Tag: Minister Sara Mahesh

  • ಮಾಧ್ಯಮಗಳ ಮೇಲೆ ಸಾ.ರಾ.ಮಹೇಶ್ ಗರಂ

    ಮಾಧ್ಯಮಗಳ ಮೇಲೆ ಸಾ.ರಾ.ಮಹೇಶ್ ಗರಂ

    ಬೆಂಗಳೂರು: ಭಾನುವಾರವಷ್ಟೇ ಸಚಿವ ರೇವಣ್ಣ ಅವರು ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಇದೀಗ ಸಚಿವ ಸಾ.ರಾ ಮಹೇಶ್ ಕೂಡ ಮಾಧ್ಯಮಗಳ ಮೇಲೆ ಆಕ್ರೋಶಗೊಂಡಿದ್ದಾರೆ.

    ಕೆ.ಕೆ ಗೆಸ್ಟ್ ಹೌಸ್‍ನಲ್ಲಿ ಬಿಜೆಪಿ ಭೇಟಿ ಬಗ್ಗೆ ಸಾ.ರಾ ಮಹೇಶ್ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದರು. ಈ ವೇಳೆ ಸಿಟ್ಟಾದ ಮಹೇಶ್, ಎಷ್ಟು ಬಾರಿ ಹೇಳುವುದು ನಿಮಗೆ. ಒಂದು ಸಲ ಹೇಳಿದರೆ ಅರ್ಥ ಆಗಲ್ವ ಎಂದು ಕೈ ಬೆರಳು ತೋರಿಸಿ ಸಿಟ್ಟಿನಿಂದ ವಿಧಾನಸಭೆಯೊಳಗೆ ಹೋದರು. ಇದನ್ನೂ ಓದಿ: ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ಬೈದ ರೇವಣ್ಣ

    ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ಸಭೆ ನಡೆಸಿದ್ದರು. ಸಭೆ ಬಳಿಕ ಸಾರಾ ಮಹೇಶ್ ಅವರು ಕೆಕೆ ಗೆಸ್ಟ್ ಹೌಸ್ ಬಳಿ ಬಿಜೆಪಿ ನಾಯಕರ ಜೊತೆ ಮಾಧ್ಯಮಗಳಿಗೆ ಸೆರೆ ಸಿಕ್ಕಿದ್ದರು. ಈ ಮೂಲಕ ಮೂವರು ನಾಯಕರ ರಹಸ್ಯ ಭೇಟಿ ಬಯಲಾಗಿತ್ತು. ಈ ಬಗ್ಗೆ ಇಂದು ಸಾ.ರಾ.ಮಹೇಶ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ ಈ ರೀತಿ ಮಾಧ್ಯಮಗಳ ಮೇಲೆ ಗರಂ ಆದರು.

    ಒಂದೆಡೆ ಅತೃಪ್ತ ಶಾಸಕರು ಮುಂಬೈನಿಂದ ಬರುತ್ತಿಲ್ಲ. ಇತ್ತ ಇಲ್ಲಿನ ಅತೃಪ್ತ ಶಾಸಕರನ್ನು ಮನವೊಲಿಸಲು ಪ್ರಯತ್ನ ಮಾಡಿದರೂ ಸಫಲವಾಗಿಲ್ಲ. ಈ ಎಲ್ಲ ಒತ್ತಡದಲ್ಲಿರುವ ದೋಸ್ತಿನಾಯಕರು ಹತಾಶೆಯಿಂದ ಮಾಧ್ಯಮದವರ ಮೇಲೆ ಸಿಟ್ಟಾಗುತ್ತಿದ್ದಾರಾ ಎಂಬ ಪ್ರಶ್ನೆ ಕಾಡಿದೆ.

  • ‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

    ‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

    ಮೈಸೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದುಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು. ಆದರೆ ನಿಖಿಲ್ ಕುಮಾರಸ್ವಾಮಿ ಹೆಸರು ಹೇಳಿದ ನಂತರ ಕಾಂಗ್ರೆಸ್ ಮುಖಂಡರು ಮತ್ತೊಬ್ಬ ಆಕಾಂಕ್ಷಿಯ ಜೊತೆ ಓಡಾಡುತ್ತಿದ್ದಾರೆ. ಆದರೆ ಅವರನ್ನು ಸ್ವಾಗತಿಸುತ್ತಿದ್ದಾರೆ. ಈ ರೀತಿ ಮಂಡ್ಯದಲ್ಲಿ ನಡೆದು ಕೊಂಡಾಗ ಮೈಸೂರು ಕಾರ್ಯಕರ್ತರ ಮೇಲೂ ಅದು ಪರಿಣಾಮ ಬೀರುತ್ತೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

    ಎರಡು ಪಕ್ಷದ ನಾಯಕರು ಬದಲಾಗಬೇಕು. ರಾಷ್ಟ್ರ ರಾಜ್ಯ ನಾಯಕರ ತೀರ್ಮಾನದಂತೆ ಮೈತ್ರಿ ಅಭ್ಯರ್ಥಿ ನಿಖಿಲ್, ಮೈತ್ರಿಗೆ ದ್ರೋಹ ಮಾಡೋದು ತಂದೆ ತಾಯಿಗೆ ದ್ರೋಹ ಮಾಡಿದಂತೆ. ಹಿಂದಿನ ಉಪ ಚುನಾವಣೆ ಕಹಿ ಘಟನೆಯಿಂದ ಈ ಹೇಳಿಕೆ ನೀಡುತ್ತಿದ್ದು, ಇದು ತಗೋ ಕೊಡು ಪಾಲಿಸಿ ಅಷ್ಟೇ. ಯಾರನ್ನು ಬಲವಂತವಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ. ನೀವು ಎಷ್ಟು ಪ್ರೀತಿಸುತ್ತಿರೋ ಗೌರವಿಸುತ್ತಿರೋ ನಾವು ಅಷ್ಟೇ ಪ್ರೀತಿಸುತ್ತೀವಿ ಎಂದರು.

    ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಖಡಕ್ ಈ ಬಗ್ಗೆ ಸೂಚನೆ ನೀಡಬೇಕು ಎಂದಿದ್ದಾರೆ. ನಿನ್ನೆ ಜೆಡಿಎಸ್ ಕಾರ್ಯಕ್ರಮದಲ್ಲೂ ಮಾತನಾಡಿ ಅವರು, ನೀವು ನಮ್ಮನ್ನು ಒಮ್ಮೆ ತಬ್ಬಿಕೊಂಡರೆ ನಾವು 5 ಬಾರಿ ತಬ್ಬಿಕೊಳ್ಳುತ್ತೇವೆ. ನೀವು ಮಂಡ್ಯದಲ್ಲಿ ನಮಗೇ ನೀಡಿದ ಬೆಂಬಲವೇ ಮೈಸೂರಿನಲ್ಲೂ ಪ್ರತಿಧ್ವನಿಸುತ್ತದೆ ಎಂದಿದ್ದರು.

    ಇದೇ ವೇಳೆ ಸುಮಲತಾ ಅಂಬರೀಶ್ ಈಗಲೂ ನಿಖಿಲ್ ಬೆಂಬಲಿಸುವ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದ ಸಚಿವರು, ಯಾರೋ ಅವರಿಗೆ ಒತ್ತಡ ಹಾಕಿರುವ ಪರಿಣಾಮ ಸುಮಲತಾ ಸ್ಪರ್ಧೆ ಮಾಡುತ್ತಿದ್ದಾರೆ ಅಷ್ಟೇ. ನಿಖಿಲ್ ಕುಮಾರಸ್ವಾಮಿ ಮತ್ತು ಅಭಿಷೇಕ್ ಆತ್ಮೀಯ ಸ್ನೇಹಿತರಾಗಿದ್ದು, ಸುಮಲತಾ ಅವರು ಮನಸು ಮಾಡಬಹುದಿತ್ತು. ಮಗನ ಸ್ನೇಹಿತನನ್ನು ಮಗನಂತೆ ಕಾಣಬಹುದಾಗಿತ್ತು. ನಿಖಿಲ್, ಅಭಿ ಬಾಂಧವ್ಯ ಎಲ್ಲಾ ನೋಡಿ ಸುಮಲತಾ ಅಂಬರೀಶ್ ನಿಖಿಲ್ ಬೆಂಬಲಿಸುತ್ತಾರೆ ಎಂದು ಆತ್ಮವಿಶ್ವಾಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    – ನೀವು ಒಮ್ಮೆ ತಬ್ಬಿಕೊಂಡರೆ 5 ಬಾರಿ ತಬ್ಬಿಕೊಳ್ತೇವೆ
    – ಜೆಡಿಎಸ್ ಪ್ರಚಾರ ಸಮಾರಂಭದಲ್ಲಿ ಮಹೇಶ್ ಮಾತು

    ಮೈಸೂರು: ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ದೋಸ್ತಿ ಪಕ್ಷಗಳ ನಡುವೆ ಹೊಂದಾಣಿಕೆ ಕಷ್ಟವಾಗುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಸಚಿವ ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ನಗರದಲ್ಲಿ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಆದರೆ ಕಾಂಗ್ರೆಸ್ ಸ್ನೇಹಿತರೇ ನೀವು ಮಂಡ್ಯದಲ್ಲಿ ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ ಎಂದು ತಿಳಿಸಿದರು.

    ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ. ಈ ಲೋಕಸಭೆ ಚುನಾವಣೆಯಿಂದಲೇ ಇದು ಪ್ರಾರಂಭವಾಗಬೇಕು. ನಾವು ಜಿಲ್ಲೆಯಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೇ ಸೇವೆ ಮಾಡಿದ್ದೇವೆ. ಆದ್ದರಿಂದ ಮೈತ್ರಿ ಧರ್ಮ ಪಾಲಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಡಿ ಎಂದರು.

    ರಾಜ್ಯದ ಯಾವುದೇ ಪಕ್ಷದ ನೇತಾರರನ್ನಾಗಿ ಮಾಡಿದರೂ ಕೂಡ ಜೆಡಿಎಸ್ ಕಾರ್ಯಕರ್ತರು ನಂಬುವುದು ಎಚ್‍ಡಿಡಿ ಕುಟುಂಬವನ್ನು ಮಾತ್ರ. ಆದ್ದರಿಂದ ಕಾರ್ಯಕರ್ತರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಮಾಡಲಾಗಿದೆ. ಆದರೆ ಅಂಬರೀಶ್ ಅವರೇ ರಾಜಕಾರಣ ಬೇಡ ಎಂದ ಮೇಲೆ ನಿಖಿಲ್ ಅವರ ವಿರುದ್ಧ ಏಕೆ ಸ್ಪರ್ಧೆ ಮಾಡುತ್ತಿದ್ದೀರಾ ಎಂದು ಯೋಚಿಸಿ ಎಂದು ಅವರು ಸುಮಲತಾ ಅವರಲ್ಲಿ ಮನವಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಫೆ.23ರಂದು ನಡೆಯಲಿದೆ. ಈ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

    ಈ ಹಿಂದೆ ಸ್ಥಳೀಯ ನಾಯಕರು ತೆಗೆದುಕೊಂಡಿದ್ದ ನಿರ್ಧಾರದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಈ ಮೂಲಕ ಹಿಂದಿನ ಒಪ್ಪಂದದಂತೆ ನಮ್ಮ ಪಕ್ಷದ ಪರಿಮಳಾ ಶ್ಯಾಮ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.

    ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದ್ದು, ಸಾಲೂರು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ 1ನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ಸಿಡಿದೆದ್ದಿರುವ ಭಕ್ತರು, ಸಾಲೂರು ಮಠದಲ್ಲಿದ್ದ ಕಿರಿಯ ಸ್ವಾಮೀಜಿ ಫೋಟೋ ಹರಿದು ಆಕ್ರೋಶ ಹೊರಹಾಕಿದ್ದಾರೆ.

    ಇತ್ತ ಕೀಟನಾಶಕ ಸೇವಿಸಿ ಅಸ್ವಸ್ಥರಾದವರಿಗೆ 11ನೇ ದಿನವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 33 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 8 ಮಂದಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದರೆ, 12 ಮಂದಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 13 ಮಂದಿಗೆ ಸಾಮಾನ್ಯ ವಾರ್ಡ್ ನಲ್ಲಿ ನೀಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv