ನವದೆಹಲಿ: ಹಬ್ಬ ಹರಿದಿನಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಎಲ್ಲಾ ರೀತಿಯ ಪಟಾಕಿ ( Fire Crackers) ಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವನ್ನು ಜನವರಿ 1 ರವರೆಗೆ ವಿಸ್ತರಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ (Gopal Rai) ಬುಧವಾರ ಘೋಷಿಸಿದ್ದಾರೆ.
दिल्ली में लोगों को प्रदूषण के खतरे से बचाने के लिए पिछले साल की तरह ही इस बार भी सभी तरह के पटाखों के उत्पादन, भंडारण, बिक्री और उपयोग पर पूरी तरह प्रतिबंध लगाया जा रहा है, तांकि लोगों की जिंदगी बचाई जा सके।
ಆನ್ಲೈನ್ (Online) ನಲ್ಲಿ ಪಟಾಕಿ ಮಾರಾಟಕ್ಕೂ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ರೈ ಟ್ವಿಟ್ ಮಾಡಿದ್ದಾರೆ. ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಉಳಿಸಬಹುದು ಎಂದು ಗೋಪಾಲ್ ರೈ ತಿಳಿಸಿದ್ದಾರೆ.
ಕಳೆದ ವರ್ಷ ಕೊರೊನಾ ವೈರಸ್ (Corona Virus) ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ಹಬ್ಬದ ಸೀಸನ್ಗೂ ಮುಂಚಿತವಾಗಿ ರಾಷ್ಟ್ರ ರಾಜಧಾನಿಯಲ್ಲಿ “ಗ್ರೀನ್ ಕ್ರ್ಯಾಕರ್ಸ್” ಸೇರಿದಂತೆ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ದೆಹಲಿ ಸರ್ಕಾರ ಆದೇಶಿಸಿತ್ತು. ಪಟಾಕಿ ಸಿಡಿಸುವುದರ ವಿರುದ್ಧ ಜಾಗೃತಿ ಮೂಡಿಸಲು ಎಎಪಿ ‘ಪತಾಖೆ ನಹಿ ದಿಯೆ ಜಲಾವೋ’ ಅಭಿಯಾನವನ್ನೂ ಆರಂಭಿಸಿತ್ತು.
Live Tv
[brid partner=56869869 player=32851 video=960834 autoplay=true]
ಬಳ್ಳಾರಿ: ಸಚಿವ ಆನಂದ್ ಸಿಂಗ್ ವಿರುದ್ಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬಕ್ಕೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಸೇರಿದಂತೆ ಮಾರೆಪ್ಪಾ ಹಾಗೂ ಹಣಮಂತಪ್ಪ ವಿರುದ್ಧ ಐಪಿಸಿ -504 (ಶಾಂತಿ ಭಂಗ), 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಕಿರುಕುಳ..?: ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಎಂಬ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ ಈ ಜಾಗವನ್ನ ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಆನಂದ್ ಸಿಂಗ್ ಹೇಳಿಕೆಯಿಂದ ಮನನೊಂದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದೆ. ಈ ಹಿಂದೆ ಆನಂದ್ ಸಿಂಗ್ ಜಾಗ ಒತ್ತವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದಾರೆ ಎಂದು ಪೊಲಯ್ಯ ಆರೋಪ ಮಾಡಿದ್ದರು. ಅಲ್ಲದೆ ಇದಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದರು. ದಾಖಲೆ ಬಿಡುಗಡೆ ಮಾಡಿದಾಗಿನಿಂದ ಆನಂದ್ ಸಿಂಗ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲಯ್ಯ ಕುಟುಂಬ ಗಂಭೀರ ಆರೋಪ ಮಾಡಿದೆ.
ಸಚಿವರ ವಿರುದ್ಧ ಆರೋಪ ಮಾಡುತ್ತಿರುವ ಕುಟುಂಬ, ವಿಜಯನಗರ ಎಸ್ಪಿ ಕಚೇರಿ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದೆ. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸರು ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕುಟುಂಬದ ಸದಸ್ಯರನ್ನ ಹೊಸಪೇಟೆ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಗಳ ಹಾವಳಿ ಹೆಚ್ಚಾಗಿದೆ. ಕೈಗೆ ಕಾಸು ಕೊಟ್ರೆ ಸಾಕು, ಸಿಎಂ, ಮಿನಿಸ್ಟರ್ಸ್, ಹೀಗೆ ಯಾರ ವಾಹನಗಳ ನಂಬರ್ಗಳನ್ನಾದ್ರೂ ನಕಲಿ ಮಾಡ್ತಾರೆ. ಇಂತಹ ವ್ಯವಸ್ಥಿತ ಜಾಲವನ್ನ ಪಬ್ಲಿಕ್ ಟಿವಿ ತಂಡ ಪತ್ತೆ ಹಚ್ಚಿದೆ.
ಇತ್ತಿಚೆಗೆ ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನಂಬರ್ ಪ್ಲೇಟ್ ಬಳಸಿ ವಾಹನಗಳನ್ನ ಓಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಿಯಮ ಉಲ್ಲಂಘಿಸಿ, ಕೆಲವು ಸ್ಟೋರ್ ಗಳಲ್ಲಿ ಅವ್ಯಾಹತವಾಗಿ ಡೂಪ್ಲಿಕೇಟ್ ನಂಬರ್ ಪ್ಲೇಟ್ಗಳನ್ನ ಯಾವುದೇ ದಾಖಲೆ ಪಡೆಯದೇ ಮಾಡಿಕೊಡಲಾಗ್ತಿದೆ. ಇಂತಹ ವ್ಯವಸ್ಥಿತ ಜಾಲವನ್ನ ನಿಮ್ಮ ಪಬ್ಲಿಕ್ ಟಿವಿ ತಂಡ ರಹಸ್ಯ ಕಾರ್ಯಾಚರಣೆಯ ಮೂಲಕ ಬೇಧಿಸಿದೆ.
ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಜಾಲವನ್ನು ಸ್ಟಿಂಗ್ ಆಪರೇಷನ್ ಮೂಲಕ ನಿಮ್ಮ ಪಬ್ಲಿಕ್ ಟಿವಿ ಬಯಲು ಮಾಡಿದೆ. ಜೆಸಿನಗರ, ಯಶವಂತಪುರ, ಶಿವಾಜಿನಗರ ಸೇರಿದಂತೆ ನಗರದ ಹಲವು ಏರಿಯಾಗಳಲ್ಲಿ ಮೆಕಾನಿಕ್ ಶಾಪ್ಗಳಲ್ಲಿಯೇ ನಕಲಿ ನಂಬರ್ ಪ್ಲೇಟ್ ದಂಧೆ ರಾಜಾರೋಷವಾಗಿ ನಡೀತಿದೆ. ನೀವು ಯಾವುದೇ ವಾಹನ ಕೊಡೊಯ್ದು, ನಂಬರ್ ಪ್ಲೇಟ್ ಚೇಂಜ್ ಮಾಡಿಕೊಡಿ ಅಂದ್ರೆ, ಯಾವುದೇ ದಾಖಲೆ ಕೇಳದೇ ರೆಡಿ ಮಾಡಿಕೊಡ್ತಾರೆ. ಅವರು ಕೇಳಿದಷ್ಟು ದುಡ್ಡು ಕೊಡಬೇಕು. ಕೇವಲ 20 ನಿಮಿಷದಲ್ಲಿ ನಕಲಿ ನಂಬರ್ ಪ್ಲೇಟ್ ರೆಡಿ ಆಗುತ್ತೆ.
ನಮ್ಮ ತಂಡ ಮೊದಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಕಾರಿನ ಪರವಾನಗಿ ಸಂಖ್ಯೆ ಸಂಗ್ರಹಿಸಿ, ನಂಬರ್ ಪ್ಲೇಟ್ ಮಾಡಿಕೊಡಿ ಅಂದ್ವಿ ಅಷ್ಟೆ. ಹಿಂದೆ ಮುಂದೆ ನೋಡದೇ ಇಂತಿಷ್ಟೆ ದುಡ್ಡಾಗುತ್ತೆ, 20 ನಿಮಿಷ ಬಿಟ್ಟು ಬನ್ನಿ ಅಂತ ನಕಲಿ ಡೀಲರ್ ಹೇಳಿದ್ದಾನೆ.
ಸ್ಟಿಂಗ್ ಸ್ಥಳ: ಜೆಸಿ ನಗರ ಪ್ರತಿನಿಧಿ: ಅದೇನಾದ್ರೂ ಡಾಕ್ಯೂಮೆಂಟ್ ಬೇಕಾ..? ನಕಲಿ ಡೀಲರ್: ಏನು ಬೇಡ? ಬರಿ ಗಾಡಿ ನೇಮ್ ಹೇಳಿ ಅಷ್ಟೆ ಪ್ರತಿನಿಧಿ: ಡಿಸೈನ್ ತೋರಿಸಿ ಸರ್? ಎಷ್ಟೊತ್ತಾಗುತ್ತೆ? ನಕಲಿ ಡೀಲರ್: 20 ನಿಮಿಷ ಆಗುತ್ತೆ ಪ್ರತಿನಿಧಿ: ಮಾಡಿ.. ನಕಲಿ ಡೀಲರ್: ಇದೇ ಕರೆಕ್ಟ್ ನಂಬರ್.. ಕೆಎ 05 ಜಿಎ9000.. ಕೊಡಿ.. 500 ರೂಪಾಯಿ. 20 ನಿಮಿಷ ಆದ್ಮೇಲೆ ಬನ್ನಿ
ಹೀಗೆ ಯಾವುದೇ ದಾಖಲೆಗಳನ್ನ ಸಂಗ್ರಹಿಸಿಕೊಳ್ಳದೇ, ಓಪನ್ ಆಗಿ ನಕಲಿ ನಂಬರ್ ಪ್ಲೇಟ್ ಗಳನ್ನ ಮಾಡಿಕೊಡ್ತಾನೆ. ವಾಹನಕ್ಕೆ ನಂಬರ್ ಪ್ಲೇಟ್ ಮಾಡಿಕೊಡಲು, ಆ ವಾಹನದ ಚಾಸಿ ನಂಬರ್, ಆರ್ ಸಿ ಕಾರ್ಡ್, ಡಿಎಲ್, ಫೋನ್ ನಂಬರ್ ಕೊಡಬೇಕು. ಅದು ಕೂಡ ಅಧಿಕೃತವಾಗಿ ಸರ್ಕಾರದಿಂದ ಗುತ್ತಿಗೆ ಪಡೆದಿರುವ ಡೀಲರ್ ಗಳೇ ನಂಬರ್ ಪ್ಲೇಟ್ಗಳನ್ನ ಹಾಕಿಕೊಡಬೇಕು. ಆದರೆ ಇದ್ಯಾವ ನಿಯಮಗಳು ಇಲ್ಲಿ ಪಾಲನೆಯಾಗ್ತಿಲ್ಲ. ಇದನ್ನೂ ಓದಿ: ದ.ಕನ್ನಡದಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆ ಇದ್ದು, ಹೆಚ್ಚಿಸಬೇಕು: ಡಿಜಿಪಿ ಪ್ರವೀಣ್ ಸೂದ್
ಕೇವಲ ಸಿಎಂ ಅವರ ಸರ್ಕಾರಿ ಕಾರಿನ ನಂಬರ್ ಮಾತ್ರವಲ್ಲ, ಆರೋಗ್ಯ ಸಚಿವರ ಕಾರಿನ ನಂಬರ್ ಪ್ಲೇಟ್ನ್ನು ಥೇಟ್ ಹಾಗೇ ಮಾಡಿಕೊಟ್ಟಿದ್ದಾರೆ. ಇದು ಕೂಡ ಸರ್ಕಾರಿ ವಾಹನ. ವಾಹನಕ್ಕೆ ಸಂಬಂಧಪಟ್ಟ ಯಾವ ದಾಖಲೆಗಳನ್ನೂ ಪರಿಶೀಲಿಸಲಿಲ್ಲ. ನಂಬರ್ ಪ್ಲೇಟ್ ಮಾಡಿಕೊಡಿ ಅಂತಿದ್ದಂತೆ ಸೈ ಎಂದು ಹೇಳಿದ.
ಸ್ಟಿಂಗ್ ಸ್ಥಳ: ಜೆಸಿ ನಗರ ಪ್ರತಿನಿಧಿ: ಎಷ್ಟಾಗುತ್ತೆ ಸರ್? ನಕಲಿ ಡೀಲರ್: 500 ರೂ. ಆಗುತ್ತೆ ಸರ್ ಪ್ರತಿನಿಧಿ: ಎಷ್ಟೊತ್ತು ಆಗುತ್ತೆ ಸರ್? ನಕಲಿ ಡೀಲರ್: 10 ನಿಮಿಷ ಆಗುತ್ತೆ ಪ್ರತಿನಿಧಿ: ಕಡಿಮೆ ಇಲ್ವಾ ಸರ್? ನಕಲಿ ಡೀಲರ್: ಕಡಿಮೆನೆ ಅದು. ಬೇರೆ ಸಾವಿರ ರೂಪಾಯಿ ಇದೆ. ನಮ್ದು ಹೋಲ್ಸೆಲ್. ಪ್ರತಿನಿಧಿ: ಕೆಎ 50 ಜಿ3555 ನಕಲಿ ಡೀಲರ್: ಒಂದು ಸಿಂಗಲ್ ಆ..? ನಕಲಿ ಡೀಲರ್: ಯೆಲ್ಲೋ ಬೋರ್ಡಾ…ವೈಟ್ ಬೋರ್ಡಾ..? ಪ್ರತಿನಿಧಿ: ವೈಟ್ ಬೋರ್ಡ್..ಡಾಕ್ಯುಮೆಂಟ್ ಏನಾದ್ರು ಬೇಕಾ..? ನಕಲಿ ಡೀಲರ್: ಏನೂ ಬೇಡ.. ಪ್ರತಿನಿಧಿ: ಕೊಡಿ ಸರ್ ಕಾಸು..? ನಕಲಿ ಡೀಲರ್: ಫೋನ್ ಪೇ ಇದೆಯಾ
ಅಧಿಕೃತ ಡೀಲರ್ ಶಿಪ್ ಇಲ್ಲದಿದ್ರೂ, ಪಂಚಿಂಗ್ ನಂಬರ್ ಪ್ಲೇಟ್ ಕೊಟ್ಟು ನಕಲಿ ಡೀಲರ್ ಗಳು ಕಾಸು ಮಾಡಿಕೊಳ್ತಿದ್ದಾರೆ. ಸಹಜವಾಗಿ ವಾಹನಗಳ ನಂಬರ್ ಪ್ಲೇಟ್ಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಅಳವಡಿಕೆಯಾಗಿರಬೇಕು. ಅಂತಹ ನಂಬರ್ ಪ್ಲೇಟ್ಗಳು ವ್ಯಾಲಿಡ್ ಆಗಿರುತ್ತೆ.
ಸಿಎಂ, ಹೆಲ್ತ್ ಮಿನಿಸ್ಟರ್ ಆಯ್ತು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಾರಿನ ನಂಬರ್ ಪ್ಲೇಟನ್ನು ಡೂಪ್ಲಿಕೇಟ್ ಮಾಡಿಕೊಟ್ಟಿದ್ದಾರೆ. ಕನಿಷ್ಟ ಪಕ್ಷ ಕಾರು ಮಾಲೀಕರು ಯಾರು. ನಂಬರ್ ಪ್ಲೇಟ್ ಗೆ ಆರ್ಡರ್ ಕೊಡ್ತಿರೋರು ಯಾರು.? ಅವ್ರ ಫೋನ್ ನಂಬರ್ ಗಳನ್ನ ಕಲೆಕ್ಟ್ ಮಾಡ್ಕೊಬೇಕಿತ್ತು. ಆದ್ರೆ ಅದ್ಯಾವುದೂ ಆಗ್ತಿಲ್ಲ. ಹೋಗಿದ್ ಕಡೆಯಲ್ಲ, ಗಾಡಿ ಡಾಕ್ಯೂಮೆಂಟ್ಸ್ ಬೇಕಾ ಅಂತ ಬಾಯ್ಬಿಟ್ಟು ಕೇಳಿದ್ರೂ ನೋ ವರಿ ಅನ್ನೋ ಉತ್ತರನೇ ಸಿಗ್ತಿದೆ.
ಸಿಟಿ ರವಿ ಕಾರ್ ನಂಬರ್ ಪ್ಲೇಟ್ ನಕಲು..! ಸ್ಟಿಂಗ್ ಸ್ಥಳ: ಜೆಸಿ ನಗರ ಪ್ರತಿನಿಧಿ: ಗಾಡಿ ಡಾಕ್ಯುಮೆಂಟ್ ಬೇಕಾ.? ನಕಲಿ ಡೀಲರ್: ಏನು ಬೇಕಾಗಿಲ್ಲ. ನೀವು ನಂಬರ್ ಕೊಟ್ರೆ, ನಂಬರ್ ಪ್ಲೇಟ್ ಕೊಡ್ತಿವಿ ಅಷ್ಟೆ.. ನಂಬರ್ ಪ್ಲೇಟ್ಗೆ ಬೀಡಿಂಗ್ ಬೇಕಾ? ಪ್ರತಿನಿಧಿ: ಬೇಡ ಬಿಡಿ ಸದ್ಯಕ್ಕೆ ನಕಲಿ ಡೀಲರ್: ಲುಕ್ ಚೆನ್ನಾಗಿ ಬರುತ್ತೆ. ನಂಬರ್ ಪ್ಲೇಟ್ ಬೆಂಡಾಗಲ್ಲ. ಎಲ್ಲರೂ ತಗೋತಾರೆ. ಪ್ರತಿನಿಧಿ: ಬಿಲ್ ಒಂದು ಹಾಕಿಕೊಡಿ..! ನಕಲಿ ಡೀಲರ್: ಬಿಲ್ ಬರಲ್ಲ ಬಯ್ಯ ಪ್ರತಿನಿಧಿ: ಪೇಪರ್ನಲ್ಲಾದ್ರೂ ಬರ್ದು ಕೊಡಿ ನಕಲಿ ಡೀಲರ್: ಪೇಪರ್ ನಲ್ಲೂ ಬರ್ದು ಕೊಡಲ್ಲ
ಸಾರಿಗೆ ಇಲಾಖೆಯಿಂದ ನಂಬರ್ ಪ್ಲೇಟ್ಗಳನ್ನ ಮಾಡಿಕೊಡಲು ಟೆಂಡರ್ ನೀಡಲಾಗುತ್ತೆ. ಡೀಲರ್ ಶಿಪ್ ತೊಗೊಂಡವರು ಮಾತ್ರ ನಂಬರ್ ಪ್ಲೇಟ್ ಗಳನ್ನ ಮಾಡಿಕೊಡಬೇಕು. ಕಾನೂನುಬಾಹಿರವಾಗಿ ನಂಬರ್ ಪ್ಲೇಟ್ ಗಳನ್ನ ಹಾಕಿಕೊಟ್ರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇಂತಹ ಸ್ಟೋರ್ ಗಳಿಗೂ ವಾರ್ನ್ ಮಾಡಿಲ್ಲ. ದುಷ್ಟರು ಯಾವ್ಯಾವುದೋ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಳ್ತಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡ್ತಾರೆ. ಕ್ರಿಮಿನಲ್ ಆಕ್ಟಿವಿಟಿವ್ಸ್ಗೂ ಬಳಸಿಕೊಳ್ತಿದ್ದಾರೆ. ಸಾರಿಗೆ ಇಲಾಖೆ ಬೇಜವಾಬ್ದಾರಿಯನ್ನ ಬದಿಗಿಟ್ಟು, ಇಂತಹ ವ್ಯವಸ್ಥಿತ ಜಾಲವನ್ನ ಮಟ್ಟಹಾಕಬೇಕಿದೆ.
Live Tv
[brid partner=56869869 player=32851 video=960834 autoplay=true]
ರಾಯಚೂರು: ಮಂತ್ರಿಸ್ಥಾನ ಬೇಕು ಅನ್ನೋರು ದೆಹಲಿಗೆ ಹೋಗಬೇಕು, ಅವರಿವರನ್ನ ಭೇಟಿ ಮಾಡ್ಬೇಕು, ಮತಕ್ಷೇತ್ರ ಬಿಟ್ಟು ಬೆಂಗಳೂರಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಮನೆಗೆ ಅಡ್ಡಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂತ್ರಿ ಸ್ಥಾನ ಬೇಕು ಅಂದ್ರೆ ದೆಹಲಿಗೆ ಹೋಗಬೇಕು. ಅವರಿವರನ್ನ ಭೇಟಿ ಮಾಡಬೇಕು, ಮತಕ್ಷೇತ್ರ ಬಿಟ್ಟು ಬೆಂಗಳೂರಲ್ಲಿ ಬರೀ ಮುಖ್ಯಮಂತ್ರಿ, ರಾಜ್ಯಾಧ್ಯಕ್ಷರ ಮನೆಗೆ ಅಡ್ಡಾಡಬೇಕು. ನಮಗೇನು ಬೇಡ ಅರಾಮಾಗಿದ್ದೇವೆ. ಮಂತ್ರಿ ಆಗೋದಕ್ಕಿಂತಲೂ ಹೆಚ್ಚು ಅಧಿಕಾರದಲ್ಲಿ ನಾವಿದ್ದೇವೆ ಅನ್ನೋದೇ ಸಾಕು. ಮುಖ್ಯಮಂತ್ರಿಗಳು ನಮ್ಮ ಕೆಲಸ ಮಾಡಿಕೊಡ್ತಿದ್ದಾರೆ. ನಮಗೆ ಮಂತ್ರಿ ಸ್ಥಾನ ಏನೂ ಉಪಯೋಗ ಇಲ್ಲ ಎಂದು ತಿರಸ್ಕರಿಸಿದ್ದಾರೆ. ಇದನ್ನೂ ಓದಿ: ತೆಲುಗಿನ ಪ್ರಭಾಸ್ ನಟನೆಯ ಸಲಾರ್ ಚಿತ್ರದಲ್ಲಿ ಯಶ್ ಅತಿಥಿ ಪಾತ್ರ?
ಮೋದಿ ಹೆಸರಲ್ಲೇ ಚುನಾವಣೆ ಎದುರಿಸ್ತೇವೆ: ಎಲ್ಲಾ ನಿಗಮ ಮಂಡಳಿಗಳನ್ನ ವಿಸರ್ಜನೆ ಮಾಡಿ, ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿತ್ತು. ಆದ್ರೆ ಕೊಡಲಿಲ್ಲ. ಮುಂದಿನ ಚುನಾವಣೆಯನ್ನ ನರೇಂದ್ರ ಮೋದಿಯವರ ಹೆಸರಲ್ಲಿ ಎದುರಿಸುತ್ತೇವೆ. ಅವರ ಹೆಸರಲ್ಲೇ ಮುಂದೆ ಬರ್ತಿವಿ ಎಂದು ತಿಳಿಸಿದ್ದಾರೆ.
ಕೋಲಾರ: ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಂದ ಸಿಎಂ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಅವರೇ ಉತ್ತರ ನೀಡಲಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದರು.
ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ನಾನೂ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ರಕ್ತಚಂದನ ಸಾಗಾಟ- ಶ್ವಾನದೊಂದಿಗೆ ರೋಚಕ ಆಪರೇಷನ್
ಇದೆ ವೇಳೆ ಡಿಸಿಸಿ ಬ್ಯಾಂಕ್ ವಿಚಾರವಾಗಿ ಮಾತನಾಡಿದ ಅವರು, ಕೋಲಾರದ ಡಿಸಿಸಿ ಬ್ಯಾಂಕ್ನಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ. ಕೆಲವರು ಅವರ ಸ್ವಂತ ಆಸ್ತಿಯಂತೆ ಬ್ಯಾಂಕ್ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಹಾಗೂ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ದಯವಿಟ್ಟು ನನ್ನ ಹೆಂಡತಿಯನ್ನು ನನಗೆ ಕೊಡಿ- ಕಣ್ಣೀರು ಹಾಕಿದ ವರ
ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಶಾಂತಿ ಕದಡುತ್ತಿದ್ದಾರೆ. ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ. 5 ವರ್ಷ ಅಪೂರ್ಣವಾಗಿ ಅಧಿಕಾರ ಪೂರೈಸಿ ಸಿಎಂ ಅವರ ಸಮ್ಮುಖದಲ್ಲಿ ಚುನಾವಣೆಗೆ ತೆರಳುತ್ತೇವೆ. ಅವಧಿ ಪೂರ್ಣ ಚುನಾವಣೆ ಬಂದ್ರೂ ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.
ನವದೆಹಲಿ: ಈಗಾಗಲೇ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇದರಲ್ಲಿ ರಾಜ್ಯಸಭೆಯಿಂದ ಆಯ್ಕೆ ಆಗಿರುವ ಅನೇಕ ಕೇಂದ್ರ ಸಚಿವರ ಹೆಸರು ಪಟ್ಟಿಯಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸದ್ಯದಲ್ಲೇ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ.
ಜೂ.10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಬಿಜೆಪಿಯೂ ಘೋಷಿಸಿದೆ. ಆದರೆ ಈಗಾಗಲೇ ಅನೇಕ ರಾಜ್ಯಸಭೆಯಿಂದ ಆಯ್ಕೆ ಆಗಿರುವ ಸಚಿವರಾಗಿರುವ ಅನೇಕರಿಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿಲ್ಲ. ಬಿಜೆಪಿಯ ಈ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕೇಂದ್ರ ಅಲ್ಪಸಂಖ್ಯಾತರ ಸಚಿವ ಮುಖ್ತಾರ್ ಅಬ್ಬಾನಖ್ವಿ, ಪಕ್ಷದ ಹಿರಿಯ ನಾಯಕ ಒ.ಪಿ.ಮಾಥುರ್, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ಮ ಮತ್ತು ವಿನಯ್ ಸಹಸ್ರ ಬುದ್ಧೆ, ಮಾಜಿ ಕೇಂದ್ರ ಸಚಿವ ಶಿವ್ ಪ್ರತಾಪ್ ಶುಕ್ಲಾ ಸೇರಿದಂತೆ ಅನೇಕರು ರಾಜ್ಯಸಭೆಯಿಂದ ಆಯ್ಕೆಯಾಗಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದರು. ಆದರೆ ಈ ಬಾರಿಯ ರಾಜ್ಯಸಭೆ ಚುನಾವಣೆಗೆ ಇವರ್ಯಾರಿಗೂ ಟಿಕೆಟ್ ನೀಡದೇ ಇರುವುದು ತೀವ್ರ ಕುತೂಹಲ ಮೂಡಿಸಿದ್ದು, ಸದ್ಯದಲ್ಲೇ ಕೇಂದ್ರದಲ್ಲಿ ಸಚಿವ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆಯಿದೆ ಎಂಬ ಮಾತು ಕೇಳಿ ಬಂದಿದೆ. ಇದನ್ನೂ ಓದಿ: 20 ದಿನದಲ್ಲಿ ಪೀಣ್ಯ ಫ್ಲೈಓವರ್ ಮೇಲೆ ಬಸ್, ಲಾರಿ ಓಡಾಟಕ್ಕೆ ಅವಕಾಶ?
ಅಮರಾವತಿ: ಆಂಧ್ರಪ್ರೇಶದ ಕೋನಸೀಮಾ ಜಿಲ್ಲೆಯ ಮುಮ್ಮಡಿವರಂನಲ್ಲಿ ಉದ್ರಿಕ್ತಗೊಂಡ ಪ್ರತಿಭಟನಾಕಾರರು ಶಾಸಕ ಪೊನ್ನಡ ಸತೀಶ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.
ಕೋನಸೀಮಾ ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ನಾಮಕರಣ ಮಾಡುವುದನ್ನು ವಿರೋಧಿಸಿ ಶಾಸಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಾರಿಗೆ ಸಚಿವ ಪಿ.ವಿಶ್ವರೂಪ್ ಮನೆಗೂ ಹಾನಿಯಾಗಿದ್ದು, ಜನಪ್ರತಿನಿಧಿಗಳ ಮನೆಗಳಿಗೇ ರಕ್ಷಣೆ ನೀಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ
#WATCH | MLA Ponnada Satish's house was set on fire by protestors in Konaseema district in Andhra Pradesh today, the protests were opposing the naming of the district as Dr BR Ambedkar Konaseema district pic.twitter.com/XzJskKqhz3
ಅಮಲಾಪುರಂ ಮತ್ತು ಕೋನಸೀಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ. ಮತ್ತೊಂದೆಡೆ ಜನರನ್ನು ಚದುರಿಸಲು ಅಮಲಾಪುರಂನಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕಾರುಗಳು, ಪೀಠೋಪಕರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳು ಸೇರಿದಂತೆ ಕೆಲ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.
ಚಿಕ್ಕಮಗಳೂರು: ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಗಾಗಿ ಹೋರಾಡ್ತಿದ್ದ ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಸೆಯನ್ನು ಕೈಬಿಟ್ಟಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಸಿಕ್ಕರೆ ಏನು ಮಾಡೋದು. ಕುರ್ಚಿ ಬಿಸಿ ಮಾಡಬಹುದು ಅಷ್ಟೇ. ಕುರ್ಚಿಯೂ ಬಿಸಿ ಆಗಲ್ಲ ಎಂದು ಸಚಿವನಾಗುವ ಆಸೆಯನ್ನು ಕೈಬಿಟ್ಟಿದ್ದಾರೆ. ಈಗ ಸಚಿವ ಸ್ಥಾನ ಸಿಕ್ಕರೂ ಸಿಗೋದು ಕೇವಲ ಎಂಟು ತಿಂಗಳು ಅಷ್ಟೇ. ಈ ಎಂಟು ತಿಂಗಳಲ್ಲಿ ಯಾವ ಕ್ರಾಂತಿಕಾರಿ ಅಭಿವೃದ್ಧಿಯನ್ನೂ ಮಾಡಲು ಆಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಸ್ಟ್. ಇದರಿಂದ ಆಸೆ ಇರುವವರಿಗಷ್ಟೇ ಅನುಕೂಲವಾಗುತ್ತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ
ಈ ಹಿಂದೆ ಮೂರು ಬಾರಿ ಶಾಸಕರಾಗಿರುವ ಕುಮಾರಸ್ವಾಮಿ ಮಂತ್ರಿಗಿರಿಗಾಗಿ ಭಾರೀ ಹೋರಾಡಿದ್ದರು. ಲಾಬಿ ನಡೆಸಿದ್ದರು. ಬಲಗೈ ಸಮುದಾಯಕ್ಕೆ ಸೇರಿದ ನಮಗೂ ಮಂತ್ರಿಗಿರಿ ಕೊಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಸರ್ಕಾರ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಾದ ಮೂರು ಬಾರಿ ಮಿನಿಸ್ಟರ್ ಪೋಸ್ಟ್ಗಾಗಿ ಲಾಬಿ ನಡೆಸಿದ್ದರು. ಆದರೆ, ಈಗ ಯಾಕೋ ಮಿನಿಸ್ಟರ್ ಆಗುವ ಆಸೆಯನ್ನು ಕೈಬಿಟ್ಟಿದ್ದಾರೆ. ಸಚಿವ ಸ್ಥಾನ ನೀಡಿ ಎಂದು ಕೇಳಲ್ಲ. ಆಸೆ ಇರುವವರಿಗೆ ಕೊಡಲಿ. ಯಾವುದೇ ಒತ್ತಡವನ್ನೂ ಹಾಕಲ್ಲ. ಕ್ಷೇತ್ರದಲ್ಲಿ ತುಂಬಾ ಕೆಲಸ ಇದೆ. ಸಚಿವ ಸ್ಥಾನ ನೀಡೋದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹತಾಶ ನುಡಿಯನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?
ಪ್ರತಿಬಾರಿಯೂ ಸಚಿವ ಸ್ಥಾನದ ಕಸರತ್ತು ನಡೆಯುವಾಗ ನಾನೂ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದ ಎಂ.ಪಿ. ಕುಮಾರಸ್ವಾಮಿ ಈ ಬಾರಿ ಹೋರಾಟಕ್ಕೂ ಮುನ್ನವೇ ಶಸ್ತ್ರ ತ್ಯಾಗ ಮಾಡಿದ್ದಾರೆ. ನಾನು ಮಂತ್ರಿಗಿರಿಗೆ ಲಾಬಿ ಮಾಡಲು ದೆಹಲಿಗೆ ಹೋಗಿಲ್ಲ. ಬೇರೆ ಕೆಲಸದ ನಿಮಿತ್ತ ಗಡ್ಕರಿ ಅವರನ್ನು ಭೇಟಿ ಮಾಡಬೇಕಿತ್ತು ಅದಕ್ಕೆ ಹೋಗಿದ್ದೆ ಎಂದಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸಂಪುಟದ ವಿಸ್ತರಣೆಯ ಬಳಿಕ ಪ್ರಮಾಣ ವಚನದ ಸಂದರ್ಭದಲ್ಲೂ ಎಂ.ಪಿ ಕುಮಾರಸ್ವಾಮಿ ವಿವಿಧ ಕಾರಣ ನೀಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಬೆಂಗಳೂರು: ರಾಜ್ಯದಲ್ಲಿ ಗಲಭೆ ಮಾಡುವ ಮನಸ್ಥಿತಿ ಇರುವವರಿಗೆ ಮನೆ-ಮಠ ಇಲ್ಲದಂತೆ ಮಾಡಬೇಕು. ಅದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಆರ್.ಅಶೋಕ್ ಬುಲ್ಡೋಜರ್ ಪ್ರಯೋಗ ಜಾರಿಯ ಬಗ್ಗೆ ಪುನರುಚ್ಚರಿಸಿದರು.
ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗಲಭೆ ಮಾಡುವವರನ್ನು ಅರೆಸ್ಟ್ ಮಾಡಿದರೆ, ಮರ್ನಾಲ್ಕು ದಿನಗಳಲ್ಲಿ ಜಾಮೀನು ಪಡೆದುಕೊಂಡು ಹೊರಗೆ ಬರುತ್ತಾರೆ. ಪುನಃ ಗಲಭೆ ಮಾಡುತ್ತಾರೆ. ಅದಕ್ಕಾಗಿ ಅವರಿಗೆ ಬುದ್ಧಿ ಕಲಿಸಲು ಮನೆ-ಮಠ ಇಲ್ಲದಂತೆ ಮಾಡಬೇಕು. ಆಗ ಬುದ್ಧಿ ಬರುತ್ತದೆ ಎಂದು ಕಿಡಿಕಾರಿದರು. ಇದನ್ನೂಓದಿ: PSI ನೇಮಕಾತಿಯ ಯಾವುದೇ ಬ್ಯಾಚ್ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ನಮ್ಮಲ್ಲೂ ಉತ್ತರ ಪ್ರದೇಶದ ಮಾದರಿಯ ರೂಲ್ಸ್ ಜಾರಿಗೆ ಬರಬೇಕಾದ ಸ್ಥಿತಿಯಿದೆ. ಈ ನೀತಿ ತಂದರಷ್ಟೇ ಗಲಭೆಕೋರರನ್ನು ಮಟ್ಟ ಹಾಕಲು ಸಾಧ್ಯ. ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸುಮ್ಮನೆ ಬಿಡಬಾರದು. ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ಗೆ ಜನರೇ ಪಾಠ ಕಲಿಸ್ತಾರೆ: ನಾವು ಇನ್ನಷ್ಟು ಕಠಿಣ ಕ್ರಮ ತೆಗೆದುಕೊಂಡು ದುಷ್ಟರ ಹೆಡೆಮುರಿ ಕಟ್ಟುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲವೆಂದ ಅವರು, ರಾಜ್ಯದಲ್ಲಿ ಅರಾಜಕತೆ ಉಂಟುಮಾಡುವ ಕಾಂಗ್ರೆಸ್ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕುಟುಕಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್
ವಿದೇಶಿ ಶಕ್ತಿಗಳಿವೆಯೇ?: ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು. ಡಿಜೆ ಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ. ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯುಂಟಾಗಿದೆ, ವಿದ್ಯುತ್ ಕ್ಷಾಮವಿದೆ ಎಂದು ಕಾಂಗ್ರೆಸ್ ವಿನಾಕಾರಣ ಹುಯಿಲೆಬ್ಬಿಸುತ್ತಿದ್ದು, ವಾಸ್ತವ ವಿಚಾರವನ್ನು ಮರೆಮಾಚುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದಲೇ ಎಚ್ಚರಿಕೆ ವಹಿಸಿ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ರಾಜ್ಯದ ಸರಾಸರಿ ಬೇಡಿಕೆಯ ಅರ್ಧದಷ್ಟು ಭಾಗ ಈಗ ಸೋಲಾರ್ ಹಾಗೂ ಪವನಶಕ್ತಿ ಮೂಲದಿಂದ ಲಭಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಆರೋಪಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು
ಕೇಂದ್ರದಿಂದ ರಾಜ್ಯಕ್ಕೆ ಪ್ರತಿನಿತ್ಯ ಸರಾಸರಿ 13,500 ರಿಂದ 14,500 ರೇಕ್ ಕಲ್ಲಿದ್ದಲು ಪೂರೈಕೆಯಾಗುತ್ತಿದೆ. ಎಲ್ಲ ವಿದ್ಯುತ್ ಸ್ಥಾವರಗಳ ಬೇಡಿಕೆಗೆ ಅಗತ್ಯವಾದ ಕಲ್ಲಿದ್ದಲು ಇದರಿಂದ ಲಭ್ಯವಾಗುತ್ತಿದೆ. ರಾಜ್ಯದಲ್ಲಿಂದು ಪ್ರತಿ ದಿನಕ್ಕೆ 10,400 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಎನ್ನಬಹುದಾದ 14,800 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಕಳೆದ ಮಾರ್ಚ್ 21ರಂದು ಎದುರಾಗಿತ್ತು. ಆಗಲೂ ನಮಗೆ ಕಲ್ಲಿದ್ದಲು ಕೊರತೆ ಉಂಟಾಗಿರಲಿಲ್ಲ. ಹೀಗಿರುವಾಗ ಸಾಮಾನ್ಯ ಬೇಡಿಕೆಯ ದಿನಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಎಂತಹ ಸ್ಥಿತಿ ನಿರ್ಮಾಣವಾದರೂ ಮೂರು ದಿನಗಳವರೆಗೆ ಕೊರತೆ ನೀಗಿಸುವಷ್ಟು ಕಲ್ಲಿದ್ದಲು ದಾಸ್ತಾನಿದೆ. ಕಾಂಗ್ರೆಸ್ ನಾಯಕರು ಸೃಷ್ಟಿಸಿರುವ ಈ ಅಪಪ್ರಚಾರದಿಂದ ರಾಜ್ಯದ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಯಾವುದೇ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯವಾದರೆ ಅದು ಸರಬರಾಜಿನಲ್ಲಿ ಆದ ಸಮಸ್ಯೆಯೇ ವಿನಃ ಕಲ್ಲಿದ್ದಲು ಕೊರತೆಯಿಂದ ಆಗಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇರದು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕೃಷಿ ಪಂಪ್ಸೆಟ್ ಗಳಿಗೆ ಅಗತ್ಯವಾದ ವಿದ್ಯುತ್ ಬೇಡಿಕೆ ಪ್ರಮಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಬಳ್ಳಾರಿ ಹಾಗೂ ರಾಯಚೂರು ಶಾಖೋತ್ಪನ್ನ ಘಟಕದ ಉತ್ಪಾದನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆಯೇ ಹೊರತು ಕಲ್ಲಿದ್ದಲು ಕೊರತೆಗಾಗಿ ಅಲ್ಲ. ರಾಜ್ಯದಲ್ಲಿ ಪ್ರತಿನಿತ್ಯ 7,000 ಮೆಗಾ ವ್ಯಾಟ್ ಸೋಲಾರ್ ಹಾಗೂ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬೇಸಿಗೆಯಲ್ಲಿ ವಿದ್ಯುತ್ ಕೊರತೆಯ ಪ್ರಶ್ನೆಯೇ ಉದ್ಭವಿಸದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ
ಕತ್ತಲುಭಾಗ್ಯದ ದುರ್ದಿನಗಳನ್ನು ಮರೆತಿಲ್ಲ: ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 2004-2014ರ ಅವಧಿಯಲ್ಲಿ 725 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ರಾಜ್ಯಕ್ಕೆ ಪೂರೈಕೆಯಾಗಿತ್ತು. ಆದರೆ 2015 – 2022ರ ಅವಧಿಯಲ್ಲಿ 792 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಪೂರೈಕೆಯಾಗಿದೆ. ಕಲ್ಲಿದ್ದಲು ಪೂರೈಕೆ ಹಾಗೂ ವಿದ್ಯುತ್ಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿಯೂ ಕೇಂದ್ರ ಸರ್ಕಾರ ಹಿಂದುಳಿದಿಲ್ಲ. ಅಧಿಕಾರದ `ಅಭಾವ ವೈರಾಗ್ಯ’ ದಿಂದ ರೋಸಿ ಹೋಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ವಿದ್ಯುತ್ ಅಭಾವ ಇದೆ ಎಂಬ ಪ್ರಹಸನ ಸ್ರಷ್ಟಿಸಿದರೆ ಜನರು `ಶಾಕ್ ಟ್ರೀಟ್ ಮೆಂಟ್’ ನೀಡುತ್ತಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿದ್ದಾಗ ರಾಜ್ಯಕ್ಕೆ ನೀಡಿದ್ದ `ಕತ್ತಲು ಭಾಗ್ಯದ’ ದುರ್ದಿನಗಳನ್ನು ಸಾರ್ವಜನಿಕರು ಇನ್ನೂ ಮರೆತಿಲ್ಲ. ಅಪಪ್ರಚಾರ ನಡೆಸುವಾಗ ಹತ್ತು ಬಾರಿ ಯೋಚಿಸಿ ಅಡಿ ಇಡಲಿ ಎಂದು ವ್ಯಂಗ್ಯವಾಡಿದ್ದಾರೆ.