Tag: Minister Ramesh Jarakiholi

  • ಯಾವ ಪಕ್ಷದವರೂ ನಮ್ಮನ್ನ ಖರೀದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ

    ಯಾವ ಪಕ್ಷದವರೂ ನಮ್ಮನ್ನ ಖರೀದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ

    -ಇದ್ರೂ ಕಾಂಗ್ರೆಸ್, ಸತ್ತರೂ ಕಾಂಗ್ರೆಸ್

    ಬೀದರ್: ಯಾವ ಪಕ್ಷದವರೂ ನಮ್ಮನ್ನು ಖರೀದಿಸಲು ಸಾಧ್ಯವಿಲ್ಲ. ನಾವು ಇದ್ದರೂ ಕಾಂಗ್ರೆಸ್, ಸತ್ತರೂ ಕಾಂಗ್ರೆಸ್ ಎಂದು ಬಸವಕಲ್ಯಾಣದ ಶಾಸಕ ಬಿ.ನಾರಾಯಣ್ ಆಕ್ರೋಶ ಹೊರಹಾಕಿದ್ದಾರೆ.

    ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಜನತೆಯ ಬೆನ್ನಿಗೆ ಚೂರಿ ಹಾಕುವ ಕೆಲಸ ನಾನು ಮಾಡಲ್ಲ. ಅನಾವಶ್ಯಕವಾಗಿ ನಮ್ಮ ಹೆಸರು ಬಳಕೆಯಾಗ್ತಿರೊ ಬಗ್ಗೆ ಮಾಹಿತಿ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಆಶೀರ್ವಾದದಿಂದ ನಾನು ಶಾಸಕನಾಗಿದ್ದೇನೆ. ನಮ್ಮನ್ನು ಖರೀದಿ ಮಾಡೋರು ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ಕಿಡಿ ಕಾರಿದರು.

    ಇನ್ನು ಇದೇ ವೇಳೆ ಮಾತನಾಡಿದ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್, ಸಚಿವರಾಗಿರುವ ರಮೇಶ್ ಜಾರಕಿಹೊಳಿ ನಮ್ಮನ್ನು ಭೇಟಿಯೂ ಆಗಿಲ್ಲ. ಯಾವ ಮಾತುಕತೆ ನಮ್ಮೊಂದಿಗೆ ನಡೆದಿಲ್ಲ. ರಮೇಶ್ ಜಾರಕಿಹೊಳಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿ. ಅಲ್ಲಿ ಇಬ್ಬರಿದ್ದಾರೆ, ಇಲ್ಲಿ ಒಬ್ಬರಿದ್ದಾರೆ ಅಂತಾ ಹೇಳುತ್ತಿದ್ದಾರೆ. ಕಾಂಗ್ರೆಸ್‍ನಿಂದ ನಾನು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷಕ್ಕೆ ನಾವು ನಿಷ್ಠರಾಗಿದ್ದೇವೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದರು.

  • ಸಂಪುಟ ವಿಸ್ತರಣೆ ಮೊದಲೇ ಆಪರೇಷನ್ ಕಮಲ – ರಹಸ್ಯ ಮಾತುಕತೆಯಲ್ಲಿ ಜಾರಕಿಹೊಳಿ ಬ್ರದರ್ಸ್!

    ಸಂಪುಟ ವಿಸ್ತರಣೆ ಮೊದಲೇ ಆಪರೇಷನ್ ಕಮಲ – ರಹಸ್ಯ ಮಾತುಕತೆಯಲ್ಲಿ ಜಾರಕಿಹೊಳಿ ಬ್ರದರ್ಸ್!

    ಬೆಂಗಳೂರು: ಪಂಚರಾಜ್ಯ ಚುನಾವಣೆಗಳ ಬಳಿಕ ಬಿಜೆಪಿ ಆಪರೇಷನ್ ಕಮಲ ಕೈಬಿಟ್ಟಿದೆ ಎಂಬ ಮಾತಿನ ನಡುವೆಯೇ ಮತ್ತೆ ಆಪರೇಷನ್ ಕಮಲ ಮಾಡುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಮಾಜಿ ಸಚಿವ ಹಾಗೂ ಹಾಲಿ ಸಚಿವ ಜಾರಕಿಹೊಳಿ ಸಹೋದರೊಂದಿಗೆ ರಹಸ್ಯ ಮಾತುಕತೆಯಲ್ಲಿ ಭಾಗವಹಿಸಿರುವ ಫೋಟೋ ವೈರಲ್ ಆಗಿದೆ.

    ಕಾಂಗ್ರೆಸ್ ಪಕ್ಷದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ವೈಮನಸ್ಸು ಮುಂದುವರಿದಿದೆ. ಇದರ ನಡುವೆಯೇ ರಾಜ್ಯ ಪ್ರಮುಖ ಸಮುದಾಯವಾದ ವಾಲ್ಮೀಕಿ ಸಮುದಾಯದ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಚರ್ಚೆಯಲ್ಲಿ ರಮೇಶ್ ಜಾರಕಿಹೊಳಿ ಮಾತ್ರವಲ್ಲದೇ ಸತೀಶ್ ಜಾರಕಿಹೊಳಿ ಅವರು ಕೂಡ ಭಾಗವಹಿಸಿದ್ದರು. ಈ ವೇಳೆ ಆಪರೇಷನ್ ಕಮಲ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಈ ಹಿಂದೆ ಆಪರೇಷನ್ ಕಮಲ ಮಾಡಲು ವಿಫಲವಾಗಿದ್ದ ಬಿಜೆಪಿ, ಸದ್ಯ ಕಾಂಗ್ರೆಸ್ ಮುಖಂಡರ ಮೂಲಕವೇ ಮಾಡಲು ತೀರ್ಮಾನಿಸಿದೆ ಎನ್ನಲಾಗಿದೆ. ಶಾಸಕ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದವರೇ ಆದ ಕಾರಣ ಅವರ ಮುಂದಾಳತ್ವದಲ್ಲಿ ಚರ್ಚೆ ನಡೆಸಲಾಗಿದೆ. ಚರ್ಚೆ ವೇಳೆ ಕಾಂಗ್ರೆಸ್ ಪಕ್ಷದಿಂದ ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಜಾರಕಿಹೊಳಿ ಸಹೋದರರಿಗೆ ವಹಿಸಿದ್ದಾರೆ ಎನ್ನಲಾಗಿದೆ. ಕಳೆದ 2 ದಿನಗಳ ಹಿಂದೆ ಸಭೆ ನಡೆದಿದೆ ಎಂಬ ಮಾಹಿತಿ ಲಭಿಸಿದ್ದು, ಈ ವೇಳೆ ಹಲವು ಬಿಜೆಪಿ ಶಾಸಕರು ಹಾಜರಿರುವುದನ್ನು ಫೋಟೋದಲ್ಲಿ ಕಾಣಬಹುದು.

    ಒಂದೊಮ್ಮೆ ಸಚಿವ ಸಂಪುಟ ನಡೆದರೂ ಅಥವಾ ಸಂಪುಟ ವಿಸ್ತರಣೆ ಆಗದೆ ಇದ್ದರು ಏನು ಮಾಡಬೇಕೆಂಬ ಮಾತುಕತೆ ನಡೆದಿದೆ. ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನ ಹೊಂದಿರುವ ಶಾಸಕರನ್ನು ಬಿಜೆಪಿಗೆ ಕರೆತರುವುದು ಅಥವಾ ಸಂಪುಟ ವಿಸ್ತರಣೆ ಆಗದಿದ್ದರೆ ಕೈ ಬಂಡಾಯ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಹಾಗೂ ಅವರನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡುವುರ ಬಗ್ಗೆ ಚರ್ಚೆ ಎನ್ನಲಾಗಿದೆ.

    ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಕೂಡ ನಾಳೆ ಸಂಪುಟ ವಿಸ್ತರಣೆ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ. ಹೈಕಮಾಂಡ್‍ಗೆ ಸಂಪುಟ ವಿಸ್ತರಣೆ ಮಾಡಲು ಒಪ್ಪಿಗೆ ಇಲ್ಲ ಎನ್ನಲಾಗಿದ್ದು, ಇಲ್ಲಿ ಜಾರಕಿಹೊಳಿ ಬ್ರದರ್ಸ್‍ಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೇ ಆಪರೇಷನ್ ಯಶಸ್ವಿಯಾದರೆ ಉತ್ತರ ಕರ್ನಾಟದ ಶ್ರೀರಾಮುಲು ಅವರಿಗೆ ಉಪಮುಖ್ಯ ಮಂತ್ರಿ ಸ್ಥಾನ ಹಾಗೂ ಜಾರಕಿಹೊಳಿ ಸಹೋದರಿಗೆ ಸಚಿವ ಸ್ಥಾನ ಹಾಗೂ ಶಾಸಕರಿಗೆ ಮುಂದಿನ ಚುನಾವಣೆಯ ಖರ್ಚು-ವೆಚ್ಚ ಭರಿಸುವ ಭರವಸೆ ಹಾಗೂ ನಿಗಮ, ಮಂಡಳಿ ಅಧ್ಯಕ್ಷಗಿರಿಯ ನೀಡುವ ಆಶ್ವಾಸನೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ರೆಸಾರ್ಟ್ ಗೆ ಭೇಟಿ ನೀಡಿದ್ದು ನಿಜ. ಮುಂದಿನ ದಿನಗಳಲ್ಲಿ ನಮ್ಮ ಶಾಸಕರನ್ನು ಕರೆದ್ಯೊಯವ ಉದ್ದೇಶದಿಂದ ಭೇಟಿ ನೀಡಲಾಗಿತ್ತು ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

    ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಪರೇಷನ್ ಕಮಲದ ಬಗ್ಗೆ ನಮಗೆ ಮಾಹಿತಿ ಇಲ್ಲ. ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸಾಮಾನ್ಯ. ಇದು ಎಲ್ಲಾ ಮುಖ್ಯಮಂತ್ರಿಗಳ ಸಮಯದಲ್ಲೂ ಇರುತ್ತದೆ ಅಷ್ಟೇ. ಆದರೆ ಸಿದ್ದರಾಮಯ್ಯ ಅವರ ಮೇಲೆ ಹೈಕಮಾಂಡ್ ಗೆ ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    ಇದೇ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಭೇಟಿ ಮಾಡಿ ಪರಿಶೀಲನೆ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸ್ನೇಹಿತ ಮಗನ ಮದುವೆಗೆ ಭೇಟಿ ನೀಡಿದ್ದೆ. ಈ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಗೂ ಕೂಡ ಹೋಗಿದ್ದೆ. ಮುಂದೇ ನಮ್ಮ ಶಾಸಕರನ್ನು ಕರೆದುಕೊಂಡು ಹೋಗಲು ನೆರವಾಗಲಿದೆ. ಮುಂದೆ ಶಾಸಕರನ್ನು ಟೂರ್ ಮಾಡಲಿಕ್ಕೆ ರೆಸಾರ್ಟ್ ನೋಡಿಕೊಂಡು ಬಂದಿದ್ದೆನೆ ವಿನಾಃ ಪಕ್ಷಾಂತರ ಮಾಡಲು ಕರೆದುಕೊಂಡು ಹೋಗುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

    ನಾನು ಯಾವುದೇ ಆತೃಪ್ತರ ಸಂಪರ್ಕದಲ್ಲಿ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಮ್ಮ ಬೇಡಿಕೆಗಳನ್ನು ಹೈಕಮಾಂಡ್ ಅವರಿಗೆ ತಿಳಿಸಿದ್ದೇವೆ. ಸಂಪುಟ ವಿಸ್ತರಣೆ ಮಾಡಿದರೆ ಒಳ್ಳೇಯದು. ಶೀಘ್ರವೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಮಾಡುವುದರಿಂದ ಸರ್ಕಾರದ ಆಡಳಿತ ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನು ಓದಿ : ರಾಜ್ಯದ ದೋಸ್ತಿ ಸರ್ಕಾರವೇ ಬೆಚ್ಚಿ ಬೀಳುವಂತಹ ಬೆಳವಣಿಗೆ – ಗುಪ್ತಚರ ಇಲಾಖೆ ನೀಡಿದ್ದ ಆಡಿಯೋ ಔಟ್

    ಕಳೆದ ಕೆಲ ದಿನಗಳಿಂದ ಸತೀಶ್ ಜಾರಕಿಹೊಳಿ ಅವರ ಸಹೋದರ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಕಳೆದ ಕೆಲ ದಿನಗಳಿಂದ ಮಾಧ್ಯಮಗಳಿಂದ ದೂರವೇ ಉಳಿದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದು, ಪಕ್ಷಾಂತರದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬ ಅಂಶ ಬೆಳಗಾವಿ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಕಾರ್ಖಾನೆಯಿಂದ ಬಾಕಿ ಇದ್ರೆ ರಾಜೀನಾಮೆ ಕೊಡ್ತೀನಿ – ಬಾಕಿ ಉಳಿಸಿಕೊಂಡಿಲ್ಲ, ಜಾರಕಿಹೊಳಿ ಸ್ಪಷ್ಟನೆ

    ನನ್ನ ಕಾರ್ಖಾನೆಯಿಂದ ಬಾಕಿ ಇದ್ರೆ ರಾಜೀನಾಮೆ ಕೊಡ್ತೀನಿ – ಬಾಕಿ ಉಳಿಸಿಕೊಂಡಿಲ್ಲ, ಜಾರಕಿಹೊಳಿ ಸ್ಪಷ್ಟನೆ

    ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಸಭೆಗೆ ಗೈರಾಗಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ನನ್ನ ಕಾರ್ಖಾನೆಯಿಂದ ಬಾಕಿ ಇದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

    ತಮ್ಮ ನಿವಾಸದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಯುತ್ತಿರುವ ಸಭೆಗೆ ಏಕೆ ಹಾಜರಾಗಿಲ್ಲ ಎಂಬುವುದನ್ನು ಸಿಎಂ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ಆದರೆ ಮಾಧ್ಯಮಗಳಲ್ಲಿ ನನ್ನ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಗೆ 20 ಕೋಟಿ ರೂ. ಬಾಕಿ ಇದೆ ವರದಿಯಾಗಿದೆ. ಆದರೆ ಅಷ್ಟು ಹಣ ಬಾಕಿ ಇದ್ದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

    ಇಂದು ನಗರದ ವಿಧಾನಸೌಧದಲ್ಲಿ ನಿಗದಿಯಾಗಿದ್ದ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಭಾಗವಹಿಸದೆ ಗೈರಾಗಿದ್ದರು. ಮಾಹಿತಿ ಅನ್ವಯ ರಮೇಶ್ ಜಾರಕಿಹೊಳಿ ಅವರ ಕಂಪನಿಯಿಂದ 20 ಕೋಟಿ ರೂ. ಬಾಕಿ ಇದೆ ಎನ್ನಲಾಗಿತ್ತು. ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಈ ಕುರಿತು ಯಾವುದೇ ಹೇಳಿಕೆ ನೀಡಲ್ಲ ಎಂದು ಹೇಳಿದ್ದರು. ಅಲ್ಲದೇ ಈ ಕುರಿತು ಯಾವುದೇ ಮಾಧ್ಯಮ ಏನು ಪ್ರಸಾರ ಮಾಡಿದರು ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದ್ದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ ಇದ್ದರು ರಮೇಶ್ ಜಾರಕಿಹೊಳಿ ಅವರು ಮಾತ್ರ ಸಭೆಯಲ್ಲಿ ಭಾಗವಹಿಸದೆ ಹಿಂದೇಟು ಹಾಕಿದ್ದಾರೆ. ಇದನ್ನು ಓದಿ: ಎಲ್ಲಿವರೆಗೂ ಹಾಕ್ತಿರಾ ಹಾಕಿ – ಕಬ್ಬಿನ ಬಾಕಿ ಕುರಿತ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಗರಂ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನನ್ನ ಮನಸ್ಸಲ್ಲಿ ಏನಿದೆ ಅಂತ ನಾಳೆ ಹೇಳ್ತೇನೆ: ಶಾಸಕ ಎಂಟಿಬಿ ನಾಗರಾಜ್

    ನನ್ನ ಮನಸ್ಸಲ್ಲಿ ಏನಿದೆ ಅಂತ ನಾಳೆ ಹೇಳ್ತೇನೆ: ಶಾಸಕ ಎಂಟಿಬಿ ನಾಗರಾಜ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ನನ್ನ ಮನಸ್ಸಿನಲ್ಲಿ ಏನಿದೆ ಎಂದು ನಾಳೆ ಹೇಳುತ್ತೇನೆ ಎಂದು ಹೇಳುವ ಮೂಲಕ ಟ್ವಿಸ್ಟ್ ಕೊಟ್ಟಿದ್ದಾರೆ

    ನಗರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಶಾಸಕ ಎಂಟಿಬಿ ನಾಗರಾಜ್, ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೆ. ಆದರೆ ಅದನ್ನು ನಾಳೆ ತಿಳಿಸುತ್ತೇನೆ. ಸರ್ಕಾರದಲ್ಲಿ ನಾನು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ಕುರಿತು ಅಸಮಾಧಾನವಿದೆ. ನನ್ನ ಜೊತೆ ಮತ್ತಿಬ್ಬರು ಶಾಸಕರು ಕೂಡ ಆಗಮಿಸುವ ನಿರೀಕ್ಷೆ ಇದೆ ಎಂದರು.

    ಅಪರೇಷನ್ ಕಮಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಯಾವುದೇ ಬಿಜೆಪಿ ಶಾಸಕರು ಭೇಟಿ ಮಾಡಿ ಮಾತನಾಡಿಲ್ಲ. ಆದರೆ ಕೆಲ ಸ್ನೇಹಿತರು ಫೋನ್ ಮೂಲಕ ಸಂಪರ್ಕ ಮಾಡಿದ್ದಾರೆ. ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಮೇಶ್ ಜಾರಕಿಹೊಳಿ ಅವರ ಬಳಿ ಅಪರೇಷನ್ ಕಮಲದ ಬಗ್ಗೆಯೂ ಚರ್ಚೆ ಮಾಡಿಲ್ಲ. ಈ ತಿಂಗಳ ಕೊನೆಯ ವೇಳೆಗೆ ನಿಗಮ ಮಂಡಳಿ ಹಾಗೂ ಮಂತ್ರಿ ಮಂಡಲ ರಚನೆ ಆಗಲಿದೆ ಎಂದು ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಈ ಕುರಿತು ಕಾದು ನೋಡುವ ಎಂದು ಹೇಳಿದ್ದಾರೆ. ಅದ್ದರಿಂದ ನಾಳೆ ನಿಮ್ಮನ್ನು ಭೇಟಿ ಮಾಡಿ ಮಾಹಿತಿ ನೀಡುತ್ತೇನೆ ಎಂದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರಕ್ಕೆ ಮಂಗಳವಾರ ಕೊನೆಯ ದಿನ?

    ಎಂಟಿಬಿ ಅಸಮಾಧಾನಕ್ಕೆ ಕಾರಣ ಏನು?
    ನಾವು ಹೇಳಿದ ಯಾವುದೇ ಕೆಲಸಗಳು ಈ ಸಮ್ಮಿಶ್ರ ಸರ್ಕಾರದಲ್ಲಿ ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಕುಮಾರಸ್ವಾಮಿ ಕಡೆಗಣಿಸುತ್ತಿದ್ದು ಹೀಗಾಗಿ ಅವರ ಬೆಂಬಲಿಗರಿಗೂ ಸರ್ಕಾರದಲ್ಲಿ ಪ್ರಾಶಸ್ತ್ಯ ಸಿಗುತ್ತಿಲ್ಲ. ಜೆಡಿಎಸ್ ಶಾಸಕರು ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಕೈ ಆಡಿಸುತ್ತಿದ್ದಾರೆ ಎನ್ನುವುದು ಎಂಟಿಬಿ ನಾಗಾರಾಜ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ಬಂಡಾಯಕ್ಕೆ ಎರಡು ದಿನ ಬ್ರೇಕ್!

    ಬೆಳಗಾವಿ ಬಂಡಾಯಕ್ಕೆ ಎರಡು ದಿನ ಬ್ರೇಕ್!

    ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತಮ್ಮ ಬಂಡಾಯದ ಮೂಲಕ ಕೇಂದ್ರ ಬಿಂದುವಾಗಿ ಗುರುತಿಸಿಕೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಸಹೋದರರು ಸದ್ಯ ಬೆಳಗಾವಿಗೆ ಹಿಂದಿರುಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಅತೃಪ್ತಿ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

    ಶನಿವಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಸಿಎಂ ಕುಮಾರಸ್ವಾಮಿ ಅವರು ಜಾರಕಿಹೊಳಿ ಸಹೋದರರೊಂದಿಗೆ ಶನಿವಾರ ಸಂಜೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬಳಿಕ ಭಾನುವಾರ ಸಿದ್ದರಾಮಯ್ಯರನ್ನು ಜಾರಕಿಹೊಳಿ ಸಹೋದದರು ಭೇಟಿ ಮಾಡಲಾಗಿದ್ದಾರೆ. ಸಿದ್ದರಾಮಯ್ಯ ಅವರೊಂದಿನ ಚರ್ಚೆ ಬಳಿಕವಷ್ಟೇ ಜಾರಕಿಹೊಳಿ ಬ್ರದರ್ಸ್ ಬಂಡಾಯ ಶಮನವಾಗುತ್ತ ಎಂಬ ಅಂಶ ಸ್ಪಷ್ಟವಾಗುವ ಸಾಧ್ಯತೆ ಇದೆ. ಅದ್ದರಿಂದ ಸದ್ಯ ಸತೀಸ್ ಜಾರಕಿಹೊಳಿ ಇಂದು ಬೆಳಗ್ಗೆ ಬೆಳಗಾವಿಗೆ ತೆರಳಿದರೆ, ಸಂಜೆ ವೇಳೆಗೆ ರಮೇಶ್ ಜಾರಕಿಹೊಳಿ ಬೆಂಗಳೂರಿನಿಂದ ತೆರಳಿದ್ದು ಜಿಲ್ಲೆಯಲ್ಲಿ ನಡೆಯುತ್ತಿರುವ ಗಣೇಶ ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

    ಇತ್ತ ಬಿಜೆಪಿ ಅಪರೇಷನ್ ಕಮಲ ಮೂಲಕ ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನದ ಸೆಳೆಯುವ ಕಸರತ್ತು ನಡೆಸುತ್ತಿದೆ. ಬಿಜೆಪಿ ರಾಜ್ಯಾದ್ಯಕ್ಷ ಅಮಿತ್ ಶಾ ಕೂಡ ಬಿಎಸ್‍ವೈ ರೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಪರೇಷನ್ ಕಮಲ ಕಾರ್ಯತಂತ್ರವನ್ನು ಶಾಸಕ ಶ್ರೀರಾಮುಲು ಜೊತೆಗೂಡಿ ನಡೆಸುತ್ತಿದ್ದು, ಈ ಕುರಿತ ಎಲ್ಲಾ ಬೆಳವಣಿಗೆಗಳನ್ನು ತಿಳಿಸುವುದಾಗಿ ಬಿಎಸ್‍ವೈ ಹೇಳಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಈ ನಡುವೆ ಸಮ್ಮಿಶ್ರ ಸರ್ಕಾರದಲ್ಲಿ ಸದ್ಯ ಖಾಲಿ ಇರುವ 6 ಸಚಿವ ಸ್ಥಾನಗಳಿಗೆ ಲಾಭಿ ಆರಂಭವಾಗಿದ್ದು ಶಾಸಕರು ತಮ್ಮ ಸ್ಥಾನವನ್ನು ಭದ್ರಪಡಿಸಲು ಒತ್ತಡದ ತಂತ್ರಕ್ಕೆ ಮುಂದಾಗಿದ್ದಾರೆ. ಉದಾಹರಣೆ ಎಂಬಂತೆ ಬಳ್ಳಾರಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮನಾಯಕ್ ತಾನು ಸಚಿವ ಸ್ಥಾನ ಅಕಾಂಕ್ಷಿ ಎಂದು ಶಾಸಕ ಬಹಿರಂಗ ಹೇಳಿದ್ದಾರೆ. ಅಲ್ಲದೇ ಜಿಲ್ಲೆಯ 6 ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ತಮ್ಮ ಬೇಡಿಕೆಯನ್ನು ಹೈಕಮಾಂಡ್‍ಗೆ ತಿಳಿಸಿದ್ದೇವೆ. ಅವರೇ ಅರ್ಹರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

    ಸಿದ್ದರಾಮಯ್ಯ ರಾಜ್ಯಕ್ಕೆ ಬಂದ ಬಳಿಕ ಮತ್ತೆ ರಾಜಕೀಯ ಬೆಳವಣಿಗೆಗಳು ಗರಿಗೆದರಲಿದೆ ಎನ್ನಲಾಗಿದೆ. ಆದರೆ ಈ ನಡುವೆ ಬಿಜೆಪಿ ನಡೆಸಲು ಉದ್ದೇಶಿಸಲಾಗುವ ಅಪರೇಷನ್ ಕಮಲಕ್ಕೆ ತಡೆ ನೀಡಲು ಆರ್‍ಎಸ್‍ಎಸ್ ಮುಂದಾಗಿದೆ ಎನ್ನಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್‍ಗೆ ಎಚ್ಚರಿಕೆ ನೀಡಿರುವ ಆರ್‍ಎಸ್‍ಎಸ್ ಮುಖಂಡರು, ಈಗ ಸರ್ಕಾರ ರಚನೆ ಮಾಡಲು ಮುಂದಾದರೆ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೋಸ್ತಿ ಸರ್ಕಾರ ರಾಜ್ಯಮಟ್ಟದಲ್ಲಿ ಮತ್ತಷ್ಟು ಒಂದಾಗುವ ಸಂಭವದ ಕುರಿತು ಸೂಚನೆ ನೀಡಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಳೆಯೇ ರಾಜೀನಾಮೆ ಕೊಡಲು ನಾನು ರೆಡಿ: ರಮೇಶ್ ಜಾರಕಿಹೊಳಿ

    ನಾಳೆಯೇ ರಾಜೀನಾಮೆ ಕೊಡಲು ನಾನು ರೆಡಿ: ರಮೇಶ್ ಜಾರಕಿಹೊಳಿ

    ಬೆಂಗಳೂರು: ಸಹೋದರ ಸತೀಶ್ ಜಾರಕಿಹೊಳಿ ಸಚಿವ ಸ್ಥಾನ ಕೇಳಿದರೆ ನಾಳೆಯೇ ನಾನು ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಡುತ್ತೇನೆ ಎಂಬುವುದು ಸುಳ್ಳು. ನನಗೆ ನೋವಾಗಿರುವುದು ಸತ್ಯ. ಆದರೆ ಪಕ್ಷ ಬಿಡುವುದಿಲ್ಲ. ನಮ್ಮ ನಾಯಕರಾದ ಸಿದ್ದರಾಮಯ್ಯ ವಿದೇಶಿ ಪ್ರವಾಸದಿಂದ ಬಂದ ಬಳಿಕ ಕೂತು ಮಾತನಾಡುತ್ತೇವೆ ಎಂದರು.

    ಇದೇ ವೇಳೆ ಸತೀಶ್ ಜಾರಕಿಹೋಳಿ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ ರಮೇಶ್, ಅವರು ಮುಂದೆ ಮುಖ್ಯಮಂತ್ರಿಯಾಗಬೇಕು. ಆದರೆ ಆ ಸ್ಥಾನಕ್ಕೆ ನಾನು ಅರ್ಹನಲ್ಲ. ಒಂದೊಮ್ಮೆ ಸಹೋದರ ಸತೀಶ್ ಜಾರಕಿಹೊಳಿ ಸಚಿವ ಸ್ಥಾನ ಕೇಳಿದರೆ ನಾಳೆಯೇ ರಾಜಿನಾಮೆ ನೀಡಿ ಬಿಟ್ಟುಕೊಡುತ್ತೇನೆ ಎಂದು ತಿಳಿಸಿದರು.

    ಸಚಿವ ಡಿಕೆಶಿಗೆ ನೇರ ಟಾಂಗ್: ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಬೆಳಗಾವಿ ಜಿಲ್ಲಾ ರಾಜಕಾರಣ ವಿಷಯದಲ್ಲಿ ಡಿಕೆ ಶಿವಕುಮಾರ್ ಎಂಟ್ರಿ ಆದರೆ ನಾವು ಸುಮ್ಮನಿರಲ್ಲ. ಅವರು ದೊಡ್ಡ ನಾಯಕರು ಅಗತ್ಯವಿದ್ದರೆ ನಾವೇ ಸ್ವತಃ ಫೋನ್ ಮಾಡಿ ಕರೆಯುತ್ತೇವೆ. ಆಗ ಬರುವುದಾದರೆ ಬರಲಿ. ಅದನ್ನು ಬಿಟ್ಟು ಅವರೇ ಬರಬಾರದು. ಮೊನ್ನೆ ಜಿಲ್ಲೆಯಲ್ಲಿ ನಡೆದ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಎರಡು ಕಡೆಯಿಂದ ತಪ್ಪು ಆಗಿದೆ. ಅದನ್ನು ಸರಿಪಡಿಸಿಕೊಂಡಿದ್ದೇವೆ ಎಂದರು.

    ಬೆಳಗಾವಿ ಟಿಕೆಟ್: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಎಂಎಲ್‍ಸಿ ವಿವೇಕ್ ರಾವ್ ಪಾಟೀಲ್, ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಮೂವರಲ್ಲಿ ಯಾರಿಗೆ ಕೊಟ್ಟರು ಸ್ವೀಕರಿಸುತ್ತೇವೆ. ಈಗಾಗಲೇ ಈ ವಿಚಾರವನ್ನು ನಮ್ಮ ಹೈಕಮಾಂಡ್ ಗಮನಕ್ಕೂ ತಂದಿದ್ದೇವೆ ಎಂದರು.

    ಮಹಾರಾಷ್ಟ್ರದಲ್ಲಿ ಬಿಜೆಪಿ ಸಚಿವರೊಬ್ಬರನ್ನು ಭೇಟಿ ಆಗಿದ್ದೇವೆ. ಅಲ್ಲಿ ನಮ್ಮ ಸಕ್ಕರೆ ಕಾರ್ಖಾನೆ ಇದೆ. ಹಾಗಾಗಿ ಅಲ್ಲಿಗೆ ಭೇಟಿ ನೀಡಿದ್ದ ವೇಳೆ ಬಿಜೆಪಿ ಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ಇದರಲ್ಲಿ ತಪ್ಪೇನಿದೆ. ಆದರೆ ರಾಜ್ಯದ ಯಾವುದೇ ಬಿಜೆಪಿ ಮುಖಂಡರು ನನಗೆ ಸಂಪರ್ಕವಿಲ್ಲ. ಯಾರೂ ನಮ್ಮನ್ನ ಸಂಪರ್ಕಿಸಿಲ್ಲ. ಆದರೆ ಎರಡು ದಿನಗಳ ಹಿಂದೆಯಷ್ಟೇ ರೇಣುಕಾಚಾರ್ಯ ಅವರು ಮನೆಗೆ ಭೇಟಿ ನೀಡಿ ಮಾತನಾಡಿದ್ದರು. ಅಲ್ಲದೇ ಕ್ಷೇತ್ರದ ಕೆಲಸಕ್ಕಾಗಿ ಶ್ರೀರಾಮುಲು ಎರಡು ಬಾರಿ ನಮ್ಮ ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳಲು ಸಾಧ್ಯವೇ? ರಾಜ್ಯ ಸರ್ಕಾರ ಐದು ವರ್ಷ ತನ್ನ ಆಡಳಿವನ್ನು ಪೂರ್ಣಗೊಳಿಸಲಿದ್ದು, ನಮ್ಮಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾರಕಿಹೊಳಿ ಆಟಕ್ಕೆ `ಕೈ’ ನಾಯಕರು ಸುಸ್ತು- ಲೋಕಲ್ ದಂಗಲ್‍ನಲ್ಲಿ ಕೊಟ್ರು ಹೊಸ ಟ್ವಿಸ್ಟ್

    ಜಾರಕಿಹೊಳಿ ಆಟಕ್ಕೆ `ಕೈ’ ನಾಯಕರು ಸುಸ್ತು- ಲೋಕಲ್ ದಂಗಲ್‍ನಲ್ಲಿ ಕೊಟ್ರು ಹೊಸ ಟ್ವಿಸ್ಟ್

    ಬೆಂಗಳೂರು/ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ.

    `ಕೈ’ ಹೈಕಮಾಂಡ್‍ಗೆ ಕಗ್ಗಂಟಾಗಿರುವ ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಲೋಕಲ್ ಫೈಟ್ ಮೂಲಕ ಹೊಸ ವರಸೆ ತೋರಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿನ ಗಲಾಟೆ ಮಧ್ಯೆಯೇ ರಮೇಶ್ ಜಾರಕಹೊಳಿ ಮತ್ತೊಂದು ಆಟ ಆರಂಭಿಸಿದ್ದು, ಲೋಕಲ್ ಫೈಟ್‍ನಲ್ಲಿ ಪಕ್ಷಕ್ಕೆ ಬಿ ಫಾರಂ ನೀಡದೇ ಪಕ್ಷೇತರರನ್ನ ಕಣಕ್ಕಿಳಿಸಿ ಗೆಲ್ಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಲ್ ದಂಗಲ್ ಅಂತಿಮ ಫಲಿತಾಂಶ: ಯಾವ ಜಿಲ್ಲೆಯಲ್ಲಿ ಗೆದ್ದವರು ಯಾರು? ಎಲ್ಲೆಲ್ಲಿ ಅತಂತ್ರ?


    ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗಿನ ಗಲಾಟೆಯ ವಿವಾದದ ಬೆನ್ನಲ್ಲೇ ಈಗ ಪಕ್ಷಕ್ಕಿಂತ ನಾನೇ ಪವರ್ ಫುಲ್ ಎಂಬಂತೆ ಪಕ್ಷೇತರರನ್ನ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಹೊಸ ವಿವಾದ ಹುಟ್ಟುಹಾಕಿದ್ದಾರೆ. ಗೋಕಾಕ್ ನಗರಸಭೆ ಹಾಗೂ ಕಣ್ಣೂರು ಪುರಸಭೆಯಲ್ಲಿ ತಮ್ಮ ಬೆಂಬಲಿಗರರನ್ನ ಪಕ್ಷೇತರರನ್ನಾಗಿ ಗೆಲ್ಲಿಸಿಕೊಂಡ ರಮೇಶ್ ಜಾರಕಿಹೋಳಿಯದ್ದು ಪಕ್ಷ ವಿರೋಧಿ ನಡೆ ಎಂದು ವಿರೋಧಿ ಪಡೆ ಅಖಾಡಕ್ಕಿಳಿಯೋದು ಪಕ್ಕಾ ಆಗಿದೆ. ಇದನ್ನೂ ಓದಿ: ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ? ಯಾವ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಇಲ್ಲಿದೆ ಮಾಹಿತಿ

    ಪಕ್ಷದಲ್ಲಿ ಶಿಸ್ತು ಅಂದರೆ ಎಲ್ಲರಿಗು ಒಂದೆ ಆಗಿರುತ್ತದೆ. ಆದರೆ ಇವರು ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪು ಅನ್ನುವ ಪಕ್ಷದ ನಾಯಕರುಗಳ ನಡೆಯ ಬಗ್ಗೆಯೇ ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಉಂಟಾಗಲು ಕಾರಣವಾಗಿದೆ. ಇದೊಂದೇ ವಿವಾದ ಕಾಂಗ್ರೆಸ್ ಪಕ್ಷದ ಶಿಸ್ತು ತಪ್ಪಿಸೋದು ಗ್ಯಾರಂಟಿಯಾಗಿದೆ.

    ಚುನಾವಣಾ ಫಲಿತಾಂಶದಲ್ಲಿ ಗೋಕಾಕ್‍ನಲ್ಲಿ ಪಕ್ಷೇತರರಾಗಿ 30 ಮಂದಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೆಲುವು ಸಾಧಿಸಿದ್ದು, 1 ಬಿಜೆಪಿ, 30 ಮಂದಿ ಪಕ್ಷೇತರರ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಕೊಣ್ಣೂರು ಪುರಸಭೆಯಲ್ಲೂ 23 ಸದಸ್ಯ ಬಲದಲ್ಲಿ 23 ಮಂದಿ ಪಕ್ಷೇತರರು ಜಯಗಳಿಸಿದ್ದರು. ಖಾನಾಪುರ ಪಟ್ಟಣ ಪಂಚಾಯ್ತಿಯಲ್ಲಿ ಕೂಡ ರಮೇಶ್ ಬೆಂಬಲಿಗರಾದ ಪಕ್ಷೇತರ 20 ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಈ ಮೂಲಕ ಪಕ್ಷ ಬಿಟ್ಟರೂ ಯಾವುದೇ ಧಕ್ಕೆ ಆಗದಂತೆ ಸಚಿವರು ಪ್ಲಾನ್ ಮಾಡಿದ್ರಾ ಎಂಬ ಪ್ರಶ್ನೆಯೊಂದು ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಸ್‍ಟಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ರಮೇಶ್ ಜಾರಕಿಹೊಳಿ ಲಾಬಿ

    ಎಸ್‍ಟಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ರಮೇಶ್ ಜಾರಕಿಹೊಳಿ ಲಾಬಿ

    ನವದೆಹಲಿ: ಪರಿಶಿಷ್ಟ ಪಂಗಡ (ಎಸ್‍ಟಿ) ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡುಬೇಕು ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೋಳಿ ಹಾಗೂ ಅವರ ತಂಡವು ಒತ್ತಾಯಿಸಿದ್ದಾರೆ.

    ಸೋಮವಾರ ಸಚಿವ ರಮೇಶ್ ಜಾರಕಿಹೋಳಿ, ಪ್ರತಾಪ್ ಗೌಡ ಪಾಟೀಲ್, ರಹೀಂಖಾನ್, ಮಹೇಶ ಕಮತಗಿ, ಬಿ.ನಾಗೇಂದ್ರ ಸೇರಿ ಒಟ್ಟು ಎಂಟು ಜನ ಶಾಸಕರು ದೆಹಲಿಗೆ ತೆರಳಿದ್ದು, ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಹಿರಿಯ ನಾಯಕ ಅಹ್ಮದ್ ಪಟೇಲ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಎಸ್‍ಟಿ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಬೇಕು. ಅದರಲ್ಲೂ ಹೈದರಾಬಾದ್ ಕರ್ನಾಟಕ ವ್ಯಾಪ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.

    ಆಷಾಢದ ಬಳಿಕ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿತ್ತು. ಹೀಗಾಗಿ ಅನೇಕ ಕೈ ನಾಯಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ.