Tag: minister

  • ಡಿಕೆಶಿ ಜೊತೆ ಭಿನ್ನಾಭಿಪ್ರಾಯ, ಪಕ್ಷ ಬಿಡೋ ಬಗ್ಗೆ ಆನಂದ್ ಸಿಂಗ್ ಸ್ಪಷ್ಟನೆ

    ಡಿಕೆಶಿ ಜೊತೆ ಭಿನ್ನಾಭಿಪ್ರಾಯ, ಪಕ್ಷ ಬಿಡೋ ಬಗ್ಗೆ ಆನಂದ್ ಸಿಂಗ್ ಸ್ಪಷ್ಟನೆ

    ಬಳ್ಳಾರಿ: ನನಗೂ ಹಾಗೂ ಸಚಿವ ಡಿಕೆ ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅಂತಾ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

    ಬಳ್ಳಾರಿಯ ಹೊಸಪೇಟೆಯಲ್ಲಿ ಮತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನನಗೆ ಅಪಾರ ಅಭಿಮಾನವಿದೆ. ಬಳ್ಳಾರಿ ಜಿಲ್ಲೆಯ 6 ಶಾಸಕರ ಪೈಕಿ ಯಾರಿಗಾದ್ರೂ ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಆಶಯ. ನಾನೂ ಕೂಡ ಸಚಿವ ಸ್ಥಾನದ ಅಕ್ಷಾಂಕಿಯಾಗಿದ್ದೇನೆ ಅಂದಿದ್ದಾರೆ.

     

    ಸಚಿವ ಸ್ಥಾನ ಕೊಡಿಸದ್ದಕ್ಕೆ ಆನಂದಸಿಂಗ್ ಅಸಮಧಾನಗೊಂಡು ತಮ್ಮ ಆಪ್ತ ಸ್ನೇಹಿತ ಸಂತೋಷ್ ಲಾಡ್ ಜೊತೆ ಸತತ ಸಂಪರ್ಕದಲ್ಲಿದ್ದಾರೆ. ಇದರಿಂದಾಗಿ ಆನಂದ್ ಸಿಂಗ್ ಮತ್ತೆ ಬಿಜೆಪಿ ಸೇರ್ತಾರಾ ಅನ್ನೋ ಮಾತುಗಳು ಕೇಳಿಬರುವುದಾಗಿ ಇತ್ತೀಚೆಗಷ್ಟೇ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಹೊಸಪೇಟೆ ಶಾಸಕ ಆನಂದಸಿಂಗ್ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಅಸಮಧಾನಗೊಂಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ವೇಳೆ ಸಚಿವ ಸ್ಥಾನದ ಭರವಸೆ ನೀಡಿದ್ದರಂತೆ. ಡಿಕೆ ಶಿವಕುಮಾರ್ ತಮಗೆ ಸಚಿವ ಸ್ಥಾನ ಕೊಡಿಸದ್ದಕ್ಕೆ ಬೇಸರಗೊಂಡು ಆನಂದಸಿಂಗ್ ಚುನಾವಣಾ ನಿವೃತ್ತಿ ಘೋಷಿಸಿದರು ಎನ್ನಲಾಗಿತ್ತು.

    ಕಳೆದ ವಾರದ ಹಿಂದೆ ಶಾಸಕ ಆನಂದಸಿಂಗ್ ತಾವೂ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರು. ಅಲ್ಲದೇ ಆನಂದಸಿಂಗ್ ಕಾಂಗ್ರೆಸ್ ಜೆಡಿಎಸ್ ಸಮಿಶ್ರ ಸರ್ಕಾರ ರಚನೆ ವೇಳೆಯೂ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಂಡ ವೇಳೆ ಸಚಿವ ಡಿಕೆ ಶಿವಕುಮಾರ್, ಶಾಸಕ ಆನಂದಸಿಂಗ್ ಅವರಿಗೆ ಮನವೊಲಿಸಿ ಮರಳಿ ಕರೆತಂದಿದ್ದರು. ಆದರೆ ಇದೀಗ ತಮಗೆ ಸಚಿವ ಸ್ಥಾನ ಕೊಡಿಸದ್ದಕ್ಕೆ ಆನಂದಸಿಂಗ್ ಅಸಮಧಾನಗೊಂಡು ತಮ್ಮ ಆಪ್ತ ಸ್ನೇಹಿತ ಸಂತೋಷ ಲಾಡ್ ಜೊತೆ ಸತತ ಸಂಪರ್ಕದಲ್ಲಿದ್ದಾರೆ ಎನ್ನಲಾಗಿತ್ತು.

    ಸದ್ಯ ವಿದೇಶದಲ್ಲಿರುವ ಮಾಜಿ ಸಚಿವ ಸಂತೋಷ್ ಲಾಡ್ ರೊಂದಿಗೆ ಸತತ ಸಂಪರ್ಕದಲ್ಲಿರುವ ಬಿಜೆಪಿ ಶಾಸಕ ಶ್ರೀರಾಮುಲು ಬಳ್ಳಾರಿಯ 5 ಶಾಸಕರನ್ನ ಸೆಳೆಯಲು ಮುಂದಾಗಿದ್ದಾರಂತೆ. ಹೊಸಪೇಟೆ ಶಾಸಕ ಆನಂದಸಿಂಗ್, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ, ಜೆಡಿಎಸ್ ತೊರೆದು ಕೈ ಪಾಳಯ ಸೇರಿದ ಹಗರಿಬೊಮ್ಮನಹಳ್ಳಿಯ ಭೀಮಾನಾಯ್ಕ್, ಕಂಪ್ಲಿಯ ಜಿ.ಎನ್.ಗಣೇಶ್, ಸಂಡೂರು ಶಾಸಕ ತುಕಾರಾಂ ಇವರೆಲ್ಲರೂ ಸಂತೋಷ್ ಲಾಡ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ನಾಯಕರು ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    -ನಾನು 20 ವರ್ಷ ಬಿಜೆಪಿಯಲ್ಲಿದ್ದವನು, ನನಗೆ ಬಹಳಷ್ಟು ಶಾಸಕರು ಆತ್ಮೀಯರು

    ಮೈಸೂರು: ಬಿಜೆಪಿ ನಮ್ಮ ಓರ್ವ ಶಾಸಕರನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವು ರೆಡಿಯಾಗಿದ್ದೇವೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಾಗಿ ಕುಮಾರಸ್ವಾಮಿ ಅವರು ಅಭಿವೃದ್ಧಿಪರವಾದ ಆಡಳಿತನ್ನು ರಾಜ್ಯದ ಜನತೆಗೆ ನೀಡುತ್ತಿದ್ದಾರೆ. ಆದ್ರೆ ಸರ್ಕಾರ ಉರುಳಿಸಲು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಿಜೆಪಿಯ 10 ಶಾಸಕರು ನನ್ನ ಸಂಪರ್ಕದಲ್ಲಿರೋ ವಿಷಯ ಜೆಡಿಎಸ್ ವರಿಷ್ಠರಿಗೆ ಗೊತ್ತಿದೆ. ನಾನು ಸಹ 20 ವರ್ಷ ಬಿಜೆಪಿಯಲ್ಲಿ ಇದ್ದವನು. ಹಲವು ಶಾಸಕರು ನನಗೆ ಆತ್ಮೀಯರು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

    ಇದೂವರೆಗೆ ನಮ್ಮ ಯಾವ ಶಾಸಕರನ್ನು ಬಿಜೆಪಿ ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೂ ನಮ್ಮ ಯಾವ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ. ನಮ್ಮದು ಪ್ರಾದೇಶಿಕ ಪಕ್ಷವೇ ಆಗಿರಬಹುದು. ಆದ್ರೆ ನಾವು ಸುಮ್ಮನೆ ಕುಳಿತಿಲ್ಲ. ಬಿಜೆಪಿ ನಮ್ಮ ಒಬ್ಬ ಶಾಸಕನನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ಸಿದ್ಧವಾಗಿದ್ದೇವೆ. ಅಲ್ಲಿ ಪ್ರಾದೇಶಿಕ ಪಕ್ಷ ಮತ್ತು ನಾಯಕರು ಶಕ್ತಿ ಏನು ಎಂಬುವುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಂಗಳೂರು: ಬೆಳಗಾವಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶದಿಂದ ಗೊಂದಲವಾಗಿದ್ದು, ಇನ್ನು ಮುಂದೆ ಅವರು ಯಾವುದೇ ಕಾರಣಕ್ಕೂ ತಲೆ ಹಾಕಬಾರದು ಎಂದು ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

    ಬೆಳಗಾವಿ ವಿಚಾರದ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಚಾರಕ್ಕೆ ಡಿಕೆಶಿಯವರು ಪ್ರವೇಶಿಸಿದ್ದಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಅವರು ಬೆಳಗಾವಿ ವಿಚಾರಕ್ಕೆ ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡುವಂತಿಲ್ಲ. ನಮ್ಮ ಸಮಸ್ಯೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ವಿಚಾರಿಸಿ, ಬಗೆಹರಿಸಿದರೇ ಎಲ್ಲಾ ಸರಿ ಹೋಗುತ್ತೆ. ನಾನು ಕೂಡ ಮುಖ್ಯಮಂತ್ರಿಯಾಗಬೇಕು ಅದಕ್ಕೆ ಇನ್ನೂ ಸಮಯವಿದೆ ಎಂದು ಹೇಳಿದರು.

    ಕಳೆದ ನಾಲ್ಕು ತಿಂಗಳಿನಿಂದಲೂ ಬಿಜೆಪಿ ನಾಯಕರ ಒತ್ತಡ ನಮ್ಮ ಮೇಲಿದೆ. ಆದರೆ ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಸರ್ಕಾರಕ್ಕೆ ನಮ್ಮಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನನ್ನ ಸಹೋದರನ ಜೊತೆ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಸುತ್ತೇನೆ. ಯಾವೆಲ್ಲಾ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿಯಿಂದ ವಾಮಮಾರ್ಗ: ಪುಟ್ಟರಂಗಶೆಟ್ಟಿ

    ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿಯಿಂದ ವಾಮಮಾರ್ಗ: ಪುಟ್ಟರಂಗಶೆಟ್ಟಿ

    ಚಾಮರಾಜನಗರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿಯು ವಾಮಮಾರ್ಗ ಅನುಸರಿಸುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಆರೋಪಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಐಟಿ ಇಲಾಖೆ ದುರ್ಬಳಕೆ ಮಾಡಿಕೊಂಡು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರ ಮೇಲೆ ದಾಳಿ ನಡೆಸುತ್ತಿದೆ. ಇದು ಬಿಜೆಪಿಯವರ ಸೇಡಿನ ರಾಜಕಾರಣವೇ ಹೊರತು ಬೇರೇನೂ ಅಲ್ಲ. ಎಲ್ಲದರ ಬಗ್ಗೆ ನಾಡಿನ ಜನತೆಗೆ ಗೊತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಏನೇ ಮಾಡಿದರೂ, ಅದನ್ನು ಎದುರಿಸುವ ಶಕ್ತಿ ಡಿಕೆಶಿ ಅವರಿಗಿದೆ ಎಂದು ಹೇಳಿದರು.

    ಡಿಕೆಶಿಯವರು ತೆರಿಗೆಯನ್ನು ಕಟ್ಟಿ ಕಾನೂನು ಮೂಲಕವೇ ಆಸ್ತಿ ಸಂಪಾದನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿಗಿಂತಲೂ ಬಿಜೆಪಿಯವರು ಹೆಚ್ಚಿನ ಭ್ರಷ್ಟಾಚಾರ ಮಾಡಿದ್ದಾರೆ. ಆದರೆ ಅವರ ಮನೆಯ ಮೇಲೆ ದಾಳಿ ಮಾಡುವ ಕೆಲಸವನ್ನು ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಮಾಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಸಂಸದೆ ಶೋಭಾ ಕರಂದ್ಲಾಜೆಯವರ ತಾಕತ್ತಿದ್ದರೆ ಶಾಸಕರು ಹಾಗೂ ಸಚಿವರನ್ನು ಉಳಿಸಿಕೊಳ್ಳಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಬಿಜೆಪಿಯವರು ಮಾಡಿದ ಆಪರೇಷನ್ ಕಮಲಕ್ಕೆ ತುತ್ತಾಗಿದ್ದ ಶಾಸಕರ ಪರಿಸ್ಥಿತಿ ಇವತ್ತು ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಯಾರಾದರೂ ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಸಾಧ್ಯವೇ. ಯಾರು ಕೂಡ ಬಿಜೆಪಿ ಪಕ್ಷ ಸೇರುವುದಿಲ್ಲ ಮತ್ತು ಕ್ಷೇತ್ರದ ಮತದಾರರಿಗೆ ಅನ್ಯಾಯ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಸೋಮವಾರದ ಭಾರತ್ ಬಂದ್ ಕುರಿತು ಮಾತನಾಡಿ, ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದು, ಈಗಾಗಲೇ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ನಮಗೆ ಖಾಸಗಿ ಬಸ್ ಮಾಲೀಕರು, ಆಟೋ ಮಾಲೀಕರ ಸಂಘ, ಥಿಯೇಟರ್ ಮಾಲೀಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಬೆಂಬಲ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಪೆಟ್ರೋಲಿಯಂ ಉತ್ಪನ್ನಗಳು ಏರಿಕೆಯಾಗುತ್ತಲೇ ಇದೆ. ತರಕಾರಿ, ಹಾಲು ಎಲ್ಲದರ ಬೆಲೆಗಳು ಗಗನಕ್ಕೇರಿದೆ. ಹೀಗಾಗಿ ಬಂದ್‍ಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಬೆಂಗಳೂರು: ಕಾಂಗ್ರೆಸ್ಸಿನವರಿಗೆ ಏನಾದರೂ ತಾಕತ್ತು ಇದ್ದರೆ ಅವರ ಶಾಸಕರು ಹಾಗೂ ಸಚಿವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಡಾಲರ್ಸ್ ಕಾಲೋನಿಯ ಬಿಎಎಸ್‍ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ಕಿತ್ತಾಟವನ್ನು ಬಿಜೆಪಿ ಮೇಲೆ ಹೇರುವ ಪ್ರಯತ್ನವನ್ನು ಕಾಂಗ್ರೆಸ್ಸಿನವರು ಮಾಡುತ್ತಿದ್ದಾರೆ. ಅವರಿಗೇನಾದರೂ ತಾಕತ್ತು ಇದ್ದರೆ ತಮ್ಮ ತಮ್ಮ ಶಾಸಕರು ಹಾಗೂ ಸಚಿವರನ್ನು ಹತೋಟಿಯಲ್ಲಿ ಹಿಡಿದಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಪರಸ್ಪರ ಕಿತ್ತಾಡಿಕೊಂಡು, ಬಿಜೆಪಿ ಮೇಲೆ ಹೇರುವ ತಮ್ಮ ಹತಾಶೆ ಭಾವನೆಯನ್ನು ಬಿಡಿ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಈ ವೇಳೆ ಡಿಕೆ ಶಿವಕುಮಾರ್ ಹೇಳಿದ್ದ ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ ಅನ್ನುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಕುಮಾರ್ ಹೇಗೆ ಕಿವಿ ಮೇಲೆ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ವೋ, ಅದೇ ರೀತಿ ಯಾರೂ ಕೂಡ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ಲ. ಯಡಿಯೂರಪ್ಪನವರು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದುಕೊಂಡೆ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಆಂತರಿಕ ಕಿತ್ತಾಟವನ್ನು ತಪ್ಪಿಸಿಕೊಳ್ಳಲು ಹೀಗೆ ಬೇರೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಮಾಡಿಲ್ಲ, ಕಳ್ಳನಂತೆ ಓಡಿಹೋಗಲ್ಲ-ಸಚಿವ ಡಿಕೆಶಿ

    ಪ್ರಧಾನ ಮಂತ್ರಿ ಕಚೇರಿಯು ಆದಾಯ ತೆರಿಗೆ(ಐಟಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಧಾನಿಯೊಂದಿಗೆ ಚರ್ಚಿಸುತ್ತೇವೆ ಎನ್ನುವ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಬೇಕಾದರೂ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿ. ಐಟಿ ಹಾಗೂ ಇಡಿ ಇಲಾಖೆ ಕಾರ್ಯಗಳೊಂದಿಗೆ ಅವರು ಯಾವುದೇ ಸಂಬಂಧ ಹೊಂದಿಲ್ಲವೆಂದು ಉತ್ತರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಡಿಕೆಶಿಯಿಂದ ಮಾಸ್ಟರ್ ಪ್ಲಾನ್..?

    ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಡಿಕೆಶಿಯಿಂದ ಮಾಸ್ಟರ್ ಪ್ಲಾನ್..?

    ಬೆಂಗಳೂರು: ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿಯಿಂದ ತಪ್ಪಿಸಿಕೊಳ್ಳಲು ಡಿಕೆಶಿ ಮಾಡಿದ್ದಾರೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ಈ ಕುರಿತು ಸಚಿವರು ಈಗಾಗಲೇ ವಕೀಲರು, ನುರಿತ ಆಡಿಟರ್ ಗಳ  ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ಇ.ಡಿ ವಿಚಾರಣೆಗೆ ಕರೆದರೆ ಹೇಗೆ ಉತ್ತರಿಸಬೇಕು ಅನ್ನೋದರ ಬಗ್ಗೆ ಕೂಡ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಯಾವಾಗ ಏನ್ ಬೇಕಾದ್ರು ಆಗಬಹುದು. ಇದಕ್ಕೆ ಸಜ್ಜಾಗಿರಿ ಅಂತ ಹೇಳಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನು ಓದಿ: ಬಿಜೆಪಿ ಅವರೆಲ್ಲ ನನ್ನ ಗೆಳೆಯರು – ಡಿಕೆಶಿ

    ಇ.ಡಿ. ಬಂಧಿಸದೇ ಹೋದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಆ್ಯಂಟಸಿಪೇಟರಿ ಬೇಲ್‍ಗಾಗಿ ಘಟಾನುಘಟಿ ವಕೀಲರ ಜೊತೆ ನಿಕಟ ಸಂಪರ್ಕ ಹೊಂದಿರುವ ಸಚಿವರು, ಐಟಿ ಕೇಸ್‍ನಲ್ಲಿ ಬಚಾವ್ ಮಾಡಿದ್ದ ಹಿರಿಯ ವಕೀಲರ ಜೊತೆಗೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ಡಿ.ಕೆ. ಶಿವಕುಮಾರ್ ಬಂಧನ ಸಾಧ್ಯತೆಗಳು ಹೆಚ್ಚಿವೆ. ಒಂದು ವೇಳೆ ಡಿಕೆಶಿ ಬಂಧನವಾದ್ರೆ ಇಡಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಬಂಧಿಸದಿದ್ದರೆ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇದಕ್ಕಾಗಿ ಐಟಿ ಕೇಸ್‍ನಲ್ಲಿ ಬಚಾವ್ ಮಾಡಿದ್ದ ಹಿರಿಯ ವಕೀಲರ ಸಂಪರ್ಕದಲ್ಲಿದ್ದಾರೆ. ಇದನ್ನು ಓದಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಇತ್ತ ಅಣ್ಣ ಶಿವಕುಮಾರ್ ಜೊತೆ ರಾತ್ರಿಯೆಲ್ಲಾ ಇದ್ದ ಸಹೋದರ ಸುರೇಶ್ ತಡರಾತ್ರಿ 11.30ರ ವೇಳೆಗೆ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಅಣ್ಣನ ಜೊತೆ ನಾನು ಮಾತನಾಡಲು ಬಂದಿದ್ದೇನೆ. ಶುಕ್ರವಾರ ಬೆಳಗ್ಗೆ ದೆಹಲಿಗೆ ಹೋಗಬೇಕಿತ್ತು. ಆದ್ರೆ ಮಾಧ್ಯಮಗಳಲ್ಲಿ ವದಂತಿ ಬಂದ ಹಿನ್ನಲೆ ಇಲ್ಲೇ ಉಳಿದುಕೊಂಡಿದ್ದಾರೆ. ಬಿಜೆಪಿಯವರು ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಇ.ಡಿ ಎಫ್‍ಐಆರ್ ಮಾಡ್ಲಿ. ನಾನಾಗ್ಲಿ, ಡಿಕೆ ಶಿವಕುಮಾರ್ ಆಗ್ಲಿ ಭಯ ಪಡುವ ಪ್ರಮೇಯವೇ ಇಲ್ಲ. ಸರ್ಕಾರ ಹಾಗೂ ನಾವು ಇದನ್ನು ಫೇಸ್ ಮಾಡ್ತೀವಿ ಅಂತ ಸಂಸದ ಡಿಕೆ ಸುರೇಶ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ ಖಡಕ್ಕಾಗಿ ನುಡಿದಿದ್ದರು.

    ಏನಿದು ಪ್ರಕರಣ..?
    * 2017ರ ಆಗಸ್ಟ್ 02ರಂದು ಡಿಕೆಶಿ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
    * ಸಚಿವ ಡಿಕೆ ಶಿವಕುಮಾರ್ ಉಳಿದುಕೊಂಡಿದ್ದ ಈಗಲ್‍ ಟನ್ ರೆಸಾರ್ಟ್ ಮೇಲೆ ರೇಡ್
    * ಡಿ.ಕೆ.ಶಿವಕುಮಾರ್‍ಗೆ ಸೇರಿದ ದೆಹಲಿಯ ಸಫ್ದರ್‍ಜಂಗ್ ನಿವಾಸ ಮೇಲೆಯೂ ದಾಳಿ
    * ದೆಹಲಿಯ ಡಿಕೆಶಿ ಮತ್ತು ಆಪ್ತನ ನಿವಾಸಗಳಲ್ಲಿ 8.59 ಕೋಟಿ ರೂ. ಹಣ ಪತ್ತೆ
    * ಐಟಿ ದಾಳಿ ವೇಳೆ ಸಿಕ್ಕ ಹಣದ ಮೂಲದ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ
    * ಹವಾಲ ಮೂಲಕ ಹೈಕಮಾಂಡ್‍ಗೆ ಹಣ ವರ್ಗಾವಣೆ ಸಾಧ್ಯತೆ ಬಗ್ಗೆ ಐಟಿ ದೂರು
    * ದೆಹಲಿಯಲ್ಲಿ ಹಣ ಸಿಕ್ಕ ಕಾರಣ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ
    * ಜಾರಿ ನಿರ್ದೇಶನಾಲಯದಿಂದ ತನಿಖೆ, ಎಫ್‍ಐಆರ್ ಸಾಧ್ಯತೆ


    ಜಾರಿ ನಿರ್ದೇಶನಾಲಯ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡ್ರೆ ಮುಂದೆ ಏನಾಗಬಹುದು?
    * ಡಿ.ಕೆ.ಶಿವಕುಮಾರ್ ಬಂಧನ ಆಗಬಹುದು
    * ಸಚಿವ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ಕೊಡಬಹುದು
    * ಡಿಕೆಶಿ ಹೆಸರಲ್ಲಿರುವ ಆಸ್ತಿ-ಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳಬಹುದು
    * ಆರೋಪ ಸಾಬೀತಾದ್ರೆ 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಆಗಬಹುದು

    ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿ ಕೆ ಶಿವಕುಮಾರ್ ಅವರೇ ಕೇಂದ್ರ ಸರ್ಕಾರದ ಟಾರ್ಗೆಟ್ ಯಾಕೆ?
    * ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು
    * ಬಹುಮತ ಸಾಬೀತು ವೇಳೆ `ಕೈ’ಗೆ ಸಿಗದಿದ್ದ ಶಾಸಕರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದು
    * ಗುಜರಾತ್‍ನಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ `ಕೈ’ ಶಾಸಕರನ್ನು ರೆಸಾರ್ಟ್ ನಲ್ಲಿ ರಕ್ಷಿಸಿದ್ದು
    * ಸೋನಿಯಾ ಆಪ್ತ ಅಹ್ಮದ್ ಪಟೇಲ್ ಗೆಲುವಿಗೆ ಡಿಕೆಶಿ ರಣತಂತ್ರ ಕಾರಣವಾಗಿತ್ತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಬಲಿಗರಿಂದ ಸಚಿವರಿಗೆ ಬೆಳ್ಳಿ ಕಿರೀಟ- ಸಂತ್ರಸ್ತರ ನಿಧಿಗೆ ಹಣ ನೀಡಲೆಂದು ಯಶ್ ಮುಂದೆಯೇ ಹರಾಜು

    ಬೆಂಬಲಿಗರಿಂದ ಸಚಿವರಿಗೆ ಬೆಳ್ಳಿ ಕಿರೀಟ- ಸಂತ್ರಸ್ತರ ನಿಧಿಗೆ ಹಣ ನೀಡಲೆಂದು ಯಶ್ ಮುಂದೆಯೇ ಹರಾಜು

    ಮಂಡ್ಯ: ಬೆಂಬಲಿಗರು ಪ್ರೀತಿಯಿಂದ ನೀಡಿದ ಬೆಳ್ಳಿಯ ಕಿರೀಟವನ್ನು ರಾಕಿಂಗ್ ಸ್ಟಾರ್ ಯಶ್ ಸಮ್ಮುಖದಲ್ಲಿಯೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸಿ.ಎಸ್.ಪುಟ್ಟರಾಜು ಹರಾಜು ಹಾಕಿದ್ದು, ಹರಾಜಿನಿಂದ ಬಂದ ಹಣವನ್ನು ಕೊಡಗು ಸಂತ್ರಸ್ತರ ನಿಧಿಗೆ ದಾನ ಮಾಡುವುದಾಗಿ ತಿಳಿಸಿದ್ದಾರೆ.

    ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹುಲ್ಕೆರೆಕೊಪ್ಪಲು ಗ್ರಾಮದಲ್ಲಿ ಸಚಿವ ಪುಟ್ಟರಾಜು ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದ ಬೆಂಬಲಿಗರು, ಸಚಿವರಿಗೆ ಸನ್ಮಾನ ಮಾಡಿ ಬೆಳ್ಳಿ ಕಿರೀಟವನ್ನು ನೀಡಿದರು. ಬೆಳ್ಳಿ ಕಿರೀಟ ಸ್ವೀಕರಿಸಲು ನಿರಾಕರಿಸಿದ ಸಚಿವ ಪುಟ್ಟರಾಜು ನೀವು ಅಭಿನಂದಿಸಿ ನೀಡಿದ ಎಲ್ಲ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತೇನೆ. ಆದರೆ ಬೆಳ್ಳಿ ಕಿರೀಟವನ್ನು ಮಾತ್ರ ಹರಾಜು ಹಾಕಿ, ಆ ಹಣವನ್ನು ಕೊಡಗು ಸಂತ್ರಸ್ತರ ನಿಧಿಗೆ ನೀಡೋದಾಗಿ ತಿಳಿಸಿದರು.

    ಸುಮಾರು 35 ಸಾವಿರ ಮೌಲ್ಯದ ಬೆಳ್ಳಿ ಕಿರೀಟವನ್ನು ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರು 58 ಸಾವಿರ ರೂಪಾಯಿಗಳಿಗೆ ಹಾರಾಜು ಕೂಗಿದರು. ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ಯಶ್, ಸಚಿವ ಪುಟ್ಟರಾಜು ಅವರನ್ನು ಹಾಡಿಹೊಗಳಿದರು.

    ಪಾಂಡವಪುರ ತಾಲೂಕಿನ ಜನತೆ ಸಿ.ಎಸ್.ಪುಟ್ಟರಾಜು ಅವರನ್ನು ಸರಿಯಾದ ಸಮಯದಲ್ಲಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದೀರಾ. ನಿಮ್ಮಲ್ಲರ ಆಶೀರ್ವಾದದಿಂದ ಸಿ.ಎಸ್.ಪುಟ್ಟರಾಜು ರಾಜ್ಯದ ಸಣ್ಣ ನೀರಾವರಿ ಸಚಿವರಾಗಿದ್ದರೆ. ಅವರು ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿದ್ದಾರೆ ಎಂದರು. ಪಾಂಡವಪುರ ಜನತೆ ನನ್ನ ಮೇಲೆ ಅಪಾರವಾದ ಪ್ರೀತಿ ಇಟ್ಟುಕೊಂಡಿದ್ದಾರೆ. ನಿಮ್ಮೆಲ್ಲರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ ಎಂದು ಯಶ್ ಸಂತಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಜಮೀರ್ ಅಹಮದ್

    ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಜಮೀರ್ ಅಹಮದ್

    ಗದಗ: ಅಪಘಾತದಿಂದ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀನ್ ಅಹಮದ್ ಖಾನ್ ಮಾನವೀಯತೆ ಮೆರೆದಿದ್ದಾರೆ.

    ಜಿಲ್ಲೆಯ ಹುಲಕೋಟಿ ಬಳಿ ಟಂ ಟಂ ವಾಹನ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತದ ರಭಸಕ್ಕೆ ಹುಲಕೋಟಿ ನಿವಾಸಿ ಬಸವರಾಜ್ (32) ಸ್ಥಳದಲ್ಲೇ ಮೃತಪಟ್ಟರೆ, ವಾಹನದಲ್ಲಿದ್ದ ಬಾಬಾಜಾನ್, ದೇವಕ್ಕ, ಮಾಂತೇಶ, ಸುನೀತಾ ಹಾಗೂ ಸೈಯದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ವಿಕಲಚೇತನ ಯುವಕನ ಸಮಸ್ಯೆ ಕೇಳಿ ಸ್ಥಳದಲ್ಲಿಯೇ 30 ಸಾವಿರ ನೀಡಿದ್ರು ಸಚಿವ ಜಮೀರ್

    ಇದೇ ಮಾರ್ಗವಾಗಿ ಕುಷ್ಟಗಿಯ ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹಮದ್, ಅಪಘಾತವನ್ನು ಕಂಡು ಕೂಡಲೇ ಗಾಯಾಳುಗಳ ನೆರವಿಗೆ ಬಂದಿದ್ದಾರೆ. ಅಲ್ಲದೇ ಅವರಿಗೆ ಸಮಾಧಾನ ಮಾಡಿ, ಎಲ್ಲರನ್ನು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಘಟನೆ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಜಾರಕಿಹೊಳಿ ಬ್ರದರ್ಸ್ ನಡುವಿನ ಗುದ್ದಾಟ ಜೋರಾಗಿದ್ದು, ತಮ್ಮ ವಿರುದ್ಧ ಮಿತ್ಯಾರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

    ರಾಜ್ಯದ ರಾಜಕಾರಣದಲ್ಲಿದ್ದ ರಮೇಶ್ ಜಾರಕಿಹೊಳಿರನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದು ನಾನು, ಅಲ್ಲದೇ ಸೋನಿಯಾ ಗಾಂಧಿ ಅವರನ್ನು ಪರಿಚಯ ಮಾಡಿಸಿ ರಾಜ್ಯದಲ್ಲಿ ಸಚಿವ ಸ್ಥಾನ ಸಿಗುಂತೆ ಮಾಡಿದೆ. ಆದರೆ ನನ್ನ ವಿರುದ್ಧವೇ ರಮೇಶ್ ಜಾರಕಿಹೊಳಿ ಅವರು ತಿರುಗಿಬಿದ್ದಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿರನ್ನು ಕ್ಷಮಿಸಬಲ್ಲೆ ಆದರೆ ರಮೇಶ್‍ರನ್ನು ಕ್ಷಮಿಸಲ್ಲ ಎಂದು ಡಿಕೆ ಶಿವಕುಮಾರ್ ತಮ್ಮ ಆಪ್ತವಲಯದಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಹೆಚ್ಚು ಶ್ರಮವಹಿಸಿದೆ. ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಅವರನ್ನು ಬಲವಾಗಿ ಬೆಳೆಸಿದೆ. ಅಲ್ಲದೇ ಅಹ್ಮದ್ ಪಟೇಲ್, ಗುಲಾಂ ನಬಿ ಆಜಾದ್, ದಿಗ್ವಿಜಯ್ ಸಿಂಗ್ ಅವರಿಗೂ ಪರಿಚಯಿಸಿದೆ. ಎಐಸಿಸಿ ಅಧಿನಾಯಕಿಯಾಗಿದ್ದ ಸೋನಿಯಾ ಗಾಂಧಿಗೂ ಒಪ್ಪಿಸಿ ಸಚಿವ ಸ್ಥಾನ ಸಿಗುವಂತೆ ಮಾಡಿದೆ. ಆದರೆ ಸದ್ಯ ರಮೇಶ್ ಜಾರಕಿಹೊಳಿ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

    ಬೆಳಗಾವಿ ಜಿಲ್ಲಾ ರಾಜಕೀಯ ಕುರಿತಂತೆ ಉಂಟಾಗಿರುವ ಅಸಮಾಧಾನದಲ್ಲಿ ಕಾಂಗ್ರೆಸ್ ಪಕ್ಷದ ರಮೇಶ್ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಅಲ್ಲದೇ ತಮ್ಮ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳುತ್ತೇವೆ. ಇಲ್ಲಿ ಯಾರ ಮಧ್ಯಪ್ರವೇಶದ ಬೇಡ ಎಂದು ತಿಳಿಸಿದ್ದರು. ಅಲ್ಲದೇ ಸಚಿವ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ರಾಜಕೀಯಕ್ಕೆ ಪ್ರವೇಶ ಮಾಡಿದರೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಇದನ್ನು ಓದಿ:   ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಹಾರ ಸಾಮಗ್ರಿಗಳನ್ನು ಭುಜದ ಮೇಲೆ ಹೊತ್ತು ಸಾಗಿದ ಸಚಿವ- ಇತ್ತ ಬಿಸ್ಕೆಟ್ ಎಸೆದ ರೇವಣ್ಣ!

    ಪರಿಹಾರ ಸಾಮಗ್ರಿಗಳನ್ನು ಭುಜದ ಮೇಲೆ ಹೊತ್ತು ಸಾಗಿದ ಸಚಿವ- ಇತ್ತ ಬಿಸ್ಕೆಟ್ ಎಸೆದ ರೇವಣ್ಣ!

    ತಿರುವನಂತಪುರ: ಕೇರಳದ ಶಿಕ್ಷಣ ಸಚಿವರಾದ ರವೀಂದ್ರನಾಥ್‍ರವರು ಪರಿಹಾರ ಸಾಮಗ್ರಿಗಳನ್ನು ಸ್ವತಃ ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತ ಕೇಂದ್ರಗಳಿಗೆ ಸಾಗಿಸಿದ್ದಾರೆ.

    ತುರ್ತು ಪರಿಸ್ಥಿತಿ ಅಥವಾ ಪ್ರವಾಹ ಪರಿಸ್ಥಿತಿ ಸಂದರ್ಭಗಳಲ್ಲಿ ಅಧಿಕಾರಿಗಳು ಹಾಗೂ ಸಚಿವರು ಯಾವ ರೀತಿ ಜನರ ಕಷ್ಟಕ್ಕೆ ಸ್ಪಂದಿಸುತ್ತಾರೆ ಎನ್ನುವುದು ಮುಖ್ಯ. ಇದೇ ರೀತಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭಗಳಲ್ಲಿ ಆಳುವ ಮಂದಿ ಹೇಗೆ ನಡ್ಕೋತಾರೆ ಅನ್ನೋದಕ್ಕೆ ಎರಡು ಉದಾಹರಣೆಗಳು ನಮ್ಮ ಮುಂದಿವೆ.

    ಕೇರಳದ ತ್ರಿಶೂರ್ ಜಿಲ್ಲೆಯ ನಿರಾಶ್ರಿತ ಕೇಂದ್ರದಲ್ಲಿ ನೆಲೆಸಿದ್ದ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿಗಳು ಸಿಗದೇ ಜನ ನರಕ ಯಾತನೇ ಅನುಭವಿಸುತ್ತಿದ್ದರು. ಇದರ ಮಾಹಿತಿ ಪಡೆದ ರವೀಂದ್ರನಾಥ್‍ರವರು ಖುದ್ದು ಸ್ಥಳಕ್ಕೆ ಪರಿಹಾರ ಸಾಮಗ್ರಿಗಳ ಸಮೇತ ಭೇಟಿ ನೀಡಿದ್ದರು. ಈ ವೇಳೆ ಆಹಾರ ಸಾಮಾಗ್ರಿಗಳನ್ನು ತಮ್ಮ ಹೆಗಲ ಮೇಲೆಯೇ ಇಟ್ಟುಕೊಂಡು ನಿರಾಶ್ರಿತ ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಜನರ ಕಷ್ಟಕ್ಕೆ ಸಚಿವರು ಹೆಗಲು ಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಸಚಿವರನ್ನು ಜನ ಬಾಹುಬಲಿಯಂದೇ ಕರೆಯುತ್ತಿದ್ದಾರೆ.

    ಆದರೆ ಇದಕ್ಕೆ ಭಿನ್ನವಾದ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದ್ದು ದುರಾದೃಷ್ಟವೇ ಸರಿ, ಕಳೆದ ವಾರ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣನವರು ಹಾಸನ ಜಿಲ್ಲೆಯ ರಾಮನಾಥಪುರ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದಾಗ, ನಿರಾಶ್ರಿತರಿಗೆ ಪ್ರಾಣಿಗಳಿಗೆ ಎಸೆಯುವ ರೀತಿ ಬಿಸ್ಕೆಟ್ ಪ್ಯಾಕ್‍ಗಳನ್ನು ಎಸೆಯುವ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಎಂತಹುದೇ ಅನಿವಾರ್ಯ ಪರಿಸ್ಥಿತಿಯಲ್ಲಿದ್ದರು, ಆ ರೀತಿ ನಡೆದುಕೊಳ್ಳಬಾರದಿತ್ತೆಂದು ಸಾರ್ವಜನಿಕರು ಸಚಿವರ ನಡೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv