Tag: Minister Revanna

  • ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಹಾಸನ: ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ರೇವಣ್ಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪ್ರಕಾಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.

    ಇಂದು ಹಾಸನದ ಜಿಲ್ಲಾ ಸಭಾಂಗಣದಲ್ಲಿ ಶಾಲಾ-ಕಾಲೇಜು ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಸಚಿವರು ಚರ್ಚೆ ನಡೆಸಿದ್ದರು. ಈ ವೇಳೆ ಕಾಲೇಜಿನ ಮುಖ್ಯೋಪಾಧ್ಯಾಯರೊಬ್ಬರು ತಮ್ಮ ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡಿ, ವಿದ್ಯಾರ್ಥಿನಿಯರನ್ನು ಚುಡಾಯಿಸುವ ಪುಂಡರ ಬಗ್ಗೆ ಮಾಹಿತಿ ನೀಡಿ ಸಚಿವರ ಗಮನ ಸೆಳೆದರು.

    ಮುಖ್ಯೋಪಾದ್ಯಾಯರಿಂದ ಮಾಹಿತಿ ಪಡೆಯುತ್ತಿದಂತೆ ಗರಂ ಆದ ಸಚಿವರು, ವಿದ್ಯಾರ್ಥಿನಿಯರಿಗೆ ಚುಡಾಯಿಸುವ ಮತ್ತು ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಕಿಡಿಗೇಡಿಗಳನ್ನು ಪೊಲೀಸರು ಮಫ್ತಿಯಲ್ಲಿ ಹೋಗಿ ಹಿಡಿದು ಒದ್ದು ಒಳಗೆ ಹಾಕುವಂತೆ ಸೂಚನೆ ನೀಡಿದರು. ಇಂತಹ ವಿಚಾರದಲ್ಲಿ ಯಾರೇ ಆಗಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದು ಕಂಡು ಬಂದರೆ ಕೂಡಲೇ ಕ್ರಮಕೈಗೊಳ್ಳಿ, ಅದ್ಯಾವನ್ ಬರ್ತಾನೆ ನಾನು ನೋಡ್ತಿನಿ. 15 ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿ ಎಂದು ತಮ್ಮದೇ ಶೈಲಿಯಲ್ಲಿ ಸೂಚನೆ ನೀಡಿದರು.

    ಇದೇ ವೇಳೆ ರಾಜ್ಯದ ಶಿಕ್ಷಣದ ಫಲಿತಾಂಶದಲ್ಲಿ ನಮ್ಮ ಜಿಲ್ಲೆ 7 ಸ್ಥಾನದಲ್ಲಿ ಇದ್ದು, ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಮನವಿ ಮಾಡಿದರು. ಹಳ್ಳಿ ಮಕ್ಕಳು ಹೆಚ್ಚು ಶಿಕ್ಷಣ ಪಡೆಯಲು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಬರುತ್ತಾರೆ. ಆದ್ದರಿಂದ ನಿಮಗೆ ಯಾವುದೇ ಸೌಲಭ್ಯ ಬೇಕಾದರು ನೀಡುತ್ತೇನೆ. ಎಲ್ಲಾ ಮಕ್ಕಳಿಗೆ ಭಾನುವಾರವೂ ವಿಶೇಷ ತರಗತಿ ನಡೆಸಿ ಎಂದರು. ಈ ಬಾರಿ ಫಲಿತಾಂಶದಲ್ಲಿ ಮುಂದೆ ಬಾರದಿದ್ದರೆ ನಿಮ್ಮ ಮೇಲೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

    ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

    – ಪರಿಶಿಷ್ಟ ಜಾತಿ ನಾಯಕರು ಡಿಸಿಎಂ ಆಗಿರುವುದನ್ನ ಪಕ್ಷದವರೇ ಸಹಿಸಲ್ಲ
    – ಸಂಚು ಮಾಡಲು ಹೋದ್ರೆ ಕಾಂಗ್ರೆಸ್ ನಾಯಕರು ಏಟು ತಿಂತಾರೆ

    ಬೆಂಗಳೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ದಲಿತ ನಾಯಕರು. ಅವರಿಂದ ಗೃಹ ಖಾತೆ ವಾಪಸ್ ಪಡೆಯಬಾರದಿತ್ತು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಗೃಹ ಇಲಾಖೆಯಲ್ಲಿ ವರ್ಗಾವಣೆ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ. ಹೀಗೆ ಆರೋಪ ಮಾಡಿಯೇ ಕಾಂಗ್ರೆಸ್ ನಾಯಕರು ಇಂತಹ ಸ್ಥಿತಿಗೆ ಬಂದಿದ್ದಾರೆ. ನಾನು ಯಾವ ಇಲಾಖೆಯ ವರ್ಗಾವಣೆಯಲ್ಲಿಯೂ ಕೈ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ:
    ಪರಮೇಶ್ವರ್ ಅವರ ಮೇಲೆ ಕಾಂಗ್ರೆಸ್ ಶಾಸಕರೇ ಒತ್ತಡ ಹಾಕಿರಬಹುದು. ಆದರೆ ಗೃಹ ಖಾತೆ ಡಿಸಿಎಂ ಬಳಿ ಇರಬೇಕಿತ್ತು. ಪರಮೇಶ್ವರ್ ಅವರು ಆರು ತಿಂಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಗೃಹ ಖಾತೆ ತಪ್ಪಲು ನಾನೇ ಕಾರಣ ಅಂತ ಕಾಂಗ್ರೆಸ್ ಶಾಸಕರು ನನ್ನ ವಿರುದ್ಧ ಆರೋಪ ಮಾಡಿದ್ರೆ ಮಾಡಿಕೊಳ್ಳಲಿ. ಒಂದು ವೇಳೆ ನನ್ನ ಹಸ್ತಕ್ಷೇಪವಿದ್ದರೆ ಬಹಿರಂಗಪಡಿಸಲಿ ಎಂದು ಗುಡುಗಿದರು.

    ಕಾಂಗ್ರೆಸ್‍ನಲ್ಲಿ ಪರಿಶಿಷ್ಟ ಜಾತಿ ನಾಯಕರು ಡಿಸಿಎಂ ಆಗಿರುವುದನ್ನು ಪಕ್ಷದ ಸದಸ್ಯರೇ ಸಹಿಸಿಲ್ಲ. ಇದಕ್ಕೆ ನಾನೇನು ಮಾಡಲಿ. ಕಾಂಗ್ರೆಸ್ ನಾಯಕರು ಹೀಗೆ ಸಂಚು ಮಾಡಲು ಹೋದರೆ ಏಟು ತಿನ್ನುವ ಕಾಲ ಬರುತ್ತದೆ ಎಂದು ಆಕ್ರೋಶ ಹೊರಹಾಕಿದರು.

    ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಅದನ್ನು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಕುಳಿತು ತೀರ್ಮಾನ ಮಾಡುತ್ತಾರೆ. ನಾನೇನು ಮಾತನಾಡುವುದಿಲ್ಲ ಎಂದು ರೇವಣ್ಣ ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನು ಭೇಟಿ ಮಾಡಿದ್ದೇನೆ. ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ವಿಷಯವನ್ನು ಪ್ರಸ್ತಾಪಿಸಿದ್ದು, ಶೇ. 85 ಭೂಮಿ ವಶ, ಇನ್ನಿತರ ಕೆಲಸ ಆಗಿದೆ. ಕೂಡಲೇ ಕೆಲಸ ಪ್ರಾರಂಭ ಮಾಡುವಂತೆ ಮನವಿ ಸಲ್ಲಿಸಿರುವೆ ಎಂದ ಅವರು, ಅರಣ್ಯ ಇಲಾಖೆ ಸಭೆ ಮುಂದಿನ ತಿಂಗಳು 10ರಂದು ದೆಹಲಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ಹುಬ್ಬಳ್ಳಿ-ನವಲುಗುಂದ-ನರಗುಂದ ನೈಸ್ ರೋಡ್ 6 ಲೈನ್ ಮಾಡಲು ಯೋಜನೆ ಇದೆ. ಎರಡು ಲೈನ್ ರೋಡ್ ಈಗಾಗಲೇ ಪ್ರಾರಂಭವಾಗಿದೆ. ಹುಬ್ಬಳ್ಳಿ ನಗರ ರಸ್ತೆ ನಿರ್ಮಾಣದ ಯೋಜನೆಯ ಕುರಿತು ಚರ್ಚೆ ಮಾಡಿದ್ದೇವೆ. ಹಾಸನ- ಮಂಗಳೂರು ರಸ್ತೆ ಕಾಮಗಾರಿ, ಮೈಸೂರು-ಮಡಿಕೇರಿ-ಮಾಣಿ ರಸ್ತೆ ಕೆಲಸ ಬೇಗ ಪ್ರಾರಂಭ ಮಾಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

    ಚಾರ್ಮಡಿ ಘಾಟ್ ರಸ್ತೆ ಆಗಲೀಕರಣಕ್ಕೆ 250 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿ, ಆದಷ್ಟು ಬೇಗ ಹಣ ಬಿಡುಗಡೆಗೆ, ಹಾಸನ-ಬೇಲೂರು ರಸ್ತೆ ನಿರ್ಮಾಣ ಹಾಗೂ ಚನ್ನರಾಯಪಟ್ಟಣ-ಮಡಿಕೇರಿ ರಸ್ತೆ ಕಾಮಗಾರಿ ಮನವಿ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ವೆ ಆಗುತ್ತಿದೆ. ಈ ಕಾಮಗಾರಿಯ ಮೊತ್ತವು 600 ಕೋಟಿ ರೂ. ಪ್ರಾಜೆಕ್ಟ್ ಆಗಬಹುದು ಎಂದು ಮಾಹಿತಿ ನೀಡಿದರು.

    ಹಾಸನ-ಕೊಡಗು-ಚಿಕ್ಕಮಗಳೂರು ಕಾಫಿ ಬೆಳೆಗಾರರಿಗೆ ಶೇ. 50 ಪರಿಹಾರ ಕೊಡುವಂತೆ ಮನವಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

    ರೇಲ್ವೇ ಇಲಾಖೆ:
    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಲದ ಯೋಜನೆಯಾಗಿರುವ ಅಂಕೋಲ ರೈಲ್ವೇ ಮಾರ್ಗ ಪ್ರಾರಂಭ ಹಾಗೂ ಚಿಕ್ಕಮಗಳೂರು-ಶಿವಮೊಗ್ಗ-ಶೃಂಗೇರಿ ರೇಲ್ವೇ ಮಾರ್ಗಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರು ಸಬರ್ಬನ್ ರೈಲ್ ಕುರಿತು ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ನೈಸ್ ವರದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಸದನ ಸಮಿತಿ ವರದಿ ಸರ್ಕಾರದ ಹಂತದಲ್ಲಿ ಇದೆ. ಈ ಬಗ್ಗೆ ಚರ್ಚೆ ನಡೆಸಿ ಒಪ್ಪಿಗೆ ಸೂಚಿಸಲಾಗಿದೆ. ಈಗ ಯಾವ ಹಂತದಲ್ಲಿದೆ ಅಂತ ತಿಳಿದುಕೊಳ್ಳಬೇಕಿದ್ದು, ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಬ್ಬಳ್ಳಿ, ಧಾರವಾಡ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ

    ಹುಬ್ಬಳ್ಳಿ, ಧಾರವಾಡ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ

    – ಸಿಎಂ ಎಚ್‍ಡಿಕೆ ಭೇಟಿಗೆ ಪ್ರಧಾನಿ ಮೋದಿ ಒಪ್ಪಿಗೆ

    ನವದೆಹಲಿ: ಹುಬ್ಬಳ್ಳಿ, ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿ ಒಪ್ಪಿಗೆ ಸೂಚಿಸಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸುವುದಾಗಿ ಹೇಳಿದ್ದಾರೆ.

    ನವದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ರಾಜ್ಯದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಿದರು. ಸಚಿವರ ಭೇಟಿ ವೇಳೆ ಕರ್ನಾಟಕ, ಗೋವಾ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4 ಎ ಪ್ರಸ್ತುತ ಎರಡು ಪಥಗಳದ್ದಾಗಿದ್ದು, ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಪ್ರಸ್ತಾಪ ಮಾಡಲಾಯಿತು. ಬೇಲೂರು ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು.

    ಇದೇ ವೇಳೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ಬೇಲೂರು – ಹಾಸನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಮನವಿ ಮಾಡಿದರು. ಅಲ್ಲದೇ ಹಾಸನ- ಹೊಳೆನರಸೀಪುರ ಚತುಷ್ಪಥ ರಸ್ತೆ, ಚನ್ನರಾಯಪಟ್ಟಣ- ಹೊಳೆ ನರಸೀಪುರ – ಅರಕಲಗೂಡು – ಕೊಡ್ಲಿಪೇಟೆ- ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವ ಬಗ್ಗೆಯೂ ಭೇಟಿ ವೇಳೆ ಚರ್ಚಿಸಲಾಯಿತು.

    ಉಳಿದಂತೆ ಕಲ್ಲಿದ್ದಲು ಪೂರೈಕೆ ವಿಚಾರವಾಗಿ ನಾಳೆ ಬೆಳಗ್ಗೆ ಪಿಯೂಶ್ ಗೋಯಲ್ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಮಧ್ಯಾಹ್ನ 1 ಗಂಟೆಗೆ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಲಿರುವ ಸಿಎಂ, ಸಂಜೆ 5 ಗಂಟೆಗೆ ವೇಳೆಗೆ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ

    ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ

    ಹಾಸನ: ಮುಖ್ಯಮಮತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೊಡ್ಡಣ್ಣ ಎಂದು ಕರೆಯುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣಗೆ ಗದರಿದ್ದಾರೆ.

    ಜಿಲ್ಲೆಯಲ್ಲಿ ಮಂಗಳವಾರ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಸಿಎಂ ಕುಮಾರಸ್ವಾಮಿ ಗರಂ ಆಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಸಿಎಂ ಕುಮಾರಸ್ವಾಮಿ ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಕುರಿತು ಸಭೆ ಮಾಡುತ್ತಿದ್ದರು. ಈ ವೇಳೆ ಸಚಿವ ರೇವಣ್ಣ ತಮ್ಮ ಜಿಲ್ಲೆಯಾದ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ಸಿಎಂ ಕುಮಾರಸ್ವಾಗೆ ಇರಿಸು ಮುರುಸಾಗಿದೆ. ಹೀಗಾಗಿ ಕೋಪಗೊಂಡ ಸಿಎಂ ಕುಮಾರಸ್ವಾಮಿ ಅವರು ರೇವಣ್ಣ ವಿರುದ್ಧವೇ ಗರಂ ಆಗಿದ್ದರು.

    ರೇವಣ್ಣ ಕೇಳಿದ ಪ್ರಶ್ನೆಗೆ, ಇಲ್ಲಿ ನಡೆಯುತ್ತಿರುವುದು ರಾಜ್ಯ ಅಭಿವೃದ್ಧಿಗೆ ಸಂಬಂಧ ಪಟ್ಟ ಸಭೆಯಾಗಿದೆ. ಇಲ್ಲಿ ನಿಮ್ಮ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಕೇಳಿದರೆ ಹೇಗಾಗುತ್ತದೆ ಎಂದು ಕೋಪಗೊಂಡು ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ ಅಂತ ಮೂಲಗಳಿಂದ ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಭೆ ನಡುವೆಯೇ ಡಿಸಿಎಂಗೆ ಫೋನ್ ಮಾಡಿ ಅಸಮಾಧಾನ ಹೊರಹಾಕಿದ ರೇವಣ್ಣ!

    ಸಭೆ ನಡುವೆಯೇ ಡಿಸಿಎಂಗೆ ಫೋನ್ ಮಾಡಿ ಅಸಮಾಧಾನ ಹೊರಹಾಕಿದ ರೇವಣ್ಣ!

    ತುಮಕೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹೇಮಾವತಿ ಸಲಹಾ ಸಮಿತಿ ಸಭೆ ನಡುವೆಯೇ ಸಮ್ಮಿಶ್ರ ಸರ್ಕಾರದ ಡಿಸಿಎಂ ಪರಮೇಶ್ವರ್ ಅವರಿಗೆ ಫೋನ್ ಮಾಡಿದ ಲೋಕೋಪಯೋಗಿ ಸಚಿವ ರೇವಣ್ಣ ತಮ್ಮ ಫೋನ್ ಕರೆಗೆ ಉತ್ತರಿಸದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಬರಬೇಕಾಗಿದ್ದ ನೀರನ್ನು ಪೂರ್ಣ ಪ್ರಮಾಣದಲ್ಲಿ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರನ್ನು ಆಧಾರಿಸಿ ಪಬ್ಲಿಕ್ ಟಿವಿ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ತರಾತುರಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಆದರೆ ಸಭೆಗೆ ಹಾಜರಾಗುವಂತೆ ತಿಳಿಸಲು ಲೋಕೋಪಯೋಗಿ ಸಚಿವ ರೇವಣ್ಣ ಅವರು ಹಲವು ಬಾರಿ ಪರಮೇಶ್ವರ್ ಅವರಿಗೆ  ಕರೆ ಮಾಡಿದ್ದಾರೆ. ಆದರೆ ರೇವಣ್ಣ ಅವರ ಕರೆಗೆ ಡಿಸಿಎಂ ಉತ್ತರಿಸದೇ ಮುನಿಸಿಕೊಂಡಿದ್ದರು ಎನ್ನಲಾಗಿದೆ.

    ಕರೆ ಸ್ವೀಕರಿಸದ್ದಕ್ಕೆ ಅಸಮಾಧಾನಗೊಂಡ ರೇವಣ್ಣ ಅವರು ಇಂದು ಸಭೆಯ ನಡುವೆಯೇ ಪರಮೇಶ್ವರ್ ಅವರಿಗೆ ಕರೆ ಮಾಡಿ ಗಮನಸೆಳೆದರು. “ಅಣ್ಣಾ ನಾನು ನಿಮಗೆ ನಿನ್ನೆ ಮೂರ್ನಾಲ್ಕು ಬಾರಿ ಫೋನ್ ಮಾಡಿದ್ದೆ, ನೀವು ರಿಸೀವ್ ಮಾಡಲೇ ಇಲ್ಲ. ಬೇಕಾದರೆ ನಿಮ್ಮವರನ್ನು ಕೇಳಿ ನೋಡಿ” ಎಂದು ನಯವಾಗಿಯೇ ಅಸಮಾಧಾನ ಹೊರಹಾಕಿದರು.

    ಉಳಿದಂತೆ ಸಭೆಯಲ್ಲಿ ತುಮಕೂರಿಗೆ ನೀರಾವರಿ ವಿಚಾರದಲ್ಲಿ ಯಾವುದೇ ಅನ್ಯಾಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ರೇವಣ್ಣ ಅವರು, 24.5 ಟಿಎಂಸಿ ನೀರಿನಲ್ಲಿ ಈಗಾಗಲೇ 14 ಟಿಎಂಸಿ ನೀರು ಬಿಡಲಾಗಿದೆ. ಮುಂದೆಯೂ ನೀರು ಹರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಈ ವೇಳೆ ತಮ್ಮ ವಿರುದ್ಧ ಆರೋಪ ಮಾಡಿದ ಮಾಜಿ ಸಂಸದ ಜಿ.ಎಸ್. ಬಸವರಾಜು ಅವರನ್ನು ಲೇವಡಿ ಮಾಡಿದ್ದ ರೇವಣ್ಣ, ಇನ್ನು ಮುಂದೆ ಜಿ.ಎಸ್.ಬಸವರಾಜು ನೀರುಗಂಟಿಯಾಗಿ ಕೆಲಸ ಮಾಡಲಿ. ಅವರಿಗೆ ಡ್ಯಾಂ ಕೀ ಕೊಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ

    `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ

    ಹಾಸನ: ಜಿಲ್ಲೆಯ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ಡಿಸಿ ರೋಹಿಣಿ ಸಿಂಧೂರಿ ಅವರಲ್ಲಿ ಮನವಿ ಮಾಡಿದ್ದಾರೆ.

    ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಚಿವ ಸಭೆಯಲ್ಲಿ ಮಾತನಾಡಿದ ಸಚಿವ ರೇವಣ್ಣ, ಜಿಲ್ಲೆಯ ಎಲ್ಲೆಡೆ ಹಳ್ಳಿಗಳಲ್ಲಿ ಇರುವ ಕೆಲ ಟೀ ಕ್ಯಾಂಟೀನ್‍ಗಳು ಈಗ ಮದ್ಯದ ಅಂಗಡಿಯಾಗಿ ಬದಲಾಗಿವೆ. ಪ್ರತಿ ನಿತ್ಯ ಹಳ್ಳಿ ಹೆಂಗಸರು ಬಂದು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದರು.

    ಅಕ್ರಮ ಮದ್ಯ ಮಾರಾಟ ಕುರಿತು ಮಾಹಿತಿ ಲಭಿಸಿದರೆ ಅಂತ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲ ಕ್ಯಾಂಟೀನ್‍ಗಳಲ್ಲಿ ಬೆಳಗ್ಗೆಯಿಂದ ರಾತ್ರಿ ವರೆಗೂ ಮಾರಾಟ ಮಾಡಲಾಗುತ್ತದೆ. ಅದ್ದರಿಂದ ಅವುಗಳಿಗೆ ಬೀಗ ಮುದ್ರೆ ಹಾಕಲು ಕೂಡ ಕ್ರಮಕೈಗೊಳ್ಳಿ ಎಂದು ಮನವಿ ಮಾಡಿದರು.

    ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರೇವಣ್ಣ ಅವರು ಗ್ರಾಮೀಣ ಭಾಗದ ಅಕ್ರಮ ಮದ್ಯ ಮಾರಾಟದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಸೆಳೆದರು. ಇದನ್ನು ಓದಿ: ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ ದಕ್ಷಿಣ ಕರ್ನಾಟಕ ಬೇರೆಯಲ್ಲ- ಬಿಎಸ್‍ವೈ ವಿರುದ್ಧ ರೇವಣ್ಣ ಗರಂ

    ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ ದಕ್ಷಿಣ ಕರ್ನಾಟಕ ಬೇರೆಯಲ್ಲ- ಬಿಎಸ್‍ವೈ ವಿರುದ್ಧ ರೇವಣ್ಣ ಗರಂ

    ಹಾಸನ: ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ ದಕ್ಷಿಣ ಕರ್ನಾಟಕ ಬೇರೆಯಲ್ಲ. ಬೆಳಗಾವಿಯಲ್ಲಿ ಬೇರೆ ಯಾರೂ ಯಾಕೆ ಅಧಿವೇಶನ ಮಾಡಿರಲಿಲ್ಲ. ಅಲ್ಲಿ ಅಧಿವೇಶನ ಮಾಡೋಕೆ ಕುಮಾರಸ್ವಾಮಿ ಸಿಎಂ ಆಗಿ ಬರಬೇಕಾಯ್ತು. ಯಡಿಯೂರಪ್ಪಗೆ ಬೇರೆ ಕೆಲಸ ಇಲ್ಲ. ಹಾಗಾಗಿ ಹೋರಾಟ ಮಾಡಿಸುತ್ತಿದ್ದಾರೆಂದು ಲೋಕೋಪಯೋಗಿ ಸಚಿವ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹುಚ್ಚನಕೊಪ್ಪಲು ಏತ ನೀರಾವರಿಗೆ ಯೋಜನೆಗೆ ಚಾಲನೆ ನೀಡಿ ಹೊಳೆನರಸೀಪುರದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಕಿಡಿಕಾರಿದ್ರು. ಇಷ್ಟು ವರ್ಷವಾದ್ರೂ ಮಹದಾಯಿ ವಿಚಾರ ಬಗೆಹರಿದಿಲ್ಲ. ಬಿಜೆಪಿಯವರಿಗೆ ಇದೊಂದು ಸಮಸ್ಯೆ ಇತ್ಯರ್ಥಮಾಡಲು ಏಕೆ ಆಗಿಲ್ಲ ಎಂದು ಪ್ರಶ್ನಿಸಿದ್ರು.

    ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕಾಲೇಜುಗಳೇ ಇರ್ಲಿಲ್ಲ. ಉತ್ತರ ಕರ್ನಾಟಕದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕುಮಾರಸ್ವಾಮಿ ಬರಬೇಕಾಯ್ತ ಎಂದು ಪ್ರಶ್ನಿಸಿದರು.

    ಬೆಳಗಾವಿಯನ್ನ ಎರಡನೇ ರಾಜಧಾನಿ ಮಾಡೋದಲ್ಲ. ಸರ್ಕಾರದ ಪ್ರಮುಖ ಇಲಾಖೆಯ ಕಚೇರಿಯನ್ನ ಉತ್ತರ ಭಾಗದಲ್ಲಿ ತೆರೆದರೆ ತಪ್ಪೇನು? ಇದರಿಂದ ಜನರಿಗೆ ಅನುಕೂಲ ಆಗೊದಿಲ್ವಾ. ಈ ಬಗ್ಗೆ ಸಿಎಂ ಕುಮಾರಸ್ವಾಮಿಯವರೇ ಮಾತನಾಡಿ ತೀರ್ಮಾನಿಸುತ್ತಾರೆ ಅಂದ್ರು.

  • ಭಾರೀ ವಾಹನಗಳಿಗೂ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

    ಭಾರೀ ವಾಹನಗಳಿಗೂ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

    ಹಾಸನ: ರಸ್ತೆ ದುರಸ್ತಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ್ದ ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 75 ರಲ್ಲಿರುವ 26 ಕಿ.ಮೀ. ಶಿರಾಡಿ ಘಾಟ್ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಸಂಚಾರ ಸ್ಥಗಿತಗೊಂಡಿತ್ತು. ಸಚಿವ ಎಚ್.ಡಿ.ರೇವಣ್ಣ ಜುಲೈ 15ರಂದು ವಾಸ್ತುಪ್ರಕಾರವಾಗಿ ಶಿರಾಡಿ ಘಾಟ್ ಉದ್ಘಾಟಿಸಿ, ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೃಹತ್ ವಾಹನಗಳನ್ನು ನಿಷೇಧಿಸಲಾಗಿತ್ತು. ಇದನ್ನು ಓದಿ: ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ

    ಶಿರಾಡಿ ಘಾಟ್ ಬೆಂಗಳೂರು-ಮಂಗಳೂರು ನಡುವಿನ ಪ್ರಮುಖ ಹೆದ್ದಾರಿಯಾಗಿದ್ದು, ಲಾರಿ ಹಾಗೂ ಬಸ್ ಸಂಚಾರಕ್ಕೆ ತೊಡಕಾಗಿತ್ತು. ಇದೀಗ ಹಾಸನ-ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಗಡಿ ಭಾಗದ 26 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಸಂಪೂರ್ಣವಾಗಿದ್ದು, ಎಲ್ಲ ರೀತಿಯ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇದನ್ನು ಓದಿ: ಶಿರಾಡಿ ಘಾಟ್ ನಲ್ಲಿ ದ್ವಿಚಕ್ರ, ತ್ರಿಚಕ್ರ, ಮಿನಿ ಬಸ್, ಟೆಂಪೋ ಟ್ರಾವಲರ್ಸ್ ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ- ಖಾದರ್

  • ಕೋಲಾರ, ಚಿಕ್ಕಬಳ್ಳಾಪುರದ ಹಾಲು ಉತ್ಪಾದಕರಿಗೆ ರೇವಣ್ಣ ಶಾಕ್!

    ಕೋಲಾರ, ಚಿಕ್ಕಬಳ್ಳಾಪುರದ ಹಾಲು ಉತ್ಪಾದಕರಿಗೆ ರೇವಣ್ಣ ಶಾಕ್!

    ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ದಿಂದ ಸರಬರಾಜು ಆಗುತ್ತಿದ್ದ ಗುಡ್‍ಲೈಫ್ ಹಾಲನ್ನು ಖಡಿತಗೊಳಿಸುವ ನಿರ್ಧಾರವನ್ನು ಸಚಿವ ರೇವಣ್ಣ ಅವರು ನೀಡಿದ್ದಾರೆ ಎನ್ನಲಾಗಿದ್ದು, ಈ ನಿರ್ಧಾರವನ್ನು ಖಂಡಿಸಿ ಕೋಲಾರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತರಾಗುತ್ತಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಸೈನ್ಯಕ್ಕೆ ಕಳುಹಿಸಿಕೊಡುತ್ತಿದ್ದ ಕೋಚಿಮುಲ್ ಹಾಲಿನಲ್ಲಿ ಹಾಸನಕ್ಕೆ ಅರ್ಧದಷ್ಟು ಪಾಲು ನೀಡಲು ಮುಂದಾಗಿದ್ದು, ಅವರ ನಿಲುವನ್ನು ಬದಲಿಸುವಂತೆ ಕೋಲಾರ ನಗರದ ಜೂನಿಯರ್ ಕಾಲೇಜು ವೃತ್ತದಲ್ಲಿ ಪ್ರತಿಕೃತಿ ದಹಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ ಏಳೆಂಟು ವರ್ಷಗಳಿಂದ ಕೋಲಾರ ಹಾಲು ಒಕ್ಕೂಟದಲ್ಲಿ ತಯಾರಾಗುವ, ಟೆಟ್ರಾ ಪ್ಯಾಕ್‍ನ ಗುಡ್ ಲೈಫ್ (ಯು.ಹೆಚ್.ಟಿ) ಹಾಲನ್ನು ದೇಶ ಕಾಯುವ ಯೋಧರು, ತಿರುಪತಿ ಸೇರಿದಂತೆ ವಿವಿಧೆಡೆ ಪ್ರತಿ ವರ್ಷಕ್ಕೆ 80 ಲಕ್ಷ ಲೀಟರ್ ಹಾಲು ಕಳಿಸಿಕೊಡಲಾಗುತ್ತಿತ್ತು. ಆದರೆ ಸಚಿವ ರೇವಣ್ಣ ಅವರ ಕೈವಾಡದಿಂದಾಗಿ ಸುಮಾರು 40 ಲಕ್ಷ ಲೀಟರ್ ಹಾಲನ್ನ ಕಡಿತಗೊಳಿಸಿರುವುದರಿಂದ, ಈಗಾಗಲೇ ನಷ್ಟದಲ್ಲಿರುವ ಕೋಚಿಮಲ್‍ಗೆ ಹಾಗೂ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

    ಯಾವುದೇ ಶಾಶ್ವತ ನೀರಾವರಿ ಆಧಾರವಿಲ್ಲದಿದ್ದರೂ ಹೈನೋದ್ಯಮವನ್ನೇ ನಂಬಿ ಬದುಕುತ್ತಿರುವ ಅವಳಿ ಜಿಲ್ಲೆಯ ರೈತರಿಗೆ ನಷ್ಟವಾಗುವ ಆತಂಕ ಎದುರಾಗಿದ್ದು, ಹಾಸನಕ್ಕೆ ಪಾಲು ಕೇಳಿರುವ ಸಚಿವರ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

    ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಸರಬರಾಜು ಮಾಡಲಾಗುತ್ತಿದ್ದ 40 ಲಕ್ಷ ಲೀಟರ್ ಹಾಲನ್ನು ಖಡಿತ ಮಾಡಲು ಮುಂದಾಗಿರುವ ಸಚಿವ ರೇವಣ್ಣ ಅವರು, ತಮ್ಮ ನಿರ್ಧಾರವನ್ನು ಈ ಕೂಡಲೇ ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಜಿಲ್ಲೆಲ್ಲಿ ಬಂದ್ ಮಾಡಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

     

  • ಡಿಕೆಶಿ ವಿಚಾರವಾಗಿ ಹೇಗೆ ನಡೆದುಕೊಳ್ಳಬೇಕು – ಎಚ್‍ಡಿಕೆ, ರೇವಣ್ಣಗೆ ದೇವೇಗೌಡರ ಕ್ಲಾಸ್!

    ಡಿಕೆಶಿ ವಿಚಾರವಾಗಿ ಹೇಗೆ ನಡೆದುಕೊಳ್ಳಬೇಕು – ಎಚ್‍ಡಿಕೆ, ರೇವಣ್ಣಗೆ ದೇವೇಗೌಡರ ಕ್ಲಾಸ್!

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಹವಾಲ ವ್ಯವಹಾರದಲ್ಲಿ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಹೇಗೆ ನಡೆದುಕೊಳ್ಳಬೇಕು ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಎಚ್‍ಡಿ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಎಚ್ಚರಿಕೆ ಹೆಜ್ಜೆ ಇಡುವಂತೆ ಸಲಹೆ ನೀಡಿದ್ದಾರೆ.

    ಸದ್ಯ ಐಟಿ ದಾಳಿ ವಿಚಾರ ಅತ್ಯಂತ ಸೂಕ್ಷ್ಮ ಹಾಗೂ ಕಾನೂನಾತ್ಮಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಸದ್ಯದ ಸನ್ನಿವೇಶದಲ್ಲಿ ಡಿಕೆಶಿ ಅವರಿಗೆ ನೈತಿಕ ಬೆಂಬಲ ನೀಡಿ ಎಂದು ಎಚ್‍ಡಿ ದೇವೇಗೌಡ ಅವರು ಹೇಳಿದ್ದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನು ಓದಿ: ಐಟಿ ಅಧಿಕಾರಿಗಳ ನಿಜ ಬಣ್ಣ ಕೆಲವೇ ದಿನಗಳಲ್ಲಿ ಗೊತ್ತಾಗುತ್ತೆ: ಡಿ.ಕೆ.ಸುರೇಶ್

    ರಾಜ್ಯದಲ್ಲಿರುವ ಮೈತ್ರಿ ಸರ್ಕಾರದಲ್ಲಿ ಹೆಚ್ಚಿನ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಹಾಗೂ ಜನತೆಗೆ ತಮ್ಮ ಸಮುದಾಯದ ವಿರುದ್ಧ ಮೆಚ್ಚುಗೆ ಉಂಟಾಗುವಂತೆ ಮಾಡಲು ಡಿಕೆಶಿ ಅವರ ವಿಚಾರವಾಗಿ ಹೆಚ್ಚು ಮಾತನಾಡದಿರಲು ಸಲಹೆ ನೀಡಿದ್ದಾರೆ. ಅಲ್ಲದೇ ಸಂಪೂರ್ಣವಾಗಿ ಸುಮ್ಮನಿರಲು ಸೂಚಿಸಿರುವ ಅವರು, ಕಾನೂನು ಹೋರಾಟ ಮಾಡಿಕೊಳ್ಳುತ್ತಾರೆ. ಆದರೆ ಸರ್ಕಾರದ ಬೆಂಬಲ ಡಿಕೆಶಿ ಅವರಿಗೆ ಇರುತ್ತದೆ ಎಂದು ಹೇಳಲು ಸಲಹೆ ನೀಡಿದ್ದಾರೆ. ಇದನ್ನು ಓದಿ: ಹವಾಲ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ಭಾಗಿ? 

    ದೇವೇಗೌಡ ಸಲಹೆ ಪಡೆದು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಡಿಕೆ ಶಿವಕುಮಾರ್ ನಮ್ಮ ಸಂಪುಟದಲ್ಲಿ ಸಚಿವರು. ಅವರಿಗೆ ಕಾನೂನಾತ್ಮಕ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಬಿಜೆಪಿ ಹೇಳಿದರೆ ರಾಜೀನಾಮೆ ನೀಡಬೇಕಾ? ಏಕೆ ರಾಜೀನಾಮೆ ನೀಡಬೇಕು? ಇಲ್ಲಿ ರಾಜೀನಾಮೆಯ ಅವಶ್ಯಕತೆ ಇಲ್ಲ. ಬಿಜೆಪಿ ನಾಯಕರ ಮೇಲೆ ಎಷ್ಟು ಆರೋಪಗಳಿವೆ, ಅವರ ವಿರುದ್ಧ ಆರೋಪ ಕೇಳಿಬಂದ ವೇಳೆ ರಾಜೀನಾಮೆ ನೀಡಿದ್ದರಾ ಎಂದು ಸಚಿವ ಡಿಕೆಶಿ ಪರವಾಗಿ ಎಚ್‍ಡಿಕೆ ಬ್ಯಾಟ್ ಬೀಸಿದ್ದಾರೆ. ಇದನ್ನು ಓದಿ: ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಕೆಶಿ ಪರ ಸಿಎಂ ಎಚ್‍ಡಿಕೆ ಬ್ಯಾಟಿಂಗ್