Tag: Minister K Gopalaiah

  • ಸರ್ಕಾರ ನೀಡಿರೋ ಮನೆಗಳನ್ನು ಮಾರಬೇಡಿ, ಭವಿಷ್ಯದಲ್ಲಿ ಬೆಂಗ್ಳೂರಲ್ಲಿ ಜಾಗ ಸಿಗಲ್ಲ: ಗೋಪಾಲಯ್ಯ

    ಸರ್ಕಾರ ನೀಡಿರೋ ಮನೆಗಳನ್ನು ಮಾರಬೇಡಿ, ಭವಿಷ್ಯದಲ್ಲಿ ಬೆಂಗ್ಳೂರಲ್ಲಿ ಜಾಗ ಸಿಗಲ್ಲ: ಗೋಪಾಲಯ್ಯ

    ಬೆಂಗಳೂರು: ಮನೆಗಳನ್ನು ಮಾರುವ ಅಥವಾ ಭೋಗ್ಯಕ್ಕೆ ನೀಡುವ ಕೆಲಸಕ್ಕೆ ಕೈಹಾಕಬೇಡಿ. ಏಕೆಂದರೆ ಭವಿಷ್ಯದಲ್ಲಿ ಬೆಂಗಳೂರಿನಲ್ಲಿ ಖಾಲಿ ಜಾಗ ಸಿಗುವುದಿಲ್ಲ. ಹೀಗಾಗಿ ಏನೇ ಕಷ್ಟ ಬಂದರೂ ಮನೆಗಳನ್ನು ಕಳೆದುಕೊಳ್ಳಬಾರದು ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಕಿವಿ ಮಾತು ಹೇಳಿದರು.

    ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂಠೀರವ ನಗರದ ನಿವಾಸಿಗಳಿಗೆ ನೋಂದಣಿ ಪತ್ರಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ಗೋಪಾಲಯ್ಯ, ಕಂಠೀರವ ನಗರದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಿನ ಒಂದೆರಡು ತಿಂಗಳಲ್ಲಿ ಆದೇಶ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ – ವಿದ್ಯಾರ್ಥಿನಿ ತಂದೆ ಕಣ್ಣೀರು

    ಈ ಭಾಗದಲ್ಲಿ ನಾನು ಶಾಸಕನಾಗುವ ಹಿಂದೆ ಇದ್ದ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಲಾಗಿದೆ. ಕ್ಷೇತ್ರದಲ್ಲಿ ವ್ಯವಸ್ಥಿತ ವಾಹನ ಹಾಗೂ ಜನರ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು. ಇನ್ನೂ ಆಗಬೇಕಿರುವ ಕಾರ್ಯಗಳ ಬಗ್ಗೆ ತಿಳಿಸಿದರೆ ಎಲ್ಲವನ್ನೂ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಇದನ್ನೂ ಓದಿ: ಬೈಕ್ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನ – ಆರೋಪಿಗಳು ಅಂದರ್

    ಈ ಸಂದರ್ಭದಲ್ಲಿ 99 ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ ಗೋಪಾಲಯ್ಯ, ಬಿಜೆಪಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್, ಹನುಮಂತು, ನಾರಾಯಣ್, ಆನಂದ್, ಲೋಕೇಶ್, ನಾರಾಯಣ ಸ್ವಾಮಿ, ಬೆಟ್ಟಪ್ಪ ಇತರರು ಉಪಸ್ಥಿತರಿದ್ದರು.

  • ಕನ್ನಡದ ನೆಲದಲ್ಲೇ ಏನನ್ನಾದರೂ ಸಾಧಿಸಬೇಕೆಂಬ ಪ್ರಬಲ ಕನಸು ಹೊಂದಿದ್ದರು ರಾಜೇಶ್: ಕೆ.ಗೋಪಾಲಯ್ಯ ಕಂಬನಿ

    ಕನ್ನಡದ ನೆಲದಲ್ಲೇ ಏನನ್ನಾದರೂ ಸಾಧಿಸಬೇಕೆಂಬ ಪ್ರಬಲ ಕನಸು ಹೊಂದಿದ್ದರು ರಾಜೇಶ್: ಕೆ.ಗೋಪಾಲಯ್ಯ ಕಂಬನಿ

    ಬೆಂಗಳೂರು: ಹಿರಿಯ ಕನ್ನಡ ಚಿತ್ರನಟ, ಕಲಾ ತಪಸ್ವಿ ರಾಜೇಶ್ ಅವರ ನಿಧನಕ್ಕೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಕಂಬನಿ ಮಿಡಿದಿದ್ದಾರೆ.

    ವರನಟ ಡಾ. ರಾಜ್ ಕುಮಾರ್ ಸಮಕಾಲೀನರಾದ ರಾಜೇಶ್ ಕನ್ನಡ ಚಿತ್ರಗಳಲ್ಲಿ ನಾಯಕನಟರಾಗಿ, ಪೋಷಕನಟರಾಗಿ ಕನ್ನಡಿಗರ ಮನದಲ್ಲಿ ನೆಲೆಸಿದ್ದರು. ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ನಷ್ಟವನ್ನುಂಟು ಮಾಡಿದೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಲಾ ತಪಸ್ವಿ ರಾಜೇಶ್‌ ವಿಧಿವಶ

    ಕಲಾತಪಸ್ವಿ ರಾಜೇಶ್ ಎಂಬುದು ಅವರ ಆತ್ಮಚರಿತ್ರೆಯ ಹೆಸರು. ತಮಿಳು ಚಿತ್ರರಂಗದಿಂದ ಅಂದಿನ ದಿನಗಳಲ್ಲಿ ಅವಕಾಶ ಬಂದಿದ್ದರೂ ಕನ್ನಡದ ನೆಲದಲ್ಲೇ ಏನನ್ನಾದರೂ ಸಾಧಿಸಬೇಕೆಂಬ ಪ್ರಬಲ ಕನಸು ಹೊಂದಿದ್ದ ರಾಜೇಶ್ ಅಂತಹ ಅವಕಾಶಗಳನ್ನು ನಯವಾಗಿ ನಿರಾಕರಿಸುವ ಮೂಲಕ ಕನ್ನಡದ ಮೇಲಿರುವ ತಮ್ಮ ಅಭಿಮಾನವನ್ನು ತೋರಿಸಿದ್ದರು.

    ಸೊಸೆ ತಂದ ಸೌಭಾಗ್ಯ, ನಮ್ಮ ಊರು, ಗಂಗೆ ಗೌರಿ, ಬೆಳುವಲದ ಮಡಿಲಲ್ಲಿ, ಕಪ್ಪು ಬಿಳುಪು, ಬೃಂದಾವನ, ಬೋರೆ ಗೌಡ ಬೆಂಗಳೂರಿಗೆ ಬಂದ, ಮರೆಯದ ದೀಪಾವಳಿ, ಪ್ರತಿಧ್ವನಿ, ಕಾವೇರಿ, ದೇವರ ಗುಡಿ, ಬದುಕು ಬಂಗಾರವಾಯ್ತು, ಮುಗಿಯದ ಕಥೆ, ಬಿಡುಗಡೆ, ದೇವರದುಡ್ಡು, ಕಲಿಯುಗ, ಪಿತಾಮಹ ಸೇರಿದಂತೆ 150 ಕ್ಕೂ ಅಧಿಕ ಚಿತ್ರಗಳಲ್ಲಿ ರಾಜೇಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರ ಪ್ರೇಮಿಗಳ ಮನ ಗೆದ್ದಿದ್ದರು. ಇದನ್ನೂ ಓದಿ: ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಎಂದು ಗುರುತಿಸಿಕೊಂಡಿದ್ದರು ನಟ ರಾಜೇಶ್

    ಅವರ ನಿಧನದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ನಾಡಿನ ಸಮಸ್ತರಿಗೆ ದೇವರು ಕರುಣಿಸಲಿ ಎಂದು ಸಚಿವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

  • ಹಾಸನಾಂಬ ದರ್ಶನೋತ್ಸವಕ್ಕೆ ಸಾರ್ವಜನಿಕರಿಗೆ ಅವಕಾಶ: ಸಚಿವ ಕೆ.ಗೋಪಾಲಯ್ಯ

    ಹಾಸನಾಂಬ ದರ್ಶನೋತ್ಸವಕ್ಕೆ ಸಾರ್ವಜನಿಕರಿಗೆ ಅವಕಾಶ: ಸಚಿವ ಕೆ.ಗೋಪಾಲಯ್ಯ

    ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಸಾರ್ವಜನಿಕರಿಗೆ ಈ ಬಾರಿಯೂ ಅವಕಾಶ ಕಲ್ಪಿಸಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

    ನಗರದಲ್ಲಿ ಮಂಗಳವಾರ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯ ನಂತರ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ನಿಯಂತ್ರಣದಲ್ಲಿದೆ. ಜನರ ಧಾರ್ಮಿಕ ಭಾವನೆಯನ್ನು ಗೌರವಿಸಬೇಕಾಗಿರುವುದರಿಂದ ಈ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಬಾಗಿಲು ತೆರೆಯುವ ದಿನವಾದ ಅ.28 ಹಾಗೂ ಬಾಗಿಲು ಮುಚ್ಚುವ ದಿನವಾದ ನ.6 ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆವರೆಗೆ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

    HASANAMBE

    ಹಾಸನಾಂಬ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಪ್ರತಿಯೊಬ್ಬರೂ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

    ದೇವರ ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹೊಂದಿರಬೇಕು ಎಂದು ಹೇಳಿದರು.

    HASANAMBE

    ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ದರ್ಶನಕ್ಕೆ ಅವಕಾಶವಿದೆ. 300 ರೂ. ಹಾಗೂ 1000 ರೂ.ಗೆ ಪಾಸ್‍ಗಳನ್ನು ವಿತರಿಸಲಾಗುವುದು. ಸಾಮಾನ್ಯ ದರ್ಶನಕ್ಕೆ ಸೂಕ್ತ ಮೂಲಸೌಕರ್ಯ ಕಲ್ಪಿಸಲು ಅವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: JDSಗೆ ಬದ್ದತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ: ದಿನೇಶ್ ಗುಂಡೂರಾವ್

    ಇದೇ ವೇಳೆ ಶಾಸಕ ಪ್ರೀತಮ್ ಗೌಡ, ನಗರಸಭೆ ಅಧ್ಯಕ್ಷ ಮೋಹನ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹಾಜರಿದ್ದರು.

  • ಅಂದು ವಿರೋಧಿಗಳು-ಇಂದು ಸ್ನೇಹಿತರು: ಮೂವರು ಸೇರಿ ಬರ್ತ್ ಡೇ ಆಚರಣೆ

    ಅಂದು ವಿರೋಧಿಗಳು-ಇಂದು ಸ್ನೇಹಿತರು: ಮೂವರು ಸೇರಿ ಬರ್ತ್ ಡೇ ಆಚರಣೆ

    ಬೆಂಗಳೂರು: ಚುನಾವಣಾ ಸಮಯದಲ್ಲಿ ವಿರೋಧಿಗಳಾಗಿದ್ದವರು ಇಂದು ಸ್ನೇಹಿತರಾಗಿ ಒಟ್ಟಿಗೆ ಬರ್ತ ಡೇ ಆಚರಣೆ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    2013ರ ವಿಧಾನಸಭಾ ಚುನಾವಣೆ ಅದು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಮೂವರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ರಾಜಕೀಯ ವಿರೋಧಿಗಳಾಗಿದ್ದವರು ಇವತ್ತು ಒಂದೇ ಪಕ್ಷದಲ್ಲಿ ಇದ್ದಾರೆ. ಮೂವರು ಸೇರಿ ಮಾಜಿ ಉಪಮೇಯರ್ ಹರೀಶ್ ಬರ್ತ್ ಡೇ ಆಚರಿಸಿದ್ದು ವಿಶೇಷವಾಗಿತ್ತು.

    ಹೌದು, 2013ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಗೋಪಾಲಯ್ಯ, ಕಾಂಗ್ರೆಸ್ ನಿಂದ ನೆ.ಲ.ನರೇಂದ್ರಬಾಬು, ಬಿಜೆಪಿಯಿಂದ ಮಾಜಿ ಉಪಮೇಯರ್ ಹರೀಶ್ ಸ್ಪರ್ಧೆ ಮಾಡಿದ್ದರು. ಆಗ ಜೆಡಿಎಸ್ ನಿಂದ ಗೋಪಾಲಯ್ಯ ಗೆದ್ದಿದ್ದರು. ಈ ಮೂವರು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ಇವತ್ತು ಮಾಜಿ ಉಪ ಮೇಯರ್ ಎಸ್ ಹರೀಶ್ ರವರ ಹುಟ್ಟು ಹಬ್ಬವನ್ನ ಆಚರಿಸಿದ್ದಾರೆ. ಒಂದೇ ಫೋಟೋ ನಲ್ಲಿ ಮೂವರನ್ನ ನೋಡಿದವರು ಇದು ರಾಜಕೀಯ ಅಂದ್ರೆ ಅಂತಾ ಅಂದ್ಕೊಂಡಿದ್ದು ಸುಳ್ಳಲ್ಲ. ಇದನ್ನೂ ಓದಿ: ಶಿಕ್ಷಕರಿಗೆ ವರ್ಕ್ ಫ್ರಮ್ ಹೋಂ ಮುಂದುವರಿಸಿ – ಸರ್ಕಾರಕ್ಕೆ ಶಿಕ್ಷಕರ ಸಂಘ ಪತ್ರ

    ಹರೀಶ್ ಹುಟ್ಟುಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಇಂದು ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನಾಗಪುರ ಕಮಲಾನಗರ ನಂದಿನಿ ಬಡಾವಣೆಯ ಪೌರ ಕಾರ್ಮಿಕರುಗಳಿಗೆ ದಿನಸಿ ಧಾನ್ಯಗಳ ಕಿಟ್ ಅನ್ನು ಸ್ಥಳೀಯ ಶಾಸಕ ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ವಿತರಿಸಿದರು. ಗೋಪಾಲಯ್ಯ, ಹರೀಶ್, ನೆ.ಲ.ನರೇಂದ್ರ ಬಾಬು ಒಟ್ಟಿಗೆ ನಿಂತು ಕಿಟ್ ವಿತರಣೆ ಮಾಡಿದರು.

  • ಚಾಕೇನಹಳ್ಳಿ ಸ್ಫೋಟ ಪ್ರಕರಣ- ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡಿದ ಸಚಿವ ಗೋಪಾಲಯ್ಯ

    ಚಾಕೇನಹಳ್ಳಿ ಸ್ಫೋಟ ಪ್ರಕರಣ- ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡಿದ ಸಚಿವ ಗೋಪಾಲಯ್ಯ

    ಹಾಸನ: ಜಿಲೆಟಿನ್ ರೀತಿಯ ವಸ್ತು ಸಿಡಿದು ಮೃತಪಟ್ಟ ಮೂವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಪರಿಹಾರದ ಚೆಕ್ ವಿತರಿಸಿದರು.

    ಜಿಲೆಟಿನ್ ರೀತಿಯ ಸ್ಫೋಟಕ ಸಿಡಿದು ಮೂವರು ಮೃತಪಟ್ಟಿದ್ದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಯಲ್ಲಿ ನಡೆದಿತ್ತು. ಈ ವೇಳೆ ಮೂವರು ಸಾವನ್ನಪ್ಪಿದ್ದರು. ಇವರ ಕುಟುಂಬಗಳಿಗೆ ಇದೀಗ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಚೆಕ್‍ನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ವಿತರಿಸಿದರು. ಇದನ್ನೂ ಓದಿ: ಚಾಕೇನಹಳ್ಳಿ ಸ್ಫೋಟ ಪ್ರಕರಣ- ಸಚಿವ, ಸಂಸದ, ಶಾಸಕರು ಸ್ಥಳಕ್ಕೆ ಭೇಟಿ, ಪರಿಶೀಲನೆ

    ನಂತರ ಮಾತನಾಡಿದ ಅವರು, ಮೃತರ ಕುಟುಂಬದ ನಿರ್ವಹಣೆಗಾಗಿ 5 ಲಕ್ಷ ರೂ.ಗಳ ಚಕ್‍ನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವಿತರಿಸಲಾಗಿದೆ. ಇನ್ನೂ 7.5 ಲಕ್ಷ ರೂ.ಗಳನ್ನು ಗಣಿ ಮಾಲೀಕರಿಂದ ನೀಡಲಾಗುತ್ತದೆ ಎಂದು ತಿಳಿದಿದರು. ಈ ವೇಳೆ ಶಾಸಕ ಬಾಲಕೃಷ್ಣ, ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜ್, ಸಿಇಒ ಪರಮೇಶ್, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಉಪಸ್ಥಿತರಿದ್ದರು.

  • ಪಡಿತರ ಅಂಗಡಿಗಳಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ, ಪರಿಶೀಲನೆ

    ಪಡಿತರ ಅಂಗಡಿಗಳಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ, ಪರಿಶೀಲನೆ

    – ಅಕ್ರಮದಲ್ಲಿ ತೊಡಗದಂತೆ ಎಚ್ಚರಿಕೆ

    ನೆಲಮಂಗಲ: ಸಾರ್ವಜನಿಕರ ದೂರಿನ ಹಿನ್ನೆಲೆ ಆಹಾರ ಸಚಿವ ಗೋಪಾಲಯ್ಯ ನಗರದ ಹೊರವಲಯದ ನೆಲಮಂಗಲ ತಾಲೂಕಿನ ಹಲವು ಪಡಿತರ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

    ನೆಲಮಂಗಲ ತಾಲೂಕಿನ ಕುಲವನಹಳ್ಳಿ, ಬಿಲ್ಲಿನಕೋಟೆ, ಡಾಬಸ್ ಪೇಟೆ, ಶಿವಗಂಗೆ ಗ್ರಾಮಗಳಿಗೆ ಸಚಿವರು ಆಗಮಿಸಿ ಪಡಿತರ ವೀಕ್ಷಿಸಿದರು. ಇದೇ ವೇಳೆ ಅಕ್ರಮದಲ್ಲಿ ಭಾಗಿಯಾಗದಂತೆ ಮಾಲೀಕರಿಗೆ ತಾಕೀತು ಮಾಡಿದರು. ಅಲ್ಲದೆ ಸ್ಥಳದಲ್ಲೇ ಎಲ್ಲರಿಗೂ ದಿನಸಿ ವಿತರಣೆ ಮಾಡುವಂತೆ ಆದೇಶ ನೀಡಿದರು. ತೂಕ, ಗುಣಮಟ್ಟ ಕಾಪಾಡಿ ಬಡವರಿಗೆ ನೆರವಾಗುವಂತೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ತಿಳಿಸಿದರು.

    ರಾಜ್ಯದ ಎಲ್ಲ ಜನರಿಗೂ ಆಹಾರ ಸಿಗುವಂತೆ ಮಾಡುವುದು ನಮ್ಮ ಸರ್ಕಾರದ ಗುರಿ, ಪಡಿತರ ಕಾಡ್9 ಇಲ್ಲದ ಹೊರ ಊರು, ಜಿಲ್ಲೆ, ಹೊರ ರಾಜ್ಯದ ಎಲ್ಲರಿಗೂ ದಿನಸಿ ನೀಡುವಂತೆ ಆದೇಶ ನೀಡಲಾಗಿದೆ. ವಲಸಿಗರಿಗೂ ಉಚಿತವಾಗಿ ಪಡಿತರ ನೀಡಲು ಆದೇಶಿಸಲಾಗಿದೆ. ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನಿಗಿಸಲು ನಮ್ಮ ಸರ್ಕಾರ ಮುಂದಾಗಿದೆ. ಎಲ್ಲರಿಗೂ ಪಡಿತರ ವ್ಯವಸ್ಥೆಯಾಗಬೇಕು ಎಂದರು.

    ರಾಗಿ ಖರೀದಿ ಕೇಂದ್ರದಲ್ಲಿ 2ಕೆ.ಜಿ ಅಧಿಕ ರಾಗಿ ಪಡೆಯುವ ವಿಚಾರವಾಗಿ ಮಾತನಾಡಿದ ಅವರು, ಈ ವಿಷಯ ನನಗೆ ತಿಳಿದಿಲ್ಲ, ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪ್ರತಿಯೊಬ್ಬರಿಗೂ 2 ಕೆ.ಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ನಿಯಮ ರೂಪಿಸಲಾಗಿದೆ. ಮುಂದಿನ ತಿಂಗಳಿನಿಂದ ನೂತನ ಯೋಜನೆ ಜಾರಿಯಾಗಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಿವಗಂಗೆಯ ದೇವಸ್ಥಾನಕ್ಕೆ ತೆರಳದೇ ಬಾಗಿಲಿನಲ್ಲೇ ಕರ್ಪೂರ ಬೆಳಗಿ, ದೇವರಿಗೆ ನಮಿಸಿ, ಸಾಮಾಜಿಕ ಅಂತರ ಪಾಲನೆ ಮಾಡಿದರು. ಈ ವೇಳೆ ನೆಲಮಂಗಲ ತಹಶಿಲ್ದಾರ್ ಶ್ರೀನಿವಾಸ್, ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.