Tag: Minister Krishna Byregowda

  • ರೈತರಿಗೆ ಮಧ್ಯಂತರ ಬರ ಪರಿಹಾರವಾಗಿ 2,000 ರೂ. ಪರಿಹಾರ ನೀಡಲಾಗಿದೆ: ಕೃಷ್ಣಭೈರೇಗೌಡ

    ರೈತರಿಗೆ ಮಧ್ಯಂತರ ಬರ ಪರಿಹಾರವಾಗಿ 2,000 ರೂ. ಪರಿಹಾರ ನೀಡಲಾಗಿದೆ: ಕೃಷ್ಣಭೈರೇಗೌಡ

    ಬೆಂಗಳೂರು: ರಾಜ್ಯದ ಬರ ನಿರ್ವಹಣೆಗೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೈತರಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ತಿಳಿಸಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ‌ ರವಿಕುಮಾರ್ ಪ್ರಶ್ನೆ ಕೇಳಿದ್ರು.

    ರೈತರಿಗೆ ಸರ್ಕಾರ ಕೊಡೋ 2 ಸಾವಿರ ಪರಿಹಾರ ಸಾಕಾಗೊಲ್ಲ. 125 ವರ್ಷಗಳ ಬಳಿಕ ಇಷ್ಟು ಬರ ಬಂದಿದೆ. 10 ಸಾವಿರ ಕೋಟಿ ರೂ. ರಾಜ್ಯ ಸರ್ಕಾರ ಬರ ಪರಿಹಾರ ಹಣ ಕೊಡಬೇಕು. ಸಿಎಂ ಅವರು ಒಂದು ಸಮುದಾಯಕ್ಕೆ ಘೋಷಣೆ ಮಾಡಿದ್ರು. ಅದನ್ನ ರೈತರಿಗೆ ಕೊಡಿ. ರೈತರಿಗೆ 10 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಲಾಪಕ್ಕೆ ಬಾರದ ಸಚಿವ ಜಮೀರ್ – ಪರಿಷತ್‌ನಲ್ಲಿ ಗದ್ದಲ

    ಇದಕ್ಕೆ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, ‌ರಾಜ್ಯದಲ್ಲಿ 223 ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. 20 ಕೋಟಿ ಮೇವುಗಾಗಿ, 324 ಕೋಟಿ ಬರ ನಿರ್ವಹಣೆಗೆ ಕೊಡಲಾಗಿದೆ. 775 ಕೋಟಿ ಡಿಸಿ ಅಕೌಂಟ್‌‌ನಲ್ಲಿ ಹಣ ಇದೆ.‌ ರೈತರಿಗೆ ಪ್ರಾಥಮಿಕವಾಗಿ 2 ಸಾವಿರ ಬರ ಪರಿಹಾರ ಕೊಡಲಾಗಿದೆ. ಕೇಂದ್ರ ಸರ್ಕಾರಕ್ಕೆ 18,171.44 ಕೋಟಿ NDRF/SDRF ಮಾರ್ಗಸೂಚಿ ಅನ್ವಯ ಪರಿಹಾರ ಕೇಳಲಾಗಿದೆ. ಬರದಿಂದ 35,162 ಕೋಟಿ ರೈತರಿಗೆ ನಷ್ಟ ಆಗಿದೆ ಎಂದು ಮಾಹಿತಿ ನೀಡಿದರು.

    2000 ಇಸವಿ ನಂತರ ಬರಗಾಲ ಪ್ರಾರಂಭವಾಗಿದೆ. ಈ ವರ್ಷ ಹೆಚ್ಚು ಬರ ಆಗಿದೆ. ಸರ್ಕಾರ ಬರ ನಿರ್ವಹಣೆಗೆ ಸಾಕಷ್ಟು ಕೆಲಸ ಮಾಡಿದೆ. ಸಿಎಂ 3 ಸಭೆ ಮಾಡಿದ್ದಾರೆ . 10 ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದ್ದೇವೆ. ಮುಂಗಾರಿನಲ್ಲಿ 12 ರಾಜ್ಯ, ಹಿಂಗಾರಿನಲ್ಲಿ 18 ರಾಜ್ಯಗಳಲ್ಲಿ ಬರ ಬಂದಿದೆ. ಸೆಪ್ಟೆಂಬರ್ 13 ಕ್ಕೆ ನಾವು ಬರದ ತಾಲೂಕು ಘೋಷಣೆ ಮಾಡಿದ್ವಿ. ಸೆಪ್ಟೆಂಬರ್‌ 22 ಕ್ಕೆ ಕೇಂದ್ರಕ್ಕೆ ಮೊದಲ ಪತ್ರ ಬರೆದಿದ್ದೇವೆ. ಮೇವಿನ ಕೊರತೆ ಆದರೆ ಅಂತ ರೈತರಿಗೆ 7 ಲಕ್ಷ ಬಿತ್ತನೆ ಬೀಜದ ಕಿಟ್ ನೀಡಿದ್ದೇವೆ. ಕುಡಿಯುವ ನೀರಿನ ಸಮಸ್ಯೆಗೆ ಖಾಸಗಿ ಬೋರ್‌ವೆಲ್, ಟ್ಯಾಂಕರ್ ಮೂಲಕ ನೀರು ಕೊಡ್ತಿದ್ದೇವೆ‌. ರಾಜ್ಯದಿಂದ ಮೇವು ಹೊರಗೆ ಹೋಗದಂತೆ ನಿಯಮ ಮಾಡಲಾಗಿದೆ. 894 ಕೋಟಿ ಡಿಸಿ, ತಹಶಿಲ್ದಾರರ ಬಳಿ ಹಣ ಇಟ್ಟಿದ್ದೇವೆ. ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಕೇಂದ್ರ ಕೃಷಿ, ಗೃಹ ಇಲಾಖೆ ಕಾರ್ಯದರ್ಶಿಗಳ ಭೇಟಿ ಮಾಡಿದ್ದೇವೆ. ಕೇಂದ್ರ‌ ಹಣಕಾಸು ಸಚಿವರ ಭೇಟಿ ಮಾಡಿ ಹಣ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದೇವೆ‌. ಕೇಂದ್ರ ಸರ್ಕಾರ ಇನ್ನೂ ಪರಿಹಾರ ಕೊಟ್ಟಿಲ್ಲ. ಭಾಗಶಃ ಪರಿಹಾರವಾಗಿ 2 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ಇದು ಬಿಡುಗಡೆ ಆಗುತ್ತದೆ. ಈ ಬಾರಿ ಮ್ಯಾನ್ಯುಯಲ್ ಆಗಿ ರೈತರಿಗೆ ಹಣ ಕೊಡ್ತಿಲ್ಲ. ನೇರವಾಗಿ ರೈತರ ಅಕೌಂಟ್‌ಗೆ ಆನ್‌ಲೈನ್ ಮೂಲಕ ಹಣ ಹಾಕ್ತೀವಿ‌. ರೈತರಿಗೆ ಇನ್ಶುರೆನ್ಸ್‌ನಿಂದ 2,500 ಕೋಟಿ ಪರಿಹಾರ ಕೊಡ್ತೀವಿ. NDRF-SDRF ಅಡಿ 4 ಸಾವಿರ ಕೋಟಿ ಪರಿಹಾರ ಕೊಡುವ ಸಿದ್ದತೆ ಆಗಿದೆ‌. ಕೇಂದ್ರದ ಹಣ ಬಿಡುಗಡೆ ಆದ ಕೂಡಲೇ ಹಣ ಕೊಡ್ತೀವಿ ಎಂದರು.

  • ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ – ಕೃಷ್ಣ ಬೈರೇಗೌಡ ಸವಾಲು

    ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ – ಕೃಷ್ಣ ಬೈರೇಗೌಡ ಸವಾಲು

    ಬೆಂಗಳೂರು: ಪ್ರತಿಪಕ್ಷ ಬಿಜೆಪಿಗೆ ವಿಶ್ವಾಸ ಇದ್ದರೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ ಎಂದು ಕೃಷ್ಣ ಬೈರೇಗೌಡ ಅವರು ಸವಾಲು ಎಸೆದಿದ್ದಾರೆ.

    ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸಂಪುಟ ಸಭೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇದುವರೆಗೆ ಮೈತ್ರಿ ಸರ್ಕಾರ ಮೇಲೆ ಬಿಜೆಪಿ ನಡೆಸುತ್ತಿರುವ 7ನೇ ದಾಳಿ ಇದಾಗಿದೆ. ಇದುವರೆಗೂ ಎಲ್ಲಾ ದಾಳಿಗಳನ್ನು ಮೆಟ್ಟಿ ನಿಂತಿದ್ದೇವೆ. ಈ ಬಾರಿ ಹೆಚ್ಚಿನ ಮಟ್ಟದಲ್ಲಿ ದಾಳಿ ಆಗಿದೆ. ಒಗ್ಗಟ್ಟಿನಿಂದ ಏನೆಲ್ಲಾ ಅವಕಾಶಗಳಿದೆ ಅವುಗಳನ್ನು ಬಳಕೆ ಮಾಡಿಕೊಂಡು ಸರ್ಕಾರ ಉಳಿಸಿಕೊಳ್ಳುವ ತೀರ್ಮಾನ ಮಾಡಲಾಯಿತು ಎಂದರು.

    ಬಿಜೆಪಿ ಅವರು ಸಂಖ್ಯಾಬಲ ಇಲ್ಲ ಎಂದು ಆರೋಪ ಮಾಡಿದ್ದಾರೆ. ಆದರೆ ಅವರಿಗೆ ಅಷ್ಟು ವಿಶ್ವಾಸ ಇದ್ದರೆ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡಲಿ ಎಂದರು. ಅಲ್ಲದೇ ರಾಜ್ಯ ಸರ್ಕಾರ ರಾಜ್ಯಪಾಲರ ಎಲ್ಲ ಸಲಹೆ, ಸೂಚನೆಗಳನ್ನು ಪಾಲಿಸುತ್ತದೆ. ನಾಳೆಯಿಂದ ಸದನ ಆರಂಭ ಆಗಲಿದ್ದು, ಸರ್ಕಾರ ಹಣಕಾಸು ವಿಧೇಯಕವನ್ನು ಮತಕ್ಕೆ ಹಾಕಲಿದೆ. ಆಗ ನಮಗೆ ಬಹುಮತ ಇದೆಯೋ ಇಲ್ವೋ ಗೊತ್ತಾಗುತ್ತದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಿಭಜನೆ ಮಸೂದೆ ಹಿಂಪಡೆಯುವ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ಬಿ.ಎಸ್ ಪಾಟೀಲ್ ಕಮಿಟಿ ವರದಿ ತಿರಸ್ಕಾರ ಮಾಡಿಲ್ಲ, ಬೇರೆ ರೀತಿ ಅನುಷ್ಠಾನ ಗೊಳಿಸುವ ಕುರಿತು ಚಿಂತನೆ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆಯನ್ನು ನೀಡಿದರು.

    ನಗರಾಭಿವೃದ್ಧಿ ಇಲಾಖೆ ವತಿಯಿಂದ ಕುಷ್ಟಗಿ ತಾಲ್ಲೂಕಿನ ತಾವರಗೆಡ ಗ್ರಾಮಕ್ಕೆ ನೀರಾವರಿಗೆ 88 ಕೋಟಿ ರೂ. ಮೇಲುಕೋಟೆಯ ಎಲ್ಲಾ ಕಲ್ಯಾಣಿಗಳ ಅಭಿವೃದ್ಧಿಗೆ 32 ಕೋಟಿ, ಮಂಡ್ಯದಲ್ಲಿ ಲೋಕ ಪಾವನ ನದಿಯಿಂದ ಕೆರೆ ತುಂಬಲು 30 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಯಿತು ಎಂದು ಹೇಳಿದರು.