ಬೆಂಗಳೂರು: ಪ್ರತಿ ತಿಂಗಳು ಪ್ರತಿಯೊಬ್ಬ ಆಟೋ ಚಾಲಕ 500 ರೂ. ಉಳಿತಾಯ ಮಾಡಿದರೆ, ಸಂಘಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ ನೀಡುತ್ತೇವೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರಮಿಕ ವರ್ಗವಾದ ನೀವು ಆರ್ಥಿಕ ಉಳಿತಾಯಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು. ಇದನ್ನೂ ಓದಿ: ನ್ಯುಮೋನಿಯಾದಿಂದ ಮೃತಪಟ್ಟ ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ!
ನಿಮ್ಮದೇ ಆದ ಸಂಘ ಮಾಡಿಕೊಂಡು ಅದರಲ್ಲಿ ಉಳಿತಾಯ ಮಾಡುತ್ತ ಬನ್ನಿ. ಪ್ರತಿ ತಿಂಗಳು ಪ್ರತಿಯೊಬ್ಬ ಆಟೋಚಾಲಕ 500 ರೂ ಉಳಿತಾಯ ಮಾಡಿದರೆ ನಾನು ಸಂಘಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಸಹಾಯಧನ ನೀಡುತ್ತೇನೆ ಎಂದರು. ಇದನ್ನೂ ಓದಿ:ದಕ್ಷಿಣ ಕನ್ನಡ: ದಾರಿಯಲ್ಲಿ ಐದು ಗ್ರಾನೈಡ್ ಪತ್ತೆ!
ಇದೇ ವೇಳೆ ನಟ ಪುನೀತ್ ಅವರನ್ನು ಸ್ಮರಿಸಿದ ಸಚಿವರು, ಪುನೀತ್ ರಾಜ್ಕುಮಾರ್ ಅವರ ನಿಧನದ ನೋವಿನಿಂದ ನಾನೂ ಸೇರಿದಂತೆ ನಾಡಿನ ಅಪಾರ ಅಭಿಮಾನಿಗಳು, ಹಿತೈಷಿಗಳು ಹೊರಬಂದಿಲ್ಲ. ಅವರ ನಿಧನ ರಾಜ್ಯಕ್ಕೆ ಮತ್ತು ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ವಿಷಾದಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಸೇರಿದಂತೆ ವಿವಿಧ ಕನ್ನಡ ಪರ ಮತ್ತು ಆಟೋಚಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್
ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ
14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾವೇರಿ: ಕೋವಿಡ್ ಕಾರಣಕ್ಕೆ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲೇ ನಡೆಸಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಹಾವೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ಹೇಳಿದ್ದಾರೆ. ಈ ವೇಳೆ ಸಮ್ಮೇಳನದ ವಿಚಾರ ಪ್ರಸ್ತಾಪಿಸಲಾಗುವುದು ಎಂದರು.
ಮಡಿಕೇರಿ: ರಾಜ್ಯದ ಅಲ್ಲಲ್ಲಿ ಅಸ್ಪೃಶ್ಯತೆ ಆಚರಣೆಯಂತಹ ಘಟನೆಗಳ ಬಗ್ಗೆ ಮಾಹಿತಿ ಇದೆ. ಮುಂದೆ ಇಂತಹ ಪ್ರಕರಣಗಳು ಮತ್ತೆ ಬೆಳಕಿಗೆ ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಚ್ಚರಿಸಿದರು.
ಸೋಮವಾರ ಮಡಿಕೇರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತಾನಾಡಿದ ಅವರು, ರಾಜ್ಯದ ಹಲವೆಡೆ ಅಸ್ಪೃಶ್ಯತೆ ಆಚರಣೆ ಈ ಹಿಂದಿನಿಂದಲೂ ಅಗುತ್ತಿದೆ. ಅಸ್ಪೃಶ್ಯತೆ ಆಚರಣೆ ಕಂಡು ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಅಸ್ಪೃಶ್ಯತೆ ನಿವಾರಣೆಗಾಗಿ ದೊಡ್ಡ ಆಂದೋಲನ ನಡೆಸಲಾಗುವುದು. ಅದಕ್ಕಾಗಿ ಪೂರ್ವಭಾವಿ ತಯಾರಿ ಮಾಡಲಾಗುತ್ತಿದೆ. ಎಸ್ಸಿ/ಎಸ್ಟಿಗಳ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಮುದಾಯದ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಿರುವ ಶೇ. 24ರಷ್ಟು ಅನುದಾನವನ್ನು ಸಂಪೂರ್ಣವಾಗಿ ಬಳಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೋಟೆನಾಡಲ್ಲಿ ಅಸ್ಪೃಶ್ಯತೆ, ಕೋಮುವಾದ ವಿರೋಧಿಸಿ 101 ಜನ ಬೌದ್ಧ ಧರ್ಮಕ್ಕೆ ಮತಾಂತರ
ಸಮಾಜದ ಕಟ್ಟಕಡೆಯ ಮನುಷ್ಯನಿಗೆ ಅರ್ಥಿಕ ಮತ್ತು ಸಾಮಾಜಿಕ ಶಕ್ತಿಯನ್ನು ತುಂಬಿಸುವುದು ಸೇರಿದಂತೆ ಅಸ್ಪೃಶ್ಯತೆಯನ್ನು ನಿವಾರಣೆ ಮಾಡುವುದು ಹಾಗೂ ಕಡುಬಡವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಸಮಾಜ ಕಲ್ಯಾಣ ಇಲಾಖೆಯ ಮೂಲ ಉದ್ದೇಶ. ಕರ್ನಾಟಕ ರಾಜ್ಯದಲ್ಲಿ 1.27 ಕೋಟಿ ಜನ ಪರಿಶಿಷ್ಟ ಜಾತಿ ಸಮುದಾಯದವರಿದ್ದಾರೆ. ಸುಮಾರು 28 ಲಕ್ಷ ಕುಟುಂಬಗಳು ಇವೆ. ಅವುಗಳ ಪೈಕಿ ಕೆಲವರಿಗೆ ಸ್ವಂತ ಮನೆ, ನೆಲೆ ಇಲ್ಲ. ಕೆಲವರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು, ಶೌಚಾಲಯದ ಸಮಸ್ಯೆ ಕೂಡ ಇದೆ. ಅವುಗಳ ಬಗ್ಗೆ ಸಮೀಕ್ಷೆ ನಡೆಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಮೋದಿ ಶುಭಾಶಯ
ಶೋಷಿತ ಸಮುದಾಯಗಳಿಗೆ ಬೇಕಾಗಿರುವ ಮನೆ, ಕುಡಿಯುವ ನೀರು ಮತ್ತು ವಿದ್ಯಾಭ್ಯಾಸ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಇಲಾಖೆಯಿಂದ ಒದಗಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ವಿಜಯನಗರ: ಹಾಯ್, ಹಲೋ ಎಂದು ಮಾತುಕತೆ ಆರಂಭಿಸುವ ಬದಲು ಸ್ವಚ್ಛ ಭಾರತ ಎಂದು ಶುರು ಮಾಡಿ ಎಂದು ವಿದ್ಯಾರ್ಥಿಗಳು, ಯುವ ಜನತೆಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಕರೆ ನೀಡಿದರು.
ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನೆಹರು ಯುವ ಕೇಂದ್ರ ಸಂಘಟನೆ, ಎನ್ಎಸ್ಎಸ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ಲೀನ್ ಇಂಡಿಯಾ ಅಭಿಯಾನ ನಡೆಯುತ್ತಿದ್ದು, ವಿಶ್ವಪ್ರಸಿದ್ಧ ಹಂಪಿಯಲ್ಲಿ ಸ್ವಚ್ಛ ಭಾರತ ಹಾಗೂ ಸ್ವಚ್ಛ ಹಂಪಿ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇದನ್ನೂ ಓದಿ: ಸ್ಕೂಟರ್ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!
ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. 100 ಜನರಿಂದ ಸಾವಿರ ಜನ, ಸಾವಿರ ಜನರಿಂದ ಹತ್ತು ಸಾವಿರ ಜನರು ಹೀಗೆ ಎಲ್ಲರೂ ಕೈಗೂಡಿಸುವುದರಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ ಆಗಲಿದೆ. ನಮ್ಮ ಕಸವನ್ನು ನಾವೇ ಸಂಗ್ರಹಿಸಬೇಕು. ಆದರೆ ನಮ್ಮಲ್ಲಿ ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಬೇರೆ ಬೇರೆ ದೇಶಗಳಲ್ಲಿ ಎಲ್ಲೆಂದರಲ್ಲಿ ಒಂದು ಟಿಶ್ಯೂ ಪೇಪರ್ ಕೂಡ ಹಾಕುವಂತಿಲ್ಲ. ಒಂದು ವೇಳೆ ಯಾರಾದ್ರೂ ಕಸ ಹಾಕಿದ್ರೇ ದಂಡ ಇಲ್ಲ, ಜೈಲಿಗೆ ಹಾಕುತ್ತಾರೆ. ಆದರೆ ನಮ್ಮದು ಪ್ರಜಾಪ್ರಭುತ್ವ ದೇಶ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡಬೇಕು ಎಂದು ಅವರು ಕರೆ ನೀಡಿದರು.
ಹಿಂದೆ ನಮ್ಮ ಊರುಗಳಲ್ಲಿ ಪ್ರತಿ ಸೋಮವಾರದಂದು ಗದ್ದೆಯಲ್ಲಿ, ತೋಟದಲ್ಲಿ ಕೆಲಸ ಮಾಡುತ್ತಿರಲಿಲ್ಲ. ಎಲ್ಲರೂ ಮನೆ ಅಥವಾ ಊರುಗಳನ್ನು ಸ್ವಚ್ವತೆಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ವಿ. ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು, ಶಿಕ್ಷಣದ ಸ್ವಚ್ಚತೆಗೆ ಆದ್ಯತೆ ಕೊಡಬೇಕು. ಶಾಲೆ-ಕಾಲೇಜುಗಳು ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ನಮ್ಮ ದೇಶ ಎಂದು ಕಾಳಜಿ ಬರಬೇಕು. ನನ್ನನ್ನೂ ಸೇರಿದಂತೆ ಪ್ರತಿಯೊಬ್ಬರು ಸುಧಾರಣೆ ಮಾಡಿಕೊಂಡರೇ ಸ್ವಚ್ಛ ಭಾರತ ಯಶಸ್ವಿ ಆಗಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ
ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಅವಧಿಯಲ್ಲಿ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಇದೇ ವೇಳೆ ಸಿಗರೇಟ್ ಪ್ಯಾಕ್ ಮೇಲೆ ಹಾಕುವಂತೆ ಪ್ಲಾಸ್ಟಿಕ್ ಬಾಟಲ್ಗಳ ಮೇಲೂ, ಜಾಗೃತಿ ಸಂದೇಶವನ್ನು ಹಾಕುವಂತೆ ಸಚಿವ ನಾರಾಯಣಗೌಡ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಪ್ರಕಾಶ್ ವೈದ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಈ ಹಿಂದೆ ಮಂತ್ರಿಯಾಗಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಮೊದಲು ಇದ್ದಂತವರು, ಇದೀಗ ಪಕ್ಷವನ್ನು ಕೂಡ ಕಟ್ಟುತ್ತಿದ್ದಾರೆ ಅವರನ್ನು ಮತ್ತೆ ಸಚಿವರನ್ನಾಗಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ – ಎಚ್ಡಿಕೆಯ ದ್ವಿಪತ್ನಿತ್ನ ವಿಚಾರ ಪ್ರಸ್ತಾಪಿಸಿ ಕಾಲೆಳೆದ ಬಿಜೆಪಿ
ಹಲವಾರು ರಾಜಕೀಯ ವಿದ್ಯಮಾನಗಳಿಂದ ಜಾರಕಿಹೊಳಿ ಮೇಲೆ ಆರೋಪಗಳು ಬಂದಿತ್ತು. ಈ ಹಿಂದೆ ನಡೆದಂತಹ ಘಟನೆಯ ಬಗ್ಗೆ ನನಗೆ ಗೊತ್ತು ಹಾಗಾಗಿ ನಾನು ಮೊದಲಿನಿಂದಲೂ ಅವರೊಂದಿಗೆ ನಿಂತಿದ್ದೇನೆ. ಇವತ್ತು ಕೂಡ ಅವರನ್ನು ಸಮರ್ಥಿಸಿಕೊಳ್ಳುತ್ತೇನೆ. ರಮೇಶ್ ಜಾರಕಿಹೊಳಿಗೆ ಉನ್ನತ ಸ್ಥಾನ ಕೊಟ್ರೆ ನಮ್ಮದು ಸ್ವಾರ್ಥವಿದೆ, ಅವರು ಮಂತ್ರಿ ಆದರೆ ನಮ್ಮ ಕ್ಷೇತ್ರದ ಕೆಲಸಗಳು ಆಗುತ್ತವೆ. ಅದಕ್ಕೆ ವರಿಷ್ಠರಲ್ಲಿ ಸಹ ವಿನಂತಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಆಶಾಭಾವನೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ 94ನೇ ಹುಟ್ಟಹಬ್ಬದ ಕೋರಿಕೆ ನೆರವೇರಿಸಿದ ಎಸ್.ಟಿ.ಸೋಮಶೇಖರ್
ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೂ ಕಲ್ಲಿದ್ದಲು ಕೊರತೆ ಉಂಟಾಗಿ ಕರ್ನಾಟಕ ಕಗ್ಗತ್ತಲಲ್ಲಿ ಮುಳುಗಬಹುದು ಎಂಬ ಆತಂಕ ಎದುರಾಗಿದೆ. ರಾಜ್ಯಕ್ಕೆ ಶೇಕಡಾ 45ರಷ್ಟು ವಿದ್ಯುತ್ ಪೂರೈಕೆ ಮಾಡುವ ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳು ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ.
1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯದ ಆರ್ ಟಿಪಿಎಸ್ ಕೇವಲ 500 ಮೆಗಾವ್ಯಾಟ್ನಷ್ಟು ವಿದ್ಯುತ್ ಉತ್ಪಾದಿಸ್ತಿದೆ. ಆರ್ಟಿಪಿಎಸ್ನಲ್ಲಿ ದಿನಕ್ಕೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕ್ ಕಲ್ಲಿದ್ದಲು ಬರುತ್ತಿತ್ತು. ಆದ್ರೆ ಈಗ ಕೇವಲ 3- 4 ರೇಕು ಕಲ್ಲಿದ್ದಲು ಬರುತ್ತಿದೆ. ಇದನ್ನೂ ಓದಿ: ರಾಜ್ಯದ ಶಾಖೋತ್ಪನ್ನ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ – ವಿದ್ಯುತ್ ಅಭಾವದ ಆತಂಕ
ಬಳ್ಳಾರಿಯ ಕುಡಿತಿನಿ ಬಳಿ ಇರುವ ಬಿಟಿಪಿಎಸ್ ಶಾಖೋತ್ಪನ್ನ ಸ್ಥಾವರದಲ್ಲೂ ಕಲ್ಲಿದ್ದಲು ಕೊರತೆ ಉಂಟಾಗಿದೆ. 1700 ಮೆಗಾ ವ್ಯಾಟ್ ಸಾಮಥ್ರ್ಯದ ಬಿಟಿಪಿಎಸ್ ಗೆ ದಿನಕ್ಕೆ 25 ಸಾವಿರ ಟನ್ ಕಲ್ಲಿದ್ದಲು ಬೇಕು. ಆದರೆ ಅಧಿಕಾರಿಗಳು ಹೇಳುವ ಪ್ರಕಾರ ಬಿಟಿಪಿಎಸ್ ನಲ್ಲಿ ಕೇವಲ 15 ಸಾವಿರ ಟನ್ ಸ್ಟಾಕ್ ಇದೆ. ಅಲ್ಲದೇ ಇರುವ ಮೂರು ಘಟಕಗಳಲ್ಲಿ ಎರಡು ಘಟಕ, ಕಲ್ಲಿದ್ದಲು ಸಮಸ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಬಂದ್ ಮಾಡಲಾಗಿದೆ. ಇನ್ನು ಉಳಿದ ಒಂದು ಘಟಕಕ್ಕೆ ಇವತ್ತೊಂದು ದಿನ ಒಂದೇ ಘಟಕ ನಡೆಯುವಷ್ಟು ಕಲ್ಲಿದ್ದಲಿದೆ. ನಾಳೆಗೆ ಸಂಪೂರ್ಣ ಖಾಲಿಯಾಗಿ ಬಿಟಿಪಿಎಸ್ ಸ್ಥಬ್ದವಾಗೋ ಸಾಧ್ಯತೆ ಹೆಚ್ಚಿದೆ.
ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಆಗಲ್ಲ: ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಚಿವ ಸುನೀಲ್ ಕುಮಾರ್, ಇಡೀ ದೇಶದಲ್ಲಿ ಕಲ್ಲಿದ್ದಲ್ಲಿನ ಉತ್ಪಾದನೆಯಲ್ಲಿ ಕೊರತೆಯಾಗಿದೆ. ಕರ್ನಾಟಕಕ್ಕೆ ತಲುಪಬೇಕಾಗಿದ್ದ ಕಲ್ಲಿದ್ದಲಿನ ಕೊರತೆಯಾಗಿದೆ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಗಮನಕ್ಕೆ ತಂದಿದ್ದೇವೆ. ಒಟ್ಟು 14 ರೇಕ್ ಕಲ್ಲಿದ್ದಲು ಒಟ್ಟು ಕೇಳಿದ್ದೇವೆ. ಒರಿಸ್ಸಾದಿಂದ 2 ರೇಕ್ ಕೇಳಿದ್ದೇವೆ. ಇಂದು ಸಂಜೆಯೊಳಗೆ ಒಂದು ರೇಕ್, ನಾಳೆ ಸಂಜೆಯೊಳಗೆ ಇನ್ನೊಂದು ರೇಕ್ ಬರಲಿದೆ ಎಂದು ಸಚಿವರು ಹೇಳಿದ್ದಾರೆ. ರಾಯಚೂರು ನಲ್ಲಿ ಉತ್ಪಾದನೆ ಕಡಿಮೆ ಮಾಡಿದ್ದೇವೆ. ಇಂದು ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಆಗಲಾರದು. ನವರಾತ್ರಿ ಹಬ್ಬದ ಸಂದರ್ಭದಲ್ಲಿ ದೀಪಾಲಂಕರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಯುತ್ತೆ. ಹೀಗಾಗಿ ಈ ಸಂದರ್ಭದಲ್ಲಿ ಯಾವ ರೀತಿಯೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಉಹಾಪೋಹಾ ಆತಂಕ ಪಡೋದು ಬೇಡ. ರಾಯಚೂರಲ್ಲಿ ಉತ್ಪಾದನೆ ಕಡಿಮೆ ಮಾಡಿದ್ದೇವೆ. ಇದು ಪರಿಸ್ಥಿತಿ ಸುಧಾರಿಸಲಿದೆ ಎಂದು ಸಚಿವರು ಭರವಸೆ ನೀಡಿದರು.
ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್ಎಂಸಿ)ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.
ಎಂಎಸ್ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ತೆಲುಗಿನ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಆಕೆಯ ವಿದ್ಯಾರ್ಹತೆಗೆ ಅನುಗುಣವಾಗಿ ಕೆಲಸ ನೀಡಿದ್ದಾರೆ.
ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ. ರುಜುವಾತುಗಳನ್ನು ಪರಿಶೀಲಿಸಿದ ಬಳಿಕ ರಜನಿಗೆ ಕೆಲಸ ನೀಡಲು ಆದೇಶಿಸಲಾಯಿತು ಎಂದು ಅರವಿಂದ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ರಜನಿಗೆ ಸಚಿವರು ಕರೆದು ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟು, ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದಾಗಭಾವುಕರಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್ನೋಟ್
ವಾರಂಗಲ್ ಜಿಲ್ಲೆಯವರಾಗಿದ್ದು, ಕೃಷಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ್ದಾರೆ. ಹಣಕಾಸಿ ಸಮಸ್ಯೆ ಇದ್ದರೂ ಕೂಡ ಅವರ ಪೋಷಕರ ಬೆಂಬಲದಿಂದಾಗಿ ತಮ್ಮ ವಿದ್ಯಾಭ್ಯಾಸವನು ಮುಂದುವರಿಸಿದರು ಮತ್ತು 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು. ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಅರ್ಹತೆ ಪಡೆದರು. ಆದರೆ ಈ ಮಧ್ಯೆ ವಕೀಲರೊಬ್ಬರು ವಿವಾಹವಾಗಿ ಹೈದರಾಬಾದ್ಗೆ ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಾರೆ.
ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು. ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?
ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರೀಯ ಸೇವಾ ಯೋಜನೆಯ(NSS) ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 6 ವರ್ಷಗಳ ಬಳಿಕ ರಾಜ್ಯಕ್ಕೆ ಈ ಪ್ರಶಸ್ತಿ ಒಲಿದುಬಂದಿದೆ. ಗೌರವಕ್ಕೆ ಭಾಜನರಾಗಿರುವವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದಿಸಿದ್ದಾರೆ.
ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕ ಡಾ. ಬಿ. ವಸಂತ ಶೆಟ್ಟಿ, ಕಾಲೇಜು ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡದ ಜೆಎಸ್ಎಸ್ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಸುರೇಶಪ್ಪ ಕೆ. ಸಜ್ಜನ, ರಾಷ್ಟ್ರಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ವಿಭಾಗದಲ್ಲಿ ಬೆಂಗಳೂರಿನ ಕೆ.ಎಸ್.ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ವಯಂ ಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರು ಸೂರತ್ಕಲ್ನ ಗೋವಿಂದ ದಾಸ್ ಕಾಲೇಜಿನ ಸ್ವಯಂ ಸೇವಕಿ ಬಿಂದಿಯಾ ಶೆಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಭಾರತ ಸರ್ಕಾರವು @_NSSIndia ಮುಖಾಂತರ “ರಾಷ್ಟ್ರ ಪ್ರಶಸ್ತಿ"ಗಳನ್ನು ಪ್ರಕಟಿಸಿದ್ದು, ಕರ್ನಾಟಕದ ನಾಲ್ವರು ಈ ಗೌರವಕ್ಕೆ ಪಾತ್ರವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೆ, ಕಳೆದ 6 ವರ್ಷದಲ್ಲಿ ಕರ್ನಾಟಕಕ್ಕೆ ಯಾವುದೇ ಪ್ರಶಸ್ತಿ ಒಲಿದಿರಲಿಲ್ಲ. ಸಾಧಕರಿಗೆ ಅಭಿನಂದನೆಗಳು.@CMofKarnataka 2/2 pic.twitter.com/PgHJwjJ7w5
— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) September 17, 2021
ಕಳೆದ 6 ವರ್ಷಗಳಲ್ಲಿ ಎನ್ಎಸ್ಎಸ್ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದಿಂದ ಯಾರೂ ಆಯ್ಕೆಯಾಗಿರಲಿಲ್ಲ. ಈ ಬಾರಿ 4 ಜನ ಸಾಧಕರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಸೆಪ್ಟಂಬರ್ 24 ರಂದು ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ ಪ್ರಶಸ್ತಿ ಪುರಸ್ಕೃತರಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
– ಶೀಘ್ರದಲ್ಲೇ ಮುಖ್ಯಮಂತ್ರಿಗಳ ಜೊತೆ ಸಭೆ
– ರೈತರ ಹಿತ ಕಾಪಾಡಲು ಬದ್ಧ
– ತಮ್ಮ ಮೇಲಿನ ಆರೋಪಕ್ಕೆ ಸಚಿವ ಭಾವುಕ
ಬೆಂಗಳೂರು: ಮಂಡ್ಯ ಜಿಲ್ಲೆ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಸಂಬಂಧ ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆ ಭಾಗದ ಜನಪ್ರತಿನಿಧಿಗಳು ಹಾಗೂ ರೈತರ ಸಭೆ ಕರೆದು ಸೂಕ್ತವಾದ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ವಿಧಾನಪರಿಷತ್ ನಲ್ಲಿ ಹೇಳಿದರು.
ಮಂಗಳವಾರ ನಿಯಮ 330 ರ ಅಡಿ ಸದಸ್ಯರು ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತಾಗಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಪರವಾಗಿ ಸುಧೀರ್ಘ ಉತ್ತರ ನೀಡಿದ ನಿರಾಣಿ, ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಸೂಕ್ತವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ಆಶ್ವಾಸನೆ ನೀಡಿದರು.
ಒಂದು ಹಂತದಲ್ಲಿ ತಮ್ಮ ಮೇಲೆ ಕೇಳಿ ಬಂದ ಆರೋಪಗಳಿಗೆ ಸದನದಲ್ಲಿ ಭಾವುಕರಾದ ನಿರಾಣಿ ಅವರು, ನಾನು ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಭೋಗ್ಯಕ್ಕೆ ಪಡೆದು ಪುನಾರಂಭ ಮಾಡಿದೆವು. ಇದರಲ್ಲೂ ನನಗೆ ‘ಕಹಿಅನುಭವ’ ಆಗಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ನಾನು ನೂರಕ್ಕೆ ನೂರರಷ್ಟು ಈ ಸದನದಿಂದಲೇ ಸ್ಪಷ್ಟಪಡಿಸುವುದು ಏನೆಂದರೆ, ಯಾವುದೇ ಕಾರಣಕ್ಕೂ ಮೈ ಶುಗರ್ ಫ್ಯಾಕ್ಟರಿ ಬಿಡ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಮೈ ಶುಗರ್ ಕಾರ್ಖಾನೆಯನ್ನು ನಾನು ಪಡೆಯುವ ಸಲುವಾಗಿ ಇಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಕೋವಿಡ್ ಸಂದರ್ಭದಲ್ಲಿ ಯಾರೂ ಹೊರಗೆ ಹೋಗದ ಕಾಲದಲ್ಲಿ ನಾನು ಪಾಂಡವಪುರ ಕಾರ್ಖಾನೆಯನ್ನು ಪ್ರಾರಂಭ ಮಾಡಿದೆವು. ಆದರೂ ನಮಗೆ ಆಪಾದನೆಗಳು ನಿಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದುವರೆಗೆ ನನಗೆ ಬೋಗ್ಯದ ದಾಖಲಾತಿಗಳು ಆಗಿಯೇ ಇಲ್ಲ. ನಂಬಿಕೆಯಿಂದ ನಾನು ಪಾಂಡವಪುರ ಶುಗರ್ ಫ್ಯಾಕ್ಟರಿ ಮೇಲೆ 50 ಕೋಟಿ ರೂ. ವೆಚ್ಚ ಮಾಡಿದ್ದೇನೆ. ಲೀಸ್ ಡೀಡ್ ಇಲ್ಲದೆಯೂ ರೈತರಿಗೆ ಅನ್ಯಾಯ ಆಗಬಾರದು ಎಂದು ಕಾರ್ಖಾನೆಯನ್ನು 90 ದಿನಗಳಲ್ಲಿ ಪ್ರಾರಂಭ ಮಾಡಿದೆವು. ಆದರೆ ಪಾಂಡವಪುರಕ್ಕೆ ನಾನು ಬಂದಾಗ ಹಲವರು ನನ್ನ ಮೇಲೆ ಆಪಾದನೆ ಮಾಡಿದರು ಎಂದು ಭಾವುಕರಾದರು.
ನಾನು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭ ಮಾಡಿದಾಗ ಇದರಿಂದ ಬಂದ ಲಾಭವನ್ನು ಇಲ್ಲಿಯ ಲಾಭಕ್ಕಾಗಿ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿತ್ತು. ನಾಡದೇವತೆ ಚಾಮುಂಡೇಶ್ವರಿ ಮೇಲೆ ಆಣೆ. ಇಲ್ಲಿಂದ ಬಂದ ಲಾಭವನ್ನು ಉತ್ತರ ಕರ್ನಾಟಕಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಅನೇಕ ಸಕ್ಕರೆ ಕಾರ್ಖಾನೆಗಳು ಇಂದು ನಷ್ಟದಲ್ಲಿದ್ದು ಬೀಗ ಹಾಕುವ ಹಂತಕ್ಕೆ ಬಂದಿವೆ. ಎಂ.ಕೆ.ಹುಬ್ಬಳ್ಳಿ, ಸಂಕೇಶ್ವರ, ರನ್ನ, ಸೇರಿದಂತೆ ಮತ್ತಿತರ ಕಾರ್ಖಾನೆಗಳು ‘ಕೋಮ’ ಸ್ಥಿತಿಗೆ ಬಂದಿವೆ. ಇದಕ್ಕೆಲ್ಲ ಯಾರು ಕಾರಣ ಎಂದು ಪ್ರಶ್ನೆ ಮಾಡಿದರು. ಹೊರಗಡೆ ಮಾತನಾಡುವುದಕ್ಕೂ ಒಂದು ಕಾರ್ಖಾನೆ ನಡೆಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಪಾಂಡವಪುರ ಹಾಗೂ ಮೈಶುಗರ್ ಕಾರ್ಖಾನೆಯ ಉದ್ದೇಶವೇ ರೈತರ ಹಿತ ಕಾಪಾಡುವುದು ಎಂದು ತಿಳಿಸಿದರು. ಇದನ್ನೂ ಓದಿ: ಅರುಣ್ ಸಾಗರ್ ಮಗನ ಸಾಧನೆ ಕೊಂಡಾಡಿದ ಸುದೀಪ್
ಸಕಾಲಕ್ಕೆ ಸರಿಯಾಗಿ ರೈತರ ಕಬ್ಬನ್ನು ಅರೆದು ಅವರಿಗೆ ಹಣ ಪಾವತಿಸಬೇಕು. ಜೊತೆಗೆ ಕಾರ್ಮಿಕರಿಗೆ ತಿಂಗಳಿಗೆ ವೇತನವನ್ನು ನೀಡಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಸುಳ್ಳು ಆರೋಪಗಳನ್ನು ಎದುರಿಸಬೇಕು ಎಂದರು. ನಿವೃತ್ತ ಅಧಿಕಾರಿ ರಂಗರಾಜನ್ ವರದಿಯ ಪ್ರಕಾರ, ಕಾರ್ಖಾನೆ ಒಟ್ಟು ಲಾಭಂಶದಲ್ಲದ ಶೇ.75 ರಷ್ಟನ್ನು ರೈತರು, ಕಾರ್ಮಿಕರು, ಕಾರ್ಖಾನೆಯ ಪುನಶ್ಚೇತನ, ಮೂಲಭೂತ ಸೌಕರ್ಯಗಳ ಬಳಕೆಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕೇವಲ ಸರ್ಕಾರದ ಮೇಲೆ ಅವಲಂಬಿತರಾಗದೆ ಕಾರ್ಖಾನೆಯನ್ನು ಆಡಳಿತ ಮಂಡಳಿಯವರು ಮುನ್ನಡೆಸಬೇಕು. ಇಲ್ಲಿರುವ ಲೋಪದೋಷಗಳನ್ನು ಪತ್ತೆ ಮಾಡಿದರೆ, ಎಲ್ಲವೂ ಸರಿ ಹೋಗಲಿದೆ ಎಂದು ಅಭಿಪ್ರಾಯಪಟ್ಟರು.