Tag: minister

  • ಕಳೆದ 10 ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ-ಸಿದ್ದರಾಮಯ್ಯ ವಿರುದ್ಧ ರೇವಣ್ಣ ಆಕ್ರೋಶ

    ಕಳೆದ 10 ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ-ಸಿದ್ದರಾಮಯ್ಯ ವಿರುದ್ಧ ರೇವಣ್ಣ ಆಕ್ರೋಶ

    ಹಾಸನ: ನಗರದಲ್ಲಿ ದೋಸ್ತಿ ಸರ್ಕಾರದ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣಾ ಸಂಪುಟ ಸಮಿತಿ ಸಭೆ ಇದಕ್ಕೆ ಸಾಕ್ಷಿಯಾಗಿದೆ.

    ಸಚಿವ ಎಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯೆ ವಾಕ್ಸಮರ ಏರ್ಪಟ್ಟಿತ್ತು. ಕಳೆದ ಹತ್ತು ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ ಎನ್ನುವ ರೇವಣ್ಣ ಮಾತಿಗೆ ಕೆರಳಿದ ಗೋಪಾಲಸ್ವಾಮಿ, ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಹಾಗಾದ್ರೆ ಏನೂ ಆಗಲಿಲ್ಲವೇ ಎಂದು ಗರಂ ಆದ್ರು. ರೀ ಗೋಪಾಲ್, ಸುಮ್ನೆ ಕೂತ್ಕಳ್ರಿ ಏನಾಗಿದೆ ಅಂತ ನನಗೆ ಗೊತ್ತಿದೆ ಎಂದು ಏರು ಧ್ವನಿಯಲ್ಲಿಯೇ ರೇವಣ್ಣ ಪ್ರತ್ಯುತ್ತರ ನೀಡಿದ್ರು. ಇವರಿಬ್ಬರ ಈ ಮಾತಿನ ಸಮರ ಸಭೆಯಲ್ಲಿ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.

    ಸಂಪುಟ ಉಪ ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ನೇತೃತ್ವದ ಸಚಿವರ ತಂಡ ಹಾಸನ ಜಿಲ್ಲೆಯ ಬರಪೀಡಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ಮಾಡಿತ್ತು, ನಂತರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಸಚಿವರುಗಳಾದ ಕೃಷ್ಣಬೈರೇಗೌಡ, ಸಿ.ಎಸ್. ಪುಟ್ಟರಾಜು, ಯು.ಟಿ ಖಾದರ್, ಜಯಮಾಲಾ ಭಾಗವಹಿಸಿದ್ದರು. ಇವರ ಜತೆಗೆ ಜಿಲ್ಲೆಯ ಎಲ್ಲಾ ಶಾಸಕರೂ ಕೂಡಾ ಭಾಗವಹಿಸಿದ್ದರು.

    ಸಭೆಯ ಮಧ್ಯೆ ಹಾಸನ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ಎದ್ದು, ಕ್ಷೇತ್ರಕ್ಕೆ ಸಂಬಂಧಿಸಿದ ಬೇಡಿಕೆಯನ್ನು ಇಡುತ್ತಿದ್ದರು. ಪ್ರೀತಂ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಎಚ್.ಡಿ ರೇವಣ್ಣ ನೋಡಿ ಅಣ್ಣಾ, ನನಗೆ ನಮ್ಮ ಜಿಲ್ಲೆಯ ಅಭಿವೃದ್ಧಿ ಮಾತ್ರ ಮುಖ್ಯ. ಕಳೆದ ಹತ್ತು ವರ್ಷಗಳಿಂದ ನಮ್ಮ ಜಿಲ್ಲೆ ಅಭಿವೃದ್ಧಿ ಕಂಡಿರಲಿಲ್ಲ. ಈಗ ಅಭಿವೃದ್ಧಿಯಾಗಬೇಕಷ್ಟೇ ಎಂದ್ರು.

    ರೇವಣ್ಣರ ಈ ಮಾತಿಗೆ ಕೆರಳಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ರೇವಣ್ಣ ಅವರೇ, ನಮ್ಮ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೂ ಕೆಲಸ ಆಗಿದೆ. ನೀವು ಹಾಗೆ ಹೇಳಬೇಡಿ. ಇದು ಸಮ್ಮಿಶ್ರ ಸರ್ಕಾರ ಎಂದು ಗರಂ ಆದ್ರು. ಇದರಿಂದ ಸಿಟ್ಟಾದ ರೇವಣ್ಣ ಏನು ಕೆಲಸ ಆಗಿದೆ ಹೇಳ್ರಿ ಎಂದು ಏರು ಧ್ವನಿಯಲ್ಲಿಯೇ ಉತ್ತರ ಕೊಟ್ರು.

    ತಮ್ಮ ಮಾತನ್ನು ಮುಂದುವರಿಸಿದ ಗೋಪಾಲಸ್ವಾಮಿ, ಹಾಸನದಲ್ಲಿ ಬೇಕಾದಷ್ಟು ಆಗಿದೆ ಎಂದು ಪ್ರತ್ಯುತ್ತರ ನೀಡಿದ್ರು. ಬರೀ ಎಂಜಿನಿಯರಿಂಗ್ ಕಾಲೇಜ್ ನ ಡೋರ್ ರಿಪೇರಿ ಮಾಡಲೂ ನಿಮ್ಮಿಂದ ಸಾಧ್ಯವಾಗಲಿಲ್ಲ, ಈಗ ಕಾಲೇಜು ಮುಚ್ಚೋ ಹಂತಕ್ಕೆ ಬಂದಿದೆ. ನನಗೆ ಗೊತ್ತು ಸುಮ್ನೆ ಕೂತ್ಕೋಳ್ರೀ ಎಂದು ಗೋಪಾಲಸ್ವಾಮಿ ಅವರಿಗೆ ರೇವಣ್ಣ ಗದರಿದರು. ಹೀಗೆ ಇಬ್ಬರ ನಡುವೆಯೂ ವಾಗ್ವಾದ ನಡೆಯಿತು. ಈ ವೇಳೆ ಮಧ್ಯೆ ಪ್ರವೇಶಿದ ಸಚಿವ ಕೃಷ್ಣಬೈರೇಗೌಡ ಅವರು, ರೇವಣ್ಣ ಅವರಿಗೆ ಇನ್ನೂ ಹೆಚ್ಚಿನ ಕೆಲಸ ಆಗಬೇಕಿತ್ತು ಅನ್ನೋ ಆಸೆ ಇದೆ ಅನ್ನಿಸುತ್ತದೆ ಎನ್ನುವ ಮೂಲಕ ಇಬ್ಬರ ಜಗಳಕ್ಕೆ ತೇಪೆ ಹಚ್ಚಿದ್ರು. ಜಗಳ ತಣ್ಣಗಾದ ಮೇಲೆ ರೀ ಪ್ರೀತಂ ನೀನು ಬೆಂಕಿ ಹಚ್ಚಿ ತಮಾಷೆ ನೋಡ್ತಿಯಾ ಕಣಪ್ಪಾ ಅಂತಾ ಕೃಷ್ಣಬೈರೇಗೌಡ್ರು ಪ್ರೀತಂಗೆ ಟಾಂಗ್ ನೀಡಿದ್ರು.

    ಒಟ್ಟಿನಲ್ಲಿ ಇಬ್ಬರ ಜಗಳವನ್ನು ನೋಡ್ತಾ ಇದ್ದ ಕಾಂಗ್ರೆಸ್ ನ ಸಚಿವರುಗಳು ಅವರಿಗೂ ಹೇಳಲಾಗದೇ, ಇವರಿಗೂ ಹೇಳಲಾಗದೇ ಸುಮ್ನೆ ಜಗಳ ನೋಡ್ತಾ ಕೂತಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರ ನಡುವೆ ಹೊಂದಾಣಿಕೆಯೇ ಇಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದ್ದು, ಈ ಇಬ್ಬರ ಮಧ್ಯೆ ಅಧಿಕಾರಿಗಳು ಮಾತ್ರ ಬೆಸತ್ತು ಹೋಗಿರೋದಂತೂ ಸುಳ್ಳಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕೇಂದ್ರದ್ದು ಪಾಪ್ ಕಾರ್ನ್ ಬಜೆಟ್ – ಸಚಿವ ಡಿಕೆಶಿ ವ್ಯಂಗ್ಯ

    ಕೇಂದ್ರದ್ದು ಪಾಪ್ ಕಾರ್ನ್ ಬಜೆಟ್ – ಸಚಿವ ಡಿಕೆಶಿ ವ್ಯಂಗ್ಯ

    ಬೆಂಗಳೂರು: ಇದು ಚುನಾವಣೆ ಬಜೆಟ್ ಅಷ್ಟೆ. ಮೋದಿ ಅವರು ರಾಜ್ಯ ಸರ್ಕಾರದ ಸಾಲಮನ್ನಾವನ್ನು ಲಾಲಿಪಪ್ ಅಂತ ಹೇಳಿದ್ದರು. ಮೋದಿ ಬಜೆಟ್ ಪಾಪ್ ಕಾರ್ನ್ ಬಜೆಟ್ ಆಗಿದೆ ಎಂದು ಸಚಿವ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ರು.

    ಮೋದಿ ಸರ್ಕಾರದ ಕೊನೆಯ ಕೇಂದ್ರ ಬಜೆಟ್ ಇಂದು ಮಂಡನೆಯಾಗಿದ್ದು, ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ರೈತರನ್ನು ಬದುಕಿಸಬೇಕು. ಕೇಂದ್ರದ ಇಂದಿನ ಬಜೆಟ್ ರೈತರಿಗೂ ಅನುಕೂಲವಾಗೋದಿಲ್ಲ. ಬಿಜೆಪಿ ಅವರಿಗೆ ರಾಜಕೀಯಕ್ಕೂ ಈ ಬಜೆಟ್ ಅನುಕೂಲ ಆಗೊಲ್ಲ ಎಂದು ತಿಳಿಸಿದ್ದಾರೆ.

    ಜೆಡಿಎಸ್, ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಒಣಭೂಮಿ ಬೇಸಾಯ ಮಾಡೋರಿಗೆ 10 ಸಾವಿರ ನಾವು ಘೋಷಣೆ ಮಾಡಿದ್ದೆವು. ವ್ಯವಸಾಯ ಮಾಡೋರಿಗೆ 6 ಸಾವಿರ ಕೊಡ್ತೀನಿ ಅಂತ ಹೇಳ್ತಿದ್ದಾರೆ ಅಷ್ಟೇ. ಇದರಲ್ಲಿ ಯಾವುದೇ ಲಾಭವಿಲ್ಲ. ಏನಾದ್ರೂ ಕೊಟ್ಟರೆ ಹೊಟ್ಟೆ ತುಂಬ ಕೊಡಬೇಕು ಎಂದು ಹೇಳಿದ್ದಾರೆ.

    ರೈತನಿಗೆ ನಮ್ಮ ರಾಜ್ಯದಲ್ಲಿ 50 ಸಾವಿರದಷ್ಟು ಉಚಿತ ವಿದ್ಯುತ್ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಮೋದಿ ಸರ್ಕಾರಕ್ಕಿಂತ ಉತ್ತಮ ಯೋಜನೆಗಳನ್ನ ನೀಡಿದೆ. ಇದೊಂದು ಫೇಲ್ಯೂರ್ ಬಜೆಟ್ ಆಗಿದೆ. ಈ ಬಜೆಟ್ ನಿಂದ ಯಾವುದೇ ಲಾಭ ಇಲ್ಲ. ಉದ್ಯೋಗ ಸೃಷ್ಟಿಯಲ್ಲೂ ಯಾವುದೇ ಆಶಾಭಾವನೆ ಈ ಬಜೆಟ್ ನಲ್ಲಿ ಇಲ್ಲ ಎಂದು ಅವರು ಪ್ರತಿಕ್ರಿಯಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಎಲೆಕ್ಷನ್ ಟೈಂನಲ್ಲಿ ದುಡ್ಡು ಕೊಡೋಕೆ ಆಗಲ್ಲ ಅಂತ ಅಕೌಂಟ್‍ಗೆ ಹಾಕ್ತಿದ್ದಾರೆ- ರೇವಣ್ಣ ವ್ಯಂಗ್ಯ

    ಎಲೆಕ್ಷನ್ ಟೈಂನಲ್ಲಿ ದುಡ್ಡು ಕೊಡೋಕೆ ಆಗಲ್ಲ ಅಂತ ಅಕೌಂಟ್‍ಗೆ ಹಾಕ್ತಿದ್ದಾರೆ- ರೇವಣ್ಣ ವ್ಯಂಗ್ಯ

    ಬೆಂಗಳೂರು: ಚುನಾವಣೆ ಸಮಯದಲ್ಲಿ ಹಣ ಹಂಚಲು ಆಗಲ್ಲ. ಹೀಗಾಗಿ ರೈತರ ನೆಪದಲ್ಲಿ ಅಕೌಂಟ್‍ಗೆ ದುಡ್ಡು ಜಮೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು, ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ದೇಶದ ಜನರು 5 ವರ್ಷ ಕಾದಿರುವುದಕ್ಕೆ 6 ಸಾವಿರ ರೂ. ಬೋನಸ್ ನೀಡಿದ್ದಾರೆ. ಹೀಗಾಗಿ ಅವರ ಅಧಿಕಾರ ಅವಧಿಯ ಮುಕ್ತಾಯವಾಗಲು 4 ತಿಂಗಳು ಬಾಕಿ ಇದ್ದು, 2 ಸಾವಿರ ರೂ. ನಂತೆ ಪಾವತಿ ಮಾಡುತ್ತಾರೆ ಅಷ್ಟೇ ಎಂದು ಕುಟುಕಿದರು.

    ನಮ್ಮ ನಿರೀಕ್ಷೆಯಂತೆ ಬಜೆಟ್ ಮಂಡನೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಾಲಮನ್ನಾ ಮಾಡುತ್ತಾರೆ ಎನ್ನುವ ಭರವಸೆ ಇಟ್ಟುಕೊಂಡಿದ್ದೇವು. ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 10 ಸಾವಿರ ರೂ. ಹಾಕುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಹಾಗೆ ಮಾಡಲಿಲ್ಲ ಎಂದ ಅವರು, ಚುನಾವಣೆ ಸಮಯದಲ್ಲಿ ಹಣ ಹಂಚಲು ಹೋದರೆ ಚುನಾವಣಾ ಆಯೋಗ ಬಿಡಲ್ಲ. ಅದಕ್ಕೆ ಸಣ್ಣ ಹಿಡುವಳಿದಾರರ ರೈತರ ಬ್ಯಾಂಕ್‍ಗೆ ಹಣ ಹಾಕುವ ಪ್ಲಾನ್ ಮಾಡಿದ್ದಾರೆ ಎಂದು ಕಾಲೆಳೆದರು.

    ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಅಭ್ಯರ್ಥಿ ಆಯ್ಕೆಯ ವಿಚಾರವನ್ನು ಪಕ್ಷದ ವರಿಷ್ಠ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ತೆಗೆದುಕೊಳ್ಳುತ್ತಾರೆ. ಹಾಸನದಲ್ಲಿ ತ್ರೀಕೋನ ಸ್ಪರ್ಧೆಗೂ ನಾವು ಸಿದ್ಧರಿದ್ದೇವೆ ಹಾಗೂ ಕಾಂಗ್ರೆಸ್ ಜತೆ ಹೊಂದಾಣಿಕೆಗೂ ರೆಡಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

    12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

    ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ.

    ಎಸ್‍ಪಿ, ಡಿವೈಎಸ್‍ಪಿ ನೇತೃತ್ವದ ತಂಡದಲ್ಲಿ ಹೈದ್ರಾಬಾದ್‍ನಲ್ಲಿ ಹುಡುಕಾಡುತ್ತಿದ್ದು, `ರೌಡಿ ಶೀಟರ್’ ಆಗಿದ್ದ ಓರ್ವ ಶಾಸಕನ ಬಂಧನಕ್ಕೆ ಪೊಲೀಸರಿಗೆ ಇಷ್ಟೊಂದು ಕಷ್ಟನಾ ಅನ್ನೋ ಪ್ರಶ್ನೆ ಮೂಡಿದೆ.

    ಇತ್ತ `ಬಾಟ್ಲಿ’ ಬಾಯ್ಸ್ ನಡುವೆ ಸಂಧಾನಕ್ಕೆ ಸಚಿವ ಜಮೀರ್ ಅಹ್ಮದ್ ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ದಿನ ನಿತ್ಯ ಆಪೋಲೋ ಆಸ್ಪತ್ರೆಗೆ ಸಚಿವರು ತೆರಳಿ ಶಾಸಕ ಆನಂದ್ ಸಿಂಗ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಹೇಗಾದ್ರೂ `ರೌಡಿ ಎಂಎಲ್‍ಎ’ ಗಣೇಶ್ ಬಚಾವ್ ಮಾಡಲು ಆಹಾರ ಸಚಿವರು ಹರಸಾಹಸ ಪಡುತ್ತಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ನಡೆದದ್ದು ನಡೆದು ಹೋಗಿದೆ. ಕುಳಿತುಕೊಂಡು ಮಾತಾಡಿ ಎಲ್ಲವನ್ನೂ ಬಗೆಹರಿಸಿಕೊಳ್ಳೋಣ. ಕಂಪ್ಲಿ ಶಾಸಕ ಗಣೇಶ್ ಅರೆಸ್ಟ್ ಆದ್ರೆ ಪಕ್ಷಕ್ಕೆ ಮುಜುಗರ ಆಗುತ್ತದೆ ಎಂದು ಜಮೀರ್ ಸಂಧಾನಕ್ಕೆ ಮುಂದಾದ್ರೆ ಶಾಸಕ ಆನಂದ್ ಸಿಂಗ್ ಮಾತ್ರ ಏನೂ ಹೇಳದೇ ಸುಮ್ಮನಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕೈ ನಾಯಕರು ಹಾದಿ ಬೀದಿಯಲ್ಲಿ ಬಾಯಿಗೆ ಬಂದಂತೆ ಮಾತನಾಡೋದನ್ನು ನಿಲ್ಲಿಸಬೇಕು: ಸಚಿವ ಪುಟ್ಟರಾಜು

    ಕೈ ನಾಯಕರು ಹಾದಿ ಬೀದಿಯಲ್ಲಿ ಬಾಯಿಗೆ ಬಂದಂತೆ ಮಾತನಾಡೋದನ್ನು ನಿಲ್ಲಿಸಬೇಕು: ಸಚಿವ ಪುಟ್ಟರಾಜು

    ಬೆಂಗಳೂರು: ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಅಜಯ್ ಸಿಂಗ್ ಪದಗ್ರಹಣ ಸಮಾರಂಭಕ್ಕೆ ಜೆಡಿಎಸ್ ನಾಯಕರ ಗೈರಿಗೆ ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ಸಮರ್ಥನೆ ಕೊಟ್ಟಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡಿದರೆ ಹೀಗೆ ಆಗುತ್ತದೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನು ಓದಿ: ನಮಗೆ ಯಾರು ಅನಿವಾರ್ಯ ಇಲ್ಲ, ನಾವು ಎಲ್ಲರಿಗೂ ಅನಿವಾರ್ಯ – ಎಲ್ಲದ್ದಕ್ಕೂ ನಾವು ರೆಡಿ ಎಂದ ಸುರೇಶ್ ಗೌಡ

    ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಮ್ಮ ಮೂಲವನ್ನು ಗಮನಿಸಬೇಕು. ಸಿಎಂ ಕುಮಾರಸ್ವಾಮಿ ಅವರು ಮೆಚ್ಯೂರಿಟಿ ಇರುವುದಕ್ಕೆ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುತ್ತಿರುವುದು. ಹಾದಿ ಬೀದಿಯಲ್ಲಿ ನಿಂತು ಮಾತನಾಡುವುದನ್ನು ಬಿಡಬೇಕು. ಕಾಂಗ್ರೆಸ್ಸಿನವರ ವರ್ತನೆಯಿಂದಾಗಿ ನಾವು ಯಾರೂ ಅಜಯ್ ಸಿಂಗ್ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಅಜಯ್ ಸಿಂಗ್ ನಮಗೆ ಆತ್ಮೀಯರು. ಆದರೆ ಕಾಂಗ್ರೆಸ್‍ನವರ ಹೇಳಿಕೆಯಿಂದಾಗಿ ಕಾರ್ಯಕ್ರಮಕ್ಕೆ ಗೈರು ಹಾಜರಿ ಹಾಕಿದ್ದೇವೆ. ಪದೇ ಪದೇ ಕೆಣಕಿದರೆ ಉತ್ತರ ಕೊಡಬೇಕಾಗುತ್ತದೆ. ಕಾಂಗ್ರೆಸ್‍ನವರು ಈ ವರ್ತನೆಯನ್ನು ಬಿಡಬೇಕು ಎಂದು ಸಚಿವರು ಹೇಳಿದ್ದಾರೆ.

    ಹಿಂದೆ ಬಿಜೆಪಿ ಜೊತೆ ಸೇರಿ ಉತ್ತಮ ಆಡಳಿತ ನೀಡಿದ್ದೇವೆ. ಕೃಷ್ಣದೇವರಾಯನ ಆಡಳಿತ ಮರುಕಳಿಸಿದಂತಿತ್ತು ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಜೊತೆ ಸರ್ಕಾರ ಮಾಡಿದಾಗ ಹೇಗಿತ್ತು ಎಂಬುದನ್ನು ಹೇಳಿದ್ದೇನೆ ಅಷ್ಟೇ. ಈಗ ಬಿಜೆಪಿ ಜೊತೆ ಹೋಗುತ್ತೇವೆ ಎಂದಿಲ್ಲ ಎಂದು ಪುಟ್ಟರಾಜು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

    ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕೆಳಹಂತದ ನಾಯಕರನ್ನು ಮೊದಲು ಹದ್ದುಬಸ್ತಿನಲ್ಲಿಡಬೇಕು. ಮನಸ್ಸಿಗೆ ಬಂದಂತೆ ಮಾತನಾಡಬಾರದು. ಸರ್ಕಾರದ ಯಾವುದೇ ಬೆಳವಣಿಗೆಗೆ ಸಂಬಂಧಿಸಿದಂತೆ ಮಾತನಾಡಲು ಜೆಡಿಎಸ್ ವರಿಷ್ಠ ದೇವೇಗೌಡ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಇದ್ದಾರೆ. ತಮ್ಮ ನಾಯಕರನ್ನು ಖುಷಿ ಪಡಿಸಲು ಕಾಂಗ್ರೆಸ್ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಇತ್ತೀಚೆಗಷ್ಟೆ ಶಾಸಕ ಸೋಮಶೇಖರ್ ಅವರು ಬೆಂಗಳೂರಿಗೆ ಯಾವುದೇ ಅಭಿವೃದ್ಧಿ ಅನುದಾನ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಹಾಗಾದರೆ ಮೆಟ್ರೋ ಎರಡನೇ ಹಂತಕ್ಕೆ ಕ್ಲಿಯರೆನ್ಸ್ ಕೊಟ್ಟಿದ್ದು ಯಾರು? ಎಲಿವೇಟೆಡ್ ನಿರ್ಮಾಣಕ್ಕೆ ಅನುಮತಿ ಕೊಟ್ಟಿದ್ದು ಯಾರು? ದೇಶದಲ್ಲೇ ಕುಮಾರಸ್ವಾಮಿ ಅವರು ಅತ್ಯುತ್ತಮ ಮುಖ್ಯಮಂತ್ರಿ ಅಂತಾ ಹೊಗಳುತ್ತಿರುವಾಗ ಇವರು ಏನೇನೋ ಹೇಳಿಕೆ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ತಿರುಗೇಟು ನೀಡಿದರು.

    https://www.youtube.com/watch?v=jB2geNxJJtU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ವಿಧಾನಸೌಧದಲ್ಲಿ 25 ಲಕ್ಷ ಸಿಕ್ಕಿದ್ದಕ್ಕೆ ಟ್ವಿಸ್ಟ್- ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾದ ಪ್ರಕರಣ!

    ವಿಧಾನಸೌಧದಲ್ಲಿ 25 ಲಕ್ಷ ಸಿಕ್ಕಿದ್ದಕ್ಕೆ ಟ್ವಿಸ್ಟ್- ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾದ ಪ್ರಕರಣ!

    ಬೆಂಗಳೂರು: ಇತ್ತೀಚೆಗೆ ವಿಧಾನಸೌಧದಲ್ಲಿ ಸಿಕ್ಕ 25 ಲಕ್ಷ ಹಣ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾಗಿದೆ.

    ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಲಂಚ ನೀಡಿದ ಆ ಗುತ್ತಿಗೆದಾರರು ಯೋಗೀಶ್ ಬಾಬು, ಜ್ಯೋತಿ ಪ್ರಕಾಶ್, ಉಮೇಶ್, ರಾಜು ಮತ್ತು ಸತೀಶ್ ಎಂಬುದಾಗಿ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪ್ರಕರಣದ ತನಿಖೆಗೆ ಇಳಿದ ಎಸಿಬಿ ದಾಖಲೆ ಸಮೇತ ಗುತ್ತಿಗೆದಾರರನ್ನು ಪತ್ತೆ ಹಚ್ಚಿದೆ. ಈ ಐವರು ಗುತ್ತಿಗೆದಾರರ ಜೊತೆ ಸಚಿವ ಪುಟ್ಟರಂಗಶೆಟ್ಟಿ ಅವರು ನಿರಂತರವಾಗಿ ಫೋನ್ ಸಂಪರ್ಕದಲ್ಲಿರುತ್ತಿದ್ದರು. ಇವರೆಲ್ಲರು ರಸ್ತೆ ಗುತ್ತಿಗೆದಾರರಾಗಿದ್ದು, ಡಾಂಬರೀಕರಣದ ಗುತ್ತಿಗೆ ಪಡೆಯಲು ಸಚಿವರಿಗೆ ತಲಾ ಐದು ಲಕ್ಷ ಟೋಕನ್ ಅಡ್ವಾನ್ಸ್ ಪಡೆದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ವಿಧಾನಸೌಧದ ಪಶ್ಚಿಮ ಗೇಟ್‍ನಲ್ಲಿ ಸಿಕ್ತು ಕಂತೆ ಕಂತೆ ಹಣ – ಸಚಿವರ ಕಚೇರಿ ಟೈಪಿಸ್ಟ್ ಬಳಿಯೇ ಹಣ ಪತ್ತೆ!

    ಬರೋಬ್ಬರಿ ಎರಡು ಕೋಟಿಗೆ ನಡೆದಿದ್ದ ಡೀಲ್‍ನಲ್ಲಿ ಸಚಿವರಿಗೆ 25 ಲಕ್ಷ ಟೋಕನ್ ಅಡ್ವಾನ್ಸ್ ಆಗಿತ್ತು. ಈ ಐವರು ಲಂಚ ನೀಡಿದವರ ಹೇಳಿಕೆ ಆಧರಿಸಿ ಇದೀಗ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಇದೇ ವಾರದಲ್ಲಿ ಎಸಿಬಿ ನೋಟೀಸ್ ನೀಡುವ ಸಾಧ್ಯತೆಗಳಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಮಾಜಿ ಸಿಎಂ ಆಪ್ತ ಮಿನಿಸ್ಟರ್ ಪುಟ್ಟರಂಗಶೆಟ್ಟಿ ಅರೆಸ್ಟ್ ಆಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

    ಏನಿದು ಪ್ರಕರಣ..?:
    ಇತ್ತೀಚೆಗೆ ವಿಧಾನ ಸೌಧದ ಪಶ್ಚಿಮ ಗೇಟ್ ಬಳಿ ಕಾರು ಪರಿಶೀಲನೆ ನಡೆಸುತ್ತಿದ್ದ ವೇಳೆ ಮೋಹನ್ ಎಂಬಾತನ ಬಳಿ ಸುಮಾರು 25.76 ಲಕ್ಷ ರೂ. ಹಣ ಪತ್ತೆಯಾಗಿತ್ತು. ಮೋಹನ್ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಟೈಪಿಸ್ಟ್ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿತ್ತು. ಹಣ ಪತ್ತೆಯಾದ ಕೂಡಲೇ ಮೋಹನ್ ನನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಹಣದ ಮೂಲದ ಕುರಿತು ವಿಚಾರಣೆ ಆರಂಭಿಸಿದ್ದರು. ಈ ಕುರಿತು ಅಂದು ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ವಿಧಾನದಸೌಧದ ತಮ್ಮ ಕಚೇರಿಯಲ್ಲಿ ಸಿಬ್ಬಂದಿ ಬಳಿ ಹಣ ಸಿಕ್ಕಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೂ ಸಿದ್ಧನಿದ್ದೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬೆಂಗಳೂರು: ನಾವೇನು ಅಧಿಕಾರ ಬೇಕೆಂದು ಯಾರ ಮನೆ ಬಳಿಯೂ ಹೋಗಿಲ್ಲ. ನೀವು ಸಿಎಂ ಆಗಿ ಎಂದು ಕಾಂಗ್ರೆಸ್ಸಿಗರು ದೇವೇಗೌಡರ ಮನೆ ಬಳಿ ಬಂದಿದ್ದರು. ಬೇಷರತ್ ಬೆಂಬಲ ಎಂದು ಓಡಿ ಬಂದಿದ್ದ ಕಾಂಗ್ರೆಸ್ ನವರು ಈಗ ಉಲ್ಟಾ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ಕೈ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ವಿಧಾನಸೌಧದಲ್ಲಿ ಸಿಎಂ ರಾಜೀನಾಮೆ ಹೇಳಿಕೆ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು. ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಹೇಳಬೇಕಾದರೆ ಎಷ್ಟು ನೋವಿದೆ ಅವರಿಗೆ ಎಂದು ಜನರೇ ಗಮನಿಸಲಿ. ಬಿಜೆಪಿ ಜೊತೆ ನಡೆಸಿದ ಆ 20 ತಿಂಗಳ ಅಧಿಕಾರ ಇಡೀ ರಾಜ್ಯದ ಜನತೆಯೇ ಮೆಚ್ಚುವಂತಿತ್ತು. ಈಗ ಹೆಜ್ಜೆಹೆಜ್ಜೆಗೂ ತಕರಾರು. ನಮ್ಮ ಪ್ರತಿ ರಕ್ತದ ಕಣದಲ್ಲೂ ಎಚ್ ಡಿಕೆ ಸಿಎಂ, ದೇವೇಗೌಡರು ನಮ್ಮ ಮೇರು ನಾಯಕರಾಗಿರುತ್ತಾರೆ. ಕಾಂಗ್ರೆಸ್ ನವರು ಇದೇ ರೀತಿ ಮಾತು ಮುಂದುವರಿಸಿದರೆ ಮುಂದಿನ ಪರಿಣಾಮ ಬೇರೆಯೇ ಆಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ರು.

    2006-07 ರಲ್ಲಿ ಬಿಜೆಪಿಯ ಜೊತೆ ಸೇರಿ ಸರ್ಕಾರ ನಡೆಸಿದ್ದೇ ಚೆನ್ನಾಗಿತ್ತು. ಅಂದು ಎಚ್ ಡಿ ಕುಮಾರಸ್ವಾಮಿಯವರು ಒಳ್ಳೆಯ ಆಡಳಿತ ನಡೆಸಿ ಮೆಚ್ಚುಗೆ ಪಡೆದಿದ್ದರು. ಯಾರಿಂದ ಬೆರಳು ತೋರಿಸಿಕೊಳ್ಳದೇ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದ್ದರು. ಈಗ ಕಾಂಗ್ರೆಸ್ ನವರಿಂದ ಬರೀ ತಕರಾರು ಎಂದು ಸಚಿವರು ತಮ್ಮ ಆಕ್ರೋಶ ಹೊರಹಾಕಿದ್ರು.

    ರಾಜೀನಾಮೆ ನೀಡುವ ಕುರಿತು ಸಿಎಂ ಎಚ್ಡಿಕೆ ಹೇಳಿಕೆ ಹಿನ್ನೆಲೆಯಲ್ಲಿ ಇನ್ಮುಂದೆಯಾದರೂ ಕಾಂಗ್ರೆಸ್ಸಿನವರು ಸರಿ ಹೋಗಲಿಲ್ಲ ಅಂದರೆ ಸಿಎಂ ಏನ್ ಹೇಳಿದ್ದಾರೋ ಅದರ ಬಗ್ಗೆ ತೀರ್ಮಾನ ಆಗುತ್ತೆ ಎಂದು ತಿಳಿಸಿದರು.

    https://www.youtube.com/watch?v=8ldpuc1F85w

    https://www.youtube.com/watch?v=OflAzK4wALY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಇರ್ತಾರೆ- ಎಂಟಿಬಿ ನಾಗರಾಜ್

    ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಇರ್ತಾರೆ- ಎಂಟಿಬಿ ನಾಗರಾಜ್

    – ಸಚಿವ ಎಂಟಿಬಿ ನಾಗರಾಜ್ ಸಂಪತ್ತು ಕುರಿತು ಸಿದ್ದರಾಮಯ್ಯ ಹಾಸ್ಯ
    – ಇನ್ನೊಂದು ಐದು ವರ್ಷ ಸಿಕ್ಕಿದ್ದರೆ ಇನ್ನಷ್ಟು ಅಭಿವೃದ್ಧಿ ಮಾಡುತ್ತಿದ್ದೆ- ಸಿದ್ದರಾಮಯ್ಯ

    ಬೆಂಗಳೂರು: ನನ್ನ ಎದೆ ಬಗೆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

    ನಗರದ ನೈಸ್ ರಸ್ತೆಯ ಸೋಂಪುರ ಗೇಟ್ ಸಮೀಪದ ಜಟ್ಟಿಗರಹಳ್ಳಿಯಲ್ಲಿ ನಡೆದ ನೂತನ ಕನಕ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಹನುಮಂತನ ಎದೆ ಬಗೆದರೆ ಹೇಗೆ ರಾಮ ಕಾಣುತ್ತನೋ ಹಾಗೇ ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಜಪ ಕಾಣಿಸುತ್ತದೆ. ನಾನು ಯಾವಾಗಲೂ ಸಿದ್ದರಾಮಯ್ಯ ಅವರ ಜಪ ಮಾಡುತ್ತೇನೆ ಎಂದು ಹೇಳಿದರು.

    ಸಚಿವನಾಗಬೇಕು ಇಲ್ಲವೇ ರಾಜಕೀಯ ನಿವೃತ್ತಿ ತಗೆದುಕೊಳ್ಳಬೇಕು ಅಂತ ತೀರ್ಮಾನಿಸಿದ್ದೆ. ಅಷ್ಟೇ ಅಲ್ಲದೆ ನಾನು ಇನ್ನುಮುಂದೆ ಚುನಾವಣೆಗೆ ನಿಲ್ಲಲ್ಲ ಎನ್ನುವ ನಿರ್ಧಾರ ಕೈಗೊಂಡಿದ್ದೆ. ಹೀಗಾಗಿ ಈ ಬಾರಿಯೇ ಸಚಿವನಾಗಬೇಕು ಎನ್ನುವ ಕನಸು ಕಂಡಿದ್ದೆ. ನನ್ನ ಕನಸನ್ನು ಅವರು ಈಡೇರಿಸಿದರು ಎಂದು ಸಿದ್ದರಾಮಯ್ಯ ಅವರನ್ನು ಹಾಡಿಹೊಗಳಿದರು. ಇದನ್ನೂ ಓದಿ: ಕೆಲವರು ಮಗ, ಸೊಸೆಗೆ ಮಾತ್ರ ರಾಜಕೀಯ ಅವಕಾಶ ನೀಡ್ತಾರೆ : ಎಚ್‍ಡಿಡಿಗೆ ಸೋಮಶೇಖರ್ ಟಾಂಗ್

    ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ವರ್ಗದವರಿಗೂ ಉತ್ತಮ ಕಾರ್ಯಕ್ರಮ ಕೊಟ್ಟಿದ್ದರು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಸಿದ್ದರಾಮಯ್ಯ ಹೊರತು ಯಾವುದೇ ಮಣ್ಣಿನ ಮಕ್ಕಳಲ್ಲ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೋ ಹಾಕಿದ್ದು ಸಿದ್ದರಾಮಯ್ಯ ಹೊರತು ಯಾವುದೇ ಲಿಂಗಾಯತ ಮುಖ್ಯಮಂತ್ರಿ ಅಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಹೇಳಿದರು.

    ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ನಾನು ಕುರುಬರ ಸಂಘ ಉಳಿಸಿದೆ. ಈ ಹಿಂದೆ ಕುರುಬರ ಸಂಘದಲ್ಲಿ ಇದ್ದವರೇ ಸಂಘವನ್ನು ಮುಳುಗಿಸಲು ಮುಂದಾಗಿದ್ದರು. ಆದರೆ ನನ್ನ ಕಂಡರೆ ಗಡಗಡ ಅಂತ ನಡಗುತ್ತಿದ್ದರು. ಹೀಗಾಗಿ ಅವರ ಕಪಿಮುಷ್ಠಿಯಿಂದ ಸಂಘವನ್ನು ಪಡೆದು ಒಳ್ಳೆಯವರ ಕೈಗೆ ಕೊಟ್ಟೆ. ಅಲ್ಲಿಂದ ಕುರುಬರ ಸಂಘ ಚೆನ್ನಾಗಿ ನಡೆಯುತ್ತಿದೆ ಎಂದು ತಿಳಿಸಿದರು.

    ಕಾಗಿನೆಲೆ ಮಠಕ್ಕಾಗಿ ಹಣ ಸಂಗ್ರಹ ಮಾಡಲು ಶಿವಮೊಗ್ಗಕ್ಕೆ ಹೋಗಿದ್ವಿ. ಈ ವೇಳೆ ಮುಖಂಡರ ಜೊತೆಗೆ ಸಭೆ ನಡೆಸಿ 3 ಲಕ್ಷ ರೂ. ಹಣ ಸಂಗ್ರಹ ಮಾಡಿಕೊಡುವಂತೆ ಕೇಳಿಕೊಂಡಿದ್ದೇವು. ಮೊದಲ ಸಭೆಗೆ ಹಾಜರಾಗಿದ್ದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಹಣ ಕೊಡುವುದಕ್ಕೆ ಹಿಂದೇಟು ಹಾಕಿ ಎರಡನೇ ಸಭೆಗೆ ಪುಣ್ಯಾತ್ಮ ಬರಲೇ ಇಲ್ಲ ಎಂದು ವ್ಯಂಗ್ಯವಾಡಿದರು.

    ಸಂಘದಿಂದ ಮೆಡಿಕಲ್ ಕಾಲೇಜು ಅರಂಭಿಸಬೇಕು ಎನ್ನುವ ವಿಚಾರವಿತ್ತು. ಅದಕ್ಕೆ ಬೇಕಾಗಿದ್ದ ಅನುಮತಿಯನ್ನು ಸರ್ಕಾರವೂ ನೀಡಿತ್ತು. ಆದರೆ ಕಾಲೇಜು ನಿರ್ಮಿಸಲು 500 ಕೋಟಿ ರೂ.ಗಿಂತ ಅಧಿಕ ಹಣ ಬೇಕಾಗಿತ್ತು. ನಮ್ಮಲ್ಲಿ ಅಷ್ಟೊಂದು ಹಣ ಇರಲಿಲ್ಲ. ಅಷ್ಟೇ ಅಲ್ಲದೆ ಕುರುಬರಲ್ಲಿ ಹೆಚ್ಚು ಶ್ರೀಮಂತರಿಲ್ಲ ಎಂದ ಸಿದ್ದರಾಮಯ್ಯ ಅವರು, ನಮ್ಮ ಸಮುದಾಯದಲ್ಲಿ ಎಂಟಿಬಿ ಒಬ್ಬನೇ ಶ್ರೀಮಂತ ಎಂದು ಹಾಸ್ಯ ಮಾಡಿದರು.

    ಸಾರ್ವಜನಿಕ ಆಸ್ತಿ ವಿಷವಿದ್ದಂತೆ. ನನ್ನ ರಾಜಕೀಯ ಬದುಕಿನಲ್ಲಿ ಇಂತಹ ಆಸ್ತಿಯನ್ನು ಮುಟ್ಟಿಲ್ಲ. ಕೆಲವರು ಕುರುಬರ ಸಂಘದ ಹೆಸರಲ್ಲಿ ತಾವೇ ಆಸ್ತಿ ಮಾಡಿಕೊಂಡಿದ್ದಾರೆ ಎಂದ ಅವರು ಸಮಾಜದ ಹೆಸರಲ್ಲಿ ಹಣ ನುಂಗುವವರನ್ನು ಬಹಿಷ್ಕರಿಸಿ ಎಂದು ಮುಖಂಡರಿಗೆ ತಿಳಿಸಿದರು.

    ಮೀಸಲಾತಿ ಹಿಂದುಳಿದ ವರ್ಗದವರಿಗೆ ಬೇಕೇಬೇಕು. ಇದರಿಂದ ಸಮಬಲದವರ ಜೊತೆ ಸ್ಪರ್ಧಿಸಬಹುದು. ಜೊತೆಗೆ ಶಾಸಕರು ಹಾಗೂ ಸಂಸದರ ಕ್ಷೇತ್ರಗಳಲ್ಲೂ ಹಿಂದುಳಿದವರಿಗೆ ಮೀಸಲಾತಿ ನೀಡಬೇಕು. ನಾನು ಎಲ್ಲ ಜಾತಿಯ ಬಡವರಿಗೆ ನ್ಯಾಯ ಕೊಡುವ ಪ್ರಯತ್ನ ಮಾಡಿರುವೆ. ಆದರೆ ಅಹಿಂದದವರಿಗೆ ಸ್ವಲ್ಪ ಜಾಸ್ತಿ ಮಾಡಿರಬಹುದು ಎಂದು ಹೇಳಿದರು.

    ಟಿಪ್ಪು ಜಯಂತಿ, ಕೆಂಪೇಗೌಡ ಜಯಂತಿ, ಹಡಪದ ಅಪ್ಪಣ್ಣ ಜಯಂತಿ ಮಾಡಿದ್ದು ನಾನೇ. ಕೆಲವು ನಿಗಮಗಳನ್ನು ರಚನೆ ಮಾಡಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ನಮ್ಮ ಅವಧಿಯಲ್ಲಿ ಉತ್ತೇಜನ ಸಿಕ್ಕಿತ್ತು. ಬೆಂಗಳೂರು ನಗರ ಅಭಿವೃದ್ಧಿಗೆ ಸಾಕಷ್ಟು ಹಣ ಮಂಜೂರು, ರೈತರ ಅಭಿವೃದ್ಧಿಗೆ ಕಾರ್ಯಕ್ರಮ, ಸಾಲಮನ್ನಾ ಮಾಡಿರುವೆ. ನಾನು ಜನರ ಋಣ ತೀರಿಸಿರುವೆ. ನನಗೆ ನನ್ನ ಕೆಲಸಗಳ ಬಗ್ಗೆ ತೃಪ್ತಿ ಇದೆ ಎಂದರು.

    ಕೆಲವರು ಹೊಟ್ಟೆ ಕಿಚ್ವಿಗೆ ಸಿದ್ದರಾಮಯ್ಯ ಏನ್ ಮಾಡಿದ ಅಂತಾರೆ. ಇದೆಲ್ಲ ಯಾರು ಮಾಡಿದ್ದು? ಇನ್ನೊಂದು ಐದು ವರ್ಷ ಸಿಕ್ಕಿದ್ದರೆ ಇನ್ನಷ್ಟು ಅಭಿವೃದ್ಧಿ ಮಾಡುತ್ತಿದ್ದೆ. ಆದರೆ ಹೊಟ್ಟೆಕಿಚ್ಚು, ಅಪಪ್ರಚಾರದಿಂದ ಸೋಲಿಸಿಬಿಟ್ಟರು ಎಂದು ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಹುಟ್ಟೂರನ್ನು ದತ್ತು ಪಡೆಯುತ್ತೇವೆ: ಡಿಕೆಶಿ

    ಸಿದ್ದಗಂಗಾ ಶ್ರೀಗಳ ಹುಟ್ಟೂರನ್ನು ದತ್ತು ಪಡೆಯುತ್ತೇವೆ: ಡಿಕೆಶಿ

    ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಈ ಹಿಂದೆ ಆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿಯಾಗಿತ್ತು. ಇದೀಗ ಮತ್ತೆ ಅದರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಿರುವುದಾಗಿ ಅವರು ಹೇಳಿದ್ರು.

    ಬಾಲಗಂಗಾಧರನಾಥ್ ಸ್ವಾಮೀಜಿ ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮತಾಳಿದ ಗ್ರಾಮಗಳಾಗಿದ್ದು, ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ ಅಂದ್ರು.

    ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ವಿಧಾನಸಭೆಯಲ್ಲಿ ಒಂದು ನಿರ್ಣಯ ಮಾಡುತ್ತವೆ. ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭಾರತ ರತ್ನ ನೀಡಬೇಕು, ಅವರ ಮೇಲೆ ಒತ್ತಡ ತರಲಾಗುವುದು ಎಂದರು.

    ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕರು ಹೊಡೆದಾಡಿಕೊಂಡ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ಆನಂದ್ ಸಿಂಗ್ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಈ ಘಟನೆ ನಡೆಯಬಾರದಾಗಿತ್ತು ನಡೆದು ಹೋಗಿದೆ. ಈ ಪ್ರಕರಣ ಸಂಬಂಧ ಕಾನೂನು ವ್ಯವಸ್ಥೆ ನಡೆಯುತ್ತಿದೆ. ಶಾಸಕ ಗಣೇಶ್ ಎಲ್ಲಿದ್ದಾರೆ ಅಂತಾ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

    ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರು ಮಾಡಲಾಗಿದೆ. 9 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿಗಳ ಡಿಪಿಆರ್ ಆಗಿದ್ದು ಕೇಂದ್ರಕ್ಕೆ ನೀಡಿದ್ದೇವೆ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೇದಿಕೆಯಲ್ಲೇ ಸಚಿವ ರೇವಣ್ಣ, ಪ್ರೀತಂಗೌಡ ವಾಕ್ಸಮರ..!

    ವೇದಿಕೆಯಲ್ಲೇ ಸಚಿವ ರೇವಣ್ಣ, ಪ್ರೀತಂಗೌಡ ವಾಕ್ಸಮರ..!

    ಹಾಸನ: 70ನೇ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಲ್ಲೇ ಲೋಕೋಪಯೋಗಿ ಸಚಿವ ರೇವಣ್ಣ ಹಾಗೂ ಶಾಸಕ ಪ್ರೀತಂಗೌಡ ಮಧ್ಯೆ ವಾಗ್ವಾದ ನಡೆದಿದೆ.

    ಹಾಸನ ಬಿ.ಎಂ. ರಸ್ತೆಯ ಅಗಲೀಕರಣ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನನ್ನ ಗಮನಕ್ಕೆ ಬಾರದೆ ರಸ್ತೆ ಕಾಮಗಾರಿ ಮಾಡಿದ್ದೀರಾ ಎಂದು ಶಾಸಕ ಪ್ರೀತಂಗೌಡ ಅವರು ವೇದಿಕೆಯಲ್ಲೇ ಸಚಿವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಸಚಿವರು ನಂಗೇನೂ ಗೊತ್ತಿಲ್ಲ ಎಲ್ಲ ಡಿಸಿ ಮೇಡಂ ಮಾಡಿರೋದು. ಹೋಗಿ ಅವರನ್ನೇ ಕೇಳು ಎಂದು ಹೇಳಿದ್ದಾರೆ.

    ಇದರಿಂದ ಸಿಡಿಮಿಡಿಗೊಂಡ ಶಾಸಕರು, ನಿಮ್ಮ ಮೇಲೆ ಹಕ್ಕು ಚ್ಯುತಿ ಮಂಡನೆ ಮಾಡುತ್ತೇನೆ ಅಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಅವರು, ಹಕ್ಕುಚ್ಯುತಿ ಆದ್ರೆ ಏನು ಅಂತಾ ಮೊದಲು ತಿಳಿದುಕೊಂಡು ಬಾ ಎಂದು ಶಾಸಕರಿಗೆ ತಿರುಗೇಟು ನೀಡಿದ್ದಾರೆ.

    https://www.youtube.com/watch?v=O_eS2ctIFOE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv