Tag: Minister HD Revanna

  • ವೋಟ್ ಬಿಜೆಪಿಗೆ ಹಾಕ್ತಾನೆ, ನನ್ನತ್ರ ಬಂದು ಚೀಟಿ ಕೊಟ್ಟಿದ್ದಾನೆ – ನಗುತ್ತಲೇ ಮತದಾರನಿಗೆ ರೇವಣ್ಣ ಕ್ಲಾಸ್

    ವೋಟ್ ಬಿಜೆಪಿಗೆ ಹಾಕ್ತಾನೆ, ನನ್ನತ್ರ ಬಂದು ಚೀಟಿ ಕೊಟ್ಟಿದ್ದಾನೆ – ನಗುತ್ತಲೇ ಮತದಾರನಿಗೆ ರೇವಣ್ಣ ಕ್ಲಾಸ್

    ಹಾಸನ: ಹೊಳೆನರಸೀಪುರ ಕ್ಷೇತ್ರದ ಮತದಾರನಿಗೆ ನಗುತ್ತಲೆ ಲೋಕೋಪಯೋಗಿ ಸಚಿವ ಕ್ಲಾಸ್ ತೆಗೆದುಕೊಂಡ ಘಟನೆ ಇಂದು ಹಾಸನದ ಕೆಪಿಟಿಎಲ್ ನ ಕಾರ್ಯ ಮತ್ತು ಪಾಲನಾ ವಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಡೆದಿದೆ.

    ರೇವಣ್ಣ ಕಡೆಯವರು ಎಂದು ಹೇಳಿ ಶೋಭಾ ಕರಂದ್ಲಾಜೆ, ಯಡಿಯೂರಪ್ಪ 450 ಜನ ಗ್ಯಾಂಗ್ ಮ್ಯಾನ್ ವಜಾ ಮಾಡಿದ್ದಾರೆ. ಈಗ ನೀವು ಶೋಭಾ ಕರಂದ್ಲಾಜೆ ಬಳಿ ಹೋಗಿ ಎಂದು ರೇವಣ್ಣ ನಗುತ್ತಲೇ ವ್ಯಕ್ತಿಯ ಕಾಲೆಳೆದರು. ಆ ಬಳಿಕ ಮಾರಗೋಡನಹಳ್ಳಿಯ ಇವನು, ವೋಟ್ ಯಾರಿಗೆ ಹಾಕಿದ್ದಾನೆ ಕೇಳಿ? ಎಂದು ಭಾಷಣದ ನಡುವೆ ಹೇಳಿದರು.

    ವೋಟ್ ಬಿಜೆಪಿಗೆ ಹಾಕುವವ ನನ್ನ ಬಳಿ ಬಂದು ಈಗ ಚೀಟಿ ಕೊಟ್ಟಿದ್ದಾನೆ. ಆದರೆ ನನಗೆ ಬಿಜೆಪಿ, ಕಾಂಗ್ರೆಸ್ ಸಂಬಂಧವಿಲ್ಲ. ಅವರು ಒಳ್ಳೆಯ ಅಧಿಕಾರಿ ಆಗಿದ್ದಾರೆ. ಎಲ್ಲರದ್ದು ಕೆಲಸ ಮಾಡಿಕೊಡುತ್ತೇನೆ. ಈ ಭಾಗದ ಜನರಿಗೆ ಬೇಕಾದ ಕೆಲಸ ಮಾಡಲು ಬಂದಿದ್ದು, ಎಲ್ಲರ ಕೆಲಸ ಮಾಡುತ್ತೇನೆ ಎಂದರು.

    ಇದಕ್ಕೂ ಮುನ್ನ ತಮ್ಮ ಭಾಷಣದಲ್ಲಿ ಸಮ್ಮಿಶ್ರ ಸರ್ಕಾರ ಬಗ್ಗೆ ಪ್ರಸ್ತಾಪಿಸಿದ ಅವರು, ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದರು. ಆ ಮೂಲಕ ಸರ್ಕಾರ ಪತನದ ಕುರಿತು ಪರೋಕ್ಷವಾಗಿ ಸುಳಿವು ನೀಡಿದ್ರಾ ಎಂಬ ಚರ್ಚೆ ಕೂಡ ನಡೆದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ರೇವಣ್ಣ ಹೇಳಿಕೆಗೆ ಕ್ಷಮೆ ಕೋರಿದ ನಿಖಿಲ್

    ರೇವಣ್ಣ ಹೇಳಿಕೆಗೆ ಕ್ಷಮೆ ಕೋರಿದ ನಿಖಿಲ್

    – ಮಗನ ರಾಜಕೀಯ ಹಾದಿ ಸುಗಮಗೊಳಿಸಲು ಮಂಡ್ಯಗೆ ಅನಿತಾ ಕುಮಾರಸ್ವಾಮಿ ಎಂಟ್ರಿ

    ಮಂಡ್ಯ: ಲೊಕಸಭಾ ಚುನಾವಣೆಗೂ ಮುನ್ನವೇ ಮಂಡ್ಯ ರಾಜಕೀಯ ಬೆಳವಣಿಗೆಗಳು ರಾಜ್ಯದ ಗಮನ ಸೆಳೆದಿದ್ದು, ಈ ನಡುವೆ ಸಚಿವ ರೇವಣ್ಣ ಅವರು ಸುಮಲತಾ ಅವರ ಕುರಿತು ನೀಡಿದ್ದ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕ್ಷಮೆ ಕೋರಿದ್ದಾರೆ.

    ಇಂದು ಕ್ಷೇತ್ರದ ಚಿನಕುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರೇವಣ್ಣ ಅವರು ಯಾವ ಸಂದರ್ಭದಲ್ಲಿ, ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುವುದು ಗೊತ್ತಿಲ್ಲ. ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಕ್ಷಮೆ ಕೇಳಿದ್ದಾರೆ. ಲೋಕಸಭೆ ಚುನಾವಣೆಯ ಅಭ್ಯರ್ಥಿಯಾಗಿ ನಾನೂ ಕೂಡ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದರು. ಅಲ್ಲದೇ ಇನ್ನು ಮುಂದೆ ನಮ್ಮ ಕಾರ್ಯಕರ್ತರೂ ಯಾರೂ ಹಾಗೆ ಮಾತನಾಡುವುದಿಲ್ಲ ಎಂಬ ಭರವಸೆಯನ್ನು ನೀಡಿದರು.

    ರೇವಣ್ಣ ಹೇಳಿಕೆ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ಸುಮಲತಾ ಅವರ ಬಗ್ಗೆ ರೇವಣ್ಣ ಅವರು ನೀಡಿರುವ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ರಾಜ್ಯ ಸರ್ಕಾರದ ಪ್ರಮುಖ ಮಂತ್ರಿ ಬಾಯಲ್ಲಿ ಈ ರೀತಿಯ ಮಾತು ಹೇಳಬಾರದಿತ್ತು. ಅದ್ದರಿಂದ ಜೆಡಿಎಸ್ ಪಕ್ಷದ ರಾಜ್ಯಾಧಕ್ಷನಾಗಿ ರೇವಣ್ಣನ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದರು.

    ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ ಅವರು ಕೂಡ ಮಾಧ್ಯಮಗಳೊಂದಿಗೆ ಮಾತನಾಡಿ, ರೇವಣ್ಣ ಅವರು ಸುಮಲತಾ ಅವರ ವಿರುದ್ಧ ಮಾತನಾಡಿಲ್ಲ. ಅವರನ್ನು ಟೀಕಿಸಿಲ್ಲ. ರೇವಣ್ಣ ಬಳಿ ನಾನು ಈ ಬಗ್ಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದಿರಿ ಅಂತ ಕೇಳಿದ್ದೇನೆ. ಸುಮಲತಾ ಅವರು ಅಂಬರೀಶ್ ಅವರು ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ಹೇಳಿದ್ದು ಅಷ್ಟೆ. ಆದರೆ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಮಹಿಳೆಯರಿಗೆ ಗೌರವ ಕೊಡುವ ಕುಟುಂಬ. ಯಾವ ಹೆಣ್ಣು ಮಕ್ಕಳಿಗೂ ನಾವು ಅವಮಾನ ಮಾಡಿಲ್ಲ ಎಂದು ಕ್ಷಮೆಯಾಚಿಸಿದ್ದರು.

    ಇತ್ತ ಮಗನ ರಾಜಕೀಯ ಪ್ರವೇಶದ ಹಾದಿಯನ್ನು ಸುಗಮಗೊಳಿಸಲು ಮುಂದಾಗಿರುವ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಇಂದು ಪುತ್ರನೊಂದಿಗೆ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮಾಜಿ ಶಾಸಕಿ, ರವೀಂದ್ರ ಅವರ ತಾಯಿ ಪಾರ್ವತಮ್ಮ ಶ್ರೀಕಂಠಯ್ಯ ಅವರೊಂದಿಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರೇವಣ್ಣ ಸತ್ತಿದ್ರೆ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗ್ತಿದ್ರಂತೆ: ಈಶ್ವರಪ್ಪ

    ರೇವಣ್ಣ ಸತ್ತಿದ್ರೆ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗ್ತಿದ್ರಂತೆ: ಈಶ್ವರಪ್ಪ

    ಬಾಗಲಕೋಟೆ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಾವಿನ ವಿಚಾರವಾಗಿ ಮಾತನಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿ ಸುಮಲತಾ ಅಂಬರೀಶ್ ಅವರನ್ನು ಟೀಕಿಸಿದ್ದ ಸಚಿವ ರೇವಣ್ಣ ವಿರುದ್ಧ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಸಚಿವರು ಮಾತನಾಡಿದರು ಎಂದು ನೀವು ಮಾತನಾಡಿದ್ದು ಎಷ್ಟು ಸರಿ. ಅಂತೆ-ಕಂತೆ ಕಟ್ಟಿಕೊಂಡು ಹೇಳಿಕೆ ನೀಡುವುದು ಸರಿಯಲ್ಲ ಎಂದು ಜನರು ಈಶ್ವರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈಶ್ವರಪ್ಪ ಹೇಳಿದ್ದೇನು?:
    ಪತಿ ಅಂಬರೀಶ್ ಸತ್ತು ಎರಡು ತಿಂಗಳಾಗಿಲ್ಲ ಆಗಲೇ ಸುಮಲತಾ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ ಮಂಡ್ಯದ ವ್ಯಕ್ತಿಯೊಬ್ಬ ಖಡಕ್ ಉತ್ತರ ನೀಡಿದ. ಆ ವ್ಯಕ್ತಿಯ ಮಾತನ್ನು ನಿಮ್ಮ ಮುಂದೆ ಹೇಳಲು ನನಗೆ ಸಂಕೋಚವಾಗುತ್ತದೆ. ಆದರೂ ಹೇಳುತ್ತೇನೆ.

    ಸಚಿವ ರೇವಣ್ಣ ಸತ್ತಿದ್ದರೆ ಮಾರನೇ ದಿನವೇ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗುತ್ತಿದ್ದರು ಎಂದು ಆ ವ್ಯಕ್ತಿ ಹೇಳಿದ. ಹೀಗೆ ಅನಿಸಿಕೊಳ್ಳಲು ರೇವಣ್ಣ ಅವರು ಸುಮಲತಾ ಅವರ ಬಗ್ಗೆ ಮಾತನಾಡಬೇಕಿತ್ತಾ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

    ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

    ಚಿಕ್ಕಬಳ್ಳಾಪುರ: ಪತಿ ನಿಧನವಾದ ಬಳಿಕ ತಾಯಂದಿರು ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಮುಂದುವರಿಯಬಾರದು ಎನ್ನುವ ಆಲೋಚನೆ ಅನಾಗರಿಕತೆಯನ್ನು ತೋರಿಸುತ್ತದೆ ಎಂದು ಶಾಸಕ ಡಾ.ಸುಧಾಕರ್ ಅವರು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಸಚಿವ ರೇವಣ್ಣ ಅವರು ಮಹಾನ್ ದೈವ ಭಕ್ತರೆಂದು ನಾನು ತಿಳಿದುಕೊಂಡಿದ್ದೆ. ಅವರ ಬಾಯಿಂದ ಈ ಮಾತು ನಿರೀಕ್ಷೆ ಮಾಡಿರಲಿಲ್ಲ. ಸಚಿವರು ಯಾವ ಆಲೋಚನೆಯಿಂದ ಸುಮಲತಾ ಅವರ ಬಗ್ಗೆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಆದರೆ ಸುಮಲತಾ ಅವರಲ್ಲಿ ತಕ್ಷಣ ಕ್ಷಮಾಪಣೆ ಕೇಳಬೇಕೆಂದು ಸಚಿವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ: ಸುಮಲತಾ ಪರ ಬ್ಯಾಟ್ ಮಾಡಿ ಸಿಎಂಗೆ ಶಾಸಕ ಸುಧಾಕರ್ ಟಾಂಗ್!

    ಸುಮಲತಾ ಅಂಬರೀಶ್ ಅವರಿಗೆ ಕ್ಷಮೆ ಕೇಳಿದರೆ ಸಚಿವರಿಗೆ ಗೌರವ ಬರುತ್ತದೆ. ಈಗಾಗಲೇ ಸುಮಲತಾ ತುಂಬಾ ದುಃಖದಲ್ಲಿದ್ದಾರೆ. ಹೀಗಿದ್ದರೂ ಸಹ ಅವರು ಚುನಾವಣೆಗೆ ನಿಲ್ಲಲು ಹಾಗೂ ಮಂಡ್ಯದ ಜನರ ಜೊತೆ ನಿಲ್ಲುವ ಧೈರ್ಯ ತೋರಿದ್ದಾರೆ. ಅದನ್ನು ನಾವು ಮೆಚ್ಚಬೇಕು. ಅಂತಹವರಿಗೆ ನಮ್ಮಿಂದ ಆಗುವ ಸಹಾಯ ಮಾಡಬೇಕೇ ಹೊರತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಸ್‍ವೈ ಕೈ ಹಿಡಿದು ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಸಚಿವ ರೇವಣ್ಣ

    ಬಿಎಸ್‍ವೈ ಕೈ ಹಿಡಿದು ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಸಚಿವ ರೇವಣ್ಣ

    ನವದೆಹಲಿ: ರಾಜಕೀಯ ಬದ್ಧ ವೈರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕೈ ಹಿಡಿದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪೂಜೆ ಮಾಡಿದ್ದಾರೆ.

    ದೆಹಲಿಯ ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ಕಾರ್ಯಕ್ರಮ ಇಂದು ಬೆಳಗ್ಗೆ ನಡೆದಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಭವನದ ಹೊರ ಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಇದನ್ನು ನೋಡಿದ ಸಚಿವರು, ನೇರವಾಗಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬಂದು ಕೈ ಹಿಡಿದು ಕರೆತಂದು ಅಡಿಗಲ್ಲು ಹಾಕಿದರು.

    ಈ ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನವಿರಲಿಲ್ಲ. ಆದರೆ ಕನ್ನಡ ಭವನದ ಮುಂದೆ ವಾಕಿಂಗ್ ಹೊರಟಿದ್ದ ಅವರನ್ನು ಸಚಿವ ರೇವಣ್ಣ ಕರೆತಂದಿದ್ದಾರೆ. ಬಳಿಕ ಒಟ್ಟಾಗಿ ಪೂಜೆ ಮಾಡಿ, ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಳಿದಷ್ಟು ಕ್ಷೇತ್ರಗಳು ಸಿಗದೇ ಇದ್ರೆ ಮುಂದೆ ನೋಡೋಣ: ರೇವಣ್ಣ

    ಕೇಳಿದಷ್ಟು ಕ್ಷೇತ್ರಗಳು ಸಿಗದೇ ಇದ್ರೆ ಮುಂದೆ ನೋಡೋಣ: ರೇವಣ್ಣ

    ಬೆಂಗಳೂರು: ಜೆಡಿಎಸ್ ಕೇಳಿರುವಷ್ಟು ಲೋಕಸಭಾ ಕ್ಷೇತ್ರಗಳು ಸಿಗದೇ ಹೋದರೆ ಮುಂದೆ ನೋಡೋಣ ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.

    ಕಾಂಗ್ರೆಸ್‍ನೊಂದಿಗೆ ಲೋಕಸಭಾ ಸೀಟು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಜೆಡಿಎಸ್ ಶಾಸಕರು, ಮುಖಂಡರು ಒನ್ ಥರ್ಡ್ ಅಂದ್ರೆ 10 ರಿಂದ 12 ಸೀಟುಗಳನ್ನು ಕೇಳುತ್ತಿದ್ದಾರೆ. ಈ ವಿಚಾರವಾಗಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡುತ್ತಿದೆ. ಜೆಡಿಎಸ್ ಕೇಳಿರುವಷ್ಟು ಸೀಟು ಸಿಗದೇ ಹೋದರೆ ಮುಂದೆ ನೋಡೋಣ ಎಂದು ಹೇಳಿದರು.

    ಮಂಡ್ಯ ಜಿಲ್ಲೆಯಲ್ಲಿ ನಮ್ಮ ಪಕ್ಷದ ಒಟ್ಟು 7 ಶಾಸಕರಿದ್ದಾರೆ. ಹೀಗಾಗಿ ಸುಮಲತಾ ಅಂಬರೀಶ್ ಅವರಿಗೆ ನಾವ್ಯಾಕೆ ಲೋಕಸಭಾ ಟಿಕೆಟ್ ಬಿಟ್ಟುಕೊಡಬೇಕು ಎಂದು ತಿಳಿಸಿದರು.

    ಕಾಂಗ್ರೆಸ್‍ನಿಂದ ಸುಮಲತಾ ಸ್ಪರ್ಧಿಸಿದ್ರೆ ನಿಮ್ಮ ಅಭ್ಯರ್ಥಿಯನ್ನು ಹಾಕಲ್ವಾ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಗುಡುಗಿದ ಸಚಿವರು, ನಾವ್ಯಾಕೆ ಅಭ್ಯರ್ಥಿಯನ್ನು ಹಿಂಪಡೆಯಬೇಕು? ಅವರೇನು ನಮ್ಮ ಪಕ್ಷದವರೇ ಎನ್ನುವ ಮೂಲಕ ಪರೋಕ್ಷವಾಗಿ ಸುಮಲತಾ ಅವರಿಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ರೆ ಎಂಬ ಪ್ರಶ್ನೆಗೆ ರೇವಣ್ಣ ಉತ್ತರಿಸಿದ ಸಚಿವರು, ಅವರು ಟಿಕೆಟ್ ಕೇಳ್ತಾ ಇರೋದು ಕಾಂಗ್ರೆಸ್‍ನಿಂದ ಎಂದು ಹಾರಿಕೆ ಉತ್ತರ ನೀಡಿ ದೋಸ್ತಿ ನಾಯಕರ ಮೇಲೆ ಸಂಪೂರ್ಣ ಜವಾಬ್ದಾರಿ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಉಳಿವಿಗೆ ಸಚಿವ ರೇವಣ್ಣ ಪ್ರಯತ್ನ ಅವಶ್ಯ- ವಿಠ್ಠಲ್ ಭಟ್ ಭವಿಷ್ಯ

    ಸರ್ಕಾರ ಉಳಿವಿಗೆ ಸಚಿವ ರೇವಣ್ಣ ಪ್ರಯತ್ನ ಅವಶ್ಯ- ವಿಠ್ಠಲ್ ಭಟ್ ಭವಿಷ್ಯ

    – ಬಿಎಸ್‍ವೈ, ಸಿದ್ದರಾಮಯ್ಯಗೆ ಗುರುಬಲ ಇಲ್ಲರುವುದಕ್ಕೆ ಸಿಎಂ ಸೇಫ್

    ಬೆಂಗಳೂರು: ಮೈತ್ರಿ ಸರ್ಕಾರದ ಉಳಿವಿಗಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರ ಪ್ರಯತ್ನ ಬಹು ಅವಶ್ಯಕವಾಗಿದೆ ಎಂದು ಆಚಾರ್ಯ ವಿಠ್ಠಲ್ ಭಟ್ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರೇವಣ್ಣ ಅವರಿಗೆ ಮಾತ್ರ ಗುರುಬಲ ಉತ್ತಮವಾಗಿದೆ. ಹೀಗಾಗಿ ಸರ್ಕಾರದ ರಕ್ಷಣೆಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಸಚಿವರು ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿಲ್ಲ. ಒಂದು ವೇಳೆ ಪ್ರಯತ್ನಕ್ಕೆ ಮುಂದಾದರೆ ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರಿಗೆ ಈ ವರ್ಷದ ನವೆಂಬರ್ ವರೆಗೂ ಗುರುಬಲವಿಲ್ಲ. ಇತ್ತ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಗುರುಬಲವಿಲ್ಲ. ಇದರಿಂದಾಗಿ ಕುಮಾರಸ್ವಾಮಿ ಅವರ ಸಿಎಂ ಸ್ಥಾನ ಭದ್ರವಾಗಿದೆ. ಒಂದು ವೇಳೆ ಇಬ್ಬರಲ್ಲಿ ಯಾರಿಗಾದರೂ ಗುರುಬಲ ಸಿಕ್ಕಿದ್ದರೆ ಸರ್ಕಾರ ಇಷ್ಟೋತ್ತಿಗೆ ಬಿದ್ದು ಹೋಗುತ್ತಿತ್ತು. ಸದ್ಯದ ಬೆಳವಣಿಗೆ ಪ್ರಕಾರ ರಾಜ್ಯ ದೋಸ್ತಿ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ನುಡಿದರು.

    ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಯೋಗ ಕೂಡಿಬಂದಿಲ್ಲ. ಈ ಯೋಗ ಕೂಡಿ ಬರಲು ಹೆಚ್ಚು ಕಾಲ ಬೇಕಾಗುತ್ತದೆ. ಇದೇ ಕುಮಾರಸ್ವಾಮಿ ಅವರಿಗೆ ಇರುವ ಪ್ಲಸ್ ಪಾಯಿಂಟ್. ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಮಾಡಿಸುತ್ತಿರುವುದು ಕೂಡ ಅವರ ಸ್ಥಾನಕ್ಕೆ ಭದ್ರತೆ ಒದಗಿಸಿದೆ. ಆದರೆ ಅವರ ಈಗಿನ ಪರಿಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಕುಮಾರಸ್ವಾಮಿ ಅವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರಮೇಶ್ವರ್ ಪರ ಬ್ಯಾಟ್ ಬೀಸಿದ್ದ ರೇವಣ್ಣಗೆ ಠಕ್ಕರ್ ಕೊಟ್ಟ ಖರ್ಗೆ

    ಪರಮೇಶ್ವರ್ ಪರ ಬ್ಯಾಟ್ ಬೀಸಿದ್ದ ರೇವಣ್ಣಗೆ ಠಕ್ಕರ್ ಕೊಟ್ಟ ಖರ್ಗೆ

    – ರಮೇಶ್ ಜಾರಕಿಹೊಳಿ ಪಕ್ಷ ಬಿಡಲ್ಲ
    – ಲೋಕಸಭಾ ಚುನಾವಣೆಗೂ ಮುನ್ನ ಅಧಿಕಾರ ಹಿಡಿಯಲು ರಾಜ್ಯ ಬಿಜೆಪಿ ಪ್ಲಾನ್

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಬಾಯಿ ಮಾತಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಬಗ್ಗೆ ದಯೆ ತೋರಿಸೋದು ಪ್ರಯೋಜನಕ್ಕೆ ಬರಲ್ಲ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

    ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರಿಂದ ಗೃಹ ಖಾತೆ ವಾಪಸ್ ಪಡೆದಿದ್ದ ವಿಚಾರವಾಗಿ ಹೇಳಿಕೆ ನೀಡಿದ್ದ ಎಚ್.ಡಿ.ರೇವಣ್ಣ ಅವರ ವಿರುದ್ಧ ಕಿಡಿಕಾರಿದರು. ಯಾರಿಗೆ ಯಾವ ಖಾತೆ ಅಂತ ಕಾಂಗ್ರೆಸ್‍ನ ನಾಯಕರು ವಿಚಾರ ಮಾಡಿಯೇ ನಿರ್ಧಾರ ಕೈಗೊಳ್ಳುತ್ತಾರೆ. ಒಬ್ಬರ ಮೇಲೆ ಮತ್ತೊಬ್ಬರು ಬಾಯಿ ಮಾತಲ್ಲಿ ಸಿಂಪತಿ ತೋರಿಸುವುದು ಪ್ರಯೋಜನಕ್ಕೆ ಬರಲ್ಲ ಎಂದು ಸಚಿವ ರೇವಣ್ಣಗೆ ಠಕ್ಕರ್ ಕೊಟ್ಟರು.

    ದಲಿತರಿಗೆ ಸಿಎಂ ಸ್ಥಾನ ಕೊಡುವ ವಿಚಾರದ ಬಗ್ಗೆ ಮಾತಾಡಿದ ಖರ್ಗೆ ಅವರು, ಐವತ್ತು ವರ್ಷಗಳಿಂದ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತ ಕೇಳುತ್ತಾ ಬಂದಿದ್ದೇವೆ. ಇದನ್ನು ಮಾಧ್ಯಮಗಳ ಮುಂದೆ ಮಾತಾಡಿದರೆ ಬಗೆಹರಿಯಲ್ಲ. ಈ ಬಗ್ಗೆ ನಾನು ಮಾತಾಡಲ್ಲ ಎಂದರು. ಇದನ್ನು ಓದಿ: ರಮೇಶ್ ಜಾರಕಿಹೊಳಿ ಪಕ್ಷ ಬಿಡುವ ಸುಳಿವು ಕೊಟ್ರಾ ಮಾಜಿ ಸಿಎಂ

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ಬಿಡುವಷ್ಟು ಕೆಟ್ಟ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅವರು ನಮ್ಮ ಪಕ್ಷದಲ್ಲಿ 25 ವರ್ಷ ಕಾರ್ಯನಿರ್ವಹಿಸಿದ್ದಾರೆ. ಪಕ್ಷವೂ ಅವರಿಗೆ ಸಾಕಷ್ಟು ಅವಕಾಶ ನೀಡಿದೆ ಎಂದು ಸ್ಪಷ್ಟನೆ ನೀಡಿದ ಅವರು, ರಾಜ್ಯ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೂ ಮುನ್ನ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

    ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಖರ್ಗೆ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್‍ನವರು 12 ಸೀಟು ಕೇಳಿದ್ದಾರೆ ಎಂದು ನಾವು ಮಾತನಾಡುವುದು ಸರಿಯಲ್ಲ. ಅವರ ನಿಲುವನ್ನು ಅವರು ತಿಳಿಸಿದ್ದಾರೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಚರ್ಚೆ ನಡೆದ ಬಳಿಕ ಯಾರಿಗೆ ಎಷ್ಟು ಸೀಟು ಎನ್ನವುದು ಹೊರ ಬೀಳುತ್ತದೆ ಎಂದು ತಿಳಿಸಿದರು.

    ಮಹಾಘಟಬಂಧನ್ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರು ಮಾತುಕತೆ ನಡೆಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮಹಾಘಟಬಂಧನ್ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದ ಅವರು, ದೇಶದ ಜನತೆಗೆ ಹೊಸ ವರ್ಷಕ್ಕೆ ಶುಭ ಕೋರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನ ಪರ ಸರ್ಕಾರ ಅಲ್ಲ, ವಾಸ್ತು ಸರ್ಕಾರ: ಆರ್. ಅಶೋಕ್ ವ್ಯಂಗ್ಯ

    ಜನ ಪರ ಸರ್ಕಾರ ಅಲ್ಲ, ವಾಸ್ತು ಸರ್ಕಾರ: ಆರ್. ಅಶೋಕ್ ವ್ಯಂಗ್ಯ

    ಕೋಲಾರ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ತಾನಾಗಿಯೇ ಬೀಳುವ ಸರ್ಕಾರ, ನಾವು ಕಲ್ಲು ಹೊಡೆಯಲು ಹೋಗುವುದಿಲ್ಲ. ರಾಜ್ಯದಲ್ಲಿ ಇರುವುದು ಜನಪರ ಸರ್ಕಾರ ಅಲ್ಲ. ಅದೊಂದು ವಾಸ್ತು ಸರ್ಕಾರ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ.

    ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪ ಕೆರೆ ಮತ್ತು ನಲ್ಲಗುಟ್ಲಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧಡೆ ಬರ ಪ್ರವಾಸ ಕೈಗೊಂಡು ಅವರು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾನೊಬ್ಬ ಸಾಂದರ್ಭಿಕ ಶಿಶು ಎಂದು ಹೇಳಿಕೊಂಡಿರುವ ಕುಮಾರಸ್ವಾಮಿ ಅವರ ಸರ್ಕಾರ ತಾನಾಗಿಯೇ ಬೀಳಲಿದ್ದು, ಯಾರು ಬೀಳಿಸುವ ಪ್ರಮೇಯ ಇಲ್ಲ. ಸರ್ಕಾರ ಬೀಳುವುದಕ್ಕೆ ಬಿಜೆಪಿ ಕಾರಣ ಆಗುವುದಿಲ್ಲ, ಬದಲಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾರಣರಾಗಲಿದ್ದಾರೆ ಎಂದು ಆರೋಪಿಸಿದರು.

    ಇದೇ ವೇಳೆ ಸರ್ಕಾರದ ಆಡಳಿತ ಬಗ್ಗೆ ವ್ಯಂಗ್ಯವಾಡಿದ ಅಶೋಕ್ ಅವರು, ಕುಮಾರಸ್ವಾಮಿ ಅವರದ್ದು ಜನ ಪರ ಸರ್ಕಾರ ಅಲ್ಲ. ಅದೊಂದು ವಾಸ್ತು ಸರ್ಕಾರ. ವಿಧಾನ ಸಭೆ ನಡೆಯಲು ರಾಹುಕಾಲ ನೋಡುವ ಇಂತಹ ಕೆಟ್ಟ ಸರ್ಕಾರವನ್ನ ನಾನು ನೋಡಿಯೇ ಇಲ್ಲವೆಂದು ದೂರಿದರು. ಅಲ್ಲದೇ ರೇವಣ್ಣನವರು ತಮ್ಮ ಮನೆಗಳಲ್ಲಿ ವಾಸ್ತು, ಪೂಜೆಗಳನ್ನ ಇಟ್ಟುಕೊಳ್ಳಲಿ, ವಿಧಾನ ಸಭೆಗೆ ಇವೆಲ್ಲಾ ತರಬೇಡಿ ಎಂದು ಕಿಡಿಕಾರಿದರು.

    ರಾಜ್ಯದಲ್ಲಿ ಬರದಿಂದ ತತ್ತರಿಸುತ್ತಿರುವ ತಾಲೂಕುಗಳಿಗೆ ಸರ್ಕಾರ ಕೂಡಲೇ ನೆರವಿಗೆ ದಾವಿಸಬೇಕು. ಇಲದಿದ್ದರೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಹೊರಗೆ ಹಾಗೂ ಒಳಗೆ ಬಿಜೆಪಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಿಸ್ಟರ್ ರೇವಣ್ಣ.. ನಿನಗೆ ಒಳ್ಳೆದಾಗಲ್ಲ- ಜಿ.ಎಸ್.ಬಸವರಾಜು ಕಿಡಿ

    ಮಿಸ್ಟರ್ ರೇವಣ್ಣ.. ನಿನಗೆ ಒಳ್ಳೆದಾಗಲ್ಲ- ಜಿ.ಎಸ್.ಬಸವರಾಜು ಕಿಡಿ

    – ಸಮ್ಮಿಶ್ರ ಸರ್ಕಾರವು ಮೂರು ಜಿಲ್ಲೆಗಳಿಗೆ ಸೀಮಿತವಾಗಿದೆ

    ತುಮಕೂರು: ಮಿಸ್ಟರ್ ರೇವಣ್ಣ ನಿನಗೆ ಒಳ್ಳೆದಾಗಲ್ಲ. ನೀರಾವರಿ ಚೇರಮನ್ ಆಗಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ನೀಡುವಲ್ಲಿ ಪಾಪ ಮಾಡುತ್ತಿದ್ದೀಯಾ ಎಂದು ಮಾಜಿ ಸಚಿವ ಜಿ.ಎಸ್.ಬಸವರಾಜು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದಾರೆ.

    ಹೇಮಾವತಿ ನಾಲೆಗೆ ಲಿಂಕಿಂಗ್ ಕೆನಾಲ್ ನಿರ್ಮಾಣ ವಿರೋಧಿಸಿ ಇಂದು ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಮಾಜಿ ಸಚಿವರು, ನೀವು ಮಾಡಿರುವ ಪಾಪ ನಿಮ್ಮ ಕುಟುಂಬಕ್ಕೂ ತಟ್ಟಲಿದೆ. ನನ್ನ ನೀರಗಂಟಿ ಅಂತ ಕರೆಯುತ್ತಿರುವಿರಿ. ತುಮಕೂರು ಜಿಲ್ಲೆಯ ಜನತೆಗೆ ಮೋಸ ಮಾಡುತ್ತೀರುವ ನಿಮಗೆ ಒಳ್ಳೆಯದ ಆಗಲ್ಲ ಎಂದರು.

    ಸಮ್ಮಿಶ್ರ ಸರ್ಕಾರ ರಾಮನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಜಿಲ್ಲೆಯವರು. ಮೊದಲಿಗೆ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಿದ್ದರು. ಆದರೆ ಈಗ ಹಾಗಲಕಾಯಿ, ಬೇವಿನ ಕಾಯಿ ಒಂದಾದಂತೆ ಆಗಿದ್ದು, ರಾಜ್ಯವನ್ನು ಕಡೆಗಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಬಜೆಟ್, ಯೋಜನೆ, ನೀರಾವರಿ ಸೌಲಭ್ಯಗಳು ಮೂರು ಜಿಲ್ಲೆಗಳಿಗೆ ಮಾತ್ರ ಸೇರುತ್ತಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸೇರಿ ಮಾಡಬಾರದ ಪಾಪ ಮಾಡುತ್ತಿವೆ. ಒಂದು ಕಾಲದಲ್ಲಿ ಕಾಲುವೆ ಒಡೆದುಹಾಕಿ ಜೆಡಿಎಸ್‍ನವರು ಪ್ರತಿಭಟನೆ ಮಾಡಿದ್ದರು. ಜಿಲ್ಲೆಯ ಕಾಲುವೆಗಳಿಗೆ ನೀರು ಬಿಡದೇ 15 ದಿನಗಳು ಕಳೆದಿದೆ. ಇದರಿಂದಾಗಿ ಬೆಳೆ ನಾಶವಾಗುತ್ತಿದ್ದು, ರೈತರು ಪರದಾಡುವಂತಾಗಿದೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv