರಿಂಗಾಗಿ ಸ್ಪರ್ಧಿಗಳು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=rcI0vmfDiW0

  • ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

    ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

    -ಮೈಸೂರು ದಸರಾ ಉಪಾಧ್ಯಕ್ಷ ಸ್ಥಾನಕ್ಕೆ ದೋಸ್ತಿ ಸಚಿವರಲ್ಲಿ ಜಟಾಪಟಿ

    ಚಾಮರಾಜನಗರ: ಮೈತ್ರಿ ಸರ್ಕಾರದಲ್ಲಿ ಕೈ ಹಾಗೂ ತೆನೆ ಸಚಿವರ ವಾಗ್ದಾಳಿ ಮತ್ತೆ ಮುಂದುವರಿದಿದೆ. ಈ ಬಾರಿ ಮೈಸೂರು ದಸರಾ ಸ್ಥಾನಮಾನಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವರು, ಪ್ರತಿ ದಸರಾದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿಶೇಷ ಸ್ಥಾನ ಮಾಡ ನೀಡುವುದು ವಾಡಿಕೆ. ಆದರೆ ಜಿ.ಟಿ.ದೇವೇಗೌಡ ಅವರು ಯಾವುದೇ ವಾಡಿಕೆ ಉಳಿಸಿಲ್ಲ. ಎಲ್ಲವನ್ನೂ ನಾನೇ ಮಾಡುತ್ತೇನೆ ಎನ್ನುತ್ತಾರೆ. ಅವರ ದರ್ಬಾರ್ ದಸರಾದಲ್ಲಿ ನಡೆಯಲಿ. ನಾನು ಮೈಸೂರು ದಸರಾಗೆ ಬರಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಮ್ಮನ್ನ ಕರೆಯದೆ ತಮಗೆ ಇಷ್ಟ ಬಂದ ಹಾಗೆ ಮೈಸೂರು ದಸರಾ ಸಮಿತಿಗಳನ್ನು ಮಾಡಿಕೊಂಡರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಸ್ಥಾನ ನೀಡುವುದಿರಲ್ಲಿ ಎಲ್ಲಿಯೂ ನನ್ನ ಹೆಸರನ್ನು ಪ್ರಕಟಿಸಿಲ್ಲ. ಇದೆಲ್ಲ ಆಗಿದ್ದು ಜಿ.ಟಿ.ದೇವೇಗೌಡ ಅವರಿಂದ ಎಂದು ಕಿಡಿಕಾರಿದರು.

    ಈ ಹಿಂದೆ ಆಗಿದ್ದೇನು?:
    ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲವು ದಿನಗಳ ಹಿಂದೆ ಮೈಸೂರು ದಸರಾ ವಿಚಾರವಾಗಿ ಸಭೆ ನಡೆದಿತ್ತು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿರುವ ನನಗೆ ಮೈಸೂರು ದಸರಾದಲ್ಲಿ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಅಷ್ಟೇ ಆಮಂತ್ರಣ ಪತ್ರದಲ್ಲಿ ನನ್ನ ಹೆಸರು ಹಾಗೂ ಫೋಟೋವನ್ನು ಕೂಡ ಸೇರಿಸಿಲ್ಲ. ನಿಮ್ಮ ಇಷ್ಟ ಬಂದ ಹಾಗೆ ಸಮಿತಿ ರಚನೆ ಮಾಡಿರುವಿರಿ ಎಂದು ಸಚಿವ ಪುಟ್ಟರಂಗಶೆಟ್ಟಿ ಅವರು ಜಿ.ಟಿ.ದೇವೇಗೌಡ ಅವರನ್ನು ತರಾಟೆ ತಗೆದುಕೊಂಡಿದ್ದರು.

    ಪುಟ್ಟರಂಗಶೆಟ್ಟಿ ಅವರು ಅಸಮಾಧಾನ ಹೊರಹಾಕುತ್ತಿದ್ದಂತೆ ಮನವೊಲಿಕೆಗೆ ಮುಂದಾದ ಜಿ.ಟಿ.ದೇವೇಗೌಡ, ಆಮಂತ್ರಣದಲ್ಲಿ ಹೆಸರು ಹಾಗೂ ಫೋಟೋ ಹಾಕಿಸುತ್ತೇವೆ. ಉಪಾಧ್ಯಕ್ಷರಾಗಿ ಘೋಷಣೆ ಮಾಡುತ್ತೇನೆ ಎಂದು ಓಲೈಸಿದ್ದರು. ಆದರೆ ದಸರಾ ಉಪಾಧ್ಯಕ್ಷರಾಗಿ ಪುಟ್ಟರಂಗನಶೆಟ್ಟಿ ಅವರ ಹೆಸರು ಇದ್ದರೂ, ಎಲ್ಲಿಯೂ ಪ್ರಸ್ತಾಪ ಮಾಡಿಲ್ಲವಂತೆ. ಇದರಿಂದಾಗಿ ಇಬ್ಬರು ಸಚಿವರ ನಡುವೆ ಜಟಾಪಟಿ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv