Tag: Minister Zameer ahmed

  • ಸರ್ಕಾರ ಉರುಳೋ ಸಮಯದಲ್ಲಿ ಕಡತ ವಿಲೇವಾರಿ ಬಲು ಜೋರು?

    ಸರ್ಕಾರ ಉರುಳೋ ಸಮಯದಲ್ಲಿ ಕಡತ ವಿಲೇವಾರಿ ಬಲು ಜೋರು?

    – ಬಿಜೆಪಿಯಿಂದ ಗಂಭೀರ ಆರೋಪ
    – ರಾಜ್ಯಪಾಲರ ಆದೇಶದ ನಡುವೆಯೂ ಓವರ್ ಟೈಂ ಕೆಲಸ

    ಬೆಂಗಳೂರು: ಮೈತ್ರಿ ಸರ್ಕಾರ ಬಹುಮತದ ಸಾಬೀತು ಪಡಿಸುವ ಒತ್ತಡದಲ್ಲಿ ಸಿಲುಕಿದ್ದ ಸಮಯದಲ್ಲಿ ಮೈತ್ರಿ ಸರ್ಕಾರದ ಸಚಿವರು ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

    ಇಂದು ವಿಧಾನಸೌಧದಲ್ಲಿ ಸಚಿವ ಜಮೀರ್ ಅವರು ತಮ್ಮ ಖಾತೆಗೆ ಸಂಬಂಧಿಸಿದ ಫೈಲ್ ಕ್ಲೀಯರ್ ಮಾಡುವ ಕಾರ್ಯದಲ್ಲಿ ಮಗ್ನರಾಗಿದ್ದರು. ಎರಡು ಮೂರು ಬಾರಿ ಯುಟಿ ಖಾದರ್ ಅವರ ಬಳಿ ಬಂದು ಚರ್ಚೆ ನಡೆಸಿದ್ದು ಕಂಡು ಬಂತು.

    ಇದರ ಬೆನ್ನಲ್ಲೇ ಬಿಎಸ್‍ವೈ ನಿವಾಸ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸವರಾಜ್ ಬೊಮ್ಮಾಯಿ ಅವರು, ಗುರುವಾರ ಬಹುಮತ ಸಾಬೀತು ಪಡಿಸಬೇಕಾದ ದಿನಾಂಕ ನಿಗದಿ ಮಾಡಿರುವುದಿಂದ ಮೈತ್ರಿ ಸರ್ಕಾರದ ಎಲ್ಲ ಸಚಿವರು ಕೂಡ ಓವರ್ ಟೈಂ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಬಡ್ತಿ, ನೇಮಕಾತಿ, ವರ್ಗಾವಣೆ ಸೇರಿದಂತೆ ಅನುದಾನ ಬಿಡುಗಡೆ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಕೂಡಲೇ ಸರ್ಕಾರ ಕಾರ್ಯದರ್ಶಿಗಳು ಇದಕ್ಕೆ ಬ್ರೇಕ್ ಹಾಕಬೇಕು. ಯಾವುದೇ ರೀತಿಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ರಾಜ್ಯಪಾಲರ ಆದೇಶದ ನಡುವೆಯೂ ಕೂಡ ಓವರ್ ಟೈಂ ಕೆಲಸ ಮಾಡಿ ಕ್ಲಿಯರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಈಗಾಗಲೇ ಈ ಆದೇಶ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ನೀಡಿದ್ದಾರೆ. ಸಚಿವರ ಈ ನಡೆ ನೋಡಿದರೆ ಸರ್ಕಾರ ಉರುಳುವುದು ಖಚಿತವಾದಂತೆ ಅವರಿಗೆ ಕಾಣುತ್ತಿದೆ. ಆದ್ದರಿಂದಲೇ ಹಳೆಯ ದಿನಾಂಕವನ್ನು ಹಾಕಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಆ ಮೂಲಕ ಭ್ರಷ್ಟಾಚಾರಕ್ಕೆ ಮೈತ್ರಿ ಸರ್ಕಾರ ಸಚಿವರು ಮುಂದಾಗಿದ್ದಾರೆ ಎಂದು ದೂರಿದರು.

    ಸರ್ಕಾರ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ರಾಜ್ಯಪಾಲರು ಆದೇಶ ನೀಡಿದ್ದರೂ ವಿಶೇಷ ಸರ್ಕಾರಿ ವಕೀಲರಾಗಿ ಬಿ.ಎನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಹೊರಡಿಸಿದೆ.

  • ಲೋಕ ಚುನಾವಣೆಯಲ್ಲಿ ಮೈತ್ರಿ ಬೇಡವಾಗಿತ್ತು: ಸಚಿವ ಜಮೀರ್

    ಲೋಕ ಚುನಾವಣೆಯಲ್ಲಿ ಮೈತ್ರಿ ಬೇಡವಾಗಿತ್ತು: ಸಚಿವ ಜಮೀರ್

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು. ಇಂತಹ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

    ಲೋಕ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ರೀತಿಯ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ವೇಳೆ ಮೈತ್ರಿ ಮಾಡಬಾರದಿತ್ತು. ಈ ಅಭಿಪ್ರಾಯ ವೈಯಕ್ತಿಕವಾದ ಅಭಿಪ್ರಾಯ ಅಷ್ಟೇ. ಈಗ ಜನರು ತೀರ್ಪು ನೀಡಿದ್ದು, ಅವರ ನಿರ್ಧಾರವನ್ನು ಗೌರವಿಸಬೇಕಿದೆ ಎಂದರು.

    ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಅವರ ಗೆಲುವು ಸುಲಭವಾಗಿರಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಮೈತ್ರಿ ಇಲ್ಲದಿದ್ದರೆ ಸುಮಲತಾ ಅವರಿಂದ ಸುಲಭವಾಗಿ ಗೆಲ್ಲುವ ಅವಕಾಶ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮುಂದುವರಿಸಿದೆ ಎಂದು ಆರೋಪಿಸಿದರು. ಚುನಾವಣೆಯಲ್ಲಿ ಫಲಿತಾಂಶ ಮೈತ್ರಿ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. 4 ವರ್ಷ ಸರ್ಕಾರ ಮುಂದುವರಿಯುತ್ತದೆ ಎಂದರು.

    ಇದೇ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಮೈತ್ರಿ ಸರ್ಕಾರದಿಂದಲೇ ಈ ಫಲಿತಾಂಶ ಬಂದಿದೆ ಎನ್ನುವುದು ತಪ್ಪು. ಕರ್ನಾಟಕದಲ್ಲಿ ಮೈತ್ರಿಯಿಂದ ಈ ಫಲಿತಾಂಶ ಬರಲು ಮೈತ್ರಿ ಕಾರಣ ಎಂದರೆ ಬೇರೆ ರಾಜ್ಯಗಳಲ್ಲಿ ಉತ್ತಮ ಫಲಿತಾಂಶ ಬರಬೇಕಿತ್ತು. ಆದರೆ ಅಲ್ಲಿಯೂ ಭಿನ್ನ ಫಲಿತಾಂಶ ಬಂದಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಮುಂದಿನ ಹೋರಾಟದ ಹಾದಿಯನ್ನ ರೂಪಿಸುತ್ತೇವೆ ಎಂದರು.

  • ಕೊಚ್ಚೆಗೆ ಕಲ್ಲು ಹಾಕಿದ್ರೆ ನಮ್ಮ ಮೇಲೆ ಹಾರುತ್ತೆ – ಈಶ್ವರಪ್ಪ ವಿರುದ್ಧ ಜಮೀರ್ ವಾಗ್ದಾಳಿ

    ಕೊಚ್ಚೆಗೆ ಕಲ್ಲು ಹಾಕಿದ್ರೆ ನಮ್ಮ ಮೇಲೆ ಹಾರುತ್ತೆ – ಈಶ್ವರಪ್ಪ ವಿರುದ್ಧ ಜಮೀರ್ ವಾಗ್ದಾಳಿ

    ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕರಾಗಿ ಈಶ್ವರಪ್ಪ ಅವರಿಗೆ ಮಾತನಾಡಲು ಬರುವುದಿಲ್ಲ. ಕೊಚ್ಚೆಗೆ ಕಲ್ಲು ಹಾಕಿದರೆ ನಮ್ಮ ಮೇಲೆ ಹಾರುತ್ತೆ. ಇದರಂತೆ ಅವರ ಮಾತಿಗೆ ಪ್ರಾಮುಖ್ಯತೆ ಕೊಡಬಾರದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ಈಶ್ವರಪ್ಪ ಮಾತಿಗೆ ಆದ್ಯತೆ ಕೊಡುವ ಅಗತ್ಯವಿಲ್ಲ. ಇದುವರೆಗೂ ಈಶ್ವರಪ್ಪ ಯಾರ ಬಗ್ಗೆಯಾದರು ಉತ್ತಮ ಮಾತು ಹೇಳಿದ್ದರಾ? ಕಳ್ಳ, ಸುಳ್ಳ ಅಂತ ಹೇಳಲು ಅವನು ಯಾರು? ಅವನಿಗೆ ಕಳ್ಳತನ ಮಾಡಿ ಅಭ್ಯಾಸವಿರಬೇಕು. ಎಲ್ಲರಿಗೂ ಕಳ್ಳರು ಎನ್ನುತ್ತಿದ್ದಾನೆ. ಈಶ್ವರಪ್ಪ ಮನುಷ್ಯನಾ ಎಂದು ಜಮೀರ್ ಪ್ರಶ್ನೆ ಮಾಡಿ ಏಕವಚನದಲ್ಲೇ ತಿರುಗೇಟು ನೀಡಿದರು.

    ಸಿದ್ದರಾಮಯ್ಯಗೆ ಜೈಕಾರ: ನಾನು ಜೆಡಿಎಸ್ ಪಕ್ಷದಲ್ಲಿ ಇದ್ದಾಗ ಪಕ್ಷಕ್ಕೆ ನಿಷ್ಠೆನಾಗಿದ್ದೆ. ಈಗ ಕಾಂಗ್ರೆಸ್ ನಲ್ಲಿ ಇದ್ದೇನೆ ಸಿದ್ದರಾಮಯ್ಯ ನಮ್ಮ ನಾಯಕ ಎಂದು ಒಪ್ಪಿಕೊಂಡಿದ್ದು, ಪಕ್ಷಕ್ಕೆ ನಿಷ್ಠೆಯಾಗಿರುತ್ತೇನೆ. ಲೋಕಸಭಾ ಚುನಾವಣೆ ನಂತರ ಸರ್ಕಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಬಿಜೆಪಿ ಸರ್ಕಾರ ರಚನೆ ಮಾಡಿದರೆ ಬಿಎಸ್ ವೈ ಮನೆಯಲ್ಲಿ ವಾಚ್ ಮೆನ್ ಕೆಲಸ ಮಾಡಲು ಸಿದ್ಧ ಎಂಬ ಮಾತಿಗೆ ನಾನು ಈಗಲೂ ಬದ್ಧ. ಆದರೆ ನಾನು ಈಶ್ವರಪ್ಪ ಮುಖ ನೋಡಲು ನಾನು ಸಿದ್ಧವಿಲ್ಲ. ಏಕೆಂದರೆ ಈಶ್ವರಪ್ಪ ಸಿಎಂ ಆಗೋದು ಕನಸಿನ ಮಾತು ಎಂದರು.

    ಕಾಂಗ್ರೆಸ್ ನಾಯಕರ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ್ದ ಈಶ್ವರಪ್ಪ ಅವರು, ಇಷ್ಟು ದಿನ ಕಾಂಗ್ರೆಸ್ ನಾಯಕರು ಬಾಯಿಯೇ ಬಂದಂತೆ ಮಾತನಾಡುತ್ತಿದ್ದರು. ಆದರೆ ವಿಶ್ವನಾಥ್ ಅವರು ಹೇಳಿಕೆ ನೀಡಿದ ಬಳಿಕ ಈಗ ನಾವು ಮಾತನಾಡುವುದು ಬೇಡ ನೀವು ಮಾತನಾಡ ಬೇಡಿ ಎಂದು ಹೇಳಿದ್ದಾರೆ. ಆದ್ದರಿಂದಲೇ ಇಬ್ಬರು ಸುಮ್ಮನಿದ್ದಾರೆ. ಆದರೆ ಲೋಕಸಭಾ ಚುನಾವಣೆ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ. ಮಾಧ್ಯಮಗಳು ಕದನ ವಿರಾಮ ಎಂದು ಹೇಳುತ್ತಿದ್ದು, ಚುನಾವಣೆ ಬಳಿಕ ಈ ಕದನ ಮತ್ತೆ ಮುಂದುವರಿಯುತ್ತದೆ. ಆದರೆ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯುದಿಲ್ಲ ಎಂದು ಹೇಳಿದ್ದರು.

  • ಸಚಿವ ಜಮೀರ್ ತಲೆಕೆಟ್ಟಿದೆ, ನಿಮ್ಹಾನ್ಸ್ ಆಸ್ಪತ್ರೆ ಸೇರಿಸಬೇಕು: ಕರಂದ್ಲಾಜೆ ಕಿಡಿ

    ಸಚಿವ ಜಮೀರ್ ತಲೆಕೆಟ್ಟಿದೆ, ನಿಮ್ಹಾನ್ಸ್ ಆಸ್ಪತ್ರೆ ಸೇರಿಸಬೇಕು: ಕರಂದ್ಲಾಜೆ ಕಿಡಿ

    – ಸಚಿವರ ಕಚ್ಚಾಟದಿಂದಲೇ ಸಿಎಂ ರೆಸಾರ್ಟಿಗೆ ಹೋಗಿದ್ದಾರೆ

    ಯಾದಗಿರಿ: ಸಚಿವ ಜಮೀರ್ ಅಹ್ಮದ್ ಅವರ ತಲೆಕೆಟ್ಟಿದೆ. ಹೀಗಾಗಿ ಅವರನ್ನು ನಿಮ್ಹಾನ್ಸ್ ಆಸ್ಪತ್ರೆ ಸೇರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಚಿಂಚೋಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದರೆ ತಲೆ ಕಡಿದುಕೊಳ್ಳುತ್ತೇನೆ ಅಂತ ಈ ಹಿಂದೆ ಸಚಿವ ಜಮೀರ್ ಅಹ್ಮದ್ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರ ಸರ್ಕಾರದಲ್ಲಿಯೇ ಸಚಿವರಾಗಿದ್ದಾರೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಮನೆ ಕಾಯುತ್ತೇನೆ ಎನ್ನುತ್ತಿದ್ದಾರೆ. ಅವರ ತಲೆ ಆಗಾಗ ಕೆಡುತ್ತಿರುತ್ತದೆ. ಸಚಿವರ ಮಾತಿಗೆ ಬೆಲೆ ಇಲ್ಲ. ಜಮೀರ್ ಅಹ್ಮದ್ ಅವರು ಒಮ್ಮೆ ತಲೆ ಬೋಳಿಸಿಕೊಳ್ಳುತ್ತೇನೆ ಎನ್ನುತ್ತಾರೆ. ಮತ್ತೊಮ್ಮೆ ತಲೆ ಕಡಿದು ಟೇಬಲ್ ಮೇಲೆ ಇಡುತ್ತೇನೆ ಅಂತ ಹೇಳಿದ್ದರು ಎಂದು ತಿರುಗೇಟು ನೀಡಿದರು.

    ಮೈತ್ರಿಯ ಆಂತರಿಕ ಜಗಳ, ಕಚ್ಚಾಟದಿಂದಲೇ ಸಿಎಂ ಕುಮಾರಸ್ವಾಮಿ ಅವರು ರೆಸಾರ್ಟಿಗೆ ಹೋಗಿದ್ದಾರೆ. ಅವರ ಪಾಪಕ್ಕೆ ಜನರು ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

    ಕಳೆದ ಒಂದು ವರ್ಷದಿಂದ ಯಾವ ಸಚಿವರು ಇತ್ತ ಕಡೆ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಐತಿಹಾಸಿಕ ವಿಧಾನಸೌಧ ಬಿಟ್ಟು ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಆಡಳಿತ ನಡೆಸುತ್ತಿದ್ದಾರೆ. ಈ ವೇದಿಕೆಯಲ್ಲಿ ಯಾರು, ಏನು ಮಾತನಾಡುತ್ತಾರೆಂದು ಸಿಎಂಗೆ ತಿಳಿಸಲು ಪೊಲೀಸ್ ಮತ್ತು ಗುಪ್ತಚರ ಇಲಾಖೆಯವರು ಇಲ್ಲಿಗೆ ಬಂದಿದ್ದಾರೆ. ರಾಜ್ಯ ಸರ್ಕಾರ ರೆಸಾರ್ಟಿನಲ್ಲಿ ಮಲಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದರು.

    ಹಿಂದುಳಿದ ವರ್ಗಗಳ ನಾಯಕ ನಾನೇ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಅವರು ತಮ್ಮ ಕುರುಬ ಸಮಾಜಕ್ಕೆ ಏನು ಮಾಡಿದ್ದಾರೆ? ಅನ್ನ ಭಾಗ್ಯ ಯೋಜನೆಗಾಗಿ ಕೇಂದ್ರ ಬಿಜೆಪಿ ಸರ್ಕಾರ ಸಹಾಯ ಮಾಡುತ್ತಿದೆ. ಇದನ್ನು ಯಾವ ಕಾಂಗ್ರೆಸ್ ನಾಯಕರೂ ಹೇಳುವುದಿಲ್ಲ. ಕಾಂಗ್ರೆಸ್ ಚೆಲಾಗಳು, ಪುಡಾರಿಗಳು ಅನ್ನಭಾಗ್ಯ ಅಕ್ಕಿಗಳನ್ನು ಪಕ್ಕದ ರಾಜ್ಯದ ಅಮ್ಮನ ಇಡ್ಲಿಗೆ ಮಾರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

  • ಜಮೀರ್ ಅಹ್ಮದ್ ಕೆಲಸ ಮಾಡೋ ವ್ಯಕ್ತಿ, ಅದಕ್ಕೆ ಮಂತ್ರಿ ಮಾಡಿದೆ: ಸಿದ್ದರಾಮಯ್ಯ

    ಜಮೀರ್ ಅಹ್ಮದ್ ಕೆಲಸ ಮಾಡೋ ವ್ಯಕ್ತಿ, ಅದಕ್ಕೆ ಮಂತ್ರಿ ಮಾಡಿದೆ: ಸಿದ್ದರಾಮಯ್ಯ

    – ಎಲ್ಲರ ಜೊತೆ ಬೆರೆತು ಕೆಲಸ ಮಾಡುವ ಹೃದಯವಂತ ಜಮೀರ್
    – ಮುಸ್ಲಿಂರನ್ನ, ಕ್ರಿಶ್ಚಿಯನ್‍ರನ್ನು ಕಡೆಗಣಿಸಿದ ಬಿಜೆಪಿಯಿಂದ ‘ಸಬ್ ಕಾ ವಿಕಾಸ್’ ಜಪ

    ಬಾಗಲಕೋಟೆ: ಸಚಿವ ಜಮೀರ್ ಅಹ್ಮದ್ ಅವರನ್ನು ಮಂತ್ರಿ ಮಾಡಲು ಬೇರೆಯವರು ಅಸಮಾಧಾನ ಆಗುತ್ತಾರೆಂದು ಕೆಲವರು ಹೇಳಿದರು. ಆದರೂ ಅವರನ್ನೇ ಸಚಿವರನ್ನಾಗಿ ಮಾಡಿದೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಆಹಾರ ಹಾಗೂ ನಾಗರಿಕ ಸಬರಾಜು ಸಚಿವರ ಪರ ಬ್ಯಾಟ್ ಬೀಸಿದ್ದಾರೆ.

    ಬಾದಾಮಿಯಲ್ಲಿ ನಡೆದ ಅಂಜುಮ್ ಎ ಇಸ್ಲಾಂ ಸಂಸ್ಥೆಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಾಜಿ ಸಿಎಂ, ಸಚಿವ ಜಮೀರ್ ಅಹ್ಮದ್ ಎಲ್ಲರ ಜೊತೆ ಬೆರೆತು ಕೆಲಸ ಮಾಡುವ ಹೃದಯವಂತ. ಜಮೀರ್ ಅವರೊಂದಿಗೆ ಒಟ್ಟು ಏಳು ಜನರು ಕಾಂಗ್ರೆಸ್ ಸೇರಿದ್ದರು. ಎಲ್ಲರಿಗೂ ವಿಧಾನಸಭಾ ಚುನಾವಣೆ ಟಿಕೆಟ್ ಕೊಟ್ಟಿದ್ದೆ. ಅವರಲ್ಲಿ ಮೂವರು ಗೆದ್ದರು. ಜಮೀರ್ ಅಹ್ಮದ್ ಅವರು ಮಂತ್ರಿ ಮಾಡುವಂತೆ ಕೇಳಿಕೊಂಡು ಬರಲಿಲ್ಲ. ಆದರೂ ಕಾಂಗ್ರೆಸ್ ಪಕ್ಷ ಅವರನ್ನ ಮಂತ್ರಿ ಮಾಡಿದೆ ಎಂದು ಸಚಿವರನ್ನು ಹೊಗಳಿದರು. ಇದನ್ನು ಓದಿ: ಪುಟ್ಟರಂಗಶೆಟ್ಟಿ ಹ್ಯಾಟ್ರಿಕ್ ಹೀರೋ: ಸಿದ್ದರಾಮಯ್ಯ

    ನಾನು ಹಾಗೂ ಸಚಿವ ಜಮೀರ್ ಅಹ್ಮದ್ ಎಲ್ಲ ವರ್ಗದ ಜನರ ಪರವಾಗಿದ್ದೇವೆ. ವಿಶೇಷವಾಗಿ ಎಲ್ಲ ಜಾತಿಯ ಬಡ ಜನತೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ. ನಾನು ಅಕ್ಕಿ, ಹಾಲು ಕೊಟ್ಟೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನಿಧಿ ನೀಡಿರುವೆ ಎಂದ ಅವರು, ಇಲ್ಲಿ ಯಾರು ಯಾರ ಗುಲಾಮರಲ್ಲ. ಅಧಿಕಾರ ಸಿಕ್ಕಾಗ ಜನರ ಸೇವೆ ಮಾಡುವುದನ್ನು ಕಲಿಯಬೇಕು. ಇದು ನಮ್ಮ ಕರ್ತವ್ಯ ಕೂಡ ಎಂದು ಮಾಜಿ ಸಿಎಂ ಹೇಳಿದರು.

    ದೇಶದ ಶೇ. 14 ಮುಸ್ಲಿಮರು, ಶೇ. 2 ರಷ್ಟು ಕ್ರಿಶ್ಚಿಯನ್ ರನ್ನ ಬಿಟ್ಟು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಬಿಜೆಪಿಯವರು ಹೇಳುತ್ತಾರೆ. ಇದು ಯಾವ ರೀತಿಯ ಸಬ್ ಕಾ ವಿಕಾಸ್ ರೀ ಮಿಸ್ಟರ್ ಮೋದಿ ಅವರೇ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

    ನನ್ನ ಅಧಿಕಾರ ಅವಧಿಯಲ್ಲಿ ಅನೇಕ ಜಯಂತಿಗಳನ್ನು ಜಾರಿಗೆ ತಂದಿದ್ದೇನೆ. ಆದರೆ ಟಿಪ್ಪು ಜಯಂತಿಗೆ ಕೆಲವರು ವಿರೋಧ ಮಾಡಿದರು. ಅವರು ಆರೋಪಿಸುವಂತೆ ಟಿಪ್ಪು ಮತಾಂದನಾಗಿಲ್ಲ. ಟಿಪ್ಪು ದೇಶಪ್ರೇಮಿ, ಸ್ವತಂತ್ರ ಪ್ರೇಮಿ. ಆದರೂ ಅವರ ಬಗ್ಗೆ ಸುಮ್ನೆ ಅಪಪ್ರಚಾರ ಮಾಡಿದರು. ಬಿಜೆಪಿಯವರು ಡೋಂಗಿಗಳು ಟಿಪ್ಪು ಜಯಂತಿಗೆ ಬಿಡಲ್ಲ ಎನ್ನುತ್ತಾರೆ. ಅದೇನೇ ಆಗಲಿ ಎಲ್ಲ ಜಯಂತಿ ರೀತಿ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ಸವಾಲು ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶಾಸಕ ಬಿಸಿ ಪಾಟೀಲ್‍ಗೆ ಸಿಹಿ ಸುದ್ದಿಕೊಟ್ಟ ಜಮೀರ್ ಅಹ್ಮದ್!

    ಶಾಸಕ ಬಿಸಿ ಪಾಟೀಲ್‍ಗೆ ಸಿಹಿ ಸುದ್ದಿಕೊಟ್ಟ ಜಮೀರ್ ಅಹ್ಮದ್!

    ಹಾವೇರಿ: ಸಮ್ಮಿಶ್ರ ಸರ್ಕಾರದ ರಚನೆಯಾದ ಬಳಿಕ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ವೇಳೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಬಿಸಿ ಪಾಟೀಲ್ ನನಗಿಂತ ಹಿರಿಯರು. ನಾನು ಅವರನ್ನು ಮಂತ್ರಿ ಮಾಡಬೇಕೆಂದು ಮುಖಂಡರಿಗೆ ತಿಳಿಸಿದ್ದೇನೆ. ಖಂಡಿತ ಅವರು ಈ ಬಾರಿ ಸಚಿವರಾಗುತ್ತಾರೆ. ಮುಂದಿನ ಡಿಸೆಂಬರ್ 3ರ ಒಳಗೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಶಾಸಕ ಬಿಸಿ ಪಾಟೀಲ್, ನಾನು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಯಾವುದಕ್ಕೂ ಈಗಲೇ ನಿರ್ಧಾರ ಕೈಗೊಳ್ಳುವುದಿಲ್ಲ. ಕಳೆದ 4, 5 ತಿಂಗಳಿನಿಂದ ಸಚಿವ ಸ್ಥಾನ ಬಗ್ಗೆ ಕಾಯುತ್ತಿದ್ದೇನೆ. ಇನ್ನು ಹತ್ತು ದಿನ ಕಾಯುವುದರಲ್ಲಿ ಏನು ಆಗುವುದಿಲ್ಲ. ಇಲ್ಲವಾದರೆ ಶಾಸಕನಾಗಿಯೇ ಇರುತ್ತೇನೆ. ಸಚಿವನಾದರೆ ತಾಲೂಕಿನ, ಜಿಲ್ಲೆಯ ಸೇವೆ ಮಾಡಲು ಸಹಕಾರ ಆಗಲಿದೆ. ಶೀಘ್ರವೇ ಸಂಪುಟ ರಚನೆ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿ ಆಗದಿದ್ದರೆ ಇನ್ನೊಂದು ದಿನಾಂಕ ಕೊಡಬಹುದು. ನಾನು ಆಶಾವಾದಿಯಾಗಿದ್ದು, ತಾಳಿದವನು ಬಾಳಿಯಾನು ಎಂಬಂತೆ ನಾನು ಶಾಸನಾಗಿಯೇ ಇರುತ್ತೇನೆ ಎಂದರು.

    ಇದಕ್ಕೂ ಮುನ್ನ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಆದರೆ ಪಂಚರಾಜ್ಯಗಳ ಚುನಾವಣೆಯ ಪ್ರವಾಸದಲ್ಲಿ ರಾಹುಲ್ ಗಾಂಧಿ ಅವರು ನಿರತರಾಗಿವುದರಿಂದ ಕಾರಣ ಸಚಿವ ಸಂಪುಟ ಸಭೆ ತಡವಾಗಲಿದೆ. ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಮಾಡಿದರೆ ಉತ್ತಮವಾಗಿರಲಿದೆ ಎಂದು ಹೈಕಮಾಂಡ್‍ಗೆ ಮನವಿ ಮಾಡಿದ್ದೇವೆ. ಅವರು ಯಾವ ರೀತಿ ನಮಗೇ ಸೂಚನೆ ನೀಡುತ್ತಾರೆ ಎಂಬುವುದನ್ನು ಕಾದು ನೋಡಬೇಕು ಎಂದರು. ಡಿಸಿಎಂ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ ಶಾಸಕ ಬಿಸಿ ಪಾಟೇಲ್ ಈ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಬಿಎಸ್‍ವೈಗೆ ಅಧಿಕಾರ ಸಿಕ್ಕಿಲ್ಲ: ಜಮೀರ್ ಅಹ್ಮದ್

    ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಬಿಎಸ್‍ವೈಗೆ ಅಧಿಕಾರ ಸಿಕ್ಕಿಲ್ಲ: ಜಮೀರ್ ಅಹ್ಮದ್

    ಬೆಂಗಳೂರು: ಟಿಪ್ಪು ಜಯಂತಿಯನ್ನು ವಿರೋಧಿಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಬಿಜೆಪಿ 2013ರಲ್ಲಿ ಟಿಪ್ಪು ಜಯಂತಿ ಆಚರಿಸಿಲ್ಲ. ಹೀಗಾಗಿಯೇ ಅವರು ಅಧಿಕಾರಕ್ಕೆ ಬರಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ 3 ವರ್ಷಗಳ ಕಾಲ ಆಚರಣೆ ಮಾಡಿದರು. ಅದೇ ಕಾರಣಕ್ಕೆ ಅವರು ಪದೇ ಪದೇ ಗೆಲುವು ಸಾಧಿಸುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

    ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದಾಗ ಬಿ.ಎಸ್.ಯಡಿಯೂರಪ್ಪ ಟಿಪ್ಪು ಜಯಂತಿ ಮಾಡಿದ್ದಾರೆ. ಅಬ್ಬಾಬ್ಬಾ ಏನದು ಟಿಪ್ಪು ಕತ್ತಿ, ಟೋಪಿ ವೇಷ, ಮುಸ್ಲಿಂ ಬಂಧು ಅಂತ ನಾಟಕ ಮಾಡಿದರು. ನೋಡಿ… ನೋಡಿ… ಬಿಜೆಪಿಯವರ ಟಿಪ್ಪು ಜಯಂತಿ ಆಚರಣೆ ಡ್ರಾಮ ಎಂದು ವ್ಯಂಗ್ಯವಾಡಿದ ಸಚಿವರು, ತಮ್ಮ ಮೊಬೈಲ್ ತೆಗೆದು ವಿಡಿಯೋ ತೋರಿಸಿದರು.

    ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಶ್ರೀರಾಮುಲು, ಆರ್.ಅಶೋಕ್, ಪಿ.ಸಿ.ಮೋಹನ್, ಸಿ.ಪಿ.ಯೋಗೇಶ್ವರ್ ಟಿಪ್ಪು ಜಯಂತಿ ಆಚರಿಸಿದ ವಿಡಿಯೋ ತೋರಿಸಿದ ಸಚಿವ ಜಮೀರ್ ಅಹ್ಮದ್ ಬಿಜೆಪಿ ನಾಯಕರ ಕಾಲೆಳೆದರು.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪರ ಬ್ಯಾಟ್ ಬೀಸಿದ ಸಚಿವ ಜಮೀರ್ ಅಹ್ಮದ್, ವಾರ್ತಾ ಇಲಾಖೆ ಆಹ್ವಾನ ಪತ್ರಿಕೆ ನೋಡಿ ಶಾಕ್ ಆಗಿತ್ತು. ಆಗ ನಿರ್ದೇಶಕರು ಕೇಳಿದರೆ ಸಿಎಂ ಕಚೇರಿಯಿಂದ ಹೆಸರು ಬೇಡ ಅಂತ ಅಂದಿದ್ದರು ಎನ್ನುವ ಮಾಹಿತಿ ಕೊಟ್ಟರು. ಹೀಗಾಗಿ ನಾನೇ ಖುದ್ದು ಕುಮಾರಸ್ವಾಮಿ ಅವರಿಗೆ ನವೆಂಬರ್ 3 ರಂದು ಕರೆ ಮಾಡಿ ವಿಚಾರಿಸಿದೆ. ಆಗ ಅವರು ಆರೋಗ್ಯ ವಿಚಾರವಾಗಿ 3 ದಿನಗಳ ಕಾಲ ಬೇರೆ ಊರಿಗೆ ಹೋಗುತ್ತಿದ್ದಾರೆ ಅಂತ ತಿಳಿಸಿದರು ಎಂದು ಸ್ಪಷ್ಟನೆ ನೀಡಿದ ಸಚಿವರು, ಇದು ಕಾಂಗ್ರೆಸ್ ಕಾರ್ಯಕ್ರಮವಲ್ಲ. ಟಿಪ್ಪು ಜಯಂತಿ ಆಚರಣೆ ಅಷ್ಟೇ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶ್ರೀರಾಮುಲು ಮತ್ತೆ ಬಿಜೆಪಿಗೆ ಹೋಗ್ತಾರೆ ಅಂದಿದ್ರೆ ಅವ್ರ ಪರ ಪ್ರಚಾರ ಮಾಡ್ತಿರಲಿಲ್ಲ: ಸಚಿವ ಜಮೀರ್ ಅಹ್ಮದ್

    ಶ್ರೀರಾಮುಲು ಮತ್ತೆ ಬಿಜೆಪಿಗೆ ಹೋಗ್ತಾರೆ ಅಂದಿದ್ರೆ ಅವ್ರ ಪರ ಪ್ರಚಾರ ಮಾಡ್ತಿರಲಿಲ್ಲ: ಸಚಿವ ಜಮೀರ್ ಅಹ್ಮದ್

    ಬಳ್ಳಾರಿ: ಶಾಸಕ ಶ್ರೀರಾಮುಲು ಮತ್ತೆ ಬಿಜೆಪಿಗೆ ಹೋಗುತ್ತಾರೆ ಅಂತಾ ಗೊತ್ತಿದ್ದರೆ, ನಮ್ಮ ಅಪ್ಪನಾಣೆ ನಾನು 2011ರ ಉಪಚುನಾವಣೆಯಲ್ಲಿ ಅವರ ಪರ ಪ್ರಚಾರ ಮಾಡುತ್ತಿರಲಿಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

    ಜಿಲ್ಲೆಯ ಕೌಲಬಜಾರನಲ್ಲಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕೋಮುವಾದಿ ಪಕ್ಷಕ್ಕೆ ಮತ್ತೆಂದು ಹೋಗುವುದಿಲ್ಲ ಅಂತಾ ಶಾಸಕ ಶ್ರೀರಾಮುಲು ಹೇಳಿದ್ದರು. ಹೀಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಲಹೆಯಂತೆ 2011ರ ಉಪಚುನಾವಣೆಯಲ್ಲಿ ಶ್ರೀರಾಮಲು ಪರ ಪ್ರಚಾರ ಮಾಡಿದ್ದೆ. ಆದರೆ ಶ್ರೀರಾಮುಲು ಮಾತಿಗೆ ತಕ್ಕಂತೆ ನಡೆದುಕೊಳ್ಳಲಿಲ್ಲ. ಅವರೊಬ್ಬ ಸುಳ್ಳು ಹೇಳುವ ರಾಜಕಾರಣಿ ಎಂದು ದೂರಿದರು.

    ಒಂದು ವೇಳೆ ಶ್ರೀರಾಮುಲು ಮತ್ತೆ ಬಿಜೆಪಿ ಸೇರುತ್ತಾರೆ ಅಂತಾ ಅವತ್ತೇ ಗೊತ್ತಾಗಿದ್ದರೆ ಪ್ರಚಾರಕ್ಕೆ ಹೋಗುತ್ತಿರಲಿಲ್ಲ. ಅವರ ವಿರುದ್ಧ ಪ್ರಚಾರ ಮಾಡುವುದಕ್ಕೆ ನನಗೆ ಈಗ ಅವಕಾಶ ಕೂಡಿ ಬಂದಿದೆ. ಅವಕಾಶವಾದಿ ರಾಜಕಾರಣ ಮಾಡುವವರನ್ನು ಯಾರೂ ನಂಬುವುದಿಲ್ಲ. ಶ್ರೀರಾಮುಲು ಅವರ ಬಗ್ಗೆ ನಂಬಿಕೆ ಕಳೆದಕೊಂಡಿದ್ದೇವೆ ಅಂತಾ ಜಿಲ್ಲೆಯ ಜನರೇ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವರು, ಶ್ರೀರಾಮುಲು ಅಥವಾ ನಾಯಕ ಸಮುದಾಯವನ್ನು 420 ಅಂತಾ ಮಾಜಿ ಸಿದ್ದರಾಮಯ್ಯ ಅವರು ಹೇಳಿಲ್ಲ. ಶ್ರೀರಾಮುಲು ಅವರಿಗೆ 371 ಜೆ ಬಗ್ಗೆ ಗೊತ್ತಿಲ್ಲವೆಂದು ಲೇವಡಿ ಮಾಡಿದ್ದಾರೆ ಎಂದ ಅವರು, ಕೇವಲ ಒಂದೇ ಜನಾಂಗದ ಮತಗಳಿಂದ ಜಯ ಗಳಿಸಲು ಸಾಧ್ಯವಿಲ್ಲ. ಎಲ್ಲ ಜನಾಂಗದವರು ಬೇಕಾಗುತ್ತಾರೆ ಎಂದು ಟಾಂಗ್ ಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್-ಜೆಡಿಎಸ್ ರಿಜಿಸ್ಟರ್ ಮದ್ವೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ: ಜಮೀರ್ ಅಹ್ಮದ್

    ಕಾಂಗ್ರೆಸ್-ಜೆಡಿಎಸ್ ರಿಜಿಸ್ಟರ್ ಮದ್ವೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ: ಜಮೀರ್ ಅಹ್ಮದ್

    ಹಾಸನ: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಈಗ ರಿಜಿಸ್ಟರ್ ಮದುವೆ ಆಗಿದೆ. ಈ ಮದುವೆಯನ್ನು ಮುರಿಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ಸ್ಥಳೀಯ ಚುನಾವಣೆಗಳ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಆಗುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರೇನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ನಾನು ಸಿಎಂ ಆಗಬೇಕು ಅಂತಾ ಹೇಳಿದ್ದಾರಾ ಇಲ್ಲವಲ್ಲ ಎಂದು ಹೇಳಿ ಗರಂ ಆಗಿ ಉತ್ತರಿಸಿದರು.

    ಕೊಡಗಿನಲ್ಲಿ ಸಾವಿರಕ್ಕಿಂತಲೂ ಹೆಚ್ಚು ಮನೆಗಳು ಹಾನಿಯಾಗಿವೆ. ಸದ್ಯ ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಬಾಡಿಗೆ ಮನೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.