Tag: minister

  • ದಸರಾ, ಟಿಪ್ಪು ಜಯಂತಿಗೆ ಇಲ್ಲದ ಬರದ ಕರಿನೆರಳು- ಹಂಪಿ ಉತ್ಸವದ ಮೇಲೆ ಮಾತ್ರ ಎಫೆಕ್ಟ್!

    ದಸರಾ, ಟಿಪ್ಪು ಜಯಂತಿಗೆ ಇಲ್ಲದ ಬರದ ಕರಿನೆರಳು- ಹಂಪಿ ಉತ್ಸವದ ಮೇಲೆ ಮಾತ್ರ ಎಫೆಕ್ಟ್!

    ಬಳ್ಳಾರಿ: ರಾಜ್ಯದೆಲ್ಲೆಡೆ ಬರಗಾಲ ಪರಿಸ್ಥಿತಿಯಿದೆ. ಆದ್ರೆ ಅದ್ಧೂರಿಯಾಗಿ ಮಾಡೋ ಮೈಸೂರು ದಸರಾಗೆ ಇಲ್ಲದ ಬರದ ಭೀತಿ ಬಳ್ಳಾರಿ ಹಂಪಿ ಉತ್ಸವಕ್ಕೆ ತಟ್ಟಿದೆ. ಹೀಗಾಗಿ ಹಂಪಿ ಉತ್ಸವ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸ್ಥಳೀಯರು ಇದೀಗ ಸಿಡಿದೆದ್ದಿದ್ದಾರೆ.

    ಸರ್ಕಾರದಿಂದ ಹಠಕ್ಕೆ ಬಿದ್ದು ಟಿಪ್ಪು ಜಯಂತಿಯ ಆಚರಣೆ ಮತ್ತೊಂದೆಡೆ ಸಂಭ್ರಮ ಮೈಸೂರು ದಸರಾ ಆಚರಣೆ. ಆದರೆ ಈ ಬಾರಿ ನಮ್ಮ ನಾಡಿನ ಪರಂಪರೆ ಸಂಸ್ಕೃತಿಯ ಪ್ರತೀಕ ಹಂಪಿ ಉತ್ಸವ ನೋಡುವ ಸೌಭಾಗ್ಯವಿಲ್ಲ. ಹೌದು ವಿಶ್ವವಿಖ್ಯಾತ ಹಂಪಿ ಉತ್ಸವವನ್ನ ಈ ಬಾರಿ ರದ್ದುಗೊಳಿಸಲಾಗಿದೆ. ರಾಜ್ಯ ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಭೀಕರ ಬರವಿದೆಯೆಂದು ಹಂಪಿ ಉತ್ಸವಕ್ಕೆ ಈ ಬಾರಿ ಬ್ರೇಕ್ ಹಾಕಲಾಗಿದೆ ಅಂತ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದನ್ನು ಓದಿ: ಈ ಬಾರಿ ಹಂಪಿ ಉತ್ಸವ ಕೈಬಿಡಲು ಸರ್ಕಾರ ನಿರ್ಧಾರ: ಡಿ.ಕೆ.ಶಿವಕುಮಾರ್

    ಹಂಪಿ ಉತ್ಸವಕ್ಕಾಗಿ ಸರ್ಕಾರ ಪ್ರತಿ ವರ್ಷ ಬಜೆಟ್‍ನಲ್ಲಿ ಪ್ರತ್ಯೇಕವಾಗಿ ಅನುದಾನ ಮೀಸಲಿಡುತ್ತಿತ್ತು. ಆದ್ರೆ ಈ ಬಾರಿಯ ಬಜೆಟ್‍ನಲ್ಲಿ ಪ್ರತ್ಯೇಕ ಅನುದಾನವಿರಲಿ ಉತ್ಸವದ ಬಗ್ಗೆ ಪ್ರಸ್ತಾಪವೇ ಆಗಿಲ್ಲ. ಇದೀಗ ಬರದ ನೆಪವೊಡ್ಡಿ ಹಂಪಿ ಉತ್ಸವ ರದ್ದುಗೊಳಿಸಿರುವುದರಿಂದ ಬಳ್ಳಾರಿ ಜಿಲ್ಲೆಯ ಜನರು ಸಿಡಿದೆದ್ದಿದ್ದಾರೆ. ಹಂಪಿ ಉತ್ಸವ ನಡೆಸಲೇಬೇಕೆಂದು ಗಣಿನಾಡಿನ ಜನ ಒತ್ತಾಯಿಸುತ್ತಿದ್ದಾರೆ. ಮಾತ್ರವಲ್ಲದೇ ಅನುದಾನ ಇಲ್ಲದಿದ್ದರೂ ಪರವಾಗಿಲ್ಲ ಚಂದಾ ಎತ್ತಿಯಾದ್ರೂ ಉತ್ಸವ ಮಾಡಿ ಅಂತಾ ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ. ಮಾಗಳ ಗ್ರಾಮದ ಗ್ರಾಮಸ್ಥರು ಚಂದಾ ಎತ್ತಿ ಹಣವನ್ನ ಗ್ರಾಮ ಪಂಚಾಯತಿ ಪಿಡಿಓಗೆ ಸಲ್ಲಿಸುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.

    ಪ್ರತಿ ವರ್ಷ ಹಂಪಿ ಉತ್ಸವವನ್ನ ನಡೆಸುವ ಮೂಲಕ ನಮ್ಮ ನಾಡಿನ ಕಲೆ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಲಾಗುತ್ತಿತ್ತು. ಆದ್ರೆ ಈ ವರ್ಷ ಬರದ ನೆಪವೊಡ್ಡಿ ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವವನ್ನ ರದ್ದುಗೊಳಿಸುವ ಮೂಲಕ ಸರ್ಕಾರ ಮತ್ತೊಮ್ಮೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಡಿಕೆ ಶಿವಕುಮಾರ್ ಶ್ರೀ ಕೃಷ್ಣನಿದ್ದಂತೆ: ಜಯಮಾಲಾ

    ಡಿಕೆ ಶಿವಕುಮಾರ್ ಶ್ರೀ ಕೃಷ್ಣನಿದ್ದಂತೆ: ಜಯಮಾಲಾ

    ಬೆಂಗಳೂರು: ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಸಾಕ್ಷಾತ್ ಶ್ರೀ ಕೃಷ್ಣನಂತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಾಮಾಲ ಹೇಳಿದ್ದಾರೆ.

    ರಾಜ್ಯ ಸರ್ಕಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಧಾನ ಬಂದರೂ, ಹಗಲು ರಾತ್ರಿ ಎನ್ನದೇ ಡಿ.ಕೆ.ಶಿವಕುಮಾರ್ ಸಿದ್ಧರಿರುತ್ತಾರೆ. ಅಲ್ಲದೇ ಖುದ್ದು ಮಧ್ಯಸ್ಥಿಕೆ ವಹಿಸುವ ಮೂಲಕ ಕಾರ್ಯ ನಿರ್ವಹಿಸುತ್ತಾರೆ. ಅಚ್ಚುಕಟ್ಟಾಗಿ ಯಾವುದೇ ಕೆಲಸವನ್ನು ಶಿಸ್ತಿನಿಂದ ನಿರ್ವಹಿಸುತ್ತಾರೆ. ಹೀಗಾಗಿ ಅವರು ಸಾಕ್ಷಾತ್ ಶ್ರೀ ಕೃಷ್ಣ ಎಂದು ವೇದಿಕೆ ಮೇಲೆ ಡಿಕೆಶಿಯವರನ್ನು ಹಾಡಿ ಹೊಗಳಿದ್ದಾರೆ.

    ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 63 ಸಾಧಕರಿಗೆ ರಾಜ್ಯ ಸರ್ಕಾರದ ವತಿಯಿಂದ ಗೌರವಿಸುತ್ತಿದೆ. ಸಾಧಕರಿಗೆ 24 ಗ್ರಾಂ ಚಿನ್ನದ ಪದಕ ಹಾಗೂ 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಗೌರವಿಸಿದ್ದಾರೆ.

    ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಹಾಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವರಾದ ಡಿಕೆ ಶಿವಕುಮಾರ್, ಜಮೀರ್ ಅಹಮ್ಮದ್ ಹಾಗೂ ವಿಧಾನಪರಿಷತ್ ಸದಸ್ಯರು ಶರವಣ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    -ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಆಹಾರ ಇಲಾಖೆ ಆಯುಕ್ತರೇ ಸಸ್ಪೆಂಡ್

    ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಸಚಿವರು ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಮೀರ್ ಅಹಮದ್ ಅವರು, ಮೂರು ಜಿಲ್ಲೆಗೆ ಮಾತ್ರ ಅನುದಾನ ಬಿಡುಗಡೆ ಎನ್ನುವುದು ಸರಿಯಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಜಿಲ್ಲೆಗಳಿಗೂ ಸಮಾನ ಅನುದಾನ ಹಂಚಿಕೆ ಆಗುತ್ತಿದೆ. ಸಚಿವ ರೇವಣ್ಣ ಅವರಿಗೆ ಹಾಸನ ಜಿಲ್ಲೆಯ ಮೇಲೆ ಹೆಚ್ಚು ಪ್ರೀತಿ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಒತ್ತಡ ಹೇರಿ ಹೆಚ್ಚಿನ ಅನುದಾನ ಪಡೆಯುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

    ನಾನು ಕೂಡಾ ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಬೇಕು ಅಂತ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಈ ಕುರಿತು ಮುಂದಿನ ಕ್ಯಾಬಿನೆಟ್‍ನಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇನೆ. ರೇವಣ್ಣ ಅವರಿಗೆ ಮಾತ್ರ ಹೆಚ್ಚು ಅನುದಾನ ಕೊಡುತ್ತಾರೆ ಎನ್ನುವ ಆರೋಪ ಸುಳ್ಳು ಎಂದು ತಿಳಿಸಿದರು.

    ಎಲ್ಲಾ ಜಿಲ್ಲೆಗಳ ಸಭೆ ಮಾಡಿದ್ದು, ಅನಿಲ ಭಾಗ್ಯ ಯೋಜನೆಗೆ 30 ಲಕ್ಷ ಜನ ಫಲಾನುಭವಿಗಳನ್ನು ಗುರುತಿಸಲಾಗಿದೆ. ಅದರಲ್ಲಿ 1 ಲಕ್ಷ ಜನರಿಗೆ ಯೋಜನೆ ತಲುಪಿಸಲು ಸಿದ್ಧತೆ ನಡೆದಿದೆ. ಪ್ರಧಾನಮಂತ್ರಿ ಉಜ್ವಲ್ ಯೋಜನೆ ಅಡಿ ಬಂದಿದ್ದ 31 ಸಾವಿರ ಅರ್ಜಿಗಳನ್ನು ಕೈಬಿಡಲಾಗಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ 15ರೊಳಗಾಗಿ 1 ಲಕ್ಷ ಜನ ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    ನ್ಯಾಯಬೆಲೆ ಅಂಗಡಿ ಬಯೋಮೆಟ್ರಿಕ್ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಲಿಖಿತ ದಾಖಲೆ ಕೊಡುವ ವ್ಯವಸ್ಥೆಯಿಂದ ಅಧಿಕಾರಿಗಳು ಸುಮ್ಮನೆ ಬಿಲ್ ಮಾಡುತ್ತಿದ್ದರು. ಬಯೋಮೆಟ್ರಿಕ್ ಅಳವಡಿಸುವುದರಿಂದ ಇಲಾಖೆಗೆ 580 ಕೋಟಿ ರೂ. ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಬಿಎಸ್‍ಎನ್‍ಎಲ್ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಂದ ಬಯೋಮೆಟ್ರಿಕ್ ಅಳವಡಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪ್ರಾಯೋಗಿಕವಾಗಿ ಶಿವಮೊಗ್ಗದ ಖಾಸಗಿ ಕಂಪನಿಗೆ ಬಯೋಮೆಟ್ರಿಕ್ ಅಳವಡಿಕೆ ಮಾಡಲು ಅವಕಾಶ ನೀಡಲಾಗಿದೆ. ಇಲ್ಲಿ ಯಶಸ್ವಿಯಾದರೆ ಹಂತ ಹಂತವಾಗಿ ರಾಜ್ಯದಲ್ಲಿ ಪ್ರತಿಯೊಂದು ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಬಿಪಿಎಲ್ ಕಾರ್ಡ್ ಗಾಗಿ 6.26 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸುಮಾರು 1 ಕೋಟಿ ಬಿಪಿಎಲ್ ಕಾರ್ಡ್ ಚಾಲ್ತಿಯಲ್ಲಿವೆ. ನಿತ್ಯವೂ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಿಪಿಎಲ್ ಹೊಂದಿರುವ ಶೇ. 99 ಜನರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಆಧಾರ್ ಲಿಂಕ್ ಆಗಿರುವ 4.5 ಲಕ್ಷ ಕಾರ್ಡ್ ಗಳು ರದ್ದಾಗಲಿವೆ ಎಂದು ಸಚಿವರು ಹೇಳಿದರು.

    ನ್ಯಾಯಬೆಲೆ ಅಂಗಡಿಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಈ ಕುರಿತು ಅಧಿಕಾರಿಗಳಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದರೆ ಆಹಾರ ಇಲಾಖೆ ಅಧಿಕಾರಿಯನ್ನೇ ಅಮಾನತು ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿರುವೆ. ನಾನು ಕೂಡ ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಚಿವ ಡಿಕೆಶಿಯನ್ನ ಭೇಟಿಯಾದ ಮಾಜಿ ಸಿಎಂ ಬಿಎಸ್‍ವೈ..!

    ಸಚಿವ ಡಿಕೆಶಿಯನ್ನ ಭೇಟಿಯಾದ ಮಾಜಿ ಸಿಎಂ ಬಿಎಸ್‍ವೈ..!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಇಂದು ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

    ಬಿಎಸ್ ವೈ ಜೊತೆ ಹಾಲಪ್ಪ, ಬಿ.ವೈ .ರಾಘವೇಂದ್ರ ಕೂಡ ಡಿಕೆಶಿ ಭೇಟಿ ಮಾಡಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಹುಟ್ಟಿಸಿತ್ತು. ಆದ್ರೆ ಸಿಗಂದೂರು ಸೇತುವೆ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

    ಇದಕ್ಕೂ ಮೊದಲು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಡಿ.ಕೆ.ಶಿವಕುಮಾರ್ ಭೇಟಿಗೆ ಹೊರಟಿದ್ದೇವೆ. ಶಿವಮೊಗ್ಗ ನೀರಾವರಿ ಯೋಜನೆಗಳು, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಗುರುವಾರ ದಿವಂಗತ ಅನಂತ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಭೆ ಮಾಡ್ತಿದ್ದೇವೆ. ಇದರ ಜೊತೆಗೆ ನಾಳೆ ಶಾಸಕಾಂಗ ಪಕ್ಷದ ಸಭೆಯೂ ಇದೆ. ಶಾಸಕಾಂಗ ಪಕ್ಷದ ಸಭೆ ನಂತರ ಮತ್ತೆ ನಾವೆಲ್ಲಾ ಶಾಸಕರು ಒಂದೆಡೆ ಸೇರುತ್ತಿದ್ದೇವೆ ಅಂತ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹೊಳೆನರಸೀಪುರಕ್ಕೆ ಅನುದಾನದ ಹೊಳೆ – ರೇವಣ್ಣಗಾಗಿ ಉಳಿದ ಯೋಜನೆಗಳಿಗೆ ಕತ್ತರಿ!

    ಹೊಳೆನರಸೀಪುರಕ್ಕೆ ಅನುದಾನದ ಹೊಳೆ – ರೇವಣ್ಣಗಾಗಿ ಉಳಿದ ಯೋಜನೆಗಳಿಗೆ ಕತ್ತರಿ!

    ಬೆಂಗಳೂರು/ಹಾಸನ: ತಮ್ಮ ಕ್ಷೇತ್ರಕ್ಕೆ ಹಣದ ಹೊಳೆಯನ್ನೇ ಹರಿಸಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಇರೋದು ಒಂದೇ ಕ್ಷೇತ್ರ, ಅದು ಹೊಳೆನರಸೀಪುರ ಎಂಬಂತಾಗಿದೆ.

    ಹೌದು. ಲೋಕೋಪಯೋಗಿ ಸಚಿವ ರೇವಣ್ಣ ಅವರು ಹೊಳೆನರಸೀಪುರದಲ್ಲಿ ವಾಣಿಜ್ಯ ಸಂಕೀರ್ಣ, ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಪಂಪ್ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ಮಾಡಿದ್ದಾರೆ. ಹೀಗಾಗಿ ಇದೀಗ ರೇವಣ್ಣ ಕ್ಷೇತ್ರ ಮಾತ್ರ ಉದ್ಧಾರ ಆದ್ರೆ ಸಾಕಾ..? ಬೇರೆ ಕ್ಷೇತ್ರಗಳಿಗೆ ಹೀಗೆನೇ ಅನುದಾನ ಸಿಗುತ್ತಾ ಅನ್ನೋ ಪ್ರಶ್ನೆ ಎದ್ದಿದೆ.

    ರೇವಣ್ಣ ಅವರ ಈ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಅಧಿಕಾರಿಗಳು, ಸಾಲಮನ್ನಾ, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಹಿನ್ನೆಲೆಯಲ್ಲಿ ಹಣ ಹೊಂದಿಸಲು ತೊಂದರೆ ಆಗುತ್ತದೆ ಅಂತ ಹೇಳಿದ್ದಾರೆ. ಆದ್ರೆ ಅಧಿಕಾರಿಗಳ ಸಲಹೆಯನ್ನೂ ಮೀರಿ ರೇವಣ್ಣ ಕ್ಷೇತ್ರಕ್ಕೆ ಅನುದಾನ ಕೊಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಯಾವುದೇ ಇಲಾಖೆಗೆ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅಧಿಕಾರಿಗಳು ಸಾಧಕ-ಬಾದಕಗಳನ್ನು ಚಿಂತಿಸಿ ನಂತರ ಹಣ ಬಿಡುಗಡೆಗೆ ಅನುಮತಿ ನೀಡುತ್ತಾರೆ. ಈ ಮಧ್ಯೆ ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವಂತಹ ಯೋಜನೆಗಳನ್ನು ಕ್ಲೀಯರ್ ಮಾಡಿಸಿಕೊಳ್ಳಲು ರೇವಣ್ಣ ಅವರು ಮುಂದಾಗುತ್ತಿದ್ದಾರೆ. ಹೀಗಾಗಿ ಪ್ರತೀ ಯೋಜನೆಗಳಿಗೆ ಹೊಳೆನರಸೀಪುರಕ್ಕೆ ಹಣ ಬಿಡುಗಡೆ ಮಾಡಿದ್ರೆ ಬೇರೆ ಬೇರೆ ಕ್ಷೇತ್ರದವರು ಕೇಳಿದ್ರೆ ಹೇಗೆ?. ಈಗಾಗಲೇ ಕ್ಷೇತ್ರದ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ ಮಾಡಲು ಹಲವು ಯೋಜನೆಗಳಿಗೆ ಕತ್ತರಿ ಹಾಕುತ್ತಿದ್ದೇವೆ. ಈ ಮಧ್ಯೆ ರೇವಣ್ಣ ಅವರು ತಮ್ಮ ಕ್ಷೇತ್ರಕ್ಕೆ ಅನುದಾನ ನೀಡಲೇಬೇಕು ಅಂತ ಪಟ್ಟು ಹಿಡಿಯುತ್ತಿದ್ದಾರೆ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕಾವೇರಿ ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಸಚಿವ ಪುಟ್ಟರಾಜು

    ಕಾವೇರಿ ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಸಚಿವ ಪುಟ್ಟರಾಜು

    ಮಂಡ್ಯ: ಕಾವೇರಿ ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

    ಪಾಂಡವಪುರ ತಾಲೂಕಿನ ಸುಂಕಾತಣ್ಣೂರು ಗ್ರಾಮದಲ್ಲಿ ಮಾತನಾಡಿದ ಸಚಿವರು, ಇಂತಹ ಪ್ರತಿಭಟನೆಯಿಂದಾಗಿಯೇ ಜಿಲ್ಲೆಗೆ ಯಾವುದೇ ಐಟಿ ಕಂಪನಿ, ದೊಡ್ಡ ಕೈಗಾರಿಕೆಗಳು ಬರುತ್ತಿಲ್ಲ. ಇದು ನಮ್ಮ ಜಿಲ್ಲೆಗೆ ತಟ್ಟಿರುವ ಶಾಪವಾಗಿದೆ ಎಂದು ಕಿಡಿಕಾರಿದರು. ಇದನ್ನು ಓದಿ: ಕಾವೇರಿ ಪ್ರತಿಮೆ ನಿರ್ಮಾಣದಿಂದ ಕೆಆರ್‌ಎಸ್ ಗೆ ಕಂಟಕ – ಸರ್ಕಾರದ ನಿರ್ಧಾರಕ್ಕೆ ಎಂಜಿನಿಯರ್ಸ್ ವಿರೋಧ

    ಆಣೆಕಟ್ಟು ನಿರ್ಮಾಣವಾದ ಬಳಿಕವೂ ಡ್ಯಾಂ ಸಮೀಪದ ಪ್ರದೇಶದಲ್ಲಿ ಬ್ಲಾಸ್ಟ್ ಮಾಡಿ ಕಾಲುವೆ, ವಿವಿಧ ಕಾಮಗಾರಿಗಳನ್ನು ಮಾಡಲಾಗಿದೆ. ದೊಡ್ಡ ಸುರಂಗವನ್ನೇ ನಿರ್ಮಾಣ ಮಾಡಿರುವಾಗ 30 ಅಡಿ ಗುಂಡಿ ತೋಡಿ ಪ್ರತಿಮೆ ನಿಲ್ಲಿಸುವುದು ದೊಡ್ಡ ವಿಷಯವೇ? ಪರಿಣಿತ ಎಂಜಿನಿಯರ್ ಗಳನ್ನು ಕರೆಸಿಕೊಂಡು, ಚರ್ಚೆ ಮಾಡಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದರು.

    ಪ್ರತಿಭಟನಾಕಾರರು ಹೇಳುವ ರಾಜ್ಯ, ದೇಶ ಯಾವುದಾದರೂ ಸರಿ ಅಲ್ಲಿಂದ ತಜ್ಞರ ತಂಡವನ್ನು ಕರೆಸುತ್ತೇವೆ. ಅವರಿಂದಲೇ ಕಾವೇರಿ ಪ್ರತಿಮೆ ನಿರ್ಮಾಣ ಮಾಡಿಸಲಾಗುತ್ತದೆ. ಇಂದು ಜಗತ್ತಿನಲ್ಲಿ ಅನೇಕ ತಜ್ಞರ ತಂಡಗಳಿವೆ ಎಂದ ಸಚಿವರು, ಕಾವೇರಿ ಪ್ರತಿಮೆ ನಿರ್ಮಾಣದಲ್ಲಿ ರೈತರ ಜಮೀನು ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಸರ್ಕಾರದ ಜಾಗವೇ 400 ಎಕರೆಯಿದೆ. ಡ್ಯಾಂ ಸಮೀಪದಲ್ಲಿ ನನ್ನದೂ 10 ಎಕರೆ ಜಾಗವಿದೆ. ಒಂದು ವೇಳೆ ಸರ್ಕಾರ ಕೇಳಿದರೆ ನಾನೂ ಕೂಡ ಕೊಡಬೇಕಾಗುತ್ತದೆ. ನಾವು ಪುಕ್ಸಟ್ಟೆ ಕೊಡುತ್ತೇವಾ ಎಂದು ಸಚಿವರು ಪ್ರಶ್ನಿಸಿದರು.

    ರಾಜ್ಯ ಸರ್ಕಾರ ರೈತ ಪರವಾದ ಸರ್ಕಾರ. ರೈತರ ಮನಸ್ಸಿಗೆ ಎಳ್ಳಷ್ಟೂ ನೋವಾಗದ ರೀತಿ ಕೆಲಸ ಮಾಡುತ್ತಿದೆ. ಕೆಆರ್‌ಎಸ್ ನಿರ್ಮಾಣಕ್ಕೆ ವಿರೋಧವಿತ್ತು. ಅದರಂತೆ ಈಗಲೂ ವಿರೋಧ ಇರುವುದು ಸಾಮಾನ್ಯ ಎಂದು ಹೇಳುವ ಮೂಲಕ ಸಚಿವರು, ಹೋರಾಟಗಾರಿಗೆ ಟಾಂಗ್ ಕೊಟ್ಟರು.

    ಏನಿದು ಯೋಜನೆ?:
    ಏಕತಾ ಪ್ರತಿಮೆ ಮಾದರಿಯಲ್ಲಿ ಕಾವೇರಿ ಮಾತೆಯ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸಮ್ಮಿಶ್ರ ಸರ್ಕಾರ ಕೈ ಹಾಕಿದೆ. ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಉದ್ಯಾನದಲ್ಲಿ 125 ಅಡಿ ಎತ್ತರದ ಕಾವೇರಿ ಮಾತೆಯ ಪ್ರತಿಮೆ, 360 ಅಡಿ ಎತ್ತರದ ಮ್ಯೂಸಿಯಂ ನಿರ್ಮಿಸಲು ಯೋಜನೆ ರೂಪಿಸಿದೆ.

    ಕೆಆರ್‌ಎಸ್ ಉದ್ಯಾನ `ಬೃಂದಾವನ’ವನ್ನು 1,200 ಕೋಟಿ ರೂ. ವೆಚ್ಚದಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಥೇಮ್ಸ್ ನದಿಯ ತಟದಲ್ಲಿ ಇರುವಂತೆ ರೀತಿ ಪಾರ್ಕ್ ನಿರ್ಮಾಣವಾಗಲಿದ್ದು, ಇದಕ್ಕೆ 400 ಎಕರೆ ಪ್ರದೇಶ ಬಳಕೆಯಾಗಲಿದೆ. 1200 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯ ಕಾಮಗಾರಿಯನ್ನು 2 ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ವಾರ್ಷಿಕ 300 ಕೋಟಿ ರೂ. ಆದಾಯ, ಸರ್ಕಾರಕ್ಕೆ 30 ಕೋಟಿ ರೂ. ವರಮಾನ ಬರುವ ನಿರೀಕ್ಷೆಯಿದೆ.

    ಹೇಗಿರಲಿದೆ ಪ್ರತಿಮೆ?:
    ಉದ್ದೇಶಿತ ಮಾದರಿಯಂತೆ ಸದ್ಯದ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೊಂದು ಸರೋವರ ನಿರ್ಮಿಸಿ ಅದರ ಮಧ್ಯ ಭಾಗದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ ನಿರ್ಮಾಣವಾಗಲಿದೆ. ಈ ಸಮುಚ್ಛಯದ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆ ಇರಲಿದ್ದು, ಕಾವೇರಿ ಮಾತೆ ಪದತಲದಲ್ಲಿ ಮ್ಯೂಸಿಯಂ ಕಟ್ಟಡ ಇರಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

    ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

    ಉಡುಪಿ: ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವನ್ನು ದೇವರೇ ನೋಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ.

    ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಆತ್ಮಮುಟ್ಟಿಕೊಮಡು ವಿಚಾರ ಮಾಡಲಿ. ಈ ದೇಶ ಎಲ್ಲವನ್ನೂ ಗಮನಿಸುತ್ತಿದೆ. ಅರ್ಧ ಆಕಾಶ, ಅರ್ಧ ಭೂಮಿ ಇದ್ದಂತೆ. ದೇಶದಲ್ಲಿ ಅರ್ಧದಷ್ಟು ಹೆಣ್ಣುಮಕ್ಕಳಿದ್ದಾರೆ. ದೇವರು ನನಗೆ ನಂಬಿಕೆ ಮತ್ತು ನನ್ನ ಬದುಕು. ದೇವರನ್ನೇ ಟಾರ್ಗೆಟ್ ಮಾಡುವವರ ಬಗ್ಗೆ ನಾನೂ ಏನೂ ಹೇಳಲ್ಲ. ನಮಗೆ ಜೀವನದ ಗೆರೆ ಹಾಕಿಕೊಟ್ಟದ್ದು ದೇವರ ನಂಬಿಕೆ. ಹೀಗಾಗಿ ದೇವಸ್ಥಾನವೇ ನನ್ನ ಉಸಿರು. ಅಲ್ಲದೇ ಶಬರಿಮಲೆ ವಿಚಾರದ ಪರ ಹಾಗೂ ವಿರೋಧದ ಬಗ್ಗೆ ಏನನ್ನೂ ಹೇಳಲ್ಲ. ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾನೆ. ಕೊನೆಗೆ ದೇವರೆ ಒಂದು ತೀರ್ಮಾನಕ್ಕೆ ಬರುತ್ತಾನೆಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಹೇಳಿಕೆಯ ಪರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಾತನಾಡಿರುವುದನ್ನು ನಾನು ಕೇಳಿದ್ದೇನೆ. ಅವರ ಮಾತಿನ ಅರ್ಥ, ಭಾವನೆ ಮಹಿಳೆಯ ವಿರುದ್ಧ ಇರಲಿಲ್ಲ. ಅವರು ಹೋರಾಟ ಮಾಡಿದ ರೈರ ಮಹಿಳೆಗೆ ಅವಮಾನ ಮಾಡಿಲ್ಲ. ಆದರೆ ಎಲ್ಲರೂ ಅವರವರ ಭಾವಕ್ಕೆ ತಕ್ಕಂತೆ ಮಾತನಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಗೂಡಾರ್ಥ ಇಟ್ಟುಕೊಂಡು ಮಾತನಾಡಿಲ್ಲ. ಹೆಣ್ಣುಮಕ್ಕಳನ್ನು ತಾಯಿ ಎಂದೇ ಗೌರವದಿಂದ ಕರೆದಿದ್ದಾರೆಂದು ಹೇಳಿದರು.

    ಶಬರಿಮಲೆ ಜಯಾಮಲಾ ವಿವಾದ:
    ಹೆಸರಾಂತ ಜ್ಯೋತಿಷಿ ಪಿ. ಉಣ್ಣಿಕೃಷ್ಣನ್ ಪಣಿಕ್ಕರ್ ತಂಡವು ಶಬರಿಮಲೆ ದೇವಸ್ಥಾನದಲ್ಲಿ 2006ರ ಜೂನ್‍ನಲ್ಲಿ ನಾಲ್ಕು ದಿನಗಳ ವರೆಗೆ `ದೇವಪ್ರಶ್ನೆ’ ಕೇಳಿ, ದೇವಸ್ಥಾನದ ಗರ್ಭಗುಡಿಯೊಳಗೆ ಮಹಿಳೆಯೊಬ್ಬರು ಪ್ರವೇಶಿಸಿದ್ದರು ಎಂದು ಹೇಳಿತ್ತು. `ದೇವಪ್ರಶ್ನೆ’ ಬಳಿಕ ನಟಿ ಜಯಮಾಲಾ 1987ರಲ್ಲಿ ತಾವು ಈ ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದ್ದಾಗಿ ಹೇಳಿಕೊಂಡಿದ್ದರು. ಪಣಿಕ್ಕರ್ ಅವರಿಗೆ ಪ್ರಚಾರಗೊಳಿಸುವುದಕ್ಕಾಗಿ ಜಯಮಾಲಾ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪಗಳು ಅಂದು ಕೇಳಿ ಬಂದಿದ್ದವು.

    ಜಯಮಾಲಾ ದೇವಸ್ಥಾನ ಪ್ರವೇಸಿಸುವ ಮೂಲಕ ರಾಜ್ಯದ ಜನರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪದ ಮೇಲೆ ಪೊಲೀಸರು ಪಣಿಕ್ಕರ್, ಅವರ ಸಹಾಯಕ ರಘುಪತಿ ಹಾಗೂ ನಟಿ ಜಯಮಾಲಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ವಜಾಗೊಳಿಸುವಂತೆ ಈ ಮೂವರು ಕೇರಳ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಮುಗಿದ ಅಧ್ಯಾಯವಾಗಿದ್ದು, ಆರೋಪಿಗಳ ವಿರುದ್ಧ ಹೊರಿಸಲಾಗಿರುವ ಆರೋಪ ಕಾನೂನು ಬದ್ಧ ಎಲ್ಲ ಅರ್ಜಿಯನ್ನು ವಜಾಗೊಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

     

  • ಸಿಎಂ ಸಭೆಯಿಂದ ಅರ್ಧಕ್ಕೆ ಜಾರ್ಜ್ ನಿರ್ಗಮನ – ಕಬ್ಬು ಬೆಳೆಗಾರರ ಆಕ್ರೋಶ

    ಸಿಎಂ ಸಭೆಯಿಂದ ಅರ್ಧಕ್ಕೆ ಜಾರ್ಜ್ ನಿರ್ಗಮನ – ಕಬ್ಬು ಬೆಳೆಗಾರರ ಆಕ್ರೋಶ

    ಬೆಂಗಳೂರು: ಬಾಕಿ ಹಣ ಪಾವತಿಸುವಂತೆ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಸಭೆ ಕರೆದಿದ್ದರು. ಆದ್ರೆ ಬೃಹತ್ ಕೈಗಾರಿಕೆ ಸಚಿವ ಕೆ.ಜೆ ಜಾರ್ಜ್ ಅವರು ಸಭೆಯಿಂದ ಅರ್ಧದಲ್ಲೇ ನಿರ್ಗಮಿಸಿರುವುದು ಇದೀಗ ರೈತರ ಕೋಪ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.

    ರೈತರ ಸಮಸ್ಯೆಗಿಂತ ಜಾರ್ಜ್ ಸಾಹೇಬ್ರಿಗೆ ಬ್ಯುಸಿನೆಸ್ಸೇ ಹೆಚ್ಚಾಯ್ತು. ಕಬ್ಬು ಬೆಳೆಗಾರರ ಬವಣೆಗಿಂತ ಟೆಕ್ ಸಮ್ಮಿಟ್‍ನ ಊಟವೇ ಹೆಚ್ಚಾಯ್ತು ಅಂತ ಸಚಿವರ ಬೇಜವಾಬ್ದಾರಿತನದ ವಿರುದ್ಧ ರೈತರು ಕಿಡಿಕಾರಿದ್ದಾರೆ.

    ಟೆಕ್ಕಿಗಳ ಜೊತೆ ಊಟಕ್ಕೆ ಬಂದಾಗ ಪಬ್ಲಿಕ್ ಟಿವಿ ಕ್ಯಾಮೆರಾ ಕಂಡು ಜಾರ್ಜ್ ಸಿಡಿಮಿಡಿಗೊಂಡಿದ್ದಾರೆ. ಅಲ್ಲದೇ ಏನ್ ಸಾರ್.. ಎಂದು ಪ್ರಶ್ನೆ ಕೇಳೋ ಮುನ್ನವೇ ಜಾರ್ಜ್ ಸಾಹೇಬ್ರು ಫುಲ್ ಗರಂ ಆಗಿದ್ರು. ರೈತರ ಸಭೆಯಲ್ಲಿ ಸಿಎಂ ಇಲ್ವೇನ್ರಿ.. ನಂದು ಪೂರ್ವನಿಗದಿತ ಕಾರ್ಯಕ್ರಮವಾಗಿದೆ. ಊಟಕ್ಕೆ ಅಂತಾ ಬಂದೆ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಈ ವಿಚಾರ ಪ್ರಸಾರವಾಗುತ್ತಿದ್ದಂತೆಯೇ ಜಾರ್ಜ್ ಮತ್ತೆ ರೈತರ ಸಭೆಗೆ ದೌಡಾಯಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನರೇಂದ್ರ ಮೋದಿ ದೇಶದಲ್ಲೇ ನಂಬರ್ 1 ನಾಯಕ: ಜಿ.ಟಿ.ದೇವೇಗೌಡ

    ನರೇಂದ್ರ ಮೋದಿ ದೇಶದಲ್ಲೇ ನಂಬರ್ 1 ನಾಯಕ: ಜಿ.ಟಿ.ದೇವೇಗೌಡ

    ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿಯೇ ನಂಬರ್ 1 ನಾಯಕ. ಅವರ ವಿರುದ್ಧ ಸರಿಸಮಾನದ ಪರ್ಯಾಯ ನಾಯಕ ಕಾಣುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

    ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನರೇಂದ್ರ ಮೋದಿ ಪ್ರಚಾರ ಮಾಡಿದ್ದರು. ಅಂದು ನೀಡಿದ್ದ ಭರವಸೆಗಳು ಈಡೇರಿಸದೇ ಕೈ ಚೆಲ್ಲಿದ್ದಾರೆ. ಹೀಗಾಗಿ ಈಗ ಗ್ರಾಮೀಣ ಭಾಗದ ಜನರು ಕೂಡ ಪ್ರಜ್ಞಾವಂತರಾಗಿದ್ದು, ಮೋದಿ ಅವರಿಗೆ ಮತ ಹಾಕಲು ಹಿಂದೇಟು ಹಾಕುತ್ತಾರೆ ಎಂದು ಟಾಂಗ್ ಕೊಟ್ಟರು.

    ಕೇಂದ್ರದಲ್ಲಿ ಮುಂದಿನ ಅವಧಿಗೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಜನರ ಬಾಯಲ್ಲಿದೆ. ಕಳೆದ ಬಾರಿ ಜೋರು ಮಳೆ ಎಂಬಂತೆ ಚುನಾವಣೆ ನಡೆಯಿತು. ಜಯಗಳಿಸಿದ ಬಿಜೆಪಿ, ಯುವಕರು, ವಿದ್ಯಾವಂತರನ್ನು ಕಡೆಗಣಿಸಿದೆ. ಅಷ್ಟೇ ಅಲ್ಲದೆ ಉದ್ಯೋಗವಕಾಶ ಕೊಡಲಿಲ್ಲ. ರೈತರ ಬೆನ್ನಿಗೆ ನಿಲ್ಲಲಿಲ್ಲ. ಇದರಿಂದಾಗಿ ಮೋದಿ ಸರ್ಕಾರದಿಂದ ಅಭಿವೃದ್ಧಿ ಆಗುವುದಿಲ್ಲ ಎನ್ನುವುದು ಜನರ ಅರಿವಿಗೆ ಬಂದಿದೆ ಎಂದು ಸಚಿವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆಪರೇಷನ್ ಕಮಲದ ಬೆನ್ನಲ್ಲೇ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ಸಚಿವ..!

    ಆಪರೇಷನ್ ಕಮಲದ ಬೆನ್ನಲ್ಲೇ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ಸಚಿವ..!

    ಬೆಂಗಳೂರು: ಆಪರೇಷನ್ ಕಮಲ ನಡೆಯುತ್ತಿರೋ ಬೆನ್ನಲ್ಲೇ ಕಾಂಗ್ರೆಸ್ ಸಚಿವರೊಬ್ಬರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಸಚಿವ ರಮೇಶ್ ಜಾರಕಿಹೊಳಿ ಅವರು ಬಿಎಸ್ ವೈ ಅವರನ್ನು ಭೇಟಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಆರತಕ್ಷತೆಯಲ್ಲಿ ರಮೇಶ್ ಅವರು ಭಾಗಿಯಾಗಿದ್ದಾರೆ. ಈ ಹಿಂದೆ `ಆಪರೇಷನ್ ಕಮಲ’ ಯತ್ನ ವೇಳೆ ಬಿಎಸ್‍ವೈ ಆಪ್ತನ ಜೊತೆಗೆ ನಿರಂತರ ಸಂಪರ್ಕದಲ್ಲಿ ಇದ್ದರು ಎಂದು ಹೇಳಲಾಗಿದ್ದು, ಆ ಸ್ನೇಹದಿಂದಲೇ ಇದೀಗ ಸಚಿವರು ಸಂತೋಷ್ ಆರತಕ್ಷತೆಗೆ ಆಗಮಿಸಿದ್ದಾರೆ ಅಂತ ತಿಳಿದುಬಂದಿದೆ.

    ಇತ್ತೀಚೆಗಷ್ಟೇ ಅಂಬಿಡೆಂಟ್ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರ ಬಂಧನ ತಪ್ಪಿಸಲು ರಮೇಶ್ ಜಾರಕಿಹೊಳಿ ಪ್ರಯತ್ನಿಸಿದ್ದರು ಎನ್ನುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮೀಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗಿತ್ತು.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ ಎಂಬುದಾಗಿ ತಿಳಿದುಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews