Tag: Minister Narayana Gowda

  • ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಮಂಡ್ಯ: ಕಾವೇರಿ ಕಣಿವೆ ಸುತ್ತ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದೆ. ಈಗಾಗಲೇ 106 ಅಡಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬಂದಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಾವೇರಿ ನೀರನ್ನು ಅವಲಂಬಿಸಿ ಕೃಷಿ ಚಟುವಟಿಕೆ ನಡೆಸುವ ರೈತರಿಗೆ ಸಂತಸದ ಸುದ್ದಿ ಇದು. ಕೆಆರ್ ಸ್ ಅಣೆಕಟ್ಟಿನ 124 ಅಡಿಗಳ ಪೈಕಿ 106 ಅಡಿ ನೀರು ತುಂಬಿದೆ. 35 ಸಾವಿರ ಕ್ಯೂಸೆಕ್ಸ್ ಒಳ ಹರಿವಿನ ಪ್ರಮಾಣ ಇದೆ. ಕೇವಲ 24 ಗಂಟೆಯಲ್ಲಿ ಎರಡು ಅಡಿಯಷ್ಟು ನೀರು ಭರ್ತಿಯಾಗಿದೆ. 6 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ಈಗಾಗಲೇ ಹೇಮಾವತಿ ನಾಲೆಗೆ ನೀರು ಬಿಡಲಾಗಿದ್ದು, ಸೋಮವಾರಿಂದ ವಿಸಿ ನಾಲೆಗೆ ನೀರು ಹರಿಸುವ ಮೂಲಕ ಮುಂಗಾರು ಕೃಷಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

    ಸಬ್ಸಿಡಿಯಲ್ಲಿ ಭತ್ತದ ಬೀಜ ವಿತರಣೆ ಪ್ರಾರಂಭ:
    ಸಕ್ಕರೆ ನಾಡು ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಬ್ಬಿಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 40 ಸಾವಿರ ಹೆಕ್ಟೇರ್ ನಲ್ಲಿ ಕಬ್ಬು ಬೆಳೆದರೆ 65 ಸಾವಿರ ಹೆಕ್ಟೇರ್ ನಲ್ಲಿ ಭತ್ತ ಬೆಳೆಯಲಾಗುತ್ತದೆ. ಮುಂಗಾರು ಕೃಷಿ ಆರಂಭಿಸಲು ನಾಲೆಗಳಿಗೆ ನೀರು ಬಿಡುವ ಸಮಯವನ್ನೇ ಎದುರು ನೋಡಲಾಗುತ್ತಿತ್ತು. ಕೆಆರ್ ಎಸ್ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೃಷಿ ಇಲಾಖೆ ಸಹ ಸಬ್ಸಿಡಿಯಲ್ಲಿ ಭತ್ತದ ಬೀಜವನ್ನು ವಿತರಿಸುವ ಕಾರ್ಯ ಆರಂಭಿಸಲಿದೆ. ಮುಂದಿನ ಬುಧವಾರದಿಂದ ರೈತರಿಗೆ ಭತ್ತದ ಬೀಜ ವಿತರಣೆ ಶುರುವಾಗಲಿದೆ. ಸುಮಾರು 4 ಸಾವಿರ ಹೆಕ್ಟೇರ್ನಲ್ಲಿ ನೀರಾವರಿ ರಾಗಿ ಹಾಗೂ 500 ಹೆಕ್ಟೇರ್ ನಲ್ಲಿ ಅಲಸಂದೆ ಕೂಡ ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ಗೊಬ್ಬರ ಸಹ ದಾಸ್ತಾನು ಇದ್ದು, ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಸರಬರಾಜು ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಉಳಿಸಬೇಕಾದರೆ ಕಾಂಗ್ರೆಸ್ ಕಿತ್ತೊಗೆಯಬೇಕೆಂದ ಸಿದ್ದರಾಮಯ್ಯ- ಮತ್ತೆ ಎಡವಟ್ಟು

    ವರುಣನ ಕೃಪೆಯಿಂದ ರೈತರ ಬದುಕು ಹಸನಾಗಲಿ:
    ಮಂಡ್ಯ ಜಿಲ್ಲೆಯಲ್ಲಿ ವ್ಯವಸಾಯವೇ ಪ್ರಧಾನ ಕಸುಬು. ಸಂಪೂರ್ಣ ಜಿಲ್ಲೆ ಕೃಷಿಯಿಂದ ಆವೃತವಾಗಿದೆ. ರೈತನ ಬದುಕಿಗೆ ನೀರೇ ಪ್ರಧಾನ. ಕಳೆದ ಮೂರು ವರ್ಷಗಳಿಂದ ಸತತವಾಗಿ ಕೆ.ಆರ್.ಎಸ್. ಜಲಾಶಯ ಭರ್ತಿಯಾಗುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಕಾವೇರಿ ನದಿ ತುಂಬಿ ಹರಿದರೆ ರೈತರ ಜೀವನ ಕೂಡ ಸಂತಸದಿಂದ ತುಂಬಿರುತ್ತದೆ. ಸಾಕಷ್ಟು ಮಳೆಯಾಗಿ, ಜಲಾಶಯ ತುಂಬುತ್ತಿರುವ ಕಾರಣ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ರೈತರು ನೀರನ್ನು ಪೋಲು ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು. ರೈತರು ಅಂದುಕೊಂಡಂತೆ ಉತ್ತಮ ಬೆಳೆಯಾಗಲಿ. ವರುಣ ಕೃಪೆಯಿಂದ ನೀರಿನ ಕೊರತೆಯಾಗದೆ ಯಥೇಚ್ಚ ಫಸಲು ಬರಲಿ. ಆ ಮೂಲಕ ರೈತರ ಬದುಕು ಹಸನಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾರೈಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

  • ಆಕ್ಸಿಜನ್ ಕೊರತೆಯೇ ನಮ್ಮ ಮೇಜರ್ ಪ್ರಾಬ್ಲಂ: ಸಚಿವ ನಾರಾಯಣಗೌಡ

    ಆಕ್ಸಿಜನ್ ಕೊರತೆಯೇ ನಮ್ಮ ಮೇಜರ್ ಪ್ರಾಬ್ಲಂ: ಸಚಿವ ನಾರಾಯಣಗೌಡ

    – ಇವತ್ತು ರಾತ್ರಿ, ನಾಳೆಗೆ ಕಷ್ಟವಿದೆ

    ಮಂಡ್ಯ: ಆಕ್ಸಿಜನ್ ಕೊರತೆಯೇ ನಮ್ಮ ಮೇಜರ್ ಪ್ರಾಬ್ಲಂ. ಸದ್ಯ ಇವತ್ತು ಸಂಜೆಯವರೆಗೂ ಆಕ್ಸಿಜನ್ ಆಗಲಿದೆ. ಇವತ್ತು ರಾತ್ರಿ ಮತ್ತು ನಾಳೆಗೆ ಕಷ್ಟವಿದೆ. ಹಾಗಾಗಿ ನಾನೇ ಆಕ್ಸಿಜನ್ ಫಿಲ್ಲಿಂಗ್ ಕಂಪನಿಗೆ ಭೇಟಿ ನೀಡುತ್ತಿದ್ದೇನೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಆಕ್ಸಿಜನ್ ಎಲ್ಲಿಯೂ ಸಿಗುತ್ತಿಲ್ಲ. ಮೆಡಿಕಲ್ ಕಾಲೇಜಿನಲ್ಲಿ 150 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ರೋಗಿಗಳನ್ನ ಒಂದು ಕಡೆ ಶಿಫ್ಟ್ ಮಾಡಲಾಗಿದೆ. ತಾಲೂಕುಗಳಿಗೆ ಆಕ್ಸಿಜನ್ ಸಿಲಿಂಡರ್ ಗಳೇ ಹೋಗಬೇಕು. ದಿನಕ್ಕೆ 350 ರಿಂದ 400 ಸಿಲಿಂಡರ್ ಗಳ ಅವಶ್ಯಕತೆವಿದೆ. ಇದುವರೆಗೂ ಯಾವುದೇ ಸಮಸ್ಯೆ ಆಗಿಲ್ಲ. ಈಗ ಆಕ್ಸಿಜನ್ ಅಭಾವ ಕಾಣಿಸಿಕೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಆಕ್ಸಿಜನ್ ಅಭಾವ ಹಿನ್ನೆಲೆ ನಾನೇ ಫ್ಯಾಕ್ಟರಿಗೆ ತೆರಳಿ ಎಷ್ಟು ಸಾಧ್ಯವಾಗುತ್ತೋ ಅಷ್ಟು ತುಂಬಿ ಕಳುಹಿಸುವ ಕೆಲಸ ಮಾಡುತ್ತೇನೆ. ಇಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗುತ್ತೆ ಅಂತ ಸರ್ಕಾರಕ್ಕೆ ಅಂದಾಜು ಇರಲಿಲ್ಲ. ಈಗ ಯಾರೇ ದಾಖಲಾದ್ರೂ ಆಕ್ಸಿಜನ್ ಕೇಳುತ್ತಾರೆ. ಗ್ರಾಮೀಣ ಭಾಗದ ಜನರು ಜ್ವರ ಬಂದ್ರೂ ಎಂಟರಿಂದ ಹತ್ತು ದಿನ ಅಲ್ಲೇ ಇರುತ್ತಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಆಸ್ಪತ್ರೆಗೆ ಬರುತ್ತಾರೆ. ಹಾಗಾಗಿ ಜಿಲ್ಲೆಯಲ್ಲಿ ಸಮಸ್ಯೆ ಆಗುತ್ತಿದೆ ಎಂದು ತಿಳಿಸಿದರು.

    ಮಂಡ್ಯ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಾವಿರಕ್ಕೂ ಅಧಿಕ ಬೆಡ್ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ವಸತಿ ನಿಲಯಗಳನ್ನ ಕೋವಿಡ್ ಕೇರ್ ಸೆಂಟರ್ ಗಳಾಗಿ ಬದಲಾಯಿಸಲಾಗಿದೆ. ಜಿಲ್ಲೆಯ ಕೊರೊನಾ ಸೋಂಕಿತರು ಅಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

  • ಕೆ.ಆರ್.ಪೇಟೆ ಲೋಕಲ್ ವಾರ್‌ನಲ್ಲಿ ಬಿಜೆಪಿ ಮೇಲುಗೈ- 30 ವರ್ಷಗಳ ಇತಿಹಾಸ ಬದಲಾಯ್ತು ಎಂದ ನಾರಾಯಣ ಗೌಡ

    ಕೆ.ಆರ್.ಪೇಟೆ ಲೋಕಲ್ ವಾರ್‌ನಲ್ಲಿ ಬಿಜೆಪಿ ಮೇಲುಗೈ- 30 ವರ್ಷಗಳ ಇತಿಹಾಸ ಬದಲಾಯ್ತು ಎಂದ ನಾರಾಯಣ ಗೌಡ

    ಮಂಡ್ಯ: ಕಳೆದ ಕೆಆರ್‌ಪೇಟೆ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ಜೆಡಿಎಸ್ ಭದ್ರ ಕೋಟೆಯನ್ನು ಛಿದ್ರ ಮಾಡಿದ್ದ ಸಚಿವ ನಾರಾಯಣ ಗೌಡ ಇದೀಗ ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಒಂದೇ ಕಲ್ಲಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಹೊಡೆದ ನೀಡಿದ್ದಾರೆ. ಈ ಮೂಲಕ ಮುಂದಿನ ಸಾರ್ವತ್ರೀಕ ಚುನಾವಣೆಗೆ ನಾರಾಯಣ ಗೌಡರು ಭದ್ರ ಬುನಾದಿ ಹಾಕಿಕೊಳ್ಳುತ್ತಿದ್ದಾರೆ.

    ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಇಲ್ಲಿವರೆಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಪಾರುಪತ್ಯ ನಡೆದಿತ್ತು. ಆದರೆ ಕೆಆರ್‍ಪೇಟೆ ಉಪಚುನಾವಣೆಯಲ್ಲಿ ಮಂಡ್ಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಮಲ ಅರಳಿಸುವ ಮೂಲಕ ನಾರಾಯಣಗೌಡ ಕಮಲ್ ಮಾಡಿದ್ದರು. ಇದೀಗ ಅದೇ ರೀತಿ ತಮ್ಮ ಗೆಲುವಿನ ನಾಗಲೋಟ ಮುಂದುವರಿಸಲು ನಾರಾಯಣ ಗೌಡ ಇದೀಗ ಸ್ಥಳೀಯ ಮಟ್ಟದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ.

     ಕೆಆರ್‌ಪೇಟೆ ಪುರಸಭೆಯಲ್ಲಿ ಬಿಜೆಪಿಯಿಂದ ಓರ್ವ ಅಭ್ಯರ್ಥಿ ಇದ್ದರೂ ಕೂಡ ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ 14 ಮಂದಿಯನ್ನು ಸೆಳೆದುಕೊಂಡು ತಮ್ಮ ಬೆಂಬಲಿಗ ಅಭ್ಯರ್ಥಿಯನ್ನು ಗೆಲ್ಲಿಸಕೊಳ್ಳುವ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್‍ಗೆ ಮರ್ಮಾಘಾತ ನೀಡಿದ್ದಾರೆ. ಸದ್ಯ ಪುರಸಭೆಯ ಅಧ್ಯಕ್ಷೆಯಾಗಿರುವ ಮಾದೇವಿ ಜೆಡಿಎಸ್ ಪಕ್ಷದಿಂದ 15ನೇ ವಾರ್ಡ್‍ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇವರು ನಾರಾಯಣ ಗೌಡ ಬೆಂಬಲಿಗರು ಆಗಿರುವ ಕಾರಣ ಇದೀಗ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

    ಚುನಾವಣೆಯಲ್ಲಿ ಪುರಸಭೆಯ ಅಧ್ಯಕ್ಷ ಮೀಸಲಾತಿ ಎಸ್‍ಟಿ ಜನಾಂಗಕ್ಕೆ ಲಭಿಸಿತ್ತು. ಹೀಗಾಗಿ ಅನಿವಾರ್ಯವಾಗಿ ಜೆಡಿಎಸ್ ಪಕ್ಷದವರು ನಾರಾಯಣಗೌಡ ಪರ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಕೆಆರ್‌ಪೇಟೆ ಪುರಸಭೆ 23 ವಾರ್ಡ್ ಹೊಂದಿದ್ದು, ಈ ಪೈಕಿ ಜೆಡಿಎಸ್ 11, ಕಾಂಗ್ರೆಸ್ 10, ಬಿಜೆಪಿ 1 ಹಾಗೂ ಪಕ್ಷೇತರ 1 ಇತ್ತು. ಹೀಗಿದ್ದರು ಸಹ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರ ಪಡೆಯಲು ಸಾಧ್ಯವಾಗದೇ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಾದೇವಿ ಅಧ್ಯಕ್ಷರಾಗಿದ್ದು, ಜೆಡಿಎಸ್ ಅಭ್ಯರ್ಥಿ ಉಪಾಧ್ಯಕ್ಷ ಸ್ಥಾನ ಹಿಡಿದಿದ್ದಾರೆ. ಸದ್ಯ ಮೀಸಲಾತಿ ವಿಚಾರ ನ್ಯಾಯಲಯದಲ್ಲಿ ಇರುವ ಕಾರಣ ಇನ್ನೂ ಸಹ ಅಧಿಕೃತವಾಗಿ ಘೋಷಣೆಯಾಗಿಲ್ಲ. ಒಂದು ತಿಂಗಳ ಬಳಿಕ ಅಧಿಕೃತ ಆದೇಶ ಮಾಡಲಾಗುತ್ತದೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುರಸಭೆ ಚುನಾವಣೆ ನಡೆದಿದ್ದು, 30 ವರ್ಷಗಳ ಇತಿಹಾಸ ಈಗ ಬದಲಾಗಿದೆ. ನಮ್ಮ ಅಭ್ಯರ್ಥಿಯೇ ಗೆಲುವು ಪಡೆದಿದ್ದು, ನಗರ ಅಭಿವೃದ್ಧಿ ಆಗಲಿದೆ. ಇಲ್ಲಿ ಉತ್ತಮ ತಂಡವನ್ನು ರಚಿಸಿದ್ದೆವು. ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಎದುರಾಳಿಗಳೇ ಇಲ್ಲ ಕಾರಣ. ಚುನಾವಣೆ ಏಕಮುಖವಾಗಿ ನಡೆದಿದೆ. ನಾನು ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಶುಭ ಕೋರುತ್ತೇನೆ ಎಂದರು.

  • ಕ್ಯಾಂಟೀನ್‍ನಲ್ಲಿ ಸಚಿವರು, ಶಾಸಕರ ಗಲಾಟೆ – ಹೊಡೆದಾಟದ ಹಂತಕ್ಕೆ ಹೋದ ಜಗಳ

    ಕ್ಯಾಂಟೀನ್‍ನಲ್ಲಿ ಸಚಿವರು, ಶಾಸಕರ ಗಲಾಟೆ – ಹೊಡೆದಾಟದ ಹಂತಕ್ಕೆ ಹೋದ ಜಗಳ

    ಬೆಂಗಳೂರು: ಒಂದೆಡೆ ಕೊರೊನಾ ನಡುವೆಯೂ ಇಂದಿನಿಂದ ಅಧಿವೇಶನ ಶುರುವಾಗಿದೆ. ಮತ್ತೊಂದೆಡೆ ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕ್ಯಾಂಟೀನ್‍ನಲ್ಲಿ ಸಚಿವರು ಮತ್ತು ಶಾಸಕರ ಗಲಾಟೆ ನಡೆದಿದೆ.

    ವಿಧಾನಸೌಧದ ಲಾಂಜ್‍ನಲ್ಲಿರುವ ಕ್ಯಾಂಟೀನ್‍ನಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಜಗಳ ನಡೆದಿದೆ. ಈ ಗಲಾಟೆ ಹೊಡೆದಾಟದ ಹಂತಕ್ಕೂ ಹೋಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

     

    ಕಡೂರು ಕ್ಷೇತ್ರಕ್ಕೆ ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ತಾರತಮ್ಯವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡ ಅವರಿಗೆ ಏಕವಚನದಲ್ಲಿ ಬೈದಿದ್ದಾರೆ ಎನ್ನಲಾಗಿದೆ. ಈ ಗಲಾಟೆ ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪ, ಸೋಮಣ್ಣ, ಸಿ.ಡಿ.ರವಿ ಎಲ್ಲರ ಸಮ್ಮುಖದಲ್ಲಿ ನಡೆದಿದೆ.

     

    ಬೆಳ್ಳಿ ಪ್ರಕಾಶ್ ಮೊದಲ ಬಾರಿ ಗೆದ್ದು ಕಡೂರು ಶಾಸಕರಾಗಿದ್ದಾರೆ. ಅನೇಕ ತಿಂಗಳ ಹಿಂದೆಯೇ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಸಚಿವರು ಅನುದಾನ ಕೊಡದೇ ಸತಾಯಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಅಸಮಾಧನಾಗೊಂಡಿದ್ದ ಶಾಸಕ ಬೆಳ್ಳಿ ಕ್ಯಾಂಟೀನ್‍ನಲ್ಲಿ ಅನುದಾನ ಬಿಡುಗಡೆಯ ಮಾಡದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

     

    ಶಾಸಕ-ಸಚಿವರ ಮಾತಿನ ಜಗಳ:
    ಬೆಳ್ಳಿ ಪ್ರಕಾಶ್: ನನ್ನ ಕ್ಷೇತ್ರದ ಕೆಲಸ ಮಾಡಿಕೊಡದವ ನೀನು ಎಂಥಾ ಸಚಿವ.
    ಸಚಿವ ನಾರಾಯಣ ಗೌಡ: ಆಫೀಸ್‍ಗೆ ಬಂದು ಮಾತಾಡು. ಇಲ್ಲಿ ಹೀಗೆ ಮಾತಾಡೊದಲ್ಲ. ಮೊದಲು ಮಾಸ್ಕ್ ಹಾಕ್ಕೊಂಡು ಮಾತಾಡು.
    ಬೆಳ್ಳಿ ಪ್ರಕಾಶ್: ಮಾಸ್ಕ್ ಹಾಕಿಕೊಳ್ಳುವುದು ನನಗೆ ಗೊತ್ತು. ನಿನ್ನ ಆಫೀಸ್‍ಗೆ ಏನ್ ಬರೋದು!
    ಸಚಿವ ನಾರಾಯಣ ಗೌಡ: ಸರಿಯಾಗಿ ಮಾತಾಡು. ಇಲ್ಲಿ ಹೀಗೆಲ್ಲ ಮಾತಾಡ್ತಿಯಾ, ನಾನು ಒಬ್ಬ ಸಚಿವ. ನನಗೂ ಮಾತಾಡೊಕೆ ಬರುತ್ತೆ.

     

    ಈ ಗಲಾಟೆಯಲ್ಲಿ ಸಚಿವ ನಾರಾಯಣ ಗೌಡರಿಗೆ ಏಟು ಬಿದ್ದಿದ್ದು, ಶಾಸಕ ಬೆಳ್ಳಿ ಪ್ರಕಾಶ್ ಅವರ ಹೊಟ್ಟೆಗೆ ಗುದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ಜೆಡಿಎಸ್ ಶಾಸಕ ಅನ್ನದಾನಿ ಬಂದು ಹೊಡೆದಾಟ ಬಿಡಿಸಿದ್ದಾರೆ. ಸಿದ್ದರಾಮಯ್ಯ ಕಣ್ಣ ಮುಂದೆಯೇ ಶಾಸಕ ಬೆಳ್ಳಿ ಪ್ರಕಾಶ್ ಮುಷ್ಟಿ ಬಿಗಿಹಿಡಿದು ನಾರಾಯಣ ಗೌಡರ ಹೊಟ್ಟೆಗೆ ಬಲವಾಗಿ ಗುದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

    ಶಾಸಕರು ಕೇಳಿದರೂ ಕ್ಷೇತ್ರಕ್ಕೆ ಅನುದಾನ ನೀಡದೆ ಸಚಿವರು ಸತಾಯಿಸುತ್ತಿರುವುದರಿಂದ ಇನ್ನೂ ಸಾಮಾನ್ಯ ಜನರು ಮನವಿ ಮಾಡಿದರೆ ಕೆಲಸ ಮಾಡಿಕೊಡುತ್ತಾರ ಎಂಬ ಪ್ರಶ್ನೆ ಎದ್ದಿದೆ.

  • ಲಾಕ್‍ಡೌನ್ ವಿಸ್ತರಣೆ ಸುಳಿವು ನೀಡಿದ: ಸಚಿವ ನಾರಾಯಣಗೌಡ

    ಲಾಕ್‍ಡೌನ್ ವಿಸ್ತರಣೆ ಸುಳಿವು ನೀಡಿದ: ಸಚಿವ ನಾರಾಯಣಗೌಡ

    ಲಾಕ್‍ಡೌನ್ ವಿಸ್ತರಿಸಲ್ಲ ಎಂದ ಸೋಮಶೇಖರ್

    ಮಂಡ್ಯ: ಬೆಂಗಳೂರಿನಲ್ಲಿ ಲಾಕ್‍ಡೌನ್ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ ಭವಿಷ್ಯ ನುಡಿದಿದ್ದಾರೆ.

    ಲಾಕ್‍ಡೌನ್ ಕುರಿತು ನಗರದಲ್ಲಿ ಮಾತನಾಡಿದ ಅವರು, ಮುಂಬೈ, ಮದ್ರಾಸ್ ಹಾಗೂ ಇತರೆಡೆಗಳಿಂದ ಹೆಚ್ಚಿನ ಜನ ಬರ್ತಿದ್ದಾರೆ. ಹೊರಗಿಂದ ಹೆಚ್ಚು ಜನ ಬಂದಿದ್ದರಿಂದಲೇ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚು ಹರಡುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಸಿಎಂ ತೀರ್ಮಾನ ತೆಗೆದುಕೊಂಡು ಸದ್ಯ ಒಂದು ವಾರಗಳ ಕಾಲ ಸರ್ಕಾರ ಲಾಕ್‍ಡೌನ್ ಮಾಡುವ ಆದೇಶ ನೀಡಿದ್ದಾರೆ. ಲಾಕ್‍ಡೌನ್ ಇನ್ನೂ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತಿಳಿಸಿದ್ದಾರೆ.

    ಕೊರೊನಾ ಯಾರ ಕೈಯಲ್ಲೂ ಕಂಟ್ರೋಲ್ ಇಲ್ಲ. ದೇಶಾದ್ಯಂತ ಸೋಂಕು ವ್ಯಾಪಕವಾಗಿ ಹರಡಿದೆ. ಅದೇ ರೀತಿ ರಾಜ್ಯದಲ್ಲೂ ಹೆಚ್ಚಿದೆ. ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‍ಡೌನ್ ಅವಧಿ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತಿಳಿಸಿದ್ದಾರೆ.

    ಇದಕ್ಕೆ ಪ್ರತಿಯಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ್ದು, ರಾಜ್ಯದಲ್ಲಿ ಎಲ್ಲೂ ಕೂಡ ಲಾಕ್‍ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಇಬ್ಬರು ಸಚಿವರು ಬೇರೆ ಬೇರೆ ಹೇಳಿಕೆ ನೀಡುವ ಮೂಲಕ ಗೊಂದಲವನ್ನುಂಟು ಮಾಡಿದ್ದಾರೆ. ಒಬ್ಬರು ಲಾಕ್‍ಡೌನ್ ಮುಂದುವರೆಯುತ್ತೆ ಎಂದರೆ, ಇನ್ನೊಬ್ಬರು ಇಲ್ಲ ಎನ್ನುತ್ತಿದ್ದಾರೆ. ಈ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.

    ಸಚಿವ ನಾರಾಯಣಗೌಡರ ಹೇಳಿಕೆಗೆ ಪ್ರತಿಯಾಗಿ ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಲಾಕ್‍ಡೌನ್ ವಿಚಾರ ಪ್ರಸ್ತಾಪವಾಗಿಲ್ಲ. ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮಾಡುವುದಿಲ್ಲ. ರಾಜ್ಯದಲ್ಲಿ ಎಲ್ಲೂ ಕೂಡ ಲಾಕ್‍ಡೌನ್ ಇಲ್ಲ. ಸೋಂಕಿತರು ಇರುವ ಕಡೆ ಸೀಲ್‍ಡೌನ್ ಮಾಡಬಹುದು ಅಷ್ಟೆ. ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರೆಯಲ್ಲ. ಈಗ ಎಷ್ಟು ದಿನ ಲಾಕ್‍ಡೌನ್ ಇದೆಯೋ ಅಷ್ಟೆ, ಲಾಕ್‍ಡೌನ್ ಮತ್ತೆ ಆಗುವುದಿಲ್ಲ ಎಂದಿದ್ದಾರೆ.