Tag: minister seat

  • ಎಲ್ಲಾ ಸಚಿವಸ್ಥಾನ ಲಿಂಗಾಯತರಿಗೆ ಕೊಟ್ರೆ ಅತೃಪ್ತರು ವಿಷ ಕುಡಿಬೇಕಾ: ಮುಖಂಡರಿಗೆ ಬಿಎಸ್‍ವೈ ಪ್ರಶ್ನೆ

    ಎಲ್ಲಾ ಸಚಿವಸ್ಥಾನ ಲಿಂಗಾಯತರಿಗೆ ಕೊಟ್ರೆ ಅತೃಪ್ತರು ವಿಷ ಕುಡಿಬೇಕಾ: ಮುಖಂಡರಿಗೆ ಬಿಎಸ್‍ವೈ ಪ್ರಶ್ನೆ

    ಬೆಂಗಳೂರು: ಲಿಂಗಾಯತ ಮುಖಂಡರ ಬೇಡಿಕೆ ಕೇಳಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.

    ಲಿಂಗಾಯತ ಸಮುದಾಯದ ಮುಖಂಡರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಅಭಿನಂದಿಸಿದರು. ಈ ವೇಳೆ ಮುಖಂಡರು ತಮ್ಮ ಸಮುದಾಯದ ಶಾಸಕರ ಪರ ಬ್ಯಾಟ್ ಬಿಸಿ, ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದರು. ಅದನ್ನು ಕೇಳಿದ ಬಿ.ಎಸ್.ಯಡಿಯೂರಪ್ಪ ಅವರು ಮುಖಂಡರ ವಿರುದ್ಧ ಫುಲ್ ಗರಂ ಆದರು.

    ಬಿಜೆಪಿಯಲ್ಲಿ ಒಟ್ಟು 16 ಲಿಂಗಾಯತ ಶಾಸಕರಿದ್ದಾರೆ. ಈ ಪೈಕಿ ನಾಲ್ವರಿಗೆ ಸಚಿವ ಸ್ಥಾನ ಕೊಡುವಂತೆ ಲಿಂಗಾಯತ ಮುಖಂಡರು ಸಿಎಂಗೆ ಮನವಿ ಮಾಡಿಕೊಂಡರು. ಮುಖಂಡರ ಮಾತಿನಿಂದ ಕೆರಳಿದ ಸಿಎಂ, ನಾಲ್ಕು ಸಚಿವರು ಸಾಕಾ? ಯಾಕೆ ಐವರು ಶಾಸಕರನ್ನು ಮಂತ್ರಿ ಮಾಡೋದು ಬೇಡ್ವಾ ಎಂದು ಏರುಧ್ವನಿಯಲ್ಲಿ ಗದರಿಸಿದರು.

    ಅಷ್ಟೇ ಅಲ್ಲದೇ ಇರೋ ಬರೋ ಸಚಿವ ಸ್ಥಾನವನೆಲ್ಲ ನಿಮಗೆ ಕೊಟ್ಟರೆ ರಾಜೀನಾಮೆ ಕೊಟ್ಟ ಅತೃಪ್ತ ಶಾಸಕರು ವಿಷ ಕುಡಿಯಬೇಕಾ ಎಂದು ಪ್ರಶ್ನಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪನವರ ಧ್ವನಿ ಜೋರಾಗುತ್ತಿದ್ದಂತೆ ಲಿಂಗಾಯತ ಮುಖಂಡರು ತಣ್ಣಗಾದರು.

  • ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಹೈಕಮಾಂಡ್‍ಗೆ ಬಿಟ್ಟ ವಿಚಾರ: ಪ್ರಹ್ಲಾದ್ ಜೋಶಿ

    ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಹೈಕಮಾಂಡ್‍ಗೆ ಬಿಟ್ಟ ವಿಚಾರ: ಪ್ರಹ್ಲಾದ್ ಜೋಶಿ

    – ಕಾಂಗ್ರೆಸ್, ಜೆಡಿಎಸ್ ವಂಶಾಡಳಿತಕ್ಕೆ ಒಳಪಟ್ಟ ಪಕ್ಷಗಳು

    ಹುಬ್ಬಳ್ಳಿ: ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ವಿಚಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈ ಕಮಾಂಡ್‍ಗೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಬಿಜೆಪಿ ಯಾವುದೇ ರೀತಿ ಕುದುರೆ ವ್ಯಾಪಾರ ಮಾಡಿಲ್ಲ. ಮೈತ್ರಿ ಸರ್ಕಾರದ ಅಸಮಾಧಾನದಿಂದ ಅತೃಪ್ತರು ಹೊರಗಡೆ ಬಂದಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್-ಜೆಡಿಎಸ್ ವಂಶಾಡಳಿತಕ್ಕೆ ಒಳಪಟ್ಟ ಪಕ್ಷಗಳು. ಅಲ್ಲಿನ ಕೆಲ ನಾಯಕರಿಗೆ ಕುಟುಂಬದ ಹಿತವೇ ಮುಖ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಆ ಪಕ್ಷಗಳ ಬಲ ಮತ್ತಷ್ಟು ಕುಗ್ಗಲಿದೆ ಎಂದು ವಾಗ್ದಾಳಿ ನಡೆಸಿದರು.

    2018ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್-ಕಾಂಗ್ರೆಸ್ ನಾಯಕರು ಜನಾದೇಶವನ್ನು ಧಿಕ್ಕರಿಸಿದ ಆಡಳಿತ ನಡೆಸಿದರು. ಈಗ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಆಡಳಿತಕ್ಕೆ ಬಂದಿದೆ. ಈ ಮೂಲಕ ಜನಾದೇಶಕ್ಕೆ ಗೌರವ ಸಿಕ್ಕಿದೆ ಎಂದು ತಿಳಿಸಿದರು.

    ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಅತೃಪ್ತ ಶಾಸಕರು ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುವುದಿಲ್ಲ ಅಂತ ಹೇಳಿದ್ದಾರೆ. ಹೀಗಾಗಿ ನಮಗೆ ಸಂಖ್ಯಾಬಲ ಇರುವುದರಿಂದ ಗೆಲ್ಲುತ್ತೇವೆ. ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಆಯ್ಕೆಯ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು. ಮುಂದಿನ ಕೆಲವೇ ದಿನಗಳಲ್ಲಿ ಸಚಿವ ಸಂಪುಟ ರಚನೆ ಮಾಡಲಾಗುತ್ತದೆ ಎಂದು ತಿಳಿಸಿದರು.

  • ಕೋಲಾರಕ್ಕೂ ಸಿಎಂರನ್ನು ಕರೆ ತಂದು ಗ್ರಾಮ ವಾಸ್ತವ್ಯ ಮಾಡಸ್ತೀನಿ: ಶಾಸಕ ನಾಗೇಶ್

    ಕೋಲಾರಕ್ಕೂ ಸಿಎಂರನ್ನು ಕರೆ ತಂದು ಗ್ರಾಮ ವಾಸ್ತವ್ಯ ಮಾಡಸ್ತೀನಿ: ಶಾಸಕ ನಾಗೇಶ್

    – ಎಚ್‍ಡಿಕೆ ಉತ್ತಮ ಆಡಳಿತ ನೋಡಿ ಬೆಂಬಲ ನೀಡಿರುವೆ

    ಕೋಲಾರ: ಸಿಎಂ ಕುಮಾರಸ್ವಾಮಿ ಅವರನ್ನು ಕೋಲಾರ ಜಿಲ್ಲೆಗೆ ಕರೆ ತಂದು ಗ್ರಾಮ ವಾಸ್ತವ್ಯ ಮಾಡಿಸುತ್ತೇನೆ ಎಂದು ಪಕ್ಷೇತರ ಶಾಸಕ ಎಚ್.ನಾಗೇಶ್ ಹೇಳಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾತನಾಡಿದ ಶಾಸಕರು, ಸಿಎಂ ಕುಮಾರಸ್ವಾಮಿ ಅವರು ಕಳೆದ ಒಂದು ವರ್ಷದಲ್ಲಿ ಉತ್ತಮ ಕೆಲಸ, ಆಡಳಿತ ನೀಡಿದ್ದಾರೆ. ಮುಂದಿನ ನಾಲ್ಕು ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತಾರೆ. ಅವರು ಕಾರ್ಯವೈಖರಿ ನೋಡಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿರುವೆ ಎಂದರು.

    ಉತ್ತಮ ಆಡಳಿತ ನೀಡಲು ಸಿಎಂ ಕುಮಾರಸ್ವಾಮಿ ಅವರಿಗೆ ನೆಮ್ಮದಿ ಬೇಕು. ಈ ನಿಟ್ಟಿನಲ್ಲಿ ಸಚಿವರು, ಶಾಸಕರು ಸಹಕಾರ ನೀಡಬೇಕಿದೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಉದ್ದೇಶದಿಂದ ನಾನು ಕೂಡ ಕುಮಾರಸ್ವಾಮಿ ಅವರ ಕೈಯನ್ನು ಬಲಪಡಿಸುತ್ತಿರುವೆ ಎಂದು ಹೇಳಿದರು.

    ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದು, ಬುಧವಾರದವರೆಗೂ ಕಾಯುವಂತೆ ತಿಳಿಸಿದ್ದಾರೆ. ಅವರು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹೀಗಾಗಿ ಸುಭದ್ರ ಸರ್ಕಾರಕ್ಕೆ ನಮ್ಮ ಬೆಂಬಲ ಇದೆ. ಸಚಿವ ಸ್ಥಾನ ಸಿಕ್ಕರೆ ಖುಷಿಯಾಗುತ್ತದೆ. ಮಂತ್ರಿಗಿರಿ ಇದ್ದರೆ ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

  • ನನಗೆ ಸಚಿವ ಸ್ಥಾನ ಸಿಗದಿರಲು ಮಾಧ್ಯಮದವರೇ ಕಾರಣ: ರಾಘವೇಂದ್ರ ಹಿಟ್ನಾಳ್

    ನನಗೆ ಸಚಿವ ಸ್ಥಾನ ಸಿಗದಿರಲು ಮಾಧ್ಯಮದವರೇ ಕಾರಣ: ರಾಘವೇಂದ್ರ ಹಿಟ್ನಾಳ್

    – ನನ್ನನ್ನ ಸ್ವಲ್ಪವೂ ಫೋಕಸ್ ಮಾಡ್ಲಿಲ್ಲ

    ಕೊಪ್ಪಳ: ನನಗೆ ಸಚಿವ ಸ್ಥಾನ ಸಿಗದಿರಲು ಮಾಧ್ಯಮದವರು ಕಾರಣ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

    ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ಮಾತನಾಡಿದ ಶಾಸಕರು, ನನಗೆ ಸಚಿವ ಸ್ಥಾನ ಕೊಡಿಸುವುದರಲ್ಲಿ ಮಾಧ್ಯಮದವರು ವಿಫಲರಾಗಿದ್ದಾರೆ. ಟಿವಿಗಳಲ್ಲಿ ನನ್ನನ್ನ ಸ್ವಲ್ಪವೂ ಫೋಕಸ್ ಮಾಡಲಿಲ್ಲ. ಸಚಿವ ಸ್ಥಾನದ ಕುರಿತು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು.  ಇದನ್ನೂ ಓದಿ: 12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ. ನಮ್ಮ ಜಿಲ್ಲೆಯಲ್ಲಿ ಅಮರೇಗೌಡ ಬಯ್ಯಾಪುರ ಹಾಗೂ ನಾನು ಇಬ್ಬರು ಶಾಸಕರಿದ್ದೇವೆ. ಅವರು ನನಗಿಂತ ಹಿರಿಯರಿದ್ದು, ನಾಲ್ಕಕ್ಕಿಂತಲೂ ಅಧಿಕ ಬಾರಿ ಶಾಸಕರಾಗಿದ್ದಾರೆ. ಪಕ್ಷದ ಹೈಕಮಾಂಡ್ ಯಾರನ್ನು ಮಂತ್ರಿ ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

    ಜಾತಿ ಕೋಟಾ ಏನಿದ್ದರೂ ಬಿಜೆಪಿಯಲ್ಲಿ, ನಮ್ಮಲ್ಲಿಲ್ಲ. ನಮ್ಮ ಜಿಲ್ಲೆಯವರನ್ನು ಮಂತ್ರಿ ಮಾಡಿ ಎನ್ನುವುದು ನಮ್ಮ ವಾದ. ಇಷ್ಟು ದಿನ ಬೇರೆ ಜಿಲ್ಲೆಯವರು ಸಚಿವರಾಗಿದ್ದಾರೆ. ಹೀಗಾಗಿ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಉತ್ತಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನನಗೆ ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬಹುದು. ಇನ್ನೂ ವಯಸ್ಸಿದೆ, ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ ಎಂದು ಮಂತ್ರಿಗಿರಿ ಬೇಡಿಕೆ ವ್ಯಕ್ತಪಡಿಸಿದರು.

    ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಾಂಗ್ರೆಸ್ ಸೇರ್ಪಡೆ ಆಗುವ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ಬಿಜೆಪಿಯಲ್ಲಿ ಅಸಮಾಧಾನವಿರುವ ಶಾಸಕರು ಇದ್ದಾರೆ. ಕಳೆದ ಒಂದು ವರ್ಷದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅಂತ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ ಅವರ ಶಾಸಕರನ್ನೆ ಕಾಂಗ್ರೆಸ್ ಆಪರೇಷನ್ ಹಂತಕ್ಕೆ ಮಾಧ್ಯಮದವರು ತಂದು ನಿಲ್ಲಿಸಿದ್ದೀರಿ ಎಂದರು.

    ಯಾವುದೇ ಶಾಸಕರು ಪಕ್ಷದ ಸಿದ್ಧಾಂತ ಬಿಟ್ಟು ಹೋಗಲು ಸಿದ್ಧರಾಗಿರುವುದಿಲ್ಲ. ಹಾಗೊಂದು ವೇಳೆ ನಿಮ್ಮ ಮೂಲಕ ಅವರು ಬರುವುದಾದರೆ ನಾನು ಹೈಕಮಾಂಡ್‍ಗೆ ಮಾತನಾಡುತ್ತೇನೆ. ನಿಮಗೆ ಮಾಹಿತಿ ಇದ್ದರೆ ಹೇಳಿ ನಾನು ಮಾತನಾಡುತ್ತೇನೆ. ಪಕ್ಷ ಬಿಟ್ಟು ಬರುತ್ತಾರೆ ಎನ್ನುವುದಾದರೆ ನೇತೃತ್ವವಹಿಸುತ್ತೇನೆ ಎಂದರು ಹೇಳಿದರು.

  • ಲೋಕಸಭೆ ಚುನಾವಣೆ ಬಳಿಕ ನಾನು ಬೇಡ ಅಂದ್ರು ಮಂತ್ರಿಗಿರಿ ಸಿಗುತ್ತೆ: ಬಿ.ಸಿ.ಪಾಟೀಲ್

    ಲೋಕಸಭೆ ಚುನಾವಣೆ ಬಳಿಕ ನಾನು ಬೇಡ ಅಂದ್ರು ಮಂತ್ರಿಗಿರಿ ಸಿಗುತ್ತೆ: ಬಿ.ಸಿ.ಪಾಟೀಲ್

    ಹಾವೇರಿ: ಲೋಕಸಭಾ ಚುನಾವಣೆ ಬಳಿಕ ನಾನು ಬೇಡ ಅಂದ್ರು ಸಚಿವ ಸ್ಥಾನ ಸಿಗುತ್ತೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮಂತ್ರಿಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕಲ್ಲು ಹೊಡೆದರೆ ಹಣ್ಣು ಬೀಳುತ್ತೆ. ನಮ್ಮವರೆಲ್ಲ ಬಾಯಿಗೆ ಬೀಗ ಹಾಕ್ಕೊಂಡು ಕೂತಿದ್ದರಿಂದ ಸಚಿವ ಸ್ಥಾನ ಸಿಗಲಿಲ್ಲ. ಈಗಿನ ಕಾಲದಲ್ಲಿ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಯಾವುದೇ ಸ್ಥಾನಮಾನ ಸಿಗಲ್ಲ. ಜಿಲ್ಲೆಯಲ್ಲಿ ವೀರಶೈವ ಲಿಂಗಾಯತರಲ್ಲಿ ಅನಾಥಪ್ರಜ್ಞೆ ಕಾಡುತ್ತಿದೆ ಎಂದು ಕಿಡಿಕಾರಿದರು.

    ಲೋಕಸಭಾ ಚುನಾವಣಾ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಧರ್ಮದ 6.5 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಹೀಗಾಗಿ ವೀರಶೈವ ಲಿಂಗಾಯತರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಗೆಲವು ಖಚಿತ. ಈ ನಿಟ್ಟಿನಲ್ಲಿ ರಾಜ್ಯ ನಾಯಕರು ಹಾಗೂ ಹೈಕಮಾಂಡ್‍ಗೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

    ನಾನು ಆಕಾಂಕ್ಷಿಯಲ್ಲ. ಆದರೆ ಹಾವೇರಿಯಿಂದ ಬೇರೆಯವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳುವುದಿಲ್ಲ. ಏಕೆಂದರೆ ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಅನುಕೂಲ. ಯಾರಿಗೆ ಟಿಕೆಟ್ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತವೆ. ಫೆಬ್ರವರಿ 28 ರಂದು ವೀರಶೈವ ಲಿಂಗಾಯತ ಧರ್ಮದ ಸಭೆ ಮತ್ತೆ ಕರೆಯಲಾಗಿದೆ. ಆಗ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಾವುದೇ ಖಾತೆ ನೀಡದೆ ಸಚಿವ ಸ್ಥಾನ ಕೊಟ್ಟರೂ ನನಗೆ ಓಕೆ : ದೇಶಪಾಂಡೆ

    ಯಾವುದೇ ಖಾತೆ ನೀಡದೆ ಸಚಿವ ಸ್ಥಾನ ಕೊಟ್ಟರೂ ನನಗೆ ಓಕೆ : ದೇಶಪಾಂಡೆ

    ಬೆಂಗಳೂರು: ಖಾತೆ ಹಂಚಿಕೆಯ ವಿಚಾರವಾಗಿ ಕಾಂಗ್ರೆಸ್ ನಾಯಕರು ಹಾಗೂ ಸಚಿವರ ನಡುವೆ ಬಿಗ್ ಫೈಟ್ ಆರಂಭವಾಗಿದ್ದು, ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ನಯವಾಗಿ ಹಿಂದಕ್ಕೆ ಸರಿದಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಕಂದಾಯ ಇಲಾಖೆಯ ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಸಚಿವರು, ನನ್ನ ಬಳಿ ಇರುವ ಯಾವುದೇ ಖಾತೆ ಹಿಂಪಡೆದರೂ ನನಗೆ ಬೇಜಾರಿಲ್ಲ. ನನಗೆ ಇಂತಹದ್ದೇ ಖಾತೆ ಕೊಡಿ ಅಂತ ನಾನು ಕೇಳಿರಲಿಲ್ಲ. ಯಾವುದೇ ಖಾತೆ ಕೊಟ್ಟರು ನಾನು ನಿಭಾಯಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

    ಒಂದು ವೇಳೆ ಯಾವುದೇ ಖಾತೆ ನೀಡದೆ ಸಚಿವ ಅಂದ್ರು ನನಗೆ ಯಾವುದೇ ಸಮಸ್ಯೆ ಇಲ್ಲ ಅಂದ್ರು ಎಂದು ನಗೆ ಹರಿಸಿದ ಸಚಿವರು, ನನ್ನ ಬಳಿ ಇರುವ ಯಾವ ಖಾತೆಯನ್ನು ವಾಪಸ್ ಪಡೆಯಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ರಾಜ್ಯದಲ್ಲಿ ನಮ್ಮ ಪಕ್ಷದ ಸರ್ಕಾರ ರಚನೆಯಾಗಿದ್ದರೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಿದ್ದರು. ಆದರೆ ಸಮ್ಮಿಶ್ರ ಸರ್ಕಾರ ಇರುವುದರಿಂದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಬೆಳಗ್ಗೆಯಿಂದ ಸಭೆಯಲ್ಲಿದ್ದೇನೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಇಂದಿನ ಬೆಳವಣಿಗೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    ದೇಶಪಾಂಡೆಗೆ ಕೈಗಾರಿಕಾ ಖಾತೆಯನ್ನು ಕೊಟ್ಟರೆ ಚೆನ್ನಾಗಿ ನಿಭಾಯಿಸುತ್ತಾರೆ. ಹೀಗಾಗಿ ಅವರಿಗೆ ಕೈಗಾರಿಕಾ ಖಾತೆ ಕೊಡಬೇಕು ಎಂದು ಜನರು ಹೇಳುತ್ತಾರೆ ಎನ್ನುವ ಮೂಲಕ ಕೆ.ಜೆ. ಜಾರ್ಜ್ ಖಾತೆಯ ಬಗ್ಗೆ ಆಸೆ ವ್ಯಕ್ತಪಡಿಸಿದ ಅವರು, ಎಲ್ಲ ಖಾತೆಗಳು ಉತ್ತಮವಾಗಿದ್ದು, ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಬಹುದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಹೈಕಮಾಂಡ್‍ಗೆ ಬಿಬಿಎಂಪಿ ಮೇಯರ್ ಬ್ಲಾಕ್‍ಮೇಲ್

    ಕಾಂಗ್ರೆಸ್ ಹೈಕಮಾಂಡ್‍ಗೆ ಬಿಬಿಎಂಪಿ ಮೇಯರ್ ಬ್ಲಾಕ್‍ಮೇಲ್

    – ರಾಮಲಿಂಗಾರೆಡ್ಡಿ ಪರ ಬ್ಯಾಟ್ ಬೀಸಿದ ಗಂಗಾಂಬಿಕೆ

    ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಇಲ್ಲದಿದ್ದರೇ ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಮೇಯರ್ ಗಂಗಾಬಿಕೆ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಮೇಯರ್, ನಾನು ರಾಮಲಿಂಗಾರೆಡ್ಡಿ ಅವರ ಶಿಷ್ಯೆ. ಸಚಿವ ಸ್ಥಾನ ಹಾಗೂ ಜವಾಬ್ದಾರಿ ನೀಡುವಲ್ಲಿ ಹೈಕಮಾಂಡ್ ಅವರನ್ನು ಕಡೆಗಣಿಸಿದ್ದು ಬೇಸರ ತಂದಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಿದ್ದು ರಾಮಲಿಂಗಾರೆಡ್ಡಿ. ಬೆಂಗಳೂರಿನ ಕಾರ್ಯಕರ್ತರು ರಾಮಲಿಂಗಾರೆಡ್ಡಿ ಅವರ ಬೆಂಬಲಿಗರು. ಇದನ್ನು ಪಕ್ಷದ ನಾಯಕರು ಗಮನಿಸಬೇಕಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ಹಾಗೂ ನಾನು ರಾಮಲಿಂಗಾ ರೆಡ್ಡಿ ಅವರ ಬೆಂಬಲಿಗರು. ಒಂದು ವೇಳೆ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದರೆ ನಮ್ಮ ಸ್ಥಾನಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದ ಅವರು, ಈಗಾಗಲೇ ವೇಣುಗೋಪಾಲ್ ಜೊತೆ ಚರ್ಚೆ ನಡೆಸಲಾಗಿದೆ. ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದರು. ಇದನ್ನು ಓದಿ: ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?

    ಒಂದು ಕಡೆ ರಾಮಲಿಂಗಾರೆಡ್ಡಿ ಪರ ಮೇಯರ್ ಗಂಗಾಂಬಿಕೆ ಬ್ಯಾಟ್ ಬೀಸಿದರೆ, ಮತ್ತೊಂದು ಕಡೆ ಈಗಾಗಲೇ ನೇಮಿಸಿರುವ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಪಕ್ಷದಲ್ಲಿಯೇ ಜಟಾಪಟಿ ನಡೆದಿದೆ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಬಳಿ ಇರುವ ಎರಡು ಖಾತೆಗಳ ವಿಚಾರಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರಂತೆ. ಇತ್ತ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಬಿ.ಸಿ.ಪಾಟೀಲ್, ನಾಗೇಂದ್ರ ಸೇರಿದಂತೆ ಕೆಲವು ನಾಯಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಸಂಪುಟ ವಿಸ್ತರಣೆ ಮಾಹಿತಿ ಸಿಗುತ್ತಿದ್ದಂತೆ ಶುರುವಾಯ್ತು ಕೈ ಪಾಳಯದಲ್ಲಿ ಲಾಬಿ

    ಸಚಿವ ಸಂಪುಟ ವಿಸ್ತರಣೆ ಮಾಹಿತಿ ಸಿಗುತ್ತಿದ್ದಂತೆ ಶುರುವಾಯ್ತು ಕೈ ಪಾಳಯದಲ್ಲಿ ಲಾಬಿ

    -ಕೆ.ಸಿ.ವೇಣುಗೋಪಾಲ್ ಬಳಿ ಬಂದು ಮಂತ್ರಿಗಿರಿ ಬೇಡಿಕೆ ಇಟ್ರು ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್

    ಬೆಂಗಳೂರು: ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಕೈ ಶಾಸಕರು ಲಾಬಿಗೆ ಮುಂದಾಗುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಇಂದು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ನಗರದ ಕೆ.ಕೆ.ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಂಡಿದ್ದ ಕೆ.ಸಿ.ವೇಣುಗೋಪಾಲ್ ಅವರನ್ನು ಶಾಸಕರಾದ ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್ ಸೇರಿದಂತೆ ಅನೇಕ ಶಾಸಕರು ಭೇಟಿ ಮಾಡಿದ್ದಾರೆ. ಈ ವೇಳೆ ತಮಗೆ ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರಂತೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ವೇಣುಗೋಪಾಲ್ ಅವರ ಭೇಟಿಯ ಬಳಿಕ ಮಾತಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಏನನ್ನೂ ಹೇಳಲ್ಲ. ಸಂಪುಟದಲ್ಲಿ ತಮಗೆ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಮತ್ತೆ ಮಂತ್ರಿಯಾಗುತ್ತೇನೆ ಅಂತಾ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾರೆ.

    ಇದೇ ವೇಳೆ ಶಾಸಕ ಬಿ.ಸಿ.ಪಾಟೀಲ್ ಮಾತನಾಡಿ, ಮಂತ್ರಿಗಿರಿ ನೀಡುವಂತೆ ಬೇಡಿಕೆ ಇಟ್ಟಿರುವೆ. ಒಂದು ವೇಳೆ ಸಚಿವ ಸ್ಥಾನ ಸಿಗದಿದ್ದರೆ ಶಾಸಕನಾಗಿಯೇ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಪರಸ್ಪರ ಭೇಟಿ ಮಾಡಿದ ಬಿ.ಸಿ.ಪಾಟೀಲ್ ಹಾಗೂ ಎಂ.ಬಿ.ಪಾಟೀಲ್ ಮಂದಹಾಸದ ನಗೆಬೀರಿ ಮಾತುಕತೆ ನಡೆಸಿದ್ದರು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಕೂಡ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ನಿನ್ನೆಯೂ ಇದರ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೆ. ಎಲ್ಲರೂ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳುತ್ತೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಚೆನ್ನೈ ಬಳಿ ದೇವಸ್ಥಾನಕ್ಕೆ ಹೋಗಿ ಬಂದ್ರು- ಸುಧಾಕರ್ ಪರ ಜಮೀರ್ ಬ್ಯಾಟಿಂಗ್

    ಚೆನ್ನೈ ಬಳಿ ದೇವಸ್ಥಾನಕ್ಕೆ ಹೋಗಿ ಬಂದ್ರು- ಸುಧಾಕರ್ ಪರ ಜಮೀರ್ ಬ್ಯಾಟಿಂಗ್

    ಬೆಂಗಳೂರು: ಶಾಸಕ ಡಾ.ಕೆ ಸುಧಾಕರ್ ಚೆನ್ನೈಗೆ ಹೋಗಿದ್ದು ನಿಜ. ಆದರೆ ಅವರು ಹೊಸೂರಿನ ದೇವಸ್ಥಾನಕ್ಕೆ ಭೇಟಿ ನೀಡಿ, ಶನಿವಾರ ರಾತ್ರಿಯೇ ವಾಪಸ್ ಆಗಿದ್ದಾರೆ. ಅವರು ಪಕ್ಷ ಬಿಡುವ ಮಾತೇ ಇಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಜಮೀರ್ ಅವರು ಸುಧಾಕರ್ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು. ಇಂದು ಬೆಳಗ್ಗೆ ಡಾ.ಕೆ.ಸುಧಾಕರ್ ನಿವಾಸಕ್ಕೆ ಸಚಿವರು ಬಂದು ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸುಧಾಕರ್ ನನ್ನ ಸ್ನೇಹಿತರು. ತಿಂಡಿ ತಿನ್ನಲು ಕರೆದಿದ್ದರು. ಹೀಗಾಗಿ ಬಂದಿದ್ದೇನೆ. ಅವರು ಊಟಕ್ಕೆ ಕರೆದರೂ ಬರುತ್ತೇನೆ ಎಂದರು. ಇದನ್ನು ಓದಿ: ಸಮ್ಮಿಶ್ರ ಸರ್ಕಾರಕ್ಕೀಗ ಸಿದ್ದರಾಮಯ್ಯ ಟ್ರಬಲ್ ಶೂಟರ್!

    ಇದೇ ವೇಳೆ ಸುಧಾಕರ್ ಅವರು ದೇವಸ್ಥಾನಕ್ಕೆ ಹೋಗುವುದೇ ತಪ್ಪಾ ಎಂದು ಪ್ರಶ್ನಿಸಿದ ಅವರು, ಸುಧಾಕರ್ ಅವರು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಅವರು ಚೆನ್ನೈ ಪ್ರವಾಸದ ಕುರಿತು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ಯಾವುದೇ ಶಾಸಕರಿಗೂ ಫೋನ್ ಮಾಡಿ, ಎಲ್ಲಿ ಇದ್ದಾರೆ ಅಂತ ವಿಚಾರಿಸಿಲ್ಲ ಎಂದು ತಿಳಿಸಿದರು.

    ಸಚಿವರ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುಧಾಕರ್ ಅವರು, ನನಗೆ ಬ್ಲಾಕ್‍ಮೇಲ್ ಮಾಡಲು ಗೊತ್ತಿಲ್ಲ. ಗೊತ್ತಿರುವುದು ಇ-ಮೇಲ್ ಮಾತ್ರ. ನಾನು ಯಾರನ್ನೂ ಹೆದರಿಸುತ್ತಿಲ್ಲ. ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬೇರೆ ಪಕ್ಷ ಸೇರುವ ಮಾತೇ ಇಲ್ಲ ಎಂದರು. ಇದನ್ನು ಓದಿ: ನಾನೊಬ್ಬ ಡಾಕ್ಟರ್, ಆಪರೇಷನ್‍ಗೆ ಒಳಗಾಗುವುದಿಲ್ಲ: ಶಾಸಕ ಸುಧಾಕರ್

    ಕೆಲವು ಅಭಿಪ್ರಾಯ ಹಾಗೂ ಭಿನ್ನಾಭಿಪ್ರಾಯಗಳು ರಾಜಕೀಯದಲ್ಲಿ ಇರುವುದು ಸಹಜ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಯಾರು ಉತ್ತಮ ಕೆಲಸ ಮಾಡುತ್ತಾರೋ ಅಂತಹ ನಾಯಕರನ್ನು ಗುರುತಿಸಿ ಸಚಿವ ಸ್ಥಾನ ನೀಡಬೇಕು. ನಮ್ಮ ಜ್ಞಾನ ಹಾಗೂ ಸಾಮಥ್ರ್ಯವನ್ನು ಹೈಕಮಾಂಡ್ ಗುರುತಿಸಿ, ಸಚಿವ ಸ್ಥಾನ ನೀಡಿದರೆ ಸ್ವಾಗತಾರ್ಹ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಬಿಜೆಪಿಯವರು ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದು ನಿಜ- ಶಾಸಕ ಶಿವಳ್ಳಿ

    ಬಿಜೆಪಿಯವರು ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದು ನಿಜ- ಶಾಸಕ ಶಿವಳ್ಳಿ

    ಹುಬ್ಬಳ್ಳಿ: ನನಗೆ ಬಿಜೆಪಿಯವರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದು ನಿಜ. ಅವರು ನೀಡಲು ಮುಂದಾದ ಎಲ್ಲ ಭರವಸೆಗಳನ್ನು ನಾನು ತಳ್ಳಿ ಹಾಕಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಸಿ.ಎಸ್ ಶಿವಳ್ಳಿ ಹೇಳಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬಿಜೆಪಿಯವರು ಯಾವ ಭರವಸೆ ನೀಡಿದ್ದರು ಎನ್ನುವುದನ್ನು ನಾನು ಹೇಳುವುದಿಲ್ಲ. ನನಗೆ ರಾಜಕೀಯ ಜೀವನ ಕೊಟ್ಟಿದ್ದು ಕಾಂಗ್ರೆಸ್. ಹೀಗಾಗಿ ಪಕ್ಷವನ್ನು ಬಿಟ್ಟು ಹೋಗುವ ವಿಚಾರವನ್ನು ಎಂದಿಗೂ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಉತ್ತರ ಕರ್ನಾಟಕ ಭಾಗದಲ್ಲಿ ನಾನು ಹಿಂದುಳಿದ ವರ್ಗದ ಹಿರಿಯ ಕಾಂಗ್ರೆಸ್ ಶಾಸಕನಾಗಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವೆ. ಈ ಕುರಿತು ಪಕ್ಷದ ನಾಯಕರಿಗೆ ಹಾಗೂ ಹೈಕಮಾಂಡ್‍ಗೆ ಒತ್ತಡ ಹೇರಿದ್ದು ನಿಜ. ಸಚಿವ ಸ್ಥಾನ ನೀಡಲಿಲ್ಲವೆಂದು ಪಕ್ಷ ಬಿಟ್ಟು ಹೋಗುವ ನಿರ್ಧಾರ ಕೈಗೊಂಡಿಲ್ಲ. ವಯಸ್ಸಿದೆ, ಅವಕಾಶಗಳಿವೆ ಮುಂದಿನ ಅವಧಿಯಲ್ಲಿ ಸಚಿವ ಸ್ಥಾನ ಸಿಗುತ್ತದೆ ಎನ್ನುವ ಭರವಸೆ ಇದೆ ಎಂದು ಶಾಸಕರು ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಒಂದು ವೇಳೆ ಸರ್ಕಾರ ಬೀಳಿಸಬೇಕು ಅಂದರೆ 14 ಜನ ಶಾಸಕರು ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿ, ಜಯಗಳಿಸಿ ಬರುವುದು ಅಸಾಧ್ಯ. ಹೀಗಾಗಿ ಯಾರೊಬ್ಬರೂ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv